Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬ್ರಹ್ಮದೇವನಮಡು: ಸಿಂದಗಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆಡಿಪಿ) ಸಮಿತಿಗೆ ನಾಮನಿದೇ೯ಶಕರಾಗಿ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶಿವಯೋಗೆಪ್ಪ ಹತ್ತರಕಿ ಅವರನ್ನು ನೇಮಕ ಮಾಡಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.
ಬ್ರಹ್ಮದೇವನಮಡು: ಸಿಂದಗಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ( ಕೆಡಿಪಿ) ಸಮಿತಿಗೆ ನಾಮನಿದೇ೯ಶರಾಗಿ ನೇಮಕವಾದ ಗೋಲಗೇರಿ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶಿವಯೋಗೆಪ್ಪ ಹತ್ತರಕಿ ಅವರನ್ನು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಚಂದ್ರಶೇಖರ ಕೆಂಭಾವಿ ಸನ್ಮಾನಿಸಿದರು.ಈ ವೇಳೆ ಪಕ್ಷದ ಮುಖಂಡ ಶಿವು ಹತ್ತಿ, ಹಷ೯ಪ್ಪಗೌಡ ಬಿರಾದಾರ, ಪತ್ರಕತ೯ ಮಲ್ಲು ಕೆಂಭಾವಿ ಇದ್ದರು.
ದೇವರಹಿಪ್ಪರಗಿ: ಕಾಲುವೆಯಲ್ಲಿ ಕಾಲು ಜಾರಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಪಡಗಾನೂರ ಗ್ರಾಮದಲ್ಲಿ ಜರುಗಿದೆ.ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ. ಭಾರತಿ ಶ್ರೀಶೈಲ ಸಾತಿಹಾಳ(೨೮) ಎಂಬ ಮಹಿಳೆ ಬಟ್ಟೆ ತೊಳೆಯಲು ತನ್ನ ಮಗ ಸಂಪತ್(೧೦) ನೊಂದಿಗೆ ಮುಳವಾಡ ಮುಖ್ಯ ಕಾಲುವೆಗೆ ತೆರಳಿದ್ದು, ಈ ಸಮಯದಲ್ಲಿ ಮಗ ಸಂಪತ್ ಕಾಲು ಜಾರಿ ಕಾಲುವೆಗೆ ಬಿದ್ದಿದ್ದನ್ನು ಗಮನಿಸಿದ ತಾಯಿ ಅವನನ್ನು ರಕ್ಷಿಸಲು ತಾನು ಕಾಲುವೆಗೆ ಇಳಿದ ಪರಿಣಾಮ ಈಜು ಬಾರದೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೇವರಹಿಪ್ಪರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಂಡಿ: ತಾಲೂಕಿನಲ್ಲಿ ಕೃಷಿಗೆ ಯೋಗ್ಯವಾದ ಮಣ್ಣಿನ ಅಕ್ರಮ ಸಾಗಾಣೆ ಧಂದೆ ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಅಕ್ರಮ ಮಣ್ಣು ಸಾಗಾಟಗಾರರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕರವೇ ಸ್ವಾಭಿಮಾನ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.ಪಟ್ಟಣದ ಆಡಳಿತ ಸೌಧಕ್ಕೆ ತೆರಳಿದ ಕಾರ್ಯಕರ್ತರು ನದಿ ಪಾತ್ರದಲ್ಲಿನ ಮತ್ತು ರೈತರ ಜಮೀನಿನಲ್ಲಿನ ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಅಕ್ರಮವಾಗಿ ಮಣ್ಣು ಸಾಗಾಟವನ್ನು ತಡೆಗಟ್ಟಬೇಕು. ಅಲ್ಲದೇ ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಮಣ್ಣು ಶೇಖರಣೆ ಆಗಿದಿಯೋ ಅದನ್ನು ವಶಕ್ಕೆ ಪಡೆದುಕೊಂಡು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ, ಉಗ್ರವಾದ ಹೋರಾಟಕ್ಕೆ ಸಹಕಾರ ನೀಡಿದಂತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನ ಬಣದ ಉತ್ತರ ಕರ್ನಾಟಕ ಅಧ್ಯಕ್ಷ ಲಕ್ಷ್ಮಣ ಕೆಂಬಾಗೆ, ಜಿಲ್ಲಾಧ್ಯಕ್ಷ ಜಗದೇವ್ ಸೂರ್ಯವಂಶಿ, ತಾಲ್ಲೂಕು ಅಧ್ಯಕ್ಷ ಶಿವು ಬಡಿಗೇರ, ಗಿರೀಶ್ ಕಲಕಟ್ಟಿ, ನಿಂಗರಾಜು, ಸಂತೋಷ…
ಸಿಂದಗಿ: ಸರಕಾರ ಒದಗಿಸುವ ಆರೋಗ್ಯ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಸಾರ್ವಜನಿಕ ಇಲಾಖೆಯ ಐಸಿಟಿಸಿ ವಿಭಾಗದ ಆಪ್ತಸಮಾಲೋಚಕ ಎಂ.ಪಿ ಸಾಗರ ಹೇಳಿದರು.ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಇಲಾಖೆ, ತಾಲೂಕು ಆರೋಗ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ೨ನೆಯ ಹಂತದ ಸಮುದಾಯ ಆಧಾರಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕಾಲ ಕಾಲಕ್ಕೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಮುಂಬರುವ ರೋಗಗಳ ಬಗ್ಗೆ ನೀಗಾವಹಿಸಬೇಕು. ಎಚ್ಐವಿ ಪರೀಕ್ಷೆ ಮತ್ತು ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಈ ವೇಳೆ ಬಸ್ ನಿಲ್ದಾಣದಲ್ಲಿ ೨೧೦ಕ್ಕೂ ಅಧಿಕ ಜನರು ತಪಾಸಣೆ ಮಾಡಿಕೊಂಡರು. ತಪಾಸಣಾ ಶಿಬಿರದಲ್ಲಿ ಸಿಬ್ಬಂದಿಗಳಾದ ಲವ ಗಾಣಿಗೇರ, ಡಿ.ಎಲ್. ಕುಂಬಾರ, ಮಹ್ಮದ್ ಸೋಯೆಬ್, ಮತ್ಸುದ್ ಕಲಾಲ್, ನವೀನ,…
ಸಿಂದಗಿ: ನ್ಯೂಜಿಲೆಂಡ್ನಲ್ಲಿ ಕನ್ನಡ ಸಂಘ, ಶರಣ ಸಾಹಿತ್ಯ ಪರಿಷತ್ತು ಮತ್ತು ಬಸವ ಸಮಿತಿಯನ್ನು ರಚಿಸಿಕೊಂಡು ಬಸವಣ್ಣನವರ ತತ್ವಾದರ್ಶಗಳನ್ನು ಸುಮಾರು ವರ್ಷಗಳಿಂದ ಬೆಳೆಸುತ್ತಿದ್ದೇನೆ ಎಂದು ನ್ಯೂಜಿಲೆಂಡಿನ ಬಸವ ಸಮಿತಿ ಸಂಸ್ಥಾಪಕ ಲಿಂಗಣ್ಣ ಕಲಬುರಗಿ ಹೇಳಿದರು,ತಾಲೂಕಿನ ಯರಗಲ್ ಬಿಕೆ ಗ್ರಾಮದಲ್ಲಿ ಚಿಕ್ಕಪ್ಪಯ್ಯ ಶಿವಯೋಗಿಗಳ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ ಅಬ್ಬೆ ತುಮಕೂರಿನ ವಿಶ್ವರಾಧ್ಯರ ಮಹಾ ಪುರಾಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಬಸವಣ್ಣನವರ ತತ್ವಾದರ್ಶಗಳನ್ನು ಪಸರಿಸಲು ನ್ಯೂಜಿಲೆಂಡ, ಆಸ್ಟ್ರೇಲಿಯಾ ಮತ್ತು ಸಿಂಗಾಪುರ ಸೇರಿ ೯ ಬಸವ ಸಮಿತಿ ಶಾಖೆಗಳನ್ನು ಪ್ರಾರಂಭಿಸಲಾಗಿದೆ. ಪ್ರತಿವರ್ಷ ಕರ್ನಾಟಕದಿಂದ ಹರಗುರು ಚರಮೂರ್ತಿಗಳನ್ನು ಕರೆಯಿಸಿ ೯ ಶಾಖೆಗಳಿಗೆ ಭೇಟಿ ನೀಡಿಸಿ ಕನ್ನಡ ಬಳಗವನ್ನು ಕೂಡಿಸಿ ಕನ್ನಡ ನಾಡು ನುಡಿ ಬಗ್ಗೆ ಮಾಹಿತಿ ಕೊಡಿಸಲಾಗುವುದು ಎಂದರು.ಈ ವೇಳೆ ಜಾನಪದ ವಿದ್ವಾಂಸ ಹಿರಿಯ ಸಾಹಿತಿ ಡಾ.ಎಂ.ಎಂ. ಪಡಶೆಟ್ಟಿ ಮಾತನಾಡಿದರು.ಇದೇ ಸಂದರ್ಭದಲ್ಲಿ ರಟಕಲ್ ಶ್ರೀಮಠದ ರೇವಣಸಿದ್ದ ಶಿವಾಚಾರ್ಯರು, ಪುರಾಣಿಕರಾದ ರಟಕಲ್ ವಿರಕ್ತಮಠದ ಸಿದ್ದರಾಮ ಮಹಾಸ್ವಾಮಿಗಳು, ಗವಾಯಿಗಳಾದ ಮಾಹಾಂತೇಶ ನಾಗೋಜಿ, ಶಿವಪ್ಪ ಗವಸಾನಿ, ಗುರುಲಿಂಗಪ್ಪಗೌಡ ಪಾಟೀಲ,…
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಮಾ.೧೨ ರಂದು ನಿಗದಿಪಡಿಸಿದ ಚುನಾವಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.
ವಿಜಯಪುರ: ಸಿಂದಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಕ್ಷೇತ್ರವನ್ನು ವಿಭಜಿಸಿ, ಆಲಮೇಲ ತಾಲೂಕಿಗೆ ಪ್ರತ್ಯೇಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರಚಿಸಲು ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ದಿ) ಅಧಿನಿಯಮ, ೧೯೬೬ ಕಲಂ ೧೪೫ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರೈತರ ಹಿತದೃಷ್ಟಿಯಿಂದ ವಿಜಯಪುರ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಕೇತ್ರವನ್ನು ವಿಭಜಿಸಿ, ಅಲಮೇಲ ತಾಲ್ಲೂಕಿಗೆ ಹೊಸದಾಗಿ ಪ್ರತ್ಯೇಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರಚಿಸಲು ಹಾಗೂ ೯೫ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಒಳಪಡಿಸಲು ಉದ್ದೇಶಿಸಲಾಗಿದೆ.ಉದ್ದೇಶಿತ ಪ್ರಸ್ತಾವನೆಗೆ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ದಿ) ಅಧಿನಿಯಮ, ೧೯೬೬ರ ಕಲಂ ೦೩ ರನ್ವಯ ಆಕ್ಷೇಪಣೆ/ಸಲಹೆಗಳನ್ನು ಆಹ್ವಾನಿಸಿದ್ದು, ಯಾವುದೇ ಆಕ್ಷೇಪಣೆಗಳು/ ಸಲಹೆಗಳು ಇದ್ದಲ್ಲಿ, ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಅಥವಾ ಈ ಪ್ರಕಟಣೆಯ ೩೦…
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಕೆ.ಡಿ., ಕಪನಿಂಬರಗಿ, ಹಿಂಗಣಿ ಹಾಗೂ ಪಡನೂರ ಗ್ರಾಮ ಪಂಚಾಯತ್ಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ಆಯ್ಕೆಯಾದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಕಟಿತ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ನೋಟಿಸ್ ಬೋರ್ಡಿಗೆ ಹಾಗೂ ತಾಲೂಕಾ ಪಂಚಾಯತ್ ಇಂಡಿ, ಕಚೇರಿ ಮತ್ತು ನಿಂಬಾಳ ಕೆ.ಡಿ., ಕಪನಿಂಬರಗಿ, ಹಿಂಗಣಿ ಹಾಗೂ ಪಡನೂರ ಗ್ರಾಮ ಪಂಚಾಯತ್ ಕಾರ್ಯಾಲಯದ ನೋಟಿಸ್ ಬೋರ್ಡನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ : ೧೮-೦೩-೨೦೨೪ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು.ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಆಕ್ಷೆಪಣೆಗಳನ್ನು ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ,…
ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆಯಲ್ಲಿ ೧೧೬೩ ವಿದ್ಯಾರ್ಥಿಗಳ ಗೈರ ಹಾಜರಾಗಿದ್ದರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.ಇತಿಹಾಸ ಪರೀಕ್ಷೆಗೆ ಒಟ್ಟು ೧೭೪೦೯ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ೧೬೪೨೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೯೮೬ ವಿದ್ಯಾರ್ಥಿಗಳು ಗೈರ ಹಾಜರಾಗಿದ್ದರು. ಅದರಂತೆ ಭೌತಶಾಸ್ತ್ರ ಪರೀಕ್ಷೆಗೆ ೧೧೫೦೪ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ೧೧೩೨೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೧೭೭ ವಿದ್ಯಾರ್ಥಿಗಳು ಗೈರ ಹಾಜರಾಗಿದ್ದರು. ಒಟ್ಟಾರೆ ೧೧೬೩ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದರು ಎಂದು ಅವರು ತಿಳಿಸಿದ್ದಾರೆ.
