Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಝಳಕಿ: ಸಮೀಪದ ಗುಂದವಾನ ಗ್ರಾಮದ ಗ್ರಾಮ ದೇವತೆ ಗುಪ್ತೇಶ್ವರಿದೇವಿಯ ಜಾತ್ರಾ ಮಹೋತ್ಸವ ಮಾ.15 ರಂದು ಶುಕ್ರವಾರ 8 ಗಂಟೆಗೆ ಕಳಸಾರೋಹಣ ನಂತರ ರಾತ್ರಿ 9 ಗಂಟೆಗೆ ದೇವಿಗೆ ಗಂಧ ಏರಿಸುವುದು, 10 ಗಂಟೆಗೆ ಚಿತ್ರ ವಿಚಿತ್ರ ಮದ್ದು ಸುಡುವುದು, ಅದೇ ದಿವಸ ರಾತ್ರಿ 10:30 ಗಂಟೆಗೆ ಅಪ್ಪಾಜಿ ಮೆಲೋಡಿಸ್ ಹಿರೇಮಸಳಿ ಇವರಿಂದ “ಸರಮಂಜರಿ ಕಾರ್ಯಕ್ರಮ”.ಮಾ.16 ರಂದು ಶನಿವಾರ ಬೆಳಗ್ಗೆ 8 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಹರದೇಶಿ-ನಾಗೇಶಿ ಇವರಿಂದ ಗೀ ಗೀ ಪದಗಳು,ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ದೇವಿಗೆ ನೈವೇದ್ಯ, ರಾತ್ರಿ 10:30 ಗಂಟೆಗೆ ಗಲೀಫ ಏರಿಸುವುದು.ಮಾ. 17 ರಂದು ರವಿವಾರ ರಾತ್ರಿ 10:30 ಗಂಟೆಗೆ ಬಸವೇಶ್ವರ ನಾಟ್ಯ ಸಂಘದಿಂದ ಬಂಡಿಗಣಿ ಇವರಿಂದ ಸುಂದರ ಸಾಮಾಜಿಕ ನಾಟಕ “ದುಡ್ಡು ದಾರಿ ಬಿಡಿಸಿತು ಅರ್ಥಾತ್ ರೈತನ ಕಣ್ಣೀರು” ಜರಗುತ್ತದೆ ಎಂದು ಜಾತ್ರ ಕಮೀಟಿ ಅಧ್ಯಕ್ಷ ಹಣಮಂತ ಖಡೆಖಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಸಿಂದಗಿ: ಜಾನಪದ ಸಂಸ್ಕೃತಿಯ ಮುಖ್ಯ ಶಕ್ತಿಯೇ ಭಾವೈಕ್ಯತೆ. ಜಾನಪದ ಕಲೆಗಳು ಉಳಿಸಿ ಬೆಳೆಸುವ ಕಾಲ ಇಂದು ಕಡಿಮೆಯಾಗುತ್ತಿದೆ. ಜಾನಪದ ಉಳಿದರೆ ಮಾತ್ರ ಬದುಕಿಗೊಂದು ಅರ್ಥ ಬರುತ್ತದೆ ಎಂದು ಹಿರಿಯ ಸಾಹಿತಿ ಬಿ.ಆರ್.ಪೋಲಿಸಪಾಟೀಲ ಹೇಳಿದರು.ಅವರು ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಂಗಳವಾರ ಕನ್ನಡ ಸಂಘದಿಂದ ಹಮ್ಮಿಕೊಂಡ ಕನ್ನಡ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಭಾವೈಕ್ಯತೆ ನಮ್ಮ ರಕ್ತದಲ್ಲಿ ಇದೆ, ಆದರೆ ರಾಜಕೀಯ ವ್ಯವಸ್ಥೆಯಿಂದ ಅದು ದೂರವಾಗುತ್ತಿದೆ. ಎಲ್ಲಿಯವರೆಗೆ ರಾಜಕಾರಣವನ್ನು, ರಾಜಕೀಯ ವ್ಯಕ್ತಿಗಳಿಂದ ಆದಷ್ಟೂ ನಾವೇಲ್ಲರೂ ದೂರವಿರುತ್ತೇವೆ ಅಲ್ಲಿಯವರೆಗೂ ಭಾವೈಕ್ಯತೆ ಜೀವಂತವಾಗಿರುತ್ತದೆ. ಭಗವಂತನು ನೀಡಿದ ಪ್ರಕೃತಿಯನ್ನು ನಾವೂ ಉಳಿಸುವದಿಲ್ಲವೋ ನಮ್ಮ ಪ್ರಕೃತಿಯು ಸರಿಯಾಗಿ ಇರುವುದಕ್ಕೂ ಸಾಧ್ಯವಿಲ್ಲ ಎಂದ ಅವರು ವಿನಯವಿಲ್ಲದ ಶಿಕ್ಷಣ ವ್ಯರ್ಥವಾದ ಶಿಕ್ಷಣ ಶಿಕ್ಷಕರಾಗುವವರು ಮೊದಲು ತಾಯಿಯಾಗಬೇಕು. ಕ್ಷಮಾಗುಣ, ಸಮಾಧಾನ, ಕರುಣಾಮಯಿಯಾದ ಗುಣಗಳನ್ನು ಶಿಕ್ಷಕರಾದವರು ಬೆಳೆಸಿಕೊಳ್ಳಬೇಕು. ಶಿಕ್ಷಕರು ವಿಶೇಷವಾದ ಸೃಜನಾತ್ಮಕವಾದ ಜ್ಞಾನವನ್ನು ಪಡೆದುಕೊಂಡು ಮಕ್ಕಳನ್ನು ಕ್ರೀಯಾಶೀಲರನ್ನಾಗಿ ಮಾಡಬೇಕು ಎಂದರು.ಕಾರ್ಯಕ್ರಮವನ್ನು ಪ್ರೆಸ್ಕ್ಲಬ್…
ಸಿಂದಗಿ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿಯಲ್ಲಿ ನಡೆಯುವ ಬಿ.ಎಸ್.ಡಬ್ಲೂ ಕೋರ್ಸಿನ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ೧೫ನೆಯ ಘಟಿಕೋತ್ಸವದಲ್ಲಿ ಬಿ.ಎಸ್.ಡಬ್ಲೂ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ ಪಡೆದ ಪ್ರಯುಕ್ತ ಸಮಾರಂಭದಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಎಸ್.ಡಬ್ಲೂ ವಿಭಾಗದ ವಿದ್ಯಾರ್ಥಿನಿ ಸುರೇಖಾ ಬಿರಾದಾರ ಚಿನ್ನದ ಪದಕವನ್ನು ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿನಿಯ ನಿರಂತರ ಪರಿಶ್ರಮ, ಕಾಲೇಜಿನ ಉಪನ್ಯಾಸಕರ ಅತ್ಯುತ್ತಮ ಭೋಧನೆ ಪಾಲಕರ ಪ್ರೋತ್ಸಾಹಯಿಂದ ಈ ಚಿನ್ನದ ಪದಕ ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್ನರಾದ ಪೂಜ್ಯ ಶ್ರೀಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪ್ರತಿಕ್ರಿಯಿಸಿ, ವಿದ್ಯಾರ್ಥಿಗೆ ಶುಭ ಹಾರೈಸಿದ್ದಾರೆ.ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕ ಮಂಡಳಿ, ಪ್ರಾಚಾರ್ಯ ಎಸ್.ಎಂ.ಪೂಜಾರಿ, ಪತ್ರಿಕಾ ಪ್ರತಿನಿಧಿ ಮಹಾಂತೇಶ ನೂಲಾನವರ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕೃಷ್ಣೆಯ ದಡದಲ್ಲಿ ನಾಟಕ ರಂಗದ ಕಲರವ | ರಸದೌತಣ ಸವಿದ ಸಭಿಕರು ಆಲಮಟ್ಟಿ: ಅಂಗೈಯಲ್ಲೇ ಎಲ್ಲ ಸ್ತರದ ಮನರಂಜನೆ ಲಭಿಸುತ್ತಿರುವ ಈ ಕಾಲಘಟ್ಟದಲ್ಲಿ ನಾಟಕ ರಂಗಕಲೆ ಪ್ರದರ್ಶನ ಇಂದು ಅಪರೂಪವಾಗುತ್ತಿದೆ ಅಲ್ಲದೇ ನೋಡುಗರು ಸಹ ವಿರಳವಾಗುತ್ತಿದ್ದಾರೆ. ಆದರೆ ಕೃಷ್ಣೆಯ ತಟದಲ್ಲಿ ನಾಟಕ ಪ್ರಿಯ ಸಭಿಕರ ಕೊರತೆ ಇಲ್ಲ ಎಂಬುದಕ್ಕೆ ಈ ಸುಕ್ಷಣವೇ ಸಾಕ್ಷಿ ಎಂದು ಕನಾ೯ಟಕ ರಾಜ್ಯ ಸರಕಾರಿ ನೌಕರರ ಸಂಘದ ಆಲಮಟ್ಟಿ ಯೋಜನಾ ಶಾಖೆಯ ಅಧ್ಯಕ್ಷ ಸದಾಶಿವ ದಳವಾಯಿ ಹೇಳಿದರು. ಇಲ್ಲಿನ ಶ್ರೀ ಅಶ್ವಥ ನಾರಾಯಣ (ಅರಳಿಕಟ್ಟಿ- ನಾಗಪ್ಪನಕಟ್ಟಿ) ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಅಶ್ವಥ ನಾರಾಯಣ ನಾಟ್ಯ ಸಂಘ ಆಲಮಟ್ಟಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಅತ್ತಿಗೆಗೆ ಬಂದ ಅಗ್ನಿ ಪರೀಕ್ಷೆ ” ಅರ್ಥಾತ್ ಬೆಂಕಿಯಲ್ಲಿ ಅರಳಿದ ಹೂವು ಎಂಬ ಸಾಮಾಜಿಕ ನಾಟಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿಂದು ದೇಶಿಯ ಜನತೆ ಪಾಶ್ಚಾತ್ಯ ಸಂಸ್ಕೃತಿಯ ಮೋಹಕ್ಕೆ ಮಾರು ಹೋಗುತ್ತಿದ್ದಾರೆ. ಜಾಗತೀಕರಣದ ಪ್ರಭಾವಳಿಂದ ನಾಟಕ…
ವಿಜಯಪುರ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದ, ರೈತರ ವಸತಿನಿಲಯ ಕಟ್ಟಡದ ಉದ್ಘಾಟನಾ ಸಮಾರಂಭ ಕೃಷಿ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ದಿನಾಂಕ ೧೩-೦೩-೨೦೨೪ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ, ಸು. ಶ್ರೀ ಶೋಭಾ ಕರಂದ್ಲಾಜೆ ನೆರವೇರಿಸುವರು. ಅಧ್ಯಕ್ಷತೆಯನ್ನು ನಾಗಠಾಣ ಮತಕ್ಷೇತ್ರದ, ಶಾಸಕ ವಿಠ್ಠಲ ಧೋಂಡಿಬಾ ಕಟಕಗೊಂಡ ವಹಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ, ಕರ್ನಾಟಕ ಸರಕಾರದ ಮಾನ್ಯ ಕೃಷಿ ಸಚಿವ ಶ್ರೀ ಎನ್. ಚೆಲುವರಾಯಸ್ವಾಮಿ, ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ, ಡಾ. ಎಮ್. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ, ಶಿವಾನಂದ ಎಸ್. ಪಾಟೀಲ, ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು…
ತವರು ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಸಚಿವ ಎಂ ಬಿ ಪಾಟೀಲ ದಾಪುಗಾಲು ಬೆಂಗಳೂರು: ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್ ಮತ್ತು ಸೌರವಿದ್ಯುತ್ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್ ಮತ್ತು ರೆನೈಸಾನ್ಸ್ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಮಂಗಳವಾರ ಇಲ್ಲಿ ಮಾತು ನಡೆಸಿದರು.ಸುಜ್ಲಾನ್ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯ ಸಿಇಒ ಮಿಲಿಂದ್ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು.ಬಳಿಕ ಮಾತನಾಡಿದ ಸಚಿವರು, ʻಸುಜ್ಲಾನ್ ಕಂಪನಿಯು ಪವನ ವಿದ್ಯುತ್ ಕ್ಷೇತ್ರಕ್ಕೆ ಅಗತ್ಯವಿರುವ ೧೬೦ ಮೀಟರ್ ಎತ್ತರದ ಕಂಬಗಳು ಮತ್ತು ೭೦ ಮೀಟರ್ ಉದ್ದದ ಬೃಹತ್ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದ್ದು, ವಿಜಯಪುರದಲ್ಲಿ ಹಂತಹಂತವಾಗಿ ೩೦ ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ. ಮೊದಲ ಹಂತದಲ್ಲಿ ಕಂಪನಿಯು…
ಇಂಡಿ: ಬೀದಿನಾಯಿಗಳು ದಾಳಿ ನಡೆಸಿ ಐದು ಕುರಿಗಳನ್ನು ಸಾಯಿಸಿ, ಮೂರು ಕುರಿಗಳನ್ನು ಗಾಯಗೊಳಿಸಿರುವದರಿಂದ ಕುರಿಗಳನ್ನು ಕಳೆದುಕೊಂಡಿರುವ ಕುರಿಗಾರರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಪಟ್ಟಣದ ಚವಡಿಹಾಳ ರಸ್ತೆಯ ಪಕ್ಕದ ಜಮೀನಿನ ರೈತರು ಒತ್ತಾಯಿಸಿದರು.ದತ್ತು ಹೇಳವರ ಎಂಬುವವರು ತಮ್ಮ ಕುಟುಂಬದ ನಿರ್ವಹಣೆಗಾಗಿ ಕುರಿ ಸಾಕಾಣಿಕೆಯನ್ನೇ ಅವಲಂಬಿಸಿದ್ದಾರೆ. ಇದೀಗ ಬೀದಿ ನಾಯಿಗಳು ಕೃತ್ಯದಿಂದ ಅವರೆಲ್ಲಾ ತಮ್ಮ ಕುರಿಗಳನ್ನು ಕಳೆದುಕೊಂಡು ಆತಂಕಕ್ಕೀಡಾಗಿದ್ದಾರೆ.ಎಂದಿನಂತೆ ದತ್ತು ಹೇಳವರ ಸಮೀಪದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಸುಮಾರು ೫೦ರಿಂದ ೬೦ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ ವೇಳೆಗೆ ನಾಯಿಗಳು ಓಡಿ ಹೋಗಿವೆ. ಆದರೆ ಅಷ್ಟರಲ್ಲಾಗಲೇ ನಾಯಿಗಳು ೫ ಕುರಿಗಳ ಕುತ್ತಿಗೆಗೆ ಕಚ್ಚಿ ರಕ್ತ ಕುಡಿದು ಸಾಯಿಸಿವೆ. ೩ ಕುರಿಗಳು ನಾಯಿಗಳ ದಾಳಿಗೆ ಗಂಭೀರ ಗಾಯಗೊಂಡಿವೆ.ಕುರಿಗಳಿಂದಲೇ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಈ ಘಟನೆಯಿಂದ ನಮ್ಮ ಪರಿಸ್ಥಿತಿ…
ಇಂಡಿ: 2023 -24 ನೇ ಶೈಕ್ಷಣಿಕ ಸಾಲಿನಲ್ಲಿ ಯುಜಿಸಿ ಅನುಮೋದಿತ ವಿವಿಧ ಕೋರ್ಸಗಳಿಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಆನ್ಲೈನ್ ಅರ್ಜಿ ಆಹ್ವಾನಿಸದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಲ್.ಐ.ಸಿ, ಹಾಗೂ ಸ್ನಾತಕೋತ್ತರ, ಸ್ನಾತಕಪೂರ್ವ ಮತ್ತು ಡಿಪ್ಲೋಮಾ ಸರ್ಟಿಫಿಕೆಟ್ ಕೇಟ್ ಕೋರ್ಸ್ಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಮಾಹಿತಿಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕಲಿಕಾರ್ಥಿ ಸಹಾಯ ಕೇಂದ್ರ, ಬೋಳೆಗಾಂವ ರೋಡ, ಸಿದ್ದಲಿಂಗೆಶ್ವರ ಕಾಲೋನಿ, ಇಂಡಿ ಮುಬೈಲ್ ಸಂಖ್ಯೆ : 9731549997, 8495935489 ಸಂಪರ್ಕಿಸಬಹುದು ಎಂದು ಸಂಯೋಕರು ಎಸ್. ಬಿ ಕೆಂಬೋಗಿ ತಿಳಿಸಿದ್ದಾರೆ.
ತಾಳಿಕೋಟಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ ತಾಳಿಕೋಟಿ: ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ದೀನ ದಲಿತ ಹಾಗೂ ವಿಶೇಷವಾಗಿ ಮಹಿಳೆಯರನ್ನು ಸಬಲೀಕರಿಸಿ ಅವರ ಬದುಕಿಗೆ ಶಕ್ತಿಯನ್ನು ತುಂಬಲು ಸಹಕಾರಿಯಾಗಿ ದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡ ಅಪ್ಪಾಜಿ ಹೇಳಿದರು.ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಹಮ್ಮಿಕೊಂಡ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿ ಅವರು ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ಅಭಿವೃದ್ಧಿಯ ಕಾರ್ಯಗಳು ನಡೆಯುತ್ತಲೇ ಇವೆ. ಅವರ ಮಾತುಗಳನ್ನು ನಂಬಬೇಡಿ. ಬರಲಿರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀವು ಅವರಿಗೆ ಕೊಡಬೇಕು ಎಂದರು.ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ರಾಜು ಆಲಗೂರ ಮಾತನಾಡಿದರು.ಪಕ್ಷದ ಮುಖಂಡರಾದ…
ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಮಾ. ೧೪ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕು ಶಾಖೆಯು ಸಂಘದ ೨೦೨೩-೨೪ ನೇ ಸಾಲಿನ ವಾರ್ಷಿಕೋತ್ಸವ ಮತ್ತು ೭೫ ವರ್ಷ ತುಂಬಿ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದೆ. ಸಾನಿಧ್ಯವನ್ನು ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕಾಧ್ಯಕ್ಷ ಎಫ್.ಡಿ.ಮೇಟಿ ವಹಿಸುವರು. ಡಿಸಿಸಿ ಬ್ಯಾಂಕಿನ ನಿರ್ದೇಶಕಿ ಸಂಯುಕ್ತಾ ಪಾಟೀಲ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ರಾಜ್ಯ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಪಿ.ಬಿರಾದಾರ, ತಹಸೀಲ್ದಾರ ಯಮನಪ್ಪ ಸೋಮನಕಟ್ಟಿ ಆಗಮಿಸುವರು. ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ೭೫ ವರ್ಷ ತುಂಬಿದ ನಿವೃತ್ತ ನೌಕರ ಬಾಂಧವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ತಾಲೂಕು ಕಾರ್ಯದರ್ಶಿ ಎಸ್.ಕೆ.ಸೋಮನಕಟ್ಟಿ ತಿಳಿಸಿದ್ದಾರೆ.
