Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಿಜಯಪುರ, ಮಾತೋಶ್ರೀ ಗಂಗಮ್ಮ ವೀರಪ್ಪ ಚಿನಿವಾರ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ, ಸೌಟ್ಸ್ & ಗೈಡ್ಸ್, ಎನ್.ಎಸ್.ಎಸ್. ಮತ್ತು ಭಾರತೀಯ ಯೂತ್ ರೆಡ್ ಕ್ರಾಸ್, ಎಚ್ ಡಿ ಎಫ್ ಸಿ ಬ್ಯಾಂಕ್ ಲಿಮಿಟೆಡ್ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ಪಟ್ಟಣದ ಎಂಜಿವ್ಹಿಸಿ ಕಾಲೇಜಿನಲ್ಲಿ ಫೆ.೧೯ ರಂದು ಬೆಳಿಗ್ಗೆ ೧೦ ಗಂಟೆಗೆ ರಕ್ತದಾನದ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ರಕ್ತದಾನಿಗಳು ೯೪೪೮೧೫೦೩೦೪, ೯೭೩೧೦೪೧೯೭೨, ೯೬೨೦೭೮೩೭೮೮, ೮೧೪೭೧೨೮೯೯೭ ಈ ನಂಬರ್ ಗಳನ್ನು ಸಂಪರ್ಕಿಸಬಹುದಾಗಿ ಪ್ರಕಟಣೆತಿಳಿಸಿದೆ.
ಜಿಲ್ಲಾ ಮಟ್ಟದ ಕುಡಿವ ನೀರಿನ ಪರಿಸ್ಥಿತಿ ನಿರ್ವಹಣಾ ಸಭೆಯಲ್ಲಿ ಸಚಿವ ಡಾ. ಎಂ.ಬಿ.ಪಾಟೀಲ ಸೂಚನೆ ವಿಜಯಪುರ: ಜಿಲ್ಲೆ ಸೇರಿದಂತೆ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತುರ್ತಾಗಿ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣೆ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದಾದ್ಯಂತ ಬರಗಾಲವಿರುವುದರಿಂದ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಬಂದ ಕಡೆಗಳಲ್ಲಿ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಕ್ರಮ ವಹಿಸಬೇಕು. ಬೊರವೆಲ್ ಕೊರೆಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳುವುದರಿಂದ ಪರ್ಯಾಯವಾಗಿ ಇದ್ದ ಮೂಲಗಳಿಂದಲೇ ಟ್ಯಾಂಕರ್ ಮೂಲಕ ತುರ್ತಾಗಿ ನೀರು ಒದಗಿಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆ…
ಭೂ ಸುರಕ್ಷಾ ಯೋಜನೆಯಡಿಯ ಅಭಿಲೇಖಾಲಯದ ದಾಖಲೆಗಳು ವಿಜಯಪುರ: ಭೂ ಸುರಕ್ಷಾ ಯೋಜನೆಯಡಿಯಲ್ಲಿ ಅಭಿಲೇಖಾಲಯದ ಎಲ್ಲ ದಾಖಲೆಗಳ ಗಣಕೀಕರಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಮೂಲ ಸೌಲಭ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಚಾಲನೆ ನೀಡಿದರು.ಶನಿವಾರ ನಗರದ ಮಿನಿವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ದಾಖಲೆಗಳ ಡಿಜಿಟಲೀಕರಣದಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದು ತಾಲೂಕು ಕಚೇರಿಯನ್ನು ೧೦೦ ದಿನಗಳೊಳಗಾಗಿ ಸಂಪೂರ್ಣ ಗಣಕೀಕರಣಗೊಳಿಸಲು ಆಯ್ಕೆ ಮಾಡಿಕೊಂಡಿದ್ದು, ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕನ್ನು ಈ ಕಾರ್ಯಕ್ರಮದಡಿ ಆಯ್ಕೆ ಮಾಡಿಕೊಂಡಿದ್ದು, ವಿಜಯಪುರ, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ದಾಖಲೆಗಳು ಆಧುನೀಕರಣ ಯೋಜನೆಯಡಿ ಡಿಜಿಟಲೀಕರಣಗೊಳ್ಳಲಿವೆ ಎಂದು ಅವರು ಹೇಳಿದರು.ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಪ್ರಮುಖ ದಾಖಲೆಗಳ ಗಣಕೀಕರಣಗೊಳಿಸುವ ನಿಟ್ಟಿನಲ್ಲಿ ದಾಖಲೆಗಳ ಇಂಡೆಕ್ಸಿಂಗ್, ಕ್ಯಾಟಲಾಗಿಂಗ್ ಹಾಗೂ ಡಾಟಾ ಎಂಟ್ರಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಕಂದಾಯ ದಾಖಲೆಗಳ ಗಣಕೀಕರಣ ತಂತ್ರಾಂಶದಲ್ಲಿ ದಾಖಲೆಗಳನ್ನು ಅಪಲೋಡ್ ಮಾಡಲು ರಾಜ್ಯದ ಪ್ರತಿ ಅಭಿಲೇಖಾಲಯದ ವಿಷಯ…
ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿದ ಸಚಿವ ಎಂ.ಬಿ. ಪಾಟೀಲ ಅಭಿಮತ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಅಣ್ಣ ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ. ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಮೂಲ ಸೌಲಭ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣಗೊಳಿಸಿ, ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ ಮನವಿ ಸಲ್ಲಿಸಿದ ಕ್ಷಣವೇ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲು ಅವರು ಒಪ್ಪಿಗೆ ಸೂಚಿಸಿದರು. ೧೨ನೇ ಶತಮಾನದಲ್ಲಿ ಬಸವಣ್ಣ ಅವರು ಪ್ರತಿಪಾದಿಸಿದ ಜಾತಿರಹಿತ ಸಮಾಜ, ಕಾಯಕದ ಮಹತ್ವ, ವರ್ಗರಹಿತ ಸಮಾಜದ ಕನಸು ಕಂಡು ನಮ್ಮ ನಡೆನುಡಿಗಳಲ್ಲಿ ಭಿನ್ನತೆ ಇರಬಾರದು ಎಂಬುದನ್ನು ಬಸವಾದಿ ಪ್ರಮಥರು ತಮ್ಮ ವಚನದ ಮೂಲಕ ಸಾರಿದ್ದಾರೆ. ಅವರ…
ವಿವಿಧ ಗ್ರಾಮಗಳ ರೈತರು ಜಾನುವಾರಗಳೊಂದಿಗೆ ಕೆರೆಯಲ್ಲಿ ಧರಣಿ ಕುಳಿತು ವಿನೂತನ ಪ್ರತಿಭಟನೆ! ದೇವರಹಿಪ್ಪರಗಿ: ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ಕೂಡಲೇ ನೀರು ಹರಿಸಿ, ಕೆರೆ ತುಂಬಿಸುವುದರ ಮೂಲಕ ರೈತ ಸಮುದಾಯದ ನೆರವಿಗೆ ಧಾವಿಸುವಂತೆ ಆಗ್ರಹಿಸಿ ಮುಳಸಾವಳಗಿ, ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಕೆರೆಯಲ್ಲಿ ಜಾನುವಾರಗಳೊಂದಿಗೆ ಧರಣಿ ಕುಳಿತು ವಿನೂತನ ಪ್ರತಿಭಟನೆ ಕೈಗೊಂಡರು.ಮತಕ್ಷೇತ್ರದ ಇಂಗಳಗಿ, ನಿವಾಳಖೇಡ, ಮುಳಸಾವಳಗಿ ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ, ಗ್ರಾಮಗಳು ರೈತರು ಶನಿವಾರ ಇಂಡಿ ರಸ್ತೆಯಲ್ಲಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ಕೆರೆಗೆ ತೆರಳಿ ಸುಡು ಬಿಸಿಲಿನಲ್ಲಿ ಜಾನುವಾರಗಳೊಂದಿಗೆ ಧರಣಿ ಕುಳಿತರು.ಈ ಸಂದರ್ಭದಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಹಾಗೂ ಸಾಹೇಬಗೌಡ ರೆಡ್ಡಿ ಮಾತನಾಡಿ, ಚಿಮ್ಮಲಗಿ ಕಾಲುವೆಗೆ ನೀರು ಹರಿಸಲಾಗಿದ್ದು, ಕೆರೆಗಳಲ್ಲಿ ಶೇ ೬೦ ರಷ್ಟು ನೀರಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ವಾಸ್ತವಿಕವಾಗಿ ಕೆರೆಗಳಿಗೆ ಬಂದು ನೋಡಿದರೆ ಶೇ೨ ರಷ್ಟು ನೀರಿಲ್ಲ. ಕಳೆದ ಎರಡು ತಿಂಗಳುಗಳಿಂದ ರೈತರು ನಿರಂತರ ಹೋರಾಟ…
ಇಂಡಿ: ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕರು ಅನುಭವ ಮಂಟಪದ ಮೂಲಕ ಲಿಂಗ, ಜಾತಿ, ಸಮಾನತೆ ಒತ್ತು ಕೊಟ್ಟವರು. ಸಮಾಜದಲ್ಲಿ ಮೇಲು ಕೀಳೆಂಬ ಭಾವನೆ ಇರಬಾರದು. ಎಲ್ಲರೂ ಸಮಾನರು ಎಂದು ಬೋಧಿಸಿ ಆಚರಣೆ ಮಾಡಿದವರು ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಶನಿವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಗೊಳಿಸಿ ಅವರು ಮಾತನಾಡಿದರು.ಶಿಕ್ಷಕ ಬಸವರಾಜ ಗೊರನಾಳ ಮಾತನಾಡಿ, ಅಂದಿನ ಕಾಲದಲ್ಲಿ ಕಾಯಕ, ಸ್ತ್ರೀ ಸಮಾನತೆ, ಮಹತ್ವ ಕೊಡುವ ಮೂಲಕ ಜಾತಿಯತೆಯನ್ನು ಅಳಿಸಲು ಪ್ರಧಾನ ಆಧ್ಯತೆಯನ್ನು ನೀಡಿ ಭಕ್ತಿ ಮಾರ್ಗ ಪ್ರತಿಪಾದಿಸಿದ ಅಪರೂಪದ ವಿಶ್ವಗುರು ಎಂದರು.ಕರ್ಯಕ್ರಮದಲ್ಲಿ ತಹಸೀಲ್ದಾರ ಮಂಜುಳಾ ನಾಯಕ, ಶಿರಸ್ತೆದಾರ ಎಸ್.ಆರ್. ಮುಜಗೊಂಡ, ಎಂ.ಪಿ. ಕೊಡತೆ, ಬಸವರಾಜ ರಾಹೂರ, ಎಚ್.ಎಚ್. ಗುನ್ನಾಪುರ, ಆರ್.ಬಿ. ಮೂಗಿ, ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ, ಭೀಮಾಶಂಕರ ಕಾರ್ಖಾನೆ ನಿರ್ದೇಶಕ ಜಟ್ಟೆಪ್ಪ ರವಳಿ ಮತ್ತಿತರಿದ್ದರು.
ಆದೇಶ ಪತ್ರದಲ್ಲಿ ಕನ್ನಡದ ಕೊಲೆ! | ಲೋಪದೋಷ ಗಮನಿಸದ ಡಿಡಿಪಿಐ ಬಸವನಬಾಗೇವಾಡಿ: ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ನೀಲಿ ತಿಲಕ, ನೀಲಿ ಶಾಲು ಧರಿಸಲು ನಿರಾಕರಿಸಿದ ಶಿಕ್ಷಕ ಶಿವಾನಂದ ಕೆಳಗಿನಮನಿ ಅವನನ್ನು ಕರ್ತವ್ಯದಿಂದ ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಕಾರ್ಯಕರ್ತರು ಬಿಇಒ ಕಚೇರಿ ಆವರಣದಲ್ಲಿ ಶುಕ್ರವಾರ ಅಹೋರಾತ್ರಿ ಧರಣಿ ಆರಂಭಿಸಿದರು.ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಿಇಒ ವಸಂತ ರಾಠೋಡ ಹಾಗೂ ಪಿಐ ವಿಜಯಕುಮಾರ ಮುರಗುಂಡಿ ಆಗಮಿಸಿ ಪ್ರತಿಭಟನೆ ಕೈ ಬಿಡುವಂತೆ ಪ್ರತಿಭಟನಾ ನಿರತರನ್ನು ಮನ ಒಲಿಸಲು ಪ್ರಯತ್ನಿಸಿದರು, ಪಟ್ಟು ಬಿಡದ ಪ್ರತಿಭಟನಾಕಾರರು ಶಿಕ್ಷಕ ಶಿವಾನಂದ ಕೆಳಗಿನಮನಿಯನ್ನು ಕೂಡಲೇ ಅಮಾನತ್ತುಗೊಳಿಸಿ, ಇಲ್ಲವಾದರೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರತಿಭಟನಾ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು, ತಡರಾತ್ರಿವರೆಗೂ ಪ್ರತಿಭಟನೆ ಮುಂದುವರೆಯಿತು,ಬಿಇಓ ವಸಂತ ರಾಠೋಡ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್ ಎಸ್ ನಾಗೂರ ಅವರು ಕೆಲ ಹೊತ್ತು ದೂರವಾಣಿ ಮೂಲಕ ಚರ್ಚಿಸಿ…
ಬಸವನಬಾಗೇವಾಡಿ: ರಾಜ್ಯ ಸರ್ಕಾರ ವಿಶ್ವಗುರು ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ಆದೇಶಿಸಿರುವ ಹಿನ್ನಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಸವೇಶ್ವರರ ಭಾವ ಚಿತ್ರ ಅನಾವರಣಗೊಳಿಸಲಾಯಿತು.ಈ ಸಂಧರ್ಭದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಜಿ ಮಾತನಾಡಿ ವಿಶ್ವಗುರು ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ ಬಸವೇಶ್ವರರು ಜಗತ್ತಿಗೆ ಸಮಾನತೆಯ ಸಂದೇಶವನ್ನು ಸಾರುವ ಮೂಲಕ ಇಡೀ ವಿಶ್ವಕ್ಕೆ ಗುರುವಾಗಿದ್ದಾರೆ ಅಂತಹ ಮಹಾನ್ ಶರಣರನ್ನ ಕೇವಲ ನಮ್ಮ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರೆ ಸಾಲದು, ಬಸವೇಶ್ವರ ಆಚಾರ ವಿಚಾರಗಳು ಇಡೀ ಜಗತ್ತಿಗೆ ಪಸರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಬಸವೇಶ್ವರರನ್ನು ದೇಶದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತಾಗಬೇಕು ಎಂದರು.ತಹಶೀಲ್ದಾರ ಯಮನಪ್ಪ ಸೋಮನಕಟ್ಟಿ ಮಾತನಾಡಿದರು.ಈ ಸಂಧರ್ಬದಲ್ಲಿ ಮುಖಂಡರಾದ ಲೋಕನಾಥ ಅಗರಾವಲ, ಬಸಣ್ಣ ದೆಸಾಯಿ ಕಲ್ಲೂರ, ಬಸವರಾಜ ಗೊಳಸಂಗಿ, ಬಸವರಾಜ ಹಾರಿವಾಳ, ಶೇಖರ ಗೊಳಸಂಗಿ, ಸಾಹಿತಿ ಲ,ರು, ಗೊಳಸಂಗಿ,…
ತಿಕೋಟಾ: ಮಕ್ಕಳ ವ್ಯವಹಾರಿಕ ಜ್ಞಾನ ಹೆಚ್ಚಳಕ್ಕೆ ಸಂತೆ ಮೇಳ ಏರ್ಪಡಿಸಿ, ದೈನಂದಿನ ಜೀವನದಲ್ಲಿ ನಡೆಯುವ ವ್ಯಾಪಾರದಲ್ಲಿನ ವಸ್ತುಗಳ ತೂಕ ಇತರ ವ್ಯವಹಾರ ಕುರಿತು ಮಕ್ಕಳಿಗೆ ಜ್ಞಾನ ಹೆಚ್ಚುಸಲು ಶಾಲಾ ಸಂತೆ ಮೇಳವನ್ನು ತಾಲ್ಲೂಕಿನ ರತ್ನಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲೆಯ ಮಕ್ಕಳಿಂದ ಶನಿವಾರ ಏರ್ಪಡಿಸಲಾಯಿತು.ಮಕ್ಕಳು ಅತೀ ಉತ್ಸುಕತೆಯಿಂದ ಎಲ್ಲ ಭಾಗವಹಿಸಿ ವ್ಯಾಪಾರ ವಹಿವಾಟು ಮಾಡಿದರು. ಗ್ರಾಮದ ಜನರು ಕೂಡಾ ಶಾಲಾ ಸಂತೆಗೆ ಆಗಮಿಸಿ ಕಾಯಿಪಲ್ಯೆ, ಧಾನ್ಯ, ತರಕಾರಿ, ಹಣ್ಣು ಹಾಗೂ ಇತರೆ ದಿನಸಿ ಸಾಮಗ್ರಿ ಖರೀದಿಸಿ ಮಕ್ಕಳ ವ್ಯವಹಾರಿಕ ಜ್ಞಾನ ಕಂಡು ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಎಸ್.ಎಲ್.ಹೊನ್ನುಟಗಿ, ಸಿಆರ್ಪಿ ಬಸವರಾಜ ತೇಲಿ, ಸದಾಶಿವ ಖೋತ, ಮಹೇಶ ಕಂಟೆ, ರಾಮಜಿ ಮಿಸಾಳ, ಮಲ್ಲಪ್ಪ ಕರ್ಚೆ, ಸಾಂಯವ್ವ ಮಿಸಾಳ, ಮಲ್ಲವ್ವ ಮಿಸಾಳ, ಬಾಲಕೃಷ್ಣ ಯಡವೆ, ಮಾಳಪ್ಪಾ ಯಡವೆ, ಶ್ರೀಶೈಲ್ ಮುಂಜೆ, ಅಶೋಕ ಖರ್ಚೆ, ಪಾರ್ವತಿ ಮಿಸಾಳ ಇದ್ದರು.
ಸಿಂದಗಿಯಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಸಿಂದಗಿ: ನಾಡಿನ ಎಲ್ಲ ಮಠಾಧೀಶರ, ವಿದ್ವಾಂಸರ, ಚಿಂತಕರ ಮತ್ತು ಸಚಿವರ ಜೊತೆಗೆ ಚರ್ಚೆ ಮಾಡಿ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಶ್ಲಾಘನೀಯವಾದದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕಾಡಳಿತ ಸೌಧದಲ್ಲಿ ಕಂದಾಯ ಇಲಾಖೆ ತಾಲೂಕಾಡಳಿತ ವತಿಯಿಂದ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶ್ವಗುರು ಬಸವಣ್ಣನವರ ಅನುಯಾಯಿಯಾದ ಸಿ.ಎಂ. ಸಿದ್ಧರಾಮಯ್ಯನವರು ಸಾಮಾಜಿಕ ನ್ಯಾಯದಡಿಯಲ್ಲಿ ೧೨ನೇ ಶತಮಾನದ ಅಣ್ಣ ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ಅವರ ತತ್ವಾದರ್ಶಗಳನ್ನು ರಾಜಕೀಯದಲ್ಲಿ ತಮ್ಮ ಅಧಿಕಾರವಧಿಯಲ್ಲಿ ಬೆಳಕು ಚೆಲ್ಲಿದ್ದು ಸಂತಸ ತಂದಿದೆ. ಅನುಕರಣೆ ಆಚರಣೆಯಾಗಬೇಕು ಎಂಬ ಮಹದಾಸೆಯನ್ನು ಹೊಂದಿದ್ದಾರೆ. ಬಸವಣ್ಣನವರ ಆಚಾರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮನುಷ್ಯ ಕಾಯಕ ಮಾಡಬೇಕು ಕಾಯಕದಿಂದ ಬಂದಂತಹ ಲಾಭವನ್ನು ದಾಸೋಹ ಮಾಡಬೇಕು. ಇಂಗಳೇಶ್ವರ ಗ್ರಾಮದಲ್ಲಿ ಶರಣರ ೧೧೦೦ ವಚನಗಳನ್ನು ೧೧೦೦ ಕಲ್ಲುಗಳಲ್ಲಿ ಕೆತ್ತನೆ ಮಾಡಿಸಿ ಶಾಶ್ವತವಾಗಿ ಉಳಿಯುವಂತೆ ಮಾಡಿದ್ದಾರೆ ಎಂದರು.ಜಾನಪದ…
