Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಜಿಲ್ಲೆಯಾದ್ಯಂತ ಎಲ್ಲ ಸರಕಾರಿ ಕಛೇರಿಗಳಲ್ಲಿ ಕೆಲಸ ಕಾರ್ಯಗಳ ಬಗ್ಗೆ ನಿಗಾ ಇಡಬೇಕೆಂದು ಆದೇಶವಿದ್ದ ಕಾರಣ ಇಂದು ಸಿಂದಗಿ ಪುರಸಭೆ ಕಾರ್ಯಾಲಯ ಮೇಲೆ ದಾಳಿ ಮಾಡಿದ್ದೇವೆ ಎಂದು ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಹೇಳಿದರು.ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಏಕಾಏಕಿ ದಾಳಿ ಮಾಡಿದ ಲೋಕಾಯುಕ್ತರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಂದಗಿ ಪುರಸಭೆಯಲ್ಲಿ ಲೋಪದೋಷಗಳು ಹೆಚ್ಚಾಗಿವೆ ಎಂದು ನಮಗೆ ದೂರುಗಳು ಬಂದಿದ್ದವು. ದೂರುಗಳ ಆಧಾರದ ಮೇಲೆ ದಾಳಿ ನಡೆಸಿದಾಗ ಇಲ್ಲಿನ ವಾತಾವರಣ ಹದಗೆಟ್ಟಿದೆ. ಜನನ ಮತ್ತು ಮರಣ ದಾಖಲಾತಿ ನೀಡಿವುದು ತಡ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಪುರಸಭೆಯಲ್ಲಿ ಸ್ವಚ್ಚತೆ ಎಂಬುದು ಮರೀಚಿಕೆಯಾಗಿದೆ. ಸಾರ್ವಜನಿಕರಿಗೆ ಸರಕಾರ ಸವಲತ್ತುಗಳು ಒದಗಿಸಬೇಕು ಮತ್ತು ಅವರಿಗೆ ಅನುಕೂಲ ಮಾಡಬೇಕು. ಆಡಳಿತ ಚುರುಕುಗೊಳಿಸುವ ನಿಟ್ಟಿನಲ್ಲಿ ನಾವು ದಾಳಿ ಮಾಡಿದ್ದೇವೆ ಎಂದರು.ಸಿಬ್ಬಂದಿಗೆ ತರಾಟೆ ಊರಿನ ಶುಚಿತ್ವ ಕಾಪಾಡಬೇಕಾದ ಪುರಸಭೆಯೇ ಮೊದಲು ಶುಚಿತ್ವದಿಂದ ಕೂಡಿಲ್ಲವೆಂದರೆ ಊರನ್ನು ಹೇಗೆ ಸ್ವಚ್ಚವಾಗಿ ಇಡುತ್ತಿರಿ? ನಿಮ್ಮ ಮನೆಯನ್ನು ಹೀಗೆ ಇಟ್ಟುಕೊಳ್ಳುತ್ತೀರಾ ಎಂದು ಪುರಸಭೆ ಮುಖ್ಯ…
ಫಲಾನುಭವಿಗಳ ಪಟ್ಟಿ ರದ್ದು ಪಡಿಸಿದ್ದಕ್ಕೆ ಶಾಸಕ ಮನಗೂಳಿ ವಿರುದ್ದ ಬಿಜೆಪಿ ಬೃಹತ್ ಪ್ರತಿಭಟನೆ ಸಿಂದಗಿ: ಎಸ್.ಸಿ.ಪಿ.ಟಿ ಮತ್ತು ಟಿ.ಎಸ್.ಪಿ ಅನುದಾನದ ಕ್ರಿಯಾಯೋಜನೆಯಲ್ಲಿ ರೂ.೫ಕೋಟಿ ಅನುದಾನ ಬಿಡುಗಡೆಗೊಳಿಸಿ ೬೯ ಪಲಾನುಭವಿಗಳಿಗೆ ಟೆಂಡರ್ ಕರೆಯಲಾಗಿತ್ತು. ಆದರೆ ನನ್ನ ಅವಧಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಹೆಸರನ್ನು ಬದಲಾಯಿಸಿ ಬೇರೆ ಹೆಸರುಗಳನ್ನು ಸೇರಿಸುವಂತೆ ಈಗಿನ ಶಾಸಕರು ಸಚಿವರಿಗೆ ಪತ್ರ ಬರೆದಿರುವುದು ಖಂಡಿಸುತ್ತೇವೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ರಾಂಪೂರ ಪಿಎ ಗ್ರಾಮದ ಅಂಬೇಡ್ಕರ್ ವೃತ್ತದಿಂದ ಕೆಬಿಜೆಎನ್ಎಲ್ ಕಾರ್ಯಾಲಯದವರೆಗೆ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಂಡ ೨೦೨೨-೨೩ನೆಯ ಸಾಲಿನ ಎಸ್ಸಿಪಿ/ಟಿಎಸ್ಪಿ ಅನುದಾನದಡಿಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಕ ಅರ್ಹ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಪಟ್ಟಿ ರದ್ದು ಪಡಿಸಿರುವ ಸ್ಥಳೀಯ ಶಾಸಕರ ವಿರುದ್ದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ನನ್ನ ಅವಧಿಯಲ್ಲಿನ ಫಲಾನುಭವಿಗಳ ಪಟ್ಟಿಯನ್ನು ರದ್ದು ಪಡಿಸುವಂತೆ ಪತ್ರ ಬರೆದು ದೀನ ದಲಿತರಿಗೆ ಸ್ಥಳೀಯ ಶಾಸಕರು ಅನ್ಯಾಯ ಮಾಡುತ್ತಿದ್ದಾರೆ, ಇದನ್ನು…
ಆಲಮೇಲ: ಕೇವಲ ಶಿಕ್ಷಣದಿಂದ ಮಾತ್ರ ಸಮಾಜ ಪರಿವರ್ತನೆ ಆಗುವದಿಲ್ಲ. ಶಿಕ್ಷಣದ ಜೊತೆಗೆ ಸಂಸ್ಕಾರವು ಮುಖ್ಯವಾಗಿದೆ ಹಂತ ಸಂಸ್ಕಾರ ಸೀಗಬೇಕು ಎಂದರೆ ಮಠ ಮಂದಿಗಳಲ್ಲಿ ಮಾತ್ರ ಎಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.ಮಂಗಳವಾರ ಪಟ್ಟಣದ ನಿತ್ಯಾನಂದ ಆರೋಡ ಸಂಗನಬದವೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ನಡೆದ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಮಠ-ಮಂದಿರಗಳು ಇರುವುದೇ ಸಮಾಜ ದಾರಿ ತಪ್ಪಿದಾಗ ತಿದ್ದುವ ಸಲುವಾಗಿ, ಅದಕ್ಕೆ ಸಮಾಜ ಸುದಾರಣೆ ಆಗಬೇಕು ಎಂದರೆ ಮೊದಲು ಸಂಸ್ಕಾರ ಬೇಕಾಗಿದೆ. ಅಂತಹ ಸಂಸ್ಕಾರ ಮಠ ಮಂದಿರಗಳಲ್ಲಿದೆ. ಅದಕ್ಕೆ ಮಠ ಮಂದಿರಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಆಲಮೇಲದ ನಿತ್ಯಾನಂದ ಆರೋಢ ಮಠದಲ್ಲಿ ಹಲವಾರು ವರ್ಷಗಳಿಂದ ಸಾಮೂಹಿಕ ವಿವಾಹ ಮಾಡಿಕೊಂಡು ಬಂದಿದ್ದು ಇದರಿಂದ ಬಡವರಿಗೆ ಸಾಕಷ್ಟು ಅನಕೂಲವಾಗಿದೆ ಎಂದು ಹೇಳಿದರು.ರಾಂಪೂರದ ನಿತ್ಯಾನಂದ ಮಹಾರಾಜರು, ಚಿಂಚೋಳಿಯ ಶರಬಸವ ಶರಣರು, ಮಠದ ಪೀಠಾಧಿಕಾರಿ ಬಸವರಲಿಂಗ ಶರಣರು, ಪಂಚಯ್ಯ ರಾಂಪೂರಮಠ, ಚನ್ನಯ್ಯ ಸಾರಂಗಮಠ, ಶಿಕ್ಷಕ ಪಂಡಿತ ಅವಜಿ, ಅಮರೇಶ ಸಾಲಕ್ಕಿ…
ಮಕ್ಕಳ ಕವನ ಸಂಕಲನ ’ಸೀಸದ ಕಡ್ಡಿ’ ಕೃತಿ ಲೋಕಾರ್ಪಣೆ | ಮಕ್ಕಳ ಸಾಹಿತಿ ಪ.ಗು.ಸಿದ್ದಾಪೂರ ಅಭಿಮತ ಆಲಮೇಲ: ಮಕ್ಕಳ ಸಾಹಿತ್ಯ ಲೇಖನಗಳು ಬರೆಯಬೇಕೆಂದರೆ ಮಕ್ಕಳ ಮನೋಭಾವದ ಮಟ್ಟಕ್ಕೆ ಇಳಿದು ಬರೆದರೆ ಮಾತ್ರ ಅದು ಮಕ್ಕಳ ಸಾಹಿತ್ಯವಾಗಲಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ ಶಿಕ್ಷಕ ಹಾಗೂ ಮಕ್ಕಳ ಸಾಹಿತಿ ಹ.ಮ. ಪೂಜಾರ ಹೇಳಿದರು.ಮಂಗಳವಾರ ತಾಲೂಕಿನ ಬಳಗಾನೂರ ಗ್ರಾಮದ ಗುರು ಕೇದಾರಲಿಂಗೇಶ್ವರ ಪ್ರೌಢಶಾಲೆಯಲ್ಲಿ ಬಂಥನಾಳದ ಮಾದಿರಿ ಪ್ರಕಾಶನ ಪ್ರಕಟಿಸಿರುವ ಲೇಖಕ ರಾಚು ಕೊಪ್ಪ ಅವರ ಮಕ್ಕಳ ಕವನ ಸಂಕಲನ ’ಸೀಸದ ಕಡ್ಡಿ’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದರು.ಎಲ್ಲರೂ ಮಕ್ಕಳ ಸಾಹಿತ್ಯ ಲೇಖನಗಳು ಬರೆಯುವದು ಕಷ್ಟದ ಕೆಲಸ. ಯಾರು ಮಕ್ಕಳ ಜೊತೆ ನಿರಂತರ ಒಡನಾಟ ಇರುವುದೊ ಅಂತವರು ಮಾತ್ರ ಮಕ್ಕಳ ಸಾಹಿತ್ಯವನ್ನು ಬರೆಯಬಲ್ಲರು. ಮಕ್ಕಳ ಕುರಿತು ಸಾಹಿತ್ಯವನ್ನು ರಚಿಸಬೇಕು ಎಂದರೆ ಅದು ಜನ್ಮ ಕೊಟ್ಟ ತಾಯಿ ಇನ್ನೊಬ್ಬರು ವಿದ್ಯೆ ಕಲಿಸಿದ ಗುರುವಿನಿಂದ ಮಾತ್ರ. ಇವರಿಬ್ಬರು ಮಕ್ಕಳ ಜೊತೆ ಮಕ್ಕಳಾಗಿ ಮಕ್ಕಳ ಮನೋಬಾವವನ್ನು ಬಲ್ಲವರಾಗಿರುತ್ತಾರೆ ಎಂದರು.ಮಕ್ಕಳ ಕವನ…
ವಿಜಯಪುರ: 2022-23 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಗರದ ವಾರ್ಡ್ ನಂ.21 ರಲ್ಲಿ ಬರುವ ಇಬ್ರಾಹಿಂಪುರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಬುಧವಾರ ಸಂಜೆ ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಸಮುದಾಯ ಭವನಕ್ಕೆ ಐದು ಲಕ್ಷ ರೂ. ಅನುದಾನ ಮಂಜೂರು ಮಾಡಲಾಗಿದ್ದು, ನಿರ್ಮಿತಿ ಕೇಂದ್ರವು ಈ ಕಟ್ಟಡ ನಿರ್ಮಾಣ ಮಾಡಲಿದೆ. ಅಗತ್ಯಬಿದ್ದರೆ ತಾವು ಇದಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಸೇವಾ ಸಮಿತಿ ಪರವಾಗಿ ಗ್ರಾಮದ ಹಿರಿಯ ಮುಖಂಡ ಗಿರಮಲ್ಲಪ್ಪ ನುಚ್ಚಿ ಅವರು ಶಾಸಕ ಯತ್ನಾಳ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.ಪ್ರಭು ಹಿರೇಮಠ ಸ್ವಾಮಿಗಳು ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.ಮಹಾನಗರ ಪಾಲಿಕೆ ಸದಸ್ಯರಾದ ಕುಮಾರ ಗಡಗಿ, ಪ್ರೇಮಾನಂದ ಬಿರಾದಾರ, ಗ್ರಾಮದ ಹಿರಿಯರಾದ ಮೇಲಪ್ಪ ಗಲಗಲಿ, ಸೂರ್ಯಕಾಂತ ಗಡಗಿ, ಶಿವಸಂಗಪ್ಹ ಹಳ್ಳಿ, ಮಲ್ಲಿಕಾರ್ಜುನ ದೇವಸ್ಥಾನ ಸಮಿತಿ ಅಧ್ಯಕ್ಷ ಗುರುಪಾದಪ್ಪ(ಸುನೀಲ)…
ಆಲಮಟ್ಟಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಮೂರು ಬಾರಿ ನಡೆಸುವುದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇದಕ್ಕೆ ಪ್ರೌಡಶಾಲಾ ಶಿಕ್ಷಕರ ಯಾವೊಂದು ಸಂಘಟನೆಗಳು ಸ್ವಲ್ಪವೂ ವಿರೋಧ ವ್ಯಕ್ತವಾಗದಿರುವುದು ವಿಷಾದನೀಯ ಎಂದು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಅಭಿಪ್ರಾಯಪಟ್ಟರು.ಬುಧವಾರ, ಆಲಮಟ್ಟಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.ಏಕಾಏಕಿ ಮೂರು ಬಾರಿ ಪರೀಕ್ಷೆ ಎಂದು ನಿರ್ಧರಿಸಬಾರದಿತ್ತು. ಅದನ್ನು ವಿವಿಧ ಶಿಕ್ಷಣ ತಜ್ಞರು, ಶಿಕ್ಷಕರು, ಸಂಘ, ಸಂಸ್ಥೆಗಳ, ಪೋಷಕರ ಹಂತದಲ್ಲಿ ಚರ್ಚೆಯಾಗಬೇಕಿತ್ತು. ನಂತರವಷ್ಟೇ ಈ ಪರೀಕ್ಷೆ ನಡೆಸುವ ತೀರ್ಮಾನ ಕೈಗೊಳ್ಳಬೇಕಿತ್ತು ಎಂದರು.ಪರೀಕ್ಷೆ ನಡೆಸುವುದು ಅಷ್ಟು ಸುಲಭವಲ್ಲ. ಪ್ರತಿ ಬಾರಿಯೂ 144 ಕಲಂ ಜಾರಿಗೆ ಮಾಡಿ, ಇಡೀ ಜಿಲ್ಲಾಡಳಿತವೇ ಉಸ್ತುವಾರಿ ನಿರ್ವಹಿಸಿ ಪರೀಕ್ಷೆ ನಡೆಸುತ್ತದೆ. ನಂತರ ಮೌಲ್ಯಮಾಪನ, ಮರು ಮೌಲ್ಯಮಾಪನ ಹೀಗೆ ಸಾಕಷ್ಟು ಹಂತಗಳು ಇರುತ್ತವೆ. ಅದಕ್ಕಾಗಿ ಕೋಟ್ಯಂತರ ಹಣ ಖರ್ಚಾಗುತ್ತದೆ, ಜತೆಗೆ ಸಮಯವೂ ಸಾಲುವುದಿಲ್ಲ ಎಂದರು. ಪ್ರೌಡಶಾಲಾ ಶಿಕ್ಷಕರ ಮೇಲೆ ಅನಗತ್ಯ ಹೊರೆ ಬೀಳುತ್ತವೆ. ಇದನ್ನು ಪ್ರತಿರೋಧಿಸಬೇಕಿದ್ದ ಪ್ರೌಡಶಾಲಾ ಶಿಕ್ಷಕರ ಸಂಘಟನೆಗಳು ಮೌನವಾಗಿರುವುದು ವಿಷಾದ ಎಂದರು.144 ಕಲಂ ಜಾರಿಯಿದ್ದರೂ…
ಎಕ್ಸಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಅಭಿಮತ ಆಲಮಟ್ಟಿ: ಬಡ, ಮಧ್ಯಮ ವರ್ಗದವರೇ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಸುವ ರೈಲ್ವೆ ಸಾರಿಗೆಯೂ ವಿಮಾನ ಸಾರಿಗೆಯಷ್ಟೇ ಸುಖಕರವಾಗಿರಲಿ ಎನ್ನುವ ಉದ್ದೇಶದಿಂದ ದೇಶಾದ್ಯಂತ ರೈಲು ನಿಲ್ದಾಣ ಹಾಗೂ ರೈಲ್ವೆಯ ಸ್ವರೂಪವನ್ನೇ ಬದಲಾವಣೆ ಮಾಡಲಾಗುತ್ತಿದೆ ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿತ್ವ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.ಆಲಮಟ್ಟಿ ರೈಲು ನಿಲ್ದಾಣದಲ್ಲಿ ಬುಧವಾರ, ಶಿರಡಿ-ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಲಮಟ್ಟಿಯಲ್ಲಿ ನಿಲುಗಡೆಗೆ ಅವಕಾಶ ದೊರೆತಿದ್ದು, ಅದರ ಪ್ರಯುಕ್ತ ರೈಲ್ವೆ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರೈಲಿಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.ರೈಲ್ವೆ ಬೋಗಿಯ ವಿನ್ಯಾಸಗಳು ಬದಲಾವಣೆಯಾಗಿವೆ, ರೈಲ್ವೆಯ ವೇಗ ಹೆಚ್ಚಾಗಿದೆ, ನಿಗದಿತ ಸಮಯಕ್ಕೆ ನಿಗದಿತ ಸ್ಥಳ ತಲುಪುವ ವ್ಯವಸ್ಥೆ ಕಟ್ಟುನಿಟ್ಟಾಗಿದೆ. ರೈಲುಗಳ ಸಂಖ್ಯೆಗಳು ಹೆಚ್ಚಿವೆ. ಈಗ ರೈಲು ನಿಲ್ದಾಣಗಳು ವಿಮಾನ ನಿಲ್ದಾಣಗಳಂತೆ ನಿರ್ಮಾಣಗೊಳ್ಳುತ್ತಿವೆ ಇದಕ್ಕೆ ಕಾರಣ ಪ್ರಧಾನಿ ಮೋದಿ ಎಂದರು.ಆಲಮಟ್ಟಿ ಮೂಲಕ ಹಾದು ಹೋಗುವ ಗದಗ-ಹೊಟಗಿ…
ತಾಳಿಕೋಟಿಯಲ್ಲಿ ಬಿಎಲ್ಡಿ ಸೌಹಾರ್ದ ಸಹಕಾರಿ ಸಂಘದ 8ನೇ ಶಾಖೆ ಉದ್ಘಾಟನೆ ತಾಳಿಕೋಟಿ: ಪಟ್ಟಣದಲ್ಲಿ ಸಹಕಾರಿ ಸಂಘಗಳು ಜನರ ವಿಶ್ವಾಸದ ಮೇಲೆ ಅವಲಂಬಿತವಾಗಿ ನಡೆಯುತ್ತವೆ. ಇಲ್ಲಿ ಠೇವಣಿಗಳ ಮೇಲೆ ಆಕರ್ಷಿತ ಬಡ್ಡಿಯನ್ನು ನೀಡಲಾಗುತ್ತದೆ. ಸಣ್ಣ ವ್ಯಾಪಾರಸ್ಥರಿಗೆ ಸುಲಭವಾಗಿ ಸಾಲ ಸಿಗುತ್ತದೆ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರದ ಸೋಪು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು.ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಹತ್ತಿರ ಇರುವ ದೊಡಮನಿ ಕಾಂಪ್ಲೆಕ್ಸ್ ನಲ್ಲಿ ಬಿಎಲ್ ಡಿ ಸೌಹಾರ್ದ ಸಹಕಾರಿ ಸಂಘ ಇದರ ಎಂಟನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಿಎಲ್ಡಿ ಸಂಸ್ಥೆ ಈಗಾಗಲೇ ಶಿಕ್ಷಣ ರಂಗದಲ್ಲಿ ಸಾಕಷ್ಟು ಸೇವೆಯನ್ನು ಸಲ್ಲಿಸಿ ಹೆಸರುವಾಸಿಯಾಗಿದೆ. ಅದಕ್ಕೆ ತನ್ನದೇ ಆದ ವರ್ಚಸ್ಸು ಇದೆ. ಈ ಕಾರಣಕ್ಕಾಗಿಯೇ ಕೇವಲ ನೂರು ದಿನಗಳಲ್ಲಿ ಈ ಬ್ಯಾಂಕು ಎರಡು ನೂರು ಕೋಟಿಗಿಂತಲೂ ಹೆಚ್ಚು ವಹಿವಾಟು ನಡೆಸಿದೆ. ಸಚಿವ ಎಂ. ಬಿ. ಪಾಟೀಲರ ಸಹೋದರ ಸುನೀಲ ಗೌಡರು ಸಾಕಷ್ಟು ಕ್ರಿಯಾಶೀಲತೆಯೊಂದಿಗೆ ಈ…
ತಾಳಿಕೋಟಿ: ಪಟ್ಟಣದ ಸಮಾಜಸೇವಕ ಶಿವಶಂಕರ ಹಿರೇಮಠ ಇವರನ್ನು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ (ರಿ) ಇದರ ರಾಜ್ಯ ಗೌರವ ಅಧ್ಯಕ್ಷರಾಗಿ ನೇಮಕ ಮಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪೂರ ಆದೇಶ ಹೊರಡಿಸಿದ್ದಾರೆ.ತಮ್ಮ ಆದೇಶ ಪತ್ರದಲ್ಲಿ ಅವರು ಈ ಕೂಡಲೇ ತಮಗೆ ಕೊಟ್ಟ ಜವಾಬ್ದಾರಿಯನ್ನು ವಹಿಸಿಕೊಂಡು ಸಮಾಜದ ಸಂಘಟನೆಯ ತತ್ವ ಸಿದ್ಧಾಂತ ಶಿಸ್ತು ಮತ್ತು ನಾವೆಲ್ಲರೂ ಒಂದೇ ಎಂದು ಕಾರ್ಯನಿರ್ವಹಿಸಲು ಹಾಗೂ ವೀರಶೈವ ಸಮಾಜವನ್ನು ಒಗ್ಗೂಡಿಸಿ ಸಮಾಜ ಬಾಂಧವರನ್ನು ಸಂಘಟಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿ ಅವರ ಕಲ್ಯಾಣಕ್ಕಾಗಿ ಶ್ರಮಿಸಬೇಕು ಎಂದು ತಿಳಿಸಿದ್ದಾರೆ. ಅಭಿನಂದನೆ: ಪಟ್ಟಣದ ಕ್ರಿಯಾಶೀಲ ಸಮಾಜ ಸೇವಕರಾದ ಶಿವಶಂಕರ ಹಿರೇಮಠ ಅವರನ್ನು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜದ ರಾಜ್ಯ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ನಮೋ ರಾಘು ವಿಜಯಪುರ ಅವರು ಅಭಿನಂದಿಸಿ ಅವರ ಅವಧಿಯಲ್ಲಿ ಸಂಘಟನೆಯು ಉತ್ತರೋತ್ತರವಾಗಿ ಬೆಳೆಯಲಿ ಎಂದು ಹಾರೈಸಿದ್ದಾರೆ.
ರಾಜ್ಯದ ರಾಷ್ಟ್ರೀಯ ಹೆದ್ದಾರಿ 748A ಉನ್ನತೀಕರಣಕ್ಕೆ ಬಿಡುಗಡೆ | ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಚತುಷ್ಪಥ ರಸ್ತೆ ಉನ್ನತೀಕರಣ ನವದೆಹಲಿ: ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ 2,675.31 ಕೋಟಿ ರೂ. ಮಂಜೂರು ಮಾಡಿದೆ.ಈ ಉಪಕ್ರಮವು ಒಟ್ಟು 92.40 ಕಿಮೀ ಉದ್ದದ ಹೆದ್ದಾರಿಯನ್ನು ಒಳಗೊಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.ಈ ಯೋಜನೆಯು ಪಣಜಿ-ಹೈದರಾಬಾದ್ EC10 ಕಾರಿಡಾರ್ನ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದ್ದಾರೆ.*ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಹೆದ್ದಾರಿ ಕಾಮಗಾರಿಗೆ ನಿತಿನ್ ಗಡ್ಕರಿ ಚಾಲನೆ*6,975 ಕೋಟಿ ರೂ. ಮೌಲ್ಯದ 376 ಕಿ.ಮೀ. ಹೆದ್ದಾರಿ ಕಾಮಗಾರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಅವರು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ,…
