Author: editor.udayarashmi@gmail.com

ವಿಜಯಪುರ: ಉದ್ಯಮಿ ಅಣ್ಣಾರಾಯ ಎಸ್. ಬಿರಾದಾರ ಆರಂಭಿಸಿದ ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಶನಿವಾರ ಚಾಲನೆ ನೀಡಿದರು.ಅವರು ಪಂಚ-ಗಂಗಾ ಒಣದ್ರಾಕ್ಷಿ ಸಂಸ್ಕರಣಾ ಘಟಕದ ಯಂತ್ರದಲ್ಲಿ ಒಣದ್ರಾಕ್ಷಿಯನ್ನು ಹಾಕುವ ಮೂಲಕ ಸಚಿವ ಎಂ. ಬಿ. ಪಾಟೀಲ ವಿಂಗಡಣೆ ಯಂತ್ರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಅಣ್ಣಾರಾಯ ಎಸ್. ಬಿರಾದಾರ, ನಿತೀನ ಎ. ಬಿರಾದಾರ, ವಿಠ್ಠಲ ಕಟಕದೊಂಡ, ಎಸ್.ಎಂ.ಪಾಟೀಲ ಗಣಿಹಾರ, ಪ್ರಕಾಶಗೌಡ ಪಾಟೀಲ, ಮುಂತಾದವರು ಉಪಸ್ಥಿತರಿದ್ದರು.ನಗರದ ಸೋಲಾಪುರ ರಸ್ತೆಯ ಯಶೋಧಾ ಆಸ್ಪತ್ರೆ ಹಿಂದೆ ಇರುವ ಒಣದ್ರಾಕ್ಷಿ ಸಂಸ್ಕರಣಾ ಘಟಕದಲ್ಲಿ ಇಂದು ಶನಿವಾರ ಈ ಕಾರ್ಯಕ್ರಮ ನಡೆಯಿತು.ಘಟಕದ ಕಾರ್ಯವನ್ನು ವೀಕ್ಷಿಸಿ, ಒಣದ್ರಾಕ್ಷಿ ಸಂಗ್ರಹ, ಸಂಸ್ಕರಣೆ, ಮಾರಾಟ ಹಾಗೂ ರಫ್ತು ಮಾಡುವ ಕುರಿತು ಮಾಹಿತಿ ಪಡೆದರು. ಅಲ್ಲದೇ, ಈ ಘಟಕ ಉತ್ತರೋತ್ತರವಾಗಿ ಅಭಿವೃದ್ಧಿಯಾಗಲಿ ಎಂದು ಅಣ್ಣಾರಾಯ ಎಸ್. ಬಿರಾದಾರ ಮತ್ತು ಅವರ ಪುತ್ರ ನಿತೀನ ಎ.ಬಿರಾದಾರ ಅವರಿಗೆ ಶುಭ ಕೋರಿದರು.ಈ ಸಂದರ್ಭದಲ್ಲಿ ವಿಜಯಪುರ ಜ್ಞಾಯೋಗಾಶ್ರಮದ ಶ್ರೀ ಬಸವಲಿಂಗ…

Read More

ಇಂಡಿ: ಪ್ರತಿ ವರ್ಷದಂತೆ ಈ ವರ್ಷವು ಕೂಡಾ ತಾಂಬಾ ಗ್ರಾಮದ ಆರಾಧ್ಯ ದೇವರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೇವಸ್ಥಾನ ಕಮಿಟಿ ವತಿಯಿಂದ ಮಾಹಾಶಿವರಾತ್ರಿ ಉತ್ಸವ ಜರಗಿತು, ಈ ಉತ್ಸವದ ಕೇಂದ್ರ ಬಿಂದು ಮಲ್ಲಿಕಾರ್ಜುನ ಕರ್ತೃ ಲಿಂಗಕ್ಕೆ ವೃದ್ರಾಭಿಷೇಕ ಹಾಗೂ ರಂಗೋಲಿಯಲ್ಲಿ ಶಿವನ ಚಿತ್ರ ಬಿಡಿಸಿ ನಂತರ ಬಂತನಾಳದ ಡಾ // ವೃಷಭಲಿಂಗ ಮಾಹಾಶಿವಯೋಗಿಗಳು ದೀಪ ಬೆಳಗಿದರು. ಶ್ರೀ ಗಳ ಆಶೀರ್ವಚನದೊಂದಿಗೆ ಈ ವರ್ಷದ ಮಲ್ಲಿಕಾರ್ಜುನ ಸ್ವಾಮಿ ಭಾವಚಿತ್ರ ಇರುವ ಕ್ಯಾಲೆಂಡರನ್ನು ಶ್ರೀ ಗಳು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಶಿವರಾಜ್ ಕೆಂಗನಾಳ ಪ್ರಸ್ತಾವಿಕ ಮಾತನಾಡಿದರು,ಈ ಸಮಯದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಕಮಿಟಿ ಕಾರ್ಯದರ್ಶಿ ಗೋಪಾಲ ಅವರಾಧಿ, ಉಪಾಧ್ಯಕ್ಷ ಸಿದ್ದು ದಿವಟಗಿ, ಸದಸ್ಯ ಮಂಜುನಾಥ ನಾವಿ, ನಾಗರಾಜ ಮಾಳಿ, ಸುಮಿತ ಕಂಬಾರ, ಸಿದ್ದರಾಯ ದಿವಟಗಿ, ಚಿದಾನಂದ ಕೆಂಗನಾಳ, ಸಾಗರ ಅವರಾಧಿ, ಸಂಜೀವ ಜೇವುರ, ಶಿಕ್ಷಕರಾದ ಅಡಿವೆಪ್ಪ ಸರಸಂಬಿ ಸರ್ , ಕೂಡಕ್ಕಲಗಿ ಸರ್, ವಗಮಂಡಿ ಸರ್, ಸೋಮನಿಂಗ ಸರ್ ತಾಂಬಾ…

Read More

ಇಂಡಿ: ವಿದ್ಯಾರ್ಥಿಗಳ ಕಲಿಕೆಯ ಜೊತೆಗೆ ಜೀವನರೂಪಿಸುವಲ್ಲಿ ಶಿಕ್ಷಕರು ಮಹತ್ವದ ಪ್ರಭಾವ ಬೀರುತ್ತಾರೆ. ಅವರು ಜ್ಞಾನ ಮತ್ತು ಮೌಲ್ಯಗಳನ್ನು ನೀಡಿ, ವಿದ್ಯಾರ್ಥಿಗಳ ಬದುಕನ್ನು ಸಂಸ್ಕಾರಯುತವನ್ನಾಗಿಸುತ್ತಾರೆ ಎಂದು ಶಾಸಕರ ಸಹೋದರ, ಶಿಕ್ಷಣ ಪ್ರೇಮಿ ಬಸವಂತರಾಯಗೌಡ ಪಾಟೀಲ ಹೇಳಿದರು.ಅವರು ತಾಲೂಕಿನ ಪಡನೂರ ಗ್ರಾಮದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಶ್ರೀ ವ್ಹಿ ವೈ ಪಾಟೀಲ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ಸಂಸ್ಕೃತಿ ಸೌರಭ’- ಶಾಲಾ ವಾರ್ಷಿಕೋತ್ಸವ ಹಾಗೂ 10ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಉಪನ್ಯಾಸಕರಾಗಿ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಜ್ಞಾನ ಪೂರಕ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ರೂಢಿಸಿಕೊಳ್ಳಬೇಕು. ವಿದ್ಯಾವಂತರಾಗಲು ಪುಸ್ತಕಗಳನ್ನು ಹೆಚ್ಚಾಗಿ ಓದಬೇಕು. ವಿದ್ಯಾರ್ಥಿಗಳು ಜ್ಞಾನದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.ಮುಖ್ಯ ಅತಿಥಿಗಳಾಗಿ ಡಾ.ಗುರುಸಿದ್ದಯ್ಯ ಸ್ವಾಮಿಮಾತನಾಡಿ,ಬಡತನದಲ್ಲೇ ಹುಟ್ಟಿ ಬೆಳೆದ ಅಬ್ದುಲ್‌ ಕಲಾಂ, ಅಂಬೇಡ್ಕರ್‌, ಸರ್‌ ಎಂ ವಿಶ್ವೇಶ್ವರಯ್ಯ ಮತ್ತಿತರ ಮಹನೀಯರು ಪರಿಶ್ರಮ ಪಟ್ಟು ಓದಿ ದೇಶಕ್ಕೆ ಕೊಡುಗೆ ನೀಡಿದ್ದಾರೆ.…

Read More

ಬಸವನಬಾಗೇವಾಡಿ: ಯಾರಲ್ಲಿ ಭಕ್ತಿ ಇರುವದೋ ಅವರಲ್ಲಿ ಶ್ರದ್ಧಾ-ಮನೋಭಾವ, ಸಾಮರಸ್ಯ, ಮಾನವೀಯ ಮೌಲ್ಯಗಳು ಬೆಳೆಯುತ್ತವೆ. ಭಕ್ತಿಯಲ್ಲಿ ಇಂತಹ ಶಕ್ತಿಯಿದೆ ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ತೆಲಗಿ ರಸ್ತೆಯಲ್ಲಿರುವ ೨೨೦ ಕೆವ್ಹಿ ಸ್ಟೇಶನ್ ಎದುರಿಗೆ ಇರುವ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರಾಮಹೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವದಂಗವಾಗಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಮಹಾತ್ಮೆ ಎಂಬ ಸುಂದರ ಭಕ್ತಿ ಪ್ರಧಾನ ಪೌರಾಣಿಕ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಭಗವಂತನಲ್ಲಿ ಅಚಲವಾದ ಭಕ್ತಿಯನ್ನು ಇಟ್ಟು ನಡೆದರೆ ನಮ್ಮ ಜೀವನದಲ್ಲಿ ನಿಷ್ಠೆ-ಪ್ರಾಮಾಣಿಕತೆ, ಮಾನವೀಯ ಮೌಲ್ಯಗಳು ಮೈಗೂಡಲು ಸಾಧ್ಯ. ಶ್ರೀಶೈಲದಲ್ಲಿ ಶಕ್ತಿ ಇದೆ ಎಂಬುವದಕ್ಕೆ ಈ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಅಪಾರ ಸಂಖ್ಯೆ ಭಕ್ತರು ಮಹಾಶಿವರಾತ್ರಿಯಂದು ಆಗಮಿಸಿ ಮಲ್ಲಿಕಾರ್ಜುನ ದೇವರ ದರ್ಶನ ಪಡೆಯುತ್ತಿರುವುದೇ ಸಾಕ್ಷಿ ಎಂದರೆ ತಪ್ಪಾಗಲಾರದು. ಪಟ್ಟಣದ ವಿಜಯಪುರ ರಸ್ತೆ, ಮುದ್ದೇಬಿಹಾಳ ರಸ್ತೆ, ನಿಡಗುಂದಿ ರಸ್ತೆಯಲ್ಲಿ ಸದಾ ಜನರ ಸಂಚಾರ ನಿತ್ಯ ಕಂಡುಬರುತ್ತದೆ. ಆದರೆ ತೆಲಗಿ ರಸ್ತೆಯಲ್ಲಿ…

Read More

ಬಸವನಬಾಗೇವಾಡಿ: ಮಹಾತ್ಮರ ಸತ್ಸಂಗದಲ್ಲಿ ನಡೆದರೆ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ. ಆಧ್ಯಾತ್ಮದಿಂದ ಜೀವನದಲ್ಲಿ ಶಾಂತಿ-ನೆಮ್ಮದಿ ಸಿಗುತ್ತದೆ ಎಂದು ಬುದ್ನಿ ಸಿದ್ದಾರೂಢಮಠದ ಸಿದ್ದಾನಂದ ಸ್ವಾಮೀಜಿ ಹೇಳಿದರು.ಪಟ್ಟಣದ ಸಮೀಪದ ಜೈನಾಪೂರ ಗ್ರಾಮದ ಪವಾರ ಬಸವೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿಯಂಗವಾಗಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಶಿವಭಜನೆ ಜಾಗರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಗುರುಗಳ ಆಶೀರ್ವಾದ ಪಡೆದುಕೊಳ್ಳುವ ಭಾಗ್ಯ ಸಿಗುತ್ತದೆ. ಪಾಪ ನಶಿಸಿ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ. ಪ್ರತಿ ತಿಂಗಳು ಶಿವರಾತ್ರಿ ಇರುತ್ತದೆ. ವರ್ಷದಲ್ಲಿ ಒಂದು ಮಾತ್ರ ಮಹಾಶಿವರಾತ್ರಿ ಇರುತ್ತದೆ. ಈ ಮಹಾಶಿವರಾತ್ರಿಯಂದು ಇಡೀ ರಾತ್ರಿ ಶಿವನಾಮಸ್ಮರಣೆ ಮಾಡಿದರೆ ನಮ್ಮ ಭವ ಕಷ್ಟಗಳನ್ನು ಶಿವ ದೂರ ಮಾಡಿ ಜೀವನದಲ್ಲಿ ಸುಖ-ನೆಮ್ಮದಿ ನೀಡುತ್ತಾನೆ ಎಂದರು.ಯಲಗೋಡ ಪುರದಾಳ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಶಿವಪಥವ ಅರಿಯಬೇಕಾದರೆ ಗುರು ಪಥವ ಅಗತ್ಯವಿದೆ. ಗುರು ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ. ಅಂತರಂಗ ಸಾಧನೆಯಿಂದ ಜ್ಞಾನ ಪಡೆದುಕೊಳ್ಳಬಹುದು. ಮನುಷ್ಯ ದುರ್ಬಲನಾಗದೇ ಸಬಲನಾಗಿ ಮನುಷ್ಯ ಜೀವನವನ್ನು ಪಾವನ ಮಾಡಿಕೊಳ್ಳುವ ಕಡೆಗೆ ಗಮನ…

Read More

ವಿಜಯಪುರ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮಾ.೧೧ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಮಾರ್ಚ್ ೧೧ ರಂದು ಬೆಳಿಗ್ಗೆ ೮-೪೫ಕ್ಕೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ ೧೧-೪೫ಕ್ಕೆ ವಿಜಯಪುರದ ತೊರವಿಯಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಕ್ಯಾಂಪಸ್‌ಗೆ ಆಗಮಿಸಿ ಮಧ್ಯಾಹ್ನ ೧೨-೧೫ಕ್ಕೆ ವಿವಿಯ ೧೫ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಬಲೇಶ್ವರ ತಾಲೂಕಾ ಆಡಳಿತ ನೂತನ ಕಟ್ಟಡ ಉದ್ಘಾಟನೆ | ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ ವಿಜಯಪುರ: ಬಬಲೇಶ್ವರ ಪಟ್ಟಣದ ಅಡವಿಸಂಗಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ರೂ.೧೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಸೌಧ (ಮಿನಿ ವಿಧಾನಸೌಧ) ನೂತನ ಕಟ್ಟಡ, ಕಟ್ಟಡವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಿದರು.ಶನಿವಾರ ಬಬಲೇಶ್ವರದಲ್ಲಿ ಹಮ್ಮಿಕೊಂಡ ನೂತನ ತಾಲೂಕಾಡಳಿತ ಕಟ್ಟಡ ಉದ್ಘಾಟನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಈ ಕಟ್ಟಡದ ನೆಲಮಹಡಿಯಲ್ಲಿ ತಹಸೀಲ್ದಾರ ಕಚೇರಿ, ಕೋರ್ಟ್ ಹಾಲ್, ತಹಸೀಲ್ದಾರ ಗ್ರೇಡ್-೧ ಮತ್ತು ಗ್ರೇಡ್-೨, ಸಬ್ ರಜಿಸ್ಟಾರ್ ಕಚೇರಿ, ಸಬ್ ಟ್ರೆಜರಿ ಕಚೇರಿ, ಸ್ಟ್ರಾಂಗ್ ರೂಂ, ರಜಿಸ್ಟಾರ್ ಕಚೇರಿಗಳನ್ನು ಹೊಂದಿವೆ. ಮೊದಲನೇ ಮಹಡಿಯಲ್ಲಿ ಭೂಮಾಪನಾ ಇಲಾಖೆ ಉಪನಿರ್ದೇಶಕ ಕಚೇರಿ, ಭೂ ದಾಖಲೆ ಕೊಠಡಿ, ವಿಡಿಯೋ ಸಂವಾದ ಸಭಾಂಗಣ, ಕೆಸ್ವಾನ್, ಎರಡನೇ…

Read More

ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ | ಶೈಲಜಾ ಪಾಟೀಲ್ ಯತ್ನಾಳ ಅಭಿಮತ ವಿಜಯಪುರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜೆಎಸ್‌ಎಸ್ ವತಿಯಿಂದ ಜಾಗೃತಿ ಜಾಥಾ ನಡೆಯಿತು.ಒಂದು ಕಾಲದಲ್ಲಿ ನಾಲ್ಕು ಗೋಡೆಗಳ ಮಧ್ಯದಲ್ಲಿ ಬಂಧಿಯಾಗಿದ್ದ ಮಹಿಳೆ ಇಂದು ಸ್ವಚ್ಛಂದವಾಗಿ ಬದುಕು ಕಟ್ಟಿಕೊಳ್ಳುತ್ತಿದ್ದಾಳೆ. ತನಗೆ ಸರಿ ಎನಿಸಿದ ರೀತಿಯಲ್ಲಿ ತನ್ನ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾಳೆ. ಪುರುಷನಿಗೆ ಸರಿ ಸಮನಾಗಿ ನಿಂತು ತನ್ನ ಸ್ವಂತ ಬಲದ ಮೇಲೆ ಮುನ್ನುಗ್ಗುತ್ತಿದ್ದಾಳೆ. ಮಹಿಳೆಯ ಈ ಪ್ರಗತಿ ಲಿಂಗ ತಾರತಮ್ಯತೆಯನ್ನು ತೊಡೆದು ಹಾಕಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಮಾರ್ಗಸೂಚಿಯಾಗಿದೆ ಎಂದು ಶ್ರೀ ಸಿದ್ಧಸಿರಿ ಸೌಹಾರ್ಧ ಸಹಕಾರಿ ನಿಯಮಿತದ ವಿಜಯಪುರ ನಿರ್ದೇಶಕಿ ಶೈಲಜಾ ರಾ ಪಾಟೀಲ ಯತ್ನಾಳ ಹೇಳಿದರು.ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಸ್ವಾಸ್ಥö್ಯ ಮಹಿಳಾ ಸಮಾಜ ನಿರ್ಮಾಣದೆಡೆಗೆ ನಮ್ಮ ನಡಿಗೆ ಎನ್ನುವ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು; ಪ್ರಾಚೀನ ಕಾಲದಿಂದಲೂ ಪುರುಷ ಪ್ರಧಾನ ಸಮಾಜ…

Read More

ಮುದ್ದೇಬಿಹಾಳ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ತಾಲೂಕು ಪಂಚಾಯತ ವಸತಿ ಗೃಹಗಳ ಆವರಣದಲ್ಲಿ ಮಾ.೧೧ ರ ಬೆಳಿಗ್ಗೆ ೧೦:೩೦ ಕ್ಕೆ ೭೫ ವಸಂತಗಳನ್ನು ಪೂರೈಸಿದ ಸಂಘದ ಸದಸ್ಯರಿಗೆ ಗೌರವಾರ್ಪಣೆ ಹಾಗೂ ನೂತನ ಸದಸ್ಯರಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡರು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಎಂ.ವ್ಹಿ.ಮಾಟಲದಿನ್ನಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಸ್ಟೇಟ್ ಬ್ಯಾಂಕ್ ನ ವ್ಯವಸ್ಥಾಪಕ ದೀಪಕ ವಟ್ಟ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮುದ್ದೇಬಿಹಾಳ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ತಾಲೂಕು ಪಂಚಾಯತ ವಸತಿ ಗೃಹಗಳ ಆವರಣದಲ್ಲಿ ಮಾ.೧೧ ರ ಬೆಳಿಗ್ಗೆ ೧೦:೩೦ ಕ್ಕೆ ೭೫ ವಸಂತಗಳನ್ನು ಪೂರೈಸಿದ ಸಂಘದ ಸದಸ್ಯರಿಗೆ ಗೌರವಾರ್ಪಣೆ ಹಾಗೂ ನೂತನ ಸದಸ್ಯರಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡರು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಎಂ.ವ್ಹಿ.ಮಾಟಲದಿನ್ನಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಸ್ಟೇಟ್ ಬ್ಯಾಂಕ್ ನ ವ್ಯವಸ್ಥಾಪಕ ದೀಪಕ ವಟ್ಟ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More