Author: editor.udayarashmi@gmail.com

ಬಬಲೇಶ್ವರ ಶಾಖಾ ಕಾಲುವೆಯ ೧ ಹಾಗೂ ೨ರ ವಿತರಣಾ ಕಾಲುವೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಕೊಲ್ಹಾರ: ಬಸವನ ಬಾಗೇವಾಡಿ ಮತಕ್ಷೇತ್ರದ ಹಾಗೂ ಅವಳಿ ಜಿಲ್ಲೆಯ ಕೃಷಿ ಚಟುವಟಿಕೆಯನ್ನು ಮಾಡುವ ರೈತಾಪಿ ವರ್ಗದವರು ನೀರಿನ ಮಹತ್ವವನ್ನು ಅರಿತು ಯಥೇಚ್ಚವಾಗಿ ಬಳಸದೇ ಸದ್ವಿನಿಯೋಗದ ಮೂಲಕ ಯಾವುದೇ ಮೂಲಗಳಿಂದ ಹರಿದು ಬರುವ ನೀರನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕು ಎಂದು ರೈತರಿಗೆ ಸಚಿವ ಶಿವಾನಂದ ಎಸ್ ಪಾಟೀಲ ಕರೆಕೊಟ್ಟರು.ತಾಲೂಕಿನ ಮುಳವಾಡ ಗ್ರಾಮದಲ್ಲಿ ಕೃಷ್ಣಾ ಭಾಗ್ಯ ಜಲನಿಗಮದ ಮುಳವಾಡ ಏತ ನೀರಾವರಿ ಹಂತ-೩ ರ ಅಡಿಯಲ್ಲಿ ಬಬಲೇಶ್ವರ ಶಾಖಾ ಕಾಲುವೆಯ ೧ ಹಾಗೂ ೨ರ ಮೂಲಕ ೧೭೦೪.೧೨ ಹೆಕ್ಟರ್ ಭೂಪ್ರದೇಶ ನೀರಾವರಿ ಕ್ಷೇತ್ರವಾಗಲು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿತರಣಾ ಕಾಲುವೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಸಮಾರಂಭವನ್ನು ಶುಕ್ರವಾರ ಸಾಯಂಕಾಲ ನೆರವೇರಿಸಿ ಮಾತನಾಡುತ್ತಿದ್ದರು.ಪ್ರತಿ ಮೂರು ವರ್ಷದ ನಂತರ ಬರಗಾಲ ಬರುವದು ನೈಸರ್ಗಿಕವಾದ ಸಹಜ ವಾತಾವರಣವಾಗಿದ್ದು ಬರಗಾಲದಂಥಹ ಇಂಥಹ ಪರಿಸ್ಥಿತಿಯಲ್ಲೂ ರೈತರ ಬದುಕು ದುಸ್ತರವಾದರೂ ಬದುಕುವದು ಅನಿವಾರ್ಯವಾಗಿದೆ ಆದ್ದರಿಂದ…

Read More

ಕೊಲ್ಹಾರ: ಶಾಲಾ ಶೈಕ್ಷಣಿಕ ಪಠ್ಯಪುಸ್ತಕಗಳ ಓದು ಬರಹದ ಜೊತೆಗೆ ಶಾಲೆಯಲ್ಲಿ ಶಿಕ್ಷಕರು ಮನೆಯಲ್ಲಿ ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಕೊಡುವದು ಇಂದಿನ ದಿನಮಾನಗಳಲ್ಲಿ ಅತ್ಯವಶ್ಯಕವಾಗಿದೆ ಎಂದು ಸಮಾಜಸೇವಕ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪರಶುರಾಮ ಬ ಗಣಿ ಹೇಳಿದರು.ಗರಸಂಗಿ ರಸ್ತೆಗೆ ಹೊಂದಿಕೊಂಡಿರುವ ಪಟ್ಟಣದ ಬಸವೇಶ್ವರ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಬಹುಮಾನ ವಿತರಣಾ, ಸನ್ಮಾನ, ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಅವರು ಮಾತನಾಡುತ್ತಿದ್ದರು.ಪಾಲಕರಾದ ನಾವುಗಳು ಇಂದಿನ ಮಕ್ಕಳಿಗೆ ಕಷ್ಟಕರವಾದ ಜೀವನ ಪದ್ದತಿಯ ಬದಲಾಗಿ ಆಧುನಿಕ ವ್ಯಾಮೋಹಗಳ ಸಾಮಾಜಿಕ ಜಾಲತಾನದ ಅನುಕರಣೀಯ ವ್ಯಸನದ ಕಡೆ ವಾಲಿಸುತ್ತಿರುವದು ಮುಂದೊಂದು ದಿನ ಸಮಾಜದಲ್ಲಿ ಅವರ ಬದುಕು ದುಸ್ತರವಾಗಬಹುದು. ಆದ್ದರಿಂದ ನಾವುಗಳು ಮಕ್ಕಳ ಬದುಕನ್ನು ಹಸನಾಗಿಸಲು ಶ್ರಮಿಸಬೇಕು ಎಂದರು.ನಿವೃತ್ತ ಮುಖ್ಯಗುರು ಕೆ.ಯು.ಗಿಡ್ಡಪ್ಪಗೋಳ ಮಾತನಾಡಿದರು.ಗರಸಂಗಿ ಗ್ರಾಮದ ಶಾಲಾ ಶಿಕ್ಷಕ ಪರಶುರಾಮ ವಾಲಗದ ಅವರನ್ನು ಇದೇ ಸಂದರ್ಬದಲ್ಲಿ ಸನ್ಮಾನಿಸಲಾಯಿತು, ವಿವಿಧ ಸ್ಪರ್ದೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ, ಶಾಲೆಯ ೧೭ನೇ ವಾರ್ಷಿಕ ಉತ್ಸವ ಜರುಗಿತು.ಅಧ್ಯಕ್ಷತೆಯನ್ನು…

Read More

ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ | ಜೂ.4ರಂದು ಫಲಿತಾಂಶ | ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮಾಹಿತಿ ನವದೆಹಲಿ: ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್‌ 19ರಿಂದ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್‌4 ರಂದು ಫಲಿತಾಂಶ ಪ್ರಕಟವಾಗಲಿದೆ.ಮಾ.16ರಿಂದ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಲಿದ್ದು, ಏಪ್ರಿಲ್ 26ರಂದು ಮೊದಲ ಹಂತದ ಮತದಾನ ಮತ್ತು ಮೇ 7ರಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು…

Read More

ಕೊಲ್ಹಾರ: ವಿಜಯಪೂರ ಜಿಲ್ಲಾ ಭಾರತೀಯ ಜನತಾಪಕ್ಷದ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರನ್ನಾಗಿ ರಾಜ್ಯ ಅಧ್ಯಕ್ಷರ ಸೂಚನೆ ಮೇರೆಗೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ಜಗದೀಶ ಸುಣಗದ ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಬಸವರಾಜ ಹೂಗಾರ ಆದೇಶ ಹೊರಡಿಸಿದ್ದಾರೆ.

Read More

ವಿಜಯಪುರ: ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಶಿಕ್ಷಣ ನೀಡುವದರ ಮೂಲಕ ಮಕ್ಕಳನ್ನೆ ಆಸ್ತಿಯಾಗಿ ಮಾಡುವದರ ಮೂಲಕ ಮಕ್ಕಳನ್ನು ಸಂಪನ್ಮೂಲ ವ್ಯಕ್ತಿಯಾಗಿ ಮಾಡಬೇಕಾಗಿದೆ ಎಂದು ಸಮಾಜ ಸೇವಕ ಈರಣ್ಣ ಪಟ್ಟಣಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.ಮಕ್ಕಳಿಗೆ ಅಂಕ ಗಳಿಸುವ ಮಾನಸಿಕೊತ್ತಡವನ್ನು ಹಾಕಬಾರದು. ಅವರಿಗೆ ಕಲಿಕಾ ಅವಕಾಶವನ್ನು ನೀಡಬೇಕು ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ರೋಬೋಟ್ ಗಳಾಗಿ ರೂಪಿಸದೆ ಸೃಜನಾತ್ಮಕವ್ಯಕ್ತಿತ್ವವನ್ನು ರೂಪಿಸಬೇಕು ಎಂದರು.ಶನಿವಾರ ನಗರದ ಜ್ಯೋತ್ಸ್ನಾ ಪ್ರಾಥಮಿಕ ಹಾಗು ಪ್ರೌಢ ಶಾಲೆಯ ಮಕ್ಕಳ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಮಕ್ಕಳು ಪಠ್ಯಕ್ರಮದ ಅನುಸಾರ ಪರಿಪೂರ್ಣ ಶಿಕ್ಷಣ ಪಡೆಯಬೇಕು. ವ್ಯಕ್ತಿಯ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಲು ಶಿಕ್ಷಣ ಒಂದೇ ಮಾರ್ಗ ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು. ವಿದ್ಯಾರ್ಥಿಗಳಿಗೆ ಪಠ್ಯತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಬೇಕು ಎಂದರು.ಬಳಿಕ ಮಕ್ಕಳಿಂದ ಮನರಂಜನ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು.

Read More

ಮುದ್ದೇಬಿಹಾಳ: ಅಖಂಡ ವಿಜಯಪುರ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಯಲ್ಲಿ ಪಾಸಾದ ಮತ್ತು ಭಾರತೀಯ ಸೈನ್ಯದಲ್ಲಿ ಕರ್ನಲ್ ಅಗಿ ನಿವೃತ್ತಿ ಹೊಂದಿರುವ ಸತೀಶ ದೇಶಪಾಂಡೆ ದಂಪತಿಗಳನ್ನು ಇಲ್ಲಿನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.ಸಮಿತಿಯ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ಪದಾಧಿಕಾರಿಗಳಾದ ಬಸಯ್ಯ ನಂದಿಕೇಶ್ವರಮಠ, ಎಸ್.ಎನ್.ಪಟ್ಟಣಶೆಟ್ಟಿ ವಕೀಲರು, ಹಣಮಂತ ನಲವಡೆ, ಚಂದ್ರು ಕಲಾಲ, ಶ್ರೀಕಾಂತ ಹಿರೇಮಠ, ಸಂಜು ಬಾಗೇವಾಡಿ, ಉದಯ ರಾಯಚೂರ ಸೇರಿದಂತೆ ಮತ್ತೀತರರು ಇದ್ದರು.

Read More

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿಯ ಎಸ್.ಸಿ ಮೋರ್ಚಾದ ತಾಲೂಕ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ತಂಗಡಗಿ, ಹಾಗೂ ರೈತ ಮೋರ್ಚಾದ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಎಸ್.ಶಿವಣಗಿ ಇವರುಗಳನ್ನು ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು.ಈ ವೇಳೆ ಮುಖಂಡರಾದ ಹರೀಶ್ ನಾಟೇಕಾರ, ಪರಶುರಾಮ ನಾಲತವಾಡ, ಪರಶುರಾಮ ಮುರಾಳ, ಬಸವರಾಜ ಸಿದ್ದಾಪೂರ, ಮಹಾಂತೇಶ ಕಂದಗನೂರ, ಶರಣು ಸರೂರ, ರಾಹುಲ ಕಟ್ಟಿಮನಿ, ಪ್ರಕಾಶ್ ಹಾದಿಮನಿ, ರಮೇಶ ಕಂದಗನೂರ, ಭೀಮಣ್ಣ ನಾಯಕಮಕ್ಕಳ, ಗುಂಡಪ್ಪ ಚಲವಾದಿ, ಶೇಖರ ಢವಳಗಿ, ಶಶಿ ಹಳ್ಳೂರ, ಸಂತೋಷ್ ಮುದ್ದೇಬಿಹಾಳ, ಲಕ್ಷ್ಮಣ ಕಾಳಗಿ ಸೇರಿದಂತೆ ಮತ್ತೀತರರು ಇದ್ದರು

Read More

ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ದೇವಸ್ಥಾನದ ಸಮುದಾಯಭವನದಲ್ಲಿ ಮಾ.೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಜಿನೇಂದ್ರ ಭಗವಾನರ ಮಹಾ ಅಭಿಷೇಕ ಹಾಗೂ ಮಹಾತಪಸ್ವಿ, ವಿದ್ಯಾಭೂಷಣ ಮುನಿಮಹಾರಾಜರ ಕೇಶಲೋಚನ ಕಾರ್ಯಕ್ರಮ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Read More

ವಿಜಯಪುರದಲ್ಲಿ ಲೋಕಸಭೆ ಚುನಾವಣೆ ಕುರಿತು ಡಿಸಿ ಟಿ.ಭಾಬಾಲನ್ ಪತ್ರಿಕಾಗೋಷ್ಠಿ ವಿಜಯಪುರ: ಭಾರತ ಚುನಾವಣೆ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ ರ ಅಧಿಸೂಚನೆಯನ್ನು ಹೊರಡಿಸಿದ್ದು, ಇಂದಿನಿಂದ ಜೂನ್ ೬ ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣೆ ಅಧಿಕಾರಿಯೂ ಆಗಿರುವ ಟಿ.ಭೂಬಾಲನ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣಲ್ಲಿ ಲೋಕಸಭೆ ಚುನಾವಣೆ ೨೦೨೪ ರ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆಯ ಅಧಿಸೂಚನೆಯನ್ನ ಏ. ೧೨ ರಂದು ಹೊರಡಿಸಲಾಗುವುದು. ಏ. ೧೯ ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದೆ. ಏ. ೨೦ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. ೨೨ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳುವ ದಿನವಾಗಿದೆ. ಮೆ. ೭ ರಂದು ಮತದಾನ ಹಾಗೂ ಜೂನ ೪ ರಂದು ಮತ ಎಣಿಕೆ ನಡೆಯಲಿವೆ ಎಂದರು.ಜಿಲ್ಲೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಲು. ೯ ಜನ ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೨೦೮೫ ಮತಗಟ್ಟೆಗಳಿದ್ದು, ೧೯,೧೯,೦೪೮ ಜನ ಮತದಾರರು ಇದ್ದಾರೆ. ಇದರಲ್ಲಿ ೯,೪೨,೭೫೭ ಮಹಿಳಾ,…

Read More