Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದು, ಉಜ್ವಲ ಯೋಜನೆಯಡಿ ಎಲ್ಪಿಜಿ ಸಿಲಿಂಡರ್ನ ದರದ ಮೇಲಿನ ರೂ. ೧೦೦ ಕಡಿಮೆ ಮಾಡಿದ್ದಾರೆ. ಇದನ್ನು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸ್ವಪ್ನಾ ಕಣಮುಚನಾಳ ಸ್ವಾಗತಿಸಿದ್ದಾರೆ.ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿದ ಅವರು, ಮೋದಿಜಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಉಜ್ವಲ ಯೋಜನೆಯಡಿಯ ಎಲ್ಪಿಜಿ ಸಿಲಿಂqರ್ನ ಸಬ್ಸಿಡಿ ದರವನ್ನು ೨೦೦ರೂ ರಿಂದ ೩೦೦ರೂ ಹೆಚ್ಚಿಸಿದೆ. ಇದು ದೇಶದಾದ್ಯಂತ ೧೦ ಕೋಟಿಗೂ ಹೆಚ್ಚು ಕುಟುಂಬಗಳ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ ಹಾಗೂ ಮೋದಿಜಿ ಕ್ರಮಕ್ಕಾಗಿ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.ಅಡುಗೆ ಅನಿಲ ಸಿಲಿಂಡರ್ ಹೆಚ್ಚು ಕೈಗೆಟಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದ್ದೇವೆ.…
ವಿಜಯಪುರ: ಬಿಜೆಪಿ ಕರ್ನಾಟಕ ಎಸ್ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರನ್ನಾಗಿ ಗೋಪಾಲ ಘಟಕಾಂಬಳೆ ಅವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಆದೇಶ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಎಸ್. ಮಂಜುನಾಥ ಅವರು ಆದೇಶ ಹೊರಡಿಸಿದ್ದಾರೆ.ಗೋಪಾಲ ಘಟಕಾಂಬಳೆ ಅವರು ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಲು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಚಂದ್ರಾಮ ಯಶವಂತ ಹೊನಕಟ್ಟಿ ( ಮಾಸ್ತರ) ಪೂಣ್ಯಾರಾಧನೆ | ಹೊನಕಟ್ಟಿ ಮಾಸ್ತರ್ ಪ್ರಶಸ್ತಿ ಪ್ರದಾನ ವಿಜಯಪುರ: ಮಾದರಿಯಾಗಿ ಶಿಕ್ಷಕರ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಿದ್ದು ಅತ್ಯಂತ ಸ್ತುತ್ಯಾಹ೯ವಾಗಿದೆ ಎಂದು ವಿಜಯಪುರ ವಿಭಾಗದ ಪೋಲೀಸ ಉಪ ಅಧೀಕ್ಷಕ ಬಸವರಾಜ ಯಲಗಾರ ಅಭಿಪ್ರಾಯ ವ್ಯಕ್ತಪಡಿಸಿದರು.ಗುರುವಾರ ತಾಂಬಾ ಹೋಬಳಿಯ ಹರಳಯ್ಯನ ಹಟ್ಟಿ ಗ್ರಾಮದ ಸಿಪಿಐ ಜ್ಯೋತಿಲಿಂಗ ಹೊನಕಟ್ಟಿ ತೋಟದಲ್ಲಿ ದಿ ಚಂದ್ರಾಮ ಯಶವಂತ ಹೊನಕಟ್ಟಿ ( ಮಾಸ್ತರ) ಪೂಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾಸ್ತರ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಡಿಎಸ್ಪಿ ,ಶಿಕ್ಷಕರು ಅತ್ಯಂತ ವಿದ್ವಾಂಸರಾಗಿದ್ದು ನಿತ್ಯ ಅಧ್ಯಯನ ಶೀಲರಾಗಬೇಕು. ಶಿಕ್ಷಣ ಜೊತೆಗೆ ಸಾಂಸ್ಕೃತಿಕ ಪರಿಕಲ್ಪನೆಯಿರಬೇಕು. ಕುಟುಂಬದ ಸಂಸ್ಕಾರ ಪಡೆದ ವ್ಯಕ್ತಿ ತನ್ನ ಜೀವನದ ಮೌಲ್ಯಗಳನ್ನು ಕಾಪಾಡುತ್ತಾನೆ ಅಂತಹ ವ್ಯಕ್ತಿತ್ವ ರೂಪಿಸಿಕೊಂಡಿರುವ ಜ್ಯೋತಿಲಿಂಗ ಹೊನಕಟ್ಟಿ ನಮಗೆ ಮಾದರಿಯ ಎಂದರು.ಕಸಾಪ ಜಿಲ್ಲಾ ಗೌರವ ಕೋಶಾಧ್ಯಕ್ಷ ಡಾ: ಸಂಗಮೇಶ ಮೇತ್ರಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಹೊನಕಟ್ಟಿ ಕುಟುಂಬ ಇಂದಿನ ಆಧುನಿಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕುಟುಂಬದಲ್ಲಿ ಅಗಲಿದ ಎಲ್ಲ…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶುಕ್ರವಾರ ಶಿವರಾತ್ರಿ ಹಬ್ಬವನ್ನು ಜನರು ಶಿವನ ನಾಮಸ್ಮರಣೆಯೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಪಟ್ಟಣದ ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನ, ಶಿವ ದೇಗುಲ, ಗೌರಿ-ಶಂಕರ ದೇವಸ್ಥಾನ, ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿತು.ಬೆಳಿಗ್ಗೆ ಕುಟುಂಬ ಸದಸ್ಯರೊಂದಿಗೆ ಜನರು ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ಉಪವಾಸ ಆರಂಭಿಸಿದರು. ಇನ್ನು ಕೆಲವರು ಮನೆಯಲ್ಲಿಯೇ ದೇವರಿಗೆ ಪೂಜೆ ಸಲ್ಲಿಸಿ ಉಪವಾಸ ಆಚರಣೆ ಆರಂಭಿಸಿದರು. ಸಂಜೆ ವಿವಿಧ ದೇವಸ್ಥಾನಕ್ಕೆ ತೆರಳಿ ಕಾಯಿ, ಕರ್ಪೂರದೊಂದಿಗೆ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಫಲಹಾರ ಸೇವಿಸುವ ಮೂಲಕ ಶಿವರಾತ್ರಿ ಉಪವಾಸ ಬಿಟ್ಟರು. ಐತಿಹಾಸಿಕ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನದಲ್ಲಿ ಶಿವರಾತ್ರಿಯಂಗವಾಗಿ ಸಂಜೆ ವಿಶೇಷ ರುದ್ರಾಭಿಷೇಕ ದೇವಸ್ಥಾನದ ಅರ್ಚಕ ಗೌರಿಶಂಕರ ಚರಂತಿಮಠ ಇವರ ಸಮ್ಮುಖದಲ್ಲಿ ಭಕ್ತರು ನೆರವೇರಿಸಿದರು.ಇಡೀ ರಾತ್ರಿ ಮೂಲನಂದೀಶ್ವರ ದೇವರಿಗೆ ಶಿವರಾತ್ರಿಯಂಗವಾಗಿ ಬಿಲ್ವಾರ್ಚನೆ, ವಿಶೇಷ ಪೂಜೆ ನೆರವೇರಿಸಲಾಯಿತು.ಸಾಮೂಹಿಕ ಇಷ್ಟಲಿಂಗ ಪೂಜೆಃ ಪಟ್ಟಣದ ವಿರಕ್ತಮಠದಲ್ಲಿ ಸಂಜೆ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಜರುಗಿತು. ಸಿದ್ಧಲಿಂಗ…
ಬಸವನಬಾಗೇವಾಡಿ: ಪಟ್ಟಣದ ತೆಲಗಿ ರಸ್ತೆಯಲ್ಲಿರುವ ೨೨೦ ಕೆವ್ಹಿ ಸ್ಟೇಶನ್ ಎದುರಿಗೆ ಇರುವ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಲ್ಲಿಕಾರ್ಜುನ ಜಾತ್ರಾಮಹೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವದಂಗವಾಗಿ ವಿವಿಧ ಕಾರ್ಯಕ್ರಮಗಳು ಸಂಭ್ರಮದಿಂದ ಶುಕ್ರವಾರ ಜರುಗಿದವು.ಜಾತ್ರಾಮಹೋತ್ಸವ, ಮಹಾಶಿವರಾತ್ರಿ ಮಹೋತ್ಸವದಂಗವಾಗಿ ಮಧ್ಯಾನ್ಹ ೧೨.೩೦ ಗಂಟೆಯಿಂದ ಶರಣಯ್ಯ ಮಠಪತಿ ಅವರಿಂದ ಮಲ್ಲಿಕಾರ್ಜುನ ದೇವರಮೂರ್ತಿಗೆ ವಿಶೇಷ ರುದ್ರಾಭಿಷೇಕ ನೆರವೇರಿದ ನಂತರ ಮಲ್ಲಿಕಾರ್ಜುನ ದೇವರಿಗೆ ಅಲಂಕಾರ ಪೂಜೆ ನೆರವೇರಿತು. ರುದ್ರಾಭಿಷೇಕ ಪೂಜೆಯಲ್ಲಿ ಅನೇಕ ಸದ್ಭಕ್ತರು ಭಾಗವಹಿಸುವ ಮೂಲಕ ಮಲ್ಲಿಕಾರ್ಜುನ ದೇವರ ಕೃಪೆಗೆ ಪಾತ್ರರಾದರು.ಬೆಳಗ್ಗೆ ೧೦.೩೦ ಗಂಟೆಗೆ ಅಫಜಲಪುರ ತಾಲೂಕಿನ ರಾಮನಗರದ ಮೈಲಾರಲಿಂಗ ಕಲಾ ಗಾಯನ ಸಂಘ ಹಾಗೂ ಇಂಡಿ ತಾಲೂಕಿನ ಬುಯಾರದ ಮೈಲಾರಲಿಂಗೇಶ್ವರ ಗಾಯನ ಸಂಘದಿಂದ ಹಾಡಕಿ ಪದಗಳು ಜರುಗಿದವು. ಶಿವಯೋಗಗೈದ ಸದ್ಭಕ್ತರಿಗೆ ಫಲಹಾರ ಮತ್ತು ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ರಾತ್ರಿ ಅಥಣಿ ತಾಲೂಕಿನ ಕನ್ನಾಳದ ಶಿವಯೋಗಿ ಸಿದ್ದರಾಮೇಶ್ವರ ನಾಟ್ಯಸಂಘದಿಂದ ಶಿವಯೋಗಿ ಸಿದ್ದರಾಮೇಶ್ವರ ಮಹಾತ್ಮೆ ಎಂಬ ಸುಂದರ ಭಕ್ತ ಪ್ರಧಾನ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು. ನಾಟಕಕ್ಕೆ ಸಚಿವ ಶಿವಾನಂದ ಪಾಟೀಲರು ಚಾಲನೆ ನೀಡಿದರು. ನಾಟಕ ಪ್ರದರ್ಶನ…
ಬಸವನಬಾಗೇವಾಡಿ: ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತರಾಗಿದ್ದ ಶ್ರೀಶೈಲ ಗುರಪ್ಪ ಹಾರಿವಾಳ ಅವರ ಕುಟುಂಬ ಪರಿವಾರದವರಿಗೆ ಹೆಸ್ಕಾಂ ಇಲಾಖೆಯ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಸಚಿವ ಶಿವಾನಂದ ಪಾಟೀಲ ಅವರು ಗುರುವಾರ ಸಂಜೆ ಅವರ ಮನೆಗೆ ತೆರಳಿ ವಿತರಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿದ್ದರಾಮ ಬಿರಾದಾರ, ಹಿರಿಯರಾದ ಬಸವರಾಜ ಹಾರಿವಾಳ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ಪುರಸಭೆ ಸದಸ್ಯ ಅಶೋಕ ಹಾರಿವಾಳ, ಬಸವರಾಜ ನಾಯ್ಕೋಡಿ ಇತರರು ಇದ್ದರು.
ವಚನ ವಿಶ್ವವಿದ್ಯಾಲಯ ಸ್ಥಾಪನೆ ಘೋಷಣೆ: ರಾಷ್ಟ್ರೀಯ ಬಸವ ಸೈನ್ಯ ಹರ್ಷ ಬಸವನಬಾಗೇವಾಡಿ: 12ನೇ ಶತಮಾನದಲ್ಲಿ ವಚನದ ಮೂಲಕ ಕ್ರಾಂತಿಯನ್ನು ಮಾಡಿದ ಮಹಾ ಮಾನವತವಾದಿ ವಿಶ್ವಗುರು ಬಸವಣ್ಣನವರ ಸಮಕಾಲಿನ ಶರಣರ ವಚನಗಳ ಅಧ್ಯಯನಕ್ಕಾಗಿ ವಚನ ವಿಶ್ವವಿದ್ಯಾಲಯವನ್ನು ಮುಂದಿನ ವರ್ಷ ಸರ್ಕಾರ ಆರಂಭಿಸುವುದಾಗಿ ಘೋಷಣೆ ಸಿಎಂ ಘೋಷಣೆ ಮಾಡಿರುವುದನ್ನು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸ್ವಾಗತಿಸಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಕಲ್ಯಾಣದಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿನಂದನಾ ಸಮಾರಂಭದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ವಿಷಯವಾಗಿದೆ.ಈಚೆಗೆ ಸರ್ಕಾರ ಬಸವಣ್ಣನವರನ್ನು ಸಾಂಸ್ಕ್ರತಿಕ ನಾಯಕ ಎಂದು ಘೋಷಣೆ ಮಾಡಿರುವದು ಬಸವನಾಡಿನ ಜನರಿಗೆ ಸಂತಸ ತಂದಿದೆ. ಈಗಾಗಲೇ ರಾಜ್ಯ ಸರ್ಕಾರವು ಬಸವಣ್ಣನವರ ಕರ್ಮಭೂಮಿ ಬಸವ ಕಲ್ಯಾಣದಲ್ಲಿ ಸುಮಾರು 600 ಕೋಟಿ ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಮಾಡುತ್ತಿದೆ. ಕೂಡಲಸಂಗಮದಲ್ಲಿ ವಚನ ಅಧ್ಯಯನ ಪೀಠ ಸೇರಿದಂತೆ ಬಸವಣ್ಣನವರ ಸಮಕಾಲಿನ ಶರಣರ ಸ್ಮಾರಕಗಳು ನಿರ್ಮಾಣಗೊಂಡಿದ್ದು…
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಮಾರ್ಚ್ ೯ ಹಾಗೂ ೧೦ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಮಾ.೯ರಂದು ಬೆಳಿಗ್ಗೆ ೧೧ ಗಂಟೆಗೆ ಸೋಲಾಪುರ ರಸ್ತೆಯಲ್ಲಿ ಒಣದ್ರಾಕ್ಷಿ ಸಂಸ್ಕರಣಾ ಘಟಕದ ಉದ್ಘಾಟನೆ ನೆರವೇರಿಸಿ ಮಧ್ಯಾಹ್ನ ೧೨ ಗಂಟೆಗೆ ಬಬಲೇಶ್ವರದಲ್ಲಿ ಬಬಲೇಶ್ವರ ತಾಲೂಕು ಮಿನಿ ವಿಧಾನಸೌಧ ಉದ್ಘಾಟನೆ ಹಾಗೂ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ಗಂಟೆಗೆ ಬಬಲೇಶ್ವರದಿಂದ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಮಾ.೧೦ ರಂದು ಬೆಳಿಗ್ಗೆ ೯-೩೦ಕ್ಕೆ ಬಿ.ಎಲ್.ಡಿ.ಇ. ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಆಯೋಜಿಸಿರುವ ವೈದ್ಯಕೀಯ ವಿಷಯಗಳ ರಂಗೋಲಿ ವೀಕ್ಷಣೆ ಮಾಡಿ, ಬೆಳಿಗ್ಗೆ ೧೦-೩೦ಕ್ಕೆ ೭೭೦ ಲಿಂಗ ದೇವಾಲಯ ಆವರಣದಲ್ಲಿರುವ ೭೭೦ ಅಮರ ಗಣಾಧೀಶ್ವರ ಸ್ಮಾರಕ ಲಿಂಗ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ ೧೧-೩೦ಕ್ಕೆ ಜಿಲ್ಲಾ ಕೇಂದ್ರ ಕಾರಾಗೃಹದ ಹತ್ತಿರ, ನೂತನ ಎನ್.ಸಿ.ಸಿ. ಕಟ್ಟಡದ…
ವಿಜಯಪುರ: ವಿಶ್ವ ಶ್ರವಣ ದಿನದ ಅಂಗವಾಗಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂಸುಭಾಸ ಬಿದರಿ ಮೆಮೋರಿಯಲ್ ಜೈಲ್ಡ್ ಗದ್ದಲಪ್ಮೆಂಟ್ ಸೆಂಟರ್ ಆಶ್ರಯದಲ್ಲಿ ಮಾ. 5 ರಿಂದ ಡಾ|ಬಿದರಿಯವರ ಅಶ್ವಿನಿ ಆಸ್ಪತ್ರೆಯ 4ನೆಯ ಮಹಡಿಯಲ್ಲಿ ನಡೆದ ಎರಡು ದಿನಗಳ ಶಿಬಿರದಲ್ಲಿ ಸುಮಾರು 35ಜನರ (ಮಕ್ಕಳು ಹಾಗೂ ವಯಸ್ಕರು ಸೇರಿದಂತೆ) ಶ್ರವಣ ದೋಷ ತಪಾಸಣೆಯನ್ನು ಯಶಸ್ವಿಯಾಗಿನಡೆಸಲಾಯಿತು. ಇದರ ಜೊತೆಗೆ ಮಕ್ಕಳಿಗಾಗಿ ಮಾತಿನ ಅಸ್ವಸ್ಥತೆಯನ್ನು ಕೂಡಾ ಪರೀಕ್ಷಿಸಲಾಯಿತು.ಅವರಲ್ಲಿ 8 ಮಕ್ಕಳಿಗೆ ಎರಡೂ ಕಿವಿಗಳಿಗೆ (ದ್ವಿಪಕ್ಷೀಯ) ಶ್ರವಣ ಸಾಧನಗಳು ಬೇಕಾಗಿದ್ದು, ಇದು ಅವರ ಶಿಕ್ಷಣ ಮತ್ತು ಭಾಷಾ ಕಲಿಕೆಗೆ ಮುಖ್ಯವಾಗಿದೆ. ಇದರ ಜೊತೆಗೆ 20 ವಯಸ್ಕರಿಗೆ ಏಕಪಕ್ಷೀಯ ಶ್ರವಣಸಾಧನವನ್ನು ಒದಗಿಸಲು ನಿರ್ಧರಿಸಲಾಗಿದ್ದು, ಒಟ್ಟಾರೆ 36 ಶ್ರವಣ ಸಾಧನಗಳು ಬೇಕಾಗಿದ್ದು, ಇದರ ಜವಾಬ್ದಾರಿಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಹಿಸಿಕೊಂಡಿದೆ. ಡಿಜಿಟಲ್ ಶ್ರವಣ ಸಾಧನಗಳು ಉತ್ತಮ ಮಾತಿನ ಸ್ಪಷ್ಟತೆ ಮತ್ತು ಬಾಳಿಕೆಯನ್ನು ಒದಗಿಸುವುದರಿಂದ ಸ್ಟಾಕೀ ಕಂಪನಿಯ’ಮ್ಯೂಸ್’ ಐಕ್ಯೂ 1000′ ಶ್ರವಣ ಸಾಧನಗಳನ್ನು ಫಲಾನುಭವಿಗಳಿಗೆ…
ಲೋಕಸಭೆ ಚುನಾವಣೆಯಲ್ಲಿ ಲಿಂಗಾಯತ ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ | ಬಿಎಸ್ ಯಡಿಯೂರಪ್ಪ ಸೂಚನೆ ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಭಾರಿ ಗೆಲುವು ಸಾಧಿಸುವ ಪ್ಲ್ಯಾನ್ ಮಾಡಿರುವ ಬಿಜೆಪಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಪ್ರಬಲ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಕಣಕ್ಕಿಳಿಸುವ ಸಾಧ್ಯತೆಗಳಿವೆ.ಈ ಕುರಿತು ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿದಂತೆ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ನಡೆದಿದೆ, ಆದರೆ ಅಂತಿಮವಾಗಿಲ್ಲ. ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.ಬಿಜೆಪಿಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ಗೆ ಎರಡು ಅಥವಾ ಮೂರು ಸ್ಥಾನಗಳನ್ನು ನೀಡಬಹುದು ಎಂದು ಸುಳಿವು ನೀಡಿದ್ದಾರೆ. ಪ್ರಧಾನಿ…
