Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ನಟ ಕೆ ಶಿವರಾಮ್ ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆ ಶಿವರಾಮ್ ಅವರು ಮೊದಲ ಬಾರಿಗೆ ಕನ್ನಡದಲ್ಲಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದರು.ನಟ ಕೆ ಶಿವರಾಮ್ ಅವರಿಗೆ ಬುಧವಾರ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯೂ ಆಗಿದ್ದರು. ಆ ಮೂಲಕ ಕನ್ನಡದಲ್ಲಿ ಐಎಎಸ್ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.ಸಿನಿಮಾ ರಂಗದಲ್ಲೂ ತೊಡಗಿಸಿಕೊಂಡಿದ್ದ ಕೆ.ಶಿವರಾಮ್ 1993ರಲ್ಲಿ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ…
ವಿಜಯಪುರ: ಸಾಧನೆಗೆ ಛಲವಿರಬೇಕು. ಸಾಧಕನಿಗೆ ಸದಾವಕಾಶಗಳು ಹುಡುಕಿಕೊಂಡು ಬರುತ್ತವೆ. ಶ್ರಮದಿಂದ ಕ್ರಮವಾಗಿ ಅಧ್ಯಯನ ನಡೆಸಿ ಜೀವನದಲ್ಲಿ ಯಶಸ್ವಿಯಾಗಬೇಕು. ಇಂತಹವರ ಸಾಲಿನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ನಿಲ್ಲುತ್ತಾರೆ ಎಂದು ನ್ಯಾಯವಾದಿ ಎ ಎಂ ತಾಂಬೋಳಿ ಹೇಳಿದರು.ನ್ಯಾಯಾಧೀಶರಾಗಿ ಆಯ್ಕೆಯಾಗಿ ರಾಜ್ಯಕ್ಕೆ ಎರಡನೇ ರ್ಯಾಂಕ ಪಡೆದ ನ್ಯಾಯಾಧೀಶ ಜಹೀರ ಅತನೂರ ಇವರ ಗೌರವ ಸನ್ಮಾನ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಪ್ರತಿಭೆಗಳಿಗೇನು ಕೊರತೆಯಿಲ್ಲ. ಆದರೆ ನ್ಯಾಯಾಂಗ ಇಲಾಖೆಯಲ್ಲಿ ಎಲ್ಲ ಪರೀಕ್ಷೆ ಪಾಸಾಗಿ ನ್ಯಾಯಾಧೀಶರಾಗುವುದು ನಾಗರೀಕ ಸೇವಾ ಪರೀಕ್ಷೆಗಿಂತ ಕಠಿಣವಾಗಿರುತ್ತದೆ. ಇಂತಹದರಲ್ಲಿ ಉತ್ತಮ ರೀತಿಯಲ್ಲಿ ಓದಿ ಕುಟುಂಬ ಹಾಗೂ ಜಿಲ್ಲೆಗೆ ಕೀರ್ತಿ ತಂದ ನ್ಯಾಯಾಧೀಶ ಜಹೀರ ಅತನೂರ ಅವರ ಸಾಧನೆ ಶ್ಲಾಘನೀಯವಾಗಿದೆ ಎಂದರು.ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಇರಫಾನ್ ಶೇಖ ಹಾಗೂ ಶಿಕ್ಷಕ-ಸಾಹಿತಿ ಕಬೂಲ್ ಕೊಕಟನೂರ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರಲ್ಲಿ ಇಂತಹ ಪ್ರತಿಭೆಗಳು ಬಹಳ ಕಡಿಮೆ ಆದರೂ ಛಲ ಬಿಡದೆ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ…
ವಿಜಯಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ತಾಲೂಕಾ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಗೋಡೆಕಾರ ಆಯ್ಕೆಯಾಗಿದ್ದಾರೆ.ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಘದ ಗುರಿ ಹಾಗೂ ತತ್ವ ಸಿದ್ಧಾಂತಗಳನ್ನು ಹೇಳಿ ತಾಲೂಕಾ ಅಧ್ಯಕ್ಷ ಅರುಣಗೌಡ ತೇರದಾಳ ಆದೇಶ ಪ್ರತಿ ನೀಡಿದರು.ತಾಲೂಕಿನಲ್ಲಿ ಬರುವ ಎಲ್ಲಾ ಹಳ್ಳಿಗಳಲ್ಲಿ ರೈತ ಸಂಘದ ಹಿರಿಯ, ಯುವ, ಮಹಿಳಾ, ಕಾರ್ಮಿಕ ಸಂಘಟನೆಯನ್ನು ಮಾಡಿ ಎಲ್ಲಾ ರೈತರನ್ನು ಸಂಘಟನೆಗೆ ಕರೆತಂದು ಸರ್ಕಾರದ ಯೋಜನೆಗಳನ್ನು ತಿಳಿಸುತ್ತಾ, ಹೊಸ ಹೊಸ ತಂತ್ರಜ್ಞಾನಗಳನ್ನು ತಿಳಿಸುತ್ತಾ ಸಮಗ್ರ ಹಾಗೂ ಸಾವಯವ ಕೃಷಿ ಮಾಡುವಂತೆ ಪ್ರೇರೇಪಿಸಬೇಕು ಎಂದಿದ್ದಾರೆ.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ವಿಜಯಪುರ ತಾಲೂಕಾ ಉಪಾಧ್ಯಕ್ಷ ಮಹಾದೇವಪ್ಪ ತೇಲಿ, ಮುಖಂಡರಾದ ಸಂತೋಷ ಪೂಜಾರಿ, ಶಿವರಾಜ ಕುಮಟಗಿ ಸೇರಿದಂತೆ ಇತರರು ಇದ್ದರು.
ಮುದ್ದೇಬಿಹಾಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾದಿಗ ದಂಡೋರ ಹೋರಾಟ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಹಶೀಲ್ದಾರ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಅಂಬೇಡ್ಕರ್ ವೃತ್ತದಿಂದ ಶುರುವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಗೆ ಬಂದು ತಲುಪಿತು. ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪ್ರಮುಖರಾದ ಡಿ.ಬಿ.ಮುದೂರ, ಸಿ.ಜಿ.ವಿಜಯಕರ, ತಿಪ್ಪಣ್ಣ ದೊಡಮನಿ, ಬಾಲಚಂದ್ರ ಹುಲ್ಲೂರ, ಕೆ.ಬಿ.ದೊಡಮನಿ, ಡಿ.ವಾಯ್.ಹಂಗರಗಿ ಮತ್ತೀತರರು ಮಾತನಾಡಿ, ತಾಲೂಕಿನ ಕೆಲವು ಗ್ರಾಮಗಳಲ್ಲಿ ದಲಿತ ಸಮುದಾಯದ ಬಂಧುಗಳಿಗೆ ಯಾವುದೇ ಸ್ಮಶಾನ ಇಲ್ಲ. ಇನ್ನೂ ಕೆಲವು ಗ್ರಾಮಗಳಲ್ಲಿ ಅಸ್ಪಷ್ಯತೆ ವ್ಯವಸ್ಥೆ ಇದ್ದು ಸಮಾನತೆ ಇಲ್ಲ. ಈ ಬಗ್ಗೆ ಹಲವಾರು ಬಾರಿ ಹೋರಾಟಗಳನ್ನು ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕೂಡಲೇ ಅಧಿಕಾರಿಗಳು ನಮ್ಮ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದರು.ಚನ್ನಯ್ಯ ಭವನ ಮತ್ತು ಗಾರ್ಡನ ನಿರ್ಮಾಣ, ಪ್ರತಿ ಹಳ್ಳಿಯಲ್ಲಿ ಅಸ್ಪ್ರಷ್ಯತೆ ನಿವಾರಣೆ ಬಗ್ಗೆ…
ಆಲಮಟ್ಟಿ: ಶಾಲಾ ಮಕ್ಕಳ ಬುದ್ಧಿಮತ್ತೆಯ ವಿಕಸನದಲ್ಲಿ ಚಿತ್ರಕಲಾ ಶಿಕ್ಷಣ ಮಹತ್ವದ ಪಾತ್ರವಹಿಸುತ್ತದೆ ಎಂದು ಗದುಗಿನ ತೋಂಟದಾರ್ಯ ವಿದ್ಯಾಪೀಠ ಹಾಗೂ ಆಲಮಟ್ಟಿಯ ಎಸ್.ವ್ಹಿ.ವ್ಹಿ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಶಿಕ್ಷಣ ತಜ್ಞ ಪ್ರೊ,ಶಿವಾನಂದ ಪಟ್ಟಣಶೆಟ್ಟರ ಅಭಿಪ್ರಾಯಿಸಿದರು.ಗುರುವಾರ ಸ್ಥಳೀಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಡ್ರಾಯಿಂಗ್ ಲೋಹರ,ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಗೈದ ಮಕ್ಕಳಿಗೆ ಅಂಕಪಟ್ಟಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು.ವಿಚಾರಧಾರೆಯ ಕಲೆಯಾಗಿರುವ ಚಿತ್ರಕಲೆ ನಮ್ಮ ದೇಶಿ ಸಂಸ್ಕೃತಿಯ ಪ್ರತೀಕವಾಗಿದೆ. ಇದಕ್ಕೆ ಬೆಲೆಕಟ್ಟಲಾಗದು. ಇದು ಬಹುವಿಧ ಜ್ಞಾನ ಭಂಡಾರದ ಪ್ರಭೆಯಾಗಿದೆ ಎಂದರು. ಚಿತ್ರಕಲಾಭ್ಯಾಸದಿಂದ ಜ್ಞಾನದ ಮೆರಗು ವೃದ್ಧಿಸುತ್ತದೆ. ಚಿತ್ರಕಲಾ ಶಿಕ್ಷಣ ಇತರೆ ಬೋಧನಾ ವಿಷಯದ ವಿಧಾನಗಳಿಗೆ ಪ್ರೇರಣೆಯಾಗಿದೆ.ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸುವಲ್ಲಿ ಈ ಕಲೆ ಪ್ರಾಮುಖ್ಯತೆ ಹೊಂದಿದೆ ಎಂದರು.ಚಿತ್ರಕಲೆ ಅಕ್ಷರಾಭ್ಯಾಸ, ಭಾಷಾಭ್ಯಾಸಕ್ಕೆ ವೈವಿಧ್ಯತೆ ತೋರುತ್ತದೆ. ಸೌಹಾರ್ದತೆಯ ಆದರ್ಶತನ ಚಿತ್ರಕಲೆಗಿದೆ. ಚೈತನ್ಯಮಯ, ಸೌಂದರ್ಯವನ್ನು ಒಳಗೊಂಡದೆ.ಸೃಜನಶೀಲ ವ್ಯಕ್ತಿತ್ವ ರೂಪಧಾರಣೆಗೆ ಪೂರಕವಾಗಿದೆ. ಹೀಗಾಗಿ ಈ ಆನಂದದಾಯಕ ಚಿತ್ರಕಲಾ ವಿಷಯ ಮಕ್ಕಳ ಮನಮುಟ್ಟುವಂತೆ ಬೋಧಿಸಿ ಇನ್ನಷ್ಟು…
ವಿಜಯಪುರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ೨೦೨೪ರ ಮಾರ್ಚ್ ೦೯ರಂದು ಜಿಲ್ಲೆಯ ಜಿಲ್ಲಾ ಕೇಂದ್ರ ಹಾಗೂ ತಾಲೂಕಾ ಕೇಂದ್ರದ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.ರಾಷ್ಟಿçÃಯ ಲೋಕ್-ಅದಾಲತ್ನಲ್ಲಿ ರಾಜಿಯಾಗಬಹುದಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು, ಕೌಟುಂಬಿಕ ವ್ಯಾಜ್ಯಗಳು, ಆಸ್ತಿಯಲ್ಲಿ ಪಾಲು ವಿಭಾಗ ಕೋರಿ ಸಲ್ಲಿಸಿರುವ ದಾವೆಗಳು, ದೂರವಾಣಿ ಬಾಕಿ ಬಿಲ್ಲು ಪಾವತಿ ಪ್ರಕರಣಗಳು, ನೀರಿನ ಬಿಲ್ಲು ಬಾಕಿ ಪಾವತಿ ಪ್ರಕರಣಗಳು, ಜೀವನಾಂಶ ಕೊರಿ ಸಲ್ಲಿಸಿರುವ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಭೂ-ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವಿಲ್ ಪ್ರಕರಣಳನ್ನು ಲೋಕ್ ಅದಾಲತ್ನಲ್ಲಿ ಇತ್ಯರ್ಥಪಡಿಸಲಾಗುವುದು.ಮಾ.೯ರಂದು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳುವ ಲೋಕ್ ಅದಾಲತ್ನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ…
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಫುಡ್ ಕರ್ನಾಟಕ ಲಿಮಿಟೆಡ್ ವತಿಯಿಂದ ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ಸ್ಥಾಪಿಸಲಾಗುತ್ತಿರುವ ಫುಡ್ ಪಾರ್ಕ್ನಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳು ಹಾಗೂ ಈ ಕುರಿತಂತೆ ಚರ್ಚಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮಾ.೨ ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ.ಸದರಿ ಸಭೆಗೆ ಜಿಲ್ಲೆಯ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಪ್ರಗತಿಪರ ರೈತರನ್ನು ಆಹ್ವಾನಿಸಲಾಗಿದ್ದು, ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಲೋಕಸಭಾ ಚುನಾವಣೆ-೨೦೨೪: ಮತದಾನ ಪ್ರತಿಜ್ಞಾವಿಧಿ ಬೋಧನೆ ವಿಜಯಪುರ: ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-೨೦೨೪ ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇಕಡಾ ನೂರರಷ್ಟು ಮತದಾನಕ್ಕೆ ನಾವೆಲ್ಲರೂ ಶ್ರಮಿಸೋಣ ಎಂದು ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ೨೦೨೩-೨೪ ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮತದಾನದ ಮಹತ್ವ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲ ಕ್ರೀಡಾಪಟುಗಳೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು(ಪ್ರಭಾರ) ಕೆ. ಹೊಂಗಯ್ಯ, ಕರ್ನಾಟಕ…
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿಜಯಪುರದ ಅಫಜಲಪೂರ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ೨೦೨೪-೨೫ನೇ ಸಾಲಿಗೆ ೬ನೇ ತರಗತಿ ಆಂಗ್ಲ ಮಾಧ್ಯಮದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಮುಸ್ಲಿಂ ೨ಬಿ ಸಮುದಾಯದ ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಆಸಕ್ತ ಅರ್ಹರು ಸೇವಾ ಸಿಂಧು https://sevasindhuservice.karnataka.gov.in ಪೋರ್ಟಲ್ನಲ್ಲಿ ನೇರವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೧೫-೦೩-೨೦೨೪ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಮಾಹಿತಿ ಕೇಂದ್ರ ವಿಜಯಪುರ ಮೊ: ೮೧೨೩೭೧೦೭೬೬, ಇಂಡಿ ಮೊ: ೯೩೮೦೨೯೩೨೨೩, ಸಿಂದಗಿ ಮೊ: ೮೭೬೨೩೨೦೭೪೯, ಮುದ್ದೇಬಿಹಾಳ ಮೊ: ೮೭೨೨೪೪೫೫೫೨ ಹಾಗೂ ಬಸವನಬಾಗೇವಾಡಿ ಮೊ: ೯೯೭೨೩೪೦೭೨೧ ಹಾಗೂ ಶಾಲೆಯ ಪ್ರಾಂಶುಪಾಲರಾದ ಸಿದ್ಧರಾಮ ಎಂಟತ್ತ ಇವರಿಂದ ಮಾಹಿತಿ ಪಡೆದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿಯ ಒಂದು ಪ್ರತಿಯನ್ನು ಶಾಲೆಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಸರ್ಕಾರಿ ನೌಕರರು ಕರ್ತವ್ಯ ನಿಭಾಯಿಸಲು ಉತ್ತಮ ಆರೋಗ್ಯ ಹೊಂದಿರಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನೌಕರರಿಗೆ ಏರ್ಪಡಿಸಿದ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ರಾಜ್ಯಾ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರತಿಯೊಬ್ಬರಲ್ಲಿ ಒಂದು ಪ್ರತಿಭೆ ಇದ್ದೆ ಇರುತ್ತದೆ. ಆದರೆ ಪ್ರತಿಭೆ ಹೊರ ಹಾಕಲು ಅವಕಾಶಗಳು ಬಹಳ ಸಿಗುವದಿಲ್ಲ. ನೌಕರರಿಗೆ ಇದು ಒಳ್ಳೆಯ ಅವಕಾಶ. ಬಹುತೇಕ ಇಲಾಖೆಗಳಲ್ಲಿ ಮೂನ್ನೂರ ದಿನ ಕರ್ತವ್ಯ ಇರುತ್ತದೆ. ಹಗಲು ರಾತ್ರಿ ನೌಕರರು ಜವಾಬ್ದಾರಿಯಿಂದ ಕರ್ತವ್ಯ ಮಾಡುತ್ತಾರೆ. ಸಧ್ಯ ಚುನಾವಣೆ ಕರ್ತವ್ಯಕ್ಕೆ ಸಿದ್ದತೆ ನಡೆದಿದೆ. ಸರ್ಕಾರಿ ನೌಕರರ ಜೊತೆ ಅವರ ಕುಟುಂಬಗಳಿಗೂ ಕ್ರೀಡಾಕೂಟದಲ್ಲಿ ಭಾಗವಹಿಸುವ…
