Author: editor.udayarashmi@gmail.com

ವಿಜಯಪುರ: ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಹಾಗೂ ನಿಷ್ಕಾಳಜಿಯಿಂದ ಸರಕಾರದ ತೆರಿಗೆ ಹಣವನ್ನು ವ್ಯರ್ಥ ಹಾಳುಮಾಡುತ್ತಿದ್ದು ಸರಿಯಾದ ಯೋಜನೆಯಿಲ್ಲದೇ ವಿದ್ಯುತ್ ಕಂಬದ ಕೆಳಗೆ ಗಿಡಗಳು ಹಚ್ಚಿರುವುದರಿಂದ ವಾಯರ್‌ಗಳ ಮಧ್ಯ ಗಿಡದ ಕೊಂಬೆ ಬಂದು ಗಾಳಿಗೆ ಒಂದಕ್ಕೊಂದು ತಾಗಿ ಶಾರ್ಟ ಸರ್ಕಿಟ್ ಆಗಿ ಅನೇಕ ಬಾರಿ ಸಮಸ್ಯೆಗಳಾಗಿವೆ. ಇದನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಮಾಡುವಂತೆ ಆಗ್ರಹಿಸಿ ರೈತಸಂಘದಿಂದ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡಿ, ಜೋರಾದ ಗಾಳಿ ಹಾಗೂ ಮಳೆ ಬಂದಾಗ ಗಿಡಗಳ ಎಲೆಗಳು ವಿದ್ಯುತ್ ಕಂಬದ ವಾಯರಗಳು ಒಂದಕ್ಕೊಂದು ತಾಗಿ ಶಾರ್ಟ ಸರ್ಕಿಟ್ ಆಗಿ ವಾರಗಟ್ಟಲೆ ವಿದ್ಯುತ್ ಹೋಗಿರುವ ಉದಾಹರಣೆಗಳಿವೆ. ಇದರಂತೆ ರೈತರಿಗೆ ಹಾಗೂ ಸಾರ್ವಜನಿಕರಿಗೂ ಅನೇಕ ಸಮಸ್ಯೆಗಳು ಆಗಿರುವುದು ಇದೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಅಧಿಕಾರಿಗಳು ತಲೆ…

Read More

ಸಿಂದಗಿ: ಹುದ್ದೆ ಯಾವುದೇ ಇದ್ರು ಸಮಾಜದ ಕಾರ್ಯಕ್ಕಾಗಿ ಸದಾ ಸ್ಪಂದಿಸುತ್ತೇನೆ ಎಂದು ನೂತನ ಮಂಡಲದ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.ಪಟ್ಟಣದ ಡೈಮಂಡ್ ಬ್ಯಾಂಕ್ ಸಭಾಂಗಣದಲ್ಲಿ ತಾಲೂಕು ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪಕ್ಷ ನಿಷ್ಠೆ, ವೃತ್ತಿ ನಿಷ್ಠೆ ಹಾಗೂ ಸಮಾಜ ಪರ ಚಿಂತನೆಗಳು ನಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತವೆ. ನಾವು ಹುದ್ದೆಗಾಗಿ ಬಡಿದಾಡದೆ ನಿಷ್ಠೆಯಿಂದ ನಮ್ಮ ಕಾರ್ಯಗಳನ್ನು ನಾವು ಜವಾಬ್ದಾರಿಯಿಂದ ಮಾಡುತ್ತಾ ಹೋದರೆ ಹುದ್ದೆಗಳೇ ನಮ್ಮನ್ನು ಹುಡುಕಿಕೊಂಡು ಬರುತ್ತವೆ. ಕಾರಣ ನಾವು ಯಾರೇ ಇರಲಿ ನಮ್ಮ ನಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸೋಣ ಎಂದರು.ಇದೇ ಸಂದರ್ಭದಲ್ಲಿ ಸಮಾಜದ ತಾಲೂಧ್ಯಕ್ಷ ಎಂ.ಎಂ.ಹಂಗರಗಿ, ಅಧ್ಯಕ್ಷತೆ ವಹಿಸಿದ್ದ ವ್ಹಿ.ಬಿ ಕುರುಡೆ ಮಾತನಾಡಿ, ಪಾಟೀಲ ಅವರು ಸದಾ ಕ್ರಿಯಾಶೀಲ ವ್ಯಕ್ತಿ. ಸಮಾಜ ಮುಖಿಯಾಗಿ ಎಲ್ಲರೊಂದಿಗೂ ಬೆರೆಯುವ ಸರಳ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಜವಾಬ್ದಾರಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಕಂಡು ಪಕ್ಷ ಅವರಿಗೆ ಮಂಡಲದ ಅಧ್ಯಕ್ಷ ಸ್ಥಾನ ನೀಡಿದೆ. ಕೊಟ್ಟ ಜವಾಬ್ದಾರಿಯನ್ನು ಸಂತೋಷ…

Read More

ಜೆಎಸ್‌ಎಸ್ ಆಸ್ಪತ್ರೆಯಲ್ಲಿ ನಡೆದ ವಿಶೇಷ ಸಂವಾದದಲ್ಲಿ ಡಾ.ನವೀನ ಪಟ್ಟಣಶೆಟ್ಟಿ ಅಭಿಮತ ವಿಜಯಪುರ: ಸತ್ತಂತೆ ಬದುಕುವುದಕ್ಕಿಂತ ಸತ್ತ ಮೇಲೂ ಬದುಕುವುದು ನಿಜವಾದ ಬದುಕಾಗಿದ್ದು ಆ ಕಾರ್ಯ ಆಗಬೇಕಾದಲ್ಲಿ ಅಂಗಾಂಗಗಳನ್ನು ದಾನ ಮಾಡುವುದೊಂದೆ ಮಾರ್ಗವಾಗಿದೆ. ಸತ್ತ ಮೇಲೆ ಮಣ್ಣಾಗುವ ಈ ಶರೀರದಿಂದ ಸಾಯುವ ಅಂಚಿನಲ್ಲಿರುವ ಜೀವಗಳಿಗೆ ಬದುಕು ನೀಡಬಹುದು ಎಂದು ಮೂತ್ರಪಿಂಡಗಳ ಕಸಿ ತಜ್ಞರಾದ ಡಾ.ನವೀನ ಪಟ್ಟಣಶೆಟ್ಟಿ ಹೇಳಿದರು.ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಕಿಡ್ನಿ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಅವರು; ಹುಟ್ಟಿದ ಪ್ರತಿಯೊಬ್ಬ ಮನುಷ್ಯ ಸಾಯಲೇ ಬೇಕು ಎನ್ನುವುದು ನಿಸರ್ಗದ ನಿಯಮವಾಗಿದೆ. ಆ ನಿಯಮದ ಪ್ರಕಾರ ಪ್ರತಿನಿತ್ಯವೂ ಸಾಕಷ್ಟು ಜನ ಪ್ರಾಣ ಬಿಡುತ್ತಿದ್ದಾರೆ. ಆದರೆ ಸತ್ತ ಮೇಲೆ ಮತ್ತೊಮ್ಮೆ ಬದುಕಿ ಉಳಿಯಬೇಕಾದರೆ ಅದಕ್ಕಿರುವ ಏಕೈಕ ಮಾರ್ಗವೆಂದರೆ ಅದು ಅಂಗಾಂಗ ದಾನವಾಗಿದೆ. ಕೆಲವು ಸಂದರ್ಭಗಳಲ್ಲಿ ಸಂಭವಿಸುವ ಮೃತ್ಯುವಿನಿಂದ ವ್ಯಕ್ತಿಯು ನಮ್ಮನ್ನು ಅಗಲಿ ಹೋಗುತ್ತಾರೆ. ಆದರೆ ಅವರಿಗೆ ತಮ್ಮ ದೇಹದ ಭಾಗಗಳಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು…

Read More

ದೇವರಹಿಪ್ಪರಗಿ: ಬಿಜೆಪಿ ಹಿಂದುಳಿದ ವರ್ಗವನ್ನು ಸದಾ ಕಡೆಗಣಿಸುತ್ತಲೇ ಬಂದಿದ್ದು, ಕೇವಲ ಮತ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಂಡು ಬಿಸಾಕುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎರಡು ಪ್ರಬಲ ಸಮುದಾಯಗಳಿಗೆ ಟಿಕೆಟ್ ನೀಡದೆ ಮೋಸ ಮಾಡಿದೆ ಎಂದು ಕೋಲಿ ಕಬ್ಬಲಿಗ ಯುವವೇದಿಕೆ ರಾಜ್ಯಾಧ್ಯಕ್ಷ ಶಿವಾಜಿ ಮೆಟಗಾರ ಆರೋಪಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಿಂದ ಕೆ.ಎಸ್. ಈಶ್ವರಪ್ಪನವರ ಮಗನಿಗೆ ಟಿಕೆಟ್ ನೀಡಲಾಗುವುದೆಂದು ಹೇಳಿ ಮೋಸ ಮಾಡಲಾಯಿತು. ಅದರಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಮೋದ ಮದ್ವರಾಜ ಅವರಿಗೆ ಟಿಕೆಟ್ ನೀಡದೇ ಹಿಂದುಳಿದ ವರ್ಗವನ್ನು ತುಳಿಯುವ ಕೆಲಸ ಬಿಜೆಪಿ ಮಾಡುತ್ತಿದೆ. ಅಹಿಂದ್ ವರ್ಗವನ್ನು ಕೇವಲ ವ್ಹೋಟ್ ಬ್ಯಾಂಕ ರಾಜಕಾರಣಕ್ಕಾಗಿ ಬಳಸಿಕೊಂಡು ಅಧಿಕಾರ ನೀಡುವಾಗ ಕೇವಲ ಮೇಲ್ವರ್ಗದವರಿಗೆ ನೀಡುತ್ತಿರುವುದು ಹಲವಾರು ನಿದರ್ಶನಗಳಿವೆ.ರಾಜ್ಯದಲ್ಲಿ ಸುಮಾರು ೭೦ಲಕ್ಷ ಕುರುಬ ಸಮುದಾಯವಿದ್ದು, ಅವರಿಗೂ ಒಂದು ಟಿಕೆಟ್ ಇಲ್ಲದಂತಾಗಿದೆ. ಅದರಂತೆ ಸುಮಾರು ೫೦ಲಕ್ಷದಷ್ಟಿರುವ ಕೋಲಿ ಕಬ್ಬಲಿಗ, ಮೀನುಗಾರರು, ಸೇರಿದಂತೆ ೩೭ ರ‍್ಯಾಯ ಪದಗಳ ಸೇರಿ ಈ ಸಮುದಾಯದವರಿಗೂ ಟಿಕೆಟ್ ವಂಚಿತರನ್ನಾಗಿ ಮಾಡಿದ್ದು, ಬಿಜೆಪಿಯ…

Read More

ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ ಆರೋಪ ದೇವರಹಿಪ್ಪರಗಿ: ಅನುದಾನ, ಯೋಜನೆಗಳ ಕುರಿತು ಸ್ಪಷ್ಟ ಮಾಹಿತಿ ನೀಡದೇ, ಎಲ್ಲವುಗಳಿಗೆ ನಾನೇ ಕಾರಣ ಎಂಬ ಹೇಳಿಕೆ ನೀಡಿ ಶಾಸಕರು ಸಣ್ಣತನ ತೋರುತ್ತಿದ್ದಾರೆ ಇದು ಶಾಸಕ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ ಗಂಭೀರವಾಗಿ ಆರೋಪಿಸಿದ್ದಾರೆ.ಶುಕ್ರವಾರ ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷರು, ಜಿಲ್ಲೆಯ ಉಸ್ತುವಾರಿ ಸಚಿವರ ಸಹಕಾರ ಹಾಗೂ ಆಸಕ್ತಿಯಿಂದ ಮತಕ್ಷೇತ್ರಕ್ಕೆ ಅಗತ್ಯವಾದ ಅನುದಾನ ತರುವಲ್ಲಿ ಮಾಜಿಶಾಸಕ ಶರಣಪ್ಪ ಸುಣಗಾರ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತಾಲ್ಲೂಕು ಕೇಂದ್ರಕ್ಕೆ ಅಗತ್ಯವಾದ ಕಚೇರಿಗಳ ಆರಂಭಕ್ಕೆ ಸರ್ಕಾರದ ನೆರವು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ಅಗತ್ಯ ಪ್ರಯತ್ನದಲ್ಲಿದೆ. ಆದರೆ ಕ್ಷೇತ್ರದ ಶಾಸಕರು ಮಾತ್ರ ಗ್ರಾಮ ಪಂಚಾಯಿತಿ ಮಟ್ಟದ ಸಭೆ ಹಾಗೂ ಯೋಜನೆಗಳಲ್ಲಿ ಅನಗತ್ಯ ಹಸ್ತಕ್ಷೇಪ ಕೈಗೊಳ್ಳುತ್ತಿದ್ದಾರೆ. ಅಲ್ಲದೆ ಹಿಂದಿನ ಶಾಸಕರ ಹಾಗೂ ಸರ್ಕಾರದ…

Read More

ಇಂಗಳಗಿ ಕೆರೆಗೆ ನೀರು ಪೂರೈಸುವ ಕಾಲುವೆ ಒಡೆದ ಪ್ರದೇಶಕ್ಕೆರೈತರ ಭೇಟಿ | ಪ್ರತಿಭಟನೆ ಎಚ್ಚರಿಕೆ ದೇವರಹಿಪ್ಪರಗಿ: ಗ್ರಾಮೀಣ ಕೆರೆಗಳಿಗೆ ನೀರು ಪೂರೈಸುವ ಕಾಲುವೆ ಒಡೆದು, ಪಡಗಾನೂರ ಗ್ರಾಮ ವ್ಯಾಪ್ತಿಯಲ್ಲಿನ ಕಲ್ಲು ಕ್ರಶರ್‌ಗಳ ಮಾಲೀಕರು ಅನಧಿಕೃತವಾಗಿ ನೀರು ಪಡೆಯುತ್ತಿರುವ ಪ್ರದೇಶಕ್ಕೆ ಇಂಗಳಗಿ ಗ್ರಾಮದ ರೈತರು ತೆರಳಿ ಆಕ್ರೋಶ ವ್ಯಕ್ತಪಡಿಸಿದರು.ತಾಲ್ಲೂಕಿನ ಇಂಗಳಗಿ ಗ್ರಾಮದ ರೈತರು ತಮ್ಮ ಕೆರೆಗೆ ನೀರು ಪೂರೈಸುವ ಕಾಲುವೆಗೆ ಗುರುವಾರ ತೆರಳಿ ವಾಸ್ತವಿಕ ಸ್ಥಿತಿ ನೋಡಿ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗೆ ಮಾಹಿತಿ ನೀಡಿ ವಾಗ್ವಾದ ನಡೆಸಿದರು. ಹಾಗೂ ತಾಲ್ಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ರೈತರಾದ ಸಂತೋಷ ಬಿರಾದಾರ, ಮಂಜುನಾಥ ಕೊಕಟನೂರ ಮಾತನಾಡಿ, ಪಡಗಾನೂರ ಗ್ರಾಮದ ಪ್ರಭಾವಿ ನಾಯಕರು ಸೇರಿದಂತೆ ವಿವಿಧ ಕ್ರಶರ್‌ಗಳು ಅಕ್ರಮವಾಗಿ ನೀರು ಪಡೆಯುತ್ತಿವೆ. ಇದನ್ನು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ನೋಡಿದ್ದರು ಸಹ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಈ ಕುರಿತು ಪ್ರಶ್ನಿಸಿದರೆ ಅಧಿಕಾರಿ ರೈತರೊಂದಿಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಜನ,…

Read More

ದೇವರಹಿಪ್ಪರಗಿ: ಮಾ.೧೬ ರಂದು ಶನಿವಾರ(ಇಂದು) ಬೆಳಿಗ್ಗೆ ೧೦ ಘಂಟೆಗೆ ದೇವರಹಿಪ್ಪರಗಿ ಇಂಡಿ ರಸ್ತೆಯಲ್ಲಿಯ ಹೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ.ತಾಲ್ಲೂಕಿನ ಎಲ್ಲಾ ಗ್ರಾಹಕರು ಸಭೆಗೆ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಟಣೆ ಮೂಲಕ ತಿಳಿಸಿದ್ದಾರೆ

Read More

ದೇವರಹಿಪ್ಪರಗಿ: ಕೋರವಾರ ಗ್ರಾಮದಲ್ಲಿ ದಿ.೧೭ ಭಾನುವಾರದಂದು ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತçಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ.ತಾಲ್ಲೂಕಿನ ಕೋರವಾರ ಗ್ರಾಮದ ಸರಸ್ವತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಜಯಪುರ ನಗರದ ಡಾ.ಪ್ರಭುಗೌಡ ಲಿಂಗದಳ್ಳಿ(ಚಬನೂರ)ರವರ ಅನುಗ್ರಹ ಕಣ್ಣಿನ ಆಸ್ಪತ್ರೆ, ಅನುಗ್ರಹ ವ್ಹಿಜನ್ ಫೌಂಡೇಷನ್ ಟ್ರಸ್ಟ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದಲ್ಲಿ ಬೆಳಿಗ್ಗೆ ೦೯ರಿಂದ ಮದ್ಯಾಹ್ನ ೦೩ ಗಂಟೆಯವರೆಗೆ ನಡೆಯುವ ಶಿಬಿರದಲ್ಲಿ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ ಹಾಗೂ ಅವರ ತಂಡ ತಪಾಸಣೆ ನಡೆಸಲಿದೆ.ಅರ್ಹ ರೋಗಿಗಳಿಗೆ ಉಚಿತವಾಗಿ ಕರೆದುಕೊಂಡು ಹೋಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಮಾಡಿ ಕಳಿಸಲಾಗುವುದು. ಕೋರವಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಗಮೇಶ ಛಾಯಾಗೋಳ ಸಂಪರ್ಕ ಸಂಖ್ಯೆ:೯೭೪೨೩೦೪೫೬೫ ಹಾಗೂ ನಜೀರ್ ಚಾಂದಕವಟೆ ಸಂಪರ್ಕ ಸಂಖ್ಯೆ:೭೩೫೩೫೧೫೩೮೦ ಇವರನ್ನು ಸಂಪರ್ಕಿಸುವಂತೆ ಶಿಬಿರದ ಪ್ರಕಟಣೆ ತಿಳಿಸಿದೆ.

Read More

ದೇವರಹಿಪ್ಪರಗಿ: ಪಟ್ಟಣದ ಹುಸೇನಸಾಬ್ ಗೌಂಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ಮುಳಸಾವಳಗಿ ಗ್ರಾಮದ ದಾವಲಸಾಬ್ ಇನಾಮದಾರ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಹಾಗೂ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕುಚಬಾಳ) ಸೂಚನೆಯ ಮೇರೆಗೆ ಇವರ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

Read More

“ಆರೋಗ್ಯ ಅಂಗಳ “- ಸಾಯಬಣ್ಣ ಮಾದರ (ಸಲಾದಹಳ್ಳಿ) ಬೇಸಿಗೆಯ ಬಿಸಿಲು ವಾತಾವರಣದಲ್ಲಿ ಏರಿಕೆಯಾಗಿದೆ ಬಿಸಿ ಗಾಳಿಯಿಂದ ಜನರ ತತ್ತರಿಸಿದ್ದಾರೆ. ಇದರಿಂದಾಗಿ ಹಲವಾರು ರೋಗಗಳು ಜನರಲ್ಲಿ ಕಂಡು ಬರುತ್ತಿವೆ. ಇಡೀ ವಾತಾವರಣ ಧೂಳು ಹಾಗೂ ಅತಿ ಉಷ್ಣಾಂಶಯಿಂದ ಕೂಡಿದು ರೋಗಗಳು ಕ್ರಿಯಾಶೀಲವಾಗುತ್ತಿವೆ, ಬೇಸಿಗೆಯ ಬಿಸಿ ಗಾಳಿಯಿಂದ ರೋಗಗಳು ಒಬ್ಬರಿಂದ ಒಬ್ಬರಿಗೆ ಬೇಗನೆ ಹರಡುತ್ತಿವೆ ಹೀಗಾಗಿ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯವಾಗಿದೆ.ಕಾಲರ, ಟೈಪಾಯಾಡ್ನಂತ ಜ್ವರ, ಕಣ್ಣಿನ ಅಲರ್ಜಿ, ಕರುಳು ಬೇನೆ, ವಾಂತಿಬೇದಿ, ಮಕ್ಕಳಲ್ಲಿ ಬರುವ ಅಮ್ಮ ರೋಗ, ಅತಿ ಬಿಸಿಲಿನಿಂದ ತಲೆ ಸುತ್ತು, ಮೂಗಿನಲ್ಲಿ ರಕ್ತಸ್ರಾವ, ಚರ್ಮರೋಗ, ದಮ್ಮು, ಬೆವರು ಗುಳ್ಳಿ, ಕೀವು ತುಂಬಿದ ಗುಳಿ, ಉಷ್ಣದ ಕೆಮ್ಮು, ಅಂಗೈ -ಅಂಗಾಲು ಉರಿ, ಸರ್ಪ ಸುತ್ತು, ಉರಿ ಮೂರ್ತ, ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಗಳುಸಾರ್ವಜನಿಕರು ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ಅನುಸರಿಸುವುದು ಉತ್ತಮ.

Read More