Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ಕೊಡುವ ಪ್ರಸಕ್ತ ಸಾಲಿನ “ರಾಷ್ಟ್ರಮಟ್ಟದ ಶಿಕ್ಷಣ ರತ್ನ” ಪ್ರಶಸ್ತಿಯನ್ನು ವಿಜಯಪುರದ ಪ್ರೊ. ಸಿದ್ದು ಸಾವಳಸಂಗ ಉಪನ್ಯಾಸಕರಿಗೆ ರವಿವಾರ ಫೆಬ್ರುವರಿ 18 ರಂದು ರಾಯಚೂರಿನ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ “ಅಂತರ್ ರಾಜ್ಯ ಸಮ್ಮೇಳನ” ದಲ್ಲಿ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡರ ಹಾಗೂ ಸಮ್ಮೇಳನದ ಅಧ್ಯಕ್ಷ ಡಾ. ದೇವೇಂದ್ರಮ್ಮ ಇವರು ಪ್ರದಾನ ಮಾಡಿದರು. ಬಾಲಿಕೆಯರಸರಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರದಲ್ಲಿ ಹಿರಿಯ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸದರಿಯವರು ಶಿಕ್ಷಣಕ್ಕಾಗಿ ಸಲ್ಲಿಸಿದ ಅಮೋಘ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.
Udayarashmi kannada daily newspaper
ವಿಜಯಪುರ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಕಾಂಗ್ರೆಸ್ ಸರಕಾರ ಘೋಷಿಸಿದ್ದು, ಅದರಂತೆ ವಿಜಯಪುರ ಜಿ. ಪಂ. ದಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಬಸವಣ್ಣನವರ ಭಾವಚಿತ್ರವನ್ನು ಶನಿವಾರ ಅನಾವರಣ ಮಾಡಿದರು.ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಎಂ. ಬಿ. ಪಾಟೀಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಹಿರಿಯರಾದ ಅಬ್ದುಲ್ ಹಮೀದ್ ಮುಶ್ರಿಫ್, ಸಂಗಮೇಶ ಬಬಲೇಶ್ವರ, ಸಿದ್ದು ಗೌಡನವರ, ವಸಂತ ಹೊನಮೋಡೆ, ಸುರೇಶ ಘೋಣಸಗಿ, ಚಾಂದಸಾಬ ಗಡಗಲಾವ, ಸಂತೋಷ ಬಾಲಗಾಂವಿ, ನಿಂಗಪ್ಪ ಸಂಗಾಪುರ, ಜಮಖಂಡಿ, ವರ್ಷಾ ಭೋವಿ ಮುಂತಾದವರು ಉಪಸ್ಥಿತರಿದ್ದರು.
ನಿಡಗುಂದಿ: ಯಾವ ಬೆಳೆಗೆ ಎಷ್ಟು ನೀರು ಬೇಕೋ ಅಷ್ಟನ್ನು ಮಾತ್ರ ಉಪಯೋಗಿಸಿ, ನೀರು ಪೋಲಾಗದಂತೆ ಹಾಗೂ ಅತಿ ನೀರಿನ ಬಳಕೆಯಿಂದ ಮಣ್ಣು ಸವಳು-ಜವಳಾಗಿ ಬಂಜರಾಗುವುದನ್ನು ತಡೆಗಟ್ಟುವುದು ಅಗತ್ಯ ಎಂದು ಧಾರವಾಡದ ವಾಲ್ಮಿ ನಿರ್ದೇಶಕ ಪ್ರೊ ಬಿ.ವೈ. ಬಂಡಿವಡ್ಡರ ಹೇಳಿದರು.ತಾಲ್ಲೂಕಿನ ಯಲಗೂರ ಗ್ರಾಮದಲ್ಲಿ ಈಚೆಗೆ ನಡೆದ ಆಲಮಟ್ಟಿ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಹಾಗೂ ರೈತರಿಗೆ ಏರ್ಪಡಿಸಿದ್ದ ಒಂದು ದಿನದ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಆಲಮಟ್ಟಿ ಎಡದಂಡೆ ಕಾಲುವೆಯಡಿ ಬರುವ 40 ವಿತರಣಾ ಕಾಲುವೆಯ ರೈತರಿಗೆ ಧಾರವಾಡದ ವಾಲ್ಮಿ ವತಿಯಿಂದ ಇನ್ನು ಮುಂದೆ ನಿರಂತರವಾಗಿ ತರಬೇತಿ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ರೈತರು ಈ ಶಿಬಿರಗಳ ಲಾಭ ಪಡೆಯಬೇಕು, ತಮ್ಮ ಜಮೀನು ಸವುಳು-ಜವಳಾಗದಂತೆ ತಡೆಗಟ್ಟಬೇಕು ಎಂದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ ವಿ.ಐ. ಬೆಣಗಿ ಅಚ್ಚುಕಟ್ಟು ಪ್ರದೇಶದಲ್ಲಿ ಮುಖ್ಯ ಬೆಳೆಗಳ ಸಂರಕ್ಷಣೆ ಹಾಗೂ ಉತ್ಪಾದಕತೆ ಹೆಚ್ಚಿಸುವ ವಿಧಾನಗಳ ಕುರಿತು ಮಾತನಾಡಿದರು.ವಾಲ್ಮಿಯ…
ಮುದ್ದೇಬಿಹಾಳ: ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸ ಬೇಕಾದರೆ ನಿರಂತರ ಅಧ್ಯಯನದ ಜೊತೆಗೆ ಆಸಕ್ತಿ ಇದ್ದಲ್ಲಿ ಅದು ಸಾಧನೆಯ ಗುರಿಮುಟ್ಟುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಆರ್.ವಿಭೂತಿ ಹೇಳಿದರು.ಪಟ್ಟಣದ ಇಂದಿರಾ ನಗರದಲ್ಲಿರುವ ಎಸ್ಎಸ್ಎಂ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ವೇದಿಕೆ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮಾಜವನ್ನು ಕಟ್ಟುವ ಜವಾಬ್ದಾರಿ ಸಮಾಜ ವಿಜ್ಞಾನ ಶಿಕ್ಷಕರ ಮೇಲೆ ಹೆಚ್ಚಿಗೆ ಇರುತ್ತದೆ. ಸಮಾಜದ ಒಳಿತಿಗಾಗಿಯೆ ಶಿಕ್ಷಕರ ಚಿಂತನೆ ಇರಬೇಕು ಎಂದರು.ನಿವೃತ್ತ ಪ್ರೌಢ ಶಾಲಾ ಮುಖ್ಯಗುರು ಎಸ್.ಎಸ್.ಗೌಡರ್ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾದ ಆರ್.ಜಿ.ಗುಣಕಿ ಮಾದರಿ ಪಾಠ ನೀಡಿ, ನೀಲನಕ್ಷೆಯ ಪ್ರಶ್ನೋತ್ತರದ ಮೇಲೆ ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಎಸ್.ಜಿ.ಗೌಡರ್ ಸೇರಿದಂತೆ ತಾಲೂಕಿನ ವಿವಿಧ ಪ್ರೌಢ ಶಾಲೆಗಳ ಸಮಾಜ ವಿಜ್ಞಾನ ವಿಷಯ ಬೋಧಕ ಶಿಕ್ಷಕರು ಹಾಜರಿದ್ದರು. ಜ್ಞಾನ ಭಾರತಿ ಪ್ರೌಢ ಶಾಲೆಯ ಮುಖ್ಯ ಗುರು ರಾಮಚಂದ್ರ ಹೆಗಡೆ ಸ್ವಾಗತಿಸಿದರು. ಶಿಕ್ಷಕರುಗಳಾದ ಜೆ.ಡಿ.ಮುಲ್ಲಾ ಪ್ರಾಸ್ತವಿಕ ಮಾತುಗಳನ್ನಾಡಿದರು. ರವಿ ಚವ್ಹಾಣ್ ನಿರೂಪಿಸಿದರು. ಬಿ.ಎಸ್.ಶಾಂತಪ್ಪನವರ ವಂದಿಸಿದರು.
ಆಯ-ವ್ಯಯದಲ್ಲಿ ಬಸವನಬಾಗೇವಾಡಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಘೋಷಣೆ – ಬಸವರಾಜ ನಂದಿಹಾಳ ಬಸವನಬಾಗೇವಾಡಿ: ೧೨ ನೇ ಶಮಾತನದಲ್ಲಿ ಕಾಯಕ, ದಾಸೋಹ, ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ಬಜೆಟ್ನಲ್ಲಿ ಪ್ರತ್ಯೇಕ ಪ್ರಾಧಿಕಾರ ಘೋಷಣೆ ಮಾಡಿದ್ದು ಸಮಸ್ತ ಬಸವಾಭಿಮಾನಿಗಳಿಗೆ, ಪ್ರತ್ಯೇಕ ಪ್ರಾಧಿಕಾರಕ್ಕೆ ಹೋರಾಟ ನಡೆಸಿದ ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ತುಂಬಾ ಹರ್ಷ ಉಂಟು ಮಾಡಿದೆ.ಈಗಾಗಲೇ ಸರ್ಕಾರ ಬಸವೇಶ್ವರರ ಕಾರ್ಯಕ್ಷೇತ್ರ ಬಸವ ಕಲ್ಯಾಣ, ಐಕ್ಯಕ್ಷೇತ್ರ ಕೂಡಲಸಂಗಮ ಸ್ಥಳಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚನೆ ಮಾಡುವ ಮೂಲಕ ಈಗಾಗಲೇ ಅಲ್ಲಿ ಅನೇಕ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಮಾಡುತ್ತಿದೆ. ಅವರೆಡು ಕ್ಷೇತ್ರಗಳು ಈಗಾಗಲೇ ಅಭಿವೃದ್ಧಿ ಹೊಂದಿ ಜಗತ್ತಿನ ವಿವಿಧೆಡೆಗಳಿಂದ ಪ್ರವಾಸಿಗರು ಬಂದು ಹೋಗುವಂತಾಗಿದೆ. ಸರ್ಕಾರ ಬಸವೇಶ್ವರರ ಜನ್ಮಸ್ಥಳ ಬಸವನಬಾಗೇವಾಡಿಯನ್ನು ಬಹಳ ವರ್ಷಗಳ ಹಿಂದೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಿ ಈಗಾಗಲೇ ಅಭಿವೃದ್ಧಿ ಪಡಿಸಬೇಕಿತ್ತು. ಸಿಎಂ ಸಿದ್ದರಾಮಯ್ಯನವರು ಬಸವನಬಾಗೇವಾಡಿಗೆ ಒಂದು ಕಾರ್ಯಕ್ರಮಕ್ಕೆ ಬಂದ ಸಂದರ್ಭದಲ್ಲಿ ನಮ್ಮ…
ಬಸವನಬಾಗೇವಾಡಿ: ರಾಜ್ಯದ ಬಜೆಟನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿಗೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರಿಂದ ರಾಜಕೀಯ, ವಿವಿಧ ಸಂಘಟನೆ ಮುಖಂಡರು ಸೇರಿದಂತೆ ಬಸವಾಭಿಮಾನಿಗಳು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಸುದ್ಧಿ ತಿಳಿಯುತ್ತಿದ್ದಂತೆ ಕೆಲವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಸಂತಸ ಹಂಚಿಕೊಂಡರು. ಬಹು ದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಪ್ರಾಧಿಕಾರ ರಚನೆ ಘೋಷಣೆಯನ್ನು ಬಜೆಟ್ ನಲ್ಲಿ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಹಾಗೂ ಸಚಿವ ಶಿವಾನಂದ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ತಿಳಿಸಿದರು.ಬಸವನಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ ಮಾಡಿರುವುದು ಹರ್ಷ ತಂದಿದೆ ಎಂದು ಕಾಂಗ್ರೆಸ್ ಬ್ಲಾಕ್ ಘಟಕದ ಅಧ್ಯಕ್ಷ ಸುರೇಶ ಹಾರಿವಾಳ, ಬಸವೇಶ್ವರ ಅಂತರಾಷ್ಟ್ರೀಯ ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಬಂಜಾರ ಸಮಾಜದ ಮುಖಂಡ ರವಿ ರಾಠೋಡ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ತಾಲೂಕು ಸರ್ಕಾರಿ ನೌಕರರ ಸಂಘದ…
ಕಲಕೇರಿ: ಗ್ರಾಮದ ಮೈಬೂಬಬಾಷಾ ಬಂದಗೀಸಾಬ ಮನಗೂಳಿ ಅವರನ್ನು ದಿಗ್ವಿಜಯ ಭಾರತ ಪಕ್ಷದ ವಿಜಯಪುರ ಜಿಲ್ಲೆಯ ಅಧ್ಯಕ್ಷರನ್ನಾಗಿ ನೇಮಕಗಿಂಡಿದ್ದಾರೆ, ಈ ಕುರಿತಂತೆ ದಿಗ್ವಿಜಯ ಭಾರತ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ.ಅರವಿಂದ ರಾಜೀವ ಅವರು ನೇಮಕಾತಿ ಆದೇಶ ನೀಡಿದ್ದಾರೆ.
ಕಲಕೇರಿ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕು ಇದರಿಂದ ಬದುಕು ಸುಂದರವಾಗುತ್ತದೆ. ಮೌಲ್ಯಗಳನ್ನು ಕಲಿಯಲು ಮಹಾತ್ಮರ ಜೀವನ ಚರೀತ್ರೆಗಳನ್ನು ಓದುವುದರ ಜೊತೆಗೆ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ಸಾಹೇಬಗೌಡ ಬಿರಾದಾರ ತಿಳಗೂಳ ಹೆಳಿದರು.ಕಲಕೇರಿ ಗ್ರಾಮದ ಎಸ್ಎಂವಿವಿ ಸಂಘದ ಬಸವೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯಲ್ಲ್ಲಿ ಹಮ್ಮಿಕೊಂಡ ಎಸ್ಎಸ್ಎಲ್ಸಿ ವಿಧ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಂದಿನ ದಿನಗಳಲ್ಲಿ ಸಮಾಜದಲ್ಲಿ ಮಾನವೀಯ ಮೌಲ್ಯಗಳೇ ಕಾಣೆಯಾಗುತ್ತಿವೆ. ಇವುಗಳನ್ನು ಮತ್ತೆ ಮರುಸ್ಥಾಪಿಸುವಲ್ಲಿ ಇಂದಿನ ವಿದ್ಯಾರ್ಥಿಗಳೆಲ್ಲರೂ ಶ್ರಮಿಸಬೇಕಿದೆ, ನಾನೂ ಕೂಡಾ ಈ ಬಸವೇಶ್ವರ ಶಾಲೆಯ ವಿಧ್ಯಾರ್ಥಿಯಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳುತ್ತೇನೆ, ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಶ್ರಮ ಪಟ್ಟು ಅಭ್ಯಾಸ ಮಾಡಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ, ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ಒಳ್ಳೆಯ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿ ಕಲಿತ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಈ ಸಂದರ್ಭದಲ್ಲಿ ಅವರು ಹೆಳಿದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಗುರುಮರುಳಾಧ್ಯರ…
ವಿಜಯಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮುದ್ದೇಬಿಹಾಳ ತಾಲ್ಲೂಕಿನ ಹಿರಿಹೊಳಿ ತಟದ ಅಯ್ಯನಗುಡಿ ಶ್ರೀ ಗಂಗಾಧರೇಶ್ವರ ಜಾತ್ರೆಯು ಫೆಬ್ರವರಿ ೧೮ ರಿಂದ ೨೧ ವರೆಗೆ ನಾಲ್ಕು ದಿವಸ ನಡೆಯುವುದು.ಈ ಭಾಗದ ಹಿಂದಿನ ಸಂಸ್ಥಾನಿಕರಾದ ಬಲದಿನ್ನಿ ನಾಡಗೌಡ್ರ ಯಜಮಾನಿಕೆಯಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಜಾನಪದ, ಸಂಗೀತ,ನಾಟಕ, ವಸ್ತು ಪ್ರದರ್ಶನ, ಮತ್ತು ಜಾನುವಾರು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ.ಲಿಂಗೈಕ್ಯ ಶಂಕರರಾವ್ ಎನ್ ನಾಡಗೌಡ್ರ ವೇದಿಕೆಯಲ್ಲಿ ಶ್ರೀಮಂತ ಸೋಮಶೇಖರ್ ಎಸ್ ನಾಡಗೌಡ್ರ ಅದ್ಯಕ್ಷತೆಯಲ್ಲಿ ದಿನಾಂಕ ೧೮.೨.೨೦೨೪ ರವಿವಾರ ರಂದು ಬೆಳಗ್ಗೆ ನಾಲತವಾಡ ಪಟ್ಟಣದಲ್ಲಿ ಪಲ್ಲಕ್ಕಿ ಮತ್ತು ಕಳಸೋತ್ಸವ ಮೆರವಣಿಗೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ರಾಜ್ಯಮಟ್ಟದ ಜನಪದ ಕಲಾತಂಡಗಳಾದ ಹುಬ್ಬಳ್ಳಿ ಜಗ್ಗಲಿಗೆ, ಮಂಗಳೂರು ಜೋಗತಿ ನೃತ್ಯ, ಸಾರವಾಡ ಗಾರುಡಿಗೊಂಬೆ, ಉಪ್ಪಲದಿನ್ನಿ ಹೆಜ್ಜೆಮೇಳ, ಬಬಲೇಶ್ವರ ಡೊಳ್ಳುಕುಣಿತ ಸೇರಿದಂತೆ ಹಲಗೆಮಜಲು,ಹಲಗೆವಾದನ, ಶಹನಾಯಿ, ಕಲಾತಂಡಗಳು ಮತ್ತು ನಾಲತವಾಡ ಪಟ್ಟಣದ ಎಲ್ಲಾ ಶಾಲಾ ಕಾಲೇಜುಗಳಿಂದ ಸ್ಥಬ್ಧ ಚಿತ್ರಗಳ ಮೆರವಣಿಗೆ. ಸಂಜೆ ೫ ಗಂಟೆಗೆ…
