Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ (ರಿ), ಬೆಂಗಳೂರು ಇವರ ಸಹಯೋಗದಲ್ಲಿ ಮಾ.೦೮ ರಂದು ವಿಜಯಪುರದ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಛಾಯಾಗ್ರಹಣ ಕ್ಷೇತ್ರದಲ್ಲಿರುವ ಮಹಿಳೆಯರಿಗೆ ಜಿಲ್ಲಾ ಛಾಯಾಸಾಧಕಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಚಿತ್ರಕಲಾ ಪ್ರದರ್ಶನ, ಹಾಗೂ ಡಾ. ಎಸ್.ಟಿ. ಮೇರವಾಡೆ ರಚಿಸಿದ “ಆಭರಣ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮವನ್ನು ವಿಜಯಪುರದ ಉಪವಿಭಾಗಾಧಿಕಾರಿಗಳು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಶ್ವೇತಾ ಮೋಹನ ಬೀಡಿಕರರವರು ಉದ್ಘಾಟಿಸಿ ಪುಸ್ತಕ ಬಿಡುಗಡೆಮಾಡುವರು. ಮುಖ್ಯ ಅತಿಥಿಗಳಾಗಿ ವಿಜಯಪುರದ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಹಾಗೂ ಹಿರಿಯ ಕಲಾವಿದ ವಿದ್ಯಾಧರ ಸೋ. ಸಾಲಿಯವರು ಆಗಮಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಟಿ. ಮೇರವಾಡೆಯವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಉಪಸ್ಥಿತರಿರುವರು.ಛಾಯಾಗ್ರಹಣ ಕ್ಷೇತ್ರದಲ್ಲಿರುವ ಮಹಿಳೆಯರಿಗೆ ಜಿಲ್ಲಾ ಛಾಯಾಸಾಧಕಿ ಪ್ರಶಸ್ತಿಯನ್ನುಶಶಿಕಲಾ ರಮೇಶ…
ಯೋಜನೆ ಕೈಬಿಡದಿದ್ದರೆ ತೀವ್ರಗೊಳ್ಳಲಿರುವ ಮೀನುಗಾರರ ಪ್ರತಿಭಟನೆ | ಡಾ.ಡಾ.ಗೌತಮ್ ಚೌಧರಿ ಎಚ್ಚರಿಕೆ ವಿಜಯಪುರ: ಹೊನ್ನಾವರದ ಬಂದರು ಯೋಜನೆ ಕಡಲಮಕ್ಕಳ ಬದುಕನ್ನೇ ಮುಳುಗಿಸುತ್ತಿದ್ದರೂ ರಾಜ್ಯ ಸರಕಾರ ಮಾತ್ರ ಬಡ ಮೀನುಗಾರರ ಕುಟುಂಬಗಳ ಅಸ್ತಿತ್ವಕ್ಕೇ ಧಕ್ಕೆ ತರುತ್ತಿರುವ ಈ ಯೋಜನೆ ಕೈಬಿಡದಿರುವುದು ಖಂಡನೀಯವೆಂದು ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಆರ್ ಚೌಧರಿ ಹೇಳಿದ್ದಾರೆ.ನಗರದಲ್ಲಿ ಬುಧವಾರ ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಹೊನ್ನಾವರ ಬಂದರು ಯೋಜನೆಯಿಂದ ಸುಮಾರು 6,000 ಮೀನುಗಾರರ ಕುಟುಂಬಗಳು ಮತ್ತು ಒಟ್ಟು ಸುಮಾರು 23,500 ಮೀನುಗಾರರ ಬದುಕು ಕೊಚ್ಚಿ ಹೋಗುವ ಆತಂಕ ಎದುರಾಗಿದೆ. ಬಂದರು ಬೇಡ ಅಂತ ಅದೆಷ್ಟೋ ಪ್ರತಿಭಟನೆಗಳು ನಡೆದರೂ ಸರ್ಕಾರ ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಈ ಬಾರಿ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮೀನುಗಾರರಿಗೋಸ್ಕರ ಸಾಕಷ್ಟು ಯೋಜನೆಗಳನ್ನು ಮಾಡಿದ್ದೇವೆ ಅಂದರು. ಅದು ಇದೇನಾ? ಅನ್ನೋ ಪ್ರಶ್ನೆ ಎದ್ದಿದೆ. ಹೊಸ ಬಂದರು ನಿರ್ಮಾಣ ಮತ್ತು ಅದಕ್ಕೆ ಸಂಪರ್ಕ ಕಲ್ಪಿಸಲು ರಸ್ತೆಗಾಗಿ ಸಾವಿರಾರು ಮೀನುಗಾರರ ಬದುಕಿನ ಮೇಲೆಯೇ ಚಪ್ಪಡಿ ಎಳೆಯುವ ಕಾರ್ಯ ಭರದಿಂದ…
Udayarashmi kannada daily newspaper
Udayarashmi kannada daily newspaper
ರಾಷ್ಟ್ರೀಯ ನಗರ ಸಹಕಾರ ಹಣಕಾಸು ಮತ್ತು ಅಭಿವೃದ್ಧಿ ನಿಗಮ ಲಿಮಿಟೆಡ್ ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ ಅಭಿಮತ ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ನಗರ ಸಹಕಾರಿ ಬ್ಯಾಂಕ್ಗಳ ಛತ್ರ ಸಂಸ್ಥೆಯಾದ ರಾಷ್ಟ್ರೀಯ ನಗರ ಸಹಕಾರ ಹಣಕಾಸು ಮತ್ತು ಅಭಿವೃದ್ಧಿ ನಿಗಮ ಲಿಮಿಟೆಡ್ (NUCFDC)ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಸಹಕಾರಿ ಸಂಸ್ಥೆಗಳ ನಡುವೆ ಸಹಕಾರದ ಮನೋಭಾವವನ್ನು ಬಲಪಡಿಸುವ ಬಗ್ಗೆ ಅಮಿತ್ ಶಾ ಒತ್ತಿ ಹೇಳಿದರು.ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ ಮತ್ತು ಪರಸ್ಪರ ಪ್ರಗತಿಯನ್ನು ಉತ್ತೇಜಿಸದ ಹೊರತು ನಾವು ಮುಂದುವರಿಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ತಮ್ಮ ಭಾಷಣದಲ್ಲಿ ಹೇಳಿದರು.ಸುಮಾರು 20 ವರ್ಷಗಳ ಹೋರಾಟದ ನಂತರ ಇಂದು ಎನ್ಯುಸಿಎಫ್ಡಿಸಿ ಸ್ಥಾಪನೆಯಾಗುತ್ತಿದ್ದು, ಇದು ನಮಗೆಲ್ಲರಿಗೂ ಅತ್ಯಂತ ಮಂಗಳಕರ ದಿನವಾಗಿದೆ ಎಂದರು. ಕೇಂದ್ರ ಸಹಕಾರಿ ಸಚಿವರು, ಈ ಹಿಂದೆ ಸಹಕಾರ ಸಚಿವಾಲಯ ಮತ್ತು ಸಹಕಾರಿ ಕ್ಷೇತ್ರವು ಅನೇಕ ಸಚಿವಾಲಯಗಳಲ್ಲಿ ಹರಡಿಕೊಂಡಿತ್ತು ಎಂದು ಹೇಳಿದರು. ಸ್ವಾತಂತ್ರ್ಯದ 75…
ಚಿಮ್ಮಡ: ಪ್ರಪಂಚದಲ್ಲಿ ವಿದ್ಯೆ, ಸಾಧನೆ ಲಾಟರಿಯಿಂದ ಪಡೆಯಲಾಗುವುದಿಲ್ಲ, ಯಾವೂದೇ ಸಾಧನೆಗೆ ಕಠಿಣ ಪರೀಶ್ರಮವೇ ಮೂಲಮಂತ್ರವೆAದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು, ಯಾವುದೇ ಕಲಿಕೆಯ ಹಿಂದೆ ತಂದೆ-ತಾಯಿ, ಶಿಕ್ಷಕರು, ಶಾಲಾ ಸಮೀತಿ ಸೇರಿದಂತೆ ಹಲವಾರು ಜನರ ಪರೀಶ್ರಮ ಇರುತ್ತದೆ, ನಾವು ಉತ್ತಮ ಸಾಧನೆ ಮಾಡುವ ಮೂಲಕ ಅವರಿಗೆ ಗೌರವ ಕೊಡಬೇಕು, ಉತ್ತಮ ಪ್ರಜೆಯಾಗುವ ಮೂಲಕ ದೇಶದ ಋಣವನ್ನು ತೀರಿಸಬೇಕೆಂದರು.ಸಾನಿಧ್ಯವಹಿಸಿದ ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಮಾತನಾಡಿದರು.ಸಿಆರ್ಪಿ ಸಮನ್ವಯ ಅಧಿಕಾರಿ ದ್ರಾಕ್ಷಾಯಿಣಿ ಮಂಡಿ, ಮುಖ್ಯ ಗುರುಮಾತೆ ಎಂ.ಎಸ್. ಜಿಟ್ಟಿ ಮಾತನಾಡಿದರು.ಸಮಾರಂಭದ ಸಾನಿಧ್ಯವನ್ನು ಓಂಕಾರ ಯರಗಟ್ಟಿಕರ ವಹಿಸಿದ್ದರು ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಮಾರುತಿ ಮಮದಾಪೂರ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಮಾಜಿ ಅಧ್ಯಕ್ಷ ಆನಂದ ಕವಟಿ, ಪ್ರಕಾಶ ಪಾಟೀಲ, ಎಪಿಎಂಸಿ ನಿರ್ದೆಶಕ ಪ್ರಭು ಮುಧೋಳ, ಮನೋಜ ಹಟ್ಟಿ, ಬಾಳಪ್ಪ ಗಡೆಪ್ಪನವರ, ನಾಗಪ್ಪ ಆಲಕನೂರ, ಬಾಳೇಶ ಬ್ಯಾಕೋಡ, ಪ್ರಾದ್ಯಾಪಕ…
ಇಂಡಿ: ಇಲ್ಲಿಯ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಮ್ಮ ಮಗು ಮಹಮ್ಮದ ಮತ್ತು ಮಗಳಿಗೆ ಪೋಲಿಯೊ ಹನಿ ಹಾಕುವ ಮೂಲಕ ತಾಲೂಕಿನಲ್ಲಿ ಪೊಲಿಯೊ ಲಸಿಕೆ ಅಭಿಯಾನಕ್ಕೆ ಇತ್ತೀಚೆಗೆ ಚಾಲನೆ ನೀಡಿದರು.೫ ವರ್ಷದೊಳಗಿನ ೬೧೬೨೯ ಕ್ಕೂ ಹೆಚ್ಚು ಮಕ್ಕಳಿಗೆ ಪೊಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ ಸಂಜೆಯ ವರೆಗೆ ಶೇ ೯೬ ರಷ್ಟು ೫೯೧೬೩ ಮಕ್ಕಳಿಗೆ ಪೋಲಿಯೊ ಹಾಕಲಾಗಿದೆ ಎಂದು ಗದ್ಯಾಳ ತಿಳಿಸಿದರು.ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ|| ವಿಪುಲ್ ಕೋಳೆಕರ, ವಿಜಯಲಕ್ಷ್ಮಿ ಹಾದಿಮನಿ, ಗುರಸಂಗವ್ವ ಹಿರೇಪಟ್ಟ,ವೀರಕ್ಷಾ ಕೋಳಿ, ರೇಖಾ ಬಿದರಿ, ಬಸವರಾಜ ಧವಳಗಿ ಮತ್ತಿತರಿದ್ದರು.ತಾಲೂಕಿನಲ್ಲಿ ಇಂಡಿಯ ಸಾರ್ವಜನಿಕ ಕೇಂದ್ರ ಸೇರಿದಂತೆ ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾ.ಪಂ ಕಚೇರಿ, ಶಾಲೆ, ಅಂಗನವಾಡಿ ಕೇಂದ್ರಗಳು, ದೇವಸ್ಥಾನಗಳಲ್ಲಿ ಪೊಲಿಯೊ ಹಾಕಲಾಯಿತು.ಒಟ್ಟು ೨೬೪ ಕೇಂದ್ರಗಳಲ್ಲಿ , ಒಟ್ಟು ೫೨೮ ಸಿಬ್ಬಂದಿ, ೫೩ ಜನ ಸುಪರವಾಯಿಜರ್ ಪಾಲ್ಗೊಂಡಿದ್ದರು.ಪ್ರತಿ ತಂಡದಲ್ಲಿ ತಲಾ ಇಬ್ಬರು ಪೊಲಿಯೊ ಹನಿ ಹಾಕುವ ಸಿಬ್ಬಂದಿ ಮತ್ತು ತಲಾ ಇಬ್ಬರು ಸಹಾಯಕರು…
ಕೊಲ್ಹಾರ: ಉತ್ತರ ಕರ್ನಾಟಕ ಭಾಗದ ಕೂಡಗಿ ಗ್ರಾಮದ ಹತ್ತಿರ ನಿರ್ಮಾಣವಾಗಿರುವ ಉಷ್ಣ ವಿದ್ಯುತ್ ಸ್ಥಾವರದ ಕಾರ್ಯಾಚರಣೆಯಿಂದ ವಿಜಯಪೂರ ಜಿಲ್ಲೆ ವಿದ್ಯುತ್ ಕ್ಷೇತ್ರದಲ್ಲಿ ಮತ್ತು ವಿವಿಧ ಕಾಮಗಾರಿಗಳ ಮೂಲಕ ಅಭಿವೃದ್ದಿ ಹೊಂದುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ವಿಜಯಪುರದ ಎನ್.ಸಿ.ಸಿ. ಆವರಣದಲ್ಲಿ ಸೋಮವಾರ ದಿವಸ ಕೂಡಗಿಯ ಎನ್ಟಿಪಿಸಿ ಸಿ.ಎಸ್.ಆರ್ ಅನುಧಾನದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ರೂ. ೭೦ ಲಕ್ಷಗಳ ವೆಚ್ಚದಲ್ಲಿ ಹಮ್ಮಿಕೊಂಡಿರುವ ಶೇಡ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ವಿಜಯಪುರದಲ್ಲಿ ಉತ್ಕೃಷ್ಟ ಐಟಿಐ ಕೇಂದ್ರ ನಿರ್ಮಾಣಕ್ಕಾಗಿ ಎನ್ಟಿಪಿಸಿಯ ಆರ್&ಆರ್ ಅನುದಾನದಲ್ಲಿ ರೂ.೯೦ ಲಕ್ಷಗಳನ್ನು ಮೀಸಲಿರಿಸಲಾಗಿದೆ ಶಿಕ್ಷಣ, ಆರೋಗ್ಯ, ಮೂಲಬೂತ ಸೌಕರ್ಯ, ಸಿ.ಎಸ್.ಆರ್ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಎರಡು ಕಾಮಗಾರಿಗಳನ್ನು ನಿರ್ಮಿತ ಕೇಂದ್ರ ವಿಜಯಪುರದವರು ವಹಿಸಿಕೊಂಡಿದ್ದಾರೆ ಎಂದರು.ಈ ವೇಳೆ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್, ಕೂಡಗಿಯ ಎನ್ಟಿಪಿಸಿ ಚೀಪ್ ಜನರಲ್ ಮ್ಯಾನೇಜರ ಬಿದ್ಯಾನಂದ ಝಾ, ಕೆ.ಕೆ.ದತ್ತಾಜಿ. ಎಮ್ (ಓ&ಎಮ್), ಕೆ.ಎಸ್.ಮುರ್ತಿ, ನಿರ್ದೆಶಕರು ನಿರ್ಮಿತ ಕೇಂದ್ರ ವಿಜಯಪುರ, ಹಾಗೂ ಇನ್ನಿತರ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಬೊಮ್ಮನಜೋಗಿ ಗ್ರಾಮದ ಸಾಮಾಜಿಕ ಕಳಕಳಿಯ ರಾಮನಗೌಡ ಕನ್ನೊಳ್ಳಿ ಯ ಗ್ರಾಮ ಸೇವೆ -ಸಾಯಬಣ್ಣ ಮಾದರ (ಸಲಾದಹಳ್ಳಿ) ವಿಜಯಪುರ: ಅದೊಂದು ಕುಗ್ರಾಮ. ಆ ಊರಿಗೆ ಬಸ್ಸಿನ ಸೌಕರ್ಯ ಇರುವುದಿಲ್ಲ. ರಸ್ತೆಯಂತೂ ನೋಡುತೀರದು, ಅಕ್ಷರಸ್ಥರು ಅಲ್ಲಿ ಕಂಡರೂ ಮೂಢನಂಬಿಕೆಯೆಂಬ ಅಂಧಕಾರವನ್ನು ಹೊದ್ದು ಮಲಗಿದ ಊರದು.ಆ ಗ್ರಾಮದಲ್ಲಿ ಮಹಿಳೆಯರಿಗೆ ಬಹಿರ್ದೆಸೆಗೆ ಹೋಗುವುದು ಒಂದು ಸಾಹಸದ ಕೆಲಸ. ಅವರು ಬಹಿರ್ದೇಸೆಗೆ ಕುಳಿತುಕೊಳ್ಳುವುದು ರೋಡಿನ ಪಕ್ಕದಲ್ಲಿಯೋ, ಕಾಲುದಾರಿಗಳ ಪಕ್ಕದಲ್ಲಿಯೋ ಕುಳಿತುಕೊಳ್ಳಬೇಕಾಗಿತ್ತು. ದಾರಿ ಹೋಕರು ಬರುವುದು ಕಂಡರೆ ಅವರು ಎದ್ದು ನಿಲ್ಲುವುದು ಸಾಮಾನ್ಯವಾಗಿತ್ತು. ಅವರು ಬಹಿರ್ದೇಸೆ ಮುಗಿಸುವಷ್ಟರಲ್ಲಿ ಹಲವು ಬಾರಿ ಎದ್ದು ಕುಳಿತುಕೊಳ್ಳಬೇಕಾಗಿತ್ತು. ಮಳೆಗಾಲದಲ್ಲಿ ಅಂತೂ ಹೇಳತೀರದ ಕಷ್ಟ. ರಾಡಿ ಗಲೀಜು ತುಂಬಿದ ರಸ್ತೆಗಳು, ಒಂದು ಕಾಲು ಎತ್ತಿ ಇಡಬೇಕೆಂದರೂ ಅಲ್ಲಿ ಬೆಂಕಿ ಕೆಂಡದಂತ ಹೊಲಸು. ಬಾಣಂತಿಯರು, ವೃದ್ಧರು ಅಂಗವಿಕಲರಿಗೆ ದೊಡ್ಡದೊಂದು ವ್ಯಥೆ. ಇಂತಹ ರಾಜ್ಯದ ಹಲವು ಹಳ್ಳಿಗಳಲ್ಲಿ ಇದು ಒಂದು ದೇವರ ಹಿಪ್ಪರಗಿ ತಾಲೂಕಿನ ಬೊಮ್ಮನಜೋಗಿ.ಇದನ್ನೆಲ್ಲಾ ಕಣ್ಣಾರೆ ನೋಡಿದ ಅದೇ ಗ್ರಾಮದ ರಾಮನಗೌಡ ಕನ್ನೊಳ್ಳಿ ಎಂಬ ಅಧಿಕಾರಿಯು ತಾನು…
ಮಾದಕ ದ್ರವ್ಯ ಮುಕ್ತ ಗುರಿ ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ :ಕೇಂದ್ರ ಸಚಿವ ಅಮಿತ್ ಶಾ ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾದಕವಸ್ತು ವ್ಯಾಪಾರ ಮತ್ತು ಅದರ ದುಷ್ಪರಿಣಾಮಗಳನ್ನು ಎದುರಿಸುವಲ್ಲಿ ಮೋದಿ ಸರ್ಕಾರದ ಯಶಸ್ಸಿನ ಕುರಿತು ಮೂರು ವೀಡಿಯೊಗಳನ್ನು ಬಿಡುಗಡೆ ಮಾಡಿದರು.ದೇಶದಲ್ಲಿ ಡ್ರಗ್ಸ್ ಪತ್ತೆ, ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ಮಾದಕ ವ್ಯಸನಿಗಳ ಪುನರ್ವಸತಿ ಮೂಲಕ, ಮಾದಕ ದ್ರವ್ಯ ಮುಕ್ತ ಭಾರತದ ಗುರಿಯನ್ನು ಸಾಧಿಸುವತ್ತ ಮೋದಿ ಸರ್ಕಾರ ವೇಗವಾಗಿ ಸಾಗುತ್ತಿದೆ. ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಮಾದಕ ದ್ರವ್ಯ ಮುಕ್ತ ಭಾರತವು ಮುಂಬರುವ ಪೀಳಿಗೆಗೆ ಬಹುದೊಡ್ಡ ಕೊಡುಗೆಯಾಗಲಿದೆ.ಸ್ವಾತಂತ್ರ್ಯದ ಸುವರ್ಣ ಯುಗದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಕಟ್ಟುನಿಟ್ಟಿನ ಧೋರಣೆ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ, ಮಾದಕ ದ್ರವ್ಯ ವ್ಯಾಪಾರವನ್ನು ತಡೆಗಟ್ಟಲು ಸಿದ್ಧತೆಗಳು ಭರದಿಂದ ನಡೆಯುತ್ತಿವೆ, ಈ ಕ್ರಮಗಳ ಮೂಲಕ ಮಾದಕ…
