Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವ್ಯಂಗ್ಯೋತ್ಸವ’- ಶ್ರೀನಿವಾಸ ಜಾಲವಾದಿ, ಸುರಪುರ ‘ಏನು ಉಂಟು ನಿನ್ನಲ್ಲಿ ಮಾರಾಯ?’ ಕೇಳಿದ ರಬಡ್ಯಾ ಕಾಳ್ಯಾಗ’ಏನಲೇ ಯಪ್ಪಾ ಏನಾತು ನಿಂಗ?’ ಕಾಳ್ಯಾ ಆಶ್ಚಯದಿಂದ ಕೇಳಿದ’ಯಾಕ?”ಅಲ್ಲಾ, ಉಡುಪಿ ಕುಂದಾಪುರ ಕಡೆ ಹೋಗಿದ್ದೇನ?’ ಕೇಳ್ದ ಕಾಳ್ಯಾ’ಯಾಕಲೇ ತಮ್ಮಾ ಏನಾಯಿತು?’ ಅಂದ ರಬಡ್ಯಾ’ ಮತ್ತs ಹಂಗ ಮಾತಾಡಕತ್ತಿದಿ’ ಅಂದ ಕಾಳ್ಯಾ’ಏ ಯಾಂವ ಎಲ್ಲಿ ಯಾಕ ಹೋಗವಲ್ನಕಲೇ, ನಿಂದೇನ ಹಚ್ಚಿದಿ, ಮದ್ಲೆ ಕುಡ್ಯಾಕ ನೀರಿಲ್ಲಂತ ಮಂದಿ ಗೊಳ್ಯಾಡಕುಂತಾರು’ ಅಂತ ಗುಡುಮ್ಯಾ ಬೈದ’ಅಲ್ಲಾ ಬೆಂಗಳೂರಾಗ ನೀರs ಇಲ್ಲಂತ ಮತ್ತ ಹ್ಯಾಂಗ?’ ಅಂದಳು ರಾಣಿ’ಅಲ್ಲಿ ಕುಡ್ಯಾಕು ನೀರಿಲ್ಲ, ತಕ್ಕೊಳಾಕು ನೀರಿಲ್ಲ’ ಅಂದ ಕಾಕಾ’ ಮತ್ತ ಮಂದಿ ಯಾನ ಮಾಡ್ತಾರು?’ ಕೇಳಿದ ಟುಮ್ಯಾ’ಯಾನು ಇಲ್ಲ ಜಾನೂ ಇಲ್ಲ, ಸಬ್ ಖಾಲಿ ಕಾಗಜ್ ಲೇಕರ ಹಾತ್ ಸಾಫ್ ಕರ್ತಾರೆ’ ಅಂತ ಬಾಶಾ ನಕ್ಕ’ಏ ಯಾವ ಸಾಪ ಅಲೇ, ಹಾವು ಏನು?’ ಅಂದ ಶೌರಿ’ಏ ಮತ್ತ ನೀರಿಲ್ಲ ಅಂತಾರು….ಮತ್ತ ತಮಿಳನಾಡಿಗಿ ನೀರ ಬಿಟ್ಟಾರಂತಲಾ’ ಎಂದ ಗುಂಡ್ಯಾ’ಅವು ಹಂಗೇ ಏಳಲೇ, ಇಲ್ಲಿ ಇಲ್ಲ ಅನ್ನೊದು ಅಲ್ಲಿ ರಾತ್ರೋರಾತ್ರಿ…
ವಿಜಯಪುರ: ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಕರುನಾಡನ್ನು ರಂಜಿಸುತ್ತ ಬಂದಿರುವ ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ.7 ಸೀಸನ್ಗಳನ್ನ ಯಶಸ್ವಿಯಾಗಿ ಪೂರೈಸಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಈಗ ತನ್ನ 8 ನೇ ಆವೃತ್ತಿಯೊಂದಿಗೆ ಮತ್ತೆ ಕರುನಾಡನ್ನ ಕುಣಿಸಲು ತಯಾರಾಗಿದೆ. ಈಗಾಗಲೇ ಸಾಕಷ್ಟು ಯುವ ನೃತ್ಯ ನಿರ್ದೇಶಕರನ್ನ ಸ್ಯಾಂಡಲ್ ವುಡ್ಡಿಗೆ ನೀಡಿರುವ ಈ ರಿಯಾಲಿಟಿ ಶೋ ಮತ್ತಷ್ಟು ನೃತ್ಯ ನಿರ್ದೇಶಕರನ್ನ ಹುಟ್ಟು ಹಾಕುವ ಕೆಲಸವನ್ನ ಈ ಆವೃತ್ತಿಯಲ್ಲಿ ಮತ್ತೆ ಮಾಡಲಿದೆ.ಇದರ ಜೊತೆಜೊತೆಗೆ ಸತತ 4 ಹಿಟ್ ಸೀಸನ್ನುಗಳನ್ನ ಕೊಟ್ಟಿರುವ ಕರುನಾಡಿನ ನೆಚ್ಚಿನ ರಿಯಾಲಿಟಿ ಶೋಗಳಲ್ಲಿ ಒಂದಾದ ಕಾಮಿಡಿ ಕಿಲಾಡಿಗಳು ಈಗಾಗಲೇ ಸಾಕಷ್ಟು ಕಾಮಿಡಿ ಕಲಾವಿದರನ್ನ ಕರುನಾಡಿಗೆ ನೀಡಿರುವುದು ಈಗ ಇತಿಹಾಸ. ವೇದಿಕೆಗಾಗಿ ಕಾಯುತ್ತಿರುವ ಅದೆಷ್ಟೋ ಹಾಸ್ಯ ನಟನಟಿಯರ ಕನಸನ್ನ ನನಸು ಮಾಡುತ್ತಿರುವ ಈ ರಿಯಾಲಿಟಿ ಶೋ ಈ ಬಾರಿ ಕಾಮಿಡಿ ಕಿಲಾಡಿಗಳು…
ವಿಜಯಪುರ ಜಿಲ್ಲಾ ಕೃಷಿಯೆತರ ಪತ್ತಿನ ಸಹಕಾರಿ ಸಂಘದ ಒಕ್ಕೂಟ ವಿಜಯಪುರ: ಜಿಲ್ಲಾ ಕೃಷಿಯೆತರ ಪತ್ತಿನ ಸಹಕಾರಿ ಸಂಘದ ಒಕ್ಕೂಟದ ಚುನಾವಣೆ ಅವಿರೋಧವಾಗಿ ನಡೆದಿದ್ದು, ಈ ಕೆಳಗಿನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಸ್ ಕೆ ಭಾಗ್ಯಶ್ರೀ ಘೋಷಿಸಿದ್ದಾರೆ.ವಿಜಯಪುರ ನಗರ ಮತಕ್ಷೇತ್ರದಿಂದ ಪತ್ರಕರ್ತ ದೀಪಕ ಶಿಂತ್ರೆ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯ ಗುರುಶಾಂತ ನಿಡೋಣಿ, ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ್ ಮಗ್ಗಿಮಠ, ಪರಶುರಾಮ ಚಿಂಚಲಿ, ಡಾ.ಸದಾಶಿವ ಪವಾರ, ನಬಿಸಾಬ್ ಕರ್ಜಗಿ, ಇಂಡಿ ತಾಲೂಕಾ ಮತಕ್ಷೇತ್ರ ದಿಂದ ಶ್ರೀಮಂತ ಇಂಡಿ, ವಿಜಯಪುರ ಗ್ರಾಮೀಣ ಕ್ಷೇತ್ರದಿಂದ ಬಸವರಾಜ ಬಂಡಿ, ಮುದ್ದೇಬಿಹಾಳ ಮತಕ್ಷೇತ್ರದಿಂದ ಬಸವರಾಜ ಇಸ್ಲಾಂಪುರ, ಬಸವನಬಾಗೇವಾಡಿಯಿಂದ ಸಿದ್ದಪ್ಪ ಬಾಳಗೊಂಡ, ಸಿಂದಗಿ ಮತಕ್ಷೇತ್ರ ದಿಂದ ಡಾ.ರಾಮರಾವ ನಾಯಕ ಚಡಚಣ ಕ್ಷೇತ್ರದಿಂದ ಬಸವರಾಜ ಸಾವಕಾರ ಅವಿರೋಧ ಆಯ್ಕೆಯಾಗಿದ್ದಾರೆ.
ವಿಜಯಪುರ: ಜಗತ್ತಿನ ಶೇ.80 ರಷ್ಟು ಜನರು ದೃಷ್ಟಿದೋಷದಿಂದ ಬಳಲುತ್ತಿದ್ದಾರೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ನರಗಳ ದೌರ್ಬಲ್ಯ ಕುರುಡುತನಕ್ಕೆ ಕಾರಣವಾಗಬಹುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ್ ಆಸ್ಪತ್ರೆ ನೇತ್ರ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಮುಧೋಳ ಹೇಳಿದ್ದಾರೆ.ಬಿ.ಎಲ್.ಡಿ.ಇ ಡಿಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ್ ವೈದ್ಯಕಿಯ ಕಾಲೆಜು, ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಗ್ಲೊಕೋಮಾ ಕಾಯಿಲೆ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.ಭಾರತದಲ್ಲಿ 4.50 ಮಿಲಿಯನ್ ಮತ್ತು ಜಗತ್ತಿನಲ್ಲಿ 80 ಮಿಲಿಯನ್ ಜನರು ಗ್ಲೊಕೋಮಾ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯನ್ನು ನಿರ್ಲಕ್ಷಿಸದೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಕಣ್ಣಿನ ಪೊರೆ ನಂತರ ನರಗಳ ದೌರ್ಬಲ್ಯದಿಂದ ಕುರುಡರಾಗಬಹುದು. ಗ್ಲೊಕೋಮಾ ಕಾಯಿಲೆ ಹೊಂದಿರುವ ರೋಗಿಗಳಲ್ಲಿ ತಲೆನೋವು, ದೃಷ್ಟಿ ಕ್ಷೀಣಿಸುವುದು ಹಾಗೂ ಕೆಲವರಲ್ಲಿ ಲಕ್ಷಣಗಳು ಕಂಡು ಬರದಿರಬಹುದು. ಈ ಕಾಯಿಲೆಯು 40ವರ್ಷಕ್ಕಿಂತ ಮೇಲ್ಪಟ್ಟ ಜನರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅಧಿಕ ರಕ್ತದೊತ್ತಡ, ಮಧುಮೇಹ ರೊಗಿಗಳಲ್ಲಿ ಹಾಗೂ ದಪ್ಪ ಕನ್ನಡಕವನ್ನು ಬಳಸುವವರಲ್ಲಿ ಹೆಚ್ಚಾಗಿ…
ಅಂಗಾಂಗ ದಾನದ ಕುರಿತು ಜನಜಾಗೃತಿ ಅಗತ್ಯ ಡಾ. ಎಸ್. ಬಿ. ಪಾಟೀಲ ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮೂತ್ರ ಶಾಸ್ತ್ರದ ವಿಭಾಗದ ಮುಖ್ಯಸ್ಥರು, ವಿಜಯಪುರ ಭಾರತದಲ್ಲಿ ಪ್ರತಿವರ್ಷ ಮೂತ್ರಪಿಂಡ ಕಸಿ ಅಗತ್ಯವಿರುವ 2 ಲಕ್ಷ ಹೊಸ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ 250 ಆಸ್ಪತ್ರೆಗಳಲ್ಲಿ ಕೇವಲ 7500 ರೋಗಿಗಳಿಗೆ ಮಾತ್ರ ಮೂತ್ರಪಿಂಡ ಕಸಿ ಸಾಧ್ಯವಾಗುತ್ತಿದೆ. ಅಗತ್ಯಕ್ಕಿಂತ ಕಡಿಮೆ ರೋಗಿಗಳಿಗೆ ಈ ಚಿಕಿತ್ಸೆ ಸಿಗುತ್ತಿರುವುದರಿಂದ ಉಳಿದವರಿಗೆ ಮೂತ್ರಪಿಂಡ ಕಸಿ ಅಥವಾ ನಿಯಮಿತ ಡಯಾಲಿಸಿಸ್ ಸೌಲಭ್ಯವೂ ಸಿಗದ ಕಾರಣ ಈ ರೋಗಿಗಳಲ್ಲಿ ಹೆಚ್ಚಿನವರು 2-3 ವರ್ಷಗಳಲ್ಲಿ ರೋಗಕ್ಕೆ ತುತ್ತಾಗುತ್ತಾರೆ. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳು ಗುಣಮಟ್ಟದ ಜೀವನ ಸಾಗಿಸಲು ಸಾಧ್ಯವಾಗದೇ ಹಲವಾರು ಸವಾಲುಗಳನ್ನು ಎದುರಿಸುತ್ತಾರೆ. ಇದು ರೋಗಿಗಳು ಮತ್ತು ಅವರ ಕುಟುಂಬದ ಮೇಲೆ ಸಾಮಾಜಿಕ, ಭಾವನಾತ್ಮಕ ಮತ್ತು ಆರ್ಥಿಕ ಪರಿಣಾಮವನ್ನು ಬೀರುತ್ತದೆ. ಮೂತ್ರಪಿಂಡದ ವೈಫಲ್ಯದ ರೋಗಿಗಳು ವಾರಕ್ಕೆ 2-3 ಬಾರಿ ಡಯಾಲಿಸಿಸ್ಗೆ ಒಳಗಾಗಬೇಕಾಗುತ್ತದೆ, ಕಟ್ಟುನಿಟ್ಟಾದ ಆಹಾರ ಪದ್ದತಿ ಮತ್ತು ನಿಯಮಿತ ಔಷಧಿ ಪಡೆದುಕೊಂಡು ಜೀವನವನ್ನು ನಡೆಸಬೇಕು.…
ಇಂದು ವಿಶ್ವ ಪೈ ದಿನ ಸಂತೋಷ ಎಸ್ ಬಂಡೆಶಿಕ್ಷಕರು, ನಾಗಠಾಣ – ಸಂತೋಷ ಎಸ್ ಬಂಡೆಶಿಕ್ಷಕರು, ನಾಗಠಾಣ
ವಿಜಯಪುರ: ರಾಜ್ಯ ಸರ್ಕಾರ ಪಠ್ಯಪುಸ್ತಕವನ್ನು ರಾಜಕೀಯಗೊಳಿಸುತ್ತಿರುವುದು ದುರಂತ, ಪಠ್ಯ ಪುಸ್ತಕ ವಿಚಾರದಲ್ಲಿ ಶಿಕ್ಷಣ ಸಚಿವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಗಂಭಿರವಾಗಿ ಆರೋಪಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕ ರಚನೆ ಒಂದು ಸ್ವಾಯುತ್ತ ಸಂಸ್ಥೆ ಅಂದರೆ ಡಿ.ಎಸ್.ಇ.ಆ.ರ್.ಟಿ.ಯಿಂದ ಆಗಬೇಕು, ಸಾರ್ವಜನಿಕ ಚರ್ಚೆಗೆ ಒಳಪಡಬೇಕು, ಆದರೆ ಈಗಿನ ಸರ್ಕಾರ ಮಕ್ಕಳ ಓದಿನಲ್ಲಿಯೂ ರಾಜಕೀಯ ಬೆರೆಸಲು ಹೊರಟಿರುವುದು ದುರಂತ, ಪ್ರಥಮ ಬಾರಿಗೆ ಪಠ್ಯ ಪುಸ್ತಕವನ್ನು ರಾಜಕೀಕರಣಗೊಳಿಸಿದ ಖ್ಯಾತಿ ಕಾಂಗ್ರೆಸ್ ಗೆ ಸಲ್ಲುತ್ತದೆ ಎಂದು ಆಕ್ರೋಶ ಹೊರಹಾಕಿದರು.ಪಠ್ಯ ಪರಿಷ್ಕರಣೆ ಸಮಿತಿ ಶಿಫಾರಸ್ಸಿನ ಮೇರೆಗೆ ಪಠ್ಯ ಪರಿಷ್ಕರಿಸಿ ಬಿಡುಗಡೆಗೊಳಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಆದರೆ, ಪರಿಷ್ಕರಣೆ ಮಾಡುವ ಪಠ್ಯ ಯಾವುದು, ಪರಿಷ್ಕರಿಸಲು ಕಾರಣವೇನು? ಎಂಬುದನ್ನು ಶಿಕ್ಷಣ ಸಚಿವರು ಯಾವ ವಿಷಯವನ್ನು ಸ್ಪಷ್ಟವಾಗಿ ಹೇಳಿಲ್ಲ, ಹೀಗಾಗಿ ಒಂದು ರೀತಿ ಗೊಂದಲದ ಗೂಡಾಗಿ ಪರಿಗಣಿತವಾಗಿದೆ, ಕೂಡಲೇ ಎಲ್ಲ ವಿವರಗಳನ್ನು ಸಮಗ್ರವಾಗಿ ಶಿಕ್ಷಣ ಸಚಿವರು ಬಹಿರಂಗಗೊಳಿಸಬೇಕು ಎಂದರು.ಕೆಲವೇ ಕೆಲವು ವಿಚಾರವಾದಿ ಹಾಗೂ ಎಡಪಂಥಿಯರನ್ನು ಇಟ್ಟುಕೊಂಡು…
ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 38.75 ರಿಂದ ಶೇ. 42.5ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ದಿನಾಂಕ 01/01/2024ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಲಾಗಿದೆ.ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು.…
ಚಡಚಣ: 12 ನೇ ಶತಮಾನದಲ್ಲಿ ಕಾಯಕ ಶೃದ್ಧೆಯ ಮೂಲಕ ಬಾಳಿ ಬದುಕಿದ ಶರಣ ಹರಳಯ್ಯ ಹಾಗೂ ಕಲ್ಯಾಣಮ್ಮ ದಂಪತಿಗಳು. ಇವರ ಆದರ್ಶ ಜೀವನದ ಕಾಯಕ ಶೃದ್ಧೆಯನ್ನು ನಾವೆಲ್ಲರೂ ಜೀವನದುದ್ದಕ್ಕೂ ಅಳವಡಿಸಿಕೊಂಡು ಬದುಕಬೇಕಿದೆ ಎಂದು ಗ್ರಾ.ಪಂ ಅಧ್ಯಕ್ಷ ದಿಲೀಪ ಶಿವಶರಣ ಹೇಳಿದರು.ತಾಲ್ಲೂಕಿನ ದುಳಖೇಡ ಗ್ರಾಮದಲ್ಲಿ ಮಹಾಶಿವಶರಣ ಹರಳಯ್ಯ ಸಮುದಾಯದ ವತಿಯಿಂದ ಸೋಮವಾರದಂದು ಹಮ್ಮಿಕೊಂಡಿದ್ದ, ಮಹಾಶಿವಶರಣ ಹರಳಯ್ಯನವರ ಜಯಂತ್ಯೋತ್ಸವ ನಿಮಿತ್ತ ಹರಳಯ್ಯ ಹಾಗೂ ಕಲ್ಯಾಣಮ್ಮ ದಂಪತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಭವ್ಯ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಹರಳಯ್ಯ ಹಾಗೂ ಕಲ್ಯಾಣಮ್ಮ ದಂಪತಿಗಳು ತಮ್ಮ ತೊಡೆಯ ಚರ್ಮದಿಂದ ವಿಶ್ವಗುರು ಬಸವಣ್ಣನಿಗೆ ಪಾದರಕ್ಷೆ ತಯಾರಿಸಿ ಕೊಟ್ಟ ಶ್ರೇಷ್ಠ ಶರಣ ದಂಪತಿ ಎಂದರು.ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಶರಣ ಹರಳಯ್ಯ ದಂಪತಿಯ ಭಾವಚಿತ್ರದ ಭವ್ಯ ಮೆರವಣಿಗೆ ಡಿಜೆ ಸೌಂಡಿನೊಂದಿಗೆ ಸಮುದಾಯದ ನೂರಾರು ಯುವಕರು, ಹಿರಿಯರ ಸಮ್ಮುಖದಲ್ಲಿ ಸಂಭ್ರಮದಿಂದ ಸಂಚರಿಸಿತು.
ಮಹಿಳಾ ವಿವಿಯ ಪಿ.ಎಚ್.ಡಿ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ ವಿಜಯಪುರ: ಅಕ್ಕಮಹಾದೇವಿ ಮಹಿಲಾ ವಿವಿಯಲ್ಲಿ ಪಿಎಚ್.ಡಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ . ಮಲ್ಲಿಕಾರ್ಜುನ ಎನ್.ಎಲ್ ಇವರ ಮೇಲೆ ಶಿಸ್ತು ಕ್ರಮ ಕೈಗೊಂಡು ನೌಕರಿಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಶ್ರೀಮತಿ ವೀಣಾ ಕುಂದನಗಾರ ಮಾತನಾಡಿ, ಕಳೆದೆರಡು ವಾರಗಳ ಹಿಂದೆ ಪ್ರತಿಷ್ಠಿತ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪಿಎಚ್.ಡಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ವಿಶ್ವವಿದ್ಯಾಲಯದ ಮ್ಯಾನೇಜ್ ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ ಎನ್.ಎಲ್ . ಎಂಬುವವರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿರುತ್ತದೆ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿಯೇ ಏಕೈಕ ಮಹಿಳಾ ವಿಶ್ವವಿದ್ಯಾನಿಲಯವಾಗಿದ್ದು ಸದರಿ ವಿದ್ಯಾನಿಲಯದಲ್ಲಿ ಕಡು ಬಡವ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಅನುಕೂಲಕರವಾಗಿರಲಿ ಹಾಗೂ ಶಿಕ್ಷಣದಿಂದ ವಂಚಿತರಾಗಬಾರದೆಂದು ಮನಗಂಡ ಸರ್ಕಾರಗಳು ಪ್ರತಿಷ್ಠಿತ ವಿಶ್ವವಿದ್ಯಾನಿಲಯವನ್ನು…
