Author: editor.udayarashmi@gmail.com

ಬಿಎಲ್ಡಿಇ ವತಿಯಿಂದ ರೂ.1.51 ಕೋಟಿ ವೆಚ್ಚದಲ್ಲಿ ನವೀಕರಿಸಲಾದ 770 ಲಿಂಗಗಳ ದೇವಸ್ಥಾನ ಉದ್ಘಾಟನೆ ವಿಜಯಪುರ: ನಗರದ ಭಕ್ತಿಕೇಂದ್ರವಾದ 770 ಅಮರಗಣಂಗಳರ ಸ್ಮಾರಕ ಲಿಂಗ ದೇವಾಲಯ ನವೀಕರಣ ಮತ್ತು ಮಂದಿರದಲ್ಲಿರುವ ಎಲ್ಲ ಲಿಂಗಗಳನ್ನು ಪುನರುಜ್ಜೀವನ ಮಾಡುವ ಅವಕಾಶ ನಮ್ಮ ಬಿ.ಎಲ್.ಡಿಇ ಸಂಸ್ಥೆಗೆ ಒದಗಿ ಬಂದಿರುವುದು ಸುದೈವ. ಈ ಮೂಲಕ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಮಹನೀಯರಿಗೆ ಹಾಗೂ 12ನೇ ಶತಮಾನದ 770 ಶಿವಶರಣರಿಗೆ ನಾವು ಅಳಿಲು ಸೇವೆಯ ರೂಪದಲ್ಲಿ ಗೌರವ ಸಲ್ಲಿಸಿದ್ದೇವೆ ಎಂದು ಸಂಸ್ಥೆಯ ನಿರ್ದೇಶಕ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದ ರೂ. 1.51 ಕೋಟಿ ವೆಚ್ಚದಲ್ಲಿ ನವೀಕರಿಸಲಾದ 770 ಲಿಂಗಗಳ ದೇವಸ್ಥಾನ ಹಾಗೂ ಪುನರುಜ್ಜೀವನ ಮಾಡಲಾದ ಲಿಂಗಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಿಂದ ರೂ. 1.51 ಕೋ. ವೆಚ್ಚದಲ್ಲಿ ನಗರದ 770 ಅಮರಗಳಂಗಳರ ಲಿಂಗದ ಗುಡಿ ನವೀಕರಣ ಮತ್ತು ಈ ಹಿಂದೆ ಶೆಲ್ಲಿಕೇರಿ ಶಿಲೆಗಳಿಂದ ತಯಾರಿಸಲಾಗಿದ್ದ ಎಲ್ಲ ಲಿಂಗಗಳನ್ನು ಈಗ ಕೃಷ್ಣ ಶಿಲೆಯಿಂದ…

Read More

ಡಾ.ಪೂರ್ಣಿಮಾ ಧಾಮಣ್ಣವರ ಕನ್ನಡ ಉಪನ್ಯಾಸಕರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯಡಾ. ಫ, ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರ, ವಿಜಯಪುರ ಮಾರ್ಚ ೮ ಅಂತರಾಷ್ಟ್ರೀಯ ಮಹಿಳಾ ದಿನಚಾರಣೆಯ ಶುಭಾಶಯಗಳನ್ನ ತಿಳಿಸುತ್ತಾ ಮಹಿಳಾಪರ ಚಿಂತನೆ ಕುರಿತು ಅವಳ ಪರವಾದ ನಿಲುವುಗಳ ಕುರಿತಾಗಿ ಹಾಗೂ ಅವಳ ಹಕ್ಕು ಬಾದ್ಯತೆಗಳ ಕುರಿತು ಅವಳೆಷ್ಟು ತಿಳಕೊಂಡಿದ್ದಾಳೆ. ಅವು ಸಂವಿಧಾನದಲ್ಲಿ ಉಲ್ಲೇಖಕೊಂಡಿರುವುದರ ಬಗ್ಗೆ ಮಹಿಳೆಯರಿಗೆ ಸೂಕ್ಷ್ಮವಾಗಿ ತಿಳಿಸುವ ಪ್ರಯತ್ನವೇ ಈ ಲೇಖನದ ಮುಖ್ಯ ಉದ್ದೇಶವಾಗಿದೆ.೧೯೫೦ ಜನವರಿ ೨೬ರಂದು ಭಾರತ ದೇಶಕ್ಕೆ ಸಂವಿಧಾನ ಜಾರಿಗೆ ಬಂತು. ಅವತ್ತಿನಿಂದ ಮಹಿಳೆಯರ ಸ್ಥಿತಿಗತಿಗಳ ಕುರಿತು ಹೇಳುವುದಾದರೆ ಆಕೆಯ ಮೇಲೆ ದೌರ್ಜನ್ಯಗಳನ್ನು, ಶೋಷಣೆಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಹಾಗೂ ಹಿತದೃಷ್ಟಿಯಿಂದಲೂ ಸಂವಿಧಾನದ ಮೂಲಕ ಹಲವು ವಿಧಿಗಳ ಆಕೆಗಾಗಿಯೇ ಮೀಸಲಿಟ್ಟಿವೆ. ಹೀಗಾಗಿ ಸ್ತ್ರೀ ಪುರುಷರು ಸಮಾನರಾಗಿ ಬದುಕಲು ದಾರಿ ಸಹ ಮಾಡಿಕೊಟ್ಟಿದೆ.ಸ್ತ್ರೀ – ಪುರುಷರಷ್ಟೆ ಸಮಾನಳು. ಶಿಕ್ಷಣ ಪಡೆಯಲು, ವಿವಿಧ ಹುದ್ದೆಗಳ ಪಡೆಯಲು, ಸಂವಿಧಾನವು ಪ್ರಮುಖ ಪಾತ್ರವನ್ನು ವಹಿಸಿದೆ. ಇದರಿಂದ ನಮ್ಮ ದೇಶದ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಜಗತ್ಪ್ರಸಿದ್ದರಾಗಲೂ…

Read More

ವಿಜಯಪುರ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿನ ನಯನ ರಂಗಮಂದಿರದಲ್ಲಿ ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಆಯ್ಕೆಯಾದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಪತ್ರಕರ್ತ, ಸಾಹಿತಿ ಕಲ್ಲಪ್ಪ ಶಿವಶರಣ ವಿರಚಿತ ‘ಕಲ್ಲು ಮನಸ್ಸು’ ಕಲ್ಲರಳಿ ಹೂಮಸು ಕೃತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ‘ಕಲ್ಲು ಮನಸ್ಸು’ ಕಲ್ಲರಳಿ ಹೂಮಸು ಕೃತಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವ ಶಿವರಾಜ ಎಸ್. ತಂಗಡಗಿ, ಹೆಸರಾಂತ ಸಾಹಿತಿ ಜೋಗಿ (ಗಿರೀಶ್‌ರಾವ್ ಹತ್ವಾರ್), ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಡಾ. ಧರಣಿದೇವಿ ಅವರು ಮುಖ್ಯ ವೇದಿಕೆಯ ಮೇಲೆ ಪ್ರಶಸ್ತಿ ಫಲಕಗಳನ್ನು ಸಾಹಿತಿ, ಪತ್ರಕರ್ತ ಕಲ್ಲಪ್ಪ ಶಿವಶರಣ ಅವರಿಗೆ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು ಸೇರಿದಂತೆ ಅನೇಕರು ಇದ್ದರು.

Read More

ವಿಜಯಪುರ: ನಗರದ ವಿವಿಧ ವಾರ್ಡ್ ಗಳಲ್ಲಿ ಮಂಗಳವಾರ ನಡೆದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಭಾಗವಹಿಸಿ, ನಂತರ ಸಾರ್ವಜನಿಕರ ಅಹವಾಲು ಆಲಿಸಿದರು.ವಾರ್ಡ್ ನಂ.21 ರಲ್ಲಿ ಬರುವ ಇಬ್ರಾಹಿಂಪುರದ ಮಲ್ಲಿಕಾರ್ಜುನ ದೇವಸ್ಥಾನ ಹತ್ತಿರ 2022-23ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಿಸಿದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ, ಸನ್ ಶೈನ್ ಸಿಟಿಯಲ್ಲಿ ರೂ.1 ಕೋಟಿ ಅನುದಾನದಲ್ಲಿ ಆಂತರಿಕ ಸಿಸಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ವಾರ್ಡ್ ನಂ.28ರ ಸರ್.ಎಂ.ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ.13 ರಲ್ಲಿ ವಿವೇಕ ಯೋಜನೆಯಡಿ ಮಂಜೂರಿಸಿ, ನಿರ್ಮಾಣ ಮಾಡಲಾದ ಶಾಲಾ ಕೊಠಡಿ ಉದ್ಘಾಟಿಸಿ, ನಂತರ ವಾರ್ಡ್ ನಂ.29ರ ರಾಜಾಜಿನಗರದ ನಮ್ಮ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ.40 ರಲ್ಲಿ ವಿವೇಕ ಯೋಜನೆಯಡಿ ಮಂಜೂರಿಸಿ, ನಿರ್ಮಾಣ ಮಾಡಲಾದ ಎರಡು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು.ಪ್ರತಿ ಕಾರ್ಯಕ್ರಮದ ಬಳಿಕ ಸಾರ್ವಜನಿಕರ ಕುಂದುಕೊರತೆಗಳನ್ನು…

Read More

ಯಡ್ರಾಮಿ: ತಾಲೂಕಿನ ಸುಕ್ಷೇತ್ರ ಕಡಕೋಳ ಶ್ರೀ ಮಡಿವಾಳೇಶ್ವರ ಮಹಾಮಠದಲ್ಲಿ ಮಹಾಶಿವಾರಾತ್ರಿ ನಿಮಿತ್ಯ ಶ್ರೀಮಠದ ಪೀಠಾಧಿಪತಿಗಳಾದ ಪೂಜ್ಯ ಡಾ| ರುದ್ರಮುನಿ ಶಿವಾಚರ‍್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಶುಕ್ರವಾರ ರಾತ್ರಿ ೭ಗಂಟೆಗೆ ಶಿವಾನುಭಾವ ಚಿಂತನ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀಮಠದ ಸದ್ಭಕ್ತ ಮಂಡಳಿ ತಿಳಿಸಿದೆ.ನೇತೃತ್ವವನ್ನು ಕೊಕಟನೂರ ವಿರಕ್ತಮಠದ ಪೂಜ್ಯ ಮಡಿವಾಳ ಮಹಾಸ್ವಾಮಿಗಳು, ಮಳ್ಳಿ ಹಿರೇಮಠದ ಪೂಜ್ಯ ರುದ್ರಮುನಿ ಶಿವಾಚರ‍್ಯ ಸ್ವಾಮೀಜಿ, ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ| ಅಜಯಸಿಂಗ್ ಕರ‍್ಯಕ್ರವi ಉದ್ಘಾಟಿಸುವರು. ಕಲಬುರಗಿ ಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ ಸಾಹು ಸಜ್ಜನ ಅಧ್ಯಕ್ಷತೆ ವಹಿಸುವರು. ಮುಖ್ಯ ಅಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ಜೇವರ್ಗಿ ಕಾಂಗ್ರೆಸ್ ಮುಖಂಡ ರಾಜಶೇಖರ ಸಾಹು ಸೀರಿ, ಯುವ ಮುಖಂಡ ವಿಜಯಕುಮಾರ ಕೆ. ಹಿರೇಮಠ, ಯಡ್ರಾಮಿ ಪಪಂ ಸಿಒ ಸಂತೋಷರೆಡ್ಡಿ, ಯಡ್ರಾಮಿ ತಾಪಂ ಇಒ ಮಹಾಂತೇಶ ಪುರಾಣಿಕ, ಅಪ್ಪಯ್ಯ ಮುತ್ತ್ಯಾ ಹಿರೇಮಠ, ಕಡಕೋಳ ಗ್ರಾಪಂ ಪಿಡಿಒ ಸೋಮಲಿಂಗಪ್ಪ ಬಿರಾದರ, ಶ್ರೀಶೈ¯ ಹಿರೇಮಠ ನಾಗರಹಳ್ಳಿ. ಕಡಕೋಳ ಗ್ರಾಪಂ ಸರ್ವ ಸದ್ಯಸರು…

Read More

ಇಂಡಿ: ಮಕ್ಕಳು ಶಿಕ್ಷಣವಂತರಾದಾಗ ಮಾತ್ರ ಈ ದೇಶ ಸಮೃದ್ಧವಾಗುತ್ತದೆ. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಸತ್ ಪ್ರಜೆಗಳಾಗಿ ಬದುಕಿ ಬಾಳುವಂತೆ ಮಾಡಬೇಕು ಎಂದು ಶಿಕ್ಷಕ ಎನ್ ಕೆ ಬಿರಾದಾರ ಹೇಳಿದರು.ಅವರು ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಶ್ರೀ ಭಾಗ್ಯವಂತಿ ಕನ್ನಡ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 19ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಾಜದಲ್ಲಿ ಅಪರಾಧ ಕೃತ್ಯಗಳು ಕಡಿಮೆಯಾಗುತ್ತವೆ ಮನೆಯಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಪಾಠದ ಜೊತೆಗೆ ಸಂಸ್ಕಾರವನ್ನು ನೀಡುವ ಕಾರ್ಯ ಮಾಡಬೇಕು ಎಂದರು.ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಪ್ರಾಧ್ಯಾಪಕ ಚಂದುಗೌಡ ಬಿರಾದಾರ ಮಾತನಾಡಿದರು.ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಇಮ್ಮನದ ಅಧ್ಯಕ್ಷತೆ ವಹಿಸಿದ್ದರು.ಪತ್ರಕರ್ತ ಉಮೇಶ ಬಳಬಟ್ಟಿ, ಮಲ್ಲನಗೌಡ ಪಾಟೀಲ, ಎಸ್. ಸಿ. ಇಂಡಿ, ಬಸವರಾಜ ಗೊರನಾಳ, ಎ.ಜೆ. ಚೌದರಿ, ಬಾಳು ರಾಠೋಡ್, ರಾಜಕುಮಾರ ಪವಾರ, ಅರವಿಂದ ಪಾಟೀಲ, ಶರಣಬಸಪ್ಪ ನಾಟೀಕಾರ, ಸೇರಿದಂತೆ ಇನ್ನಿತರರು ಇದ್ದರು. ಶಾಲಾ ಸಹ ಶಿಕ್ಷಕಿ ಕಾವೇರಿ…

Read More

ಕೊಲ್ಹಾರ: ನಮ್ಮಗಳ ಧರ್ಮ ಯಾವುದಾದರೇನು ನಾವು ವಾಸಿಸುವ ನೆಲ ಭಾರತ ನಾವೆಲ್ಲರೂ ಭಾರತೀಯರು ಎನ್ನುವ ಮನೋಭಾವನೆಯಿಂದ ಸರ್ವಜನಾಂಗದವರು ಸಹಿಷ್ಣುತಾ ಭಾವದಿಂದ ದೇಶದಲ್ಲಿ ಜೀವಿಸುವದೇ ಭಾವಕ್ಯತೆಯ ಸಂಕೇತವಾಗಬೇಕು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದ ಅಜಾದ ನಗರದಲ್ಲಿ ಕಾನಕಾಯೆ ಗಪಾರಿಯಾ ಗುರುಕುಲದ ಉರುಸು ನಿಮಿತ್ಯವಾಗಿ ನಡೆದ ೨೦ನೇ ಶತಮಾನದ ಸೂಪಿ ಸಂತ ಶ್ರೀಗುರು ಅಲ್ ಹಾಜ್ ಶಾಹಮಹಮ್ಮದ ಅಬ್ದುಲಗಫಾರಿ ಕಾದ್ರಿಯವರ ೩೧ನೇ ಉರುಸಿನ ನಿಮಿತ್ಯವಾಗಿ ನಡೆದ ೨೪ನೇ ಸರ್ವ ಧರ್ಮ ಸದ್ಭಾವನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಜಗತ್ತಿನಲ್ಲಿ ನಾಲ್ಕು ಯುಗಗಳ ಕಾಲಕ್ಕೆ ತಕ್ಕಂತೆ ಭೂಮಿಯ ಮೇಲೆ ಭಗವಂತನ ಅವತಾರವಾಗಿದ್ದು ಆತನ ಅನುಯಾಯಿಗಳಾಗಿ ಮನುಜಕುಲ ಒಂದೆ ಭಾವನೆ ತತ್ವದ ಅಡಿಯಲ್ಲಿ ನಾವುಗಳು ಜೀವಿಸಬೇಕು ಎಂದು ಕರೆ ಕೊಟ್ಟರು.ರಾಜ್ಯಮಟ್ಟದ ಸರ್ವಧರ್ಮದ ಸದ್ಭಾವನಾ ೧೯ನೇಯ ಅಲಹಾಬಾದ ಮೌಲಾನಾ ಭಾವೈಕ್ಯತಾ ಪ್ರತಿಷ್ಟಿತ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಜಾನಪದ ವಿದ್ವಾಂಸ ಡಾ|| ಶಂಭು ಬಳಿಗಾರ ಅವರಿಗೆ ಕೊಡಮಾಡಲು ನಿರ್ಧರಿಸಿದಂತೆ ಅವರ ಆರೋಗ್ಯದ ಸಮಸ್ಯೆಯಿಂದ ಅನುಪಸ್ಥಿತಿಯಲ್ಲಿ ಅವರ ಧರ್ಮ ಪತ್ನಿ ಶ್ರೀಮತಿ ಪ್ರೇಮಾ ಶಂಭು…

Read More

ಬಸವನಬಾಗೇವಾಡಿ: ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗಲು ರಸ್ತೆ ಬದಿ ಬೈಕ್, ವಾಹನಗಳನ್ನು ಅಡಾದಿಡ್ಡಿಯಾಗಿ ನಿಲ್ಲಿಸದೇ ಸರಿಯಾಗಿ ನಿಲ್ಲಿಸಬೇಕೆಂದು ಪಿಐ ವಿಜಯ ಮರಗುಂಡಿ ಹೇಳಿದರು.ಪಟ್ಟಣದ ವಿಜಯಪುರ ಪ್ರಮುಖ ರಸ್ತೆ, ಬಸ್ ನಿಲ್ದಾಣದ ರಸ್ತೆಯ ಎರಡು ಬದಿಗಳಲ್ಲಿ ಅಡಾದಿಡ್ಡಿಯಾಗಿ ನಿಂತಿರುವ ಬೈಕ್, ಇತರೇ ವಾಹನಗಳ ಮಾಲೀಕರಿಗೆ ಗುರುವಾರ ತಿಳಿಸುವ ಮೂಲಕ ವಾಹನ ಸಂಚಾರ ಸುಗಮವಾಗಲು, ಅಪಘಾತ ತಡೆಗಟ್ಟಲು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡಬೇಕೆಂದು ಹೇಳಿದ ಅವರು, ಭಾರತೀಯ ಸ್ಟೇಟ್ ಬ್ಯಾಂಕಿಗೆ ನಿತ್ಯ ಸಾಕಷ್ಟು ಗ್ರಾಹಕರು ಬರುತ್ತಾರೆ. ಬ್ಯಾಂಕಿಗೆ ಬರುವ ಗ್ರಾಹಕರ ಬೈಕ್ಗಳನ್ನು ಸಾಲಾಗಿ ನಿಲ್ಲಿಸುವಂತೆ ಬ್ಯಾಂಕಿನ ಸೆಕ್ಯೂರಿಟಿಗೆ ಸೂಚನೆ ನೀಡಬೇಕೆಂದು ಬ್ಯಾಂಕಿನ ವ್ಯವಸ್ಥಾಪಕರಿಗೆ ಹೇಳಿದರು. ನಂತರ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರು ರಸ್ತೆಗೆ ಬರದಂತೆ ನೋಡಿಕೊಂಡು ತಮ್ಮ ವ್ಯಾಪಾರ ವಹಿವಾಟು ಮಾಡಿಕೊಳ್ಳಬೇಕು. ಬೈಕ್ ಸವಾರರು, ಇತರೇ ವಾಹನದವರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದೇ ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ವಾಹನ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಒಂದು ವೇಳೆ ರಸ್ತೆ ನಿಯಮಗಳನ್ನು…

Read More

ಮುದ್ದೇಬಿಹಾಳ: ಜಾನಪದ ಮಾನವ ಜನಾಂಗದ ಸಂಸ್ಕೃತಿಯಾಗಿದೆ. ಕಾಡು ಮಾನವರು ನಾಡಿಗೆ ಬಂದು ಸಂಘಟಿತರಾಗಿ ಬದುಕಿಗಾಗಿ ಒಳ್ಳೆಯ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯ, ಮನೋರಂಜನೆ ರೂಢಿಸಿಕೊಂಡು ಜೀವನ ಪ್ರಾರಂಭಿಸಿದರು. ಈ ಎಲ್ಲ ಪದ್ದತಿಗಳು ಜಾನಪದ ಸಂಸ್ಕೃತಿಯಾಗಿ ಇಂದು ನಮ್ಮ ಬದುಕಿಗೆ ದಾರಿ ದೀಪವಾಗಿವೆ ಎಂದು ಎಂಜಿವ್ಹಿಸಿ ಬಿ.ಇಡಿ ಕಾಲೇಜ ಪ್ರಾಚಾರ್ಯ ಡಾ.ಆರ್.ಜಿ.ಚಿಕ್ಕಮಠ ಅಭಿಪ್ರಾಯಪಟ್ಟರು.ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಹಿರೇಮಠದ ಡಾ.ಚನ್ನವೀರ ದೇವರ ಪಟ್ಟಾಧಿಕಾರ ಮಹೋತ್ಸವ ಹಾಗೂ ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ ” ಜಾನಪದ ಕಲಾ ಮೇಳ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ಹಿರಿಯರು ಅನುಭವದ ಮೂಲಕ ಕಟ್ಟಿಕೊಟ್ಟ ಜಾನಪದ ಸಿದ್ದಾಂತ ಸರ್ವ ಜನಾಂಗಕ್ಕೂ ಒಳಿತನ್ನು ಬಯಸುವ ಶ್ರೇಷ್ಠ ಪರಂಪರೆಯಾಗಿದೆ. ಅದನ್ನು ಅರಿತು ಅಳವಡಿಸಿಕೊಂಡು ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.” ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಕನ್ನಡ ಜಾನಪದ ಪರಿಷತ್ತಿನ ಪಾತ್ರ” ಕುರಿತು ಉಪನ್ಯಾಸ ನೀಡಿದ ಕಜಾಪ ಬಸವನಬಾಗೇವಾಡಿ ತಾಲೂಕಾಧ್ಯಕ್ಷ ದೇವೇಂದ್ರ ಗೋನಾಳ, ಕಜಾಪ ೯ ವರ್ಷದಲ್ಲಿ ಯಾವ…

Read More