Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಆಡಳಿತಾಧಿಕಾರಿ, ಉಪವಿಭಾಗಾಧಿಕಾರಿ ಶ್ವೇತಾ ಮೋಹನ ಬೀಡಿಕರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಜಯಪುರದಲ್ಲಿ ನಡೆದ ಬಜೆಟ್ ಮಂಡನೆಯ ಸಭೆಯಲ್ಲಿ ೨೦೨೪-೨೫ ನೇ ಸಾಲಿನ ಪುರಸಭೆಯ ಆಯವ್ಯಯ ಅಂದಾಜು ಪತ್ರಿಕೆಗೆ ಅನುಮೋದನೆ ನೀಡುವುದರೊಂದಿಗೆ ರೂ.೪.೨೪ ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿವಿಧ ಮೂಲಗಳಿಂದ ಪುರಸಭೆಗೆ ೩೫ ಕೋಟಿ,೫೮ ಲಕ್ಷ, ೬೪ ಸಾವಿರ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ. ೩೫ ಕೋಟಿ, ೫೪ಲಕ್ಷ, ೪೦ ಸಾವಿರ ರೂಪಾಯಿ ವಿವಿಧ ಖರ್ಚುಗಳನ್ನು ನಿರೀಕ್ಷಿಸಲಾಗಿದೆ. ಆಸ್ತಿ ತೆರಿಗೆಯಿಂದ ರೂ. ೧೧೮.೧೨ ಲಕ್ಷ, ನೀರಿನ ಶುಲ್ಕದಿಂದ ರೂ.೮೩.೫೧ ಲಕ್ಷ, ವಾಣಿಜ್ಯ ಮಳಿಗೆಯಿಂದ ರೂ.೧೫೩.೨೮ ಲಕ್ಷ, ಎಸ್ಎಫ್ಸಿಯಿಂದ ರೂ.೪೬.೪೨ ಲಕ್ಷ, ೧೫ ನೇ ಹಣಕಾಸಿನಿಂದ ರೂ.೩೫೦ ಲಕ್ಷ ಆದಾಯ ನಿರೀಕ್ಷಿಸಲಾಗಿದೆ. ರಸ್ತೆ ಮತ್ತು ಚರಂಡಿ ದುರಸ್ತಿಗೆ ರೂ. ರೂ.೫೦ ಲಕ್ಷ, ಘನತ್ಯಾಜ್ಯ ನಿರ್ವಹಣೆಗೆ ರೂ. ೭೫ ಲಕ್ಷ, ಎಸ್ಎಫ್ಸಿ ಪ.ಜಾತಿ, ಪ.ಪಂಗಡದ ಅಭಿವೃದ್ಧಿ ಕಾರ್ಯಗಳಿಗೆ…
ದೇವರಹಿಪ್ಪರಗಿ: ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ಪ್ರಭುಗೌಡ ಬಿರಾದಾರ (ಅಸ್ಕಿ) ಇವರು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಈ ಹಿಂದೆಯೂ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಪ್ರಭುಗೌಡರ ಪಕ್ಷ ಸಂಘಟನಾಶಕ್ತಿಯನ್ನು ಗುರುತಿಸಿ ಎರಡನೆಯ ಬಾರಿಗೆ ಪುನಃ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ (ಕುಚಬಾಳ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವರಹಿಪ್ಪರಗಿ: ಸಮಾಜದ ಕಂದಾಚಾರಗಳನ್ನು ನಿರ್ಭೀತಿಯಿಂದ ತ್ರಿಪದಿಗಳ ರೂಪದಲ್ಲಿ ಕಟುಸತ್ಯವನ್ನು ಟೀಕಿಸಿದ ಕವಿ ಸರ್ವಜ್ಞ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಹೇಳಿದರು.ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಳವಾರ ಕವಿ ಸರ್ವಜ್ಞನ ಜನ್ಮದಿನಾಚರಣೆ ಅಂಗವಾಗಿ ಸರ್ವಜ್ಞ ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಎಲ್ಲವನ್ನು ತಿಳಿದ ಕವಿ ಸರ್ವಜ್ಞ. ಇವರು ವಾಸ್ತವಿಕವಾದಿ ಹಾಗೂ ತತ್ವಜ್ಞಾನಿಯಾಗಿ ಹದಿನಾರನೆಯ ಶತಮಾನದಲ್ಲಿ ಕಂಡಂತ ಸಮಾಜದ ಅಂಕುಡೊಂಕುಗಳನ್ನು ಜನಸಾಮಾನ್ಯರು ಸುಲಭವಾಗಿ ಅರಿಯುವಂತೆ ತಮ್ಮ ತ್ರಿಪದಿ ರೂಪದ ಬರಹಗಳ ಮೂ¯ಕ ತಿಳಿಸಿ ಸತ್ಯದರ್ಶನ ಮಾಡಿಸಿದರು ಎಂದರು.ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕಾಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ಶಿಕ್ಷಕಿ ಶೋಭಾ ಕುಂಬಾರ ಮಾತನಾಡಿ, ಸರ್ವಜ್ಞನ ತ್ರಿಪದಿಗಳಲ್ಲಿ ನೈತಿಕ ಹಾಗೂ ಸಾಮಾಜಿಕ ನ್ಯಾಯವನ್ನು ಕಾಣಬಹುದಾಗಿದೆ ಎಂದರು.ವಸತಿ ಶಾಲೆಯ ಪ್ರಾಚಾರ್ಯ ರೇಷ್ಮಾ ಜಾಧವ ಅಧ್ಯಕ್ಷತೆ ವಹಿಸಿದ್ದರು. ರಾಜಶೇಖರ ಕಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವೈವಿಧ್ಯಮಯ ಜಾನಪದ ಕಾರ್ಯಕ್ರಮ ನೀಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಹಾಗೂ ವಿದ್ಯಾರ್ಥಿಗಳ ಓದುವಿಕೆಗಾಗಿ…
ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಫೆ.೨೧ ರಿಂದ ೨೩ರವರೆಗೆ ಮೂರು ದಿನಗಳ ಕಾಲ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಹಮ್ಮಿಕೊಂಡ ಮಾರಾಟ ಮತ್ತು ವಸ್ತು ಪ್ರದರ್ಶನಕ್ಕೆ ಮಹಾನಗರ ಪಾಲಿಕೆ ಉಪಮಹಾಪೌರ ದಿನೇಶ ಹಳ್ಳಿ ಚಾಲನೆ ನೀಡಿದರು.ಈ ಮೇಳವು ಪ್ರತಿದಿನ ಬೆಳಿಗ್ಗೆ ೧೦ ರಿಂದ ರಾತ್ರಿ ೯ ಗಂಟೆಯವರೆಗೆ ಸಿದ್ಧ ಉಡುಪು, ಆಹಾರ ವಸ್ತುಗಳು,ಆಯುರ್ವೇದಿಕ ವಸ್ತುಗಳು,ಅಗರಬತ್ತಿ,ಆಟಿಕೆ ವಸ್ತುಗಳ ಮಾರಾಟ ಮೇಳ ಹಾಗೂ ವಸ್ತು ಪ್ರದರ್ಶನವನ್ನು ನಡೆಯಲಿದೆ. ವಸ್ತು ಪ್ರದರ್ಶನದಲ್ಲಿ ೩೦ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ.ಈ ಸಂದರ್ಭದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗೀಡದ, ಸುಭಾಷ ಪಾಟೀಲ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ನಾರಾಯಣ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಂಬಾಕು ಸೇವನೆಯಿಂದ ಹಲವಾರು ಗಂಭೀರ ಕಾಯಿಲೆಗಳಿಗೆ ತುತ್ತಾಗಿ, ಆರೋಗ್ಯದ ವ್ಯಕ್ತಿರಿಕ್ತ ಪರಿಣಾಮಗಳು ಉಂಟಾಗಲಿರುವ ಕುರಿತು ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ, ಆಹಾರ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಂಬಾಕು ಮಾರಾಟ ನಿಷೇಧ ಕೊಟ್ಪಾ ಕಾಯ್ದೆಯ ಸೆಕ್ಷನ್ ೪ ಮತ್ತು ೬(ಎ)ರನ್ವಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಬೇಕು. ನಿಷೇಧಿತ ವಲಯಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಕವಿತಾ ಕೊಟ್ಪಾ ಕಾಯ್ದೆಯ ಪರಿಣಾಮಕಾರಿ…
ವಿಜಯಪುರ: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಸ್ಥಬ್ಧಚಿತ್ರವು ಸಾಸನೂರ ಗ್ರಾಮಪಂಚಾಯಿತ್ ವ್ಯಾಪ್ತಿಯಲ್ಲಿ ಸಂಚರಿಸಿತು.ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಸ್ತಬ್ಧಚಿತ್ರಕ್ಕೆ ಹೂವಿನ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಯ ಭಿತ್ತಿಪತ್ರಗಳನ್ನು ಹಿಡಿದು, ಸ್ವಾಗತ ಕೋರಲಾಯಿತು.ಇದೇ ವೇಳೆ ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆಯ ಪ್ರಮಾಣ ವಚನ ಬೋಧಿಸಲಾಯಿತು. ಸಾಸನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರೀಕರು ಬೈಕ್ ಮೂಲಕ ರ್ಯಾಲಿ ನಡೆಸಿ ಗೌರವ ಸೂಚಿಸಿದರು. ವಿವಿಧ ಸಾಂಸ್ಕೃತಿಕ ತಂಡಗಳಿಂದ ಕಲಾ ಪ್ರದರ್ಶನ, ಶಾಲಾ ಮಕ್ಕಳಿಂದ ನೃತ್ಯಗಳು ನಡೆದವು.ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಸೂಬಾಯಿ ಹರಿಜನ ಮಾತನಾಡಿದರು.ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಖಾರಿ ಉಮೇಶ ಲಮಾಣಿ, ಸಾಸನೂರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮಡಿವಾಳಮ್ಮ ದ್ಯಾಮಗೊಂಡ, ಸದಸ್ಯರಾದ ಸಂಗನಗೌಡ ಪಾಟೀಲ್, ಪ್ರಭು ಸೋಮನಾಳ, ಮಲ್ಲನಗೌಡ ನಾಡಗೌಡ, ಗಿರೀಶ್ ಜಲಪೂರ, ಕೆಂಚಪ್ಪ ದ್ಯಾಮಗೊಂಡ, ಎಸ್.ಡಿ. ಪತ್ತಾರ, ಆರ್.ಡಿ ದೇಸಾಯಿ, ರಾಮು ವಾಲೀಕಾರ, ಭೀಮಣ್ಣ ಚಬನೂರ,…
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಫೆ.೨೩ರಂದು ಕಬ್ಬಿನ ಬೆಳೆಯಲ್ಲಿ ಆಧುನಿಕ ತಾಂತ್ರಿಕತೆಗಳು ವಿಷಯದ ಕುರಿತು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ರೈತರು ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ, ಕೃಷಿ ಅಧಿಕಾರಿ ಶ್ರೀಮತಿ ಫಾತೀಮಾ ಬಾನು ಸುತಾರ್ ಮೊ:೯೮೮೬೨೩೪೩೧೦ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಫೆ.೨೮ರಿಂದ ಮಾರ್ಚ್ ೦೧ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಫೆ.೨೮ರಂದು ಮಧ್ಯಾಹ್ನ ೧ ಗಂಟೆಗೆ ಜಿಲ್ಲೆಯ ಮುದ್ದೇಬಿಹಾಳಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೨-೩೦ಕ್ಕೆ ತಾಲೂಕಿನ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ಸಂಜೆ ೫ ಗಂಟೆಗೆ ಮುದ್ದೇಬಿಹಾಳದಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಿ ಬಾಗಲಕೋಟೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಫೆ.೨೯ರಂದು ಮಧ್ಯಾಹ್ನ ೧೨ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮಾರ್ಚ್ ೦೧ ರಂದು ವಿಜಯಪುರದ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಾರ್ಚ್ ೦೨ ರಂದು ಬೆಳಿಗ್ಗೆ ೯ ಗಂಟೆಗೆ ವಿಜಯಪುರದಿಂದ ಜಮಖಂಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
೧೦೭೩೮.೯೯ ಲಕ್ಷ ರೂ.ಗಳ ಆದಾಯ ನಿರೀಕ್ಷೆ ವಿಜಯಪುರ: ಮಹಾನಗರ ಪಾಲಿಕೆಯ ೨೦೨೪-೨೫ನೇ ಸಾಲಿನ ಬಜೆಟ್ಗೆ ಮಹಾಪೌರರ ಆದೇಶದಂತೆ ಉಪಮಹಾಪೌರ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ.ಪ್ರಮುಖವಾಗಿ ನಗರದ ಹಸರೀಕರಣಕ್ಕಾಗಿ ಹಾಗೂ ನಗರದ ಸರ್ವತೋಮುಖ ಅಭಿವೃದ್ದಿಗಾಗಿ ಪಾಲಿಕೆಯ ಆದ್ಯ ಸೇವೆಗಳಾದ ರಸ್ತೆ, ಒಳಚರಂಡಿ, ಮಳೆ ನೀರು ಚರಂಡಿ, ಬೀದಿ ದೀಪ ನಿರ್ವಹನೆ, ಕಸವಿಲೇವಾರಿ ಹಾಗೂ ನೀರು ಸರಬರಾಜುವಿಗಾಗಿ ಅನುದಾನ ಕಾಯ್ದಿರಿಸಲಾಗಿದೆ. ಪ್ರಮುಖವಾಗಿ ಸ್ಮಶಾನಗಳ ಅಭಿವೃದ್ದಿ ಹಾಗೂ ವಿದ್ಯುತ್ ಚಿತಾಗಾರಗಳಿಗೆ ಒಟ್ಟು ರೂ.೧೫೯೪೨.೩೩ ಲಕ್ಷ ರೂ.ಗಳ ಅನುದಾನ ಕಾಯ್ದಿರಿಸಿ ಒಟ್ಟು ೧೩.೯೪ ಲಕ್ಷ ರೂ.ಗಳ ಉಳಿತಾಯ ಬಜೆಟ್ನ್ನು ಮಂಡಿಸಲಾಗಿಗಿದೆ.ಆಯ-ವ್ಯಯದಲ್ಲಿ ಪ್ರಮುಖವಾಗಿ ರಾಜಸ್ವ ಸ್ವೀಕೃತಿಗಳ ಮೂಲಕ ಆಸ್ತಿ ತೆರಿಗೆ, ಕಟ್ಟಡಗಳ ಸಂಬAಧಿತ ಶುಲ್ಕಗಳು, ಘನತ್ಯಾಜ್ಯ ವಿಲೇವರಿ ಶುಲ್ಕ ಇನ್ನೀತರೆ ಸ್ವಂತ ನಿಧಿಯನ್ನೊಳಗೊಂಡು ಒಟ್ಟು ರೂ. ೧೦೭೩೮.೯೯ ಲಕ್ಷ ರೂ.ಗಳ ಆದಾಯ ನಿರೀಕ್ಷಿಸಲಾಗಿದೆ.ಬಂಡವಾಳ ಸ್ವೀಕೃತಿ ಮೂಲಕ ರೂ.೨೬೫೨.೦೨ ಲಕ್ಷಗಳ ವಿವಿಧ ಅನುದಾನಗಳನ್ನು ನಿರೀಕ್ಷಿಸಲಾಗಿದ್ದು, ಅಸಾಧಾರಣ ಆದಾಯಗಳ ಮೂಲಕ ರೂ.೨೫೨೫.೦೦ ಲಕ್ಷಗಳು ಹೀಗೆ ಒಟ್ಟು ರೂ. ೧೫೯೫೬.೧೪ ಲಕ್ಷಗಳ ಆದಾಯದೊಂದಿಗೆ ಪ್ರಮುಖ…
ಸಿಂದಗಿ: ಮಳೆಯ ಅಭಾವದಿಂದ ಈಗಾಗಲೇ ಮೂರು ತಾಲೂಕಿನ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ತೊಂದರೆ ಕಂಡು ಬರುತ್ತಿದ್ದು, ಬರುವ ಜೂನ್ ತಿಂಗಳವರೆಗೆ ಜನ ಜಾನುವಾರಿಗೆ ನೀರು, ಮೇವು ಕಡಿಮೆಯಾಗದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕಾರ್ಯ ಮಾಡಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಅವರು ಪಟ್ಟಣದ ತಾಪಂ ಸಭಾಭವನದಲ್ಲಿ ಸಿಂದಗಿ, ಆಲಮೇಲ ಮತ್ತು ದೇವರ ಹಿಪ್ಪರಗಿ ತಾಲೂಕಿನ ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಂಗ್ರಹಣೆ ಹಾಗೂ ಕೆರೆಗಳಿಗೆ ನೀರು ತುಂಬಿಸುಬ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿವಿಧ ಹಳ್ಳಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಒದಗಿಸಬೇಕು. ನೀರಿನಿಂದ ವಂಚಿತವಾದ ಗ್ರಾಮಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಒದಗಿಸುವ ವ್ಯವಸ್ಥೆ ಮಾಡಬೇಕು. ಪ್ರತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲೂಕಾ ಅಧಿಕಾರಿಗಳು ಈ ಬರಗಾಲ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಿ ಕಾರ್ಯ ನಿರ್ವಹಿಸಬೇಕು. ಯಾವುದೇ ಗ್ರಾಮ, ತೋಟದ ವಸತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವುದು ಕಂಡು ಬಂದಲ್ಲಿ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು…
