Author: editor.udayarashmi@gmail.com

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ರೂ.೫ ಲಕ್ಷ ಅನುದಾನದಲ್ಲಿ ವಾರ್ಡ ನಂ.೧೧ ರಲ್ಲಿ ಬರುವ ಶ್ರೀ ಹನುಮಾನ ದೇವಸ್ಥಾನ ಜಿರ್ಣೋದ್ಧಾರ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಲಾಯಿತು.ಮಹಾನಗರ ಪಾಲಿಕೆ ಸದಸ್ಯರಾದ ವಿಠ್ಠಲ ಹೊಸಪೇಟ, ಮುಖಂಡರಾದ ಅಶೋಕ ಬೆಲ್ಲದ, ಶಂಕರ ಚಲವಾದಿ, ರಮೇಶ ಪಡಸಲಗಿ, ಭೀಮಸಿ ತಳಕೇರಿ, ಮಹೇಶ ವಾಂಡಕರ, ಆನಂದ ಚೋರಗಿ, ರಾಜು ರಣದೇವಿ, ಅಶೋಕ ಹಂಚಿನಾಳ, ಪ್ರದೀಪ ಚಲವಾದಿ, ಸದಾಶಿವ, ದತ್ತು, ಶ್ರೀಧರ ದೇವರ ಮತ್ತಿತರರು ಇದ್ದರು.

Read More

ಕೆರೆಗೆ ಬಾಗಿನ ಅರ್ಪಣೆ | ಗ್ರಾಮಸ್ಥರ ಹರ್ಷ | ಶಾಸಕ ಮನಗೂಳಿ ಭರವಸೆ ಮೋರಟಗಿ: ಗ್ರಾಮದ ಕೆರೆ ಅಭಿವೃದ್ಧಿಪಡಿಸಲು ೨ ಕೋಟಿ ರೂ.ಅನುದಾನ ಮಂಜೂರು ಮಾಡಿಸಲಾಗುವುದು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಶನಿವಾರ ಗ್ರಾಮದ ೧೪ ಎಕರೆ ೨೬ ಗುಂಟೆ ವಿಶಾಲ ಕೆರೆಗೆ ನೀರು ಹರಿಸಿದ ಪ್ರಯುಕ್ತ ಶನಿವಾರ ಬಾಗಿನ ಅರ್ಪಿಸಿ ಅವರು ಮಾತನಾಡಿದರು.ಬೇಸಿಗೆಯಲ್ಲಿ ಗ್ರಾಮಸ್ಥರ ಕುಡಿವ ನೀರಿನ ಬವಣೆ ತಪ್ಪಿಸಲು ಕೆರೆಗೆ ನೀರು ಹರಿಸುವಂತೆ ಗ್ರಾಪಂ ಅಧಿಕಾರಿಗಳು ಹಾಗೂ ಹಿರಿಯರು ವಿನಂತಿಸಿದ್ದರು. ಅವರ ಕೋರಿಕೆಯಂತೆ ಕೆರೆ ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್, ಗ್ರಾಪಂ ಅಧಿಕಾರಿಗಳು ಕೆರೆ ತುಂಬಿಸಲು ಸಾಕಷ್ಟು ಶ್ರಮಿಸಿದ್ದಾರೆ. ಚುನಾವಣೆ ನಂತರ ಅನುದಾನ ಮಂಜೂರು ಮಾಡಿಸಿ ಕೆರೆಯ ನಾಲ್ಕು ಬದಿಗೆ ಒಡ್ಡು ಹಾಕಿ ಅಭಿವೃದ್ಧಿಪಡಿಸುವ ಜತೆಗೆ ಕೆರೆ ದಾರಿ ಡಾಂಬರೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.ಕರ್ನಾಟಕದ ೨೩೬ ತಾಲೂಕುಗಳಲ್ಲಿ ೨೧೪ ತಾಲೂಕುಗಳನ್ನು ಸರ್ಕಾರ ಬರ ಪೀಡಿತ ಎಂದು ಘೋಷಿಸಿದೆ. ಇಂಥ ಸ್ಥಿತಿಯಲ್ಲಿ ಗ್ರಾಮೀಣ ಭಾಗದ…

Read More

ಬಿಸಿ ಗಾಳಿಗೆ ಜನ ಹೈರಾಣ | ಧಗೆ ತಣಿಸಲು ಪಾನೀಯಗಳ ಮೊರೆ | ರಸ್ತೆಗೆ ಇಳಿಯಲು ಜನರು ಹಿಂದೇಟು – ಇಲಿಯಾಸ್ ಪಟೇಲ್ .ಬಯಾದಗಿರಿ: ಗಿರಿನಾಡು ಎಂದೇ ಹೆಸರುವಾಸಿಯಾಗಿರುವ ಯಾದಗಿರಿ ಜಿಲ್ಲೆಯಲ್ಲಿ ಈ ಬಾರಿಯೂ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಸೂರ್ಯ ಜನರ ನೆತ್ತಿ ಸುಡುವುದರ ಜೊತೆಗೆ ಮೈಬೆವರನ್ನು ಇಳಿಸುತ್ತಿದ್ದಾನೆ.ಬೇಸಿಗೆ ಬಿಸಿಯ ಉಷ್ಣಾಂಶ ಹೆಚ್ಚಳವಾಗಿರುವ ಹಿನ್ನೆಲೆ ಬೇಸಿಗೆಯಿಂದ ಜನರು ದಣಿವಾರಿಸಿ ಕೊಳ್ಳಲು ತಂಪು ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದು, ಅವುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.ಯಾದಗಿರಿ, ಶಹಾಪುರ, ಸುರಪುರ, ಹುಣಸಗಿ ಹೀಗೆ ಹಲವಾರು ಕಡೆಯ ಜನತೆ ರಣ ಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ ಅಂತಾನೇ ಹೇಳಬಹುದು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೂರ್ಯನ ಧಗೆ ಜನರ ನೆತ್ತಿಸುಡುತ್ತಿದೆ. ಇದರಿಂದ ಜನರು ನಿತ್ರಾಣವಾಗಿ ದಾಹ ನೀಗಿಸಿಕೊಳ್ಳಲು ತಂಪು ಪಾನೀಯಗಳಾದ ಕಬ್ಬಿನ ಹಾಲು, ಎಳೆನೀರು, ಮಜ್ಜಿಗೆ, ನಿಂಬೆಹಣ್ಣಿನ ಜ್ಯೂಸ್ ಗಳಂತಹ ಪಾನೀಯಗಳ ಮೊರೆ ಹೋಗುತ್ತಿದ್ದಾರೆ.ಬಿಸಿಲಿನ ಜೊತೆಗೆ ಬಿಸಿ ಗಾಳಿಯೂ ಸಹ ಜನರನ್ನು ತತ್ತರಿಸುವಂತೆ ಮಾಡಿದೆ. ನಾಗರಿಕರು ಬಿಸಿಲಿನ ತಾಪಕ್ಕೆ ದಣಿವಾರಿಸಲು…

Read More

ವಿಜಯಪುರ: ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಜೀ-ಕನ್ನಡ ನ್ಯೂಸ್ ೨೦೨೪ರ ಯುವರತ್ನ ಪ್ರಶಸ್ತಿಯನ್ನು ವಿಜಯಪುರ ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ್ ಮಲ್ಲಪ್ಪ ಜರಾಳಿ ಇವರಿಗೆ ನೀಡಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವು ಬೆಂಗಳೂರಿನ ಹೊಟೇಲ್ ಲಲಿತ್ ಅಶೋಕ್‌ದಲ್ಲಿ ಆಯೋಜಿಸಲಾಗಿತ್ತು.ಈ ಸಮಯದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಇಲಾಖೆ ಸಚಿವ ಚೆಲುವರಾಯ ಸ್ವಾಮಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ನಿರ್ಮಾಪಕಿ ಅಶ್ವಿನಿ ಪುನೀತ ರಾಜಕುಮಾರ, ನಟಿ ಆರಾಧನಾ ರಾಮ್, ನಟ ವಿಜಯ ರಾಘವೇಂದ್ರ, ದ್ರುವ ಸರ್ಜಾ ಉಪಸ್ಥಿತರಿದ್ದು ಸಾಧಕರಿಗೆ ಸನ್ಮಾನಿಸಿದರು.

Read More

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.ಮಂಡ್ಯದಲ್ಲಿ ನಡೆದ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ. ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ಒಪ್ಪಿಸುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.ಮಾರ್ಚ್‌ 21ಕ್ಕೆ ನನಗೆ ಅಪರೇಷನ್ ಇದೆ. ಮಾರ್ಚ್‌ 25ಕ್ಕೆ ಇಲ್ಲಿಗೆ ಬಂದು ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ. ನಿಖಿಲ್ ಒಪ್ಪಿಸಲು ನಾನು ಮುಂದಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.ಈ ಬಾರಿ ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಪಡೆದುಕೊಂಡಿದೆ. ಒಂದು ಕಾಲದಲ್ಲಿ ಜೆಡಿಎಸ್​ ಭದ್ರಕೋಟೆಯಾಗಿರುವ ಮಂಡ್ಯಕ್ಕೆ ಕಾಂಗ್ರೆಸ್ ಎಂಟ್ರಿಕೊಟ್ಟಿದೆ. ವಿಧಾನಸಭೆಯಲ್ಲಿ…

Read More

ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಶಿವಮೊಗ್ಗ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಶುಕ್ರವಾರ ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸಭೆ ನಡೆಸಿದ ಈಶ್ವರಪ್ಪ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇನೆ ಹೊರತು ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಬಿಜೆಪಿ ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿದೆ. ಅದನ್ನು ತಪ್ಪಿಸಲು ಸ್ಪರ್ಧೆಗೆ ಮುಂದಾಗಿದ್ದೇನೆ ಎಂದು ಪರೋಕ್ಷವಾಗಿ ಮಾಜಿ ಸಿಎಂ…

Read More

ನವದೆಹಲಿ: ಚುನಾವಣೆಗೆ ತಯಾರಾಗಿರುವ ದೇಶದಲ್ಲಿ ಯಾವಾಗ ಚುನಾವಣೆ ಎಂದು ಜನ ಕಾಯುತ್ತಿದ್ದರು. ಜನರ ನಿರೀಕ್ಷೆಗೆ ಉತ್ತರಿಸಿರುವ ಚುನಾವಣಾ ಆಯೋಗ ಕೊನೆಗೆ ಒಂದು ದಿನವನ್ನು ತಿಳಿಸಿದೆ. 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಾರ್ಚ್ 15ರ ಮಧ್ಯಾಹ್ನ ತಿಳಿಸಿದೆ.ಭಾರತೀಯ ಚುನಾವಣಾ ಆಯೋಗ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಲೋಕಸಭಾ ಚುನಾವಣೆ ಕುರಿತು ಸಂಕ್ಷಿಪ್ತ ಹೇಳಿಕೆಯನ್ನು ಪೋಸ್ಟ್ ಮಾಡಿದೆ. ಜೊತೆಗೆ ನಾಲ್ಕು ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಅದೇ ಸಮಯದಲ್ಲಿ ಘೋಷಿಸುವುದಾಗಿ ತಿಳಿಸಿದೆ.ಸಾರ್ವತ್ರಿಕ ಚುನಾವಣೆಗಳು 2024 ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಮಾರ್ಚ್ 16 ರ ಶನಿವಾರ ನಡೆಯಲಿದೆ. ಇದು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈವ್‌ಸ್ಟ್ರೀಮ್ ಆಗುತ್ತದೆ” ಎಂದು ಟ್ವೀಟ್ ಮಾಡಲಾಗಿದೆ.

Read More

ಪೋಕ್ಸೋ ಕಾಯ್ದೆಯಡಿ ಎಫ್​ಐಆರ್​​ ದಾಖಲು | ಸಂತ್ರಸ್ತೆಯ ತಾಯಿ ನೀಡಿದ್ದ ದೂರು | ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಘಟನೆ ಸಂಬಂಧ ತನಿಖೆ ನಡೆಸುವಂತೆ ಸೂಚನೆ ನೀಡಿದೆ.ಹೌದು, ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಇನ್ನು ಯಡಿಯೂರಪ್ಪ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.ಈ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಮಾತನಾಡಿ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಮನೆಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ…

Read More

ಝಳಕಿ: ಸಮೀಪದ ಗುಂದವಾನ ಗ್ರಾಮದ ಗ್ರಾಮ ದೇವತೆ ಗುಪ್ತೇಶ್ವರಿ ದೇವಿಗೆ ಕಳಸಾರೋಹಣ ಕಾರ್ಯಕ್ರಮ ಜರುಗಿತು.ಗ್ರಾಮದ ಮಾ.15 ರಂದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೂಗಳು ಸುರಿಮಳೆ ಮಾಡುತ್ತ ಗ್ರಾಮಕ್ಕೆ ಶಿಖರದ ಕಳಸಕ್ಕೆ ಸ್ವಾಗತಿಸುವ ಮೂಲಕ ದೇವಿಯ ಗುಡಿಗೆ ಬಂದು ನಂತರ ಶಿಖರಕ್ಕೆ ಕಳಸಾರೋಹಣ ಮಾಡಲಾಯಿತು.ಸ್ಥಳದಲ್ಲಿ ಜಾತ್ರಾ ಕಮೀಟಿ ಅಧ್ಯಕ್ಷ ಹಣಮಂತ ಖಡೆಖಡೆ, ಸೈಯದ್ ಶಿವಣಗಿ, ಅಕ್ಬರ್ ಖಾನಾಪೂರ, ಮುನ್ನಾಗೌಡ ಪಟೇಲ, ಜಾವೀಧ ಬಿರಾದಾರ, ಆರ್.ಡಿ.ಖಾನಾಪೂರ, ಲಾಲಸಾಬ ಇನಾಮದಾರ, ನಬೀಸಾಬ ಮುಜಾವರ, ಸೇರಿದಂತೆ ಇತರರು ಇದ್ದರು.

Read More