Author: editor.udayarashmi@gmail.com

ಕೊಲ್ಹಾರ: ಜಗತ್ತಿನ ಎಲ್ಲ ವಿಷಯ ಹಾಗೂ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ ಆದರೆ ವಿದ್ಯಾರ್ಥಿಗಳು ಅಂತರ್ಜಾಲದ ಬಗ್ಗೆ ಅರಿತು,ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಜ್ಞಾನಾರ್ಜನೆ ಪಡೆದುಕೊಳ್ಳಬೇಕು ಎಂದು ಶಿಕ್ಷಕ ಜಗದೀಶ ಸಾಲಳ್ಳಿ ಹೇಳಿದರು.ಮಸೂತಿ ಗ್ರಾಮದ ಶ್ರೀ ಗುರು ಸಂಗನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಗರಹಿತ ದಿನ ಸಂಭ್ರಮ ಶನಿವಾರ ಅಂಗವಾಗಿ ಆಧುನಿಕ ತಂತ್ರಜ್ಞಾನದ ಸಾಧನಗಳು ಹಾಗೂ ಅಂತರ್ಜಾಲ ಸದ್ಬಳಕೆ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಅಂತರ್ಜಾಲ ಜೋಡನೆ ತೋರಿಸಿ ಇಂದಿನ ದಿನಗಳಲ್ಲಿ ದೂರದರ್ಶನ,ಮೊಬೈಲ್, ಇಂಟರ್‌ನೆಟ್‌ನಂತಹ ಆಧುನಿಕ ತಂತ್ರಜ್ಞಾನಗಳನ್ನು ವಿದ್ಯಾರ್ಥಿಗಳು ಮನರಂಜನೆ, ಕಾಲಹರಣಕ್ಕೆ ಮತ್ತಿತರರ ಕೆಲಸಗಳಿಗೆ ಅತಿಯಾದ ಬಳಕೆಯಿಂದ ಮಕ್ಕಳು ಮಾನಸಿಕ ಮತ್ತು ದೈಹಿಕ ಅಸ್ವಸ್ಥರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಅಗತ್ಯವಿದ್ದಷ್ಟು ಬಳಸಿ ಸದ್ಬಳಕೆ ಮಾಡಿಕೊಂಡು ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದರು.ಜಾಹೀರಾತುಗಳನ್ನು ಪರೀಕ್ಷಿಸದೇ ನಂಬಿಗಸ್ತ ಮೂಲಗಳಿಂದ ತಿಳಿಯದೆ ಬಳಸಬಾರದು, ಮೊಬೈಲಗೆ ಅಪರಿಚಿತ ಸಂಖ್ಯೆಗಳಿಂದ ಲಾಟರಿ ಬಂದಿದೆ, ಬ್ಯಾಂಕಗಳಿಂದ ಓಟಿಪಿ ನಂಬರ ಕಳುಹಿಸಿ ಹೀಗೆ ಬ್ಯಾಂಕ್ ಹಣ ಖೋತಾ ಆಗುವ ಕುರಿತು,…

Read More

ಕೊಲ್ಹಾರ: ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡುವಾಗ ಸಮಯ ವ್ಯರ್ಥ ಮಾಡದೆ ಹಗಲಿರುಳು ಶ್ರಮಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಕೊಲ್ಹಾರ ಪಟ್ಟಣದ ರಾಣಿ ಚನ್ನಮ್ಮ ವಸತಿ ಶಾಲೆಯ ಸ್ನೇಹ ಸಮ್ಮೇಳನ ಹಾಗು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಪ್ರತಿಭಾವಂತ ವಿದ್ಯಾರ್ಥಿಗಳಾಗಬೇಕಾದರೆ ನಿರಂತರ ಅಧ್ಯಯನ ಅತ್ಯವಶ್ಯ. ಪಾಲಕರು ಸಹ ಮಕ್ಕಳ ವಿದ್ಯಾಭ್ಯಾಸ ಹಾಗು ಆರೋಗ್ಯದ ಕಡೆಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳು ಜೀವನದ ಸ್ಪಷ್ಟ ಗುರಿ ಹಾಗು ಉದ್ದೇಶ ಹೊಂದಿರಬೇಕು. ಭಾರತೀಯ ಸಂಸ್ಕೃತಿಯ ಮತ್ತು ಪರಂಪರೆಗಳನ್ನು ಅರಿತು ಭಾವೈಕ್ಯತೆಯ ಜೀವನಕ್ಕೆ ಪ್ರಾಧ್ಯಾನತೆ ನೀಡಬೇಕು ಎಂದರು.ರಾಣಿ ಚನ್ನಮ್ಮ ವಸತಿ ಶಾಲೆಯ ಸಹ ಶಿಕ್ಷಕ ಸಂಜಯ ದಿವಟಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಕರಿಗೊಂಡ ಮಾತನಾಡಿದರು.ಭುವನೇಶ್ವರಿ ಮೇಟಿ, ಎಸ್ ಜಿ ಗಡಾದ. ಬಿ ಕೆ ಅಂದೋಡಗಿ, ಎಸ್ ಜಿ ಮೇತ್ರಿ. ಎಚ್ ಎಸ್ ಪಾಟೀಲ. ಎಸ್ ಆರ್ ಬೀರುಣಗಿ. ಜೆ…

Read More

ದೇವರಹಿಪ್ಪರಗಿ: ಬಸವ ಸಂಸ್ಕೃತಿ ರೂಢಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶನಿವಾರದಂದು ಜರುಗಿದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಬಸವಣ್ಣನವರ ಸಾಂಸ್ಕೃತಿಕ ಆಚಾರ, ವಿಚಾರಗಳನ್ನು ತಿಳಿದುಕೊಂಡು ಅದರಂತೆ ನಡೆದಾಗ ಮಾತ್ರ ಜೀವನಕ್ಕೆ ಸಾರ್ಥಕತೆ ಬಂದಂತಾಗುತ್ತದೆ ಎಂದರು.ನಿವೃತ್ತ ನೌಕರರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಬಸವಶರಣ ಸಂಗಮ ಸಮೀತಿ ಅಧ್ಯಕ್ಷ ಸಂಗಣ್ಣ ತಡವಲ್, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿದರು. ತಹಶೀಲ್ದಾರ ಪ್ರಕಾಶ ಸಿಂದಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಂತರ ಪಟ್ಟಣದ ವಿಜಯಪುರ ರಸ್ತೆಯಲ್ಲಿನ ಬಸವೇಶ್ವರ ವೃತ್ತಕ್ಕೆ ತೆರಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಬಸವೇಶ್ವರ ಸಾಂಸ್ಕೃತಿಕ ಭವನ ನಿರ್ಮಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಪರಿಷತ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಸಿ.ಹಿರೇಮಠ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ…

Read More

ಕೆಂಭಾವಿ: ಪಟ್ಟಣದ ಆಶ್ರಯ ಕಾಲೋನಿಯ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ತಂತಿಗಳು ಕೈಗೆಟುಕುವ ಹಂತದಲ್ಲಿದ್ದು,ಈ ತಂತಿಗಳು ಭೂಮಿಯಿಂದ ಕೆಲವೇ ಅಡಿಗಳಷ್ಟು ಅಂತರದಲ್ಲಿದಿರುವುದರಿಂದ ಅವಘಡ ಸಂಭವಿಸುವ ಮುನ್ನ ತೆರವುಗೊಳಿಸಬೇಕೆಂದು ಕರವೇ ವಲಯಾಧ್ಯಕ್ಷ ಕುಮಾರ ಮೋಪಾಗರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಗೆಟುಕುವ ರೀತಿಯಲ್ಲಿ ವಿದ್ಯುತ್ ವೈರ್ಜೋತು ಬಿದ್ದಿದೆ. ಮನೆಯ ಮುಂಭಾಗದಲ್ಲೇ ವಿದ್ಯುತ್ ತಂತಿ ಹಾಯ್ದು ಹೋಗಿದ್ದು,ಇದೇ ಸ್ಥಳದಲ್ಲಿ ಹುಲ್ಲಿನ ಬಣವೆಗಳು, ರೈತರ ಮನೆಗಳಿವೆ. ಕೆಲವೊಂದು ಸಮಯದಲ್ಲಿ ಜೋರಾದ ಗಾಳಿ ಬೀಸಿದರೆ ತಂತಿಗಳು ಪರಸ್ಪರ ತಗುಲಿ ಬೆಂಕಿ ಹೊತ್ತುಕೊಳ್ಳುವ ಸಂಭವ ಹೆಚ್ಚಿದೆ. ವಿದ್ಯುತ್‌ ಕಂಬಗಳ ಹೈಟೆನ್ಷನ್‌ ವೈರ್‌ ಕೆಲವೇ ಅಡಿ ಎತ್ತರಕ್ಕಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಲೇ ಬಂದಿದೆ ಎಂದು ಕಿಡಿಕಾರಿದ್ದಾರೆ.ಈ ಕುರಿತು ಈಗಾಗಲೇ ಜೆಸ್ಕಾಂ, ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರು, ಪತ್ರ ಬರೆದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಇವರುಗಳ ನಿರ್ಲಕ್ಷ್ಯದ ಪರಿಣಾಮ ಇಲ್ಲಿಯ ಜನರು ಜೀವ ಕೈಯಲ್ಲಿ ಹಿಡಿದು ಕಾಲ ಕಳೆಯುತ್ತಿರುವ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನಾದರೂ ಅಪಾಯಕ್ಕೆ ಆಹ್ವಾನ…

Read More

ಮೋರಟಗಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಹೆಚ್ಚಿಸಲು ಕ್ರೀಡೆ ಮಹತ್ವ ಪಾತ್ರ ವಹಿಸುತ್ತದೆ ಕಠಿಣ ಪರಿಶ್ರಮದಿಂದ ಮತ್ತು ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯವಾಗುತ್ತದೆ ಎಂದು ವಿಜಯಪುರ ಅಂಜುಮನ್ ಪ.ಪೂ. ಕಾಲೇಜು ನಿವೃತ್ತ ಪ್ರಾಚಾರ್ಯ ಎಂ ಎ ಅವಟಿ ಹೇಳಿದರು.ಗ್ರಾಮದ ಕಲ್ಪವೃಕ್ಷ ಶಾಲೆಯಲ್ಲಿ ಶನಿವಾರ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ನಡೆದ ವಿವಿಧ ಕ್ರೀಡೆಗಳು ಸಂಸ್ಕೃತಿಕ ಚಟುವಟಿಕೆಗಳಲ್ಲಿ ಜಯಶಾಲಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ವಿಶೇಷ ಸನ್ಮಾನಿತರಾಗಿ ಆಗಮಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟಕ್ಕೂ ಆದ್ಯತೆ ನೀಡಬೇಕು ಮಕ್ಕಳ ಆರೋಗ್ಯಕರ ಜೀವನಕ್ಕೆ ಆಟೋಟ ಪ್ರಾಮುಖ್ಯತೆ ವಹಿಸುತ್ತದೆ. ಸೋತೆನೆಂದು ಸುಮ್ಮನಿದ್ದರೆ ಸಾಧನೆಯ ಹಾದಿ ಸಿಗುವುದಿಲ್ಲ. ಸೋಲು ಗೆಲುವಿನ ಸೋಪಾನ ಎಂದು ತಿಳಿದು ಸತತ ಪ್ರಯತ್ನ ಮಾಡಿದಾಗ ಮಾತ್ರ ಜಯ ಸಿಗಲು ಸಾಧ್ಯವಾಗುತ್ತದೆ ಎಂದರು.ನಂತರ ಹಿರಿಯರಾದ ಎನ್ ಎನ್ ಪಾಟೀಲ್ ಮಾತನಾಡಿ, ಪಾಲಕರು ನಿಮ್ಮ ಮೇಲೆ ಇಟ್ಟಿರುವ ಭರವಸೆಗಳನ್ನು ಹುಸಿ ಹೋಗದಂತೆ ನೋಡಿಕೊಂಡು ಉತ್ತಮ ವ್ಯಾಸಂಗ ಮಾಡಿ ಆದರ್ಶ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕು ಎಂದರು.ನಿವೃತ್ತ ಪ್ರಾಚಾರ್ಯ ಎಂ…

Read More

ದೇವರಹಿಪ್ಪರಗಿ: ಸಂವಿಧಾನದ ಆಶಯಗಳನ್ನು ಅರಿಯುವಂತಾಗಲು ಇಂದಿನ ಜಾಗೃತಿ ಜಾಥಾ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸರ್ಕಾರದ ಆದೇಶದಂತೆ ಜರುಗಿದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.ಸಂವಿಧಾನದ ಆಚರಣೆ ಮತ್ತು ಮಹತ್ವವನ್ನು ಸಾರ್ವಜನಿಕರು ತಿಳಿದುಕೊಳ್ಳಬೇಕಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲ ನಗರ ಪಟ್ಟಣ, ಗ್ರಾಮಗಳಲ್ಲಿ ಸಂಚರಿಸಲಿದೆ ಎಂದರು. ನಂತರ ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಸಂವಿಧಾನ ಜಾಗೃತಿ ಜಾಥಾದ ರಥ ಪಟ್ಟಣ ಪ್ರವೇಶಿಸುತ್ತಿದ್ದಂತೆ ತಹಶೀಲ್ದಾರ ಪ್ರಕಾಶ ಸಿಂದಗಿ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಸ್ವಾಗತಿಸಲಾಯಿತು. ನಂತರ ಟಿಪ್ಪುಸುಲ್ತಾನ ವೃತ್ತದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ನಂತರ ಜಾಥಾದ ರಥ ಮೊಹರೆ ಹಣಮಂತ್ರಾಯ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿಯ ಮೂಲಕ ಕರಿದೇವರ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಸಂಚರಿಸಿ ಬಿ.ಎಲ್.ಡಿ.ಇ ಸಂಸ್ಥೆಯ ಹಳೆಯ ಪ್ರೌಢಶಾಲಾ ಆವರಣ ತಲುಪಿತು.ಇಲ್ಲಿ ಸಂವಿಧಾನದ ಕುರಿತು ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ,…

Read More

ದೇವರಹಿಪ್ಪರಗಿ: ಮಕ್ಕಳ ಮನೋದೈಹಿಕ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳು ಅಗತ್ಯವಾಗಿವೆ ಎಂದು ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಬಿ.ಎಲ್ (ಚಬನೂರ) ಹೇಳಿದರು.ಪಟ್ಟಣದಲ್ಲಿ ಗುರುವಾರ ಜರುಗಿದ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ೧೯ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳ ಸರ್ವಾಂಗೀಣ ವಿಕಾಸದಲ್ಲಿ ಶಿಕ್ಷಣ ಪಾತ್ರ ದೊಡ್ಡದು ಈ ಸಂದರ್ಭದಲ್ಲಿ ಪಾಲಕರು ಹಾಗೂ ಶಿಕ್ಷಕರು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದರು.ಖ್ಯಾತ ವೈದ್ಯ ಆರ್.ಆರ್.ನಾಯಿಕ್, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್. ಬಸವರೆಡ್ಡಿ, ಬಿ.ಕೆ.ಪಾಟೀಲ ಮಾತನಾಡಿದರುಸಂಸ್ಥೆಯ ಅಧ್ಯಕ್ಷ ನಾನಾಗೌಡ ಪಾಟೀಲ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರು ಅಕೀಲ ಬಾಗವಾನ ವರದಿ ವಾಚಿಸಿದರು. ಗ್ರಾಮ ಪಂಚಾಯಿತಿ ಮಾಜಿಸದಸ್ಯ ಶಂಕರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಸ್ಫರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ಜರುಗಿದ ಸಿದ್ದೇಶ್ವರ ಸ್ವಾಮೀಜಿಯವರ ಸಂತನೆಂದರೆ ಎಂಬ…

Read More

ಕೆಂಭಾವಿ: ಸುರಪೂರ ಘಟಕದಿಂದ ಕೂಡಲಗಿಗೆ ಬರುವ ಎಲ್ಲಾ ಬಸ್ ಗಳು ಮುದನೂರ್ ಮುಖಾಂತರ ಕೆಂಭಾವಿಗೆ ಮತ್ತು ಸುರಪೂರದಿಂದ ಬೈಚಬಾಳ್ ದ ವರೆಗೂ ಎಲ್ಲಾ ಬಸ್ ಗಳು ಹುಣಸಗಿವರೆಗೂ ಬಿಡುವಂತೆ ತೆಗ್ಗೆಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.ತೆಗ್ಗೆಳ್ಳಿ ಹಾಗೂ ಶಾಖಾಪೂರ್ ಗ್ರಾಮಸ್ಥರು ದಿನ ನಿತ್ಯವೂ ಹುಣಸಗಿ ಹಾಗೂ ‌ಕೆಂಭಾವಿಗೆ ಹೊಗುತ್ತಾರೆ. ಹೀಗಾಗಿ ತೆಗ್ಗೆಳ್ಳಿ ಹಾಗೂ ಶಾಖಾಪೂರ ಗ್ರಾಮಸ್ಥರು ದಿನ‌ನಿತ್ಯವೂ ಯಾತನೆ ಅನುಭವಿಸುತ್ತಿದ್ದಾರೆ ಎಂಬುದು ಗ್ರಾಮಸ್ಥರ ಅಳಲಾಗಿದೆ. ಪ್ರತಿ ನಿತ್ಯವೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸುಮಾರು ನಾಲ್ಕೈದು ಕಿಲೋಮೀಟರ್ ನಡೆದುಕೊಂಡೇ ಹೋಗಬೇಕಾಗಿದೆ. ಹೀಗಾಗಿ ತೆಗ್ಗೆಳ್ಳಿ ಗ್ರಾಮಸ್ಥರು ಸುರಪೂರದಿಂದ ಬರುವ ಬಸ್ ಗಳು ಹುಣಸಗಿವರೆಗೆ ಸಂಚರಿಸುವಂತೆ ಮನವಿ ಮಾಡಿದ್ದಾರೆ. ಒಂದು ವೇಳೆ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ಈ ಸಂದರ್ಭದಲ್ಲಿ ತೆಗ್ಗೆಳ್ಳಿ ಗ್ರಾಮದ ಮುಖಂಡರಾದ ತಾರಾನಾಥ್ ಇನಾಂದಾರ, ಸಿದ್ದಣ್ಣ ಪಾಸೋಡಿ, ಬಸವರಾಜ್ ಪೂಜಾರಿ, ಭೀಮಶಾ ರೂಗಿ, ನಂದನಗೌಡ ಬೆನಕನಾಳ್, ಮಲ್ಲು ಗೋನಾಲ್, ಸೇರಿದಂತೆ ಹಲವರಿದ್ದರು.

Read More

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಭಾಭವನಕ್ಕೆ ನಗರದ ಪ್ರತಿಷ್ಠಿತ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಮುದ್ದು ಮಕ್ಕಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಸಮಾರಂಭಕ್ಕೆ ಆಗಮಿಸಿ ಎಲ್ಲರ ಗಮನವನ್ನು ಸೆಳೆದರು.ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲರಿಗೆ ಬಸವಾದಿ ಶರಣರ ವಚನಗಳ ಪುಸ್ತಕಗಳನ್ನ ನೀಡಿ ಮುಖ್ಯಮಂತ್ರಿಗಳಿಗೂ ಹಾಗೂ ಸಚಿವರಾದ ಎಂ ಬಿ ಪಾಟೀಲರಿಗೂ ಜಿಲ್ಲೆಯ ಜನತೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.ಮಕ್ಕಳನ್ನು ನೋಡಿ ಸಂತೋಷ ಪಟ್ಟ ಸಚಿವರು ಮಕ್ಕಳೊಂದಿಗೆ ನಿಂತು ಭಾವಚಿತ್ರ ತೆಗೆಸಿಕೊಂಡು ಸಂಭ್ರಮಿಸಿದರು. ನಾಡಿನ ಮನೆ ಮನೆಗಳಲ್ಲಿ ಮತ್ತು ಮಕ್ಕಳ ಹೃದಯದಲ್ಲಿ ವಚನ ಸಾಹಿತ್ಯದ ಸಂಸ್ಕಾರ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಆಕ್ಸ್ಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಓ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್…

Read More