Author: editor.udayarashmi@gmail.com

ಈ ವರ್ತನೆ ದೇಶಕ್ಕೆ ಒಳ್ಳೆಯದಲ್ಲ | ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಭಿಮತ ಬೆಂಗಳೂರು: ವೋಟಿಗಾಗಿ ಮತಾಂಧರರ ಮೇಲೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ತೋರುವುದು ದೇಶಕ್ಕೆ ಒಳ್ಳೆಯದಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲಿರುವ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವ ವೀಡಿಯೋ ಹೇಗೆ ಸೋರಿಕೆಯಾಯಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದೆಯೇ ವಿನಃ ಅವರಿಗೆ ಫೋನ್ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿಲ್ಲ ಎಂದು ಟೀಕಿಸಿದ್ದಾರೆ.ಈ ಘಟನೆಯ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಭಯೋತ್ಪಾದಕ ಶಂಕಿತ ಯಾರೊಂದಿಗೆ ಮಾತನಾಡುತ್ತಿದ್ದಾನೆ ಎಂಬುದನ್ನು ತನಿಖೆ ಮಾಡುವ ಬದಲು, ವೀಡಿಯೊ ಸೋರಿಕೆ ಮಾಡಿದವರನ್ನು ಪರಿಶೀಲಿಸಲು ಗೃಹ ಸಚಿವ ಪರಮೇಶ್ವರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಕೆಲವು ಮುಸ್ಲಿಂ ಮತಗಳಿಗಾಗಿ, ರಾಜ್ಯ ಸರ್ಕಾರವು ರಾಷ್ಟ್ರದ ಸುರಕ್ಷತೆಯನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಆರೋಪಿಸಿದ್ದಾರೆ. ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಇದೇ ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಿಜಯಪುರದ ಡಾ ಬಿ.ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಜಯಪುರ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಅಕೀಲಮ್ಮದ ಉಪ್ಪಲದಿನ್ನಿ ಭಾಗವಹಿಸಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಅದೇ ರೀತಿ ದಾನಮ್ಮ ಕರಿಗಾರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾಳೆ. ಇವರಿರ್ವರ ಸಾಧನೆಯನ್ನು ಕಂಡು ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಿ.ಯು. ಗಿಡ್ಡಪ್ಪಗೋಳ, ಕಾರ್ಯದರ್ಶಿ ಎಸ್.ಬಿ. ಪತಂಗಿ ಹಾಗೂ ನಿರ್ದೇಶಕರಾದ ವಿನೀತ ದೇಸಾಯಿ, ಎನ್.ಕೆ. ಮೇಲಗಿರಿ, ಎಸ್.ಜಿ. ಗಿಡ್ಡಪ್ಪಗೋಳ, ಎಸ್‌.ಸಿ. ಕುಂಬಾರ, ಸಿ.ಎಸ್. ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಎಸ್.ಎಂ ಶೀಲವಂತ ಮತ್ತು ಶಾಲೆಯ ಮುಖ್ಯ ಶಿಕ್ಷಕ ರಾಜಶೇಖರ ಉಮರಾಣಿ, ದೈಹಿಕ ಶಿಕ್ಷಕಿ ಧನಶ್ರೀ ಭಾರಸ್ಕಳ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Read More

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ಅಲ್ಪ ಸಂಖ್ಯಾತರ ಶಾಲೆಗಳ ಅಭಿವೃದ್ಧಿ, ಮೂಲಭೂತ ಸೌಕರ್ಯ ಹಾಗೂ ಶಿಕ್ಷಣ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ಗುರುವಾರ ಜಿಲ್ಲಾಧಿಕಾರಿಗ ಸಭಾಂಗಣದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿರುವ ಕುರಿತು ಪರಶೀಲನಾ ಸಮಿತಿಯ ದ್ವೀತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಕೊಲ್ಹಾರ ಹಾಗೂ ಸಿಂದಗಿಯ ಉರ್ದು ಶಾಲೆಗಳಲ್ಲಿ ಶಾಲಾ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಮನೆ ಮನೆಗೆ ಭೇಟಿ ನೀಡಿ ಪಾಲಕರ ಮನವೊಲಿಸಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು. ಮಕ್ಕಳ ದಾಖಲಾತಿ ಕುರಿತು ಆಯಾ ಸ್ಥಳಗಳಲ್ಲಿ ವ್ಯಾಪಕವಾಗಿ ಪ್ರಚಾರ ಕೈಗೊಳ್ಳಬೇಕು. ಶಿಕ್ಷಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಹಾಗೂ ಶಿಕ್ಷಣ ಮಟ್ಟ ಸುಧಾರಿಸಲು ಅಗತ್ಯ ಸಹಯೋಗ ಪಡೆದುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ನಾವೆಲ್ಲರೂ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನ.8 ಮತ್ತು 9 ರಂದು ವಿಜಯಪುರ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಶಿಯೇಶನ ಹಾಗೂ ಸ್ಥಳೀಯ ಬಸವ ಸ್ಪೋರ್ಟ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಎರಡು ದಿನದ ಬಾಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಜರುಗಿತು.ತರಬೇತಿ ನೀಡಲು ಆಗಮಿಸಿದ್ದ ಕೊಪ್ಪಳದ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರ ಈಶ್ವರ ಬೊಮ್ಮನಾಳ, ಬೆಂಗಳೂರಿನ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರ ಚಂದ್ರಶೇಖರ್ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರ ಈರಣ್ಣ ಅವಟಿ ಶಿಬಿರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಈಶ್ವರ ಬೊಮ್ಮನಾಳ ಮಾತನಾಡಿ, ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು. ಬೆಳೆಯುವ ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಪೂರಕವಾಗಿದೆ. ಉತ್ತಮ ಕ್ರೀಡಾಪಟುಗಳಾಗಲು ತರಬೇತಿ ಅಗತ್ಯ ಎಂದರು.ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಆಟಗಾರರಾದ ಈರಣ್ಣ ಅವಟಿ ಸ್ಥಳೀಯ ಆಟಗಾರ ವಿನಾಯಕ ಬಿ ಇತರರು ಇದ್ದರು.ಶಿಬಿರದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ 40 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 2…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಾತು ವ್ಯಕ್ತಿಯನ್ನು ಮನುಷ್ಯನ್ನಾಗಿ ನಿರ್ಮಾಣ ಮಾಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂದರ್ಭವರಿತು ಸೂಕ್ಷ್ಮವಾಗಿ ಮಾತನಾಡಿದರೆ ಆ ಮಾತಿಗೆ ತೂಕ ಬರುತ್ತದೆ. ಇದರಿಂದ ಅವನು ಎಲ್ಲರ ಗೌರವಕ್ಕೆ ಪಾತ್ರನಾಗುತ್ತಾನೆಂದು ಬಿ.ಎಲ್.ಡಿ.ಇ. ಸಂಸ್ಥೆಯ ಪದವಿ ವಿಭಾಗದ ಆಡಳಿತಾಧಿಕಾರಿ ಪ್ರೊ. ವಿ.ಎಸ್.ಬಗಲಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ.ಇಂಗ್ಲೀಷ ಹಾಗೂ ಹಿಂದಿ ವಿಭಾಗಗಳ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪದಗಳ ಶಕ್ತಿಃ ತಮ್ಮನ್ನು ಅಭಿವ್ಯಕ್ತ ಪಡಿಸುವ ಕಲೆ ಎಂಬ ವಿಷಯದ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಂದರ್ಭ ನೋಡಿಕೊಂಡು ಮಾತು ಆಡಬೇಕು. ಪ್ರತಿಯೊಬ್ಬರೂ ಮಾತಿನ ಕಲೆ ರೂಢಿಸಿಕೊಳ್ಳಬೇಕು. ಮಾತೇ ಮುತ್ತು, ಮಾತೇ ಮೃತ್ಯು ಎಂಬುವದನ್ನು ಅರಿತುಕೊಂಡು ಮಾತನಾಡಬೇಕೆಂದರು.ಇಂಗ್ಲೀಷ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಶ ಎಚ್.ಆರ್. ಮಾತನಾಡಿ, ಯಾವುದೇ ಒಂದು ಭಾಷೆಯು ಬಹುಕಾಲದವರೆಗೆ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡು ಗಟ್ಟಿಯಾಗಿ ಉಳಿಯಬೇಕಾದರೆ ಭಾಷೆಯಲ್ಲಿ ಸ್ಪಷ್ಟತೆ, ಸಂಕ್ಷಿಪ್ತತೆ ಹಾಗೂ ಸಂದರ್ಭದ ಮಹತ್ವವನ್ನು ಒಳಗೊಂಡಿರಬೇಕು. ನಾವು ನಮ್ಮ ಸಾರ್ವತ್ರಿಕ…

Read More

ಕುದರಿಸಾಲವಾಡಗಿಯಲ್ಲಿ ಕಳೆದ ೩೧ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ತೆರವು ಗೊಳಿಸಿದ 143 ಕ್ಕೂ ಹೆಚ್ಚು ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಖಂಡ ಅಶೋಕಗೌಡ ಪಾಟೀಲ ಅವರ ನೇತೃತ್ವದಲ್ಲಿ ಪಟ್ಟಣದ ಮಿನಿವಿಧಾನಸೌಧದ ಮುಂಭಾಗ ಕಳೆದ ಮೂವತ್ತೊಂದು ದಿನಗಳಿಂದ ನಿರಾಶ್ರಿತರು ನಡೆಸುತ್ತಿದ್ದ ಧರಣಿ ಸತ್ಯಾಗ್ರಹ, ಅಹೋರಾತ್ರಿ ಧರಣಿ ಗುರುವಾರ ಸಂಜೆ ಲೋಕೋಪಯೋಗಿ ಇಲಾಖೆಯ ಇಇ ಸಿ.ಎಸ್.ಪೊಲೀಸಪಾಟೀಲ, ತಾಪಂ ಇಓ ಪ್ರಕಾಶ ದೇಸಾಯಿ ಅವರು ನೀಡಿದ ಭರವಸೆ ಮೇರೆಗೆ ಧರಣಿ ನೇತೃತ್ವ ವಹಿಸಿದ್ದ ಮುಖಂಡರು, ನಿರಾಶ್ರಿತರು ತಮ್ಮ ಧರಣಿಯನ್ನು ಹಿಂಪಡೆದುಕೊಂಡರು.ಕಳೆದ 9 ದಿನಗಳಿಂದ ಧರಣಿ ನಿರತರು ಅಹೋರಾತ್ರಿ ಆರಂಭ ಮಾಡಿದ್ದರು.ಧರಣಿ ಸ್ಥಳಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸಪಾಟೀಲ ಅವರು ನಿರಾಶ್ರಿತರನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಜಿಲ್ಲಾ ಮುಖ್ಯರಸ್ತೆ ನಿರ್ಮಾಣ ಕಾಮಗಾರಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಾತಿ. ಮತ,ಪಂಥ ಭಾಷೆ ಎನ್ನದೆ ಮಸಬಿನಾಳ ಗ್ರಾಮದ ಗೌರಿಶಂಕರ ಜಾತ್ರೆಯಲ್ಲಿ ಪಾಲ್ಗೊಂಡಿದ್ದು ಶ್ಲಾಘನೀಯ. ಈ ಜಾತ್ರೆಯಲ್ಲಿ ಸವ೯ಧಮಿ೯ಯ ಭಕ್ತರು ಭಾಗವಹಿಸುವುದು ವಿಶೇಷ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕಿನ ಮಸಬಿನಾಳ ಗ್ರಾಮದ ಗೌರಿಶಂಕರ ಜಾತ್ರೆಯಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಸವ೯ಧಮ೯ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧಮ೯ಗಳು ಮಾನವೀಯ ಮೌಲ್ಯ ಕಾಪಾಡಿವೆ. 20 ದಿನಗಳ ಕಾಲ ಜಾತ್ರೆಯಂಗವಾಗಿ ಯಡಿಯೂರ ಸಿದ್ಧಲಿಂಗೇಶ್ವರ ಜೀವನ ಚರಿತ್ರೆ ಪುರಾಣಕಾರ್ಯಕ್ರಮ ಅತ್ಯಂತ ಯಶಸ್ವಿಗೊಂಡಿದ್ದು ಸಂತಸದಾಯಕ ಸಂಗತಿ. ನಿತ್ಯ ಭಕ್ತಾದಿಗಳು ವಿಧ-ವಿಧವಾದ ಮಹಾಪ್ರಸಾದ ಸೇವೆ ಮಾಡಿದ್ದಾರೆ. ಧಮ೯ ನಮ್ಮಲ್ಲೆರಿಗೂ ಸನ್ಮಾಗ೯ ತೋರಿಸುತ್ತದೆ. ಮಾನವ ಜನ್ಮ ಅತ್ಯಂತ ಶ್ರೇಷ್ಠ ಎಂದರು.ದಿವ್ಯ ಸಾನಿಧ್ಯ ವಹಿಸಿದ್ದ ಮಸಬಿನಾಳದ ದಾಸೋಹ ವಿರಕ್ತಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ಶಕ್ತಿಯುಳ್ಳವರು ದಾನ ಧಮ೯ದಲ್ಲಿ ತೊಡಗಬೇಕು.ಮಕ್ಕಳಿಗೆ ಜ್ಞಾನದೊಂದಿಗೆ ಸಂಸ್ಕಾರ. ಸಂಸ್ಕೃತಿ ಹಾಗು ಸದ್ವಿಚಾರ ಮೈಗೂಡಿಸಿಕೊಳ್ಳಬೇಕೆಂದರು.ನೇತೃತ್ವ ವಹಿಸಿದ್ದ ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನೂತನವಾಗಿ ಗೌರಿಶಂಕರ ದೇವಸ್ಥಾನದ ನಿಮಾ೯ಣ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಶಿಕ್ಷಣ ಇಲಾಖೆಯಿಂದ ಪ್ರತಿವರ್ಷ ನಡೆಯುತ್ತಿರುವ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಪಠ್ಯ ಹಾಗೂ ಪಠ್ಯೇತರ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಸ್ಪರ್ಧೆಗಳು ಇರುವದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಶಿಕ್ಷಣ ಸಂಯೋಜಕಿ ಅನುಜಾ ಗುಬ್ಬಾ ಹೇಳಿದರು.ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ, ಕ್ಷೇತ್ರಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹಾಗೂ ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಸವನಬಾಗೇವಾಡಿ ಸಮೂಹಸಂಪನ್ಮೂಲ ಕೇಂದ್ರ-2 ವ್ಯಾಪ್ತಿಯ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ಅನಾವರಣಗೊಳಿಸಲು ಅವಕಾಶವಿದೆ. ವಿದ್ಯಾರ್ಥಿಗಳು ತಮಗೆ ಆಸಕ್ತಿ ವಿಷಯದಲ್ಲಿ ಭಾಗವಹಿಸಿ ಸ್ಪರ್ಧಾಮನೋಭಾವದಿಂದ ಭಾಗವಹಿಸುವುದು ಮುಖ್ಯವಾಗಿದೆ. ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾಮನೋಭಾವ ಬರುವ ಜೊತೆಗೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಮನೋಭಾವ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷೋಥಾನ್ ಹೆರಿಟೇಜ್ ರನ್ ಆರನೇ ಆವೃತ್ತಿ ಬರುವ ಡಿಸೆಂಬರ್ 7 ರಂದು ಜರುಗಲಿದ್ದು, ನೋಂದಣಿ ಮಾಡಿಕೊಳ್ಳಲು ನವೆಂಬರ್ 19 ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಂಘಟಕ, ವಿಜಯಪುರ ಸೈಕ್ಲಿಂಗ್ ಗ್ರುಪ್ ಅಧ್ಯಕ್ಷ ಡಾ.ಮಹಾಂತೇಶ ಬಿರಾದಾರ ಹೇಳಿದರು.ವಿಜಯಪುರದಲ್ಲಿ ಬುಧವಾರ ಸಂಜೆ ನಡೆದ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 11 ಸಾವಿರಕ್ಕೂ ಹೆಚ್ಚು ಓಟಗಾರರು ನೋಂದಣಿ ಮಾಡಿಸಿಕೊಂಡಿದ್ದು, ನೋಂದಣಿಗೆ ಕೊನೆಯ 5 ದಿನಗಳು ಮಾತ್ರ ಉಳಿದಿದ್ದು, ಇನ್ನು 3-4 ಸಾವಿರ ನೋಂದಣಿಗಳು ಆಗುವ ನಿರೀಕ್ಷೆ ಇದೆ. ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸರಕಾರಿ ಶಾಲೆಗಳ ಮಕ್ಕಳು ಈ ಓಟದಿಂದ ಹೊರಗೆ ಉಳಿಯಬಾರದು ಎಂಬ ಕಾರಣದಿಂದ ಓಟದ ಪ್ರತಿಭೆ ಹೊಂದಿರುವ ಮಕ್ಕಳನ್ನು ಗುರುತಿಸಿ, ಉಚಿತ ನೋಂದಣಿಗೆ ಅವಕಾಶ ನೀಡಿದ್ದಾರೆ. ಡಿಡಿಪಿಐ ಅವರಿಗೆ ಈಗಾಗಲೇ ಈ ಕುರಿತು ವಿನಂತಿಸಿದ್ದು, ಜಿಲ್ಲೆಯ ಎಲ್ಲ ಸರಕಾರಿ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಓಟದ ಕೌಶಲ್ಯ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಎಂದಿಗೂ ಯಶಸ್ಸು ರಾತ್ರೋರಾತ್ರಿ ಬರುವುದಿಲ್ಲ. ಏಕೆಂದರೆ ಯಶಸ್ಸಿಗೆ ಅಡ್ಡದಾರಿಗಳಿಲ್ಲ. ಆದ್ದರಿಂದ ಯಶಸ್ಸಿಗೆ ಒಂದು ದೊಡ್ಡ ಹೋರಾಟ ಮಾಡಲೇಬೇಕಾಗುತ್ತದೆ. ಯಾವುದೇ ಯಶಸ್ವಿ ವ್ಯಕ್ತಿ ತನ್ನನ್ನು ತಾನು ಅಗಾಧವಾಗಿ ಬದಲಿಸಿಕೊಳ್ಳುತ್ತಾನೆ. ಬದಲಾಗುವುದು ಅಷ್ಟೊಂದು ಸರಳ ಪ್ರಕ್ರಿಯೆ ಅಲ್ಲ. ಅದು ಕಂಬಳಿ ಹುಳುವೊಂದು ಚಿಟ್ಟೆಯಾಗುವ ಪ್ರಕ್ರಿಯೆಯಂತೆ. ಇಷ್ಟವಾದದ್ದನ್ನೆಲ್ಲ ಬಿಡುವುದು ಕಷ್ಟವಾದುದನ್ನು ಮಾಡುವುದು ಯಶಸ್ವಿಯಾಗಲು ಅಗತ್ಯವಿದೆ. ಯಶಸ್ಸಿಗೆ ಬೇಕಾಗಿರುವುದು ಇಷ್ಟವಾದುದನ್ನು ಮಾಡುವುದಲ್ಲ ಗುರಿಗೆ ಸಂಬಂಧಿಸಿದ ಅಗತ್ಯವಾದುದನ್ನು ಮಾಡುವುದು. ಪ್ರಿಯವಾದವುಗಳು ಹಲವೊಮ್ಮೆ ಜೀವನಕ್ಕೆ ಜರೂರ ಮಾಡಲೇಬೇಕಾದ ಸಂಗತಿಗಳು ಆಗಿರುವುದಿಲ್ಲ. ಕೆಲವೊಮ್ಮೆ ಅವುಗಳು ಅಷ್ಟು ಉಪಯುಕ್ತವೂ ಆಗಿರುವುದಿಲ್ಲ.ಕೊರತೆನೀವು ದೊಡ್ಡದನ್ನೇನು ಸಾಧಿಸಲು ಆಗುತ್ತಿಲ್ಲ ಎಂದರೆ ನಿಮ್ಮಲ್ಲಿ ಯೋಗ್ಯತೆ ಇಲ್ಲ ಎಂದಲ್ಲ. ನಮ್ಮಲ್ಲಿ ಪ್ರತಿಯೊಬ್ಬರಿಗೂ ಯೋಗ್ಯತೆ ಇದ್ದೆ ಇದೆ. ವೈಫಲ್ಯಕ್ಕೆ ಕಾರಣ ಯೋಗ್ಯತೆಯ ಕೊರತೆಯಲ್ಲ ಬದಲಾಗಿ ಕಲ್ಪನಾಶಕ್ತಿಯ ಕೊರತೆ. ಸಾವಿರ ಸಾವಿರ ಕೋಟಿ ಗಳಿಸುವ ಸಿನಿಮಾಗಳು ಮೊದಲು ತಯಾರಾಗುವುದು ಕಲ್ಪನಾಶಕ್ತಿಯಲ್ಲಿಯೇ ಅಲ್ಲವೇ? ಸಾಹಸ ಕಥೆಗಳು ಸಹ ಕಲ್ಪನಾಶಕ್ತಿಯ ಭಾಗಗಳಲ್ಲದೇ ಮತ್ತೇನು? ಅತ್ಯದ್ಭುತವಾದ ಕಲ್ಪನೆಯು…

Read More