Author: editor.udayarashmi@gmail.com

ಇಂಡಿ: ಬಿಜೆಪಿ ಪಕ್ಷದ ಪ್ರಧಾನಿಯ ಗುರಿ, ಇಚ್ಛೆ, ಕನಸು ನನಸು ಮಾಡಿರುವ ಕರ್ನಾಟಕದ ಒಬ್ಬ ಸಂಸದ ಎಂದರೇ ತಪ್ಪೇನಿಲ್ಲ. ಅಂತಹ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ಬಗ್ಗೆ ಅನುಮಾನಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.ಪತ್ರಿಕಾ ಮಾದ್ಯಮದ ಮೂಲಕ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಲು ಸಂಘದ ಪದಾಧಿಕಾರಿಗಳು ಬುಧವಾರ ಆಗ್ರಹಿಸಿದರು.ಸುಮಾರು ವರ್ಷಗಳ ಪ.ಪಂ ಮೀಸಲಾತಿಗಾಗಿ ಅನೇಕ ರೀತಿಯಲ್ಲಿ ತಳವಾರ & ಪರಿವಾರ ಸಮುದಾಯ ಹೋರಾಟ, ಪ್ರತಿಭಟನೆ ಮಾಡಿದ್ರೂ ಯಾರೂ ನ್ಯಾಯ ಕೊಡಿಸುವ ಪ್ರಯತ್ನ ಮಾಡಿರಲಿಲ್ಲ. ಆದರೆ ಸಂಸದ ಪ್ರತಾಪ್ ಸಿಂಹ ನುಡಿದಂತೆ ನಡೆದು ಈ ಸಮುದಾಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಶೋಷಿತ ಸಮುದಾಯ ಬಗ್ಗೆ ಇರುವ ಕಾಳಜಿ ಅರ್ಥವಾಗುತ್ತೆ. ಬೆಂಗಳೂರು ಮತ್ತು ಮೈಸೂರು ದಶಪಥ ಹೆದ್ದಾರಿ, ಐತಿಹಾಸಿಕ ಮೈಸೂರು ಜಿಲ್ಲೆಗೆ 13 ರೈಲುಗಳು ಪ್ರಯಾಣ ಬೆಳೆಸುವಂತೆ ಮಾಡಿರುವ…

Read More

ಮುದ್ದೇಬಿಹಾಳ: ಹಾಲಿನಂತೆ ಹೆಣ್ಣುಮಗಳು ಬೇರೆಬೇರೆ ನಾಮಗಳಿಂದ ಗುರುತಿಸಿಕೊಂಡು, ಕೆಲಸ ನಿರ್ವಹಿಸುತ್ತಾಳೆಂದು ಶಿಕ್ಷಕಿ ಸರೋಜ ಕಿತ್ತೂರ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಮಾತೃಭಾರತಿ ಪರಿಷತ್ತಿನ ಅಡಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ತಯುಕ್ತ ಸಾಧಕ ಮಾತೋಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸ್ತ್ರೀಯನ್ನು ದೇವತೆಯಂತೆ ಪೂಜಿಸುವ ನಾಡು ನಮ್ಮ ಭಾರತವಾಗಿದೆ. ಹೆಣ್ಣು ಹೆಣ್ಣಿಗೆ ಶತ್ರು ಆಗಬಾರದು. ಹೆಣ್ಣು ಸಹೋದರಿ, ಮಡದಿ, ತಾಯಿ ಇತ್ಯಾದಿಯಾಗಿ ತನ್ನ ಕೆಲಸವನ್ನು ನಿರ್ವಹಿಸುತ್ತಾಳೆ. ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಇವತ್ತಿನ ದಿನ ಮಹಿಳೆ ಸಾಧನೆ ಮಾಡಲು ಹೊರಟಿದ್ದಾಳೆ. ಮಹಿಳಾ ಸಬಲೀಕರಣಕ್ಕಾಗಿ ಹೋರಾಡಬೇಕಾಗಿದೆ. ನಾವೆಲ್ಲ ದೇಹ ಎನ್ನುವ ಭಾವನೆಗಿಂತ ದೇಹಿಯೆನ್ನುವ ಭಾವನೆಯನ್ನು ಅರಿತುಕೊಳ್ಳಬೇಕಾಗಿದೆ. ಆವಾಗಲೆ ನಮ್ಮ ಪ್ರಯತ್ನ ಯಶಸ್ಸನ್ನು ಕಾಣುತ್ತದೆ ಎಂದರು.ಜಾನಪದ ಸಾಹಿತ್ಯದ ಮೂಲಕ ತಾಲೂಕಿನಾದ್ಯಂತ ಚಿರಪರಿಚಿತರಾದ ಶಿವಮ್ಮ ಬಿರಾದಾರ ಮತ್ತು ಲಕ್ಷ್ಮೀ ವಾಲಿಕಾರ ಈರ್ವರಿಗೆ ಸಾಧಕ ಮಾತೋಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಂಸ್ಥೆಯ ನಿರ್ದೇಶಕಿ ಲೀಲಾ ಭಟ್ಟ ಅಧ್ಯಕ್ಷೀಯ ನುಡಿಗಳನ್ನಾಡಿದರು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಸಂಸ್ಥೆಯ ಕಾರ್ಯದರ್ಶಿ ಪ್ರಭು ಕಡಿ,…

Read More

ವಿಜಯಪುರ: ಇಂಡಿ ವಿಭಾಗದ ತಡವಲಗಾ ೩೩/೧೧ ಕೆವ್ಹಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವುದರಿAದ ಸದರಿ ೩೩/೧೧ ಕೆವ್ಹಿ ಮೇಲೆ ಸರಬರಾಜಾಗುವ ಎಲ್ಲ ೧೧ಕೆವ್ಹಿ ಮಾರ್ಗಗಳಿಗೆ ಮಾ.೧೪ ಹಾಗೂ ೧೫ ರಂದು ಮತ್ತು ಇಂಡಿ ವಿಭಾಗದ ತಾಂಬಾ ೩೩/೧೧ ಕೆವ್ಹಿ ಮಾರ್ಗಗಳಿಗೆ ಮಾ.೧೪ ರಂದು ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎ.ಬಿರಾದಾರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರ: ೨೦೨೩-೨೪ ನೆ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಮತ್ಸ್ಯ ವಾಹಿನಿ ಯೋಜನೆ ಅಡಿಯಲ್ಲಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಜಿಲ್ಲೆಗೆ ಒಟ್ಟು ೩ ಭೌತಿಕ ಗುರಿಗಳಿದ್ದು, ಆಯ್ಕೆಯಾಗುವ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿ (ಸಾಮಾನ್ಯ ವರ್ಗದವರು ಒಂದು ಲಕ್ಷ ರೂಪಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರು ೫೦ ಸಾವಿರ ರೂಪಾಯಿ) ಮೊತ್ತವನ್ನು ನೀಡಬೇಕಿರುತ್ತದೆ. ಅರ್ಜಿ ಸಲ್ಲಿಸಲು ಮಾ.೧೯ ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ವಿಜಯಪುರ, ಮುದ್ದೇಬಿಹಾಳ (೯೮೮೬೮೨೦೭೬೧) ಇವರನ್ನು ಸಂಪರ್ಕಿಸಬಹುದು ಎಂದು ವಿಜಯಪುರ ಮೀನುಗಾರಿಕೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಸವನಬಾಗೇವಾಡಿ: ಪಟ್ಟಣದ ಪುರಸಸಭೆ ವಾರ್ಡ ಸಂಖ್ಯೆ 5 ರಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ 2022-23 ನೇ ಸಾಲಿನ ಅಮೃತ ನಗರೋತ್ಥಾನ 4 ನೇ ಹಂತದ ಯೋಜನೆಯ ಅಡಿಯಲ್ಲಿ ಅಂದಾಜು ಮೊತ್ತ ರೂ.17.76 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ ಭೂಮಿಪೂಜಾ ಸಮಾರಂಭ ಬುಧವಾರ ಜರುಗಿತು.ಭೂಮಿ ಪೂಜೆ ನೆರವೇರಿಸಿದ ರಾಜ್ಯ ಸಹಕಾರಿ ಮಹಾ ಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಪಟ್ಟಣದ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ ಸ್ವಚ್ಛತೆ, ವಿದ್ಯುತ್ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳನ್ನು ಸಚಿವ ಶಿವಾನಂದ ಪಾಟೀಲ ಹಾಗೂ ಪುರಸಭೆ ಆಡಳಿತ ಮಂಡಳಿ ಸಮರ್ಪಕವಾಗಿ ನೀಡಲಾಗುತ್ತಿದೆ. ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಗೆ ನಿತ್ಯವು ನಾನಾಕಡೆಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಪಟ್ಟಣದ ಸಾರ್ವಜನಿಕರ ಪ್ರಮುಖ ರಸ್ತೆಯಾದ ಈ ರಸ್ತೆ ಬಹುದಿನಗಳಿಂದ ಹಾಳಾಗಿತ್ತು. ಈಗ ಈ ರಸ್ತೆ ಮತ್ತು ಅದರ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡುವದರಿಂದ ಬಸವಜನ್ಮ ಸ್ಮಾರಕ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಮತ್ತು ಪಟ್ಟಣದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.…

Read More

ಸಿಂದಗಿ: ತಾಲೂಕಿನ ಬಬಲೇಶ್ವರ ಗ್ರಾಮದ ಬಿಜೆಪಿ ಯುವ ಮುಖಂಡ ರವಿಕಾಂತ ನಾಯ್ಕೋಡಿ ಅವರನ್ನು ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗದ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಆರ್. ರಘು (ಕೌಟಿಲ್ಯ) ಆದೇಶ ಹೊರಡಿಸಿದ್ದಾರೆ.ಈ ವೇಳೆ ಪತ್ರಿಕಾ ಹೇಳಿಕಾ ಹೇಳಿಕೆ ನೀಡಿದ ರವಿಕಾಂತ ಅವರು, ರಾಜ್ಯದ ನಾಯಕರು ನನ್ನ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟು ತಳಮಟ್ಟದಿಂದ ಪಕ್ಷ ಸಂಘಟಿಸುವ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗಳು ಹುಸಿ ಹೋಗದಂತೆ ಸರ್ವ ಸಮಾಜದ ಜನರೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡು ಪಕ್ಷದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ. ಮುಂಬರುವ ಲೋಕಸಭಾ ಹಾಗೂ ಜಿಪಂ, ತಾಪಂ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದಿದ್ದಾರೆ.

Read More

ಸಿಂದಗಿ: ಸಂವಿಧಾನವನ್ನೇ ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ನಡೆಯನ್ನು ನಮ್ಮ ಶಾಖೆಯು ಖಂಡಿಸುತ್ತದೆ ಎನ್‌ಎಸ್‌ಯುಐ ಘಟಕದ ತಾಲೂಕಾಧ್ಯಕ್ಷ ಷಹಜಹಾನ ಗೋಲಗೇರಿ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದ ಎದುರು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸಿಂದಗಿ ತಾಲೂಕು ಶಾಖೆಯ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಈ ಕೂಡಲೇ ಅಮಾನತ್ತು ಮಾಡಬೇಕು. ದೇಶದ ಪವಿತ್ರ ಗ್ರಂಥ ಎಂದು ನಂಬಿರುವ ಭಾರತದ ಸಂವಿಧಾನದ ಬಗ್ಗೆ ಬಹಳ ಹಗುರವಾಗಿ ಮಾತನಾಡಿ ಸಮಾಜದಲ್ಲಿ ಶಾಂತಿಯನ್ನು ಕದಡಿಸುವ ಜೊತೆಗೆ ವಿಷಬೀಜ ಬಿತ್ತುವ ಕಲಸವನ್ನು ಮಾಡುತ್ತಿರುವ ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮವಹಿಸಬೇಕು ಎಂದು ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರುಈ ವೇಳೆ ಉಪಾಧ್ಯಕ್ಷ ಸಿದ್ದು ಚಾವರ್, ಪ್ರಧಾನ ಕಾರ್ಯದರ್ಶಿ ಹುಸೇನ್ ಆಳಂದ್, ಸಂಗಮೇಶ್…

Read More

ಮುದ್ದೇಬಿಹಾಳ: ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿಗಳ ಯೋಜನೆಗಳ ಲಾಭಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ಸಾಂಸ್ಥಿಕ ಕಾರ್ಯವಿಧಾನಗಳನ್ನು ಜಾರಿಗೆ ತರಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಚಿಸಿದ್ದು, ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರಾಗಿ ಸದ್ದಾಂ ಕುಂಟೋಜಿ ಅವರನ್ನು ಆಯ್ಕೆಮಾಡಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಪ್ರಕಾಶ ಜೆ.ಸಿ ಆದೇಶಿಸಿದ್ದಾರೆ.

Read More

ವಿಜಯಪುರ: ನಗರದ ಮಹಾನಗರ ಪಾಲಿಕೆ ಆವರಣದ ಒಳಾಂಗಣದಲ್ಲಿ ಡಾ. ಬಿ. ಆರ್ ಅಂಬೇಡ್ಕರ ಅವರ ಪುತ್ತಳಿ (ಮೂರ್ತಿ ) ನಿರ್ಮಿಸಲು ಒತ್ತಾಯಿಸಿ ಬೀಮ ಸರಕಾರ ಸಂಘಟನಾ ಸಮಿತಿ ಇವರ ವತಿಯಿಂದ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಭೀಮ ಸರಕಾರ ಸಂಸ್ಥಾಪಕರು ಮತ್ತು ಜಿಲ್ಲಾಧ್ಯಕ್ಷ ಪರಶುರಾಮ ಚಲವಾದಿ ಮಾತನಾಡಿ, ಮಹಾ ನಾಯಕ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ ರವರು ನಮ್ಮ ದೇಶಕ್ಕೆ ಶ್ರೇಷ್ಠವಾದ ಸಂವಿಧಾನವನ್ನು ಕೊಟ್ಟಂತವರು. ಮತ್ತು ಎಲ್ಲ ಬಡವರು, ದೀನ ದುರ್ಬಲರ, ಎಲ್ಲ ಜನಾಂಗದವರ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನಾಯಕ. ಇವರ ಪುತ್ಥಳಿಯನ್ನು ಮಹಾನಗರ ಪಾಲಿಕೆಯ ಒಳಾಂಗಣದಲ್ಲಿ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ರಾಹುಲ ಮಾನಕರ, ಉದಯಕುಮಾರ್ ಆಕಾಶ, ಇಸ್ಮಾಯಿಲ್ ಬೀಳಗಿ, ರಾಜು ಬುರ್ಲಿ, ಲಕ್ಷ್ಮಣ ಬ್ಯಾಲ್ಯಾಳ, ರಫೀಕ್ ಚಟ್ಟರ್ಕಿ, ಮತ್ತಿತರರು ಉಪಸ್ಥಿತರಿದ್ದರು.

Read More

ವಿಜಯಪುರಕ್ಕೆ ಬೃಹತ್ ಪವನ ವಿದ್ಯುತ್ ಘಟಕ | ಯುವಕರಿಗೆ ಉದ್ಯೋಗಾವಕಾಶ | ಕೈಗಾರಿಕಾ ಕ್ರಾಂತಿಗೆ ನಾಂದಿ ವಿಜಯಪುರ: ದೇಶದ ಎರಡನೇ ದೊಡ್ಡ ಪವನ ವಿದ್ಯುತ್ ಘಟಕವನ್ನು ತವರು ಜಿಲ್ಲೆ ವಿಜಯಪುರಕ್ಕೆ ತರಲು ಶ್ರಮಿಸುವುದರ ಮೂಲಕ ಜಿಲ್ಲೆಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿ ಕೈಗಾರಿಕಾ ಕ್ರಾಂತಿಗೆ ಮುಂದಡಿ ಇಡುವುದರ ಮೂಲಕ ನಿರುದ್ಯೋಗಿ ಯುವಕರಿಗೆ ಬದುಕು ಕಟ್ಟಿಕೊಡಲು ಮುಂದಾಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಡಾ. ಎಂ.ಬಿ ಪಾಟೀಲ್ ರವರ ಕಾರ್ಯ ಅಭಿನಂದನಾರ್ಹ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ್ ಬಬಲೇಶ್ವರ ತಿಳಿಸಿದ್ದಾರೆ.ಬುಧವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಎಂ ಬಿ ಪಾಟೀಲರು ನೀರಾವರಿ ಸಚಿವರಾಗಿದ್ದಾಗಿನ (2013 ರಿಂದ 2018 ರ) ಅವಧಿಯು ಬಸವ ನಾಡಿನ ಜನತೆಯ ಪಾಲಿಗೆ ಅದೊಂದು ನೀರಾವರಿ ಕ್ಷೇತ್ರದ ಅಭಿವೃದ್ಧಿಯ ಸುವರ್ಣ ಯುಗವಾಗಿತ್ತು. ಎಂ ಬಿ ಪಾಟೀಲರ ಕರ್ತೃತ್ವ ಶಕ್ತಿ ಮತ್ತು ದೂರ ದೃಷ್ಟಿಯಿಂದಾಗಿ ಬರದ ನಾಡು ಬಂಗಾರದ ನಾಡಾಗಿ ಇಂದು ಕಡು…

Read More