Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದ ವಾರ್ಡ್ ನಂ.21ರ ಸದಾಶಿವ ನಗರದ ಆಂತರಿಕ ರಸ್ತೆಗಳನ್ನು ರೂ.1 ಕೋಟಿ ಅನುದಾನದಲ್ಲಿ ಸಿಸಿ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಬಳಿಕ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಸದಾಶಿವ ನಗರ ಅಭಿವೃದ್ಧಿ ಸಂಘ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸಿದ್ಧಪಡಿಸಲಾದ ಸಮುದಾಯ ಸಹಯೋದಲ್ಲಿ ಘನ ತ್ಯಾಜ್ಯದಿಂದ ಎರೆಹುಳು ಗೊಬ್ಬರ ತಯಾರಿಕಾ ಘಟಕದ ಪ್ರಾತ್ಯಕ್ಷಿಕ ವೀಕ್ಷಣೆ ಮಾಡಿದರು.ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ (ಕುಮಾರ) ಗಡಗಿ, ಪ್ರೇಮಾನಂದ ಬಿರಾದಾರ, ಮುಖಂಡರಾದ ಜಿ.ಎಸ್.ಗದಗಿಮಠ, ಡಾ.ಬಾಬು ಸಜ್ಜನ, ಸಂತೋಷ ಜೋಳದ, ಪಾಪು ಖ್ಯಾತನ್, ಚನ್ನಬಸಯ್ಯ ಸ್ವಾಮಿ, ಪ್ರವೀಣ ಹಳ್ಳಿ, ರಾಚು ಬಿರಾದಾರ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.
ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ವಿಜಯಪುರ: ಮಹಿಳೆ, ಕುಟುಂಬದ ಕಣ್ಣಾಗಿ, ತಾಯಿ, ಪತ್ನಿ, ಮಗಳು, ಅಕ್ಕ-ತಂಗಿ ಹೀಗೆ ಅನೇಕ ಪಾತ್ರಗಳನ್ನು ಏಕಕಾಲಕ್ಕೆ ನಿಭಾಯಿಸಿಕೊಂಡು ಹೋಗಬಲ್ಲ ಚೈತನ್ಯ. ಕುಟುಂಬ ಜೊತೆಗೆ ಸಮಾಜ ಹಾಗೂ ರಾಷ್ಟ್ರ ನಿರ್ಮಾಣದಲ್ಲೂ ಮಹಿಳೆಯ ಪಾತ್ರ ವಿಶೇಷವಾದದ್ದು. ಅವರ ತ್ಯಾಗವನ್ನು ಗುರುತಿಸಲು ಮತ್ತು ಸಮಾಜದಲ್ಲಿ ಅವರಿಗೆ ಸಮಾನ ಹಕ್ಕುಗಳನ್ನು ಕಲ್ಪಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್ ೦೮ ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ ಎಂದು ಲೇಖಕಿ ಇಂದುಮತಿ ಲಮಾಣಿಯವರು ಹೇಳಿದರು.ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯಲ್ಲಿ ಶನಿವಾರದಂದು ಆಚರಿಸಲಾದ ‘ವಿಶ್ವ ಮಹಿಳಾ ದಿನಾಚರಣೆಯ’ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ಅವರು. ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಜವಾಬ್ದಾರಿ ನಿಭಾಯಿಸಿದ್ದಾರೆ. ಕೇವಲ ಕುಟುಂಬಕ್ಕೆ ಸೀಮಿತವಾಗದೆ, ರಾಜಕೀಯ, ಶಿಕ್ಷಣ, ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಅಪಾರ. ಮಕ್ಕಳಲ್ಲಿ ಆರಂಭದಿಂದಲೇ ಹೆಣ್ಣು, ಗಂಡು, ಜಾತಿ ಮತವೆಂಬ ಭೇಧ ತರದಂತೆ…
ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ಯುವ ನಾಯಕ ಮಲ್ಲು ಸಾವಳಸಂಗ ಅವರನ್ನು ಸಿಂದಗಿ ತಾಲೂಕಿನ ಬಿಜೆಪಿ ಮಂಡಲ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ಆರ್ ಎಸ್ ಕುಚಬಾಳ ಆದೇಶ ಹೊರಡಿಸಿದ್ದಾರೆ.ಉಪಾಧ್ಯಕ್ಷ ಜವಾಬ್ದಾರಿ ವಹಿಸಿಕೊಂಡಿರುವ ಮಲ್ಲು ಸಾವಳಸಂಗ ಮಾತನಾಡಿ, ಪಕ್ಷದ ಹಿರಿಯರು, ಮಾಜಿ ಶಾಸಕರು ಜಿಲ್ಲಾಧ್ಯಕ್ಷರು ಮತ್ತು ತಾಲೂಕ ಮಂಡಲ ಅಧ್ಯಕ್ಷರು ನನ್ನ ಮೇಲೆ ವಿಶ್ವಾಸವಿಟ್ಟು ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದ್ದಾರೆ ಅವರು ನನ್ನ ಮೇಲೆ ಇಟ್ಟಿರುವ ಭರವಸೆ ಹುಸಿಯಾಗದಂತೆ ಪಕ್ಷದಲ್ಲಿ ಪ್ರಾಮಾಣಿಕ ಕಾರ್ಯ ನಿರ್ವಹಿತ್ತೇನೆ ಮುಂಬರುವ ಲೋಕಸಭಾ ಮತ್ತು ಜಿ. ಪಂ. ತಾ. ಪಂ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಭಾರತೀಯ ಜನತಾ ಪಾರ್ಟಿ ವಿಜಯಪುರ ನಗರ ಮಂಡಲ ಹಾಗೂ ವಿವಿಧ ಮೋರ್ಚಾಗಳಿಗೆ, ಈ ಕೆಳಕಂಡ ಪ್ರಮುಖರನ್ನು ನೂತನ ಪದಾಧಿಕಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ನಗರ ಮಂಡಲದ ಅಧ್ಯಕ್ಷರಾದ ಶಂಕರ ಹೂಗಾರ ತಿಳಿಸಿದ್ದಾರೆ.ನಗರ ಮಂಡಲ ಉಪಾಧ್ಯಕ್ಷರಾಗಿ ಸಂತೋಷ ಪಾಟೀಲ, ಲಕ್ಷ್ಮಣ ಜಾಧವ, ರಾಜಶೇಖರ ಭಜಂತ್ರಿ, ಪ್ರಭುದೇವ ಕೆಂಗಾರ, ಬಸವರಾಜ ಗೊಳಸಂಗಿ, ಸಂತೋಷ ನಿಂಬರಗಿ, ಪ್ರಧಾನ ಕಾರ್ಯದರ್ಶಿಗಳು ಪಾಪುಸಿಂಗ್ ರಜಪೂತ, ಪ್ರವೀಣ ಕೂಡಗಿ, ಕಾರ್ಯದರ್ಶಿಗಳು ಕಿರಣ ಅಣೆಪ್ಪನವರ, ಸಿದ್ದನಗೌಡ ಬಿರಾದಾರ (ದೇವಕಿನಗರ), ಸಂದೀಪ ಕಾಳೆ, ರೋಹನ ಆಪ್ಟೆ, ಉಮೇಶ ವೀರಕರ, ಸುಚಿತಾ ಬಾಳು ಜಾಧವ, ಬಿಎಲ್ಎ-1 ಗುರು ಹಜೇರಿ, ಸಿದ್ದು ಬೆಲ್ಲದ, ಕೋಶಾಧ್ಯಕ್ಷರು ವೇಣುಗೋಪಾಲ ಜೋಶಿ, ಕಾರ್ಯಾಲಯ ಕಾರ್ಯದರ್ಶಿ ಅಮೀತ ಗರುಡಕರ, ಮಾಧ್ಯಮ ಪ್ರಮುಖ ಬಾಬುಗೌಡ ರೋಡಗಿ, ಸಾಮಾಜಿಕ ಜಾಲತಾಣ ಸಂಚಾಲಕರು ಅಭಿಲಾಷ ಎಸ್.ಕನಮಡಿ, ಸಹ ಸಂಚಾಲಕರು ಸದಾಶಿವ ಅಳ್ಳಿಗಿಡದ, ನಾಗರಾಜ ಶಿರಸಂಗಿ, ಕಾನೂನು ಪ್ರಕೋಷ್ಠ ದೇವಪ್ಪ ಶಿವಗೊಂಡ ಅವರನ್ನು ನೇಮಕ ಮಾಡಲಾಗಿದೆ.ಮೋರ್ಚಾ ಅಧ್ಯಕ್ಷರು, ಪ್ರಧಾನ…
ಅಫಜಲಪುರ: ತಾಲೂಕಿನ ಭೀಮಾ ನದಿ ದಡದಲ್ಲಿರುವ ಕಲ್ಯಾಣ ಕರ್ನಾಟಕದ ಕಲ್ಪತರು, ಪವಾಡ ಪುರುಷ ಬೇಡಿದವರಿಗೆ ಬೇಡಿದ್ದಾನೆ ನೀಡುವ ಕಾಮದೇನು ಕಲ್ಪವೃಕ್ಷವಾಗಿರುವ ಶ್ರೀ ಹುಚ್ಚ ಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಗ್ಗಿ ಪ್ರವೇಶ ಮಾ.15 ರಂದು ಜರುಗಲಿದೆ ಎಂದು ಶ್ರೀ ಹುಚ್ಚಲಿಂಗೇಶ್ವರ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಅಧ್ಯಕ್ಷ ಸಿದ್ದಾರ್ಥ ಮೈಂದರಗಿ ತಿಳಿಸಿದ್ದಾರೆ. ಈ ಜಾತ್ರೆ ಬಹಳ ವೈಭವದಿಂದ ಜರುಗುತ್ತಿದ್ದು ಯಾವುದೇ ಜಾತಿ ಮತ ಪಂಥ ಭೇದವಿಲ್ಲದೆ ಸರ್ವಜನರ ಆರಾಧ್ಯ ದೈವ ಶ್ರೀ ಹುಚ್ಚ ಲಿಂಗೇಶ್ವರರ ಜಾತ್ರೆಯ ನಿಮಿತ್ತ ವಿವಿಧ ಕಾರ್ಯಕ್ರಮಗಳು ಜರುಗಲಿವೆ.ದಿನಾಂಕ 10 ರಂದು ರವಿವಾರ ಉಡಚಣ ಗ್ರಾಮದಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಗ್ರಾಮದಲ್ಲಿ ಜರುಗಲಿದೆ. ದಿನಾಂಕ 14 ರಂದು ರಾತ್ರಿ ಹನ್ನೆರಡು ಗಂಟೆಗೆಮ ಕೊರಡುಗಳಿಗೆ ಅಗ್ನಿಪರ್ಶ ಜರುಗಲಿದೆ, ದಿನಾಂಕ 15 ರಂದು ಬೆಳಿಗ್ಗೆ 10 ಗಂಟೆಗೆ ವಾದ್ಯ ವೈಭವ ಪಲ್ಲಕ್ಕಿಯೊಂದಿಗೆ ಭೀಮಾ ನದಿಗೆ ತೆರಳಿ ಮೂರ್ತಿಗೆ ಗಂಗೆ ಸಿತಾಳ ಮಾಡಿಕೊಂಡು ಬರಲಾಗುವುದು. ನಂತರ 12:30 ಗಂಟೆಗೆ ಚಂದ್ರಾಯದೊಂದಿಗೆ ಭಂಡಾರಿ…
ಆಲಮಟ್ಟಿ ಎಂ.ಎಚ್.ಎಂ.ಪಪೂ ಕಾಲೇಜು ಪ್ರೌಢಶಾಲಾ ವಿಭಾಗದ ಎಸ್ಸೆಸ್ಸೆಲ್ಸಿ ಮಕ್ಕಳ ಬೀಳ್ಕೊಡುಗೆ | ಪ್ರತಿಭಾ ಪುರಸ್ಕಾರ ಆಲಮಟ್ಟಿ: ಇಂದಿನ ಯುವಜನತೆ ಒಂದಿಷ್ಟು ಒಳ್ಳೆಯ ಮೌಲ್ಯಾಧಾರಿತ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಿನ ಹೆಜ್ಜೆ ಪಥದಲ್ಲಿ ಸಾಗಬೇಕು. ಆದರ್ಶಗಳಿಲ್ಲದಿದ್ದರೆ ಬದುಕಿಗೆ ಅರ್ಥವೇ ಇಲ್ಲ ಎಂದು ಶಿಕ್ಷಕ, ಸಾಹಿತಿ, ವಾಗ್ಮಿ ಅಶೋಕ ಹಂಚಲಿ ಹೇಳಿದರು. ಸ್ಥಳೀಯ ಎಸ್.ವ್ಹಿ. ವ್ಹಿ. ಸಂಸ್ಥೆಯ ಎಂ.ಎಚ್.ಎಂ.ಪಪೂ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಸಕ್ತ ೨೦೨೩-೨೪ ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶುಭಕೋರುವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ವಿದ್ಯಾರ್ಥಿಗಳೆಂದರೆ ಪುಟಿಯುವ ಶಕ್ತಿ ಹೊಂದಿರುವಂಥ ಅದ್ಬುತ ಚೆಂಡುಗಳು ಇದ್ದಹಾಗೆ. ಹೇಗೆ ಪುಟಿಯಸುತ್ತೆವೆಯೋ ಹಾಗೆ ಪುಟಿದೇಳುತ್ತವೆ. ಇಂದು ಆ ಚೆಂಡುಗಳನ್ನು ನೈತಿಕತೆಯ ಆಧಾರದ ಮೇಲೆ ಸುಂದರವಾಗಿ ಪುಟಿಸಿ ಅರಳಿಸಬೇಕಾದ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಮಕ್ಕಳು ಕೂಡಾ ಸರಿಯಾಗಿ ವಿದ್ಯಾಭ್ಯಾಸದ ವಿದ್ಯಾರ್ಜನೆ ಗೈದು ಒಂದಿಷ್ಟು ಸಾಧನೆಯ ದಾರಿಯಲ್ಲಿ ಸಾಗಬೇಕು. ಈ ನಡುವೆ ಜನ್ಮದಾತರ ಋಣಭಾರ ತೀರಿಸುವ ಛಲ…
Udayarashmi kannada daily newspaper
ವಿಜಯಪುರ: ವಿಜಯಪುರ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾ ಕಾರ್ಯದರ್ಶಿಯಾದ ಮಲ್ಲಿಕಾರ್ಜುನ ಗದಿಗೆಪ್ಪ ಗೋಡೆಕಾರ, ತಾಲೂಕಾ ಅಧ್ಯಕ್ಷರಾದ ಅರುಣಗೌಡ ತೇರದಾಳ, ಉಪಾಧ್ಯಕ್ಷರಾದ ಮಹಾದೇವ ತೇಲಿ ಅವರನ್ನು ಜುಮನಾಳ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಜುಮನಾಳ ಪಿ.ಕೆ ಪಿ.ಎಸ್ ಸೊಸಾಯಿಟಿ ಅಧ್ಯಕ್ಷರಾದ ರಮೇಶ ಭೀರಪ್ಪ ವಗ್ಗರ ಉಪಾಧ್ಯಕ್ಷರಾಗಿ ಆನಂದ ಹೊನ್ನುಟಗಿ, ಈರಣ್ಣ ಬಬಲೇಶ್ವರ, ಬಿಜೆಪಿ ನಾಗಠಾಣ ಮಂಡಲ ಅಧ್ಯಕ್ಷರಾದ ಸಿದ್ದಗೊಂಡ ಶಿವಪ್ಪ ಬಿರಾದಾರ, ಸುರೇಶ ಗೋಡೆಕಾರ, ಶ್ರೀಶೈಲ ತರಲಗಟ್ಟಿ, ಶ್ರೀಶೈಲ ಜಂಬಗಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಆಲಮೇಲದಲ್ಲಿ ಮಹಾ ಶಿವರಾತ್ರಿ ಸಂಭ್ರಮ | ವಿಶೇಷ ಸಂಗೀತ ಕಾರ್ಯಕ್ರಮ | ಪ್ರಸಾದ ಸೇವೆ ಆಲಮೇಲ: ಮಹಾ ಶಿವರಾತ್ರಿ ನಿಮಿತ್ಯ ಪಟ್ಟಣದ ಪುರಾತನ ವಿಶ್ವೇಶ್ವರ ದೇವಸ್ಥಾನ ಮತ್ತು ರಾಮಲಿಂಗ ದೇವಸ್ಥಾನದಲ್ಲಿ ವಿಶೇಷ ಪೋಜೆಗೈಯಲಾಯಿತು.ಶುಕ್ರವಾರ ಶಿವರಾತ್ರಿ ನಿಮಿತ್ಯ ಪಟ್ಟಣದ ವಿಶ್ಚೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗೈದು ದೇವಸ್ಥಾನ ಕಮಿಟಿ ವಿಶೇಷ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತು ಮತ್ತು ಪ್ರಸಾದ ಸೇವೆ ಮಾಡಲಾಗಿತ್ತು. ಶಿವರಾತ್ರಿ ನಿಮಿತ್ಯ ಎಲ್ಲರೂ ಉಪವಾಸ ಇರುವುದರಿಂದ ಸಾಯಂಕಾಲ ೫ ಗಂಟೆಯಿಂದ ಗ್ರಾಮಸ್ಥರು ವಿಶೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿ ದರ್ಶನ ಪಡೆದರು. ದೇವಸ್ಥಾನಕ್ಕೆ ಸಾವಿರಾರು ಜನರು ಆಗಮಿಸಿದ್ದರಿಂದ ಸುಮಾರು ೧ ಗಂಟೆಗಳ ಕಾಲ ಸರದಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆದರು.ದೇವಸ್ಥಾನದ ಪೂಜಾರಿ ಪ್ರವೀಣ ಗುಡಿಮಠಸ್ವಾಮಿ, ಸಂಯೋಜಕರಾದ ನೀಲಪ್ಪ ಗುಣಾರಿ, ಬಸವರಾಜ ತೆಲ್ಲೂರ, ಮಲ್ಲಿಕಾರ್ಜುನ ಅಚಲೇರಿ, ಪ್ರಭು ವಾಲಿಕಾರ, ಕಾಮಣ್ಣ ಕಲ್ಲೂರ, ಮಲಕು ಕಳಾರಿ, ಶಿವಾನಂದ ಬುರಡ ಮುಂತಾದವರು ಇದ್ದರು.
ದೇವರಹಿಪ್ಪರಗಿ: ಕಲ್ಮೇಶ್ವರ ದೇವಸ್ಥಾನಕ್ಕೆ ಮಹಾಶಿವರಾತ್ರಿ ನಿಮಿತ್ಯವಾಗಿ ಶಿವಯೋಗದ ನಂತರ ಭಕ್ತರು ಆಗಮಿಸಿ ನೈವಿಧ್ಯ ಅರ್ಪಿಸಿ ಕಾಶೀಲಿಂಗನ ದರ್ಶನ ಪಡೆದರು.ಪಟ್ಟಣದ ಆರಾಧ್ಯ ದೇವನೇನಿಸಿದ ಕಲ್ಮೇಶ್ವರನ ದೇವಸ್ಥಾನಕ್ಕೆ ಶಿವರಾತ್ರಿ ಅಂಗವಾಗಿ ಶುಕ್ರವಾರ ನೂರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸಿ, ನೈವಿಧ್ಯೆ ಅರ್ಪಿಸುವುದರ ಮೂಲಕ ಶಿವಯೋಗದ ಭಕ್ತಿಭಾವ ಮೆರೆದರು. ಬೆಳಿಗ್ಗೆಯಿಂದಲೇ ಉಪವಾಸ ವೃತ ಕೈಗೊಂಡಿದ್ದ ಭಕ್ತ ಸಮೂಹ ಸಾಯಂಕಾಲ ಸ್ನಾನ , ಪೂಜಾದಿ ಕರ್ಮಗಳನ್ನು ಮುಗಿಸಿ ದೇವಸ್ಥಾನಕ್ಕೆ ಆಗಮಿಸಿದರು. ನಂತರ ಪುಷ್ಪಗಳಿಂದ ಅಲಂಕೃತಗೊಂಡ ಶಿವಲಿಂಗ ದರ್ಶನ ಪಡೆದು ಪುನೀತರಾದರು. ಅದರಲ್ಲೂ ಮಹಿಳೆಯರು ಹಣ್ಣುಗಳಿಂದ ಕೂಡಿದ ನೈವಿಧ್ಯ ತಂದು ಅರ್ಪಿಸುವುದು ಸಾಮಾನ್ಯವಾಗಿತ್ತು.ಶಿವರಾತ್ರಿ ಅಂಗವಾಗಿ ಅರ್ಚಕರು ಕಲ್ಮೇಶ್ವರ(ಕಾಶೀಲಿಂಗ)ನಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಬಿಲ್ವಪತ್ರೆ, ಪುಷ್ಪ, ಹಾರಗಳಿಂದ ಅಲಂಕಾರಗೊಳಿಸಿ ಭಕ್ತ ಸಮೂಹದ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದರು.ಪಟ್ಟಣದಲ್ಲಿ ಮಲ್ಲಯ್ಯನ ದೇವಸ್ಥಾನ, ಶಿವನಕಳ್ಳಿಯ ಶಿವನ ದೇವಾಲಯ, ಹೊಸನಗರದ ಪ್ರಳಯರುದ್ರ ಈರಣ್ಣ ದೇವಸ್ಥಾನ, ಇಂಡಿ ರಸ್ತೆಯ ರೇಣುಕಾಚಾರ್ಯ ಮಂದಿರ ಸೇರಿದಂತೆ ಎಲ್ಲ ಶಿವಲಿಂಗಗಳಿಗೆ ಹಾಗೂ ಸದಯ್ಯನಮಠ, ಜಡಿಮಠ, ಕಲ್ಮೇಶ್ವರ ಹಿರೇಮಠ, ಪರದೇಶಿಮಠ, ಶಾಂತಮಠಗಳಲ್ಲಿ ಶಿವರಾತ್ರಿ…
