Author: editor.udayarashmi@gmail.com

ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಈ ಭಾಗದ ಲಕ್ಷಾಂತರ ಜನರ ಜೀವನಾಡಿಯಾಗಿದೆ. ಈಗಾಗಲೇ ಯುಕೆಪಿ ಹಂತ-೧ ಮತ್ತು ಹಂತ-೨ ನ್ನು ಯಶಸ್ವಿಯಾಗಿ ನಿರ್ವಹಿಸಿ ೬ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರೊದಗಿಸಲಾಗಿದೆ, ಈಗ ಹಂತ-೩ ರ ಕಾಮಗಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಸವಾಲು ನಮ್ಮ ಮುಂದಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ ಅಭಿಪ್ರಾಯಪಟ್ಟರು.ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಜರುಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಬಹುದಿನಗಳ ಬೇಡಿಕೆಯಾಗಿರುವ ಆಲಮಟ್ಟಿಯ ಎಚ್ಪಿಎಸ್ ಶಾಲೆಯ ಮೈದಾನವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.ವಿಶ್ವದ ಅತಿ ದೊಡ್ಡ ಸಂವಿಧಾನ ಹೊಂದಿದ ಭಾರತದಲ್ಲಿ ಪ್ರತಿ ಪ್ರಜೆಗೂ ಸಮಾನ ಹಕ್ಕು ಮತ್ತು ಘನತೆಯನ್ನು ನೀಡಿದೆ. ಸಂವಿಧಾನದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದು ಕಾನೂನು ಕೃತಿಯನ್ನು ಸ್ವೀಕರಿಸಿದ ದಿನ. ವಿವಿಧ ದೇಶಗಳಿಗೆ ತುಲಾನಾತ್ಮಕವಾಗಿ ಹೊಲಿಸಿ ನೋಡಿದಾಗ ಭಾರತ ದೇಶದ ಸಂವಿಧಾನ ವಿಶ್ವದ ಅತೀ ದೊಡ್ಡ ಸಂವಿಧಾನವಿದೆ. ದೇಶದ ಏಕತೆ, ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸುತ್ತದೆ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡ ೭೭ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವವು ನಮ್ಮ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೆನಪಿಸುತ್ತದೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸುವ ಸಂಕಲ್ಪ ಮಾಡುವುದು ಈ ದಿನದ ನಿಜವಾದ ಮಹತ್ವವಾಗಿದೆ ಎಂದರು.ಪರೇಡನಲ್ಲಿ ಬಾಗವಹಿಸಿದ ಪಿಎಸ್‌ಐ ಆರೀಫ ಮುಷಾಪುರಿ, ಅಗ್ನಿ ಶಾಮಕ ಅದಿಕಾರಿ, ಗೃಹ ರಕ್ಷಕ ದಳ, ಲೋಯಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆರ್.ಡಿ.ಪಾಟೀಲ ಕಾಲೇಜಿನ ರರ‍್ಸ್ ಮತ್ತು ರೆರ‍್ಸ್, ಜ್ಞಾನ ಭಾರತಿ ಪ್ರೌಡಶಾಲೆ, ಕೆಜಿಎಸ್, ಆದರ್ಶ ವಿದ್ಯಾಲಯ ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು.ಕಾರ್ಯಕ್ರಮಕ್ಕೂ ಮುನ್ನ ತಹಶೀಲ್ದಾರ ಕರೆಪ್ಪ ಬೆಳ್ಳಿ ಸಂವಿಧಾನ ಪೀಠಿಕೆ ಓದಿದರು.ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ ಸಾಣಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾಪಂಚಾಯತಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ದೇಶದ ಸ್ವಾತಂತ್ರ‍್ಯ ಹೋರಾಟ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಪ್ರಜಾಸತ್ತಾತ್ಮಕ ಪರಂಪರೆಯನ್ನು ಸ್ಮರಿಸುವ ಅತ್ಯಂತ ಮಹತ್ವದ ದಿನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಂದ ರೂಪುಗೊಂಡಿರುವ ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ‍್ಯ ಮತ್ತು ಭ್ರಾತೃತ್ವ ತತ್ವಗಳ ಮೇಲೆ ನಿಂತಿದ್ದು, ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಮತ್ತು ಗೌರವ ಒದಗಿಸುವ ಶಾಶ್ವತ ದಾಖಲೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೈನಂದಿನ ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಹೊಣೆಗಾರಿಕೆಯನ್ನು ಪಾಲಿಸುವುದೇ ನಿಜವಾದ ರಾಷ್ಟ್ರಭಕ್ತಿ, ಸಾರ್ವಜನಿಕ ಬದುಕಿನಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಜನರ ನಂಬಿಕೆಗೆ ಪಾತ್ರರಾಗುವಂತೆ ಪಾರದರ್ಶಕತೆ ಮತ್ತು ಸೇವಾ ಭಾವನೆಯೊಂದಿಗೆ ಕೆಲಸ ಮಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದರು.ಯುವಜನರು ಸಂವಿಧಾನದ ಆಶಯಗಳನ್ನು ಅರಿತು ದೇಶದ ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಬೇಕು. ಸಾಮಾಜಿಕ ಏಕತೆ, ಸೌಹಾರ್ದತೆ ಹಾಗೂ ಪರಸ್ಪರ ಗೌರವದಿಂದ ಶಕ್ತಿಶಾಲಿ ಭಾರತ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಜಗತ್ತಿನ ಶಕ್ತಿ ಶಾಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಶೇ. ೫೫ ಯುವ ಜನರನ್ನು ಹೊಂದಿರುವ ಸಮೃದ್ಧ ದೇಶ ನಮ್ಮದಾಗಿದೆ ಎಂದು ಪ್ರಾಚಾರ್ಯೆ ಡಾ.ಆರ್.ಎಂ ಮಿರ್ಧೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ೭೭ ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತ ಜಗತ್ತಿಗೆ ಶ್ರೇಷ್ಠ ವಿಜ್ಞಾನಿಗಳನ್ನು, ಸಾಹಿತಿಗಳನ್ನು, ವೈದ್ಯರನ್ನು ನೀಡಿದೆ ನಾವೆಲ್ಲರೂ ಭಾರತಾಂಬೆಯ ಹೆಮ್ಮೆಯ ಮಕ್ಕಳು. ವಿಜ್ಞಾನ-ತಂತ್ರಜ್ಞಾನ, ಕೃಷಿ, ಬಾಹ್ಯಕಾಶ್, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಕೊಡುಗೆ ಅಪಾರ. ನಮ್ಮ ಐಐಟಿ, ವೈದ್ಯಕೀಯ-ತಾಂತ್ರಿಕ ಮಹಾವಿದ್ಯಾಲಯಗಳು ಅನೇಕ ಸಾಧಕರನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿವೆ ಎಂದರು.ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಡಾ.ಅನೀಲ ಭೀ. ನಾಯಕ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಎ ಎಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಬಿ.ಕಮತಿ, ಪಿಯುಸಿ ಪ್ರಾಚಾರ್ಯ ಪ್ರೊ.ಎಸ್. ಜೆ ಜೀರಗಾಳಿ, ಎನ್‌ಸಿಸಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಡಿಜಿಟಲ್ ಸ್ಮಾರ್ಟ್ ತರಗತಿಗಳು ಮಕ್ಕಳ ಭವಿಷ್ಯ ವೃದ್ಧಿಗೆ ತುಂಬಾ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಇದರ ಉಪಯೋಗವನ್ನು ಬಳಕೆ ಮಾಡಿಕೊಳ್ಳುವ ಮೂಲಕ ಇಂದಿನ ತಾಂತ್ರಿಕ ಯುಗಕ್ಕೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಅಂಜುಮನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಮ್.ಪಾಟೀಲ, ಗಣಿಹಾರ ಹೇಳಿದರು.ಸಿಂದಗಿ ಪಟ್ಟಣದ ಅಂಜುಮನ್ ಐಟಿಐ ಕಾಲೇಜಿನಲ್ಲಿ ನಡೆದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಹಾಗೂ ಸೇವಿಂಗ್ ಟೆಕ್ನಾಲಜಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಅಂಜುಮನ್ ಸಂಸ್ಥೆಯ ಅಂಗ ಸಂಸ್ಥೆಗಳಲ್ಲಿ ಒಂದಾದ ಐಟಿಐ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತಹ ವಾತಾವರಣ ನಿರ್ಮಾಣಮಾಡವ ನಿಟ್ಟಿನಲ್ಲಿ ಸಂಸ್ಥೆ ಶ್ರಮವಹಿಸಿದೆ.ಈ ಭಾಗದ ವಿದ್ಯಾರ್ಥಿಗಳಿಗೂ ಪ್ರಸ್ತುತ ಡಿಜಿಟಲ್ ಶಿಕ್ಷಣ ತುಂಬಾ ಅವಶ್ಯವಾಗಿದೆ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ತಾಂತ್ರಿಕ ಕೌಶಲ್ಯಕ್ಕೆ ಪ್ರಸ್ತುತ ಡಿಜಿಟಲ್ ಶಿಕ್ಷಣ ತುಂಬಾ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಹಾಗೂ ಸೇವಿಂಗ್ ಟೆಕ್ನಾಲಜಿ ಸೇರಿದಂತೆ ಎಲ್ಲಾ ವೃತ್ತಿಗಳಿಗೆ ನೂತನ ಯಂತ್ರೋಪಕರಣಗಳ ಸೌಲಭ್ಯವನ್ನು ಒದಗಿಸಲಾಗಿದೆ ವಿದ್ಯಾರ್ಥಿಗಳು ಇದರ ಸದುಪಯೋಗ…

Read More

ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿರುವ ಕಲ್ಯಾಣಿ ಚಾಲುಕ್ಯರ ಕಾಲಘಟ್ಟಕ್ಕೆ ಸೇರಿದ ದೇಗುಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಗಾನಯೋಗಿ ಸಂಘದ ವತಿಯಿಂದ 11ನೇ ಶತಮಾನದ ಪ್ರಾಚೀನ ಶಿವಾಲಯದ ಸ್ವಚ್ಛತಾ ಸೇವೆ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿರುವ ಕಲ್ಯಾಣಿ ಚಾಲುಕ್ಯರ ಕಾಲಘಟ್ಟಕ್ಕೆ ಸೇರಿದ (ಕ್ರಿ.ಶ. 11ನೇ ಶತಮಾನ) ನಕ್ಷತ್ರಾಕಾರದ ವಾಸ್ತುಶೈಲಿಯ ಪ್ರಾಚೀನ ಶಿವ ದೇವಾಲಯ ನಮ್ಮ ಇತಿಹಾಸ ಹಾಗೂ ಶೈವ ಪರಂಪರೆಯ ಅಮೂಲ್ಯ ಸಾಕ್ಷಿಯಾಗಿದೆ. ಕಲ್ಯಾಣಿ ಚಾಲುಕ್ಯರು (ಪಶ್ಚಿಮ ಚಾಲುಕ್ಯರು) ಕಾಲದಲ್ಲಿ, ಸುಮಾರು ಕ್ರಿ.ಶ. 1050–1100ರ ಅವಧಿಯಲ್ಲಿ ನಿರ್ಮಾಣಗೊಂಡಿದೆ ಎನ್ನಲಾದ ಈ ದೇವಾಲಯವು ಚಾಲುಕ್ಯರ ವಾಸ್ತುಶೈಲಿಯ ಉತ್ತಮ ಉದಾಹರಣೆಯಾಗಿದೆ.ಈ ಏಕೂಟ ಶಿವಾಲಯವು ಎತ್ತರವಾದ ಅಧಿಷ್ಠಾನದ ಮೇಲೆ ನಿರ್ಮಿತವಾಗಿದ್ದು, ಎರಡು ಮುಖದ ಮಂಟಪ, ನವರಂಗ, ಅಂತರಾಳ ಮತ್ತು ಲಿಂಗ ಪ್ರತಿಷ್ಠಿತ ಗರ್ಭಗೃಹವನ್ನು ಒಳಗೊಂಡಿದೆ. ದೇವಾಲಯದ ಗೋಡೆಗಳ ಮೇಲೆ ಸೂಕ್ಷ್ಮ ಶಿಲ್ಪಕಲಾ ಕೆಲಸ, ಅಲಂಕಾರಿಕ ಕಂಬಗಳು ಹಾಗೂ ಲತಾಪಾತ್ರ ವಿನ್ಯಾಸಗಳು ಕಂಡುಬರುತ್ತವೆ. ದೇವಾಲಯದ ಹೊರಾಂಗಣ ಶೈಲಿ ಐಹೊಳೆಯ ದುರ್ಗಾ ದೇವಾಲಯದ ಶೈಲಿಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಅಮೋಘಸಿದ್ದನ ಚರಿತ್ರೆ, ಸಾಂಸ್ಕೃತಿಕ ವೈಶಿಷ್ಟ್ಯತೆ, ಅವರ ಆಚಾರ-ವಿಚಾರಗಳು, ಸ್ತ್ರೀ ಅಸ್ತಿತ್ವ, ಆಚರಣೆಗಳ ಕುರಿತಾಗಿನ ವಿವಿಧ ಮಜಲುಗಳನ್ನು ಈ ಕೃತಿಯಲ್ಲಿ ಬಂಡಗರ ಅವರು ಹಾಸುಹೊಕ್ಕಾಗಿಸಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ವಾಂಸ ಡಾ.ಎಫ್ ಟಿ ಹಳ್ಳಿಕೇರಿ ಹೇಳಿದರು.ಶನಿವಾರದಂದು ನಗರದ ಸರಕಾರಿ ನೌಕರರ ಭವನದಲ್ಲಿ ನೆಲೆ ಪ್ರಕಾಶನ ಸಂಸ್ಥೆ ಸಿಂದಗಿ ಹಾಗೂ ಭೀಮಾoತರಂಗ ಸಾಹಿತ್ಯಕ-ಸಾಂಸ್ಕೃತಿಕ ಜಗಲಿ ಕೇಂದ್ರ ಇಂಡಿ ಅವರ ಸಹಯೋಗದಲ್ಲಿ ಚಿದಂಬರ ಬಂಡಗರ ರಚಿಸಿದ ‘ಡಾ.ಚನ್ನಪ್ಪ ಕಟ್ಟಿ:ಹಾಲುಮತದ ಅಧ್ಯಯನಗಳು’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ. ಅದರ ಕುರಿತು ಇನ್ನು ಹೆಚ್ಚು ಸಂಶೋಧನೆಗಳಾಗಬೇಕಾಗಿದೆ. ಹಾಲುಮತ ಸಂಸ್ಕೃತಿ ವಿದೇಶಿಯರು ಮೆಚ್ಚಿ ಅಧ್ಯಯನ ಮಾಡಿ ಹಲವಾರು ಮಹತ್ವಪೂರ್ಣ ಕೃತಿಗಳನ್ನು ರಚಿಸಿದ್ದಾರೆ ಎಂದರು.ಅಧ್ಯಕ್ಷತೆ ವಹಿಸಿದ್ದ ಜಾನಪದ ವಿದ್ವಾಂಸ ಡಾ ಎಂ ಎಂ ಪಡಶೆಟ್ಟಿ ಮಾತನಾಡಿ, 21 ನೇ ಶತಮಾನದ ಈ ಸಂದರ್ಭದಲ್ಲಿ ಪರಂಪರೆ ಒಂದನ್ನು ಮರು ಕಟ್ಟುವಾಗ ಎಲ್ಲ ಜಾಗೃತಿಯನ್ನು ಡಾ.ಕಟ್ಟಿ ಅವರು ವಹಿಸಿದ್ದು ಎದ್ದು ಕಾಣುತ್ತದೆ ಎಂದು…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸದನದಲ್ಲಿ ಸರ್ಕಾರದ ಭಾಷಣ ಓದದೇ ದೇಶದಲ್ಲಿ ಕರ್ನಾಟಕದ ರಾಜ್ಯಪಾಲರು ಹೊಸ ಫ್ಯಾಷನ್ ಆರಂಭಿದ್ದಾರೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.ಶನಿವಾರ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಪರಿಸರದ ಸಿಲ್ವರ್ ಲೇಕ್ ನಲ್ಲಿ ದೋಣಿ ವಿಹಾರಕ್ಕೆ ಚಾಲನೆ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅವರು, ಕೇಂದ್ರ ಸರ್ಕಾರ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರು ತೆಗೆದು ಹಾಕುವ ಜೊತೆಗೆ ಗ್ರಾಮೀಣ ಜನರ ದುಡಿಯುವ ಹಕ್ಕನ್ನು ಕಿತ್ತುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು ತೆಗೆದು ಹಾಕಲಿ ನೋಡೋಣ ಎಂದು ಹರಿಹಾಯ್ದರು.ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡುತ್ತಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಶೇ. 90 ರಷ್ಟು ಅನುದಾನದ ಸ್ಥಗಿತಗೊಳಿಸಿ, ಶೇ.60-40 ಅನುದಾನದ ಯೋಜನೆಗಳನ್ನು ಜಾರಿಗೆ ತಂರುವ ಮೂಲಕ ರಾಜ್ಯಗಳ ಮೇಲೆಯೇ ಭಾರ ಹಾಕುವ…

Read More

ಉದಯರಶ್ಮಿ ದಿನಪತ್ರಿಕೆ ಸೊಲ್ಲಾಪುರ: ಅಕ್ಕಲಕೋಟ ಪ್ರದೇಶವು ಕನ್ನಡದ ಅಸ್ಮಿತೆಯನ್ನು ಇನ್ನೂ ಉಳಸಿಕೊಂಡಿದೆ, ಕನ್ನಡ ನುಡಿಕಟ್ಟುವ ಕೆಲಸ ಗಡಿಭಾಗದಲ್ಲಿ ಖೇಡಗಿ ಸಂಸ್ಥೆ ಮಾಡುತ್ತಿದೆ ಎಂದು ಸಿಂದಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ.ರಮೇಶ ಕತ್ತಿ ಶ್ಲಾಘಿಸಿದರು.ಅವರು ಅಕ್ಕಲಕೋಟ ಪಟ್ಟಣದ ಸಿ.ಬಿ.ಖೇಡಗಿ ಕಾಲೇಜು ಕನ್ನಡ‌ ವಿಭಾಗ ಹಾಗೂ ಪಿ.ಎಂ.ಉಷಾ ಪ್ರಾಯೋಜಕತ್ವದಲ್ಲಿ ಗುರುವಾರ ಹಮ್ಮಿಕೊಂಡ‌ ‘ ಕನ್ನಡ ಭಾಷೆ’ ಕಾರ್ಯಾಗಾರದ‌ ಉದ್ಘಾಟನೆ ಹಾಗೂ ವಿಶೇಷ ಉಪನ್ಯಾಸ ನೀಡಿದರು.ಎರಡು‌ ಸಾವಿರ ವರ್ಷಗಳಿಂದಲೂ ಕನ್ನಡ ಸಾಹಿತ್ಯ ಸಮೃದ್ಧವಾಗಿ ಬೆಳೆಯುತ್ತ, ಇಂದು‌ಜಾಗತಿಕ ಮಟ್ಟದಲ್ಲಿಯೂ ಬೂಕರ್ ಪ್ರಶಸ್ತಿ ಪಡೆಯುವ ಮೂಲಕ ತನ್ನ ಸ್ಥಾನ ಗಟ್ಟಿಯಾಗಿಸಿದೆ, ಅಂತುಹುದೇ ಕೆಲಸವನ್ನು ಇಲ್ಲಿನ ಸಂಸ್ಥೆ ಮಾಡುತ್ತಿದೆ‌ ಎಂದರು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಚಾರ್ಯ ಹಾಗೂ ಕನ್ನಡದ ವಿಭಾಗದ ಮುಖ್ಯಸ್ಥ ಪ್ರೊ. ಗುರುಲಿಂಗಪ್ಪ ಧಬಾಲೆ ‘ಕನ್ನಡ ನುಡಿಯನ್ನು ಅಕ್ಕಲಕೋಟ ಭಾಗದಲ್ಲಿ ಇನ್ನೂ ನಿರರ್ಗಳವಾಗಿ ಮಾತನಾಡುವವರಿದ್ದಾರೆ, ಗಡಿನಾಡಿನಲ್ಲಿ ಕನ್ನಡ ಕಲಿಸುವ, ಶೋಧಿಸುವ ಪ್ರಕ್ರಿಯೆ ಕಳೆದ ೩೦ ವರ್ಷಗಳಿಂದಲೂ ನಮ್ಮ‌ಅಧ್ಯಯನ ಕೇಂದ್ರ ಮಾಡುತ್ತಿದೆ, ನಿರಂತರ ಕನ್ನಡ ಕಾರ್ಯಕ್ರಮಗಳನ್ನು ಸಂಘಟಿಸುವ…

Read More

ಆಲಮಟ್ಟಿ ಶಾಸ್ತ್ರೀ ಸಾಗರದಲ್ಲಿ ಬೋಟಿಂಗ್ ಗೆ ಚಾಲನೆ | ಮಹಾರಾಷ್ಟ್ರ, ಆಂಧ್ರ ಪ್ರವಾಸಿಗರ ಆಕರ್ಷಣೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಿಂದ ನೀರಾವರಿಗೆ ಆದ್ಯತೆ ನೀಡುವ ಜೊತೆಗೆ ಪ್ರವಾಸಿಗರ ಆಕರ್ಷಣೆಯಾಗುವಂತೆ ಬೋಟಿಂಗ್ ಸೇರಿದಂತೆ ಹಲವು ರೀತಿಯ ಅಭಿವೃದ್ಧಿ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿಗೆ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು‌ಶನಿವಾರ ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಪರಿಸರದಲ್ಲಿ ಸಿಲ್ವರ್ ಲೇಕ್ ನಲ್ಲಿ ಬೋಟಿಂಗ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಕ್ ಗಾರ್ಡನ್, ಸೈನ್ಸ್‌ ಗಾರ್ಡನ್ ಸೇರಿದಂತೆ ಹಲವು ಉದ್ಯಾನವನಗಳು ಶೈಕ್ಷಣಿಕ ಅಧ್ಯಯನ ಪ್ರವಾಸಿ ಯೋಗ್ಯತಾಣಗಳಾಗಿ, ಜನಮನ ಗೆದ್ದಿವೆ. ಇದಕ್ಕೆ ಇದೀಗ ಬೋಟಿಂಗ್ ಸೇವೆ ಮರು ಆರಂಭದ ಮೂಲಕ ಆಲಮಟ್ಟಿ ಪ್ರವಾಸಿ ತಾಣದ ವೈಭವ ಹೆಚ್ಚಿಸಿದೆ ಎಂದರು‌ರಾಜ್ಯದ ಮೈಸೂರು ಭಾಗದ ಕೆಆರ್‍ಎಸ್ ನಂತರದ ಉತ್ತರ ಕರ್ನಾಟಕದ ಪ್ರಮುಖ ಪ್ರೇಕ್ಷಣೀಯ ಪ್ರವಾಸಿ ತಾಣವಾದ ಆಲಮಟ್ಟಿ ಸಿಲ್ವರ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ…

Read More