Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರ.ಕಾರ್ಯದರ್ಶಿ ಅರವಿಂದ ಕುಲಕರ್ಣಿ ವಾಗ್ದಾಳಿ ಬಸವನಬಾಗೇವಾಡಿ: ಜಿಲ್ಲೆಯ ಎಲ್ಲ ಕೆರೆಗಳನ್ನು ಭರ್ತಿ ಮಾಡಿ ಬೇಸಿಗೆ ಸಂದರ್ಭದಲ್ಲಿ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಅನುಕೂಲತೆ ಕಲ್ಪಿಸಲು ನಾನೇ ಹೇಳಿ ನೀರು ಬಿಡಿಸಿದ್ದೇನೆ ಎಂದು ಪತ್ರಿಕಾ ಹೇಳಿಕೆ ನೀಡಿರುವ ದೇವರ ಹಿಪ್ಪರಗಿ ಶಾಸಕರ ಹೇಳಿಕೆ ಹಾಸ್ಯಾಸ್ಪದದಿಂದ ಕೂಡಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.ತಾಲೂಕಿನ ಹೂವಿನ ಹಿಪ್ಪರಗಿಯ ಪತ್ರಿವನ ಮಠದಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳ ಭರ್ತಿ ಮಾಡಬೇಕೆಂದು ಆಲಮಟ್ಟಿಯಲ್ಲಿ ಅಖಂಡ ಕರ್ನಾಟಕದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಂತರ ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಬಳಿ ಹೋಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಗತ್ಯತೆ ಮತ್ತು ಕೆರೆಗಳಲ್ಲಿರುವ ನೀರಿನ ಪ್ರಮಾಣದ ಕುರಿತು ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟನ್ನವರ ಇವರಿಗೆ ಮನವರಿಕೆ…
ಬಸವನಬಾಗೇವಾಡಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟದಿಂದ ವಿಕಲಚೇತನರ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ವಿಕಲಚೇತನರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರ ಮೂಲಕ ಮನವಿ ಸಲ್ಲಿಸಿದರು.ಪಟ್ಟಣದ ಬಸವೇಶ್ವರ ದೇವಸ್ಥಾನ ಮುಂಭಾಗ ವಿವಿಧೆಡೆಗಳಿಂದ ಆಗಮಿಸಿದ್ದ ವಿಕಲಚೇತನರು ಜಮಾಯಿಸಿ ಮೆರವಣಿಗೆ ಮೂಲಕ ಮುದ್ದೇಬಿಹಾಳ ರಸ್ತೆಯಲ್ಲಿರುವ ಮಿನಿವಿಧಾನಸೌಧದಲ್ಲಿರುವ ತಹಸೀಲ್ದಾರ ಕಚೇರಿಗೆ ತೆರಳಿ ಕೆಲ ಹೊತ್ತು ಪ್ರತಿಭಟನೆ ಮಾಡಿದರು.ಈ ಸಂದರ್ಭದಲ್ಲಿ ಅಂಗವಿಕಲರ ಒಕ್ಕೂಟದ ಮಲ್ಲಿಕಾರ್ಜುನ ಬಿರಾದಾರ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನಮ್ಮ ವಿಕಲಚೇತನ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ನಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದರು.ಪ್ರತಿ ತಿಂಗಳು ವಿಕಲಚೇತನರಿಗೆ ರೂ.೪ ಸಾವಿರದಿಂದ ೫ ಸಾವಿರ ಮಾಶಾಸನ ಏಕರೂಪದಲ್ಲಿ ಹೆಚ್ಚಳ ಮಾಡಬೇಕು. ವಿಕಲಚೇತನರಿಗೆ ರಾಜ್ಯಾದಂತ ಉಚಿತ ಬಸ್ ಪಾಸ್ ನೀಡಬೇಕು. ಅಂಗವಿಕಲರ ಬ್ಯಾಕ್ಲಾಗ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಬೇಕು. ಅಂಗವಿಕಲರಿಗೆ ವಿಕಲಚೇತನ…
ಸಿಂದಗಿ: ನಗರದ ಮಂದಾರ ಪಬ್ಲಿಕ್ ಸ್ಕೂಲ್ ಹಾಗೂ ನ್ಯಾಶನಲ್ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಫೆ.೨೪ ಶನಿವಾರದಂದು ಸಾಯಂಕಾಲ ೪ಗಂಟೆಗೆ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮಂದಾರ ಸಿರಿ ಉತ್ಸವ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಸಮಾರಂಭ ಜರುಗುವುದು ಎಂದು ಕಾರ್ಯಕ್ರಮದ ಸಂಚಾಲಕ ಅಭಿಷೇಕ ಚೌಧರಿ ತಿಳಿಸಿದ್ದಾರೆ.ಈ ಕಾರ್ಯಕ್ರಮದಲ್ಲಿ ಸಿಂದಗಿ ಆದಿಶೇಷ ಮಠದ ನಾಗರತ್ನ ವೀರರಾಜೇಂದ್ರ ಸ್ವಾಮಿಜಿ ಸಾನಿಧ್ಯ ವಹಿಸುವರು. ಆದರ್ಶ ವಿದ್ಯಾಲಯದ ಪ್ರಾಚಾರ್ಯ ಎಸ್.ಕೆ.ಬಿರಾದಾರ ಸಭೆ ಅಧ್ಯಕ್ಷತೆ ವಹಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಕಾರ್ಯಕ್ರಮ ಉದ್ಘಾಟಿಸುವರು. ಅಲ್ಪಸಂಖ್ಯಾತ ಮುರಾರ್ಜಿ ವಸ್ತಿ ಶಾಲೆಯ ಪ್ರಾಚಾರ್ಯ ಸಿದ್ದಪ್ಪ ಕಾರಿಮುಂಗಿ, ಕಾವ್ಯ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಚಂದ್ರಶೇಖರ ನಾಗರಬೆಟ್ಟ, ದೈಹಿಕ ಶಿಕ್ಷಕ ಸಂಗನಗೌಡ ಹಚಡದ, ಎಸ್ಪಿ ಡೆವಲಪರ್ಸ್ನ ಸಲೀಂ ಮರ್ತೂರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಚ್.ಬಿರಾದಾರ ಸಿಆರ್ಪಿ ಸಿ.ಎನ್.ಸಿರಕನಳ್ಳಿ. ಎನ್ಪಿಎಸ್ ಅಧ್ಯಕ್ಷ ಶಿವಕುಮಾರ ಕಲ್ಲೂರ ಅತಿಥಿಗಳಾಗಿ ಭಾಗವಹಿಸುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಂದಗಿ: ಜಿಲ್ಲೆಯ ಐದು ಶಾಲೆಗಳಲ್ಲಿ ಗಣಿಹಾರ ಆಯ್ಕೆ ಮಾಡಿಕೊಂಡಿದ್ದು ಸಂತಸ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನ ಶಾಲೆ ಮಕ್ಕಳಿಗೆ ಬಹು ಪೌಷ್ಟಿಕಾಂಶವುಳ್ಳ ರಾಗಿ ಮಾಲ್ಟ ಹೆಲ್ತ್ ಮಿಕ್ಸ್ ವಿತರಿಸುವ ಸರ್ಕಾರದ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆಯ್.ಎಸ್.ಟಕ್ಕೆ ಹೇಳಿದರು.ತಾಲೂಕಿನ ಗಣಿಹಾರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಕೆಎಂಎಫ್ ಸಹಭಾಗಿತ್ವದಲ್ಲಿ ಸರಕಾರದ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಹಮ್ಮಿಕೊಂಡ ರಾಗಿ ಹೆಲ್ತ್ ಮಿಕ್ಸ್ ವಿತರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಈಗಾಗಲೇ ವಾರಕ್ಕೆ ಮೂರು ದಿನ ಮೊಟ್ಟೆ, ಬಾಳೆಹಣ್ಣು ಕೊಡುವ ಕಾರ್ಯಕ್ರಮ, ಹಾಲು ವಿತರಿಸುವ ಕಾರ್ಯಕ್ರಮ ನಿರಂತರವಾಗಿ ನಡೆದಿದ್ದು, ಈಗ ಅತ್ಯಂತ ಪೌಷ್ಟಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಇಂದಿನಿಂದ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು .ಇದೇ ಸಂದರ್ಭದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಪ್ರಭಾರಿ ಸಹನಿರ್ದೇಶಕ ಎಂ.ಬಿ.ಯಡ್ರಾಮಿ ಮಾತನಾಡಿ,…
ಸಿಂದಗಿ: ಕಾರ್ಯಕ್ರಮದ ಸ್ವರೂಪ ಮತ್ತು ತಾಲೂಕಿನಾದ್ಯಂತ ಕನ್ನಡಾಭಿಮಾನಿಗಳನ್ನು ಸಮ್ಮೇಳನಕ್ಕೆ ಆಹ್ವಾನಿಸುವ ಉದ್ದೇಶದಿಂದ ರಥದೊಂದಿಗೆ ಪ್ರಚಾರಕರನ್ನು ಕಳುಹಿಸಲಾಗುತ್ತಿದೆ. ತಾಲೂಕಿನ ವಿವಿಧ ಹೋಬಳಿ ಭಾಗಗಳಲ್ಲಿ ರಥವು ಸಂಚರಿಸಲಿದೆ ಎಂದು ಕಸಾಪ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ ಹೇಳಿದರು.ತಾಲೂಕಿನಾದ್ಯಂತ ಇರುವ ಪರಿಷತ್ತಿನ ೮೦೦ಕ್ಕೂ ಅಧಿಕ ಸದಸ್ಯರುಗಳಿಗೆ ಆಹ್ವಾನ ಪತ್ರಿಕೆ ಅಂಚೆ ಮೂಲಕ ಕಳುಹಿಸಿಕೊಡಲಾದ್ದು, ಸಮ್ಮೇಳನಾಧ್ಯಕ್ಷರಿಗೆ, ಗಣ್ಯರಿಗೆ ತಲುಪಿಸಿ ಅಧಿಕೃತ ಆಹ್ವಾನ ನೀಡಲಾಗುತ್ತಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ ತಿಳಿಸಿದರು.ಇದೇ ಸಂದರ್ಭದಲ್ಲಿ ಅಶೋಕ ಗಾಯಕವಾಡ, ಸಿದ್ದಲಿಂಗ ಕಿಣಗಿ, ಪಂಡಿತ ಯಂಪೂರೆ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಇದ್ದರು.
ಕಲಕೇರಿ: ಸಂತರು, ಮಹಾಂತರ ತತ್ವ ವಚನಗಳನ್ನು ತಿಳಿದುಕೊಳ್ಳುವುದರ ಜೊತೆಗೆ ನಿರಂತರ ಕಾಯಕ ಯೋಗಿಗಳಾಗಬೇಕು. ನಕಾರಾತ್ಮಕ ಪರಿವರ್ತನೆಯ ಬದಲು ಇಂತಹ ಮಹಾತ್ಮರ ಆಚರಣೆಯ ಮೂಲಕ ಸಕಾರಾತ್ಮಕ ಪರಿವರ್ತನೆಯಾಗಬೇಕು ಎಂದು ಕಲಕೇರಿ ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶೀವಾಚಾರ್ಯರು ಹೇಳಿದರು.ಸ್ಥಳಿಯ ಗ್ರಾಮದ ಶ್ರೀಗರು ವೀರಘಂಟೈ ಮಡಿವಾಳೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರ ಸಂಜೆ ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ ೮೫೨ ನೇ ಜಯಂತ್ಯೋತ್ಸವ ಹಾಗೂ ಶ್ರೀ ಭವಾನಿ ಕಂಪ್ಯೂಟರ್ ತರಬೇತಿ ಸಂಸ್ಥೆಯ ೨೦ ನೇ ವಾರ್ಷಿಕೋತ್ಸವ ಸಮಾರಂಭ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕರುನಾಡ ರತ್ನ ಪ್ರಶಸ್ತಿ ಪ್ರಧಾನ ಹಾಗೂ ಬಾಲ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ದಲಿತ ವಿಧ್ಯಾರ್ಥಿ ಪರಿಷತ್ತಿನ ರಾಜ್ಯಾದ್ಯಕ್ಷ ಶ್ರೀನಾಥ ಪೂಜಾರಿ, ಎಐಸಿಸಿ ಸದಸ್ಯೆ ಶ್ರೀದೇವಿ ಉತ್ಲಾಸರ ಸಿಧ್ರಾಮೇಶ್ವರರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡಿ, ೧೨ ಶತಮಾನದ ಶ್ರೇಷ್ಠ ವಚನಕಾರರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮೇಶ್ವರರು ಕಪಿಲ ಸಿದ್ಧರಾಮೇಶ್ವರ ಎಂಬ ಅಂಕಿತನಾಮದಿಂದ ಅನೇಕ ವಚನಗಳನ್ನು ಬರೆದು ಕಾಯಕವೇ ಕೈಲಾಸವೆಂಬ ಸಿದ್ಧಾಂತವನ್ನು…
ವಿಜಯಪುರ: ಅಂದಾಜು ೪೦ ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಯಾದ ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ರೇಲ್ವೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಅಪರಿಚಿತ ವ್ಯಕ್ತಿಯು ಅಂದಾಜು ೪೦ ರಿಂದ ೪೫ ವರ್ಷ ವಯಸ್ಸಿನವಾಗಿದ್ದು, ೫.೫ ಅಡಿ ಎತ್ತರ, ಗೋದಿಗೆಂಪು ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲುಮುಖ, ನೇರವಾಗಿ ಮೂಗು, ತಲೆಯಲ್ಲಿ ೧ ಇಂಚು ಬಿಳಿ-ಕಪ್ಪು ಬಣ್ಣದ ಮಿಶ್ರಿತ ಕೂದಲು, ಕುರುಚಲ ದಾಡಿ, ಮೀಸೆವುಳ್ಳವನಾಗಿದ್ದು, ಬಲಗೈ ಭುಜದ ಹತ್ತಿರ ತೋಳಿನ ಮೇಲೆ ರೌಂಡಾಕಾರದ ಚಕ್ರದ ಮದ್ಯ ಓಂ ಆಕಾರದ ಅಚ್ಛೆ ಗುರುತು, ಬಲಗೈ ರಟ್ಟೆಯ ಮೇಲೆ ತ್ರಿಶೂಲ ಮತ್ತು ಢಮರುಘ ಚಿತ್ರದ ಅಚ್ಚೆ ಗುರುತು ಹಾಕಿಕೊಂಡಿದ್ದಾನೆ. ಕಿವಿಯ ಅಲೆಗಳು ತೂತು ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ತುಂಬು ತೋಳಿನ ರೆಡಿಮೆಡ್ ಅಂಗಿ, ಬಿಳಿ ಬಣ್ಣದ ಚಾಕಲೇಟ್ ದಡಿಯ ಲುಂಗಿ-ಪಂಚೆ, ಕೊರಳಲ್ಲಿ ಕಪ್ಪು ದಾರ ಧರಿಸಿದ್ದು, ಸೊಂಟದಲ್ಲಿ ಕೇಸರಿ ಬಣ್ಣದ ಉಡದಾರ, ಬಲಗಾಲಿನಲ್ಲಿ ಕಪ್ಪು ಬಣ್ಣದ…
ವಿಜಯಪುರ: ಅಂದಾಜು ೪೦ ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಯಾದ ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ರೇಲ್ವೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಅಪರಿಚಿತ ವ್ಯಕ್ತಿಯು ಅಂದಾಜು ೪೦ ರಿಂದ ೪೫ ವರ್ಷ ವಯಸ್ಸಿನವಾಗಿದ್ದು, ೫.೫ ಅಡಿ ಎತ್ತರ, ಗೋದಿಗೆಂಪು ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲುಮುಖ, ನೇರವಾಗಿ ಮೂಗು, ತಲೆಯಲ್ಲಿ ೧ ಇಂಚು ಬಿಳಿ-ಕಪ್ಪು ಬಣ್ಣದ ಮಿಶ್ರಿತ ಕೂದಲು, ಕುರುಚಲ ದಾಡಿ, ಮೀಸೆವುಳ್ಳವನಾಗಿದ್ದು, ಬಲಗೈ ಭುಜದ ಹತ್ತಿರ ತೋಳಿನ ಮೇಲೆ ರೌಂಡಾಕಾರದ ಚಕ್ರದ ಮದ್ಯ ಓಂ ಆಕಾರದ ಅಚ್ಛೆ ಗುರುತು, ಬಲಗೈ ರಟ್ಟೆಯ ಮೇಲೆ ತ್ರಿಶೂಲ ಮತ್ತು ಢಮರುಘ ಚಿತ್ರದ ಅಚ್ಚೆ ಗುರುತು ಹಾಕಿಕೊಂಡಿದ್ದಾನೆ. ಕಿವಿಯ ಅಲೆಗಳು ತೂತು ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ತುಂಬು ತೋಳಿನ ರೆಡಿಮೆಡ್ ಅಂಗಿ, ಬಿಳಿ ಬಣ್ಣದ ಚಾಕಲೇಟ್ ದಡಿಯ ಲುಂಗಿ-ಪಂಚೆ, ಕೊರಳಲ್ಲಿ ಕಪ್ಪು ದಾರ ಧರಿಸಿದ್ದು, ಸೊಂಟದಲ್ಲಿ ಕೇಸರಿ ಬಣ್ಣದ ಉಡದಾರ, ಬಲಗಾಲಿನಲ್ಲಿ ಕಪ್ಪು ಬಣ್ಣದ…
ವಿಜಯಪುರ: ೨೦೨೩-೨೪ನೆ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾ ನಿಧಿ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ೨.೫ ಲಕ್ಷ ಮೀರಿರಬಾರದು ಎಂಬ ಷರತ್ತು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಲಾಗಿನ್ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಫೆ. ೨೯ ರ ರೊಳಗೆ ಪ್ರಮಾಣ ಪತ್ರ ಅಪಲೋಡ್ ಮಾಡುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.೨೦೨೩-೨೦೨೪ ನೆ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಯೊಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ – ಸಿಯಿಟಿ ಮತ್ತು ನೀಟ್) ೩೦ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಫೆ.೨೭ ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ೦೮೨೧-೨೫೧೫೯೪೪ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಎಲ್.ಎನ್. ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
