Subscribe to Updates
Get the latest creative news from FooBar about art, design and business.
Author: editor.udayarashmi@gmail.com
ನಿಡಗುಂದಿ: ಬುದ್ಧಿಮಾಂದ್ಯ ಮಕ್ಕಳಿಗೆ ಅವರ ಚಿಕ್ಕ ವಯಸ್ಸಿನಲ್ಲಿಯೇ ತರಬೇತಿ ಮತ್ತು ಶಿಕ್ಷಣ ನೀಡಬೇಕು, ಅವರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಆರಂಭಿಕ ಹಸ್ತಕ್ಷೇಪ ಮತ್ತು ಆರಂಭಿಕ ಪುನರ್ವಸತಿ ಸೇವೆಗಳು ಕೇಂದ್ರಿಕರಿಸುತ್ತವೆ ಎಂದು ಬುದ್ಧಿಮಾಂದ್ಯ ಮಕ್ಕಳ ಶಿಕ್ಷಣದ ಸಂಪನ್ಮೂಲ ವ್ಯಕ್ತಿ ದಾವಣಗೆರೆಯ ರಾಜು ಟಿ ಅಭಿಪ್ರಾಯಪಟ್ಟರು.ಪಟ್ಟಣದ ರುದ್ರೇಶ್ವರ ಮಠದಲ್ಲಿ ಸಿಕಂದರಾಬಾದ್ ನ ನಿಪೀಡ್ ಮತ್ತು ವಿಜಯಪುರದ ಆಶಾದೀಪ ಅಂಗವಿಕಲರ ಸರ್ವ ಅಭಿವೃದ್ಧಿ ಸೇವಾ ಸಂಸ್ಥೆಯ ಆಶ್ರಯದಲ್ಲಿ ನಿಡಗುಂದಿ ತಾಲ್ಲೂಕಿನ ಅಂಗನವಾಡಿ, ಆಶಾಕಾರ್ಯಕರ್ತರಿಗೆ ಬುದ್ಧಿಮಾಂದ್ಯ ಮಕ್ಕಳ ಶಿಕ್ಷಣದ ಅರಂಭಿಕ ಹಸ್ತಕ್ಷೇಪ ಮತ್ತು ಆರಂಭಿಕ ಪುನರ್ವಸತಿ ಸೇವೆಗಳ ಒಂದು ದಿನದ ತರಬೇತಿಯಲ್ಲಿ ಅವರು ಮಾತನಾಡಿದರು.ಮಗುವಿನ ಪಾಲಕರಿಗೂ ಮಗು ಆರೈಕೆ, ಅವರಲ್ಲಿ ನಾನಾ ವಿಧದ ಕೌಶಲ್ಯ ಅಭಿವೃದ್ಧಿಗೊಳಿಸುವ ಬಗೆಯನ್ನು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರೇ ಕಲಿಸಿಕೊಟ್ಟರೇ ಬುದ್ಧಿಮಾಂದ್ಯ ಮಗುವಿನ ಸಮರ್ಪಕ ಪಾಲನೆಯಾಗಲಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಪರವೈಸರ್ ಎಸ್.ಎಂ. ಕಂದಗಲ್ಲ ಮಾತನಾಡಿದರು.ಗಿರೀಶ ಹೂಗಾರ ಅಧ್ಯಕ್ಷತೆ ವಹಿಸಿದ್ದರು.ಜಗದೀಶ ಮುಚ್ಚಂಡಿ, ಡಿ.ಎಚ್. ಅದ್ವಾನಿ, ಶಿವಾನಂದ ಹಣಮಶೆಟ್ಟಿ, ಶಿವಲೀಲಾ…
ಆಲಮಟ್ಟಿ: ನೀರು ತಲುಪದೆ ಇರುವ ಕೆರೆಗಳಿಗೆ ನೀರು ಭರ್ತಿ ಮಾಡಲು ಮತ್ತೊಮ್ಮೆ ಕಾಲುವೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ಶನಿವಾರ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಆಲಮಟ್ಟಿಯ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ ಬೇಸಿಗೆ ಸಂದರ್ಭದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲತೆ ಕಲ್ಪಿಸಲು ಕಳೆದ ತಿಂಗಳು 19 ರಂದು ಪ್ರಾದೇಶಿಕ ಆಯುಕ್ತರ ಅನುಮತಿ ಮೇರೆಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿತ್ತು. ಜಿಲ್ಲೆಯಲ್ಲಿರುವ 99 ಕೆರೆಗಳ ಪೈಕಿ ಅರ್ಧಕ್ಕೂ ಹೆಚ್ಚು ಕೆರೆಗಳಲ್ಲಿ ಸಂಪೂರ್ಣ ನೀರು ಬಂದಿಲ್ಲ, ಹೂವಿನಹಿಪ್ಪರಗಿ ಸಂಕನಾಳ ಕೆರೆಗೆ ಒಂದು ತೊಟ್ಟು ನೀರು ಬಂದಿಲ್ಲ ಅಂದರಂತೆ ಬಸವನಬಾಗೇವಾಡಿ ಶಾಖಾ ಕಾಲುವೆಗೆ ನೀರು ಹರಿಸಿದ್ದರು ಕೂಡಾ ತೃಪ್ತಿಕರವಾಗಿ ನೀರು ಬಂದಿಲ್ಲ ಕೆಲವೊಂದು ಭಾಗದಲ್ಲಿ ಕಾಲುವೆ ಕೊನೆ ಅಂಚಿನವರೆಗೂ ನೀರು ತಲುಪೆ ಇಲ್ಲ ನೀರು ಹರಿಸಿದ್ದದೇವೆಂದು ನೀರಾವರಿ ಇಲಾಖೆಯವರಿಗೆ ಹೇಳಿಕೊಳ್ಳಲು ಮಾತ್ರವಾಗಿದೆ. ಆದರೆ ವಾಸ್ತವಾಗಿ ಇನ್ನೂ ಬಹುತೇಕ ಕೆರೆಗಳಿಗೆ ನೀರು…
ಚಡಚಣ: ಪಟ್ಟಣದ ಸಚಿನ ಅವಟಿ ಅವರನ್ನು ವಿಜಯಪುರ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಬಸವರಾಜ ಹೂಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಕೇರಿ: ಸನಾತನ ಕಾಲದಿಂದಲೂ ಮಠಮಾನ್ಯಗಳಿಗೆ ತನ್ನದೇ ಆದ ವಿಶೇಷ ಘನತೆ ಗೌರವದ ಸ್ಥಾನವಿದ್ದು, ಮಠಗಳು ಸಮಾಜವನ್ನು ತಿದ್ದಿ ತೀಡಿ ಅವರನ್ನು ಧರ್ಮದ ಮಾರ್ಗದಲ್ಲಿ ನಡೆಯುವಂತೆ ಮಾಡುವ ಗುರುತರವಾದ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಬಂದಿದ್ದು, ಅವು ನಿರಂತರವಾಗಿ ಅನ್ನ, ಅರಿವು ಮತ್ತು ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವ ತಾಣಗಳಾಗಿವೆ ಎಂದು ಮಾಗಣಗೇರಿಯ ಡಾ. ವಿಶ್ವಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು.ಗ್ರಾಮದ ಗುರುಮರುಳಾರಾಧ್ಯರ ಹಿರೇಮಠದಲ್ಲಿ ಶುಕ್ರವಾರ ಸಂಜೆ ನಡೆದ ಲಿಂ.ಬಸವಲಿಂಗ ಮರುಳಸಿದ್ದ ಶಿವಾಚಾರ್ಯರ ಪುಣ್ಯಸ್ಮರಣೋತ್ಸವದ ನಿಮಿತ್ಯ ತಿಂಗಳ ಪರ್ಯಂತ ನಡೆಯಲಿರುವ ಮಹಾಶಿವಶರಣೆ ಸಜ್ಜಲಗುಡ್ಡದ ಶರಣಮ್ಮ ತಾಯಿಯ ಮಾಹಾಪುರಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಲಕೇರಿಯ ಗುರುಮರುಳಾರಾಧ್ಯರ ಹಿರೇಮಠಕ್ಕೆ ಶತಶತಮಾನಗಳ ಇತಿಹಾಸವಿದ್ದು ಮಹಾದಾಸೋಹಿ ಕಲಬುರ್ಗಿಯ ಶರಣಬಸಪ್ಪನಿಗೆ, ಕಡಕೋಳದ ಮಡಿವಾಳಪ್ಪನಿಗೆ ದೀಕ್ಷೆ ಕೊಟ್ಟ ಕೀರ್ತಿ ಕಲಕೇರಿ ಹಿರೇಮಠದ ಗುರುಪರಂಪರೆಗೆ ಸಲ್ಲುತ್ತದೆ, ಪ್ರಸ್ತುತ ಶ್ರೀಮಠದ ಪೀಠಾಧಿಪತಿಗಳಾದ ಸಿದ್ದರಾಮ ಶಿವಾಚಾರ್ಯರು ಹತ್ತು ಹಲವು ಧಾರ್ಮಿಕ, ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಭಕ್ತರು ತಮ್ಮ ಸಂಸಾರದ ಜಂಜಾಟದ ಮಧ್ಯ ಗುರುಗಳ ಮಾರ್ಗದರ್ಶನದಲ್ಲಿ ಪುರಾಣ ಪುಣ್ಯಕಥೆಗಳನ್ನು ಕೇಳುವುದರ…
ಚಡಚಣ: ಸಮೀಪದ ಹಾಳೊಳ್ಳಿ ಗ್ರಾಮದ ಮುರಾರ್ಜಿ ಪ್ರೌಢ ಶಾಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಕಿಶೋರ ಸ್ವಾಸ್ಥ ಕಾರ್ಯಕ್ರಮ ನಡೆಯಿತು.ಈ ವೇಳೆ ಮಾತನಾಡಿದ ಚಡಚಣ ತಾಲೂಕಾ ಆಪ್ತ ಸಮಾಲೋಚಕ ಪ್ರಶಾಂತ ಸಾಳುಂಕೆ ಅವರು, ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ಇದ್ದರೆ ಸಾಮಾಜಿಕವಾಗಿ ಮುಂದೆ ಬರಬಹುದು. ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಸೇವನೆ ಜತೆಗೆ ವ್ಯಾಯಾಮ, ಯೋಗಾಭ್ಯಾಸ ಮಾಡುವದು ರೂಡಿಸಿಕೊಳ್ಳಬೇಕು ಎಂದರು.ಆಯುಷ್ಯಮಾನ ಕಾರ್ಡ್ ಹೊಂದಿದದವರು ಲಕ್ಷಾಂತರ ರೂ. ಉಚಿತ ವೈದ್ಯಕೀಯ ಸೇವೆಗಳನ್ನು ಪಡೆಯಬಹುದು ಎಂದ ಆರೋಗ್ಯ ಮಿತ್ರ ಸಂಜೀವ ರೋಗಿ ಅವರು, ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಿದರು.ಪೌಷ್ಟಿಕ ಆಹಾರ ನಮಗೆ ಅತಿ ಮುಖ್ಯವಾಗಿದೆ ಆದ ಕಾರಣ ನಾವು ಪೌಷ್ಟಿಕ ಆಹಾರ ಸೇವಿಸಬೇಕು ಮತ್ತು ಆರೋಗ್ಯಯುತ ಜೀವನ ನಡೆಸಬೇಕಾದರೆ ತಂಬಾಕು ಮತ್ತು ದುಷ್ಟ ಚಟಗಳು ಮತ್ತು ಜಂಕ್ಸ ಪುಂಡ್ ಉತ್ಪನ್ನಗಳ ಸೇವನೆಯಿಂದ ದೂರ ಇರಬೇಕು ಎಂದು ಎನ್.ಸಿ.ಡಿ ಆಪ್ತಸಮಾಲೋಚಕ ಕುಮಾರ ರಾಠೋಡ ಹೇಳಿದರು.ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿ ಆರ್ ಬಿ ಲಾಲಸಂಗಿ ಮಾತನಾಡಿದರು.ಶಾಲೆಯ ಮುಖ್ಯ…
ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು ೬೫೫೬ ಬಾಕಿ ಇರುವ ಪ್ರಕರಣಗಳಲ್ಲಿ ೨೨೩೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಈ ಪೈಕಿ ಒಟ್ಟು ೧೪೧೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ಇದರಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್ಎಸಿ-ಇಪಿ ಪ್ರಕರಣಗಳು, ಎಮ್ವಿಸಿ-ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳು ಸೇರಿದಂತೆ ಅಬಕಾರಿ ಇಲಾಖೆಯ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಅಲ್ಲದೇ ಪೂರ್ವದಾವೆ ಪ್ರಕರಣಗಳಲ್ಲಿ, ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು ಸೇರಿ ಒಟ್ಟು ೨೮೮೧ ಪ್ರಕರಣಗಳಲ್ಲಿ ೧೩೮೮ ಪ್ರಕರಣಗಳನ್ನು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ನಿಂಗಪ್ಪ ಗರಗ ಹಾಗೂ ಸದಸ್ಯ ಕಾರ್ಯದರ್ಶಿ ಸಂಪತಕುಮಾರ ಬಳೂಲಗಿಡದ ಇವರುಗಳು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಿದರು.ನ್ಯಾಯಾಂಗ ಸಂಧಾನಕಾರರಾಗಿ ರೇಣುಕಾ ಪಾಟೀಲ…
ಬಸವನಬಾಗೇವಾಡಿ: ಜಗತ್ತಿನಲ್ಲಿರುವ ಎಲ್ಲ ದಾನಗಳು ಶ್ರೇಷ್ಠ. ಅದರಲ್ಲಿಯೂ ರಕ್ತದಾನ, ದೇಹದಾನ ಅತಿಶ್ರೇಷ್ಠವಾಗಿದೆ ಎಂದು ಉಡುಪಿ ಸಮಾನ ಮನಸ್ಕ ಕನ್ನಡಿಗರ ವೇದಿಕೆಯ ಅಧ್ಯಕ್ಷ ಶ್ರೀನಿವಾಸರಾವ ಕುಲಕರ್ಣಿ ಹೇಳಿದರು.ಪಟ್ಟಣದ ಅಸ್ಕಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಡಾ.ನೀರಜ್ ಪಾಟೀಲ ಅಭಿಮಾನ ಬಳಗವು ಶನಿವಾರ ಹಮ್ಮಿಕೊಂಡಿದ್ದ ದೇಹದಾನದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸತ್ತ ಮೇಲೆ ಹೂಳಿದರೆ, ಸುಟ್ಟರೆ ದೇಹದ ಅಂಗಾಂಗ ನಾಶವಾಗಿ ಹೋಗುತ್ತದೆ. ಅದೇ ಸತ್ತ ದೇಹವನ್ನು ದಾನ ಮಾಡಿದರೆ ಕೆಲವು ಅಂಗಾಂಗಗಳು ಕೆಲವರಿಗೆ ನೆರವಾಗುವ ಮೂಲಕ ಅವರಿಗೆ ಜೀವದಾನ ಮಾಡಲು ಸಾಧ್ಯವಾಗುತ್ತದೆ. ಮಾನವನಾಗಿ ಜನಿಸಿದ ಮೇಲೆ ಉಪಕಾರ ಮಾಡದಿದ್ದರೂ ಸತ್ತ ಮೇಲೆ ದೇಹ ದಾನಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ. ನಾಗರಿಕ ಬಂಧುಗಳಿಗೆ ದೇಹದಾನ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಯುವಜನತೆ ದೇಹ ದಾನ ಮಾಡಲು ಮುಂದಾಗಲು ಧೈರ್ಯ ಮಾಡಬೇಕಿದೆ ಎಂದರು.ಡಾ.ನೀರಜ್ ಪಾಟೀಲ ಅಭಿಮಾನಿ ಬಳಗದ ಅಧ್ಯಕ್ಷ ಡಾ.ಅಮರೇಶ ಮಿಣಜಗಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಅಸ್ಕಿ ಪ್ಯಾರಾ ಮೆಡಿಕಲ್ ಕಾಲೇಜಿನ…
ಬಸವನಬಾಗೇವಾಡಿ: ತಾಲೂಕಿನ ಕಾನ್ನಾಳ ಗ್ರಾಮಕ್ಕೆ ಮುದ್ದೇಬಿಹಾಳ ಘಟಕದಿಂದ ಪ್ರತಿನಿತ್ಯ ಬೆಳಗ್ಗೆ ಮುದ್ದೇಬಿಹಾಳದಿಂದ ಬರುತ್ತಿದ್ದ ಬಸ್ ಸೇವೆ ಪುನಾರಂಭಗೊಂಡಿದ್ದರಿಂದ ಶನಿವಾರ ಗ್ರಾಮಸ್ಥರು ಬಸ್ ಅನ್ನು ಮದುವಣಗಿತ್ತಿಯಂತೆ ಸಿಂಗರಿಸಿ ಪೂಜೆ ಸಲ್ಲಿಸಿ ಬಸ್ ಸೇವೆ ಪುನಾರಂಭಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.ಗ್ರಾಮದಿಂದ ಪ್ರತಿನಿತ್ಯ ಬೆಳಗ್ಗೆ ಮುದ್ದೇಬಿಹಾಳ ಕಾಲೇಜಿನ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ, ವಿವಿಧ ಕೆಲಸಗಳಿಗೆ ತೆರಳುವ ಗ್ರಾಮಸ್ಥರಿಗೆ ಬಸ್ ಇಲ್ಲದೇ ಇರುವದರಿಂದಾಗಿ ತುಂಬಾ ತೊಂದರೆಯಾಗಿತ್ತು. ಇದನ್ನು ಮನಗಂಡ ಗ್ರಾಮದ ಯುವಮುಖಂಡ, ಪತ್ರಕರ್ತ ರಾಜಶೇಖರ ಸಜ್ಜನ ಅವರು ಗ್ರಾಮದ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ಆಗುತ್ತಿರುವ ತೊಂದರೆ ಕುರಿತು ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರ ಗಮನಕ್ಕೆ ತರುವ ಮೂಲಕ ಮೊದಲಿನಂತೆ ಮುದ್ದೇಬಿಹಾಳದಿಂದ ಗ್ರಾಮಕ್ಕೆ ಬಸ್ ಬರುವಂತೆ ಮನವಿ ಮಾಡಿಕೊಂಡಿದ್ದರಿಂದ ಬಸ್ ಸೇವೆ ಪುನಾರಂಭಗೊಂಡಿದೆ.ಇದೇ ಸಂದರ್ಭದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಗ್ರಾಮಸ್ಥರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಬಸಯ್ಯ ಮಠಪತಿ, ಶಿವಪ್ಪ ಹೂಗಾರ, ಅರವಿಂದ ಹೂಗಾರ, ಬಸವರಾಜ ಸಜ್ಜನ, ರಾಜು ನಾಟೀಕಾರ, ಸಂಗಪ್ಪ ಬಳಿಗಾರ, ಅಕ್ಬರ್ ಚಪ್ಪರಬಂದ, ಮಹಿಬೂಬ ಚಪ್ಪರಬಂದ, ಪ್ರಭು ಕೊರಣ್ಣನವರ,…
ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಸಲಹೆ ಬಸವನಬಾಗೇವಾಡಿ: ಭಗವಂತನಲ್ಲಿ ಭಕ್ತಿಯಿದ್ದರೆ ಅನೇಕ ಸಾಮಾಜಿಕ ಕಾರ್ಯಗಳು ನಡೆಯುತ್ತವೆ. ಅರಳಿಚಂಡಿ ಗ್ರಾಮದ ಜಗನ್ಮಾತೆ ಆದಿಶಕ್ತಿದೇವಿ ಹಿರೇಮಠದ ಶಕ್ತಿ ದೊಡ್ಡದು. ದೇವಿ ಕೃಪೆ ಪಡೆದ ಅನೇಕ ಸದ್ಭಕ್ತರ ಸಹಾಯ-ಸಹಕಾರದಿಂದ ಭವ್ಯವಾದ ಜನಕಲ್ಯಾಣ ಸಮುದಾಯ ಭವನ ನಿರ್ಮಾಣವಾಗಿರುವುದು ಶ್ಲಾಘನೀಯ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.ತಾಲೂಕಿನ ಅರಳಿಚಂಡಿ ಗ್ರಾಮದ ಜಗನ್ಮಾತೆ ಆದಿಶಕ್ತಿದೇವಿ ಹಿರೇಮಠದಲ್ಲಿ ನಿರ್ಮಾಣವಾದ ಜನಕಲ್ಯಾಣ ಸಮುದಾಯ ಭವನ ಲೋಕಾರ್ಪಣೆಯಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಸಮಾಜ ಬಾಂಧವರನ್ನು ಸಮಾನವಾಗಿ ಕಾಣುವ ಗ್ರಾಮ ಇದಾಗಿದೆ. ಈ ಗ್ರಾಮಸ್ಥರ ಒಗ್ಗಟ್ಟಿನಿಂದ ಗ್ರಾಮಕ್ಕೆ ಅನೇಕ ಕೆಲಸಗಳು ಆಗಿವೆ. ಅರಳಿಚಂಡಿ ಕೆರೆ ತುಂಬಿದರಿಂದ ಈ ಭಾಗದಲ್ಲಿ ನೀರಿನ ಭವಣೆ ಇಲ್ಲದಂತಾಗಿದೆ. ಜನರಲ್ಲಿ ಒಗ್ಗಟ್ಟು ಇದ್ದಾಗ ಅದಕ್ಕೆ ಬರುವ ಮೆರಗು ಬೇರೆಯಾಗಿರುತ್ತದೆ ಎಂದ ಅವರು, ಅರಳಿಚಂಡಿ ಗ್ರಾಮಕ್ಕೆ ಬರಲು ಮೊದಲು ಸರಿಯಾದ ರಸ್ತೆಗಳು ಇರಲಿಲ್ಲ. ಮೊದಲ ಬಾರಿಗೆ ಈ ಗ್ರಾಮಕ್ಕೆ ಸಚಿವ ಶಿವಾನಂದ…
ಸರ್ಕಾರಿ ಪಪೂ ಕಾಲೇಜಿನ ಕೊಠಡಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಸಚಿವ ಶಿವಾನಂದ ಪಾಟೀಲ ಸಲಹೆ ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯ ೨೦೨೨-೨೩ ನೇ ಸಾಲಿನ ಲೆಕ್ಕ ಶಿರ್ಷಿಕೆ ನಬಾರ್ಡ್-೨೮ ಅಡಿಯಲ್ಲಿ ಅಂದಾಜು ಮೊತ್ತ ರೂ. ೧.೫೮ ಕೋಟಿ ವೆಚ್ಚದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎರಡು ತರಗತಿ ಕೊಠಡಿ, ಎರಡು ಪ್ರಯೋಗಾಲಯ ಕೊಠಡಿ ಹಾಗೂ ಶೌಚಾಲಯ ಕಾಮಗಾರಿ ಹಾಗೂ ಜಿಲ್ಲಾ ಪಂಚಾಯತ ಪಂಚಾಯತ್ ರಾಜ್ ಇಂಜನಿಯರಿಂಗ್ ಇಲಾಖೆ ಉಪವಿಭಾಗದ ೨೦೨೨-೨೩ ನೇ ಸಾಲಿನ ವಿವೇಕ ಪಿಯು ಕಾಲೇಜ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ರೂ. ೫೦.೧೦ ಲಕ್ಷ ವೆಚ್ಚದ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕೊಠಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಶನಿವಾರ ನೆರವೇರಿಸಿದರು.ನಂತರ ಸಚಿವರು ಸಂಬಂಧಿಸಿದ ಅಭಿಯಂತರರಿಗೆ, ಗುತ್ತಿಗೆದಾರರಿಗೆ ವಿಶಾಲವಾದ ಕೊಠಡಿಗಳ ನಿರ್ಮಾಣ ಮಾಡುವ…
