Author: editor.udayarashmi@gmail.com

ಬಿ.ಆರ್.ಬನಸೋಡೆ ರಚಿತ “ವಿಜಯಪುರದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ಹೆಜ್ಜೆಗಳು” ಕೃತಿ ಬಿಡುಗಡೆ ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ ಅವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಪ್ರತಿಯೊಬ್ಬರಿಗೂ ತಲುಪಿಸಲು ಸರಕಾರ ನಾನಾ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ನಗರದ ಕಂದಗಲ ಹನುಮಂತರಾಯ ರಂಗಮಂದಿರಲ್ಲಿ ರವಿವಾರ ನಡೆದ ಬಿ. ಆರ್. ಬನಸೋಡೆ ಅವರು ರಚಿಸಿರುವ ವಿಜಯಪುರದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ಹೆಜ್ಜೆಗಳು(ಬೀಳಗಿ ಸೋಮನಗೌಡರ ಕೋರ್ಟ್ ಕೇಸ್) ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಅಂಬೇಡ್ಕರ ಅವರು ದೇಶಕ್ಕೆ ವಿಶ್ವಶ್ರೇಷ್ಠ ಸಂವಿಧಾನವನ್ನು ನೀಡುವ ಮೂಲಕ ದೇಶದಲ್ಲಿ ಜಗತ್ತಿನ ಅಗ್ರಗಣ್ಯ ನಾಯಕರಾಗಿದ್ದಾರೆ. ಅವರು ಕೇವಲ ದಲಿತರಿಗೆ ಶಕ್ತಿಯನ್ನು ಕೊಡಲಿಲ್ಲ. ಬದಲಾಗಿ ತುಳಿತಕ್ಕೊಳಗಾದ, ಶೋಷಣೆಗೀಡಾದ ಮತ್ತು ಅಸಮಾನತೆಯನ್ನು ಎದುರಿಸುತ್ತಿರುವ ಎಲ್ಲ ಸಮುದಾಯಗಳು ಹಾಗೂ ಭಾರತದ ಎಲ್ಲ 130 ಜನರಿಗೆ ಶಕ್ತಿಯನು ತುಂಬಿದ್ದಾರೆ. ಎಲ್ಲ ವಿವಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಡಾ. ಅಂಬೇಡ್ಕರ ಅವರ ಚಿಂತನೆಗಳ…

Read More

ವಿಜಯಪುರ ಜಿಲ್ಲೆ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ | ತಿಕೋಟಾ ಆಡಳಿತ ಸೌಧ ಉದ್ಘಾಟನೆ | ಸಚಿವ ಡಾ.ಎಂ.ಬಿ.ಪಾಟೀಲ ಭರವಸೆ ವಿಜಯಪುರ: ಜಿಲ್ಲೆಯಲ್ಲಿ ವಿವಿಧ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಆಹಾರ ಸಂಸ್ಕೃರಣ ಘಟಕಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಬೆಳೆಯಲಾದ ದ್ರಾಕ್ಷಿ ಸೇರಿದಂತೆ ವಿವಿಧ ಬೆಳೆಗಳಿಗೆ ಉತ್ತಮ ಬೆಲೆ ದೊರಕಿ ಆರ್ಥಿಕತೆ ವೃದ್ದಿಯಾಗಿ, ಸ್ಥಳೀಯವಾಗಿಯೇ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದ್ದು, ಜಿಲ್ಲೆಯ ಸರ್ವಾಂಗೀರ್ಣ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಶನಿವಾರ ತಿಕೋಟಾದಲ್ಲಿ ೧೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮಿನಿ ವಿಧಾನಸೌಧ ಉದ್ಘಾಟನೆ ಹಾಗೂ ತಾಲೂಕಾ ಪಂಚಾಯತಿ ಮತ್ತು ಪಟ್ಟಣ ಪಂಚಾಯತಿಯ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೇವಲ ನೀರಾವರಿ ಯೋಜನೆಗಳಷ್ಟೇ ಅಲ್ಲದೇ ಕೆರೆಗಳಿಗೆ ನೀರು ತುಂಬಿಸುವುದು, ಶಿಕ್ಷಣ ಗುಣಮಟ್ಟ ಸುಧಾರಣೆ, ಶಾಲಾ ಕಟ್ಟಡಗಳ ಸುಧಾರಣೆ, ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ, ಸ್ಮಾರ್ಟ್ ಕ್ಲಾಸ್‌ಗಳ…

Read More

ಆಲಮಟ್ಟಿ ಮಂಜಪ್ಪ ಹರ್ಡೇಕರ ಸನ್ನಿಧಿಯಲ್ಲಿ ಬಿ.ಕೆ.ಬಿರಾದಾರ ಅವರಿಗೆ ಸಂಮಾನ  ಆಲಮಟ್ಟಿ: ಇಲ್ಲಿನ ಕೃಷ್ಣೆಯ ಸುಂದರ ಪರಿಸರದಲ್ಲಿರುವ ಕರುನಾಡು ಗಾಂಧಿ ಮಂಜಪ್ಪ ಹರ್ಡೇಕರ ಸ್ಮಾರಕ ಭವನಕ್ಕೆ ಭೇಟಿ ನೀಡಿದ ವಿಜಯಪುರ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಇಂಗ್ಲೀಷ ವಿಷಯ ಪರಿವೀಕ್ಷಕ ಬಿ.ಕೆ.ಬಿರಾದಾರ ಅವರನ್ನು ಹೃದಯಸ್ಪರ್ಶಿವಾಗಿ ಸನ್ಮಾನಿಸಿ ಗೌರವಿಸಲಾಯಿತು.    ಗದುಗಿನ ತೋಂಟದಾರ್ಯ ವಿದ್ಯಾಪೀಠದ ಹಾಗೂ ಆಲಮಟ್ಟಿ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ,ಶಿಕ್ಷಣ ತಜ್ಞ ಪ್ರೊ, ಎಸ್.ಎಸ್.ಪಟ್ಟಣಶೆಟ್ಟರ ಅವರು ಮಂಜಪ್ಪನವರ ಕಂಚಿನ ಪುತ್ಥಳಿ ಸನ್ನಿಧಿಯಲ್ಲಿ ಸಂಸ್ಥೆಯ ಪರವಾಗಿ ಬಿ.ಕೆ.ಬಿರಾದಾರ ಅವರನ್ನು ಶಾಲು ಹೊದಿಸಿ ಸತ್ಕರಿಸಿದರು.    ಈ ವೇಳೆ ಕರುನಾಡಿನ ಅನರ್ಘ್ಯ ರತ್ನ, ಅಜ್ಞಾತ ಮಹಾತ್ಮ ಮಂಜಪ್ಪ ಹರ್ಡೇಕರ ಅವರ ಜೀವನ ಚರಿತ್ರೆಯ ಯಶೋಗಾಥೆ ಮೇಲೆ ಪ್ರೊ,ಪಟ್ಟಣಶೆಟ್ಟರ ಬೆಳಕು ಚೆಲ್ಲಿದರು. ಸಮಾಜಕ್ಕಾಗಿ ಇಡೀ ತಮ್ಮ ಜೀವ ಸವೆದಿರುವ ಮಂಜಪ್ಪನವರು ಅಪ್ರತಿಮ ಚಿಂತಕರು. ತ್ಯಾಗ ಜೀವಿ ಈ ಶರಣರ ಸತ್ಕಾರ್ಯಗಳು ಆಜರಾಮರ. ಅವರ ದೇಶ ಪ್ರೇಮ, ಪಾರದರ್ಶಕತೆ ಬದುಕು ಮರೆಯಲಾಸಾಧ್ಯ ಎಂದರು. …

Read More

ಗೋಲಗೇರಿಯ ಸರಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಅವರಿಗೆ ಸಿಂದಗಿಯ ಎಚ್.ಜಿ.ಮಹಾವಿದ್ಯಾಲಯದಲ್ಲಿ ನಡೆದ ಆರನೇ ಸಿಂದಗಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುವರ್ಣ ಕರ್ನಾಟಕ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ, ಸಿಂದಗಿಯ ಶಾಂತಗಂಗಾಧರ ಸ್ವಾಮೀಜಿ, ಸಮ್ಮೇಳನದ ಸರ್ವಾಧ್ಯಕ್ಷ ರಾ.ಶಿ.ವಾಡೇದ, ಮಕ್ಕಳ ಸಾಹಿತಿ ಹ.ಮ.ಪೂಜಾರ, ಕ.ಸಾ.ಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.ಶಿಕ್ಷಕರ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ, ಗೋಲಗೇರಿ ಕ್ಲಸ್ಟರ್ ಸಿ.ಆರ್.ಪಿ ರಾಜಶೇಖರ್ ಬಿರಾದಾರ, ಯಲಗೋಡ ಕ್ಲಸ್ಟರ್ ಸಿ.ಆರ್.ಪಿ. ವೀರೇಶ್ ಕರಕಳ್ಳಿಮಠ, ಸಾಹಿತಿ ಕೆ.ಜಿ.ಹತ್ತಳ್ಳಿ, ಆರಕ್ಷಕ ಸಾಹಿತಿ ಮೌಲಾಲಿ ಆಲಗೂರ, ಮುಖ್ಯ ಶಿಕ್ಷಕ ಆರ್.ಜಿ.ಬನಸಿ, ಪೂರ್ಣಿಮಾ ಸಜ್ಜನ, ಸಂಗೀತಾ ಡಾಲೆ, ಎಂ.ಎಸ್.ಮಣೂರ, ಎಸ್.ಬಿ.ಕನ್ನೊಳ್ಳಿ, ಸಿ.ಎಸ್.ಹಿರೇಮಠ, ಬಸವರಾಜ ಮಾಳೇಗಾರ ಆರ್.ಎಸ್.ಕರ್ನಾಳ, ಮಡಿವಾಳ ನಾಯ್ಕೋಡಿ, ಸಂತೋಷ ನಂದರಗಿ, ಬಿ.ಐ.ಬನ್ನೆ ಸೇರಿದಂತೆ ಸಹೋದ್ಯೋಗಿ ಮಿತ್ರರು…

Read More

ಸಂಸದ ಉಮೇಶ ಜಾಧವ ಆಪ್ತನ ಹತ್ಯೆ | ಕಣ್ಣಿಗೆ ಖಾರದ ಪುಡಿ ಹಾಕಿ ಕೊಚ್ಚಿ ಕೊಲೆ | ಜೊತೆಗಿದ್ದವರಿಂದಲೇ ಹತ್ಯೆ ಶಂಕೆ ಅಫಜಲಪುರ: ಕಲಬುರಗಿ ಸಂಸದ ಡಾ. ಉಮೇಶ ಜಾಧವ ಆಪ್ತವಲಯದಲ್ಲಿದ್ದ ಯುವ ಮುಖಂಡ ಗಿರೀಶ ಚಕ್ರ(೩೧) ಬರ್ಬರವಾಗಿ ಹತ್ಯೆಯಾಗಿದ್ದಾರೆ.ಘಟನೆ ಕುರಿತು ಮೃತ ಗಿರೀಶಬಾಬು ಚಕ್ರ ಸಹೋದರ ಮಲ್ಲಣ್ಣ ಚಕ್ರ(೫೦) ದೇವಲ ಗಾಣಗಾಪೂರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ರಾತ್ರಿ ಸಾಗನೂರ ಗ್ರಾಮದಲ್ಲಿ ಗಿರೀಶಬಾಬು ಗೆಳೆಯ ಸಚೀನ ಶರಣಪ್ಪ ಕಿರಸಾವಳಗಿ ಮತ್ತು ಮೂರು ಜನ ಸಹಚರರು ಗಿರೀಶ ಚಕ್ರ ಅವರಿಗೆ ಶಾಲು ಹೊದಿಸಿ ಹೂಹಾರ ಹಾಕಿ ಸನ್ಮಾನಿಸಿ ಅಭಿನಂದಿಸಿದ್ದಲ್ಲದೆ ಬಿಎಸ್‌ಎನ್‌ಎಲ್ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕೆ ಪಾರ್ಟಿ ಕೋಡುವಂತೆ ಕೇಳಿದಾಗ ಎಲ್ಲರೂ ಕೂಡಿಕೊಂಡು ಸಾಗನೂರ ಗ್ರಾಮದ ಸಂತೋಷ ಗಡಗಿ ಎಂಬಾತನ ಜಮೀನಿನಲ್ಲಿ ಪಾರ್ಟಿ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ. ಈ ವೇಳೆ ಸಚೀನ ಕಿರಸಾವಳಗಿ ಬೀಯರ್ ತರಿಸುವಂತೆ ಗಿರೀಶನಿಗೆ ಕೇಳಿಕೊಂಡಾಗ ಗಿರೀಶ ತನ್ನ ಅಳಿಯನನ್ನು ಕಾರಿನಲ್ಲಿ ಬೀಯರ್ ತರಲು ಕಳುಹಿಸಿದ್ದಾರೆ. ಈ ಸಮಯದಲ್ಲೇ…

Read More

ಅಫಜಲಪುರ: ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಮೊದಲ ದಿನದ ಪರೀಕ್ಷೆ ಸರಾಗವಾಗಿ ನಡೆದವು. ತಾಲೂಕಿನ ೪ ಪರೀಕ್ಷಾ ಕೇಂದ್ರಗಳಲ್ಲಿ ೨೪೫೧ವಿದ್ಯಾರ್ಥಿಗಳ ಪೈಕಿ ೨೩೭೪ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ೧೧೮ ವಿದ್ಯಾರ್ಥಿಗಳು ಗೈರಾಗಿದ್ದಾರೆ.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೭೭೨ ವಿದ್ಯಾರ್ಥಿಗಳ ಪೈಕಿ ೭೪೩ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ೨೯ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪರೀಕ್ಷಾಧಿಕಾರಿ ಗುರುಲಿಂಗಯ್ಯ ಸಾಲಿಮಠ ತಿಳಿಸಿದ್ದಾರೆ. ತಾಲೂಕಿನ ಕರ್ಜಗಿ ಪಿಯು ಕಾಲೇಜಿನಲ್ಲಿ ೫೬೦ ವಿದ್ಯಾರ್ಥಿಗಳ ಪೈಕಿ ೫೨೯ ವಿದ್ಯಾರ್ಥಿಗಳು ಪರೀಕ್ಷರೆ ಬರೆದರೆ ೩೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷಾಧಿಕಾರಿ ಸಂಜಯ ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸವರಾಜ ಪಾಟೀಲ್ ಸೇಡಂ ಕಾಲೇಜಿನಲ್ಲಿ ೩೫೦ ವಿದ್ಯಾರ್ಥಿಗಳ ಪೈಕಿ ೩೩೩ ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ ೧೭ ವಿದ್ಯಾರ್ಥಿಗಳು ಗೈರಾಗಿದ್ದಾರೆ. ದಯಾನಂದ ಬಂದರವಾಡ ತಿಳಿಸಿದ್ದಾರೆ. ಮಹಾಂತಮ್ಮ ಪಾಟೀಲ್ ಪಿಯು ಕಾಲೇಜಿನಲ್ಲಿ ೭೬೧ ವಿದ್ಯಾರ್ಥಿಗಳ ಪೈಕಿ ೭೨೮ ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ ೪೧ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪರೀಕ್ಷಾಧಿಕಾರಿ ಸುರೇಶ ಗಣಿಹಾರ ತಿಳಿಸಿದ್ದಾರೆ.

Read More

ಕಲಬುರ್ಗಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಆರೋಪ ಅಫಜಲಪುರ: ಶಾಸಕ ಎಂ.ವೈ ಪಾಟೀಲ್ ಅವರು ಹಿರಿಯರಿದ್ದಾರೆ, ಅವರಿಗೆ ನಾನು ಬಹಳಷ್ಟು ಗೌರವ ಕೊಡುತ್ತೇನೆ. ಆದರೆ ಅವರು ಶಾಸಕರಾಗಿಯೂ ತಮ್ಮ ಅಧಿಕಾರ ಚಲಾಯಿಸಲು ಸಾಧ್ಯವಾಗುತ್ತಿಲ್ಲ, ಮಗನ ಆರ್ಭಟದ ಮುಂದೆ ಶಾಸಕರ ಆಟ ನಡೆಯುತ್ತಿಲ್ಲ ಹೀಗಾಗಿ ತಾಲೂಕಿನಾದ್ಯಂತ ಸಮಸ್ಯೆಗಳು ತಾಂಡವವಾಡುತ್ತಿವೆ ಎಂದು ಮಾಜಿ ಜಿ.ಪಂ ಅಧ್ಯಕ್ಷ ನಿತೀನ್ ಗುತ್ತೇದಾರ ಹೇಳಿದರು.ಅವರು ತಾಲೂಕಿನ ಬಡದಾಳ ಗ್ರಾಮದಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಗ್ರಾಮದ ಸಂಪರ್ಕ ರಸ್ತೆಗಳಿಗಾಗಿ ನಡೆಯುತ್ತಿರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತ ಪಡಿಸಿ ಮಾತನಾಡುತ್ತಾ, ನಾವೆಲ್ಲರೂ ರಾಜಕೀಯವಾಗಿ ವೈರಿಗಳಾಗಿರಬಹುದು ಆದರೆ ಜನರ ಸಮಸ್ಯೆಗಳಿಗೆ ಸ್ಪಂದಿಸುವಾಗ ನಾವು ರಾಜಕೀಯ ಮಾಡಬಾರದು. ಚುನಾವಣೆಗಳಲ್ಲಿ ನೀವು ಯಾರಿಗೆ ಬೇಕಿದ್ದರು ಮತ ಹಾಕಬಹುದು, ಆದರೆ ಗೆದ್ದ ಮೇಲೆ ಗೆದ್ದವರು ಎಲ್ಲರಿಗೂ ಸಮಾನವಾಗಿ ಕಾಣಬೇಕು. ಎಲ್ಲಾ ಗ್ರಾಮಗಳಿಗೂ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡಬೇಕು. ಆದರೆ ಶಾಸಕರು ಪುತ್ರ ಕೆಲವು ಗ್ರಾಮಗಳ ಮೇಲೆ ಹಗೆತನ ಸಾಧಿಸುತ್ತಿದ್ದಾರೆ. ತಾಲೂಕಿನಲ್ಲಿ ಬಡದಾಳ…

Read More

ವಿಜಯಪುರ: ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳಿಗೆ ಯೋಗ್ಯ ಬೆಲೆ ಹಾಗೂ ಆಹಾರ ಉತ್ಪಾದನೆಗೆ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಸ್ಥಾಪಿಸಲಾಗುತ್ತಿರುವ ಫುಡ್ ಪಾರ್ಕ್ನಲ್ಲಿ ಉಗ್ರಾಣಗಳು, ಶೀತಲಗೃಹಗಳು, ಲ್ಯಾಬೋರೇಟರಿಗಳನ್ನು ನಿರ್ಮಾಣ ಮಾಡಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಜಿಲ್ಲೆಯ ಆಹಾರ ಉತ್ಪಾದನೆ ಹಾಗೂ ಜಿಲ್ಲೆಯ ಬೆಳೆಗಳಿಗೆ ಯೋಗ್ಯ ಬೆಲೆ ದೊರಕುವ ನಿಟ್ಟಿನಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಸುಸಜ್ಜಿತ ಫುಡ್ ಪಾರ್ಕ್ ಅಭಿವೃದ್ದಿ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ ವಿವಿಧ ಬೆಳೆಗಾರರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆ ನೀಡಿ, ೨೦ ರಿಂದ ೨೫ ಸಾವಿರ ಮೆಟ್ರಿಕ್ ಟನ್ ಸ್ಟೋರೇಜ್‌ಗೆ ಅವಕಾಶವಿದ್ದು, ಅದೇ ಮಹಾರಾಷ್ಟ್ರ ರಾಜ್ಯದ ತಾಸಗಾಂವನಲ್ಲಿ ೧ಲಕ್ಷ ಮೆಟ್ರಿಕ್ ಟನ್ ಸ್ಟೋರೇಜ್‌ಗೆ ಅವಕಾಶವಿರುವುದರಿಂದ ಜಿಲ್ಲೆಯಲ್ಲಿನ ಸ್ಟೋರೇಜ್ ಪ್ರಮಾಣ ಹೆಚ್ಚಿಸಬೇಕು. ಆನ್‌ಲೈನ್ ಟ್ರೆಡಿಂಗ್‌ನಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಬೇಕು. ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಪ್ರಮುಖ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ,…

Read More

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಮಟ್ಟದ ಸಮ್ಮೇಳನದಲ್ಲಿ ಶಾಸಕ ಯಶವಂತ್ರಾಯಗೌಡ ಅಭಿಮತ ಇಂಡಿ: ಈ ಹಿಂದಿನ ಕಾಂಗ್ರೇಸ್ ಸರಕಾರದ ಅವಧಿಯಲ್ಲಿ ರಾಜ್ಯದ ಶಿಕ್ಷಕರಿಗೆ ೩೦% ವೇತನ ಹೆಚ್ಚಳ ಮಾಡುವ ಮೂಲಕ ಪ್ರತಿ ವರ್ಷ ಹತ್ತು ಸಾವಿರ ಕೋಟಿ ರೂ ಹೆಚ್ಚಿನ ಅನುದಾನ ನೀಡಿ ಸಿದ್ದರಾಮಯ್ಯನವರು ಶಿಕ್ಷಕರ ವೇತನ ಹೆಚ್ಚಿಸಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಶನಿವಾರ ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ತಾಲೂಕಾ ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ತಾಲೂಕಾ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.ಶಿಕ್ಷಕರು ಬಡ ಮಕ್ಕಳ ಭವಿಷ್ಯ ರೂಪಿಸುವ ಕಾರ್ಯ ಮಾಡಬೇಕು. ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಶ್ರೇಷ್ಠವಾಗಿದೆ. ಸರಕಾರಿ ಶಾಲೆಗಳೆಂಬ ತುಷ್ಠಿಕರಣ ಕೀಳರಿಮೆ ಬಿಟ್ಟು ಸರಕಾರಿ ಶಾಲೆಯಲ್ಲಿ ಒಳ್ಳೆಯ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು ಎಂದರು.ದೇಶದಲ್ಲಿ ಎಲ್ಲ ರಂಗದಲ್ಲಿಯೂ ಸಹಕಾರಿ ಸಂಘಗಳು ಯಶಸ್ವಿ ಕಂಡಿದ್ದು ಸರಕಾರ…

Read More