Author: editor.udayarashmi@gmail.com

ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರ ಗುರು ಪಟ್ಟಾಧಿಕಾರ ಮಹೋತ್ಸವ ಮುದ್ದೇಬಿಹಾಳ: ಸ್ವಧರ್ಮದಲ್ಲಿ ನಿಷ್ಠೆ, ಪರ ಧರ್ಮದಲ್ಲಿ ಸಹಿಷ್ಣುತೆ ಕಾಪಾಡಿಕೊಂಡು ಬರುವದೇ ಎಲ್ಲ ಧರ್ಮಗಳ ಮೂಲ ಗುರಿಯಾಗಬೇಕು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಭಗವತ್ಪಾದಕರು ಹೇಳಿದರು.ತಾಲೂಕಿನ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರ ಗುರು ಪಟ್ಟಾಧಿಕಾರ ಮಹೋತ್ಸವದ ಕೊನೆಯ ದಿನದ ಧರ್ಮ ಸಂದೇಶ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಇವತ್ತಿನ ದಿನಮಾನಗಳಲ್ಲಿ ಕೆಲವು ಜಾತಿ ಜನಾಂಗಗಳನ್ನು ಪುಷ್ಠೀಕರಿಸುವಂತಹ ಕೆಲವು ಸಮುದಾಯಗಳನ್ನು ವ್ಯವಸ್ಥಿತವಾಗಿ ತುಳಿಯುವಂತಹ ಹುನ್ನಾರ ಕೆಲವು ಸಂದರ್ಭಗಳಲ್ಲಿ ನಡೆಯುತ್ತಿದೆ. ಇದು ಖಂಡಿತ ಒಳ್ಳೆಯ ಬೆಳವಣಿಗೆಯಲ್ಲ ಎಂದರು.ಇತಿಹಾಸ ಹೇಳುತ್ತೆ ನಿನ್ನೆ ಸುಖ ಇತ್ತು ಅಂತ, ವಿಜ್ಞಾನ ಹೇಳುತ್ತೆ ನಾಳೆ ಸುಖ ಇದೆ ಎಂದು. ಆದರೆ ಮನುಷ್ಯ ಪ್ರಾಮಾಣಿಕವಾಗಿ, ದಕ್ಷತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿದಲ್ಲಿ ಜೀವನದಲ್ಲಿ ಪ್ರತಿನಿತ್ಯ ಸುಖವನ್ನು ಕಾಣಬಹುದು ಎಂದು ಧರ್ಮ ಸ್ಪಷ್ಠವಾಗಿ ಹೇಳುತ್ತೆ. ಮಾನವನ ಉಜ್ವಲ ಭವಿಷ್ಯಕ್ಕೆ ಧರ್ಮ ದಿಕ್ಸೂಚಿಯಾಗಿದೆ ಪ್ರತಿಯೊಬ್ಬರ ಪಾಲನೆ ಅಗತ್ಯವಿದೆ ಎಂದರು.ಗುರು ಚನ್ನವೀರ…

Read More

ಸಿಂದಗಿ: ಸಿಂದಗಿ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ೪೪ ನೇ ಪುಣ್ಯಸ್ಮರಣೋತ್ಸವ ಹಾಗೂ ಗದುಗಿನ ತೋಂಟದಾರ್ಯ ಮಠದ ಲಿಂ. ಶ್ರೀ ಜಗದ್ಗುರು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ೬ ನೇ ಗುರು ಸ್ಮರಣೆ ಕಾರ್ಯಕ್ರಮವು ಮಾ.೧೩ ರಿಂದ ಮಾ.೧೯ ರ ವರೆಗೆ ಪ್ರತಿ ದಿನ ಸಾಯಂಕಾಲ ೭ ಗಂಟೆಗೆ ಸಿಂದಗಿಯ ಊರಿನ ಹಿರಿಯಮಠದಲ್ಲಿ ಜರುಗಲಿದೆ ಎಂದು ಶ್ರೀಮಠದ ಪೀಠಾಧ್ಯಕ್ಷರಾದ ಶಿವಾನಂದ ಶಿವಾಚಾರ್ಯರು ತಿಳಿಸಿದ್ದಾರೆ.ಮಾ.೧೩ ರಂದು ಕನ್ನೋಳ್ಳಿಯ ಹಿರೇಮಠದ ಶತಾಯುಷಿ ಲಿಂ ಪೂಜ್ಯ ಶ್ರೀ ಮರುಳಾರಾಧ್ಯ ಶಿವಾಚಾರ್ಯರ ವೇದಿಕೆಯಲ್ಲಿ ಸಂಜೆ ೭ ಗಂಟೆಗೆ ಸ್ಮರಣೋತ್ಸವ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಕನ್ನೋಳ್ಳಿಯ ಹಿರೇಮಠದ ಶ್ರೀ ಸಿದ್ದಲಿಂಗ ಶೀವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಸ್ಥಳಿಯ ಭೀಮಾಶಂಕರ ಮಠದ ಶ್ರೀ ಸದ್ಗುರು ದತ್ತಯೋಗೀಶ ಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಸಿಂದಗಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ದಾನಯ್ಯ ಮಠಪತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಮಾ.೧೪ ರಂದು ಆಲಮೇಲದ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯರು ಸಾನಿಧ್ಯದಲ್ಲಿ ಮಹಿಳಾ ವಿಚಾರ ಗೋಷ್ಠಿ ನಡೆಯಲಿದ್ದು…

Read More

ಮುದ್ದೇಬಿಹಾಳ: ತಾಲೂಕಿನ ಢವಳಗಿ ಗ್ರಾಮದ ಆರಾಧ್ಯದೈವ ಮಡಿವಾಳೇಶ್ವರರ ೫೧೭ ನೇ ಜಾತ್ರಾ ಮಹೋತ್ಸವ ಮಾ.೮ ರಿಂದ ಪ್ರಾರಂಭವಾಗಿದ್ದು ಮಾ.೨೫ ರವರೆಗೆ ಅದ್ಧೂರಿಯಾಗಿ ನಡೆಯಲಿದೆ.ಮಾ.೧೧ ರಿಂದ ಉಚ್ಚಾಯ ಎಳೆಯುವದು. ಮಾ.೧೮ ರ ಸಂಜೆ ೪ಗಂಟೆಗೆ ಜಗದ್ಗುರು ಡಾ.ಸಿದ್ದಲಿಂಗ ಶಿವಾಚಾರ್ಯ ಭಗವತ್ಪಾದಕರ ಅದ್ದೂರಿ ಜೋಡು ಅಡ್ಡಪಲ್ಲಕ್ಕಿ ಮಹೋತ್ಸವ. ಸಂಜೆ ೭ಕ್ಕೆ ಧರ್ಮಸಭೆ ಮತ್ತು ಸನ್ಮಾನ ಸಮಾರಂಭ. ಮಾ.೧೯ ರಂದು ಸಂಜೆ ೫ಗಂಟೆಗೆ ರಥೋತ್ಸವ ರಾತ್ರಿ ೧೦:೩೦ ಕ್ಕೆ ರಸಮಂಜರಿ ಕಾರ್ಯಕ್ರಮ. ಮಾ.೨೦ ರಂದು ಜಾನುವಾರಗಳ ಪ್ರದರ್ಶನ, ಮಾ.೨೧ ರಂದು ದೇಹದಾರ್ಡ್ಯ ಸ್ಪರ್ದೆಗಳು ನಂತರ ಪ್ರಥಮಬಾರಿಗೆ ಶ್ವಾನಗಳ ಓಟದ ಸ್ಪರ್ದೆ ಸಂಜೆ ಕಡುಬಿನ ಕಾಳಗ, ಮಾ.೨೨ ರಂದು ಎತ್ತುಗಳಿಂದ ದಿಂಡು ಬಡಿಯುವ ಸ್ಪರ್ದೆ, ಮಾ.೨೩ ಕ್ಕೆ ತರಬಂಡಿ ಸ್ಪರ್ದೆ, ಮಾ.೨೪ ಕ್ಕೆ ಪುಟ್ಟಿಗಾಡಿ ರೇಸ್, ಮಾ.೨೫ ರಂದು ಕಳಸ ಇಳಿಸುವದು ಹಾಗೂ ಹಂಪಾ ಕೊಡುವದು ಹೀಗೆ ವಿವಿಧ ವಿಶೇಶ ಕಾರ್ಯಕ್ರಮಗಳು ಜರುಗಲಿವೆ. ಪ್ರತಿದಿನ ಸಂಜೆ ೭:೩೦ ಗಂಟೆಯಿಂದ ಕಲಬುರಗಿಯ ಮಹಾದಾಸೋಗಿ ಶ್ರೀ ಶರಣಬಸವೇಶ್ವರರ ಪುರಾಣ ಸಾಗುವದು.

Read More

ಇಂಡಿ: ಮಹಿಳೆಯರು ರಾಜಕೀಯ, ಶಿಕ್ಷಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ಹೊಂದಿ ಅವರೂ ಗೌರವದ ಬದುಕು ನಡೆಸುವ ಅವಕಾಶ ಪಡೆದುಕೊಂಡರೂ ಕೆಲವೆಡೆ ಶೋಷಣೆ ಮಾತ್ರ ಇನ್ನೂ ನಿಂತಿಲ್ಲ ಎಂದು ಸರಕಾರಿ ಆಸ್ಪತ್ರೆಯ ವೈದ್ಯೆ ಡಾ|| ಪ್ರೀತಿ ಕೋಳೆಕರ ವಿಷಾಧಿಸಿದರು.ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿವಿಯಲ್ಲಿ ಮಹಿಳಾ ದಿನಾಚರಣೆ ಮತ್ತು ೮೮ ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಬ್ರಹ್ಮ ಕುಮಾರಿ ಮುಖ್ಯಸ್ಥೆ ಬಿ.ಕೆ.ಯಮುನಾ ಅಕ್ಕನವರು ಮಾತನಾಡಿ ನಮ್ಮ ಜನಸಂಖ್ಯೆಯಲ್ಲಿ ಶೇ ೫೦ ರಷ್ಟು ಮಹಿಳೆಯರಿದ್ದರೂ ಕೆಲವು ಕಡೆ ಅವರ ದುಡಿಮೆಗೆ ಮನ್ನಣೆ ಸಿಗುತ್ತಿಲ್ಲ. ಅದರಲ್ಲೂ ಪ.ಜಾತಿ, ಪ. ಪಂಗಡ ಮಹಿಳೆಯರಲ್ಲಿ ಅಪಾರ ಪ್ರತಿಭೆ ಮತ್ತು ಕೌಶಲಗಳಿವೆ. ಆದರೆ ಒಟ್ಟು ಸ್ತ್ರೀಯರ ಪೈಕಿ ಶೇ ೫ ರಿಂದ ೧೦ ರಷ್ಟು ಮಂದಿ ಮಾತ್ರ ಅರ್ಥಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಹೆಣ್ಣುಮಕ್ಕಳ ದುಡಿಮೆಗೆ ನೆಲೆ ಬೆಲೆಗಳು ಸಿಕ್ಕರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ದಿ ಸಾದ್ಯವಾಗುತ್ತದೆ ಎಂದರು.ಕದಳಿ ವೇದಿಕೆ ಉಪಾಧ್ಯಕ್ಷ ರಾಜೇಶ್ವರಿ ಕ್ಷತ್ರಿಯವರು ಮಾತನಾಡಿ ಮಹಿಳೆಯರು ಇಂದು…

Read More

ಇಂಡಿ: ಸೊಳ್ಳೆಗಳಿಂದ ಮಲೇರಿಯಾ ರೋಗ ಹರಡುತ್ತಿದ್ದು, ಸೊಳ್ಳೆಗಳನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲರೂ ಮುಂದಾಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿಗಳಾದ ಅರ್ಚನಾ ಕುಲಕರ್ಣಿ ಹೇಳಿದರು.ಅವರು ಪಟ್ಟಣದ ಏಂಜೆಲ್ಸ್ ಆಂಗ್ಲ ಮಾಧ್ಯಮ ಹಾಗೂ ಅನುದಾನಿತ ಕ್ರೈಸ್ತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆಯ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಇಲ್ಲದೇ ಇದ್ದರೆ ಸೊಳ್ಳೆಗಳ ಉತ್ಪತ್ತಿಯಿಂದ ಮಾರಣಾಂತಿಕ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಎಲ್ಲರೂ ಸ್ವಚ್ಚತೆಯ ಬಗ್ಗೆ ಗಮನಹರಿಸಿದಾಗ ಮಾತ್ರ ನಿಯಂತ್ರಣ ಸಾಧ್ಯವೆಂದು ತಿಳಿಸಿದರು.ಶಿಕ್ಷಣ ಸಂಯೋಜಕರಾದ ಮಹೇಶ ಡೇoಬ್ರೆ ಮಾತನಾಡಿದರು.ಆರ್ ಡಿ ಈ ಸಂಸ್ಥೆಯ ಅಧ್ಯಕ್ಷೆ ಡಿ ಶಿರೋಮಣಿ ಅಧ್ಯಕ್ಷತೆ ವಹಿಸಿದ್ದರು.ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಸ್ ಎಸ್ ಪತ್ತಾರ,ಏಂಜೆಲ್ಸ್ ಶಾಲೆಯ…

Read More

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ. ಎಚ್.ಕೆ, ಬೆಂಗಳೂರು ನಮ್ಮ ಪ್ರಬುದ್ಧ ಸಮಾಜ ನಿರ್ಮಾಣ ವೇದಿಕೆಯ ಗೆಳೆಯರ ಪ್ರೀತಿಯ ಒತ್ತಾಯಪೂರ್ವಕ ಆಹ್ವಾನದ ಮೇರೆಗೆ ಶ್ರೀಶೈಲದ ಸುಮಾರು 60 ಕಿಲೋಮೀಟರ್ ದೂರದ ಶಿವರಾತ್ರಿ ಹಬ್ಬದ ನಲ್ಲಮಲ್ಲ ಕಾಡಿನ ಪಾದಯಾತ್ರೆ ಒಪ್ಪಿಕೊಂಡು ಹೋಗಿದ್ದೆನು. ಬೆಂಗಳೂರಿನಿಂದ ಬೆಳಗ್ಗೆ ವಾಹನದಲ್ಲಿ ಹೊರಟು ಸಂಜೆ 7 ಗಂಟೆಗೆ ಆಂಧ್ರಪ್ರದೇಶದ ನಲ್ಲ ಮಲ್ಲ ಅರಣ್ಯದ ಹೆಬ್ಬಾಗಿಲು ಆತ್ಮಕೂರು ತಲುಪಿದೆವು. ಅಲ್ಲಿಂದ ಪ್ರಾರಂಭವಾದ ಪಾದಯಾತ್ರೆ ಕೊನೆಯ ಹಂತ ತಲುಪಿ ಮುಖ್ಯ ದೇವಸ್ಥಾನ ತಲುಪುವವರಿಗೆ ಸುಮಾರು ಬೆಳಗ್ಗೆ 11 ಗಂಟೆ ಆಗಿತ್ತು. ದಟ್ಟ ಕಾಡಿನ ನಡುವೆ ಸಾಕಷ್ಟು ಬೆಟ್ಟಗುಡ್ಡಗಳ ಏರಿಳಿತಗಳ ನಡುವೆ ಮತ್ತೆ ಈ ಬೇಸಿಗೆಯಲ್ಲಿ ಮತ್ತು ಆ ರಾತ್ರಿಯ ಕಾಡಿನ ಸ್ವಲ್ಪ ತಂಪು ಹವೆಯ ವಾತಾವರಣದಲ್ಲಿ ಜೊತೆಗೆ ಬೆಳಗಿನ 40 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ನಿರಂತರ 16 ಗಂಟೆಗಳ ಈ ಯಾತ್ರೆ ಒಂದು ದೊಡ್ಡ ಸವಾಲಿನಿಂದ ಕೂಡಿರುತ್ತದೆ. ಅದು ದೇಹ ಮತ್ತು ಮನಸ್ಸಿನ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ. ಸ್ವಲ್ಪ ಪೂರ್ವ ತಯಾರಿಯು ಬೇಕಾಗುತ್ತದೆ..…

Read More

ಸಿಂದಗಿ: ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನ ಜಯಂತಿ ಮಹಾಶಿವರಾತ್ರಿ ಗೊಂದು ವಿಶೇಷ ಅರ್ಥವಿದೆ ಎಂದು ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕಿ ಪವಿತ್ರಾಜಿ ಹೇಳಿದರು.ನಗರದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡ 88ನೇ ತ್ರಿಮೂರ್ತಿ ಶಿವಜಯಂತಿ ಹಾಗೂ ಮಹಾಶಿವರಾತ್ರಿಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಶಿವನೆಂದರೆ ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯನಾದ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ ಎಂದರು.ಈ ಸಂದರ್ಭದಲ್ಲಿ ಮಾತನಾಡಿದ ಮನಗೂಳಿ ಕಾಲೇಜಿನ ಪ್ರಾಚಾರ್ಯ ಡಾ ಬಿ ಜಿ ಪಾಟೀಲ, ಸರಳತೆ, ಪ್ರಾಮಾಣಿಕತೆಯಿಂದ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ…

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ | ಜಿಲ್ಲಾ ಛಾಯಾಸಾಧಕಿ ಪ್ರಶಸ್ತಿ ಪ್ರದಾನ | ಚಿತ್ರಕಲಾ ಪ್ರದರ್ಶನ | ಕೃತಿ ಬಿಡುಗಡೆ ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ (ರಿ), ಬೆಂಗಳೂರು ಸಹಯೋಗದಲ್ಲಿ ಸಹಯೋಗದಲ್ಲಿ ಮಾ‌.೦೮ ರಂದು ನಗರದ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಛಾಯಾಗ್ರಹಣ ಕ್ಷೇತ್ರದಲ್ಲಿರುವ ಮಹಿಳೆಯರಿಗೆ ಜಿಲ್ಲಾ ಛಾಯಾಸಾಧಕಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಚಿತ್ರಕಲಾ ಪ್ರದರ್ಶನ, ಹಾಗೂ ಡಾ. ಎಸ್.ಟಿ. ಮೇರವಾಡೆ ರಚಿಸಿದ “ಆಭರಣ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಶ್ವೇತಾ ಮೋಹನ ಬೀಡಿಕರ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಸಂಪತ್ತಿಗಿಂತಲು ಕಲೆ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರ ಅತ್ಯಂತ ಪವಿತ್ರವಾದುದ್ದು.ಮಅದರಲ್ಲೂ ವಿಶೇಷವಾಗಿ ಛಾಯಾಗ್ರಹಣ ಕ್ಷೇತ್ರ ಅತ್ಯಂತ ಆಸಕ್ತಿದಾಯಕ ಕ್ಷೇತ್ರ. ಈ ಕ್ಷೇತ್ರದಲ್ಲಿ ಪುರುಷರಷ್ಟೆ ಸರಿಸಮಾನರಾಗಿ ಮಹಿಳೆಯರು ಅಂತರರಾಷ್ಟ್ರಿಯವಾಗಿ ಗುರುತಿಸಿಕೊಳ್ಳುವಷ್ಟು ಮಟ್ಟಿಗೆ ಬೆಳೆಯುತಿದ್ದಾರೆ. ಅದರಲ್ಲಿ ಐತಿಹಾಸಿಕ ನಗರ ವಿಜಯಪುರದಲ್ಲಿ ಇಷ್ಟೊಂದು ಮಹಿಳೆಯರು ಛಾಯಾಗ್ರಹಣ ಕ್ಷೇತ್ರದಲ್ಲಿದ್ದು ಅವರನ್ನು ಜಿಲ್ಲಾ ಸಂಘದಿಂದ ಮಹಿಳಾ ದಿನಾಚರಣೆಯ…

Read More

ವಿಜಯಪುರ: ವಿಜಯಪುರದಲ್ಲಿ ಶನಿವಾರ ಮಾ.9 ರಂದು 11 ಗಂಟೆಗೆ ಪಂಚಗಂಗಾ ಒಣದ್ರಾಕ್ಷಿ ಸಂಸ್ಕರಣಘಟಕವನ್ನುಯೋಗಾಶ್ರಮದ ಶ್ರೀಬಸವಲಿಂಗಮಹಾಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಉದ್ಯಮಿ ಅಣ್ಣಾರಾಯ ಬಿರಾದಾರ ಹೇಳಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲೆಯಸಚಿವರುಗಳಾದ ಎಂ ಬಿ ಪಾಟೀಲ್ ಮತ್ತು ಶಿವಾನಂದ ಪಾಟೀಲ್, ಸಂಸದ ರಮೇಶ್ ಜಿಗಜಿಣಿಗಿ ಅಲ್ಲದೆ ಶಾಸಕರುಗಳಾದ ಬಸವರಾಜಪಾಟೀಲ್ ಯತ್ನಾಳ್, ಯಶವಂತರಾಯಗೌಡ ಪಾಟೀಲ್, ಅಪ್ಪಾಜಿ ಪಾಟೀಲ್, ವಿಠಲ ಕಟಕದೊಂಡ, ರಾಜುಗೌಡಪಾಟೀಲ್, ಅಶೋಕ್ ಮನಗೂಳಿ, ಮಾಜಿ ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಸುನಿಲಗೌಡಪಾಟೀಲ್, ದೆಹಲಿಯ ರಾಷ್ಟ್ರೀಯತೋಟಗಾರಿಕಾ ಬೋರ್ಡ್ ನಿರ್ದೇಶಕ ಭೀಮಸೇನ್ ಲೋಕರೆ, ಮಾಜಿ ಶಾಸಕ ಸೋಮನಗೌಡ ಪಾಟೀಲ, ಪಶ್ಚಿಮ ಬಂಗಾಳದ ನಿವೃತ್ತ ಡಿಜಿಪಿ ಜಿಎಂಪಿ ರೆಡ್ಡಿ ಅವರುಗಳುಆಗಮಿಸಲಿದ್ದಾರೆ ಎಂದು ಹೇಳಿದರು.ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಮತ್ತು ಅಥಣಿ ಪರಿಸರದ ಲಕ್ಷಾಂತರ ಎಕರೆಯಲ್ಲಿ ದ್ರಾಕ್ಷಿಬೆಳೆಯಲಾಗುತ್ತಿದ್ದುದೇಶದ ಒಣ ದ್ರಾಕ್ಷಿ ಮಾರುಕಟ್ಟೆಯ ಒಟ್ಟು 60% ಒಣದ್ರಾಕ್ಷಿ ಬೇಡಿಕೆಯನ್ನು ಈ ಎರಡು ಜಿಲ್ಲೆಗಳಿಂದ ಪೂರೈಸಲಾಗುತ್ತಿದೆ ಎನ್ನುವುದು ಹೆಮ್ಮೆಯ ವಿಷಯ. ಆದರೆ…

Read More

ವಿಜಯಪುರ: ಶ್ರೇಷ್ಠ, ಬಹುಮುಖ ವ್ಯಕ್ತಿತ್ವ ಹಾಗೂ ಪ್ರತಿಭಾ ಸಂಪನ್ನರಾದ ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿರುವುದು ಅತ್ಯಂತ ಶ್ರೇಷ್ಠ ಹಾಗೂ ಸಂತಸದ ಸಂಗತಿ, ಈ ನಿರ್ಧಾರದ ಮೂಲಕ ಮಹಿಳಾ ದಿನಾಚರಣೆಗೆ ಮತ್ತಷ್ಟು ಮೆರಗು ಬಂದಿದೆ ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ‌.ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಧಾಮೂರ್ತಿ ಸಮಾಜ ಸುಧಾರಕಿಯೂ ಹೌದು, ಕರುಣಾಮೂರ್ತಿಯೂ ಹೌದು. ಇನ್ಫೋಸಿಸ್ ಎಂಬ ಬೃಹತ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಅವರು ಸಲ್ಲಿಸುತ್ತಿರುವ ಸೇವೆ ಅನನ್ಯ, ಪ್ರಕೃತಿ ವಿಕೋಪ ಬಂದಾಗ ತಮ್ಮ ತಂಡದೊಂದಿಗೆ ನೆರವು, ಸಂತ್ರಸ್ತರಿಗೆ ಅಭಯ, ಕೋವಿಡ್ ಕಾಲಘಟ್ಟದಲ್ಲಿ ಮನುಕುಲದ ಸೇವೆ ಮಾಡಿದ್ದು ಜನರಿಗೆ ಮಾದರಿ.ಸಮಾಜ ಸೇವೆಯ ಜೊತೆಗೆ ಸಾಹಿತ್ಯಿಕವಾಗಿಯೂ ಅವರು ನೀಡಿದ ಕೊಡುಗೆ ಅನನ್ಯ, ಕಂಪ್ಯೂಟರ್ ಸಾಕ್ಷರತೆ ಸೇರಿದಂತೆ ಹಲವಾರು ರೀತಿಯ ಪುಸ್ತಕವನ್ನು ಸಮಾಜಕ್ಕೆ ಅರ್ಪಿಸಿದ್ದಾರೆ.ದೊಡ್ಡ ಉದ್ಯಮಿಯಾದರೂ ಸಹ ಅತ್ಯಂತ ಸರಳ ಜೀವನ ನಡೆಸುವ ಸುಧಾಮೂರ್ತಿ ಅವರ ಜೀವನ ಪ್ರತಿಯೊಬ್ಬರಿಗೂ…

Read More