Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಆಲಮೇಲ: ಪಟ್ಟಣದಲ್ಲಿನ ಮನೆಗಳ ಹಂಚಿಕೆಯಲ್ಲಿ ಅಕ್ರಮ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರವಾದ) ಪಧಾದಿಕಾರಿಗಳು ಮಂಗಳವಾರ ಪಟ್ಟಣ ಪಂಚಾಯತಿ ಎದುರು ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಬುಧವಾರ ಎರಡು ದಿನ ಪೂರ್ಣಗೊಂಡರೂ ಇಲ್ಲಿವರೆಗೂ ಯಾವುದೆ ಅಧಿಕಾರಿಗಳು ಸಮಸ್ಯೆ ಆಲಿಸಲು ಬಾರದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಡಾ| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ತಾಲೂಕ ಸಂಚಾಲಕ ಶಿವು ಮೇಲಿನಮನಿ, ಹರಿಷ ಎಂಟಮಾನ ಮಾತನಾಡಿ, ಪಟ್ಟಣಲ್ಲಿನ ಅನೇಕ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅದರಿಂದ ಬೆಸತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಅಧಿಕಾರಿಗಳು ಆಗಮಿಸಿ ಇಲ್ಲಿನ ಸಮಸ್ಯೆಗಳು ಆಲಿಸಿ ನಮ್ಮೆಲ್ಲ ಬೇಡಿಕೆಗಳಿಗೆ ಲಿಖಿತ ಭರವಸೆ ನೀಡುವವರೆಗೂ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದರು.
ದೇವರಹಿಪ್ಪರಗಿ: ಬೊಲೆರೊ ಪಿಕ್ಅಪ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಶಾಲಾ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂಗಳಗಿ ಕ್ರಾಸ್ ಹತ್ತಿರ ಸಂಭವಿಸಿದೆ.ತಾಲ್ಲೂಕಿನ ಇಂಗಳಗಿ ಕ್ರಾಸ್ ಬಳಿ ಬುಧವಾರ ಈ ಘಟನೆ ಸಂಭವಿಸಿದ್ದು, ನಿವಾಳಖೇಡ ಗ್ರಾಮದಿಂದ ಬೈಕ್ ಸವಾರ ಇಬ್ಬರು ಶಾಲಾ ವಿದ್ಯಾರ್ಥಿಗಳೊಂದಿಗೆ ಬರುತ್ತಿರುವ ಸಮಯದಲ್ಲಿ ದೇವರ ಹಿಪ್ಪರಗಿಯಿಂದ ಇಂಡಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಸವಾರ ನಿವಾಳಖೇಡ ಗ್ರಾಮದ ನಿವಾಸಿ ಈರಣ್ಣ ಬಾಬು ಇಂಡಿ (೨೩) ಸ್ಥಳದಲ್ಲಿಯೇ ಮೃತಪಟ್ಟರೇ, ವಿದ್ಯಾರ್ಥಿಗಳಾದ ಸಚೀನ ಬಸವರಾಜ ಹಡಗಲಿ(೧೫) ಹಾಗೂ ಚಂದ್ರಕಾಂತ ರಾಘವೇಂದ್ರ ತಳವಾರ (೧೫) ಇವರಿಗೆ ತೀವ್ರವಾದ ಗಾಯಗಳಾಗಿದ್ದು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯಪುರ: ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಭೂಮಿಪೂಜೆ ನೆರವೇರಿಸಿದರು.ಮಹಾನಗರ ಪಾಲಿಕೆ ವಾರ್ಡ ನಂ.೨೨ ರಲ್ಲಿ ಬರುವ ಜಿಲ್ಲಾ ಪಂಚಾಯಿತಿ ಮುಖ್ಯ ದ್ವಾರದಿಂದ ಡಿ.ದೇವರಾಜು ಅರಸು ಭವನ ವರೆಗೆ ರೂ.೪.೯೦ ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಸ್ಟ್ರೀಟ್ ಲೈಟ್ ಅಳವಡಿಕೆ ಕಾಮಗಾರಿಗೆ ಗಾಂಧಿ ಭವನದ ಎದುರು ಭೂಮಿಪೂಜೆ ನೆರವೇರಿಸಿದರು.ನಂತರ ಕನಕದಾಸ ಬಡಾವಣೆಯ ಡಿ.ದೇವರಾಜ ಅರಸ ಭವನದಿಂದ ಬಿ.ಎಸ್.ಎನ್.ಎಲ್ ಕ್ವಾಟರ್ಸ ವರೆಗೆ ರೂ.೩.೧೦ ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ಹಾಗೂ ಡಾಂಬರ ರಸ್ತೆ ಸುಧಾರಣೆ ಕಾಮಗಾರಿಗೆ ಕನಕದಾಸ ಬಡಾವಣೆಯ ಬಸ್ ಸ್ಟಾಪ್ ಬಳಿ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಇದೇ ವೇಳೆ ಸ್ಥಳೀಯ ನಿವಾಸಿಗಳು ಶಾಸಕರಿಗೆ ಆತ್ಮೀಯವಾಗಿ ಸನ್ಮಾನಿಸಿದರು.ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ಮುಖಂಡರಾದ ಪಾಂಡು ಸಾಹುಕಾರ ದೊಡಮನಿ, ಶಂಕರ ಹೂಗಾರ, ಚಂದ್ರು ಚೌದರಿ, ಶರಣು ಕಾಖಂಡಕಿ, ರಾಚು ಬಿರಾದಾರ ಸೇರಿದಂತೆ ಮುಖಂಡರು, ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳು ಇದ್ದರು.
ಅಫಜಲಪುರ: ಭೀಮಾ ನದಿ ಬತ್ತಿರುವದರಿಂದ ನೆರೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಥವಾ ತಾತ್ಕಾಲಿಕವಾಗಿ ಬಸವಸಾಗರ ಜಲಾಶಯದಿಂದ ಕಾಲುವೆ ಮೂಲಕ ನೀರು ಹರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ನಗರಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರಿಗೆ ರೈತರು ಮನವಿ ಸಲ್ಲಿಸಿದರು.ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೂಗಾರ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಮಳೆ ಇಲ್ಲದೆ ಬೆಳೆಗಳು ಸಂಪೂರ್ಣ ಹಾಳಾಗಿ ಹೋಗಿದ್ದು ಜನ, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಹೀಗಾಗಿ ಬರಗಾಲ ಹಿಡಿದ ಪ್ರದೇಶ ಎಂದು ಘೋಷಿಸಿ ಪ್ರತಿ ಎಕರೆಗೆ ರೂ.25,000 ಅಂತೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಧರ್ಮರಾಜ್ ಸಾವು, ಭಾಗಣ್ಣ ಕುಂಬಾರ, ಕಂಟೆಪ್ಪ ಹನೂರು,ರೇವಣಸಿದ್ದಯ್ಯ, ಮಲ್ಲು ಸೋಲಾಪುರ ಸೇರಿದಂತೆ ಇತರರು ಇದ್ದರು.
ವಿಜಯಪುರ: ಪ್ರಾಥಮಿಕ ಹಾಗು ಪ್ರೌಢ ಹಂತದ ವಿದ್ಯಾಥಿ೯ಗಳಿಗೆ ಕನ್ನಡ ಕಡ್ಡಾಯಗೊಳಿಸಬೇಕು. ನಾಡಿನ ಎಲ್ಲ ವಿದ್ಯಾರ್ಥಿಗಳು ಕನ್ನಡ ಓದುವ, ಬರೆಯುವ ಹಾಗು ಮಾತನಾಡುವ ಸಾಮರ್ಥ್ಯವನ್ನು ಶಿಕ್ಷಕರು ಹಾಗು ಪಾಲಕರು ಬೆಳಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಮುದ್ದೇಬಿಹಾಳ ತಾಲೂಕಿನ ತಾರನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಸಾಹಿತ್ಯಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಹಾಸಿಂಪೀರ ವಾಲಿಕಾರ, ವಿದ್ಯಾರ್ಥಿಗಳು ಸಮಯ ವ್ಯರ್ಥಮಾಡದೆ ಅಭ್ಯಾಸದಲ್ಲಿ ನಿರತರಾಗಬೇಕು.ಮತ್ತು ಪಾಲಕರು ಕುಟುಂಬದಲ್ಲಿ ಕಲಿಕಾ ವಾತಾವರಣ ನಿರ್ಮಾಣಮಾಡಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತರಗತಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು ಎಂದರು.ತಾರನಾಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಬಸವರಾಜ ಬಿರಾದಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಶಾಲೆಯ ಗುರುಮಾತೆ ಸುಮಲತಾ ಗಡಿಯಪ್ಪನವರು ಮೈಸೂರಿನ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಪ್ರಯಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಲ್ಲಿಯವರೆಗೆ ಬಂದು ಗೌರವಿಸಿದ್ದು ಶ್ಲಾಘನೀಯ ಎಂದರು.ಗೌರವ ಸನ್ಮಾನ ಸ್ವೀಕರಿಸಿದ ಸುಮಲತಾ ಗಡಿಯಪ್ಪನವರ ಮಾತನಾಡಿ, ಜಿಲ್ಲಾ ಕಸಾಪ ಅನೇಕ ಪ್ರತಿಭಾವಂತರಿಗೆ…
ಸಿಂದಗಿ: ಶರಣರ, ಸಂತರ ಮಹಾಂತರ ಜೀವನ ಚರಿತ್ರೆಗಳನ್ನು ಪಸರಿಸುವ ನಿಟ್ಟಿನಲ್ಲಿ ಪುರಾಣ ಪ್ರವಚನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.ತಾಲೂಕಿನ ಚಟ್ಟರಕಿ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ಯವಾಗಿ ಹಮ್ಮಿಕೊಂಡ ಯಲ್ಲಾಲಿಂಗ ಮಹಾರಾಜರ ಪುರಾಣ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಸಂಸಾರ, ಸಂಪತ್ತಿನೆಡೆಗೆ ಹೆಚ್ಚಿನ ಗಮನಹರಿಸದೆ ಧರ್ಮ, ಸಂಸ್ಕಾರ, ಸಂಸ್ಕೃತಿ ಪಸರಿಸುವ ಮಠ-ಮಂದಿರಗಳಲ್ಲಿ ಹಮ್ಮಿಕೊಳ್ಳುವ ಪುರಾಣ ಪ್ರವಚನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುಖೇನ ಬದುಕು ಸಾರ್ಥಕಗೊಳಿಸಿಕೊಳ್ಳಬೇಕು ಎಂದವರು ಹೇಳಿದರು.ಈ ವೇಳೆ ಪುರಾಣಿಕರಾದ ಖಾಕಂಡಕಿಯ ಶಿವಾನಂದ ಶಾಸ್ತಿçಗಳು, ಪಂಪನಗೌಡ ಹಳಕೋಟೆ, ಮಲ್ಲಿಕಾರ್ಜುನ ಶಹಾಪೂರ, ಶಂಕ್ರಯ್ಯ ಹಿರೇಮಠ, ಅರ್ಜುನ ಮಾಲಗಾರ, ಪ್ರಭುಗೌಡ ಬಿರಾದಾರ, ಚಂದ್ರಶೇಖರ ಹರನಾಳ, ಮಲ್ಲನಗೌಡ, ಮಹಾಂತೇಶ ಮಣೂರ, ಗುರುಸ್ವಾಮಿ ಹಿರೇಮಠ ಸೇರಿದಂತೆ ಶ್ರೀಮಠದ ಭಕ್ತರು ಮತ್ತು ಹಿರಿಯರು ಇದ್ದರು.
ಮುದ್ದೇಬಿಹಾಳ: ಈಜಲು ಹೋದ ಯುವಕ ನೀರು ಪಾಲಾದ ಘಟನೆ ಪಟ್ಟಣದ ಕೆರೆಯಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ತಾಲೂಕಿನ ಶಿರೋಳ ಗ್ರಾಮದ ಶಿವನಗೌಡ ಬಿರಾದಾರ(೩೨) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಮಾ.೧೧ ರಂದೇ ಈಜಲು ಕೆರೆಗೆ ಇಳಿದಿದ್ದ ಎನ್ನಲಾಗಿದೆ.ದಡದಲ್ಲಿ ಬಟ್ಟೆ ಮತ್ತು ಚಪ್ಪಲಿಗಳನ್ನು ಗುರುತಿಸಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದು ಎಂದು ಅಂದಾಜಿಸಿ ಅಗ್ನಿಶಾಮಕ ಮತ್ತು ಪೊಲೀಸರಿಗೆ ಕೆಲ ಸಾರ್ವಜನಿಕರು ನೀಡಿದ ದೂರಿದ ಹಿನ್ನೆಲೆ ಅಗ್ನಿಶಾಮಕದ ಸಹಾಯಕ ಠಾಣಾಧಿಕಾರಿ ರಮೇಶ ಚಳ್ಳಣ್ಣವರ, ಸಿಬ್ಬಂದಿಗಳಾದ ನಾಗೇಶ ರಾಠೋಡ, ರಾಜೇಂದ್ರ ಪೋದಾರ, ಭೀಮರಾವ ನಾಟೇಕಾರ, ಶಿವಾನಂದ ವಾಲಿಕಾರ, ಸಿದ್ದಣ್ಣ ಪೊಲೇಶಿ, ಮಂಜು ಬಳೆಗಾರ, ಮಸ್ತಾನ್ ಮುಲ್ಲಾ, ತುಕಾರಾಮ ರಾಠೋಡ, ಶ್ರೀಶೈಲ್ ಪಾಟೀಲ, ನಿಂಗಗೌಡ ಬಿರಾದಾರ, ರಂಗನಗೌಡ ಬಿರಾದಾರ, ಪ್ರಕಾಶ ಸುಬ್ಬಣ್ಣಗೋಳ, ಸದು ಹೊಕ್ರಾಣಿ, ವಿರುಪಾಕ್ಷಿ ಪೂಜಾರಿ, ಎಸ್.ಎಂ.ಲಮಾಣಿ, ಶ್ರೀಶೈಲ್ ಪಾಟೀಲ, ಜಹಾಂಗೀರಭಾಷಾ ಅಕ್ತರ ಒಳಗೊಂಡ ತಂಡ ಸತತ ಮೂರು ದಿನಗಳ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.ಮೃತನು ಶೆರೆ ಕುಡಿದ…
ವಿಜಯಪುರ: ಭಾರತೀಯ ಜನತಾ ಪಾರ್ಟಿಯ ಸಹಕಾರ ಪ್ರಕೋಷ್ಠದ ರಾಜ್ಯ ಸಹ- ಸಂಚಾಲಕರನ್ನಾಗಿ ಸಂಜಯ ಪಾಟೀಲ, ಕನಮಡಿ ಅವರನ್ನು ನಿಯುಕ್ತಿ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ನೀಡಿದ್ದಾರೆ.ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ವಿಜಯಪುರ: ಭಾರತೀಯ ಜನತಾ ಪಾರ್ಟಿಯ ವ್ಯಾಪಾರ-ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ವಿಜಯಕುಮಾರ ಕುಡಿಗನೂರ ಅವರನ್ನು ನಿಯುಕ್ತಿ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ನೀಡಿದ್ದಾರೆ.ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕೆಂದು ಅವರು ತಿಳಿಸಿದ್ದಾರೆ.
ಇಂಡಿ: ವಿಜಯಪುರ ಜಿಲ್ಲೆಯಲ್ಲಿರುವ ಒಟ್ಟು ಪ್ರದೇಶದಲ್ಲಿ ಈ ಹಿಂದೆ ೦.೧೭ ಅರಣ್ಯ ಪ್ರದೇಶವಿದ್ದದ್ದು ಈಗ ೦.೨೦ ಹೆಕ್ಟೇರ ಪ್ರದೇಶದಲ್ಲಿ ಅರಣ್ಯ ಅಭಿವೃದ್ಧಿಯಾಗಿದೆ ಎಂದುಸಾಮಾಜಿಕ ಅರಣ್ಯ ವಿಭಾಗ ವಿಜಯಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ವನಿತಾ ಹೇಳಿದರು.ಸಾಮಾಜಿಕ ಅರಣ್ಯ ವಲಯ ವತಿಯಿಂದ ತಾಲೂಕಿನ ಬಬಲಾದ ನರ್ಸರಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ಕೃಷಿ ಅರಣ್ಯದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಮಾತನಾಡಿದರು.ಯುವ ಜನತೆಗೆ ದುಡಿಯುವ ಕೈಗಳಿಗೆ ಉತ್ತಮ ಬೆಳವಣೆಗೆಗೆ ಹಾಗೂ ಅದರಲ್ಲೂ ಸಮಾಜದ ಅಂಚಿನಲ್ಲಿರುವ ಗುಂಪುಗಳ ಅಂತರ್ಗತ ಬೆಳವಣೆಗೆಯನ್ನು ವೃದ್ಧಿಸಲು ಎಲ್ಲ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಒಂದೇ ಸೂರನಡಿ ಸೃಜಿಸಲಾಗಿರುತ್ತದೆ ಎಂದರು.ಇಂಡಿ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಮಂಜುನಾಥ ಧುಳೆ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ರೇಷ್ಮೆ ಇಲಾಖೆಯ ತೇಲಿ, ಉಪ ವಲಯ ಅರಣ್ಯಾಧಿಕಾರಿ ಲಕ್ಷ್ಮಣ ನಾದ, ರಾಜೇಂದ್ರ ಹುನ್ನೂರ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಪ್ರವೀಣ್ ಹಾಗೂ ದಾಂಡೇಲಿ ಪೇಪರ್ ಮಿಲ್ಸ ಅಧಿಕಾರಿ ಇಮ್ರಾನ್ ರವರು ಭಾಗವಹಿಸಿದ್ದರು.ಈ ಕಾರ್ಯಾರದಲ್ಲಿ ಬಬಲಾದ,…
