Author: editor.udayarashmi@gmail.com

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಅರುಣ ಇನಾಮದಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಶೋಧನೆ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಅರುಣ ಚಂ. ಇನಾಮದಾರ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಔಷಧ ಮಂಡಳಿ ಮತ್ತು ಭಾರತದ ಔಷಧ ಶಿಕ್ಷಕರ ಸಂಘದ ರಾಜ್ಯ ಶಾಖೆ ಆಯೋಜಿಸಿರುವ ಔಷಧೀಯ ಶಿಕ್ಷಣ, ಸಂಶೋಧನೆ ಮತ್ತು ಉದ್ಯಮದಲ್ಲಿ ಪ್ರಗತಿಗಳು ವಿಷಯ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.ವೈದ್ಯಕೀಯ ಸಂಶೋಧನೆಯಲ್ಲಿ ಸಮಕಾಲೀನ ಪ್ರವೃತ್ತಿಗಳು ಮತ್ತು ಶೈಕ್ಷಣಿಕ ಹಾಗೂ ಉದ್ಯಮದ ನಡುವೆ ಪರಸ್ಪರ ಸಹಯೋಗ ಅಗತ್ಯವಾಗಿದೆ ಎಂದು ಅವರು ಯುವ ಸಂಶೋಧಕರಿಗೆ ಕರೆ ನೀಡಿದರು.ಕರ್ನಾಟಕ ರಾಜ್ಯ ಔಷಧ ಮಂಡಳಿ ಮತ್ತು ಭಾರತದ ಔಷಧ ಶಿಕ್ಷಕರ ಸಂಘದ ರಾಜ್ಯ ಶಾಖೆ ಅಧ್ಯಕ್ಷ ಡಾ. ಎಚ್. ಶಿವಕುಮಾರ ಮಾತನಾಡಿ, ಶಿಕ್ಷಣ…

Read More

ಲೇಖನ- ಡಾ.ಮಲ್ಲಿಕಾರ್ಜುನ ಎಸ್ ಆಲಮೇಲಯಡ್ರಾಮಿಮೋ: 9740499814 ಉದಯರಶ್ಮಿ ದಿನಪತ್ರಿಕೆ ಚೈತ್ರ ಮಾಸ ಅದರ ಇನ್ನೊಂದು ಹೆಸರು ಮಧು ಮಾಸ. ವೇದಗಳಲ್ಲಿ ಚೈತ್ರವನ್ನು ‘ಮಧು ಮಾಸ’ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ, ಋತುಗಳ ರಾಜನೆಂದು ಕರೆಯಲಾಗುವ ವಸಂತ ಋತುವು ತನ್ನ ಪೂರ್ಣ ಯೌವನದಲ್ಲಿರುತ್ತದೆ.ಹೊಸ ಚಿಗುರುಗಳಿಂದ ಮರಗಿಡಗಳು ಹಳೆಯ ಎಲೆಗಳನ್ನು ಉದುರಿಸಿ, ಕೆಂಪು ಮತ್ತು ಗುಲಾಬಿ ಮಿಶ್ರಿತ ಹೊಸ ಚಿಗುರನ್ನು ಧರಿಸುತ್ತವೆ. ಮಾವು – ಬೇವು ಮರಗಳಲ್ಲಿ ಹೂವು ಅರಳಿ ನಳನಳಿಸುತ್ತವೆಪರಿಸರದ ಸೌಂದರ್ಯ ಇಮ್ಮಡಿಗೊಂಡು ಹೂವುಗಳ ಸುಗಂಧದೊಂದಿಗೆ ಪ್ರಾತಃಕಾಲದಿ ಬೀಸುವ ತಂಪಾದ ಗಾಳಿಯು ಮನಸ್ಸಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಕೋಗಿಲೆಯ ಗಾಯನ ಮಾಧುರ್ಯವೂ ಚೈತ್ರದ ಆಗಮನವನ್ನು ಸಾರುತ್ತದೆ.ಇಡಿ ಧರಿತ್ರಿಯು ಮದುವಣಗಿತ್ತಿ ಸಿಂಗಾರಗೊಂಡು ನಯನ ಮನೋಹರವಾಗಿ ಕಂಗೊಳಿಸುವ ಸುಸಮಯವಿದು ಮಧುಮಾಸ – ವಸಂತ ಋತುವಿನ ಸಮ್ಮಿಲನ ಕುರಿತು ಅದೆಷ್ಟು ವರ್ಣಿಸಿದರು ಅಲ್ಪವೆನಿಸುತ್ತದೆ.ನಮ್ಮ ಕರುನಾಡಿನ ಹೆಮ್ಮೆಯ ರಾಷ್ಟ್ರಕವಿ ಕುವೆಂಪು ಅವರ ಒಂದು ಉತ್ಕೃಷ್ಟ ಸಾಹಿತ್ಯವು ಹೀಗಿದೆ ಸುರಲೋಕದ ಸುರವನದಿ ಮಿಂದುಸುರಲೋಕದ ಸಂಪದವ ತಂದುನವ ಸಂವತ್ಸರ ಭೂಮಿಗೆ ಬಂದುಹೊಸ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-574198ದೂ: 9742884160 ಉದಯರಶ್ಮಿ ದಿನಪತ್ರಿಕೆ ಇಂದಿನ ಯುದ್ಧಗಳು ಕೇವಲ ಬಂದೂಕುಗಳ ಮೂಲಕ ನಡೆಯುವ ಬದಲು ಇಡೀ ಮನುಕುಲವನ್ನೇ ಕ್ಷಣಾರ್ಧದಲ್ಲಿ ನಾಶಪಡಿಸುವಂಥ ಅಪಾಯಕಾರಿ ಅಣ್ವಸ್ತ್ರಗಳು ಮತ್ತು ಜೈವಿಕ ಅಸ್ತ್ರಳಂತಹ ಸಮೂಹನಾಶಕ ಅಸ್ತ್ರಗಳನ್ನು ಪ್ರತೀ ದೇಶಗಳು ಒಗ್ಗೂಡಿಸಿ ಇಟ್ಟುಕೊಂಡಿವೆ. ಎಲ್ಲಾದರೂ ವಿವೇಚನೆ ಇಲ್ಲದೇ ಅವುಗಳನ್ನು ಪ್ರಯೋಗಿಸಿದರೆ ಅದರಿಂದ ಶತಮಾನದ ಹಿಂದೆ ಜಪಾನಿನಲ್ಲಿ ಆಗಿರುವ ಯುದ್ಧದ ಭೀಕರತೆಗಿಂತಲೂ ಹಲವು ಪಟ್ಟು ಹೆಚ್ಚಿನ ಪ್ರಮಾಣದ ನಾಶವಾಗುವುದು ದಿಟ. ಇಂತಹ ದುರಂತಕ್ಕೆ ಕಾರಣವಾಗುವ ಯುದ್ಧಕ್ಕೆ ಕೈಹಾಕುವ ಮೊದಲು ಯುದ್ಧದಾಹಿ ದೇಶಗಳು ತಮ್ಮ ದೇಶದ ನಾಗರಿಕರ ಮೇಲೆ ಆಗಬಹುದಾದ ಹಾನಿ ಮತ್ತು ದೇಶದ ಭವಿಷ್ಯದ ಕುರಿತು ಚಿಂತಿಸಬೇಕು. ಬರುವ ಸಮಸ್ಯೆಗಳಿಗೆ ಎಲ್ಲಕ್ಕೂ ಯುದ್ಧವೇ ಪರಿಹಾರ ಅಲ್ಲ ಎನ್ನುವುದನ್ನು ಗತಿಸಿರುವ ಯುದ್ಧ ಪರಿಣಾಮಗಳಿಂದ ಅರಿಯಬೇಕು.ಯುದ್ಧಗಳು ಯಥೇಚ್ಛ ಸಾವುನೋವು, ಆರ್ಥಿಕ ಕುಸಿತ, ಸಾಮಾಜಿಕ ಅಸ್ಥಿರತೆ ಮತ್ತು ಪರಿಸರ ವಿನಾಶವನ್ನು ಉಂಟುಮಾಡುವ ಮಾನವ ನಿರ್ಮಿತ ವಿಪತ್ತಾಗಿದೆ. ಇದು ತಲೆಮಾರುಗಳ ಕಾಲದವರೆಗೆ ಕಾಡುವ ಮಾನಸಿಕ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಇಂಡಿ ತಾಲೂಕಿನ ಚಿಕ್ಕ ಬೇವಿನೂರು ವಲಯದ ಅಹಿರಸಂಗ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ವತಿಯಿಂದ ಮಾಸಾಶನ ಫಲಾನುಭವಿಯಾದ ರೇವೂಬಾಯಿ ಮಠ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ತಾಲೂಕು ಯೋಜನಾಧಿಕಾರಿ ನಟರಾಜ್ ಎಲ್.ಎಂ. ಅವರು ಉದ್ಘಾಟಿಸಿ ಎಲ್ಲರನ್ನು ಸ್ವಾಗತಿಸಿದರು.ಬಳಿಕ ಕಲಬುರಗಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ಡಾ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ವಾತ್ಸಲ್ಯ ಮನೆ ಯೋಜನೆ ನಿರ್ಗತಿಕರಿಗೆ ಆಶ್ರಯ ಕಲ್ಪಿಸುತ್ತಿದೆ. ರಾಜ್ಯದಲ್ಲಿ ಈಗಾಗಲೇ ಸುಮಾರು 800 ವಾತ್ಸಲ್ಯ ಮನೆಗಳನ್ನು ನಿರ್ಮಿಸಲಾಗಿದ್ದು, 18 ಸಾವಿರಕ್ಕೂ ಹೆಚ್ಚು ಜನರಿಗೆ ಮಾಸಾಶನ ನೀಡಲಾಗುತ್ತಿದೆ ಎಂದು ತಿಳಿಸಿದರು. ವಿಜಯಪುರ ಜಿಲ್ಲೆಯಲ್ಲಿ ಕೆರೆಗಳ ಹೂಳೆತ್ತುವಿಕೆ, ಜ್ಞಾನದೀಪ ಶಿಕ್ಷಕರ ನೇಮಕ ಹಾಗೂ ಸುಜ್ಞಾನನಿಧಿ ಶಿಷ್ಯವೇತನ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಯೋಜನೆ ಕೈಗೊಳ್ಳುತ್ತಿದೆ ಎಂದು ವಿವರಿಸಿದರು.ಈ ಸಂದರ್ಭದಲ್ಲಿ ರೇವೂಬಾಯಿ ಮಠ ಅವರಿಗೆ ವಾತ್ಸಲ್ಯ ಮನೆ ಕೀಲಿ ಕೈ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿ ಪುರೋಹಿತ ಸಂಘದ ಸದಸ್ಯರು ತಹಸೀಲ್ದಾರ ಅನೀಲ ಬಡಿಗೇರ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ರಾಜ್ಯದ 31 ಜಿಲ್ಲೆಗಳಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಸಾವಿರಾರು ಅರ್ಚಕರು, ಪುರೋಹಿತರು ಹಾಗೂ ಅಡಿಗೆ ಕಾರ್ಯದಲ್ಲಿ ತೊಡಗಿರುವವರು ಸದಸ್ಯರಾಗಿದ್ದಾರೆ. ಅವರ ಕುಟುಂಬ ಸದಸ್ಯರನ್ನು ಸೇರಿಸಿ ಒಟ್ಟು ಎಂಟು ಲಕ್ಷಕ್ಕಿಂತ ಹೆಚ್ಚು ಜನರು ಈ ವಲಯಕ್ಕೆ ಸೇರಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪುರೋಹಿತರು, ಅರ್ಚಕರು ಹಾಗೂ ಅಡಿಗೆಯವರನ್ನು ಗುರುತಿಸಿ ಲೇಬರ್ ಕಾರ್ಡ್ ನೀಡುವ ವ್ಯವಸ್ಥೆ ಕಲ್ಪಿಸಿ, ಪ್ರತ್ಯೇಕ ಮಂಡಳಿ ರಚಿಸಿದರೆ ರಾಜ್ಯದ ಸುಮಾರು 8 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹೆಚ್ಚಿನ ಅನುದಾನ ಮತ್ತು ಸೌಲಭ್ಯಗಳು ದೊರೆಯಲಿವೆ. ಆದ್ದರಿಂದ ಶೀಘ್ರದಲ್ಲೇ ಪ್ರತ್ಯೇಕ ಮಂಡಳಿ ರಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಇದೇ ವೇಳೆ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ.ಜೆ ಶ್ರೀನಿವಾಸ್‌ ಮೂರ್ತಿ ಅವರನ್ನು ಮಂಡಳಿಯ ಅಧ್ಯಕ್ಷರಾಗಿ ಹಾಗೂ ಸತೀಶ್ ಸಿಂಹ ಎಚ್.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೈದ್ಯಕೀಯ ವೃತ್ತಿಯಲ್ಲಿ ಪ್ರ್ಯಾಕ್ಟಿಸ್ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮನದಲ್ಲಿಡಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ.ಅರುಣ ಚಂ. ಇನಾಮದಾರ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾದ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಕಾನೂನು ವಿಷಯದ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದರು.ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತವಾಗಿ ಪ್ರಾಕ್ಟೀಸ ಮಾಡಲು ಐದು ಪ್ರಮುಖ ನ್ಯಾಯಾಂಗ ಕೇಸುಗಳನ್ನು ಅವರು ಉದಾಹರಣೆಯಾಗಿ ನೀಡಿದರು.ಗ್ರಾಹಕರ ಹಕ್ಕುಗಳು ಸಂಬಂಧ ಭಾರತೀಯ ವೈದ್ಯಕೀಯ ಸಂಘ ವಿರುದ್ಧ ಶಾಂತಾ ಕೇಸ್, ಕ್ರಿಮಿನಲ್ ನಿರ್ಲಕ್ಷ್ಯ ಮಾನದಂಡ ಸಂಬಂಧ ಜಾಕೋಬ್ ಮ್ಯಾಥ್ಯೂ ಪ್ರಕರಣ, ಮಾಹಿತಿಯುಕ್ತ ಒಪ್ಪಿಗೆಕ್ಕೆ ಪೂರಕವಾಗಿ ಸಮಿರಾ ಕೊಹ್ಲಿ ಪ್ರಕರಣ, ಅವಧಿಯ ನಂತರದ ಆರೈಕೆ ಮತ್ತು ದಯಾಮರಣದ ಬಗ್ಗೆ ಇರುವ ಅರುಣಾ ಶಾನ್‌ಬಾಗ್ ಪ್ರಕರಣ ಹಾಗೂ ಪರಿಹಾರ ಮತ್ತು ಹೊಣೆಗಾರಿಕೆ ಬಗ್ಗೆ ಇರುವ ಕುನಾಲ್ ಸಹಾ ಪ್ರಕರಣಗಳ ಕುರಿತು ಅವರು ಸೂಕ್ತ…

Read More

ಉದಯರಶ್ಮಿ ದಿನಪತ್ರಿಕೆ ಗದಗ: ಪಂ.ಪುಟ್ಟರಾಜ ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ, ಗದುಗಿನ ಡಾ ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕವಾಗಿದ್ದಾರೆ.ಸಂಸ್ಕೃತಿ ಚಿಂತಕ, ಪೂಜ್ಯಗುರು ಪುಟ್ಟರಾಜರ ಅಭಿಮಾನಿ ಭಕ್ತ, ಧರ್ಮ ಪ್ರಕಾಶ ಪಾಳೇಗಾರ ಹನುಮಂತಪ್ಪನವರ ಚಿರಂಜೀವಿ, ದಾವಣಗೆರೆಯ ಪ್ರತಿಷ್ಠಿತ, ಶ್ರೀಗಂಧ ರೆಸಿಡೆನ್ಸಿಯ ಮಾಲೀಕರಾದ, ಮಂತ್ರಾಲಯದಿಂದ “ಮಂತ್ರಾಲಯ ಪರಿಮಳ” ಪ್ರಶಸ್ತಿ ಪುರಸ್ಕೃತ, ಖ್ಯಾತ ಉದ್ಯಮಿದಾರ ವಿನಾಯಕ ಪಿ. ಬಿ. ಇವರನ್ನು ನೇಮಕ ಮಾಡಲಾಗಿದೆ ಎಂದು ಡಾ ಪಂ ಪುಟ್ಟರಾಜ ಸೇವಾ ಸಮಿತಿಯ ಪ್ರವರ್ತಕರಾದ ವೇ. ಚನ್ನವೀರಸ್ವಾಮಿ ಹಿರೇಮಠ ,(ಕಡಣಿ) ಶ್ರೀವೀರೇಶ್ವರ ಪುಣ್ಯಾಶ್ರಮ ಗದಗ, ಇವರು ತಿಳಿಸಿದ್ದಾರೆ.ಸುಮಾರು ೫ ವರ್ಷಗಳಿಂದ ಸೇವಾ ಸಮಿತಿಯ ಪೋಷಕರಾಗಿ, ಜಿಲ್ಲಾ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಮತ್ತು ಪುಟ್ಟರಾಜರ ಮಾಸದ ನೆನಪು ಸಂಗೀತ ಶ್ರೀಗಂಧ ಮಾಸಿಕ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿರುವುದನ್ನು ಗಮನಿಸಿ, ಇವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಕೃಷಿ ಪ್ರಧಾನ ಭಾರತ ದೇಶದಲ್ಲಿ ಯುಗಾದಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ಗ್ರಾಮೀಣ ಮೂಲದ ಜನರೇ ಹೆಚ್ಚಾಗಿರುವ ಗ್ರಾಮ ಬದುಕಿನ ಸೊಗಡಿನ ಜನರಿಗೆ ಪ್ರಕೃತಿ ಹಸಿರು ಸಂಪ್ರದಾಯಗಳೆಲ್ಲವೂ ಅವರ ಕೃಷಿ ಬದುಕಿನಲ್ಲಿಯೇ ಕಾಣುತ್ತದೆ.ಅವರ ಭಾಷೆಯಲ್ಲಿ ಯುಗಾದಿ ಎಂಬ ಪದವು ಉಗಾದಿ ಎಂದಾಗಿದೆ ಉಳಿದವರು ವ್ಯಾಪಾರಸ್ಥರಿಗೆ ದೀಪಾವಳಿ ಮುಖ್ಯ ಹಬ್ಬವಾದರೆ ರೈತಾಪಿ ಜನರಿಗೆ ಯುಗಾದಿಯೇ ಮುಖ್ಯ ಹಬ್ಬ.ಚೈತ್ರ ಮಾಸದ ಆರಂಭವನ್ನು ಸೂಚಿಸುವ ಈ ಸಮಯದಲ್ಲಿ ಪ್ರಕೃತಿ ಅತ್ಯಂತ ಸುಂದರವಾಗಿ ಹಸಿರಿನಿಂದ ತುಂಬಿ ಪಲ್ಲವಿಸುತ್ತದೆ. ವಿಶೇಷವಾಗಿ ಮಾವು ಬೇವುಗಳು ಹೂವನ್ನು ಕಾಯಿಗಳನ್ನು ತಮ್ಮಲ್ಲಿ ತುಂಬಿಕೊಂಡು ನೋಡುವವರ ಕಣ್ಣಿಗೆ ಆನಂದವನ್ನು ಉಂಟು ಮಾಡುತ್ತವೆ. ಆಗ ತಾನೆಬಿಟ್ಟ ಎಳೆಯ ಹುಣಸೆ, ಮಾವು ಭತ್ತದ ತೆನೆಗಳು ಹಬ್ಬದ ದಿನ ವಿಶೇಷವಾಗಿ ಪೂಜಿಸಲ್ಪಟ್ಟು ನಂತರ ಬಳಸಲ್ಪಡುತ್ತವೆ.ಭಾರತ ದೇಶದ ಪ್ರತಿ ಹಳ್ಳಿಗಳಲ್ಲೂ ವರ್ಷದ ಮೊದಲ ಹಬ್ಬ ಯುಗಾದಿ ಅತ್ಯಂತ ವೈವಿಧ್ಯಮಯವಾಗಿ ಆಚರಿಸಲ್ಪಡುತ್ತದೆ. ಸರಿಸುಮಾರು ಯುಗಾದಿ ಹಬ್ಬಕ್ಕೆ ಒಂಬತ್ತು ದಿನಗಳ…

Read More

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಒಂದು ದಟ್ಟವಾದ ಕಾಡಿನಲ್ಲಿ ಒಂದು ಸಿಂಹ ಇತ್ತು. ಅದು ತುಂಬಾ ಅಹಂಕಾರದಿಂದ ವರ್ತಿಸುತ್ತಿತ್ತು. ಕಾಡಿನ ಬೇರೆಲ್ಲ ಪ್ರಾಣಿಗಳನ್ನು ಕೀಳಾಗಿ ನೋಡುತ್ತಿತ್ತು. ಒಂದು ದಿನ ಕಾಡಿನಲ್ಲಿ ಸುತ್ತಾಡುತ್ತಿರುವಾಗ ಸಿಂಹದ ಪಂಜಕ್ಕೆ ಚೂಪಾದ ಮುಳ್ಳೊಂದು ಚುಚ್ಚಿತು. ಸಿಂಹಕ್ಕೆ ಮುಳ್ಳು ಚುಚ್ಚಿದ ನೋವಿನಿಂದಾಗಿ ನಡೆಯಲು ಸಾಧ್ಯವಾಗಲಿಲ್ಲ. ಇಲಿಯೊಂದು ಸಿಂಹದ ಸ್ಥಿತಿ ಕಂಡು ಸಹಾಯ ಮಾಡಲು ಬಂದಿತು. ಆದರೆ ಸಿಂಹವು ‘ನಾನು ಕಾಡಿನ ರಾಜ ನಿನ್ನಂಥ ಸಣ್ಣ ಪ್ರಾಣಿಯಿಂದ ಸಹಾಯ ಪಡೆಯುವುದೇ?’ ಎಂದು ಸೊಕ್ಕಿನಿಂದ ಇಲಿಯ ಸಹಾಯವನ್ನು ನಿರಾಕರಿಸಿತು. ಕ್ರಮೇಣ ಅದಕ್ಕೆ ನಡೆಯಲು ಆಗದಂತಾಯಿತು. ಕಾಡಿನಲ್ಲಿ ನರಳುತ್ತಾ ಮೆಲ್ಲನೇ ಅಲೆದಾಡುತ್ತ ಸಹಾಯ ಮಾಡಲು ಯಾರಾದರೂ ಸಿಗುವರೇನೋ ಎಂದು ನೋಡುತ್ತಿತ್ತು. ಆದರೂ ಒಣ ಜಂಭ ಕಡಿಮೆ ಆಗಿರಲಿಲ್ಲ. ಆದರೆ ನೋವು ಹೆಚ್ಚಾದಂತೆ ತಡೆದುಕೊಳ್ಳಲಾರದೇ ತನ್ನ ಅಹಂಕಾರವನ್ನು ಬಿಟ್ಟು ಇಲಿಯನ್ನು ಸಹಾಯ ಮಾಡಲು ಕೇಳಿಕೊಂಡಿತು. ಇಲಿ ತನ್ನ ಚೂಪಾದ ಹಲ್ಲುಗಳಿಂದ ಸಿಂಹದ ಪಂಜದಲ್ಲಿ ಸಿಕ್ಕಿದ್ದ ಮುಳ್ಳನ್ನು ಸುಲಭವಾಗಿ ತೆಗೆದು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಡಾ.ಸಮೃದ್ಧಿ ಗಡ್ಡದ ಅವರು 2025 ನೇ ಸಾಲಿನ ಸೆಪ್ಟೆಂಬರ್ – ಅಕ್ಟೋಬರ್ ತಿಂಗಳಿನಲ್ಲಿ ನಡೆದ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯ ಎಂ ಎಸ್. ಜನರಲ್ ಸರ್ಜರಿ ಯಲ್ಲಿ ಶೇ.81ರಷ್ಟು ಅಂಕ ಪಡೆದು ರಾಜ್ಯದ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ರವರು ನಡೆಸಿದ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು, ಚಿನ್ನದ ಪದಕ ಪಡೆದಿದ್ದಾರೆ.ಡಾ||ಸಮೃದ್ಧಿಯವರು ದಾವಣಗೆರೆಯ ಜಗದ್ಗುರು ಜಯದೇವ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರು ಪ್ರಾಥಮಿಕ ಶಿಕ್ಷಣದಿಂದ ಇಲ್ಲಿಯವರೆಗೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರತಿ ಹಂತದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆಯುತ್ತಾ ಬಂದಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದವರಾಗಿದ್ದು, ರೇವಪ್ಪ ಹಾಗೂ ಮಹಾದೇವಿ ಗಡ್ಡದ ದಂಪತಿಯ ಏಕೈಕ ಸುಪುತ್ರಿಯಾಗಿದ್ದಾರೆ.ಇವರು ದಾವಣಗೆರೆಯ ವೈದ್ಯಕೀಯ ಕಾಲೇಜಿನ ಬಾಪೂಜಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ವೈದ್ಯಕೀಯ ಸೇವೆಯಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ. ಇನ್ನೂ ಹೆಚ್ಚಿನ ವ್ಯಾಸಂಗ ಮಾಡಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಹಂಬಲವನ್ನು ಹೊಂದಿದ್ದಾರೆ. ಇವರ ಈ ಸಾಧನೆಗೆ ಪಾಲಕರು, ಸಂಬಂಧಿಕರು ಬಂಧುಗಳು ಹಾಗೂ ಹಿತೈಷಿಗಳು…

Read More