Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಭೂತನಾಳ-ಬಾಬಾನಗರ ಬಳಿ ಸ್ಥಳ ಗುರುತಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸೂಚನೆ ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ(NHAI)ದವರು ರಾಜ್ಯದ ಅರಣ್ಯ ಪ್ರದೇಶದಲ್ಲಿ ಹೆದ್ದಾರಿ ಅಭಿವೃದ್ಧಿ ಕೈಗೊಂಡಿದ್ದು, ಈ ಹೆದ್ದಾರಿಯಿಂದ ಕಡಿಮೆಯಾಗುವ ಅರಣ್ಯ ಜಮೀನಿಗೆ ಬದಲಾಗಿ ವಿಜಯಪುರ ಜಿಲ್ಲೆಯಲ್ಲಿ ಕಂದಾಯ ಇಲಾಖೆ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಉದ್ದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭೂತನಾಳ ಮತ್ತು ಬಾಬಾನಗರ ಬಳಿ 200 ಹೆಕ್ಚರ್ ಪ್ರದೇಶವನ್ನು ಗುರುತಿಸಲು ಹಾಗೂ ಈ ಪ್ರದೇಶದಲ್ಲಿ ಅರಣ್ಯ ಬೆಳೆಸುವ ಕುರಿತು ಸಮಗ್ರ ಯೋಜನೆ ರೂಪಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರವಿವಾರ ಭೂತನಾಳ ಕೆರೆಗೆ ಭೇಟಿ ನೀಡಿದ ಅವರು ಶತಮಾನದ ಹಿಂದೆ 1910 ಖ್ಯಾತ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಉಸ್ತುವಾರಿಯಲ್ಲಿ ನಿರ್ಮಿಸಿದ ಮತ್ತು ಈಗ ನವೀಕರಣ ಮಾಡಲಾಗಿರುವ ಗೆಸ್ಟಹೌಸ್ ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಅರಣ್ಯ…
Udayarashmi kannada daily newspaper
ವಿಜಯಪುರ: ನಗರದ ಹೃದಯಭಾಗದಲ್ಲಿರುವ ಶ್ರೀ ಲಾಲಬಹುದ್ದೂರ ಶಾಸ್ತ್ರಿ ಮಾರುಕಟ್ಟೆ ಅಥವಾ ಮಿನಾಕ್ಷಿ ಚೌಕನ ಮದ್ಯ ಭಾಗದಲ್ಲಿರುವ ವಿವಿಧ ಕೋಚಿಂಗ್ ಸೆಂಟರ್ಗಳಲ್ಲಿ ಕಡು ಬಡತನದಿಂದ ಬರುವ ಸಾವಿರಾರು ವಿದ್ಯಾರ್ಥಿ ಯುವಜನರು ಅಧ್ಯಯನ ಮಾಡುತ್ತಿದ್ದು, ಇವರಿಗೆ ಮೂರು ಹೊತ್ತು ಊಟ ಸಿಗದೇ ಪರದಾಡುವ ಸ್ಥಿತಿ ಉಂಟಾಗಿದ್ದು, ಇಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ ಕುಮಾರ, ನಾಡಿನ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಐಎಎಸ್, ಕೆಎಎಸ್ ಮತ್ತು ಪಿ ಸಿ, ಪಿಎಸ್ಐ, ಎಸಡಿಎ, ಎಫ್ಡಿಎ ಮತ್ತು ಹತ್ತು ಹಲವಾರು ಹುದ್ದೆಗಳ ಕನಸು ಹೊತ್ತು ಇಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಬರುತ್ತಿರುತ್ತಾರೆ. ಇಲ್ಲಿ ಸುಮಾರು ಬಡ ವಿದ್ಯಾರ್ಥಿ ಮತ್ತು ಯುವಜನರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವದು ಕಂಡು ಬರುತ್ತಿದೆ. ಈ ಬಡ ವಿದ್ಯಾರ್ಥಿಗಳ ಹಸಿವು ನಿಗಿಸಲು ಇಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವುದು ಸೂಕ್ತವಾಗಿದೆ ಎಂದರು.ಈ…
ಕೊಲ್ಹಾರ: ನೂತನ ತಾಲೂಕು ಕೇಂದ್ರ ಕೊಲ್ಹಾರ ಪಟ್ಟಣದಲ್ಲಿ ಹಿರಿಯ ಹಾಗೂ ಕಿರಿಯ ನ್ಯಾಯಾಲಯಗಳ ಕಚೇರಿಗಳನ್ನು ನ್ಯಾಯಾಧೀಶರ ಮತ್ತು ಸಿಬ್ಬಂದಿ ವರ್ಗದ ಸಹಿತವಾಗಿ ಮಂಜೂರು ಮಾಡಬೇಕೆಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರಿಗೆ ತಾಲೂಕು ರಚನಾ ಹೋರಾಟ ಸಮೀತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ಬೆಂಗಳೂರಿನ ಗಾಂಧಿ ಭವನದಲ್ಲಿ ಸಚಿವರನ್ನು ಸಮೀತಿಯವರು ಭೇಟಿಯಾಗಿ ಮನವಿ ಸಲ್ಲಿಸಿದ ನಂತರ ಈಗಾಗಲೇ ಹೊಸ ತಾಲೂಕು ಕೇಂದ್ರಗಳಲ್ಲಿ ಎಲ್ಲಿ ನ್ಯಾಯಾಲಯಗಳು ಇಲ್ಲವೋ ಆ ತಾಲೂಕು ಕೇಂದ್ರಗಳಲ್ಲಿ ನ್ಯಾಯಾಲಯಗಳನ್ನು ತ್ವರಿತವಾಗಿ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂಬ ಪ್ರಸ್ತಾವಣೆಯು ಸರಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು ಆದಷ್ಟು ಬೇಗನೆ ಕೊಲ್ಹಾರ ಪಟ್ಟಣದಲ್ಲಿ ನ್ಯಾಯಾಲಯ ಕಾರ್ಯಾಲಯವನ್ನು ಪ್ರಾರಂಭಿಸಲಾಗುವದು ಎಂದು ಸಚಿವರು ಭರವಸೆಯನ್ನು ನೀಡಿದರು.ನ್ಯಾಯಾಲಯ ಕಚೇರಿಗಳು ಪ್ರಾರಂಭವಾಗದೇ ಹೊಸ ತಾಲೂಕಿನ ಜನತೆಯು ಮೂಲ ತಾಲೂಕು ಕೇಂದ್ರದ ನ್ಯಾಯಾಲಯಗಳಿಗೆ ತೆರಳಿ ತಮ್ಮ ವ್ಯಾಜ್ಯಗಳನ್ನು ದಾವಾಗಳನ್ನು ಬಗೆಹರಿಸಿಕೊಳ್ಳಲು ತೆರಳುತ್ತಿರುವದು ಇಲ್ಲಿಯವರೆಗೂ ನಡೆದುಕೊಂಡು ಬಂದಿದೆ. ಇದರಿಂದ ಸಾರ್ವಜನಿಕರಿಗೆ ಸಮಯದ ಹಾಗೂ ಆರ್ಥಿಕ ಹೊರೆಯಾಗುತ್ತಿದ್ದು ಜನರ ಬಳಿಗೆ ಆಡಳಿತ ತರಬೇಕೆಂಬ ಸದುದ್ದೇಶದಿಂದ ಸರಕಾರವು…
ವಿಜಯಪುರ: ನಗರದ ಸುರಸಿಂಗಾರ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯು ಭಾನುವಾರ ಸಂಜೆ ದಿನಾಂಕ : ೨೫.೨.೨೦೨೪ ರಂದು ಸಂಜೆ ೬.೩೦ಕ್ಕೆ ಕಂದಗಲ್ಲ ಶ್ರೀ ಹನುಮಂತ ರಾಯ ರಂಗಮಂದಿರದಲ್ಲಿ ದಿ. ಶ್ರೀ ಭೋಜನ ಬಿಳಗಿಯವರ ಸ್ಮರಣಾರ್ಥ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ದೆಹಲಿಯ ಪ್ರಸಿದ್ಧ ಹಿಂದುಸ್ಥಾನಿ ಗಾಯಕರಾದ ಪಂ. ಹರೀಶ ತಿವಾರಿಯವರು ಗಾಯನ ಪ್ರಸ್ತುತ ಪಡಿಸಲಿದ್ದಾರೆ ಪಂ. ಸಧಾಂಶು ಕುಲಕರ್ಣಿ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ ಮತ್ತು ಪಂ. ರವಿಕಿರಣ ನಾಕೋಡರವರು ತಬಲಾ ಸಾತ್ ನೀಡಲಿದ್ದಾರೆ.ಈ ಕಾರ್ಯಕ್ರಮ ಸಂಪೂರ್ಣ ಉಚಿತವಾಗಿದ್ದು ವಿಜಯಪುರದ ಎಲ್ಲ ಸಮಗೀತ ಆಸಕ್ತರು ಕಲಾ ರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸುರಸಿಂಗಾರ ಸಂಸ್ಥೆಯ ಕಾರ್ಯದರ್ಶಿ ಸಂಗಣ್ಣ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಮ್ಮಡ: ಗ್ರಾಮದಲ್ಲಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಯ ನಿಯಂತ್ರಣ ಕಛೇರಿಗೆ ಹಿರಿಯ ಅಧಿಕಾರಿಗಳು ಶುಕ್ರವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಲ್ಲಿನ ಜಿಎಲ್ಬಿಸಿ ಕಾಲುವೆಗೆ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ದೇಶಕ್ಕಾಗಿ ಹತ್ತು ದಿನಗಳ ಕಾಲ ನೀರು ಹರಿಸಲಾಗುತ್ತಿದೆ. ಅದರಲ್ಲಿ ಈಗಾಗಲೇ ಐದು ದಿನ ಮುಕ್ತಾಯಗೊಂಡಿದೆ. ಆದರೆ ಇದುವರೆಗೆ ಬೀಳಗಿ ಭಾಗದ ಬಹುತೇಕ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಗ್ರಾಮದ ನಿಯಂತ್ರಣ ಕಛೇರಿಗೆ ಖುದ್ದು ಭೇಟಿ ನೀಡಿ ರಾತ್ರಿ ೧೧-೩೦ ರ ವರೆಗೆ ಸ್ಥಳದಲ್ಲಿದ್ದು ಪರಿಶೀಲನೆ ನಡೆಸಲಾಗಿ ಮಧುರಖಂಡಿ ಭಾಗದ ಹಲವು ರೈತರು ಜಮಖಂಡಿ ಕಾಲುವೆಗೆ ಹೆಚ್ಚುವರಿ ನೀರು ಹರಿಸುವಂತೆ ಸ್ಥಳಿಯ ನಿಯಂತ್ರಕರಿಗೆ ಒತ್ತಡಹಾಕಿ ನೀರು ಹರಿಸುತ್ತಿದ್ದರು. ಹಾಗೂ ಮುಧೋಳ ಭಾಗದ ರೈತರು ಉಪ ಕಾಲುವೆಗಳ ಗೇಟ್ಗಳನ್ನು ಒಡೆದು ನೀರನ್ನು ತಮ್ಮ ಜಮೀನುಗಳಿಗೆ ಹರಿಸುತ್ತಿರುವುದರಿಂದ ಬೀಳಗಿ ಭಾಗಕ್ಕೆ ನೀರು ಪೂರೈಕೆಯಾಗುತ್ತಿಲ್ಲ ಎಂದು ಮುಧೋಳ ಪ್ರಭಾರಿ ಕಾರ್ಯ ನಿರ್ವಾಹಕ ಅಭಿಯಂತರ ಎಚ್.ಆರ್.…
ವಿಜಯಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ- ವಿಜಯಪುರ ಹಾಗೂ ಕೆಎಸ್ಆರ್ಟಿಸಿ ಸ್ಟಾಫ್& ವರ್ಕರ್ಸ್ ಯೂನಿಯನ್ (ಎ.ಐ.ಟಿ.ಯು.ಸಿ) ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡು ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ, ಕಲಬುರಗಿ ಇವರಿಗೆ ಸಾರಿಗೆ ನೌಕರ ಬೇಡಿಕೆಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಸ್ಟಾಫ್& ವರ್ಕರ್ಸ್ ಯೂನಿಯನ್ (ಎ.ಐ.ಟಿ.ಯು.ಸಿ) ಪ್ರಧಾನ ಕಾರ್ಯದರ್ಶಿ ಐ.ಐ.ಮುಶ್ರೀಫ್ ರವರು ಮಾತನಾಡಿ, ತಮ್ಮೆಲ್ಲ ಬೇಡಿಕೆಗಳ ಕುರಿತು ವಿವರಿಸಿದರಲ್ಲದೆ,ನಾಲ್ಕೂ ಸಾರಿಗೆ ನಿಗಮಗಳಲ್ಲಿ ಸಿಬ್ಬಂಧಿಗಳ ನೇಮಕಾತಿಯನ್ನು ಬೇಗ ಮುಗಿಸಿ, ಎಲ್ಲಾ ನಿಗಮಗಳಲ್ಲೂ ನೌಕರರ ಮುಂಬಡ್ತಿಗೆ ಕ್ರಮ ತೆಗೆದುಕೊಳ್ಳಬೇಕು. ಶಕ್ತಿ ಯೋಜನೆಯಿಂದ ಚಾಲಕ ನಿರ್ವಾಹಕರಿಗೆ ಆಗುತ್ತಿರುವ ಶಿಕ್ಷೆ ಮತ್ತು ಕಿರುಕುಳಗಳ ಬಗ್ಗೆ ಅಲಾಹಿತ ಟಿಪ್ಪಣಿ ಕೊಡುತ್ತಿದ್ದೇವೆ. ಅದನ್ನು ಜಂಟಿ ಕ್ರಿಯಾ ಸಮಿತಿ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸತಕ್ಕದ್ದು.ಮೇಲ್ಕಂಡ ಬೇಡಿಕೆಗಳನ್ನು ಜಂಟಿ ಕ್ರಿಯಾ ಸಮಿತಿ ಬದಲಿಸುವ, ಮಾರ್ಪಡಿಸುವ ಅಥವಾ ಹಿಂಪಡೆಯುವ…
ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಬಸವೇಶ್ವರ ವೃತ್ತದ ಬಳಿ ಓಸಿ ಮಟಕಾ ಜೂಜಾಟ ಆಡುತ್ತಿದ್ದವನನ್ನು ಬಂಧಿಸಿ ಪಿಎಸ್ಐ ಸಂಜೀವ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.ಕಾಶಿನಾಥ ಬಡಿಗೇರ ಬಂಧಿತ ಆರೋಪಿ. ಓಸಿ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ ಜೊತೆಗೆ ಕೆಲವಷ್ಟು ಹಣವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ಚಡಚಣ: ಈ ಸಲ ಮುಂಗಾರು ಹಿಂಗಾರು ಮಳೆಗಳು ಸಂಪೂರ್ಣ ರೈತರು ಎಚ್ಚರ. ರೈತರಿಗೆ ಸುಕಾಲ, ಸಂತೋಷವೋ ಸಂತೋಷ. ಎಂದು ಮುಂತಾಗಿ ಘೂಳೇಶ್ವರರಿಂದ ನುಡಿಮುತ್ತುಗಳು ಜರುಗಿದವು. ಸಮೀಪದ ಉಮರಜ ಗ್ರಾಮದ ರೇವಣಸಿದ್ಧೇಶ್ವರ ಜಾತ್ರೆಯ ನಿಮಿತ್ಯ ದಿ. ೨೪ ರಂದು ಶನಿವಾರ ನಸುಕಿನ ೪ ರಿಂದ ೫ ಗಂಟೆಯವರೆಗೆ ರುದ್ರಾವತಾರಿ ಘೂಳೇಶ್ವರ ಮಹಾರಾಜರು ನುಡಿಮುತ್ತುಗಳು ಹೇಳಿದರು, ಇದನ್ನು ಕೇಳುತ್ತಲೆ ನೇರೆದ ಭಕ್ತಾಧಿಗಳು ಸಂತಸ ಚಪ್ಪಾಳೆ ಹೊಡೆದು ಆನಂದ ಪಟ್ಟರು.ಶುಕ್ರವಾರ ಮುಂಜಾನೆ ನಸುಕಿನಲ್ಲಿ ವೇದಮೂರ್ತಿ ನೂರಂದಯ್ಯ ಸ್ವಾಮಿಗಳವರಿಂದ ದೇವರಿಗೆ ಮಹಾ ರುದ್ರಾಭಿಷೇಕ, ಮಹಾಪೂಜೆ ಜರುಗಿತು. ನಂತರ ಭಾವಿಕ ಭಕ್ತರಿಂದ ದೀರ್ಘದಂಡ ನಮಸ್ಕಾರಗಳು, ದೇವರಿಗೆ ಹರಕೆಗಳನ್ನು ಮುಟ್ಟಿಸಿ ಧನ್ಯರಾದರು.ರಾತ್ರಿ ೧೨:೩೦ ಗಂಟೆಗೆ ಗ್ರಾಮದಿಂದ ವಿವಿಧ ವಾದ್ಯ ವೈಭವಗಳೊಂದಿಗೆ ಮದ್ದು ಸುಡುವುದರೊಂದಿಗೆ ಪಲ್ಲಕ್ಕಿ, ನಂದಿ ಧ್ವಜ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ತಲುಪಿತು ನಂತರ ನುಡಿಮುತ್ತುಗಳು ಜರುಗಿದವು. ಇದನ್ನು ಆಲಿಸಲು ಕರ್ನಾಟಕ ಸೇರಿದಂತೆ ನೆರೆಯ ಮಹಾರಾಷ್ಟçದಿಂದ ಸುಮಾರು ೩೦ ರಿಂದ ೪೦ ಸಾವಿರ ಭಕ್ತಾಧಿಗಳು ಶಾಂತ ರೀತಿಯಿಂದ ಆಲಿಸಿದರು.
ಚಡಚಣ: ಗ್ರಾಮೀಣ ಭಾಗದ ಜಾತ್ರೆ ಸಮಾರಂಭಗಳಲ್ಲಿ ಕುಸ್ತಿ ಕಲೆಗಳು ಇನ್ನೂ ಜರಗುತ್ತೀವೆ, ಇತ್ತಿತ್ತಲಾಗಿ ಇದು ನಶಿಸಿ ಹೋಗುತ್ತಿದ್ದು ಇದರ ಉಳಿವಿಗಾಗಿ ಯುವಕರು ಮುಂದಾಗಬೇಕು. ಶಕ್ತಿ ಪ್ರದರ್ಶನಕ್ಕಿಟ್ಟು ಆಡುವ ಕಲೆ ಕುಸ್ತಿ ಬಹಳ ಮಹತ್ವ ಪಡೆದಿದೆ ಎಂದು ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.ಸಮೀಪದ ಉಮರಜ ಗ್ರಾಮದ ರೇವಣಸಿದ್ಧೇಶ್ವರ ಜಾತ್ರೆಯಲ್ಲಿ ಹಮ್ಮಿಕೊಂಡ ಜಂಗಿನಿಕಾಲಿ ಕುಸ್ತಿಗಳಿಗೆ ಚಾಲನೆ ನೀಡಿ ಮಾತನಾಡಿದರು.ಭೀಮಾಶಂಕರ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಎಂ.ಆರ್.ಪಾಟೀಲ ಮಾತನಾಡಿ. ಗ್ರಾಮಗಳಿಗೆ ಗರಡಿ ಮನೆಗಳು ತೆರೆಯಬೇಕು ಮತ್ತು ಉತ್ತಮ ಮಾರ್ಗದರ್ಶನ ನೀಡುವ ಗುರು ದೊರೆಯಬೇಕು. ಅಂದಾಗ ನೀವು ರಾಜ್ಯ ರಾಷ್ಟç ಮಟ್ಟದಲ್ಲಿ ಪ್ರಸಿದ್ಧರಾಗಿ ಪ್ರಶಸ್ತಿಗಳನ್ನು ಪಡೆಯುವಿರಿ ಎಂದರು.ಭೈರವನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾದೇವ ಸಾಹುಕಾರ ಭೈರಗೊಂಡ ಮಾತನಾಡಿದರು.ಸುಮಾರೂ ನೂರಾರು ಕುಸ್ತಿ ಪಟುಗಳು ಬಾಗಿಯಾಗಿ ತಮ್ಮ ಶಕ್ತಿ ಪ್ರದರ್ಶಿಸಿದರು, ಪ್ರೇಕ್ಷಕರಿಂದ ಶಿಳ್ಳೆ ಚಪ್ಪಾಳೆಗಳು ಕುಸ್ತಿ ಪಟುಗಳಿಗೆ ಪ್ರೋತ್ಸಾಹ ನೀಡುತ್ತಿದ್ದವು.೫೧೦೦೦/- ಬಹುಮಾನದ ರಮ್ಜಾನ ಇಂಡಿ ಪೈಲ್ವಾನ ಹಾಗೂ ಮುಹೋಳದ ವಿಕ್ರಮ ಗಾಯಕವಾಡ ಇವರ ಜೋಡಿ ಕುಸ್ತಿಗಳು ಪ್ರೇಕ್ಷಕರಿಗೆ ಆನಂದ…
