Author: editor.udayarashmi@gmail.com

ಸಿದ್ದಲಿಂಗ ಫೈನ್ ಆರ್ಟ್ ಸೊಸೈಟಿಯಿಂದ ಚಿತ್ರಕಲಾ ಪ್ರದರ್ಶನ ಮತ್ತು ಕಲಾ ಪ್ರಾತ್ಯಕ್ಷತೆ ವಿಜಯಪುರ. ನಾಡಿನ ಹಿರಿಯ ಚಿತ್ರಕಲಾವಿದರಾದ ದಿವಂಗತ ಸಿ.ಬಿ.ಕಾಚಾಪುರ ಅವರ ಪುಣ್ಯ ಸ್ಮರಣೆ ಪ್ರಯುಕ್ತ ನಗರದ ಸಿದ್ದಲಿಂಗ ಫೈನ್ ಆರ್ಟ್ ಸೊಸೈಟಿಯು ಏರ್ಪಡಿಸಿದ್ದ ಜಲವರ್ಣದ ಕಲಾಕೃತಿಗಳ ಚಿತ್ರಕಲಾ ಪ್ರದರ್ಶನ ಮತ್ತು ಕಲಾ ಪ್ರಾತ್ಯಕ್ಷತೆಯನ್ನು ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ್ ಮಗಿಮಠ ಬುಧವಾರ ಸಂಜೆ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು, ಕಾಚಾಪುರ ಸರ್ ಅವರ ಜೀವನ ಆದರ್ಶಮಯವಾದ ಕಲಾ ಬದುಕು. ಶ್ರೇಷ್ಠ ಸಂಘಟಕರಾಗಿ ಕಲಾ ಕ್ಷೇತ್ರದ ಬೆಳವಣಿಗೆಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ಧೀಮಂತ ಕಲಾ ಸಾಧಕರು. ವಿಜಯಪುರದಲ್ಲಿ ಕಲೆ ಮತ್ತು ಸಾಂಸ್ಕೃತಿಕವಾಗಿ ಇಡಿ ರಾಜ್ಯದಲ್ಲಿ ವಿಜಯಪುರದ ಗಮನ ಸೆಳೆಯುವ ರೀತಿಯಲ್ಲಿ ಅವರು ಮಾಡಿದ ಕೆಲಸ ಇವತ್ತಿಗೂ ಜೀವಂತವಾಗಿದೆ. ಕಲಾ ಶಾಲೆಯ ಮುಖಾಂತರ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕಲಾವಿದರಿಗೆ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕಲಾ ಕೆಲಸ ಈ ಗ್ಯಾಲರಿಯಲ್ಲಿ ನಡೆಯಲಿ, ಮಹಾನಗರ ಪಾಲಿಕೆಯಿಂದ ಮೂಲ…

Read More

ವಿಜಯಪುರ: ನಾಗಠಾಣ ಮತಕ್ಷೇತ್ರದ ನಾಗಠಾಣ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ಇವರು ತಮ್ಮ ಬೆಂಬಲಿಗರೊಂದಿಗೆ ಕುಮಟಗಿ ಎಲ್.ಟಿ., ಆಹೇರಿ, ಮದಬಾವಿ, ಹಡಗಲಿ ಹಾಗೂ ಹಿಂದಿನ ಕಾಂಗ್ರೆಸ್ ಪಕ್ಷದ ಸದಸ್ಯರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಜಯಪುರ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಪ್ರೊ.ರಾಜು ಆಲಗೂರ ರವರು ಮಾತನಾಡಿ, ನಾಗಠಾಣ ಬ್ಲಾಕ್ ಮಾಜಿ ಅಧ್ಯಕ್ಷರಾದ ದೇಸು ಗೇಮು ಚವ್ಹಾಣ ಇವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಗೊಂಡಿರುವುದು ನಾಗಠಾಣ ಮತ್ತು ವಿಜಯಪುರ ಲೋಕಸಭಾ ಮತಕ್ಷೇತ್ರದಲ್ಲಿಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.ದೇಸು ಗೇಮು ಚವ್ಹಾಣ ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಹಾಗೂ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿ ಗ್ರಾ.ಪಂ. ಸದಸ್ಯರಾದ ರಾಚು ಚವ್ಹಾಣ, ಅಪ್ಪು ಹೀರು ಪವಾರ, ದುಂಡು ದೇನು ಜಾಧವ, ಭಾವಸಿಂಗ ಜಾಧವ, ಸಂತೋಷ ಜಾಧವ, ರಾಜು ಜಾಧವ, ಧೋಂಡು ದೇನು ಜಾಧವ, ಸುರೇಶ ಡಿ. ಚವ್ಹಾಣ, ಸೇವು ತುಳಜು…

Read More

ಗದಗ: ಕಲಾವಿದರ ಮತ್ತು ಕಲಾಪೋಷಕರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್ ಹಮ್ಮಿಕೊಂಡಿರುವ ಕಲಾ ವಿಕಾಸ ಉತ್ಸವ-೨೦೨೪ ಸಮಾರಂಭದಲ್ಲಿ ನೀಡುತ್ತಾ ಬಂದಿರುವ ೨೪ನೇ ವರ್ಷದ ಪ್ರಶಸ್ತಿ, ಕಲಾ ವಿಕಾಸ ಪುರಸ್ಕಾರ ಪ್ರಶಸ್ತಿಗೆ ಶಾಸ್ತ್ರೀಯ ಸಂಗೀತ (ಗಾಯನ ವಾದನ, ಸುಗಮ ಸಂಗೀತ, ತತ್ವಪದ, ವಚನ ಗಾಯನ, ಜಾನಪದ ಸಂಗೀತ) ಕ್ಷೇತ್ರದಲ್ಲಿ ಮತ್ತು ಶಾಸ್ತ್ರೀಯ ನೃತ್ಯ (ಭರತನಾಟ್ಯ, ಕಥಕ್, ಕುಚುಪುಡಿ, ಮೊದಲಾದ ನೃತ್ಯ) ಪ್ರಕಾರದಲ್ಲಿ ಸಾಧನೆಗೈದ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ.ಈ ಪ್ರಶಸ್ತಿಯು ಗೌರವಧನ, ಪ್ರಶಸ್ತಿ ಫಲಕ, ನೆನಪಿನ ಕಾಣಿಕೆ, ಶಾಲು ಸತ್ಕಾರವನ್ನು ಒಳಗೊಂಡಿರುತ್ತದೆ. ಆಸಕ್ತ ಕಲಾವಿದರು ತಮ್ಮ ಸಂಪೂರ್ಣ ವಿವರ ಮತ್ತು ಕಲಾ ಪ್ರದರ್ಶನದ ವಿಡಿಯೋ ತುಣುಕುಗಳೊಂದಿಗೆ ಈ ವಾಟ್ಸಪ್ ೯೮೮೬೭೧೭೭೩೨ ನಂಬರಿಗೆ ಅಥವಾ kvpgadag@gmail.com ಈ ಇಮೇಲ್ ಗೆ ಕಳಿಸಿಕೊಡಬಹುದಾಗಿದೆ.ಪುರಸ್ಕಾರಕ್ಕೆ ಆಯ್ಕೆಯಾದ ಕಲಾವಿದರು ತಮ್ಮ ಕಲಾ ಪ್ರದರ್ಶನ ನಡೆಸಿಕೊಡುವುದು ಕಡ್ಡಾಯವಾಗಿರುತ್ತದೆ. ಎಂದು ಕಲಾವಿಕಾಸ ಪರಿಷತ್ ಅಧ್ಯಕ್ಷ ಸಿ. ಕೆ. ಹೆಚ್. ಶಾಸ್ತ್ರಿ (ಕಡಣಿ) ಇವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

Read More

ವಿಜಯಪುರ ವಕೀಲರ ಸಂಘದಿಂದ ಅಂತರಾಷ್ಠ್ರೀಯ ಮಹಿಳಾ ದಿನಾಚರಣೆ ವಿಜಯಪುರ: ನಗರದ ನ್ಯಾಯವಾದಿ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅದ್ಧೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಶಿವಾಜಿ ನಲವಡೆ ಅವರು ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮೊದಲು ನ್ಯೂಯಾರ್ಕ್ ನಲ್ಲಿ ಆರಂಭವಾಗಿ ತದನಂತರ ವಿಶ್ವದಾದ್ಯಂತ ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾಗಿ ಆಚರಿಸುತ್ತ ಬರಲಾಗುತ್ತಿದೆ. ಮಹಿಳೆಯರ ಹಕ್ಕು ಮತ್ತು ಸಮಾನತೆ ಬಗ್ಗೆ ಅರಿತುಕೊಳ್ಳಲು ಈ ದಿನ ಬಹಳ ಪ್ರಮುಖವಾಗಿದೆ ಎಂದು ಹೇಳಿದರು.ನಿವೃತ್ತ ನ್ಯಾಯಾಧೀಶೆ ಶ್ರೀಮತಿ ಪ್ರೇಮಾವತಿ ಮನಗೂಳಿ ಮಾತನಾಡಿ, ಮಹಿಳೆಯರು ವಕೀಲರಾಗಿ, ನ್ಯಾಯಾಧೀಶರಾಗಿ ಪ್ರತಿಯೊಂದು ಹುದ್ದೆ ಹಾಗೂ ಎಲ್ಲ ರಂಗದಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಗಂಡು ಹೆಣ್ಣು ಭೇದವಿಲ್ಲದೆ ಜೀವನ ಮಾಡಿದರೆ ಸಾರ್ಥಕವಾಗುತ್ತದೆ ಎಂದು ಹೇಳಿದರು.ಮಹಿಳಾ ಪ್ರತಿನಿಧಿ ನ್ಯಾಯವಾದಿ ಬಿ.ಎಮ್.ಅಲಗೊಂಡ ಮಾತನಾಡಿ, “ಯತ್ರನಾರ್ಯಸ್ಸು ಪೂಜಿತ ತತ್ರ ರಮoತ ದೇವತೆ” ಎಲ್ಲಿ ನಾರಿಯರು ಪೂಜಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ವಾಸಿಸುತ್ತಾರೆ. ಮಹಿಳೆಯರಿಗೆ ಗೌರವ ಸಿಗಲು ಪುರುಷರು-ಮಹಿಳೆಯರು ಎಂಬ ಬೇಧ-ಭಾವವಿಲ್ಲದೆ ಸರ್ವರೂ ಜೀವನ ನಡೆಸಿದರೆ…

Read More

ನಿಡಗುಂದಿ: ಸರ್ಕಾರದ ಪಂಚ ಯೋಜನೆಗಳಾದ ಅನ್ನಭಾಗ್ಯ, ನಾರಿಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಪಂಚ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮನೆ ಬಾಗಿಲಿಗೆ ಬರುತ್ತಾರೆ. ಸರ್ಕಾರದ ಯೋಜನೆಗಳಿಂದ ಯಾರೂ ವಂಚಿತರಾಗಬಾರದು. ಇದನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಗುರಿ ಸರ್ಕಾರಕ್ಕೆ ಇದೆ ಎಂದು ಬಸವನ ಬಾಗೇವಾಡಿ ಮತಕ್ಷೇತ್ರದ ಶಾಸಕರು ಹಾಗೂ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಬುಧವಾರ ನಿಡಗುಂದಿ ಗ್ರಾಮೀಣ ವಿದ್ಯಾವರ್ಧಕ ಸಂಘದ ಪ್ರೌಡಶಾಲೆಯ ಆವರಣದಲ್ಲಿ ನಡೆದ ಬಸವನ ಬಾಗೇವಾಡಿ, ಕೊಲ್ಹಾರ, ನಿಡಗುಂದಿ, ತಾಲೂಕುಗಳ ವ್ಯಾಪ್ತಿಯ ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅನ್ನಭಾಗ್ಯ ಯೋಜನೆಯಡಿ 5 ಕೆಜೆ ಅಕ್ಕಿ ವಿತರಿಸಲಾಗುತ್ತಿದೆ. ಹಾಗೂ ಉಳಿದ ಅಕ್ಕಿಯ ಮೊತ್ತ 175 ರೂಪಾಯಿಗಳನ್ನು ಡಿಬಿಟಿ ಮೂಲಕ ಫಲಾನುಭವಿಯ ಖಾತೆಗೆ ಹಾಕಲಾಗುತ್ತಿದೆ. ಶಾಲಾ…

Read More

ಆಲಮಟ್ಟಿ: ಇಲ್ಲಿಯ ಕೃಷ್ಣೆಯ ತಟದ ಚಂದ್ರಗಿರಿ ಚಂದ್ರಮ್ಮಾ ದೇವಿ ಜಾತ್ರೆ ಮಾ.14 ರಿಂದ ಮೂರು ದಿನಗಳ ಕಾಲ ಜರುಗಲಿದೆ.ಈ ಭಾಗದ ಅಸಂಖ್ಯಾತ ಭಕ್ತರ ಆರಾಧ್ಯ ದೇವಿ, ಚಂದ್ರಮ್ಮಳ ಪ್ರಭಾವ, ಶಕ್ತಿ ಅಪಾರ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಜಾತ್ರೆಗೆ ಆಗಮಿಸುತ್ತಾರೆ.ಜಾತ್ರೆಯಂಗವಾಗಿ ಮಾ.14 ರ ಬೆಳಿಗ್ಗೆಯಿಂದ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತವೆ. ಬೆಳಿಗ್ಗೆಯಿಂದಲೇ ಕೃಷ್ಣೆಯ ದಡದಿಂದ ದೇವಸ್ಥಾನದವರೆಗೆ ಸಹಸ್ರಾರು ಭಕ್ತರು ದೀಡ ನಮಸ್ಕಾರ ಹಾಕುತ್ತಾರೆ. ದೂರದಿಂದ ಬರುವ ಭಕ್ತರು ಒಂದೆರೆಡು ದಿನ ಮುಂಚಿತವೇ ಆಗಮಿಸಿ, ಇಲ್ಲಿಯೇ ವಸತಿಯಿದ್ದು, ನೇವೇದ್ಯೆ ಅರ್ಪಿಸಿ ಹೋಗುವ ಸಂಪ್ರದಾಯ ಹೆಚ್ಚು. ಹೀಗಾಗಿ ಈಗ ಆಲಮಟ್ಟಿಯ ಕೃಷ್ಣೆಯ ತಟದ ಸುತ್ತಲೂ ಜನ ತಂಡೋಪತಂಡವಾಗಿ ಠಿಕಾಣಿ ಹೂಡಿದ್ದಾರೆ. ಮೂರು ದಿನದ ಜಾತ್ರೆಯಲ್ಲಿ 50 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡುತ್ತಾರೆ. ನೂರಾರು ಸಂಖ್ಯೆಯ ಜೋಗಮ್ಮಗಳು ಇದ್ದು, ಜೋಗತಿ ಪದ ಹಾಡುತ್ತಾರೆ. ಅವಳಿ ಜಿಲ್ಲೆಯಲ್ಲಿ ನಾನಾ ಕಡೆ ಚಂದ್ರಮ್ಮ ದೇವಸ್ಥಾನಗಳಿದ್ದು, ಅವುಗಳಿಗೆಲ್ಲಾ ಆಲಮಟ್ಟಿ ಮೂಲಸ್ಥಾನ. ಪ್ರತಿ ಮಂಗಳವಾರ, ಗುರುವಾರ ಸಹಸ್ರಾರು…

Read More

ಮಾಜಿ ಸಿಎಂ ಡಿವಿ ಸದಾನಂದಗೌಡ, ಪ್ರತಾಪ್ ಸಿಂಹಗೆ ಕೊಕ್ | ಜಿಗಜಿಣಗಿಗೆ ಟಿಕೆಟ್ ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಿಎಂ ಡಿವಿ ಸದಾನಂದಗೌಡ ಸೇರಿದಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.ಈ ಬಾರಿ ಬಿಜೆಪಿ ಒಟ್ಟು 8 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. ಮೈಸೂರು ಸಂಸದ, ಪ್ರತಾಪ್‌ ಸಿಂಹ, ಬೆಂಗಳೂರು ಉತ್ತರ ಸಂಸದ ಡಿವಿ ಸದಾನಂದ ಗೌಡ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಹಾವೇರಿ ಸಂಸದ ಶಿವಕುಮಾರ್‌ ಉದಾಸಿ, ತುಮಕೂರು ಸಂಸದ ಜಿಎಸ್‌ ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆಬಿಜೆಪಿ ಅಭ್ಯರ್ಥಿಗಳುಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ…

Read More

ವಿಜಯಪುರದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರೈತರಿಗೆ ಕರೆ ವಿಜಯಪುರ: ರೈತರು ಬೆಳೆದ ಬೆಳೆಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆಗೊಳಿಸಿ ವಿವಿಧ ಆಹಾರ ಉತ್ಪನ್ನಗಳನ್ನು ತಯಾರಿಸಿ ವ್ಯಾಪಾರಕ್ಕೆ ಉತ್ತೇಜನ ನೀಡಿದರೆ ಆದಾಯ ದ್ವಿಗುಣವಾಗುವಾದರೊಂದಿಗೆ ರೈತರ ಬದುಕು ಹಸನಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ರೈತರಿಗಾಗಿ ಮೀಸಲಿಟ್ಟಿದೆ ಇದರ ಸದುಪಯೋಗ ರೈತರು ಪಡೆದುಕೊಳ್ಳಬೇಕು ಎಂದು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಬುಧವಾರ ವಿಜಯಪುರ ಹೊರವಲಯ ಹಿಟ್ಟಿನಹಳ್ಳಿಯಲ್ಲಿರುವ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ೮೫ ಲಕ್ಷ ರೂಪಾಯಿ ಅನುದಾನದ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೈತರ ವಸತಿ ನಿಲಯ ಕಟ್ಟಡದ ಉದ್ಘಾಟನೆಯನ್ನು ನೇರವೇರಿಸಿ ಅವರು ಮಾತನಾಡಿದರು.ಕೃಷಿ ವಿಜ್ಞಾನ ಕೇಂದ್ರಗಳು ರೈತರಿಗೆ ದೇವಸ್ಥಾನವಿದ್ದಂತೆ. ಇಲ್ಲಿ ಅನೇಕ ಮಾಹಿತಿಗಳು ದೊರೆಯುತ್ತವೆ. ಸರ್ಕಾರ ರೈತರಿಗೆ ನೀಡುವ ಸಹಾಯಧನ, ಬೆಳೆಗಳ ಬಗ್ಗೆ ಮಾಹಿತಿ, ರೋಗ ನಿರ್ವಹಣೆಗಳ ಕುರಿತು ಅನುಸರಿಸಬೇಕಾದ ವೈಜ್ಞಾನಿಕ ನಿರ್ವಹಣೆ, ಆಹಾರ ಸಂಸ್ಕರಣೆಯ ಮಾಹಿತಿ, ಹೊಸ ತಂತ್ರಜ್ಞಾನಗಳ ಬಗ್ಗೆ…

Read More

ದೇವರಹಿಪ್ಪರಗಿ: ಕೋರವಾರ ಗ್ರಾಮದ ರೈತಸಂಘ ಹಾಗೂ ಹಸಿರುಸೇನೆ ಘಟಕಕ್ಕೆ ಕಾರ್ಯಾಲಯ ಒದಗಿಸುವಂತೆ ಆಗ್ರಹಿಸಿ ಪದಾಧಿಕಾರಿಗಳು ಪಿಡಿಓ ಕೆ.ಎಸ್.ಕಡಕಭಾವಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಕೋರವಾರ ಗ್ರಾಮದ ಪಂಚಾಯಿತಿ ಆವರಣಕ್ಕೆ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ತೆರಳಿ ಕಚೇರಿ ಒದಗಿಸಲು ಆಗ್ರಹಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷ ಐ.ಎಸ್.ಕುಳೇಕುಮಟಗಿ ಮಾತನಾಡಿ, ಗ್ರಾಮದ ರೈತಸಂಘದ ಘಟಕ ಸುಮಾರು ೧೫೦೦ ರಿಂದ ೨೦೦೦ವರೆಗೆ ಸದಸ್ಯರನ್ನು ಹೊಂದಿದೆ. ಆದರೆ ಈ ಎಲ್ಲ ಸದಸ್ಯರು ಹಾಗೂ ಪದಾಧಿಕಾರಿಗಳ ಸಭೆ ನಡೆಸಲು ಸ್ಥಳಾವಕಾಶ ಇಲ್ಲದಂತಾಗಿದೆ.ರೈತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಸಮಸ್ಯೆಗಳಿಗೆ ಪರಿಹಾರವಾಗಿ ಗ್ರಾಮ ಘಟಕದಲ್ಲಿ ಆಗಾಗ್ಗೆ ಸಭೆ ಕೈಗೊಳ್ಳುವುದು ಅನಿವಾರ್ಯವಾಗಿದೆ. ಆದ್ದರಿಂದ ತಾವು ಸರ್ಕಾರದ ಮೂಲಕ ರೈತ ಸಮುದಾಯದ ಸಭೆಗಳಿಗಾಗಿ ವ್ಯವಸ್ಥಿತ ಕಟ್ಟಡವನ್ನು ಒದಗಿಸಿಕೊಡಬೇಕು. ಇಲ್ಲವೆ ರೈತಸಂಪರ್ಕ ಕೇಂದ್ರದಲ್ಲಿ ಸಭೆ ಜರುಗಿಸಲು ಅನುಕೂಲ ಮಾಡಕೊಡಬೇಕೆಂದು ಆಗ್ರಹಿಸಿದರು.ಗೌರವಾಧ್ಯಕ್ಷ ಶಿವಾನಂದಯ್ಯ ಹಿರೇಮಠ(ವರ್ಕಾನಳ್ಳಿ), ಸಂಘಟನಾ ಕಾರ್ಯದರ್ಶಿ ಸುಭಾಸ ಸಜ್ಜನ, ಯುವ ಘಟಕದ ಅಧ್ಯಕ್ಷ ಸಂಗಮೇಶ ಹುಣಸಗಿ, ಗ್ರಾಮ ಘಟಕದ ಅಧ್ಯಕ್ಷ…

Read More