Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ವಿಜಯಪುರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ದರ್ಬಾರ್ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ ಕುರಿತು ಕಾಲೇಜಿನ ಪ್ರಾಚಾರ್ಯರೊಂದಿಗೆ ಚರ್ಚಿಸಿದರು. ವಿ ಬಿ ದರ್ಬಾರ್ ಕಾಲೇಜಿಗೆ ಭೇಟಿ ನೀಡಿ ಪರೀಕ್ಷಾ ಕೊಠಡಿಗಳನ್ನು ವೀಕ್ಷಣೆ ಮಾಡಿದರುಈ ಸಂದರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ, ದರ್ಬಾರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ತಿರುಮಲ ಕುಲಕರ್ಣಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮುದ್ದೇಬಿಹಾಳ: ಇಂದಿನ ಮಕ್ಕಳಿಗೆ ಸಾಕಷ್ಟು ವಿದ್ಯಾರ್ಜನೆ ಕೊಡಿಸುವದರ ಜೊತೆಗೆ ಕೆಲವಿಷ್ಟಾದರೂ ನಮ್ಮ ಧರ್ಮದ, ಇತಿಹಾಸದ, ಆದರ್ಶ ಪರಂಪರೆಯ ಪರಿಚಯವನ್ನ ಮಾಡಿಸಿ ಇಲ್ಲದಿದ್ದರೆ ಮುಂದೊಂದು ದಿನ ಅನೇಕ ಆತಂಕಗಳನ್ನು, ಸಂಕಷ್ಟಗಳನ್ನು ಎದುರಿಸುವ ಪರೀಸ್ಥಿತಿ ಬರಬಹುದು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಭಗವದ್ಪಾದಕರು ಹೇಳಿದರು.ತಾಲೂಕಿನ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರ ಗುರು ಪಟ್ಟಾಧಿಕಾರ ಮಹೋತ್ಸವದ ಎರಡನೆಯ ದಿನದ ಧರ್ಮ ಜಾಗೃತಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕಾಗಿ ಶಾಸ್ತ್ರದ ಭಯ ಇರಬೇಕು. ಇಲ್ಲವೇ ಶಸ್ತ್ರದ ಭಯವಾದರೂ ಇರಬೇಕು. ಆದರೆ ಇವತ್ತು ಮನುಷ್ಯ ಶಾಸ್ತ್ರದ ಮರ್ಯಾದೆಯನ್ನು ಮೀರಿ ಕವಲುದಾರಿಯಲ್ಲಿ ನಡೆಯುತ್ತಿರುವದರಿಂದ ಅನೇಕ ಸಂಕಷ್ಟಗಳಿಗೆ ಬಲಿಯಾಗುತ್ತಿದ್ದಾನೆ. ಎಷ್ಟೇ ಸಂಪತ್ತು ಗಳಿಸಿದರೂ, ಅಧಿಕಾರದ ಅಂತಸ್ತು ಪಡೆದಿದ್ದರೂ ಆತ್ಮಶಾಂತಿ, ನೆಮ್ಮದಿ ಇಲ್ಲ. ಹಾಗಾಗಿ ಮನುಷ್ಯನಿಗೆ ಶಾಸ್ತ್ರದ ಬಗ್ಗೆ ಒಂದಿಷ್ಟಾದರೂ ಅರಿವು ಇರಬೇಕು. ಇಲ್ಲದೇ ಹೋದರೆ ಶಸ್ತ್ರ ನಮ್ಮನ್ನ ಬಂಧಿಸುತ್ತದೆ ಎಂದರೆ.ವೀರಶೈವದ ಧರ್ಮದ ಪಂಚಪೀಠಗಳು ಸಮಾಜದಲ್ಲಿ ಜಾತಿ ಮತ ಪಂಥಗಳನ್ನು ಮೀರಿ ಎಲ್ಲ…
ಇಂಡಿ: ರಾಷ್ಟ್ರಕೂಟರ ಕಾಲದಲ್ಲಿ ಸಾಲೋಟಗಿಯಲ್ಲಿ ಅಸ್ತಿತ್ವದಲ್ಲಿದ್ದ ಅಗ್ರಹಾರ. ಆಗಿನ ಕಾಲದಲ್ಲಿ ಜ್ಞಾನದ ಕೇಂದ್ರವಾಗಿ ನಾಡಿಗೆ ಗುರುವಾಗಿತ್ತು ಎಂದು ಶಿಕ್ಷಕ, ಸಾಹಿತಿ ದಶರಥ ಕೋರಿ ಉಪನ್ಯಾಸದ ಮೂಲಕ ಮಕ್ಕಳಿಗೆ ಮಾಹಿತಿ ನೀಡಿದರು.ತಾಲೂಕಿನ ಸಾಲೋಟಗಿ ಗ್ರಾಮದ ಎಸ್ ವಾಯ್ ಪದವಿ ಪೂರ್ವ ಕಾಲೇಜು (ಪ್ರೌಡವಿಭಾಗದ) 2023-24 ಎಸ್ ಎಸ್ ಎಲ್ ಸಿ ಮಕ್ಕಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡುತ್ತ ಅವರು, ಸಾಲೋಟಗಿ ಐತಿಹಾಸಿಕವಾಗಿ, ಧಾರ್ಮಿಕವಾಗಿ, ಜಾನಪದವಾಗಿ ನಾಡಿನಲ್ಲಿ ಅತ್ಯಂತ ಶ್ರೇಷ್ಠವಾದ ಸಾಧನೆಯ ಮೈಲುಗಲ್ಲನ್ನು ಸ್ಥಾಪಿಸಿದೆ. ಸಾಲೋಟಗಿಯಲ್ಲಿನ ಅಗ್ರಹಾರದ ಕುರಿತು ಮತ್ತು ಕಾಲಜ್ಞಾನಿ ಶಿವಯೋಗಿಶ್ವರರು ಬರೆದಿರುವೆನ್ನಲಾದ ಡಂಗರು ಪದಗಳ ಕುರಿತು ಇನ್ನಷ್ಟು ಬೆಳಕು ಚೆಲ್ಲಬೇಕು. ಅದರ ಜೊತೆಗೆ ನಾಡಿಗೆ ಜ್ಞಾನ ಕೇಂದ್ರವಾಗಿ,ಗುರುವಾಗಿದ್ದ ಇಲ್ಲಿನ ಅಗ್ರಹಾರ ಮತ್ತು ಹಲವು ದೇವಸ್ಥಾನದ ಪೂರಕ ಮಾಹಿತಿ ತಿಳಿಯಲು ಉತ್ಖನನದ ಅವಶ್ಯಕತೆಯಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಪ್ರೌಡಶಾಲಾ ಮುಖ್ಯಗುರುಗಳಾದ ಎಸ್ ವಾಯ್ ಉಪಾಸೆಯವರು ಮಾತನಾಡುತ್ತ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಹೆಚ್ಚು ಮಾಡಿಕೊಳ್ಳಬೇಕೆಂದು ಕರೆ ನೀಡಿದರು.ಶಾಲಾ ಬೀಳ್ಕೊಡುವ ಸಮಾರಂಭದಲ್ಲಿ ರಾಜ್ಯ ಮಟ್ಟದಲ್ಲಿ ಕ್ರೀಡಾ ಸಾಧನೆ…
ದೇವರಹಿಪ್ಪರಗಿ: ಭಾರತೀಯ ವೈದ್ಯಕೀಯ ಪ್ರಕೋಷ್ಟಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಬಾಬು ರಾಜೇಂದ್ರ ನಾಯಿಕರವರಿಗೆ ಈ ಬಾರಿ ವಿಜಯಪುರ ಮತಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂಘದ ಅಧ್ಯಕ್ಷ ಬಾಳು ರಾಠೋಡ ಆಗ್ರಹಿಸಿದ್ದಾರೆ.ಪಟ್ಟಣದ ಪ್ರವಾಸಿಮಂದಿರದಲ್ಲಿ ಗುರುವಾರ ಈ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಡಾ.ಬಾಬುರಾಜೇಂದ್ರ ನಾಯಿಕರು ಕಳೆದ ೧೫ ವರ್ಷಗಳಿಂದ ಸಂಘ ಪರಿವಾರದ ಕಟ್ಟಾಳುಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಕಳೆದ ೮ ವರ್ಷಗಳಿಂದ ಬಿಜೆಪಿ ಸಕ್ರೀಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಅಲ್ಲದೇ ಕೊರೋನಾ ಕಾಲದ ಲಾಕ್ಡೌನ್ ಸಮಯದಲ್ಲಿ ರೋಗಿಗಳ ಆರೈಕೆ ಮಾಡುವುದರ ಜೊತೆಗೆ ಅನೇಕ ಜನಪರ, ಸಾಮಾಜಿಕ ಸೇವಾಕಾರ್ಯಗಳನ್ನು ಕೈಗೊಂಡು ಮಾನವೀಯತೆ ಮೆರೆದಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಯರವರ ಆಶಯದಂತೆ ಸ್ವಚ್ಛತಾ ಆಂದೋಲನದ ಕಾರ್ಯಗಳಲ್ಲಿ ಪಾಲ್ಗೊಂಡು ಗಮನಸೆಳೆದಿದ್ದಾರೆ.ಬೀಳಗಿ ಪಟ್ಟಣದಲ್ಲಿ ಗೋಶಾಲೆ ತೆರೆಯುವುದರ ಮೂಲಕ ಗೋರಕ್ಷಣೆ ಕಾರ್ಯ ಆರಂಭಿಸಿರುವ ಡಾ.ಬಾಬುರಾಜೇಂದ್ರ ನಾಯಿಕರು ತಮ್ಮ ಹಲವಾರು ನಿಸ್ವಾರ್ಥ ಸೇವೆಗಳ ಮೂಲಕ ಜಿಲ್ಲೆಯ ಜನಪ್ರೀಯ ವ್ಯಕ್ತಿಯಾಗಿ, ಎಲ್ಲ ಸಮುದಾಯಗಳೊಂದಿಗೆ ಅನೂನ್ಯತೆ ಭಾವ ಹೊಂದಿದ್ದಾರೆ.…
ಇಂದು ಮಹಾಶಿವರಾತ್ರಿ ನಿಮಿತ್ತ ವಿಶೇಷ ಲೇಖನ ಡಾ. ಸಂತೋಷ ಬಿ. ನವಲಗುಂದ, ಪತ್ರಕರ್ತರು, ಬರಹಗಾರರು, ಮಳ್ಳಿ ಬ್ರಹ್ಮ ಮತ್ತು ವಿಷ್ಣುವಿನ ನಡುವೆ ಶ್ರೇಷ್ಠತೆಯ ಭಾವ ತಾ ಹೆಚ್ಚು ನಾ ಹೆಚ್ಚೆಂಬ ವಾದ ತಾರಕಕ್ಕೇರಿ ಇನ್ನೇನು ರಣರಂಗಕ್ಕೆ ಕಾರಣವಾಗುವ ಹೊತ್ತಿಗೆ ಇವರಿಬ್ಬರ ಮಧ್ಯೆ ಶಿವನು ಮಧ್ಯ ಪ್ರವೇಶಿಸಿ ಇಬ್ಬರಿಗೂ ತಿಳುವಳಿಕೆ ನೀಡಿ ಕೊನೆಗೆ ಸಂಧಾನ ಮಾಡಿಸಿ, ಕೈಲಾಸ ಪರ್ವತಕ್ಕೆ ಬಂದು ವಿರಾಜಮಾನನಾಗುತ್ತಾನೆ. ಆ ಸಂದರ್ಭದಲ್ಲಿ ಶ್ರೀ ವಿಷ್ಣು ಬ್ರಹ್ಮರು ಶಿವನ ಎಡ ಬಲದಲ್ಲಿ ಕುಳಿತು ಹಾರು, ತುರಾಯಿ, ಶಿವನಾಮದೊಂದಿಗೆ ಮುಂತಾದ ದಿವ್ಯ ವಸ್ತುಗಳಿಂದ ಮತ್ತು ಉಪಹಾರಗಳಿಂದ ಅನನ್ಯ ಭಕ್ತಿಯಿಂದ ಶಿವಪೂಜೆಯನ್ನು ಮಾಡಿದರು. ಇವರಿಬ್ಬರ ಭಕ್ತಿ ನಿಷ್ಠೆಗೆ ಸಂತುಷ್ಟನಾದ ಶಿವನು ವಿಷ್ಣು ಬ್ರಹ್ಮರನ್ನು ಕುರಿತು “ ಎಲೈ ವತ್ಸರೇ, ಇಂದಿನ ದಿವಸವು ಮಹತ್ತರವಾದುದು, ಈ ದಿನವು ಶಿವರಾತ್ರಿ ಎಂಬ ಹೆಸರಿನಿಂದ ಪ್ರಸಿದ್ಧವಾಗಿ ಪವಿತ್ರ ದಿನವೆನಿಸುವುದು. ಈ ತಿಥಿ ನನಗೆ ಅತ್ಯಂತ ಪ್ರಿಯ ತಿಥಿಯಾಗಿರುವುದು” ಎಂದು ಶಿವನು ನುಡಿದನು. ವಿಷ್ಣು ಬ್ರಹ್ಮರಿಗೆ ಶಿವ ಬೋಧೆ ನೀಡಿದ…
ಡಾ. ಸಂತೋಷ ಬಿ. ನವಲಗುಂದ, ಪತ್ರಕರ್ತರು, ಬರಹಗಾರರು, ಮಳ್ಳಿ ಶಿವನ ಭಜಿಸೋ, ಹರನ ಪೂಜಿಸೋ, ಲಿಂಗವೇ ತಾನಾಗಿ ಲಿಂಗವ, ಶಿವನೇ ತಾನಾಗಿ ಶಿವನ ಭಜಿಸುವುದೇ ಮಹಾಶಿವರಾತ್ರಿ ಬ್ರಹ್ಮ ಮತ್ತು ವಿಷ್ಣುವಿನ ನಡುವೆ ಶ್ರೇಷ್ಠತೆಯ ಭಾವ ತಾ ಹೆಚ್ಚು ನಾ ಹೆಚ್ಚೆಂಬ ವಾದ ತಾರಕಕ್ಕೇರಿ ಇನ್ನೇನು ರಣರಂಗಕ್ಕೆ ಕಾರಣವಾಗುವ ಹೊತ್ತಿಗೆ ಇವರಿಬ್ಬರ ಮಧ್ಯೆ ಶಿವನು ಮಧ್ಯ ಪ್ರವೇಶಿಸಿ ಇಬ್ಬರಿಗೂ ತಿಳುವಳಿಕೆ ನೀಡಿ ಕೊನೆಗೆ ಸಂಧಾನ ಮಾಡಿಸಿ, ಕೈಲಾಸ ಪರ್ವತಕ್ಕೆ ಬಂದು ವಿರಾಜಮಾನನಾಗುತ್ತಾನೆ. ಆ ಸಂದರ್ಭದಲ್ಲಿ ಶ್ರೀ ವಿಷ್ಣು ಬ್ರಹ್ಮರು ಶಿವನ ಎಡ ಬಲದಲ್ಲಿ ಕುಳಿತು ಹಾರು, ತುರಾಯಿ, ಶಿವನಾಮದೊಂದಿಗೆ ಮುಂತಾದ ದಿವ್ಯ ವಸ್ತುಗಳಿಂದ ಮತ್ತು ಉಪಹಾರಗಳಿಂದ ಅನನ್ಯ ಭಕ್ತಿಯಿಂದ ಶಿವಪೂಜೆಯನ್ನು ಮಾಡಿದರು. ಇವರಿಬ್ಬರ ಭಕ್ತಿ ನಿಷ್ಠೆಗೆ ಸಂತುಷ್ಟನಾದ ಶಿವನು ವಿಷ್ಣು ಬ್ರಹ್ಮರನ್ನು ಕುರಿತು “ ಎಲೈ ವತ್ಸರೇ, ಇಂದಿನ ದಿವಸವು ಮಹತ್ತರವಾದುದು, ಈ ದಿನವು ಶಿವರಾತ್ರಿ ಎಂಬ ಹೆಸರಿನಿಂದ ಪ್ರಸಿದ್ಧವಾಗಿ ಪವಿತ್ರ ದಿನವೆನಿಸುವುದು. ಈ ತಿಥಿ ನನಗೆ ಅತ್ಯಂತ ಪ್ರಿಯ ತಿಥಿಯಾಗಿರುವುದು” ಎಂದು…
ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಮಾರ್ಚ್ 9 ಶನಿವಾರ ಬಬಲೇಶ್ವರ ಪಟ್ಟಣಕ್ಕೆ ಭೇಟಿ ನೀಡಲಿದ್ದು, ತಾಲೂಕು ಆಡಳಿತ ಸೌಧ(ಮಿನಿ ವಿಧಾನಸೌಧ) ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಅಲ್ಲದೇ, ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.ಬೆಳಿಗ್ಗೆ 11ಗಂ. ಬಬಲೇಶ್ವರ ಪಟ್ಟಣದ ಅಡವಿಸಂಗಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ರೂ.10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಆಡಳಿತ ಸೌಧ (ಮಿನಿ ವಿಧಾನಸೌಧ) ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಈ ಕಟ್ಟಡದ ನೆಲಮಹಡಿಯಲ್ಲಿ ತಹಸೀಲ್ದಾರ ಕಚೇರಿ, ಕೋರ್ಟ್ ಹಾಲ್, ತಹಸೀಲ್ದಾರ ಗ್ರೇಡ್-1 ಮತ್ತು ಗ್ರೇಡ್-2, ಸಬ್ರಜಿಸ್ಟಾರ್ ಕಚೇರಿ, ಸಬ್ ಟ್ರೆಜರಿ ಕಚೇರಿ, ಸ್ಟ್ರಾಂಗ್ ರೂಂ, ರಜಿಸ್ಟಾರ್ ಕಚೇರಿಗಳನ್ನು ಹೊಂದಿವೆ. ಮೊದಲನೇ ಮಹಡಿಯಲ್ಲಿ ಭೂಮಾಪನಾ ಇಲಾಖೆ ಉಪನಿರ್ದೇಶಕ ಕಚೇರಿ, ಭೂ ದಾಖಲೆ ಕೋಣೆ, ವಿಡಿಯೋ ಸಂವಾದ ಸಭಾಂಗಣ, ಕೆಸ್ವಾನ್, ಚುನಾವಣೆ ಕೊಠಡಿ ಹೊಂದಿದ್ದರೆ, ಎರಡನೇ ಮಹಡಿಯಲ್ಲಿ ಸ್ಟೇರ್ಕೇಸ್ ಮುಖ್ಯ ಕೋಣೆ ಮತ್ತು ಲಿಫ್ಟ್ ಕೋಣೆ ಇರಲಿದೆ.ಇದೇ ವೇಳೆ ತಾಲೂಕು ಮತ್ತು ಪಟ್ಟಣ…
ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ನಗರದ 770 ಅಮರ ಗಣಾಧೀಶ್ವರರ (ಅಮರಗಣಂಗಳ) ದೇವಾಲಯದ ನವೀಕರಣ ಮತ್ತು ಲಿಂಗಗಳ ಪುನರುಜ್ಜೀವನ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆ ಕಾರ್ಯಕ್ರಮ ಮಾ.8 ರಂದು ಶುಕ್ರವಾರ ಮಹಾಶಿವರಾತ್ರಿ ದಿನ ನಡೆಯಲಿದೆ.ಅಂದು ಬೆಳಿಗ್ಗೆ 10.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಮತ್ತು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಪಸ್ಥಿತರಿರಲಿದ್ದಾರೆ.ಬಂಥನಾಳ ಶ್ರೀ ಸಂಗನಬಸವ ಮಹಾಶಿವಯೋಗಿಗಳ ದಿವ್ಯ ಸಂಕಲ್ಪದಂತೆ 1954 ರಲ್ಲಿ ನಗರದ 770 ಅಮರ ಗಣಾಧೀಶ್ವರರ(ಅಮರಗಣಂಗಳ) ಸ್ಮಾರಕ ಲಿಂಗಗಳ ದೇವಾಲಯದ ಪ್ರತಿಷ್ಠಾಪನೆ ನಡೆದಿತ್ತು. ಈ ದೇವಾಲಯ ಪೂರ್ಣಗೊಂಡ ಬಳಿಕ 15.01.1960ರಲ್ಲಿ ವಿಜ್ರಂಬಣೆಯಿಂದ ಲೋಕಾರ್ಪಣೆಯಾಯಿತು. 12 ನೇ ಶತಮಾನದಲ್ಲಿ 770 ಅಮರಗಣಂಗಳ(ಶರಣರ)ರು ಬಸವೇಶ್ವರ ಜೊತೆಗೂಡಿ ಸಾಮಾಜಿಕ ಮೌಢ್ಯಗಳನ್ನು ಹೋಗಲಾಡಿಸಿ, ಸಮಾನತೆಗಾಗಿ ಶ್ರಮಿಸಿದ್ದರು. ಸಮಾಜಕ್ಕೆ ಅವರು ನೀಡಿದ ಕೊಡುಗೆಯ ಸ್ಮರಣಾರ್ಥ ಅವರ ಹೆಸರಿನಲ್ಲಿಯೇ 770 ದಂಪತಿ ತಲಾ ರೂ.151…
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ವಿವಿಯ ಕುಲಾಧಿಪತಿಗಳಾದ ಡಾ. ಎಂ. ಬಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪೂರಕವಾಗಿ ಹೊಸ ಹೊಸ ಪ್ರಯತ್ನಗಳಿಗೆ ಮುನ್ನುಡಿ ಬರೆಯುತ್ತಿದ್ದು, ಜನಪರ ಸೇವೆಗಳ ಮೂಲಕ ದೇಶಾದ್ಯಂತ ಗಮನ ಸೆಳೆಯುತ್ತಿದೆ.ಇಂಥ ಚಟುವಟಿಕೆಗಳಿಗೆ ಈಗ ಮತ್ತೋಂದು ಸೇರ್ಪಡೆ ಇದೇ ತಿಂಗಳು 10.04.2024ರಂದು ರವಿವಾರ ಬೆಳಿಗ್ಗೆ 7 ಗಂಟೆಗೆ ಆಯೋಜಿಸಿರುವ ಸ್ವಾಸ್ಥ್ಯ ಸಂತುಲನ ರಂಗೋಲಿ ಮಹೋತ್ಸವ ಕಾರ್ಯಕ್ರಮ. ವೈದ್ಯಕೀಯ ಶಿಕ್ಷಣದ ವಿಷಯದ ಮೇಲೆ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ಕಾರ್ಯಕ್ರಮ ಇದಾಗಿದ್ದು, ಇದು ಗಿನ್ನೀಸ್ ಬುಕ್ ಆಫ್ ರೆಕಾರ್ಡ್ಸ್, ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗುವ ನಿಟ್ಟಿನಲ್ಲಿ ಮಹತ್ವ ಹೆಜ್ಜೆಯಾಗಿದೆ.ಈ ಕಾರ್ಯಕ್ರಮದಲ್ಲಿ 1500ಕ್ಕೂ ಹೆಚ್ಚು ಜನ ವೈದ್ಯಕೀಯ ವಿದ್ಯಾರ್ಥಿಗಳು…
’ವೀಣಾಂತರಂಗ’ – ವೀಣಾ ಹೇಮಂತ್ ಗೌಡ ಪಾಟೀಲ್ ಮುಂಡರಗಿ-ಗದಗ ಅದೊಂದು ಬೃಹತ್ತಾದ ವೇದಿಕೆ. ದೊಡ್ಡ ಮಠದ ಸ್ವಾಮೀಜಿಗಳು, ಆ ಭಾಗದ ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು, ಪುರಸಭೆ ಅಧ್ಯಕ್ಷರು ಮತ್ತಿತರ ಘಟಾನುಘಟಿ ರಾಜಕಾರಣಿಗಳು ತಮಗೆ ಮೀಸಲಾಗಿದ್ದ ಕುರ್ಚಿಗಳಲ್ಲಿ ಆಸೀನರಾಗಿದ್ದರು. ಅದು ಸರ್ಕಾರವು ಪ್ರತಿ ವರ್ಷ ನಡೆಸುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವಾಗಿತ್ತು. ಎಂದಿನಂತೆ ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸ್ವಾಮೀಜಿಯವರ ಅಮೃತ ಹಸ್ತದಿಂದ ಕಾರ್ಯಕ್ರಮದ ಉದ್ಘಾಟನೆಯ ನಂತರ ಉದ್ಘಾಟನಾ ಭಾಷಣವನ್ನು ಮಾಡಿದ ಅವರು ಹೆಣ್ಣು ಮಕ್ಕಳ ವ್ಯಕ್ತಿತ್ವವನ್ನು ಘನತೆಯನ್ನು ನಮ್ಮ ಹಲವಾರು ಪುಣ್ಯ ಸ್ತ್ರೀಯರ ಕುರಿತಾಗಿ ವಿವರಗಳ ಸಮೇತ ಹೇಳಿದರು. ನಂತರ ಮುಖ್ಯ ಅತಿಥಿಗಳ ಭಾಷಣ. ಮಹಿಳಾ ಸಮಾನತೆ ಕುರಿತಾಗಿ ಉಪನ್ಯಾಸ ನೀಡಿದ ಮುಖ್ಯ ಅತಿಥಿಗಳು ಅವರ ಉಪನ್ಯಾಸವನ್ನು ಮುಗಿಸುವ ಹೊತ್ತಿಗೆ ಸುಮಾರು ಒಂದು ಗಂಟೆ ಕಳೆದು ಹೋಗಿತ್ತು. ಅದಾದ ನಂತರ ಆ ಭವ್ಯವೇದಿಕೆಯಲ್ಲಿ ಆ ವರ್ಷದ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ. ಅಂತೆಯೇ ಆ ವರ್ಷ ಸನ್ಮಾನಿಸಿಕೊಳ್ಳಲಿರುವ ಮಹಿಳೆಯರನ್ನು…
