Author: editor.udayarashmi@gmail.com

ಇಂಡಿ: ಪಟ್ಟಣದ ನಿವಾಸಿ, ಬಿಜೆಪಿ ಕಾರ್ಯಕರ್ತ ಶಾಂತು ಕಂಬಾರ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ ಹಿಂದುಳಿದ ವರ್ಗಗಳ ಮೋರ್ಚಾದ ವಿಜಯಪುರ ಜಿಲ್ಲಾ ಅಧ್ಯಕ್ಷ ಸಿದ್ದು ಬುಳ್ಳಾ ಆದೇಶ ಹೊರಡಿಸಿದ್ದಾರೆ.ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡು ಕಾರ್ಯಕರ್ತರ ಪಡೆ ಕಟ್ಟಿ ಪಕ್ಷ ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Read More

ಇಂಡಿ: ಮಕ್ಕಳನ್ನು ಪ್ರೀತಿಸುವ ಪ್ರವೃತ್ತಿ ಪಾಲಕರು ಹಾಗೂ ಶಿಕ್ಷಕರಲ್ಲಿ ಆರಂಭವಾದಾಗಲೇ ಮಕ್ಕಳಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದು ಪಿಡಿಓ ಬಸವರಾಜ ಬಬಲಾದ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್,ಕೆಜಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಸಿರಿ ಸಂಭ್ರಮ-ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಪಾಲಕರು ಮಕ್ಕಳ ಅಭ್ಯಾಸದ ಕಡೆ ಗಮನಿಸಬೇಕು. ಅವರನ್ನು ಧನಾತ್ಮಕವಾಗಿ ಪ್ರೋತ್ಸಾಹಿಸಬೇಕು. ಟಿವಿ ಮತ್ತು ಮೊಬೈಲ್‌ ಗಳಿಂದ ಮಕ್ಕಳನ್ನು ದೂರವಿಟ್ಟು ಪ್ರತಿದಿನ ಶಾಲೆಗೆ ಕಳುಹಿಸಬೇಕು ಎಂದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಮಾನವನ ಸರ್ವಾಂಗೀಣ ಪ್ರಗತಿಗೆ ಶಿಕ್ಷಣ ಮುಖ್ಯ. ಕಠಿಣ ಪರಿಶ್ರಮ, ಪ್ರಾಮಾಣಿಕತೆಯಿಂದ ಮಕ್ಕಳು ಅಭ್ಯಸಿಸಬೇಕು. ನಮ್ಮ ನಾಗರಿಕತೆಯ ಶ್ರೀಮಂತ ಪರಂಪರೆ ಮತ್ತು ಮೌಲ್ಯಗಳನ್ನು ಇಂದಿನ ಪೀಳಿಗೆ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಮುಖ್ಯ ಶಿಕ್ಷಕ ಅನಿಲ ಪತಂಗಿ, ಶಿಕ್ಷಕಿ ಎಸ್ ಡಿ ಬಿರಾದಾರ ವರದಿ ವಾಚಿಸಿದರು.ಪಿಡಿಓ ಬಸವರಾಜ ಬಬಲಾದ, ಯುವ ಮುಖಂಡರಾದ ಪರಶುರಾಮ ಹೊಸಮನಿ, ಸಂತೋಷ ಕೋಟಗೊಂಡ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಶಿಕ್ಷಕ ಎಸ್ ಆರ್ ಚಾಳೇಕರ…

Read More

ಅನಾರೋಗ್ಯದಿಂದ ಅಸ್ವಸ್ಥಗೊಂಡ ಅಪರಿಚಿತ ವಯೋವೃದ್ಧನನ್ನು ಆಸ್ಪತ್ರೆಗೆ ಸಾಗಿಸಿದ ಕರವೇ ಅಧ್ಯಕ್ಷ – ಬಸವರಾಜ ನಂದಿಹಾಳಬಸವನಬಾಗೇವಾಡಿ: ಪಟ್ಟಣದ ಸಮೀಪವಿರುವ ಬಸವನಹಟ್ಟಿ ಕ್ರಾಸಿನ ಬಸ್ತಂಗುದಾಣದಲ್ಲಿ ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಅಸ್ವಸ್ಥಗೊಂಡ ಅಪರಿಚಿತ ವಯೋವೃದ್ಧನನ್ನು ಅಂಬ್ಯುಲೆನ್ಸ್ ಸಿಬ್ಬಂದಿಗಳ ಸಹಾಯದಿಂದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಒರ್ವ ವಯೋವೃದ್ಧನ ಜೀವ ಕಾಪಾಡಿದ ಮಾನವೀಯ ಘಟನೆ ಗುರುವಾರ ಜರುಗಿದೆ.ಕಳೆದ ಮೂರು ದಿನಗಳಿಂದ ಅಪರಿಚಿತ ಸುಮಾರು ೬೨ ವರ್ಷದ ವೃದ್ಧ ಬಸವನಹಟ್ಟಿ ಕ್ರಾಸಿನ ಬಸ್ ತಂಗುದಾಣದಲ್ಲಿದ್ದಾರೆ. ಇದನ್ನು ಗಮನಿಸಿದ ಬಸ್ ತಂಗುದಾಣದ ಹತ್ತಿರ ತೋಟದ ನಿವಾಸಿ ಅಸ್ತಾಪ ಬಾಗವಾನ ಅವರು ಸೇರಿದಂತೆ ಇತರರು ವೃದ್ದನಿಗೆ ಆಹಾರ, ನೀರು, ಜ್ಯೂಸ್ ನೀಡಿದ್ದಾರೆ. ತೀವ್ರ ಅನಾರೋಗ್ಯದಿಂದ ಅಸ್ವಸ್ಥಗೊಂಡ ವೃದ್ಧ ನಿತ್ರಾಣವಾಗಿ ಮಲಗಿಕೊಂಡಿದ್ದಾನೆ. ವಿಪರೀತ ಬಿಸಿಲಿನ ತಾಪವು ವೃದ್ಧನನ್ನು ಹೈರಾಣ ಮಾಡಿದೆ. ಇದನ್ನು ಕಂಡ ಅಸ್ತಾಪ ಬಾಗವಾನ ಅವರು ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಅವರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ.ವಿಷಯ ತಿಳಿದ ತಕ್ಷಣವೇ ಅಶೋಕ…

Read More

ಬಸವನಬಾಗೇವಾಡಿ: ಪ್ರತಿಯೊಬ್ಬರೂ ಒಂದಿಲ್ಲೊಂದು ಸಂದರ್ಭದಲ್ಲಿ ಗ್ರಾಹಕರು ಆಗುತ್ತಾರೆ. ಕೆಲ ಸಂದರ್ಭದಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿರುವದು ಕಂಡುಬರುತ್ತಿದೆ. ಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವ ಜೊತೆಗೆ ಗ್ರಾಹಕರ ಹಕ್ಕುಗಳ ಬಗ್ಗೆ ಅರಿತುಕೊಳ್ಳುವುದು ತುಂಬಾ ಮುಖ್ಯವಾಗಿದೆ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು.ಪಟ್ಟಣದ ಅಸ್ಕಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿಶ್ವಗ್ರಾಹಕರ ಹಕ್ಕುಗಳ ದಿನಾಚರಣೆಯಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಯಾವುದೇ ಒಂದು ವಸ್ತು ಖರೀದಿಸಲು ಹೋದ ಸಂದರ್ಭದಲ್ಲಿ ದಲ್ಲಾಳಿಗಳಿಂದ ಮೋಸ ಹೋಗಬಾರದೆಂದರೆ ನಾವು ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ತಾಲೂಕು ಕಾನೂನು ಸೇವಾ ಸಮಿತಿಯಿಂದ ಮಹಿಳೆಯರು, ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ವಿಕಲಚೇತನರು ಹಾಗೂ ರೂ. ೩ ಲಕ್ಷ ಆದಾಯವಿದ್ದವರು ಉಚಿತ ಕಾನೂನು ಸಲಹೆ ಪಡೆದುಕೊಳ್ಳಬಹುದು. ರಾಷ್ಟ್ರೀಯ ಲೋಕಅದಾಲತನಲ್ಲಿ ಅನೇಕ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಬಗೆಹರಿಸಿಕೊಳ್ಳಬಹುದು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.

Read More

ನಾವದಗಿ ಗ್ರಾಮದಲ್ಲಿ ಮೌನಾನುಷ್ಠಾನ ಮಂಗಲೋತ್ಸವ ಹಾಗೂ ಧರ್ಮಸಭೆ ತಾಳಿಕೋಟಿ: ಮನುಷ್ಯ ಜೀವನದಲ್ಲಿ ಭೋಗಗಳ ದಾಸನಾಗಬಾರದು ಧರ್ಮವಂತನಾಗಿ ದಾನ-ದಾಸೋಹ ದಂಥಹ ಉದಾತ್ತ ಗುಣಗಳನ್ನು ಬೆಳೆಸಿ ಕೊಳ್ಳಬೇಕು. ಸತ್ಕರ್ಮಗಳನ್ನು ಮಾಡುವ ಅವಕಾಶ ಸಿಕ್ಕಾಗ ಅದನ್ನು ಕಳೆದು ಕೊಳ್ಳಬಾರದು ಸತ್ಕರ್ಮಗಳಿಂದಲೇ ಸ್ವರ್ಗ ಪ್ರಾಪ್ತವಾಗುತ್ತದೆ ಎಂದು ರಾಷ್ಟ್ರೀಯ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷರು ಹಾಗೂ ಜ್ಯೋತಿಷ್ಯ ರತ್ನ ಶ್ರೀರಾಮಲಿಂಗಯ್ಯ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ನಾವದಗಿ ಗ್ರಾಮದ ರಾಜಗುರು ಶ್ರೀ ಪರ್ವತೇಶ್ವರ ಸಂಸ್ಥಾನ ಬೃಹನ್ ಮಠದ ಶ್ರೀ ಷ.ಬ್ರ. ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ 11ದಿನಗಳ ಮೌನಾನುಸ್ಟಾನ ಮಂಗಲೋತ್ಸವ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯ ಸಮ್ಮುಖವನ್ನು ವಹಿಸಿ ಅವರು ಆಶೀರ್ವಚನ ನೀಡಿದರು. ಪ್ರಸ್ತಾವಿಕವಾಗಿ ಮಾತನಾಡಿದ ಢವಳಗಿ ಘನಮಟೇಶ್ವರ ಮಠದ ಶ್ರೀಗಳು ಮೌನಾನುಷ್ಠಾನ ಅಂದರೆ ತನ್ನನ್ನು ತಾನು ಶುದ್ಧೀಕರಿಸುವುದು ಆತ್ಮ ಉದ್ಧಾರ ಮಾಡಿಕೊಳ್ಳುವುದು ಎಂದಾಗಿದೆ ಇದೊಂದು ವಿಶಿಷ್ಟ ಸಾಧನೆಯ ಹೆಸರು ಇದರಿಂದ ಗುರು ಆದವರಿಗೆ ವಿಶೇಷ ಸಾಮರ್ಥ್ಯ ಸಿಗುತ್ತದೆ ಇದು ಭಕ್ತರನ್ನು ಸಂಸ್ಕರಿಸಲು ಅತ್ಯಗತ್ಯವಾಗಿದೆ. ಇದನ್ನು ನಿರಂತರವಾಗಿ ಮಾಡಲೇಬೇಕಾಗುತ್ತದೆ. ಗುರು ಪಟ್ಟಾಧಿಕಾರದ…

Read More

B***ಸತ್ಕರ್ಮಗಳಿಂದ ಪುಣ್ಯಪ್ರಾಪ್ತಿ :ರಾಮಲಿಂಗಯ್ಯ ಶ್ರೀ ತಾಳಿಕೋಟಿ: ಮನುಷ್ಯ ಜೀವನದಲ್ಲಿ ಭೋಗಗಳ ದಾಸನಾಗಬಾರದು ಧರ್ಮವಂತನಾಗಿ ದಾನ-ದಾಸೋಹ ದಂಥಹ ಉದಾತ್ತ ಗುಣಗಳನ್ನು ಬೆಳೆಸಿ ಕೊಳ್ಳಬೇಕು. ಸತ್ಕರ್ಮಗಳನ್ನು ಮಾಡುವ ಅವಕಾಶ ಸಿಕ್ಕಾಗ ಅದನ್ನು ಕಳೆದು ಕೊಳ್ಳಬಾರದು ಸತ್ಕರ್ಮಗಳಿಂದಲೇ ಸ್ವರ್ಗ ಪ್ರಾಪ್ತವಾಗುತ್ತದೆ ಎಂದು ರಾಷ್ಟ್ರೀಯ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷರು ಹಾಗೂ ಜ್ಯೋತಿಷ್ಯ ರತ್ನ ಶ್ರೀರಾಮಲಿಂಗಯ್ಯ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ನಾವದಗಿ ಗ್ರಾಮದ ರಾಜಗುರು ಶ್ರೀ ಪರ್ವತೇಶ್ವರ ಸಂಸ್ಥಾನ ಬೃಹನ್ ಮಠದ ಶ್ರೀ ಷ.ಬ್ರ. ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ 11ದಿನಗಳ ಮೌನಾನುಸ್ಟಾನ ಮಂಗಲೋತ್ಸವ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯ ಸಮ್ಮುಖವನ್ನು ವಹಿಸಿ ಅವರು ಆಶೀರ್ವಚನ ನೀಡಿದರು. ಪ್ರಸ್ತಾವಿಕವಾಗಿ ಮಾತನಾಡಿದ ಢವಳಗಿ ಘನಮಟೇಶ್ವರ ಮಠದ ಶ್ರೀಗಳು ಮೌನಾನುಷ್ಠಾನ ಅಂದರೆ ತನ್ನನ್ನು ತಾನು ಶುದ್ಧೀಕರಿಸುವುದು ಆತ್ಮ ಉದ್ಧಾರ ಮಾಡಿಕೊಳ್ಳುವುದು ಎಂದಾಗಿದೆ ಇದೊಂದು ವಿಶಿಷ್ಟ ಸಾಧನೆಯ ಹೆಸರು ಇದರಿಂದ ಗುರು ಆದವರಿಗೆ ವಿಶೇಷ ಸಾಮರ್ಥ್ಯ ಸಿಗುತ್ತದೆ ಇದು ಭಕ್ತರನ್ನು ಸಂಸ್ಕರಿಸಲು ಅತ್ಯಗತ್ಯವಾಗಿದೆ. ಇದನ್ನು ನಿರಂತರವಾಗಿ ಮಾಡಲೇಬೇಕಾಗುತ್ತದೆ. ಗುರು ಪಟ್ಟಾಧಿಕಾರದ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ…

Read More

ತಾಳಿಕೋಟಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಇದರ ವಿಸ್ತರಿಸಿದ ನೂತನ ಕಟ್ಟಡವನ್ನು ದೇವರ ಹಿಪ್ಪರಗಿ ಶಾಸಕರಾಜು ಗೌಡ ಪಾಟೀಲ ಹಾಗೂ ಮುದ್ದೇಬಿಹಾಳ ಶಾಸಕ. ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ. ಎಸ್. ನಾಡಗೌಡ (ಅಪ್ಪಾಜಿ) ಅವರು ಉದ್ಘಾಟಿಸಿದರು.ಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಮೊದಲು 30 ಹಾಸಿಗೆಗಳ ಸೌಲಭ್ಯವಿದ್ದು ಹೆಚ್ಚುತ್ತಿರುವ ಒಳ ರೋಗಿಗಳ ಸಂಖ್ಯೆಯಿಂದಾಗಿ ತೊಂದರೆಯಾಗುತ್ತಿತ್ತು ಇದನ್ನು ತಪ್ಪಿಸಲು ಸುಮಾರು ರೂ. 1.61 ಕೋಟಿ ವೆಚ್ಚದಲ್ಲಿ ವಿಸ್ತರಿಸಿದ 10 ಹಾಸಿಗೆಗಳ ನೂತನ ಕಟ್ಟಡವನ್ನು ನಿರ್ಮಾಣವಾಡಲಾಗಿತ್ತು. ಇದನ್ನು ಉಭಯ ಶಾಸಕರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಈ ನೂತನ ಕಟ್ಟಡದಲ್ಲಿ ಹೆರಿಗೆ ವಿಭಾಗವನ್ನು ಮಾತ್ರನಡೆಸಲಾಗುವುದು ಎಂದು ಆರೋಗ್ಯ ಆಡಳಿತಾಧಿಕಾರಿ ಶ್ರೀಶೈಲ ಹುಕ್ಕೇರಿ ತಿಳಿಸಿದರು.ಉದ್ಘಾಟನಾ ಸಮಾರಂಭದಲ್ಲಿ ತಾಲೂಕಾ ಆರೊಗ್ಯಾಧಿಕಾರಿ ಸತೀಶ ತಿವಾರಿ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಕೆ. ಚೋರಗಸ್ತಿ. ಜಿಲ್ಲಾ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ್ ನಾವದಗಿ. ಮಡು ಸೌಕಾರ ಬಿರಾದಾರ. ಪ್ರಭುಗೌಡ ಮದರಕಲ್ಲ. ಸುರೇಶಧಣಿ ನಾಡಗೌಡ. ಶರಣುಧಣಿ ದೇಶಮುಖ. ಕಾಸೀಮಪಟೇಲ ಮೂಕಿಹಾಳ.…

Read More

ವಿಜಯಪುರ: ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಕಾರ್ಯಕಾರಿ ಸಭೆಯಲ್ಲಿ ೧೯ ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ ವ್ಹಿ ಡಿ ಐಹೊಳ್ಳಿ ಹಿರಿಯ ಸಾಹಿತಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅವರು ಮಾತನಾಡಿ, ಜಿಲ್ಲೆಯ ಹಿರಿಯ ಸಾಹಿತಿಗಳ ಆಯ್ಕೆ ಮುಕ್ತವಾಗಿ ಚರ್ಚಿಸಿ ಆಯ್ಕೆ ಮಾಡಿ ಎಂದು ಸಭೆಗೆ ವಿನಂತಿಸಿದರು.ಸಭೆಯ ಅಧ್ಯಕ್ಷ ಸ್ಥಾನ ಕಸಾಪ ಗೌರವಾಧ್ಯಕ್ಷ ಭಾರತಿ ಪಾಟೀಲ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಕಸಾಪ ಕಾರ್ಯಕಾರಿ ಸದಸ್ಯರುಗಳು ಮತ್ತು ಎಲ್ಲ ತಾಲ್ಲೂಕಿನ ಅಧ್ಯಕ್ಷರು ಹಾಗೂ ಸದಸ್ಯರುಗಳು ಮುಕ್ತ ಚರ್ಚಿಸಿ ಹಿರಿಯ ಸಾಹಿತಿಗಳು ಆದ ನಿವೃತ್ತ ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ವ್ಹಿ ಡಿ ಐಹೊಳ್ಳಿ ಅವರನ್ನು ಅಂತಿಮಗೊಳಿಸಿದರು. ಇದಕ್ಕೆ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.ಸಭೆಯಲ್ಲಿ ಗೌರವ ಕೋಶಾಧ್ಯಕ್ಷ ಡಾ ಸಂಗಮೇಶ ಮೇತ್ರಿ, ಗೌರವ ಕಾರ್ಯದರ್ಶಿ ಸುಭಾಸಚಂದ್ರ ಕನ್ನೂರ, ಡಾ ಮಾಧವ…

Read More

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರಿನ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಇವರ ಸಹಯೋಗದಲ್ಲಿ ‘ರಾಜಮಾತಾ ಜೀಜಾವುಮಾಸಾಹೇಬ್ ಅವರ ಜೀವನ ಮತ್ತು ಆದರ್ಶಗಳು’ ಎಂಬ ವಿಷಯದ ಕುರಿತು ಇದೇ ದಿ.೧೫ ರಂದು ಬೆಳಗ್ಗೆ ೧೧:೦೦ ಗಂಟೆಗೆ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ ಪಾಗೋಜಿ ಭಾಗವಹಿಸಲಿದ್ದಾರೆ. ವಿಶೇಷ ಆಮಂತ್ರಿತರಾಗಿ ನಗರದ ಹಿರಿಯ ನ್ಯಾಯವಾದಿ ತುಳಸಿರಾಮ ಸೂರ್ಯವಂಶಿ, ಉದ್ಯಮಿ ವಿಜಯಕುಮಾರ ಚವ್ಹಾಣ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ಬಿ.ಶೇವಳಕರ ಹಾಗೂ ಮಹಾನಗರ ಪಾಲಿಕೆ ಸದಸ್ಯ ರಾಹುಲ ಜಾಧವ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ವಹಿಸಲಿದ್ದಾರೆ.ತಾಂತ್ರಿಕ ಗೋಷ್ಠಿಗಳು:ಮೊದಲನೆಯ ತಾಂತ್ರಿಕ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ…

Read More

ವಿಜಯಪುರ: ಕೋವಿಡ್ -೧೯ ಅವಧಿಯಲ್ಲಿ ಸ್ಥಗಿತವಾಗಿದ್ದ ಇಬ್ರಾಹಿಂಪುರ ರೈಲು ನಿಲ್ದಾಣದ ರಿಜರ್ವಶನ್ ಕೌಂಟರ್ ನ್ನು ಪುನಃ ಪ್ರಾರಂಭಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹುಬ್ಬಳ್ಳಿ ಯ ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರ್ಗೆ ಪತ್ರವನ್ನು ಬರೆದಿದ್ದಾರೆ.

Read More