Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪಿಕೆಪಿಎಸ್ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಆಗ್ರಹ ಬಸವನಬಾಗೇವಾಡಿ: ನಿತ್ಯ ಜೀವನದಲ್ಲಿ ಉಪಯೋಗಿಸುವ ವಸ್ತುಗಳಿಗೆ ಸ್ಥಿರಬೆಲೆ ಇದೆ. ಅದೇ ರೈತರು ಬೆಳೆದ ಬೆಳೆಗೆ ಸ್ಥಿರವಾದ ಬೆಲೆ ಇರದೇ ಇರುವುದು ನೋವಿನ ಸಂಗತಿ. ಇದರಿಂದಾಗಿ ರೈತರು ಸಂಕಷ್ಟ, ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ರೈತರ ಬೆಳೆಗಳಿಗೆ ಯೋಗ್ಯ ಬೆಲೆ ಸಿಗುವಂತಾಗಬೇಕೆಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಹಳೆ ಸಂತೆಕಟ್ಟೆ ಆವರಣದಲ್ಲಿ ಸ್ಥಳೀಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಪಿಕೆಪಿಎಸ್ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ಉದ್ಘಾಟನೆಯಂಗವಾಗಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೆಣಸಿಕಾಯಿ ದರ ಕುಸಿತದ ಪರಿಣಾಮವಾಗಿ ಬ್ಯಾಡಗಿಯಲ್ಲಿ ರೈತರು ಎಪಿಎಂಸಿಗೆ ಬೆಂಕಿಹಚ್ಚಿದರು. ದರ ಕುಸಿತ ರೈತರಿಗೆ ನೋವು ಆಗುವುದು ಸಹಜ. ಈರುಳ್ಳಿ ಬೆಲೆ ಉತ್ತಮವಾಗಿ ಇರುವಾಗ ಕೇಂದ್ರ ಸರ್ಕಾರ ೫ ಲಕ್ಷ ಟನ್ ಈರುಳ್ಳಿಯನ್ನು ಬೇರೆ ದೇಶದಿಂದ…
ದೇವರಹಿಪ್ಪರಗಿ: ವಾರ್ಡಿನ ಜನತೆಯ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಬೊರೆವೆಲ್ ಕೊರೆಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ರಮೇಶ ಮಸಬಿನಾಳ ಹೇಳಿದರು.ಪಟ್ಟಣದ ಹೊಸನಗರದಲ್ಲಿನ ೧೩ನೇ ವಾರ್ಡಿನಲ್ಲಿ ೨೦೨೩-೨೪ನೇ ಸಾಲಿನ ೧೫ನೇ ಹಣಕಾಸು ಅಡಿಯಲ್ಲಿ ಗುರುವಾರ ಬೊರೆವೆಲ್ ಕೊರೆಯುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.ವಾರ್ಡಿನಲ್ಲಿ ಒಟ್ಟು ೩ ಬೊರೆವೆಲ್ ಕೊರೆಸಲಾಗಿದೆ. ಇವುಗಳಲ್ಲಿ ೨ ರಲ್ಲಿ ನೀರು ದೊರೆತಿದೆ. ಇನ್ನೂ ವಾರ್ಡಿನಲ್ಲಿ ಕಳೆದ ೨ ವರ್ಷಗಳಲ್ಲಿ ೭ ಸಿ.ಸಿ ರಸ್ತೆಗಳು, ಚರಂಡಿ ನಿರ್ಮಾಣ ಹಾಗೂ ಹಲವು ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ವಾರ್ಡಿನಲ್ಲಿ ಮನೆಗಳಿಗೆ ನಳಗಳ ಸಂಪರ್ಕ ನೀಡಲಾಗುತ್ತಿದೆ. ಆದರೆ ಮಹಿಳೆಯರು ಶೌಚಾಲಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಮುಖ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಅವರು ನಿರ್ಲಕ್ಷö್ಯ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಶೌಚಾಲಯ ಕುರಿತು ಕ್ರಮ ಕೈಗೊಳ್ಳದೇ ಹೋದರೆ ಸ್ವತಃ ನಾನೇ ಪಟ್ಟಣ ಪಂಚಾಯಿತಿ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತೇನೆ ಎಂದು ಮಾಹಿತಿ ನೀಡಿದರು.ಈರಣ್ಣ ಒಂಟೆತ್ತಿನ, ಸದಯ್ಯ ಇಂಡಿ, ಸಲಬಯ್ಯ ಸದಯ್ಯನಮಠ, ಸುರೇಶ ಒಂಟೆತ್ತಿನ, ಮುತ್ತು…
ಮುಳಸಾವಳಗಿಯಲ್ಲಿ ಸಿದ್ದೇಶ್ವರ ಶ್ರೀಗಳ ಗುರುನಮನ | ಆಧ್ಯಾತ್ಮಿಕ ಪ್ರವಚನ ದೇವರಹಿಪ್ಪರಗಿ: ನಾವು ಮಾಡುವ ಯೋಗ್ಯ ಕೆಲಸವನ್ನು ಶ್ರದ್ದೆ, ನಿಷ್ಠೆ, ಹಾಗೂ ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ಬಾಲಗಾಂವ ಆಶ್ರಮದ ಅಮೃತಾನಂದಶ್ರೀ ಹೇಳಿದರು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಗುರುವಾರ ಸಿದ್ದೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮದ ಅಂಗವಾಗಿ ಜರುಗುತ್ತಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಪಾಲ್ಗೊಂಡು ಮಾತನಾಡಿದರು.ಕಾಯಕವೇ ಕೈಲಾಸ ಎಂದರು ಬಸವೇಶ್ವರರು, ಅದರಂತೆ ನಡೆದರು ನಮ್ಮ ನಡೆದಾಡುವ ದೈವ ಸಿದ್ದೇಶ್ವರರು. ಕಾಯಕದಲ್ಲಿ ಚಿತ್ತಶುದ್ದ ಮನಸ್ಸಿನಿಂದ ಪರಮಾತ್ಮನನ್ನು ಕಾಣಬೇಕು. ಆತನ ಕೃಪಾರ್ಶೀವಾದಕ್ಕೆ ಪಾತ್ರರಾಗಬೇಕು.ಹಿಪ್ಪರಗಿಯ ಮಡಿವಾಳ ಮಾಚಿದೇವರು, ಶಿವಣಗಿಯ ನೂಲಿಯ ಚಂದಯ್ಯನವರ ಕಾಯಕ ನಿಷ್ಠೆಯನ್ನು ನಾವೆಲ್ಲರೂ ಅರಿತು, ನಮ್ಮ ಬದುಕಿನುದ್ದಕ್ಕೂ ಅಳವಡಿಸಿಕೊಂಡು ಕಾಯಕ ಜೀವಿಗಳಾಗಬೇಕಾಗಿದೆ. ಪ್ರಮುಖವಾಗಿ ಬದುಕಿನಲ್ಲಿ ಕೆಟ್ಟದ್ದನ್ನು ತಲೆಗೆ ಹಾಕಿಕೊಳ್ಳದೇ, ಕೆಟ್ಟದ್ದಕ್ಕೆ ನೀರು, ಗೊಬ್ಬರ ಹಾಕದೇ, ಕೆಟ್ಟದ್ದನ್ನು ಬಿಟ್ಟಾಕಿ ಸತ್ಕಾರ್ಯದಲ್ಲಿ ನಾವೆಲ್ಲರೂ ಪಾಲ್ಗೊಳ್ಳಬೇಕಾಗಿದೆ ಎಂದರು.ಪ್ರತಿನಿತ್ಯ ಬೆಳಿಗ್ಗೆ ೬ ಗಂಟೆಯಿಂದ ೭ ಗಂಟೆಯವರೆಗೆ ಜರುಗುವ ಸತ್ಸಂಗ ಪ್ರವಚನ ಕಾರ್ಯಕ್ರಮದ ನಂತರ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.ಕಾರ್ಯಕ್ರಮದಲ್ಲಿ ಬಸವಾನಂದಶ್ರೀಗಳು, ದಯಾನಂದ ಸ್ವಾಮೀಜಿ, ನಿಂಗರಾಯ ಮಹಾರಾಜ, ಬಸವರಾಜಶ್ರೀ,…
ಚುನಾವಣಾ ಪ್ರಚಾರಕ್ಕಾಗಿ ವಿಕಸಿತ ಭಾರತ ಎಲ್.ಇ.ಡಿ ವಾಹನಗಳಿಗೆ ಶಾಸಕ ಟೆಂಗಿನಕಾಯಿ ಚಾಲನೆ ವಿಜಯಪುರ: ಸಾಮಾನ್ಯ ಕಾರ್ಯಕರ್ತನಿಗೂ ಪಕ್ಷ ಟಿಕೆಟ್ ಕೊಟ್ಟಾಗ ಎಲ್ಲಾ ಕಾರ್ಯಕರ್ತರು ಗೆಲ್ಲಿಸಲು ಬೆನ್ನಿಗೆ ನಿಲ್ಲುತ್ತಾರೆ ಎನ್ನುವದಕ್ಕೆ ನಾನೇ ಸಾಕ್ಷಿ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಲೋಕಸಭಾ ಚುನಾವಣಾ ನಿಮಿತ್ಯ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಸಂಜೆ ಜರುಗಿದ ಚುನಾವಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಬೆಳಗಾವಿ, ರಾಯಚೂರು, ಬಳ್ಳಾರಿ, ಧಾರವಾಡ ಸೇರಿದಂತೆ ಬೇರೆ ವಿಭಾಗಗಳಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಮಾಡಿದಾಗಲೂ ವಿಜಯಪುರ ಜಿಲ್ಲೆಯ ಕಾರ್ಯಕರ್ತರು ಅತ್ಯಂತ ಪ್ರೀತಿ ವಿಶ್ವಾಸ ತೋರಿಸಿದ್ದಾರೆಂದು ತಿಳಿಸಿದರು.ಚುನಾವಣೆ ಎದುರಿಸುವಾಗ ಅನೇಕ ಸುಲಭ ಹಾಗೂ ಕಠಿಣ ಕೆಲಸಗಳು ವಿಜಯಪುರ ಜಿಲ್ಲೆಯಿಂದಲೂ ಬಂದಿದ್ದವು. ಅದೆಲ್ಲವನ್ನು ಕಾರ್ಯಗತ ಮಾಡಿಕೊಂಡು ಹುಬ್ಬಳ್ಳಿ-ಧಾರವಾಡದಲ್ಲಿ ನನ್ನಂತ ಸಾಮಾನ್ಯ ಕಾರ್ಯಕರ್ತನಿಗೂ ಟಿಕೆಟ್ ಕೊಡುತ್ತಾರೆಂಬುದು ಯಕ್ಷಪ್ರಶ್ನೆಯಾಗಿತ್ತು. ಆದರೆ ಪಕ್ಷ ಕಠಿಣ ನಿರ್ಧಾರವನ್ನು ತೆಗೆದುಕೊಂಡು ಅತ್ಯಂತ ತುರುಸಿನ ಚುನಾವಣೆಯಾಗಿತ್ತು. ಅಂತಹ ಸಂದರ್ಭದಲ್ಲಿ ಇಬ್ಬರು ಮೂವರನ್ನು ಹೊರತುಪಡಿಸಿದರೆ ಬೇರೆ ಕಾರ್ಯಕರ್ತರು…
ಮುದ್ದೇಬಿಹಾಳ: ಬೇಸಿಗೆ ಕಾಲ ಪ್ರಾರಂಭವಾಗಿರುವದರಿಂದ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ತಕ್ಷಣ ಸ್ಪಂದನೆಗಾಗಿ ತಾಲೂಕು ಪಂಚಾಯತ ಕಾರ್ಯಾಲಯದ ವತಿಯಿಂದ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆ – ೦೮೩೫೬೨೦೦೬೦೬
ವಿಜಯಪುರ: ಹಣವಂತರಿಗಿಂತ ಸಮಾಜಸೇವೆ ಮಾಡುವ ಗುಣವಂತರನ್ನು ಸಮಾಜ ಸ್ಮರಿಸುತ್ತದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಹೇಳಿದ್ದಾರೆ.ಗುರುವಾರ ನಗರದ ಪರಮಹಂಸರ ಆಶ್ರಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದಿಂದ ಆಯೋಜಿಸಲಾಗಿದ್ದ ಸಿಟಿಸಿ ಮತ್ತು ಎನ್.ಎಸ್.ಎಸ್. ಶಿಬಿರ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಪ್ರಕಟಿಸಿರುವ ಡಾ. ಹಳಕಟ್ಟಿಯವರ ನೈಜ ಭಾಷಣದ ಎಂಟನೇ ಸಂಪುಟದ ಭಾಷಣವನ್ನು ಎಲ್ಲಾ ಪ್ರಶಿಕ್ಷಣಾರ್ಥಿಗಳು ಓದಬೇಕು. ವಿದ್ಯಾರ್ಥಿಗಳು ಯಾವಾಗಲೂ ಪುಸ್ತಕ ಪ್ರೇಮಿಯಾಗಬೇಕು. ಇದರಿಂದ ಹೆಚ್ಚಿನ ಜ್ಞಾನ ದೊರೆಯುತ್ತದೆ. ಯಾರೂ ದುಶ್ಚಟಗಳಿಗೆ ದಾಸರಾಗಬಾರದು. ಸಮಾಜದಲ್ಲಿರುವ ಅನಿಷ್ಠ ಪದ್ದತಿಗಳ ನಿರ್ಮೂಲನೆಗಾಗಿ ಶ್ರಮಿಸಬೇಕು ಎಂದು ಹೇಳಿದರು.ರಾಷ್ಟ್ರೀಯ ಯುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮತ್ತು ಎನ್.ಎಸ್.ಎಸ್. ರಾಜ್ಯ ಸಲಹಾ ಸಮಿತಿ ಸದಸ್ಯರ ಡಾ. ಜಾವೀದ ಜಮಾದಾರ ಮಾತನಾಡಿ, ಯುವ ಜನಾಂಗ ಆಸೆ, ಆಮಿಷಗಳಿಗೆ ಬಲಿಯಾಗಬಾರದು. ಆಧುನಿಕ ಜೀವನ ಶೈಲಿಗೆ ಮಾರುಹೋಗದೆ…
ಆಲಮಟ್ಟಿಯ ಚಂದ್ರಗಿರಿ ಜಾತ್ರಾ ಮಹೋತ್ಸವಕ್ಕೆ ಚಾಲನೆ | ಭಕ್ತರ ಭಕ್ತಿಭಾವದ ಪರಾಕಾಷ್ಠೆ – ಸಂಪದಾ ಹಿರೇಮಠಆಲಮಟ್ಟಿ: ಬೇಸಿಗೆಯ ಬಿರುಬಿಸಿಲು ಝಳ ಪ್ರಖರವಾಗುತ್ತಿದೆ. ಇತ್ತ ಕೃಷ್ಣಾನದಿಯ ಅಂಗಳು ಜೀವಜಲದಿಂದ ಸೊರಗುತ್ತಿದೆ. ಆದರೆ ಗುರುವಾರ ಕೃಷ್ಣೆಯ ದಡದಲ್ಲಿ ಜಲೋದ್ಬವದ ಬದಲು ಜನೋದ್ಬವದ ಜಯ ಉದ್ಘೋಷ್ ಹರಿದು ಬಂದಿದ್ದು ಕಂಡು ಬಂತು.ಈ ವೇಳೆ ಕೃಷ್ಣೆಯ ಜಲಧಿಯಲ್ಲಿ ಪವನಗೊಂಡ ಜನತೆಯ ಭಕ್ತಿಭಾವದ ಪರಾಕಾಷ್ಠೆ ತರ್ಪಣ ಅವಣೀಯವಾಗಿತ್ತು.ಎಲ್ಲೆಲ್ಲೂ ಭಕ್ತ ಮೊಗಗಳ ಕಲರವದ ಕಂಪು ನಿನಾದ ಮೊಳಗಿತ್ತು !!!ಆಹಾ ! ಎತ್ತ ನೋಡಿದರು ಜನರೋ ಜನ. ಭಕ್ತಿರಸದ ಲೀಲೆಯಲ್ಲಿ ತನ್ಮಯ. ಆ ಜಾಗೃತ ದೇವಿಯ ಗುಂಗು ಪ್ರತಿಯೊಬ್ಬರ ಮನಭಾವದಲ್ಲಿ ನೆಲೆನಿಂತ ಪರಿಣಾಮ ಆರಾಧನಾ ಮಹೋತ್ಸವಕ್ಕೆ ನವಮೆರಗು ಬಂದಿತ್ತು. ಜಾತ್ರಾ ಉತ್ಸವದಲ್ಲಿ ಹರುಷದಿಂದ ಮಿಂದೆದ್ದ ಅಸಂಖ್ಯಾತ ಭಕ್ತ ಸಾಗರ ಧಾಮಿ೯ಕ ಭಕ್ತಿಲೋಕದಲ್ಲಿ ತೇಲಿದರು…!ಇಂಥದೊಂದು ದೃಶ್ಯ ವೈಭವಕ್ಕೆ ಗುರುವಾರ ಇಲ್ಲಿನ ಚಂದ್ರಗಿರಿಯ ಚಂದ್ರಮ್ಮಾ ದೇವಸ್ಥಾನದ ಅಂಗಳ ಸಾಕ್ಷಿಯಾಗಿತ್ತು !ಅಪಾರ ಭಕ್ತ ಸಮೂಹವನ್ನು ಹೊಂದಿರುವ ಇಲ್ವಿನ ಚಂದ್ರಗಿರಿ ಚಂದ್ರಮ್ಮಾ ದೇವಿಯ ಜಾತ್ರಾ ಉತ್ಸವ ಇದೇ…
ತಾಲ್ಲೂಕು ಮಟ್ಟದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೌನ್ ಬನೇಗಾ ವಿದ್ಯಾಧಿಪತಿ ಕಾರ್ಯಕ್ರಮ ಉದ್ಘಾಟನೆ ಇಂಡಿ: ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಒಳ್ಳೆಯ ಶಿಕ್ಷಣ ಪಡೆದುಕೊಳ್ಳಿ, ಪ್ರಪಂಚದ ಜೊತೆಗೆ ಸ್ಪರ್ಧೆಯಿದೆ. ಆದರೆ ಇದರ ಜೊತೆಗೆ ಸಂಸ್ಕಾರವಂತರಾಗಿ ನಿಮ್ಮ ಪಾಲಕರಿಗೆ ಗೌರವಿಸಿ, ಆಗ ಮಾತ್ರ ನಿಮ್ಮ ಜೀವನ ಪಾವನವಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಅವರು ಬುಧವಾರ ಇಂಡಿ ಪಟ್ಟಣದ ಗುರುಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ ಮತ್ತು ಶಿಕ್ಷಕರ ಸಂಘಟನೆಗಳ ಸಹ ಯೋಗದಲ್ಲಿ ತಾಲ್ಲೂಕು ಮಟ್ಟದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೌನ್ ಬನೇಗಾ ವಿದ್ಯಾಧಿಪತಿ ಕಾರ್ಯಕ್ರಮವನ್ನು ಪ್ರಶ್ನೆಗೆ ಉತ್ತರ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನ ಅಗತ್ಯವಾಗಿದೆ. ಮೊದಲು ಪಾಟೀಲ ಪುಟ್ಟಪ್ಪನವರು ಹೊರತರುತ್ತಿರುವ “ಪ್ರಪಂಚ”ಎನ್ನುವ ಪುಟ್ಟ ವಾರ ಪತ್ರಿಕೆ ಎಲ್ಲರಿಗೂ ಪ್ರಪಂಚದ ಜ್ಞಾನ ನೀಡುತ್ತಿತ್ತು ಎಂದು ಪಾಟೀಲ ಪುಟ್ಟಪ್ಪನವರನ್ನು ನೆನಪಿಸಿಕೊಂಡರು.ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ.ಆಲಗೂರ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಹೊಸ ಪ್ರಯೋಗವನ್ನು ಮಾಡಿ ಸಾಮಾನ್ಯ ಜ್ಞಾನ…
ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃಧಿ ನಿಗಮ, ಬೆಂಗಳೂರು ರವರು ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರಧಾನ ಮಂತ್ರಿ ಆವಾಸ ವಿಶೇಷ ಯೋಜನೆಯಡಿ ೫೦ ಮನೆಗಳ ಗುರಿ ನಿಗದಿಪಡಿಸಿರುತ್ತಾರೆ. ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಬಡತನ ರೇಖೆಗಿಂತ ಕೆಳಗಿರುವ ನಿರ್ಗತಿಕ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್. ೮ ಕೊನೆಯ ದಿನವಾಗಿದೆ.ಸ್ವವಿವರದ ಅರ್ಜಿ, ಜಿಲ್ಲಾಧಿಕಾರಿಗಳಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತ ಗುರುತಿನ ಚೀಟಿ, ಪಡಿತರ ಚೀಟಿ (ಬಿ.ಪಿ.ಎಲ್), ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ ಪಾಸ್ ಬುಕ್ ನೊಂದಿಗೆ ಕಚೇರಿಯ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(ದೂರವಾಣಿ ಸಂಖ್ಯೆ:೦೮೩೫೨೨೯೫೩೫೩) ಇವರನ್ನು ಸಂಪರ್ಕಿಸಬಹುದು ಎಂದು ವಿಜಯಪುರ ಮಹಿಳಾ…
ವಿಜಯಪುರ: ನಗರದ ಇಂಡಿ ರಸ್ತೆಯಲ್ಲಿರುವ ಬಿ ಎ ಬಿಜ್ಜರಗಿ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ದಿನಾಂಕ ೧೮ ರಂದು ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಶಿಶಿಕ್ಷು ಮೇಳವನ್ನು ಆಯೋಜಿಸಲಾಗಿದೆ.ಐ.ಟಿ.ಐ ಪಾಸಾದ ಅಭ್ಯರ್ಥಿಗಳು Google link www.apprenticeshipindia.gov.in/establishment-registration ನೋಂದಾಯಿಸಿಕೊಂಡು ಬಾಗವಹಿಸಬಹುದಾಗಿದೆ. ಹಾಗೆಯೇ ಉದ್ದಿಮೆದಾರರು ಉoogಟe Google link www.apprenticeshipindia.gov.in/establishment-registrationನಲ್ಲಿ ನೋಂದಾಯಿಸಿಕೊಂಡು ಈ ಮೇಳದ ಪ್ರಯೋಜನೆ ಪಡೆದುಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೯೮೮೬೪೩೭೫೧೭, ೯೮೮೦೧೨೧೩೯೩ ಅಥವಾ ಹತ್ತಿರದ ಯಾವುದೇ ಸರ್ಕಾರಿ/ಅನಿದಾನಿತ/ಖಾಸಗಿ ಐ.ಟಿ.ಐ ಗಳನ್ನು ಸಂಪರ್ಕಿಸಬಹುದಾಗಿದೆ. ಆಸಕ್ತಿ ಅಭ್ಯರ್ಥಿಗಳು ನಾಲ್ಕು ಪ್ರತಿ ಸ್ವವಿವರದ ಮಾಹಿತಿಯೊಂದಿಗೆ ಶೈಕ್ಷಣಿಕೆ ದಾಖಲೆಗಳು ಮತ್ತು ಭಾವಚಿತ್ರದೊಂದಿಗೆ ಸದರಿ ಮೇಳಕ್ಕೆ ಹಾಜರಾಗಿ ಸದುಪಯೋಗ ಪಡೆದುಕೊಳ್ಳಬೇಕೆಂದು ದೇವರಹಿಪ್ಪರಗಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
