Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಈ ಶಿಬಿರ ನಡೆಯಲಿದೆ.ಈ ಸಂದರ್ಭದಲ್ಲಿ ರಕ್ತ, ಮೂತ್ರ ತಪಾಸಣೆ, ಮೋನೊಫಿಲಾಮೆಂಟ್, ಬಯೋಥೀಸಿಯೋಮೀಟರ್, ಹ್ಯಾರಿಸ್ ಮ್ಯಾಟ್ ಪರೀಕ್ಷೆಗಳನ್ನು ಮಾಡಲಾಗುವುದು. ತಪಾಸಣೆ ಮತ್ತು ಚಿಕಿತ್ಸೆ ಅಗತ್ಯವಿರುವ ಮಧುಮೇಹಿಗಳು ಶಿಬಿರದ ಸದುಪಯೋಗವನ್ನು ಪಡೆಯಬೇಕು ಎಂದು ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹಾಗೂ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ ಮಾಡಿಸಿದ್ದಾರೆ.ಸರಕಾರಿ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು, ವೈದ್ಯರು ಸೇರಿದಂತೆ ನಾನಾ ಕ್ಷೇತ್ರಗಳ ಕ್ರೀಡಾಸಕ್ತರು ತಮ್ಮ ಕುಟುಂಬ ಸಮೇತ ನೋಂದಣಿ ಮಾಡಿಸುವ ಮೂಲಕ ಈ ಬಾರಿಯ ಓಟಕ್ಕೆ ಮೆರಗು ತರುತ್ತಿದ್ದಾರೆ.ಯಾದಗಿರಿ ಅಬಕಾರಿ ಇಲಾಖೆಯ ನಿರೀಕ್ಷಕ ಶ್ರೀಶೈಲ ಒಡೆಯರ 10 ಕಿ. ಮೀ., ಮತ್ತು ಅವರ ಪತ್ನಿ ಶ್ರೀದೇವಿ ಒಡೆಯರ, ಪುತ್ರ ಸಮರ್ಥ ಒಡೆಯರ ಹಾಗೂ ಸಿದ್ದು ಒಡೆಯರ ಎಲ್ಲರೂ 5 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ವಿಜಯಪುರ ಅಬಕಾರಿ ಇಲಾಖೆಯ ಮುಖ್ಯ ಪೇದೆ ಅಪ್ಪು ಭೈರಗೊಂಡ ಅಪ್ಪು ಭೈರಗೊಂಡ 21 ಕಿ. ಮೀ., ಅವರ ಪತ್ನಿ ಇಂದುಮತಿ ಭೈರಗೊಂಡ 10 ಕಿ. ಮೀ. ಮತ್ತು ಅವರ ಮಕ್ಕಳಾದ ಅಪೇಕ್ಷಾ ಭೈರಗೊಂಡ ಹಾಗೂ ಅಮಿತ ಭೈರಗೊಂಡ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಮಂಗಳವಾರ ಒನಕೆ ಓಬ್ಬವ್ವ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಒನಕೆ ಒಬ್ಬವ್ವ ಜಯಂತಿ ಆಚರಿಸಲಾಯಿತು.ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರು ಒನಕೆ ಓಬ್ಬವ್ವ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರ ರಾಣಿಚನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒನಕೆ ಒಬ್ಬವ್ವಳೂ ಒಬ್ಬರಾಗಿದ್ದಾರೆ. ಹೈದರಾಲಿಯು ಚಿತ್ರದುರ್ಗದ ಮೇಲೆ ಹಠಾತ್ತಾಗಿ ಆಕ್ರಮಣ ಮಾಡಿದಾಗ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿಯಾದ ಓಬ್ಬವ್ವಳು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು. ಒನಕೆಯಿಂದಲೆ ನೂರಾರು ಶತ್ರುಗಳನ್ನು ಕೊಂದು ಹಾಕುವ ಮೂಲಕ ಇತಿಹಾಸದ ವೀರವನಿತೆ ಎನಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ ಎಂದರು.ಸಂದರ್ಭದಲ್ಲಿ ಉಪತಹಸೀಲ್ದಾರ ಬಿ.ಆರ್.ಪೋಲೇಶಿ, ಶಿರಸ್ತೇದಾರ ಎ.ಎಚ್.ಬಳೂರಗಿ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಎಂ.ಎಂ.ದಪ್ಪೇದಾರ,ವಿವಿಧ ಇಲಾಖೆಯ ಸಿಬ್ಬಂದಿಗಳಾದ ವಿಲಾಸ ಜಾಡರ, ವಿರೇಶ ಗುಡ್ಲಮನಿ, ಭಾಗ್ಯಶ್ರೀ ಕಟ್ಟಿಮನಿ, ಹೃಷಿಕೇಶ ಇಂಗಳೆ, ಪ್ರಸನ್ನ ಕರಿಜಾಡರ, ಆರತಿ ತೆನಹಳ್ಳಿ, ಸುರೇಶ ಪಾಟೀಲ, ಕಾಂಚನಾ ಸಂದಿಮನಿ, ಅನ್ನಪೂರ್ಣ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಶಿಕ್ಷಣವು ವ್ಯಕ್ತಿಯ ಬದುಕಿನಲ್ಲಿ ಬೆಳಕು ತರಬಲ್ಲ ಶಕ್ತಿ. ಅದು ಸಮಾಜದ ಪ್ರಗತಿಗೆ ಮೂಲಾಧಾರವಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪಿಯು ವಿಭಾಗದ ಆಡಳಿತಾಧಿಕಾರಿ ಪ್ರೊ. ಅಶೋಕ ಲಿಂಮಕರ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನದಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ದಿನ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಮಹತ್ವವನ್ನು ಉಲ್ಲೇಖಿಸಿದ ಅವರು, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಶಿಕ್ಷಣ ಕ್ಷೇತ್ರದ ಕೊಡುಗೆಗಳನ್ನು ಸ್ಮರಿಸಿದರು. ಯುವ ಪೀಳಿಗೆಯು ಅವರ ಆದರ್ಶಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಎ.ವಿ ಸೂರ್ಯವಂಶಿ ಮಾತನಾಡಿದರು. ಮಹಾವಿದ್ಯಾಲಯದ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ೨೦೨೫ರ ಡಿಸೆಂಬರ ೨೮ ರವಿವಾರ ದಿವಸ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದಡಿಯಲ್ಲಿ “ಲಿಂಗಾಯತ ಸಮುದಾಯ ಭವನ “ದಲ್ಲಿ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸಮುದಾಯ ದ ಎಲ್ಲ ಒಳಪಂಗಡಗಳಿಗೆ ಭಾಗವಹಿಸುವ ಮುಕ್ತ ಅವಕಾಶವಿರುತ್ತದೆ. ಭಾಗವಹಿಸುವವರು ಮುಂಚಿತವಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸಮಾರಂಭವು ಮುಂ.೧೧ ಗಂಟೆಗೆ ಪ್ರಾರಂಭಗೊಳ್ಳುತ್ತದೆ.ಹೆಚ್ಚಿನ ವಿವರಗಳಿಗಾಗಿ ಪದಾಧಿಕಾರಿಗಳ ಮೋ.ನಂಬರುಗಳೊಡನೆ ಸಂಪರ್ಕಿಸಿರಿ. ೯೯೭೨೮೯೩೯೯೮,೯೪೪೮೨೭೯೨೫೦,೯೯೦೦೫೮೨೫೧೭ ಮತ್ತು ೭೨೫೯೨೨೨೮೮೭ವಿ.ಸಿ.ನಾಗಠಾಣಅಧ್ಯಕ್ಷರು, ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ,ವಿಜಯಪುರಮೋ::-೯೯೭೨೮೯೩೯೯೮

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಸಾಹಿತ್ಯದಲ್ಲಿ ಉತ್ತಮ ಬರಹಗಾರರಿದ್ದಾರೆ. ಪ್ರೌಢ ಸಾಹಿತ್ಯದಂತೆ ಮಕ್ಕಳ ಸಾಹಿತ್ಯವೂ ವಿಮರ್ಶೆಗೆ ಒಳಗಾಗಬೇಕು. ಹಿರಿಯ ಸಾಹಿತಿಗಳು ಮಕ್ಕಳ ಸಾಹಿತ್ಯವನ್ನು ನಿರ್ಲಕ್ಷಿಸುತ್ತ ಬಂದಿರುವುದರಿಂದ ಉತ್ತಮ ಮಕ್ಕಳ ಸಾಹಿತ್ಯ ಬರಹಗಾರರಿಗೆ ಅನ್ಯಾಯವಾಗಿದೆ ಎಂದು ಮಕ್ಕಳ ಸಾಹಿತಿ ಜಂಬುನಾಥ ಕಂಚ್ಯಾಣಿ ಅವರು ಅಭಿಪ್ರಾಯ ಪಟ್ಟರು.ಅವರು ವಿಜಯಪುರದ ರಾಜಕುಮಾರ ಬಡಾವಣೆಯಲ್ಲಿಯ ಅನ್ನಪೂರ್ಣಾ ನರ್ಸಿಂಗ ಹೋಮದಲ್ಲಿ ಲಿಂ.ಅನ್ನಪೂರ್ಣಾ ಕಾಗಲಕರ ಸ್ಮರಣಾರ್ಥ ಹಮ್ಮಿಕೊಂಡಿದ್ದ ದತ್ತಿ ಸಮಾರಂಭವೊಂದರಲ್ಲಿ ಮಾತನಾಡಿದರು.ಮಕ್ಕಳ ಸಾಹಿತಿಗಳಾದ ಶಾಂತಾ ಜೋಗೇನವರ ಅವರು ರಚಿಸಿದ ನಾಟಕಗಳನ್ನು ಎಸ್. ಎಂ.ಹದಿಮೂರ, ಅವರ ಕಾವ್ಯ ಕೃತಿಗಳನ್ನು ಕುರಿತು ಕೆ.ಸುನಂದಾ ಮತ್ತು ಶರಣರ ಚರಿತ್ರೆಗಳ ಕುರಿತು ಶಿವುಕುಮಾರ ಶಿವಸಿಂಪಿಯವರು ಸಮಗ್ರವಾಗಿ ಗ್ರಂಥಾವಲೋಕನ ಮಾಡಿದರು.ನಂತರ ನಡೆದ ಮಕ್ಕಳ ಕವಿಗೋಷ್ಠಿಯಲ್ಲಿ ಶಿವಾನಂದ ಹದಿಮೂರ, ಪಂಡಿತರಾವ ಪಾಟೀಲ, ಜಯಶ್ರೀ ಬಿರಾದಾರ, ವಿಜಯಕುಮಾರ ಬಂಗಾರಗುಂಡ, ಡಾ.ಸುರೇಶ ಕಾಗಲಕರ, ಕೆ.ಎಸ್.ಬಾಗೇವಾಡಿ, ಸುನಂದಾ ಕೋರಿ ಕವನ ವಾಚನಮಾಡಿ ಶ್ರೋತೃಗಳ ಗಮನ ಸೆಳೆದರು.ಹಿರಿಯ ಸಾಹಿತಿಗಳಾದ ಬಿ.ಆರ್.ನಾಡಗೌಡ, ಡಾ.ಸುರೇಶ ಕಾಗಲಕರ, ದತ್ತಿ ದಾಸೋಹಿಗಳಾದ ಶಾಂತಾ ಜೋಗೇನವರ ಮತ್ತು ಎಂ.ಆರ್.ಕಾಗಲಕರ ಅವರನ್ನು ಸನ್ಮಾನಿಸಲಾಯಿತು.…

Read More

ನ.೧೯ ರಂದು ನಡೆವ ಅಖಿಲ ಕರ್ನಾಟಕ ಕನ್ನಡ ಪುಸ್ತಕ ಪರಿಷತ್ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನವಂಬರ ೧೯ ರಂದು ವಿಜಯಪುರದಲ್ಲಿ ನಡೆಯುವ ೨೭ನೇ ಅಖಿಲ ಕರ್ನಾಟಕ ಕನ್ನಡ ಪುಸ್ತಕ ಪರಿಷತ್ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕ, ಶೈಕ್ಷಣಿಕ ಚಿಂತಕ, ಶರಣ ಸಾಹಿತಿ ಸಿದ್ದಲಿಂಗ ಮನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.ಪ್ರಗತಿ ಹೈಸ್ಕೂಲ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.ಪರಿಷತ್ತಿನ ಅಧ್ಯಕ್ಷರಾದ ಪ.ಗು. ಸಿದ್ಧಾಪೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಚಾಲಕರಾದ ಡಾ. ಜಿ.ಎಸ್. ಭೂಸಗೊಂಡ ಸಿದ್ದಲಿಂಗ ಮನಹಳ್ಳಿ ಅವರ ಹೆಸರನ್ನು ಅಂತಿಮಗೊಳಿಸಿದರು.ಆಯ್ಕೆ ಸಮಯದಲ್ಲಿ ಪರಿಷತ್ತಿನ ಪದಾಧಿಕಾರಿಗಳಾದ ರಾವಸಾಬ ಬಿರಾದಾರ, ಲಾಲಸಾಬ ಮೇಲಿನಮನಿ, ಕೆ.ಎಸ್. ಬಾಗೇವಾಡಿ, ಸಿದ್ದರಾಮ ಬಿರಾದಾರ, ಅಡವಿಸ್ವಾಮಿ ಕೊಳಮಲಿ, ಡಿ. ಜೋಸೆಫ್, ಉಮಾಪತಿ ಡಂಗಿ, ಮುರುಗೇಶ ಸಂಗಮ ಮುಂತಾದವರು ಹಾಜರಿದ್ದರು.ಸ್ವಾಗತ ಸಮಿತಿ ಸದಸ್ಯರುಗಳಾದ ಪ್ರೇಮಾನಂದ ಬಿರಾದಾರ, ಎಂ.ಎಸ್. ಕಳ್ಳಿಮನಿ, ಚಂದ್ರು ಚೌಧರಿ, ಬಿ.ಎಸ್. ನರಗುಂದ, ಚಂದ್ರಶೇಖರ ಕುಲಕರ್ಣಿ, ಮುಸ್ತುಫಾ ದುಂಡಸಿ, ಬಿ.ಎಂ. ಬಿರಾದಾರ, ವೇಣುಗೋಪಾಲ ಜೋಶಿ,…

Read More

ವಿಜಯಪುರದ ಬಂಜಾರಾ ಶಿಕ್ಷಣ ಸಂಸ್ಥೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಪೂರಕವಾಗಿದೆ. ಓದಿನ ಜತೆಗೆ ಮಕ್ಕಳ ಪ್ರತಿಭೆಗಳ ಅನಾವರಣವೂ ಆಗಬೇಕು. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡಲು, ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಮಹಾನಗರ ಪಾಲಿಕೆಯ ಪೌರ ಎಂ.ಎಸ್.ಕರಡಿ ಹೇಳಿದರು.ನಗರದ ಬಂಜಾರಾ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ವಿಜಯಪುರ ನಗರ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ೨೦೨೫-೨೬ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು.ಶಾಲೆಗಳಲ್ಲಿ ವಿದ್ಯೆ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದರೂ ಕ್ರೀಡೆಗಳು ಮಕ್ಕಳ ದೈಹಿಕ ಬೆಳವಣಿಗೆಗೆ ನೆರವಾದರೆ, ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ನೆರವಾಗುತ್ತವೆ. ಈ ಮೂಲಕ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ.…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಇತಿಹಾಸ, ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮ ಭಜನೆ ಪುರಾಣ ಹಾಗೂ ಪ್ರವಚನ ಬಗೆಗಿನ ಸಮಗ್ರ ಮಾಹಿತಿ ಮಠಗಳ ಕೊಡುಗೆಯಾಗಿದೆ ಎಂದು ಶಿರಶ್ಯಾಡದ ಅಭಿನವ ಮುರಗೇಂದ್ರ ಶಿವಾಚಾರ್ಯ ಶ್ರೀಗಳು ಹೇಳಿದರು.ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಂತೇಶ್ವರ ಜಾತ್ರೆಯ ನಿಮಿತ್ಯ ಹಮ್ಮಿಕೊಂಡ ಲಚ್ಯಾಣ ಪವಾಡ ಪುರುಷ ಸಿದ್ದಲಿಂಗ ಮಹಾರಾಜರ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.ಜೈನಾಪುರ ರೇಣುಕಾಚಾರ್ಯ ಶಿವಾಚಾರ್ಯರರು ಮಾತನಾಡಿ ಮಠ ಮಾನ್ಯಗಳಿಂದಲೇ ತಾಲೂಕು ಪ್ರಸಿದ್ದಿ ಪಡೆದಿದೆ. ಹಲವಾರು ಮಠಗಳು ಅನ್ನಪ್ರಸಾದ ಉಚಿತ ಶಿಕ್ಷಣ ಸಂಸ್ಕಾರ ನೀಡುತ್ತಿವೆ. ಪ್ರವಚನದಿಂದ ಜೀವನದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.ದೇವಸ್ಥಾನ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ ಧಾರ್ಮಿಕತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಇಂದಿನ ಯುವ ಪೀಳೀಗೆ ಮುಂದಾಗಬೇಕಿದೆ. ಯಾವದೇ ಕೆಲಸವಿರಲಿ ಕೀಳಾಗಿ ನೋಡದೇ ಕಾರ್ಯಗಳನ್ನು ಮಾಡಿದಾಗ ನೆಮ್ಮದಿ ಬದುಕು ಸಾಧ್ಯ ಎಂದರು. ಡಿ ೧ ರಂದು ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೇಳಿಕೊಂಡರು.ಪ್ರವಚನಕಾರ ವೇದ ಮೂರ್ತಿ ಮಡಿವಾಳಯ್ಯ ಶಾಸ್ತಿçÃಗಳು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೇಸ್ ಸಮೀತಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಮಡ್ಡೀಮನಿ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಿಗೆ ಪತ್ರ ಬರೆದಿದ್ದಾರೆ.೧೫ ನೇ ಹಣಕಾಸು ಯೋಜನೆ ಅಡಿ ೪ ಕಾಮಗಾರಿಗಳ ಹಣವನ್ನು ದುರುಪಯೋಗ ಮಾಡಿದ್ದು ಕಂಡು ಬಂದಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ತಾ.ಪಂ ಇಓ ಅವರಿಗೆ ಪತ್ರ ಬರೆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ೧೫ ಹಣಕಾಸು ಹಣ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಡ್ಡೀಮನಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Read More