Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಪಟ್ಟಣದ ಬಿಜೆಪಿ ಸಕ್ರಿಯ ಕಾರ್ಯಕರ್ತ ಕಲ್ಮೇಶ ಬುದ್ನಿ ಇವರನ್ನು ದೇವರಹಿಪ್ಪರಗಿ ಮಂಡಲ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಪಕ್ಷ ಸಂಘಟನೆಯಲ್ಲಿ ನಿರತನಾಗಿರುವ ಯುವ ಕಾರ್ಯಕರ್ತನನ್ನು ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಇವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ ಎಂದು ದೇವರಹಿಪ್ಪರಗಿ ಮಂಡಲ ಬಿಜೆಪಿ ಪ್ರಕಟಣೆ ತಿಳಿಸಿದೆ.
ದೇವರಹಿಪ್ಪರಗಿ: ಕಣ್ಣು ಅತ್ಯಂತ ಮಹತ್ವದ ಅಂಗ. ಅದರ ಕುರಿತು ನಿರ್ಲಕ್ಷ್ಯ ಸಲ್ಲದು ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಭುಗೌಡ ಲಿಂಗದಳ್ಳಿ(ಚಬನೂರ) ಹೇಳಿದರು.ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದಲ್ಲಿ ಇತ್ತೀಚಿಗೆ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು, ಗ್ರಾಮೀಣ ಭಾಗದಲ್ಲಿ ಕಣ್ಣಿನ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಇಂತಹ ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ೪೦ ವರ್ಷ ಮೀರಿದ ಪ್ರತಿಯೊಬ್ಬರು ಕಣ್ಣು ಪರೀಕ್ಷೆ ಮಾಡಿಸಿಕೊಂಡು ತಮ್ಮ ಕಣ್ಣಿನ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುವಂತೆ ಕರೆ ನೀಡಿದರು.ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಗಮೇಶ ಛಾಯಾಗೋಳ ಮಾತನಾಡಿ, ಇಂದಿನ ಶಿಬಿರದಲ್ಲಿ ಗ್ರಾಮೀಣ ಪ್ರದೇಶದ ಸುಮಾರು ೪೫೦ ಜನ ತಪಾಸಣೆಗೆ ಒಳಗಾಗಿದ್ದಾರೆ. ಇದರಲ್ಲಿ ಸುಮಾರು ೧೭೫ ಜನರಿಗೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಶಿಬಿರ ಯಶಸ್ವಿಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ಸಂಗನಗೌಡ ಪಾಟೀಲ, ಮಲ್ಲನಗೌಡ ಬಿರಾದಾರ, ಭೋಜಪ್ಪಗೌಡ ಬಿರಾದಾರ,…
ಮುದ್ದೇಬಿಹಾಳ: ಈ ದೇಶದಲ್ಲಿ ಹುಟ್ಟಿದ ಮೇಲೆ ನಾವು ಈ ದೇಶವನ್ನು ನಾವು ಪ್ರೀತಿಸಬೇಕು. ಈ ದೇಶದ ಕಾನೂನನ್ನು ನಾವು ಗೌರವಿಸಬೇಕು. ಈ ದೇಶದ ಸಂವಿಧಾನವನ್ನು ನಾವು ಸ್ವೀಕರಿಸಬೇಕು. ಎಲ್ಲ ಸಮಾಜದವರ ಜೊತೆ ನಾವು ಪ್ರೀತಿ ವಿಶ್ವಾಸದಿಂದ ಬಾಳಬೇಕು. ಇದನ್ನ ಪ್ರತಿಯೊಬ್ಬ ಮುಸ್ಲಿಂ ಅರಿತುಕೊಂಡು ಜಾಗೃತರಾಗಬೇಕಾಗಿದೆ ಎಂದು ಕರ್ನಾಟಕ ಮುಸ್ಲಿಂ ಸಂಘದ ರಾಜ್ಯಾಧ್ಯಕ್ಷ ಎಲ್.ಎಸ್.ಬಶೀರಅಹಮದ್ ಹೇಳಿದರು.ಪಟ್ಟಣದ ಮಳಿಗೆಯೊಂದರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂದರ್ಭಗಳಲ್ಲಿ ನಮ್ಮ ಮೇಲೆ ಕೆಟ್ಟ ಪರಿಣಾಮಗಳನ್ನು ಹಾಕಿ ಬೇರೆಯವರು ಅಧಿಕಾರದ ಗುರಿ ಮುಟ್ಟಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ನಾವು ಅವಕಾಶ ಕೊಡದೇ ದೇಶದ ಎಲ್ಲ ಸಮಾಜ ಬಾಂಧವರ ಜೊತೆ ಪ್ರೀತಿ, ವಿಶ್ವಾಸದಿಂದ ಸೌಹಾರ್ದಯುತವಾಗಿ ಜೀವನ ಮಾಡಬೇಕಾಗಿರುವುದು ಅನಿವಾರ್ಯವಾಗಿದೆ. ಈವರೆಗೆ ನಾವು ಸೌಹಾರ್ದಯುತವಾಗಿ ಬಂದರೂ ಕೆಲವು ರಾಜಕೀಯ ಹಿತಾಸಕ್ತಿಗಳು ನಮ್ಮ ಮೇಲೆ ಆಗಾಗ ಕೆಟ್ಟ ಪರಿಣಾಮಗಳನ್ನು ಬೀರುತ್ತಿರುವುದರಿಂದ ಪ್ರತಿಯೊಬ್ಬ ಮುಸ್ಲಿಂ ಸಮಾಜದ ಬಾಂಧವರು ನಮ್ಮ ಸಲಹೆಯ ಪಾಲನೆ ಮಾಡಬೇಕಾಗಿದೆ ಎಂದರು.ಇಲ್ಲಿಯವರೆಗೆ ನಮ್ಮನ್ನ ಆಳುವ ಸರ್ಕಾರಗಳು ಮುಸ್ಲೀಮರಿಂದ ಅಧಿಕಾರಕ್ಕೆ ಬರುತ್ತಿವೆ. ಆದರೆ…
ಇಂಡಿ: ಸತತವಾಗಿ ಬರಗಾಲ ನಿಮಿತ್ಯ ಇಂಡಿ, ಸಿಂದಗಿ ತಾಲೂಕಿನ ರೈತರ ಬದಕು ಬರಗೆಟ್ಟಿದೆ, ಕುಡಿಯಲು ನೀರಿಲ್ಲ ಹಾಗೂ ಕೃಷಿಗೂ ನೀರಿಲ್ಲದ ಕಾರಣ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜನ – ಜಾನುವಾರು ಕುಡಿಯಲು ಕೂಡಲೇ ಈ ಭಾಗದ ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಈ ಭಾಗದ ರೈತರೊಂದಿಗೆ KBJNL ರಾಂಪುರ ಕಚೇರಿಗೆ ಮುತ್ತಿಗೆ ಹಾಕಬೇಕಾದಿತು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವರಾಜ್ ಕೆಂಗನಾಳ ಪತ್ರಿಕೆ ಪ್ರಕಟಣೆ ಮೂಲಕ ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿದ್ದಾರೆ.
ಚಡಚಣ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಸಮಿತಿಯ ಕಾರ್ಯಾಲಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಚಡಚಣ ತಾಲೂಕು ಘಟಕದ ಸಮಿತಿಯನ್ನು ರಚಿಸಲಾಯಿತು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್ ಕಾಂಬಳೆ ತಿಳಿಸಿದ್ದಾರೆಗೌರವಾಧ್ಯಕ್ಷರಾಗಿ ಉಮರಾಣಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅರವಿಂದ ಡೋಣೂರ, ಅಧ್ಯಕ್ಷರಾಗಿ ಹತ್ತಳ್ಳಿ ಸರ್ಕಾರಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕ ಪ್ರದೀಪ ಮಧಬಾವಿ, ಉಪಾಧ್ಯಕ್ಷರಾಗಿ ಶಿರನಾಳ ಸರ್ಕಾರಿ ಎಚ್.ಪಿ.ಎಸ್ ಶಾಲೆಯ ಶಿಕ್ಷಕರಾದ ಸುರೇಶ ಶಿವಶರಣ ಆಯ್ಕೆ ಮಾಡಲಾಯಿತು.ಕಾರ್ಯದರ್ಶಿಗಳು ವಿಜ್ಞಾನ ಶಿಕ್ಷಕರಾದ ರಾಜೇಶ ಬಳಿಗಾರ, ಸಹ ಕಾರ್ಯದರ್ಶಿಗಳು ದೈಹಿಕ ಶಿಕ್ಷಕರಾದ ಮಾಂತಕ್ಕ ರಾಂಪುರ, ಖಜಾಂಚಿ ವಿಜ್ಞಾನ ಶಿಕ್ಷಕರಾದ ಮೊಕಾಶಿ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪತ್ರಕರ್ತರಾದ ಶಿವಾನಂದ ಶಿವಶರಣ ಹಾಗೂ ಹಸಶ್ಯಾ ಮಕಾನದಾರ, ಶಿಕ್ಷಕರಾದ ಎಸ್ ಎಂ ಹದಿಮೂರ, ಮಾಳಪ್ಪ ವಾಗ್ಮೊರೆ, ರಾಮಚಂದ್ರ ಸುಣಗಾರ, ಜಿ ಎಸ್ ಜಂಗಮಶೆಟ್ಟಿ, ಆಸಿಫ್ ಚಟ್ಟರಕಿ, ಪಿ ಬಿ ಕುರ್ಲೆ, ಕುಮಾರಿ ಬಿ ಎಸ್ ಮದಭಾವಿ, ಎಂ ಜೆ ಚಿಂಚೋಳಿ, ಶ್ರೀಮತಿ ಎಂ ಎಸ್ ಬಿರಾದಾರ ಆಯ್ಕೆಯಾಗಿದ್ದಾರೆ…
3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚನೆ | ಮುಂದಿನ ವಿಚಾರಣೆ ಏಪ್ರಿಲ್ 9ಕ್ಕೆ ಮುಂದೂಡಿಕೆ ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಮಯಗಳ ಅನುಷ್ಠಾನಕ್ಕೆ ತಡೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್, ಸಿಎಎ ಜಾರಿಗೆ ತಡೆ ನೀಡುವ ಯಾವುದೇ ಮಧ್ಯಂತರ ಆದೇಶ ನೀಡಲು ಮಂಗಳವಾರ ನಿರಾಕರಿಸಿದೆ.2024ರ ಪೌರತ್ವ ತಿದ್ದುಪಡಿ ನಿಯಮಗಳ ಜಾರಿಯನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಸಮಂಜಸವಾದ ಸಮಯವನ್ನು ನೀಡಬೇಕು ಎಂದು ಒತ್ತಿಹೇಳಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮುಂದಿನ ವಿಚಾರಣೆಯನ್ನು ಏಪ್ರಿಲ್ 9 ಕ್ಕೆ ಮುಂದೂಡಿದೆ.ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಿಎಎ ಅನುಷ್ಠಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 20 ಅರ್ಜಿಗಳಿಗೆ ಉತ್ತರ ನೀಡಲು ನಾಲ್ಕು ವಾರಗಳ ಕಾಲಾವಕಾಶ ಬೇಕು ಎಂದು ಪೀಠಕ್ಕೆ ತಿಳಿಸಿದರು.ಪೌರತ್ವ ತಿದ್ದುಪಡಿ ಕಾಯ್ದೆ-2019ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಲೇವಾರಿ ಮಾಡುವ…
ವಿಜಯಪುರ: ಮಹಾನಗರ ಪಾಲಿಕೆ ಆವರಣದಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಭಾರತೀಯ ದ್ರಾವಿಡ ಸೇನಾ, ವಿಜಯಪುರ ವತಿಯಿಂದ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಭಾರತೀಯ ದ್ರಾವಿಡ ಸೇನಾದ ಗೌರವಾಧ್ಯಕ್ಷ ರಮೇಶ ಕವಲಗಿ ಮಾತನಾಡಿ, ಸಂವಿಧಾನ ಶಿಲ್ಪಿ ಬಾಬಾಸಾಹೇಬ ಭೀಮರಾವ ಅಂಬೇಡ್ಕರ್ ರವರು ಇವರು ದೇಶಕ್ಕೆ ಸಂವಿಧಾನ ನೀಡಿ, ಇವರ ಸಂವಿಧಾನದಡಿಯಲ್ಲಿ ಪಾಲಿಕೆಯ ಎಲ್ಲ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು, ಅದೇ ತೆರನಾಗಿ ಅವರ ಗೌರವಾರ್ಥಕವಾಗಿ ಪಾಲಿಕೆ ಆವರಣದಲ್ಲಿ ಅಂಬೇಡ್ಕರವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಇದರಿಂದ ಭಾರತದ ಸಂವಿಧಾನಕ್ಕೆ ಸಲ್ಲಿಸುವ ಗೌರವ ಆಗುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಪ್ರಶಾಂತ ಹಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ನಾಗಮ್ಮ ಬ್ಯಾಕೋಡ, ವಿಜಯಪುರ ಜಿಲ್ಲಾಧ್ಯಕ್ಷ ಸೋಮು ಹಟ್ಟಿ, ಜಿಲ್ಲಾ ಕಾರ್ಯದರ್ಶಿ ಸಚೀನ ಬಜಂತ್ರಿ, ಮಾರುತಿ ಬೂದಿಹಾಳ, ಸಂತೋಷ ಠಕ್ಕೆ, ಶ್ರೀಧರ ಹಾಳಿಹಾಳ, ಪರಶುರಾಮ ಕೋಲಕಾರ, ಶ್ರೀಧರ ಬಬಲೇಶ್ವರ, ಎನ್. ಬಜರಂಗಿ, ಕಲ್ಮೇಶ ಶಾಪೇಟಿ, ಮಲ್ಲು ಜಾಲಗೇರಿ ಇನ್ನಿತರರು ಉಪಸ್ಥಿತರಿದ್ದರು.
ಇಂಡಿ: ಯುವಕನೋರ್ವ ವಿವಸ್ತ್ರವಾಗಿ ಮೊಬೈಲ್ ಟವರ್ ಏರಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ ಸತೀಶ್ ಚಂದ್ರಶೇಖರ ಕಡಣಿ ಎಂಬುವನು ಪಟ್ಟಣದ ಬಸವೇಶ್ವರ ದಲ್ಲಿರುವ 250 ಫೀಟ್ ಎತ್ತರದ ಬಿಎಸ್ ಎನ್ ಎಲ್ ಟವರ್ ಬೆಳಿಗ್ಗೆ 4 ಘಂಟೆಗೆ ತುತ್ತತುದಿಯವರೆಗೆ ಏರಿದ್ದಾನೆ. ಟವರ್ ತುದಿಯ ಮೇಲೆ ಹತ್ತಿ ಅಪಾಯಕಾರಿಯಾಗಿದ್ದಾನೆ. ಯುವಕ ಟವರ್ ಮೇಲಿಂದ ಆಯತಪ್ಪಿ ಬಿದ್ದರೆ ಅನಾಹುತಕ್ಕೀಡುವ ಸಂಭವ ಇತ್ತು. ಅದಕ್ಕಾಗಿ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಪೊಲೀಸರು ಭೇಟಿ ನೀಡಿ, ಸತೀಶನನ್ನು ಮನವೋಲಿಸಿ ಕೆಳಗೆ ಇಳಿಸುವ ಕೆಲಸ ಮಾಡಿದ್ದಾರೆ. ಆತನನ್ನು ವಿಚಾರಿಸಿದಾಗ ನಮ್ಮೂರಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಹೇಳುತ್ತಾನೆ.ಈ ಹಿಂದೆಯೂ ಈತನು ಸಿಂದಗಿ ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ ಹಾಗೂ ಚಾಂದಕವಠೆ ಗ್ರಾಮದಲ್ಲಿ ಟವರ್ ಹತ್ತಿ ಹುಚ್ಚಾಟ ಮೆರೆದಿದ್ದನೆನ್ನಲಾಗಿದೆ.ಈ ಸಂದರ್ಭದಲ್ಲಿ ಅಗ್ನಿಶಾಮಕ ಸಹಾಯಕ ಠಾಣಾ ಅಧಿಕಾರಿ ದೇವಧಾನಮ್ಮ ಪಿ.ಎಚ್, ಚಾಲಕ ಮಲ್ಲು ಗೋಟ್ಯಾಳ,ಸಿಬ್ಬಂದಿ ಮಾರುತಿ ರಾಠೋಡ, ಮಹಾದೇವ ಮಾದರ, ಶರಣು ಹೊನವಾಡ, ಪ್ರಕಾಶ್ ಬಿರಾದಾರ,…
ಮುದ್ದೇಬಿಹಾಳ: ಭಾರತೀಯ ಜನತಾ ಪಕ್ಷದ ವಿಜಯಪುರ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯನ್ನಾಗಿ ಪ್ರಭು ತಳಗೇರಿ ಅವರನ್ನ ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ ಆದೇಶಿಸಿದ್ದಾರೆ.
ಆಲಮಟ್ಟಿ: ಅನೈತಿಕ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ಜೋಡಿ ಕೊಲೆಯಾದ ಘಟನೆ ಸೋಮವಾರ ರಾತ್ರಿ ಸಮೀಪದ ಮಾರಡಗಿ ತಾಂಡಾದ ಬಳಿ ನಡೆದಿದೆ.ಮೃತರು ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35) ಹಾಗೂ ಪಾರ್ವತಿ ಭೀಮಪ್ಪ ತಳವಾರ (45) ಎಂದು ಗುರುತಿಸಲಾಗಿದೆ.ಗಣಿ ಗ್ರಾಮಕ್ಕೆ ಬರುವ ಮೊದಲೇ ಇಬ್ಬರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಆರೋಪಿ ಯಾರು ಎಂಬುದನ್ನು ಪೊಲೀಸರು ದೃಢಪಡಿಸಿಲ್ಲ.ಸ್ಥಳಕ್ಕೆ ಹೆಚ್ಚುವರಿ ಎಸ್ ಪಿ ರಾಮನಗೌಡ ಹಟ್ಟಿ, ಡಿವೈಎಸ್ ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಶರಣಗೌಡ ಗೌಡರ ಭೇಟಿ ನೀಡಿದ್ದರು.ಶ್ವಾನ ದಳ, ಬೆರಳಚ್ಚು ತಂತ್ರಜ್ಞರು ಭೇಟಿ ನೀಡಿದ್ದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
