Author: editor.udayarashmi@gmail.com

ತಾಳಿಕೋಟಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ ಅಪ್ಪಾಜಿ ಅವರು ಸುಮಾರು 17.36 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ತಾಳಿಕೋಟಿ ತಾಲೂಕಿನ ವ್ಯಾಪ್ತಿಗೆ ಬರುವ ತಾಳಿಕೋಟಿ- ಹಡಗಿನಾಳ ರೂ. 5 ಕೋಟಿ ಮೊತ್ತದ ಮುಖ್ಯ ಸಂಪರ್ಕ ರಸ್ತೆ. ತಾಳಿಕೋಟಿ ಮೂಕಿಹಾಳ ಮುಖ್ಯ ರಸ್ತೆಯಿಂದ ಹಳೆ ಹಡಗಿನಾಳ ಗ್ರಾಮಕ್ಕೆಕೂಡು ರಸ್ತೆರೂ. 2.25 ಕೋಟಿ. ಪಟ್ಟಣದ ದೇವರ ಹಿಪ್ಪರಗಿ ರಸ್ತೆಯ ರಾಜ್ಯ ಹೆದ್ದಾರಿ 124 ಬಾರಖೇಡ ಬೀಳಗಿ ಮೊತ್ತ ರೂ. 5 ಕೋಟಿಯ ದ್ವಿಪಥ ರಸ್ತೆ. ಪಟ್ಟಣದ ಎಪಿಎಂಸಿ ಪ್ರಾಂಗಣ ರಸ್ತೆ ಅಭಿವೃದ್ಧಿ ರೂ.2 ಕೋಟಿ. ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪಟ್ಟಣದ ಮಿಲ್ಲತ್ ಹಾಗೂ ಟಿಪ್ಪು ನಗರದಲ್ಲಿ ರೂ. 1.50 ಕೋಟಿ ಮೊತ್ತದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಹಾಗೂ ಪಟ್ಟಣದಲ್ಲಿ ನಿರ್ಮಾಣಗೊಳ್ಳಲಿರುವ ಇಂದಿರಾ ಕ್ಯಾಂಟೀನಗೆ ಭೂಮಿ ಪೂಜೆಯನ್ನು ಅವರು ನೆರವೇರಿಸಿದರು.ಈ…

Read More

ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧರಾಮೇಶ್ವರ ಪಾದಯಾತ್ರಾ ಕಮೀಟಿ-೨೦೨೪ ವತಿಯಿಂದ ಮಾ.೨೪ ರಂದು ರಾತ್ರಿ ೮ ಗಂಟೆಗೆ ಸಿದ್ದೇಶ್ವರ ಉತ್ಸವ ಮೂರ್ತಿ ಮತ್ತು ಕಂಬಿ ಜೊತೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಶ್ರೀಶೈಲಕ್ಕೆ ಪಾದಯಾತ್ರೆ ೨೧ನೇ ವರ್ಷದ ಪಾದಯಾತ್ರೆ ಆರಂಭಗೊಳ್ಳಲಿದೆ.ನಿರಂತರ ೧೫ ದಿನಗಳ ಕಾಲ ನಡೆಯುವ ಪಾದಯಾತ್ರೆ ಏ.೬ ರಂದು ಶ್ರೀಶೈಲ ತಲುಪಲಿದೆ. ಅಂದು ಸಂಜೆ ೪ ಗಂಟೆಗೆ ಅಡಕೇಶ್ವರ ದೇವಸ್ಥಾನದಿಂದ ಶ್ರೀಶೈಲ ಮಲ್ಲಯ್ಯನ ಸನ್ನಿಧಿವರೆಗೆ ಕಂಬಿ, ನಂದಿಕೋಲ ಹಾಗೂ ಮುತೈದೆಯರಿಂದ ೧೦೮ ಕುಂಭ ಮೆರವಣಿಗೆ ಜರುಗುವುದು.ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿಚಾರ್ಯರು ಕುಂಬಮೇಳ ಮೆರವಣಿಗೆ, ಸಗರ ಒಕ್ಕಲಗೇರ ಹಿರೇಮಠದ ಮರಳಮಹಾಂತ ಶಿವಾಚಾರ್ಯರು ಚಾಲನೆ ನೀಡಲಿದ್ದು, ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಪ್ರಧಾನ ಅರ್ಚಕ ಈರಯ್ಯ ಹಿರೇಮಠ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ಪಾಟೀಲ ಚಿಮ್ಮಲಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಸಫಾಯಿ ಕರ್ಮಚಾರಿ ರಾಷ್ಟ್ರೀಯ ಆಯೋಗದ ಸದಸ್ಯರಾದ ಡಾ.ಪಿ.ಪಿ.ವಾವಾ ಅವರು ಮಾ.೧೩ರಿಂದ ೧೪ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಮಾ.೧೩ರಂದು ಸಂಜೆ ೬ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಮಾ.೧೪ ರಂದು ಮಧ್ಯಾಹ್ನ ೧೨ ಗಂಟೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ ೪ ಗಂಟೆಗೆ ವಿಜಯಪುರದಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಜಿಲ್ಲೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ (ತಿದ್ದುಪಡಿ) ವಿಧೇಯಕ ೨೦೨೪ರನ್ವಯ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಭಾಷಾ ಬಳಕೆ ಅನುಷ್ಠಾನ ಕುರಿತಂತೆ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೆಯಕ-೨೦೨೨ನ್ನು ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಹಾಗೂ ಕನ್ನಡ ಭಾಷೆ ಸಮಗ್ರ ಅಭಿವೃದ್ದಿ (ತಿದ್ದುಪಡಿ) ವಿಧೇಯಕ ೨೦೨೪ರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಾಲೂಕಾ ಮಟ್ಟದಲ್ಲಿ ಕನ್ನಡ ಭಾಷೆ ಸಮಗ್ರ ಅಭಿವೃದ್ದಿ ಹಾಗೂ ಅನುಷ್ಠಾನಕ್ಕಾಗಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಸೇರಿದಂತೆ ತಾಲೂಕಿನ ಎಲ್ಲ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸಮಿತಿ ಸದಸ್ಯರಾಗಿದ್ದು, ತಾಲೂಕಿನ ತಹಶೀಲ್ದಾರರು ಸಂಚಾಲಕರಾಗಿರುತ್ತಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ವಾಣಿಜ್ಯ…

Read More

ವಿಜಯಪುರ: ಒಂದು ನಿಲ್ಧಾಣ ಒಂದು ಉತ್ಪನ್ನ ವಿಜಯಪುರ ರೈಲ್ವೆ ನಿಲ್ಧಾಣದಲ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಯನ್ನು ಪ್ರಮಖ ಬೆಳೆಯನ್ನಾಗಿ ಗುರುತಿಸಿ ಮಾರಾಟದಿಂದ ಜಿಲ್ಲೆಯ ಅಭಿವೃದ್ಧಿ ಮತ್ತು ಔದ್ಯೋಗಿಕರಣಕ್ಕೆ ಸಹಕಾರಿಯಾಗಲಿದೆ ಎಂದು ಸಂಸದ ರಮೇಶ ಚ. ಜಿಗಜಿಣಗಿ ಹೇಳಿದರು.  ಮಂಗಳವಾರ ನಗರದ ರೈಲು ನಿಲ್ದಾಣದ ಆವರಣದಲ್ಲಿ ಆಯೋಜಿಸಿದ ಪ್ರಧಾನ ಮಂತ್ರಿಗಳು ೮೫೦೦೦ ಕೋಟಿ ರೂಗಳ ವಿವಿಧ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ೧೦ ವಂದೇ ಭಾರತ್ ಎಕ್ಸಪ್ರೆಸ್‌ಗಳ ರೈಲುಗಳಿಗೆ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸುವುದರೊಂದಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ದೇಶದ ಸುಮಾರು ೨೧ ರಾಜ್ಯಗಳಲ್ಲಿ ಒಂದು ನಿಲ್ಧಾಣ ಒಂದು ಉತ್ಪನ್ನದಿಂದ ಸ್ಥಳೀಯ ರೈತರು ಬೆಳೆದ ಉತ್ಪನ್ನಗಳನ್ನು ಸ್ಥಳೀಯ ರೈಲು ನಿಲ್ದಾಣಗಳಲ್ಲಿ ಮಾರಾಟ ಮಾಡುವುದರೊಂದಿಗೆ ರೈತರಿಗೆ ಉತ್ತೇಜನ ದೊರೆತು, ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಔದ್ಯೋಗಿಕರಣಕ್ಕೆ ಹೆಚ್ಚು ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ದ್ರಾಕ್ಷಿ ಬೆಳೆಯುತ್ತಿದ್ದು, ಜಿಲ್ಲೆಯ ರೈತರ ಆದಾಯ ಕೂಡ ವೃದ್ಧಿಯಾಗಲಿದೆ ಎಂದು ಹೇಳಿದರು.ನೈರುತ್ಯ ರೈಲ್ವೇ ಹುಬ್ಬಳ್ಳಿ ವಿಭಾಗದಲ್ಲಿ ಎಸ್.ಎಸ್.ಎಸ್ ಹುಬ್ಬಳ್ಳಿ,…

Read More

ಬಸವನಬಾಗೇವಾಡಿ ತಾಲ್ಲೂಕಿನ ಟಕ್ಕಳಕಿ ಶಾಖಾ ಕಾಲುವೆಯ ಬಾಕಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ ಆಲಮಟ್ಟಿ: ಬಸವನಬಾಗೇವಾಡಿ ತಾಲ್ಲೂಕಿನ ಟಕ್ಕಳಕಿ ಶಾಖಾ ಕಾಲುವೆಯ ಬಾಕಿ ಕಾಮಗಾರಿ ಪೂರ್ಣಗೊಳಿಸಿ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.ರಾಮಲಿಂಗೇಶ್ವರ ದೇವಸ್ಥಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಅಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ, ಟಕ್ಕಳಕಿ ಶಾಖಾ ಕಾಲುವೆಯ ಅಲ್ವಸ್ವಲ್ಪ ಕಾಮಗಾರಿ ಕಳೆದ ಹಲವಾರು ತಿಂಗಳಿಂದ ಬಾಕಿಯಿದೆ. ಇದರಿಂದ ಬೇಸಿಗೆಯಲ್ಲಿ ಆ ಭಾಗದ ಕೆರೆಗಳ ಭರ್ತಿ, ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಯಾವುದೇ ಅಧಿಕಾರಿ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ಕಲ್ಲು ಸೊನ್ನದ ಮಾತನಾಡಿ, ಅಲ್ಪ ಸ್ವಲ್ಪ ಕಾಮಗಾರಿ ಪೂರ್ಣಗೊಳಿಸಲು ಇರುವ ತೊಂದರೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು, ಇಲ್ಲದಿದ್ದರೇ ಕಚೇರಿಗೆ ಬೀಗ ಜಡಿದು ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ಸ್ಥಳಕ್ಕೆ ಆಗಮಿಸಿದ ಸೂಪರಿಂಟೆಂಡಿಂಗ್ ಎಂಜಿನಿಯರ್ ಗೋವಿಂದ…

Read More

’ವೀಣಾಂತರಂಗ’- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಈ ಜೀವನ ಒಂದು ನಿರಂತರ ಪಯಣ. ಬದುಕಿನ ಈ ಪಯಣ ಏಕಮುಖಿಯಾಗಿದ್ದು ಹಿಂದಿರುಗಿ ಹೋಗುವ ಪ್ರಶ್ನೆಯೇ ಇಲ್ಲ.. ಮುಂದೆ ಮುಂದೆ ಸಾಗುತ್ತಲೇ ಇರಬೇಕು. ಆದರೂ ಬದುಕಿನ ಕೆಲ ಸವಿ ಘಳಿಗೆಗಳ ನೆನಪಿನ ಬುತ್ತಿ ಕಟ್ಟಿಕೊಂಡು ಹೊರಡುವ ಈ ಪಯಣದಲ್ಲಿ ಬಾಲ್ಯ, ಯೌವ್ವನ, ವಿದ್ಯಾಭ್ಯಾಸ, ಉದ್ಯೋಗ, ಮದುವೆ, ಮಕ್ಕಳು, ಪಾಲನೆಯ ಜವಾಬ್ದಾರಿ, ಮಧ್ಯವಯಸ್ಸು ವೃದ್ಧಾಪ್ಯ ಹೀಗೆ ಹತ್ತು ಹಲವು ತಂಗುದಾಣಗಳಲ್ಲಿ ನಿಂತು ಜೊತೆಗೂಡುವ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಾ, ಪಯಣ ಮುಗಿಸಿದ ಜೊತೆಗಾರರನ್ನು ಬೀಳ್ಕೊಡುತ್ತ ಸಾಗುವುದೇ ಬದುಕು. ಆದ್ದರಿಂದಲೇ ಡಿವಿ ಗುಂಡಪ್ಪನವರು ತಮ್ಮ ಮಂಕುತಿಮ್ಮನ ಕಗ್ಗದಲ್ಲಿಬದುಕು ಜಟಕಾ ಬಂಡಿ, ವಿಧಿ ಅದರ ಸಾಹೇಬಕುದುರೆ ನೀನ್ ಅವನು ಪೇಳ್ದಂತೆ ಪಯಣಿಗರುಮದುವೆಗೂ ಮಸಣಕೋ ಹೋಗೆಂದ ಕಡೆಗೋಡುಪದ ಕುಸಿಯೇ ನೆಲವಿಹುದು ಮಂಕುತಿಮ್ಮಎಂದು ಹೇಳಿದ್ದಾರೆ. ಇದರ ತಾತ್ಪರ್ಯ ಬದುಕು ಎಂಬ ಜಟಕಾ ಬಂಡಿಯನ್ನು ಕವಿ ಹೇಳುವ ಸೊ ಕಾಲ್ಡ್ ವಿಧಿ ಇಲ್ಲವೇ ದೇವರು ನಡೆಸುತ್ತಾನೆ. ಮನುಷ್ಯ ಕೇವಲ ನಿಮಿತ್ತ ಮಾತ್ರವಾದ ಕುದುರೆಯಂತೆ. ಆ…

Read More

ಚಡಚಣ: ಮಾ.24ರಂದು ವಿಜಯಪುರ -ಬಾಗಲಕೋಟ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಜರುಗಲಿರುವ ಚುನಾವಣೆಗೆ ಚಡಚಣ -ಇಂಡಿ ತಾಲೂಕಿನ ಎರಡು ಸ್ಥಾನಗಳಿಗೆ ತಾಲೂಕಿನ ಸಂತೋಷಕುಮಾರ ಪಾಟೀಲ ಮಂಗಳವಾರ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಸುವ ಮುಂಚೆ ನಡೆದ ಸಭೆಯಲ್ಲಿ ಮುಖಂಡ ಎಂ ಆರ್ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನಪರ ಪಂಚ ಯೋಜನೆಗಳು ಜಾರಿಯಾಗಿದ್ದರಿಂದ ಜನಪರ ಸರಕಾರಕ್ಕೆ ಜನರ ಬೆಂಬಲವಿದೆ. ಆದ್ದರಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಂತೋಷಕುಮಾರ ಅವರನ್ನು ಅತೀ ಹೆಚ್ಚು ಮತಗಳು ಹಾಕುವದರ ಮೂಲಕ ಜಯಶಾಲಿಯಾಗುವಂತೆ ಶ್ರಮಿಸಬೇಕು ಎಂದರು.ಅಭ್ಯರ್ಥಿ ಸಂತೋಷಕುಮಾರ ಮಾತನಾಡಿ, ತಾಲ್ಲೂಕಿನ ರೈತರ ಪರವಾಗಿ ಹಾಗೂ ಹಾಲು ಉತ್ಪಾದಕರ ಸಂಘದ ಪರವಾಗಿ ತಮ್ಮ ಬೆಂಬಲಕ್ಕೆ ಯಾವುತ್ತು ಇರುತ್ತೇನೆ. ನನ್ನ ಗೆಲುವಿಗೆ ತಮ್ಮ ಅಮೂಲ್ಯ ಮತ ಅವಶ್ಯಕತೆ ಇದೆ ಆದಕಾರಣ ತಾವುಗಳು ನನ್ನನ್ನು ಬೆಂಬಲಿಸಿ ಅತೀ ಹೆಚ್ಚು ಮತಗಳ ಮೂಲಕ ನನ್ನನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ತಾ ಪಂ ಮಾಜಿ ಸದಸ್ಯ ಸಾಹೇಬಗೌಡ ಬಿರಾದಾರ, ಕಾಮೇಶ ಪಾಟೀಲ,…

Read More

ಇಂಡಿ: ಮಹಿಳೆಯರು ಕುಟುಂಬ ಮತ್ತು ಸಮುದಾಯಗಳ ಬೆನ್ನೆಲುಬು. ತಮ್ಮ ಕುಟುಂಬಗಳಿಗೆ ಕಾಳಜಿ, ಬೆಂಬಲ ಮತ್ತು ಪೋಷಣೆಯನ್ನು ಒದಗಿಸಿ, ಮಕ್ಕಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಅವರಪಾತ್ರ ಅನನ್ಯ ಎಂದು ಅರಕೇರಿ ಅಲ್ಪಸಂಖ್ಯಾತ ಶಿಕ್ಷಣ ಇಲಾಖೆಯ ಪ್ರಾಚಾರ್ಯ ರೇಖಾ ಬಾರ್ಕಿ ಹೇಳಿದರು.ಅವರು ನಗರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಹೆಣ್ಣು ಮಕ್ಕಳು ಶಿಕ್ಷಣವನ್ನು ಮೊಟಕುಗೊಳಿಸಬಾರದು. ವಿಶ್ವದಲ್ಲಿಯೇ ವಿಶಿಷ್ಟ ಸಂಸ್ಕೃತಿ, ಸಂಪ್ರದಾಯ, ಪರಂಪರೆ ಮತ್ತು ಆಚರಣೆ ಹೊಂದಿರುವ ಭಾರತೀಯ ಸಾಂಸ್ಕೃತಿಕ ವೈಭವವನ್ನು ಇಂದಿನ ಯುವ ಮಹಿಳಾ ಪೀಳಿಗೆಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ.ಎಸ್ ಟಿ ಬೋಳರೆಡ್ಡಿ ಮಾತನಾಡಿ, ಮಹಿಳೆಯರು ಮನೆಯ ನಾಲ್ಕು ಕೋಣೆಗೆ ಸೀಮಿತರಾಗದೇ, ಶಿಕ್ಷಣ ಮತ್ತು ಸಮಾಜಮುಖಿ ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕಲ್ಪಿಸಿ, ಉಜ್ವಲ ಭವಿಷ್ಯ ರೂಪಿಸಬೇಕು ಎಂದು ಹೇಳಿದರು.ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹನ್ನೊಂದು ಮಹಿಳೆಯರಿಗೆ ಸನ್ಮಾನಿಸಲಾಯಿತು. ಅಕ್ಕುಬಾಯಿ ನಾಯಕ-ಅಧ್ಯಕ್ಷರು ಕರ್ನಾಟಕ…

Read More

ವಿಜಯಪುರ: ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಸಬಲರಾಗುತ್ತಿದ್ದಾರೆ ಎಂದು ವಿಜಯಪುರ ಉಪವಿಭಾಗಾಧಿಕಾರಿ ಶ್ವೇತಾ ಎಂ. ಬೀಡಕರ ಹೇಳಿದ್ದಾರೆ.ತಿಕೋಟಾ ಪಟ್ಟಣದ ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನಲ್ಲಿ ಇಂದು ಸೋಮವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇಂದು ಪೋಷಕರೂ ಕೂಡ ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಯುವತಿಯರೂ ಕೂಡ ತಾವು ಎಲ್ಲ ಕ್ಷೇತ್ರಗಳಲ್ಲಿ ಸ್ವಾವಲಂಬಿಗಳಾಬಹುದು ಎಂದು ಅರ್ಥೈಸಿಕೊಂಡು ಈಗ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಅವರಿಗೆ ಆಸಕ್ತವಾಗಿರುವ ವಿಷಯಗಳಲ್ಲಿ ಅಧ್ಯಯನ, ಸಾಧನೆ ಮಾಡಲು ಎಲ್ಲರೂ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.ಇದೇ ವೇಳೆ ಅವರು ನಾನಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ಮತ್ತು ಮಹಿಳಾ ಅಧ್ಯಾಪರಕರಿಗೆ ಸ್ಮರಣ ಸಂಚಿಕೆ ನೀಡಿ ಗೌರವಿಸಿದರು.ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪುರ ಮಾತನಾಡಿದರು.ಸಹಾಯಕ ಪ್ರಾಧ್ಯಾಪಕಿ ಬಸಲಿಂಗಮ್ಮ ಹಯ್ಯಾಳ ವಿಶ್ವ ಮಹಿಳಾ ದಿನಾಚರಣೆಯ ವಿಷಯದ ಕುರಿತು ವಿವರಿಸಿದರು,ಈ ಸಂದರ್ಭದಲ್ಲಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಆಕಾಶ ಜಾಧವ,…

Read More