Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಸರ್ಕಾರದ ಮೇರಾ ಯುವ ಭಾರತ(ಮೈ ಭಾರತ),ಎನ್ ಎಸ್ ಎಸ್ ಜಿಲ್ಲಾ ಘಟಕ, ಭಾರತ ಸೇವಾ ದಳ ವಿಜಯಪುರ ವತಿಯಿಂದ ಭಾರತದ ಮಾಜಿ ಉಪಪ್ರಧಾನಮಂತ್ರಿ ಮತ್ತು ಗೃಹ ಸಚಿವರಾದ ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜನ್ಮಜಯಂತಿ ಅಂಗವಾಗಿ ಜಿಲ್ಲೆಯಲ್ಲಿ ನವೆಂಬರ್ ೧೨ರಂದು ನಡೆಸಲು ಉದ್ದೇಶಿಸಿದ್ದ ರಾಷ್ಟ್ರೀಯ ಏಕತಾ ದಿನವನ್ನು ಕಾರಣಾಂತರಗಳಿಂದ ಮುಂದೂಡಿ ನವೆಂಬರ್ ೧೪ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಮೇರಾ ಯುವ ಭಾರತ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಎಂ.ಗೌತಮ ರೆಡ್ಡಿ ಅವರು ತಿಳಿಸಿದ್ದಾರೆ.ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಶಿವಾಜಿ ವೃತ್ತದಿಂದ ಆರಂಭವಾಗಲಿರುವ ಏಕತಾ ನಡಿಗೆ/ಯೂನಿಟಿ ಮಾರ್ಚ್ ಕಾರ್ಯಕ್ರಮಕ್ಕೆ ವಿಜಯಪುರ ಸಂಸದರಾದ ರಮೇಶ್ ಜಿಗಜಿಣಗಿ ಅವರು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಸೇರಿಂದಂತೆ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದಾರೆ.ನಗರದ ವಿವಿಧ ಕಾಲೇಜುಗಳಿಂದ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ…
ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ವಿಮಾನ ನಿಲ್ದಾಣವು ಂiಡಿbus-೩೨೦ ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. ೬೧೮.೭೫ ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.೯೯.೯ ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು, ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ ವೇ, ಎಪ್ರಾನ, ಐಸೋಲೆಶನ್ ಬೇ, ಕೂಡು ರಸ್ತೆ, ಒಳ ರಸ್ತೆಗಳು, ಇ.ಎಸ್.ಎಸ್. ಕಟ್ಟಡ, ಆರ್ಮರಿ, ಡಾಗ್ ಕೆನಲ್ ಕಟ್ಟಡ, ಕ್ಯಾಂಟೀನ ಕಟ್ಟಡ, ೧೦ ವಾಚ್ ಟವರಗಳು, ಫೈರ್ ಪಿಟ್, ಕೂಲಿಂಗ್ ಪಿಟ್, ಕೆಲವiಟ್ಟದ ಹಾಗೂ ಮೇಲ್ಮಟ್ಟದ ನೀರು ಸಂಗ್ರಹಾಲಯ, ಎಸ್.ಟಿ.ಪಿ, ಪಂಪ್ ಹೌಸ್, ಕಂಪೌಂಡ್ ಗೋಡೆ,…
ರಾಜ್ಯ ನಾಟಕ ಬರಹಗಾರರ (ಕವಿಗಳ ) ಪ್ರಥಮ ವಿಜಯಪುರ ಜಿಲ್ಲಾ ಕವಿ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರದಲ್ಲಿ ಡಿ.25 ರಂದು ಕರ್ನಾಟಕ ರಾಜ್ಯ ನಾಟಕ ಬರಹಗಾರರ (ಕವಿಗಳ) ಸಂಘದ ಜಿಲ್ಲಾ ಘಟಕವು ಹಮ್ಮಿಕೊಂಡಿರುವ ಪ್ರಥಮ ಜಿಲ್ಲಾ ಕವಿ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ದೇವರಹಿಪ್ಪರಗಿ ತಾಲೂಕಿನ ಕಡಕೋಳ ಗ್ರಾಮದ ಕವಿ ಚಂದ್ರಶೇಖರರಾವ್ ಬೈರಿಪಾಟೀಲ (ಧಣಿಗಳು) ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ನಾಟಕ ಬರಹಗಾರರ (ಕವಿಗಳ ) ಸಂಘದ ಜಿಲ್ಲಾ ಅಧ್ಯಕ್ಷ ವಾಯ್.ಎಚ್.ಅಂಗಡಗೇರಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಜರುಗಿತು. ಸಭೆಯಲ್ಲಿ ರಾಜ್ಯ ಸಂಚಾಲಕ ರಾಘವೇಂದ್ರ ಉಮ್ಮರಗಿ, ಗೌರವಾಧ್ಯಕ್ಷ ಸಿದ್ದಪ್ಪ ಅಲಗೋಡ, ಉಪಾಧ್ಯಕ್ಷ ಶಿವಾನಂದ ಡೆಂಗಿ, ಸಂಘಟನಾ ಕಾರ್ಯದರ್ಶಿ ಭೀಮಪ್ಪ ಹೊನವಾಡ, ಕಾರ್ಯದರ್ಶಿ ಗುಂಡು ಕುಂಬಾರ, ಸದಸ್ಯರುಗಳಾದ ಮಲ್ಲಿಕಾರ್ಜುನ ಆಗಸರ, ಸದಾಶಿವ ಕೊಲಕಾರ, ಅನಿಲ ಜಾದವ, ಎಂ. ಎಸ್. ಕರಡಿ, ರವಿ ಚಲವಾದಿ, ಮುತ್ತು ಬಳಗಾನೂರ, ಮಲ್ಲಿಕಾರ್ಜುನ ಮಸಬಿನಾಳ (ಹೆಬ್ಬಾಳ )…
ಕುದರಿಸಾಲವಾಡಗಿ ಗ್ರಾಮದಲ್ಲಿ 29 ದಿನ ಪೂರೈಸಿದ ಅನಿರ್ದಿಷ್ಟಾವಧಿ ಧರಣಿ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ತೆರವುಗೊಳಿಸಿದ 143 ಕ್ಕೂ ಹೆಚ್ಚು ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಖಂಡ ಅಶೋಕಗೌಡ ಪಾಟೀಲ ಅವರ ನೇತೃತ್ವದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸೋಮವಾರ 28 ದಿನಕ್ಕೆ ಕಾಲಿಟ್ಟರೆ, ಅಹೋರಾತ್ರಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿತ್ತು.ಸೋಮವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಮುಖಂಡರಾದ ಡಾ.ಪ್ರಭುಗೌಡ ಲಿಂಗದಳ್ಳಿ, ಅಶೋಕಗೌಡ ಪಾಟೀಲ ಮಾತನಾಡಿ, ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ರಸ್ತೆ ಅಗಲೀಕರಣದಲ್ಲಿ ನಿರಾಶ್ರಿತರ ಹೋರಾಟಕ್ಕೆ ನ್ಯಾಯ ಕೊಡಿಸುವ ಉದ್ದೇಶದಿಂದ ನಿರಂತರವಾಗಿ ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದೇವೆ. ಇದರಲ್ಲಿ ಯಾರ ಮೇಲಿನ ದ್ವೇಷವಾಗಲಿ, ರಾಜಕೀಯವಾಗಲಿ ಎಳ್ಳಷ್ಟು ಇಲ್ಲ. ಬಡವರಿಗೆ ಆದ ಅನ್ಯಾಯವನ್ನು ಸರಿಪಡಿಸುವ ಉದ್ದೇಶ ನಮ್ಮದು.ಈ ಬಡವರು ತಮ್ಮ ಮನೆಗಳನ್ನು ಕಳೆದುಕೊಂಡು ಎರಡು ತಿಂಗಳು ಗತಿಸಿ ಹೋಗಿವೆ. ಕಳೆದ 28 ದಿನಗಳಿಂದ ನಿರಾಶ್ರಿತರು ನಿರಂತರವಾಗಿ ಧರಣಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಬ್ಬ ಪಲಾಯನವಾದಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸುತ್ತಿಲ್ಲ, ಬದಲಾಗಿ ಬರಿ ಹಿಂದು – ಮುಸ್ಲಿಂರ ನಡುವೆ ಬಿರುಕು ಹುಟ್ಟಿಸುವ ಮಾತು ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೇಸ್ ಪಕ್ಷದ ಮುಖಂಡ ಹಮೀದ್ ಮುಶ್ರೀಫ್ ಕಿಡಿಕಾರಿದರು.ನಗರದಲ್ಲಿ ಟಿಪ್ಪು ಸುಲ್ತಾನ ವೃತ್ತದಲ್ಲಿ ಸೋಮವಾರದಂದು ಟಿಪ್ಪು ಸುಲ್ತಾನ್ ಸಂಘಟನೆ ವತಿಯಿಂದ ನಡೆದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರ ಶಾಸಕ ಆರ್.ಎಸ್.ಎಸ್. ಬ್ಯಾನ್ ಕುರಿತು ಮಾತನಾಡುವದನ್ನು ಬಿಟ್ಟು ಆದರೆ ಮಸೀದಿಯಲ್ಲಿ ಧ್ವನಿವರ್ಧಕ ಬ್ಯಾನ್ ಕುರಿತು ಮಾತನಾಡುತ್ತಾರೆ ಎಂದು ದೂರಿದರು.ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಮುಖಂಡ ಶ್ರೀನಾಥ್ ಪೂಜಾರಿ ಮಾತನಾಡಿ, ದೇಶದಲ್ಲಿ ಹಿಂದೆ ಟಿಪ್ಪು ಸುಲ್ತಾನ್ ಅವರನ್ನು ಕಂಡರೆ ಬ್ರಿಟಿಷರು ಅಂಜುತ್ತಿದ್ದರು. ಆದರೆ ಇಂದು ಟಿಪ್ಪು ಸುಲ್ತಾನ್ಗೆ ಬಿಜೆಪಿ ಪಕ್ಷದವರು ಹೆದರುತ್ತಿದ್ದಾರೆ. ಯಾರೇ ಏನೆ ಅಂದರೂ ಟಿಪ್ಪು ಸುಲ್ತಾನ್ ಜಯಂತಿ ನಿಲ್ಲುವದಿಲ್ಲ ಎಂದು ದಿಟ್ಟ ನುಡಿಗಳನ್ನಾಡಿದರು.ಎಂಎಂಡಿಸಿ ಮುಖಂಡ ಬಿ ಎಚ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ಅವರ ೪೦ ಪುಟಗಳ ಸಮಗ್ರ ಸಾಹಿತ್ಯ ಲೋಕಾರ್ಪಣೆ ಸಮಾರಂಭ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಭವನದಲ್ಲಿ ನವೆಂಬರ್ ೧೫ ರಂದು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಮೈಸೂರಿನ ಕುಂದೂರು ಮಠದ ಡಾ. ಶರತ್ಚಂದ್ರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಜರುಗುವ ವಿಚಾರ ಸಂಕಿರಣದಲ್ಲಿ ಡಾ.ವೀರಣ್ಣ ರಾಜೂರ, ಡಾ.ಎಸ್.ಕೆ.ಕೊಪ್ಪಾ, ಡಾ.ಗುರುಪಾದ ಮರಿಗುದ್ದಿ ಡಾ. ಕೆ.ರವೀಂದ್ರನಾಥ, ಡಾ.ಎಫ್.ಟಿ.ಹಳ್ಳಿಕೇರಿ, ಡಾ.ಎಂ.ಎಸ್.ಆಶಾದೇವಿ, ಡಾ.ಹನುಮಾಕ್ಷಿ ಗೋಗಿ ಅವರು ಡಾ.ಕಲ್ಬುರ್ಗಿ ಅವರ ವಿವಿಧ ಸಾಹಿತ್ಯದ ಕುರಿತು ಉಪನ್ಯಾಸ ನೀಡಲಿದ್ದಾರೆ.ಮಧ್ಯಾಹ್ನ ೩ ಗಂಟೆಗೆ ನಡೆಯುವ ಗ್ರಂಥಗಳ ಲೋಕಾರ್ಪಣೆ ಸಮಾರಂಭದಲ್ಲಿ ಭಾಲ್ಕಿಯ ಹಿರೇಮಠ ಸಂಸ್ಥಾನದ ಶ್ರೀ ಮ.ಘ.ಚ. ಬಸವಲಿಂಗ ಪಟ್ಟದೇವರು ದಿವ್ಯ ಸಾನಿಧ್ಯ ವಹಿಸಲಿದ್ದು, ಮೈಸೂರಿನ ಕುಂದೂರು ಮಠದ ಶ್ರೀ ಡಾ.ಶರತ್ಚಂದ್ರ ಸ್ವಾಮಿಗಳ ಸಮ್ಮುಖದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ | ಎಸ್ಪಿ ಕಚೇರಿಗೆ ಬೃಹತ್ ಪ್ರತಿಭಟನಾ ರ್ಯಾಲಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉಗ್ರವಾದಿ ಹಾಗೂ ಗಂಭೀರ ಸ್ವರೂಪದ ಅಪರಾಧಿಕ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಜೈಲಿನಲ್ಲಿ ರಾಜಾತೀಥ್ಯ ನೀಡುವುದು ಬೆಳಕಿಗೆ ಬಂದಿದ್ದು, ಕೂಡಲೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಉಗ್ರವಾದಿಗಳಿಗೆ ರಾಜಾತೀಥ್ಯ ನೀಡುತ್ತಿರುವುದು ಖಂಡನಾರ್ಹ, ಜೈಲುಗಳಲ್ಲಿ ಉಗ್ರವಾದಿಗಳು ರಾಜಾರೋಷವಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳು- ಇವರೆಲ್ಲರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿದೆ. ಇಂಥ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಮೊದಲಾದ ಸೌಲಭ್ಯಗಳನ್ನು…
ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಅಶೋಕ ಯಡಳ್ಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಿಕಾ ರಂಗ ರಾಜಕೀಯ ಅತ್ತೆ-ಸೊಸೆ ಇದ್ದಂತೆ. ಜೊತೆಯಾಗಿ ಮುನ್ನಡೆದಾಗ ಮಾತ್ರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲು ಸಾಧ್ಯ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಪತ್ರಕರ್ತ ಅಶೋಕ ಯಡಳ್ಳಿ ಹೇಳಿದರು.ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಒಟ್ಟು ೨೫ ಸ್ಥಾನಗಳಿಗೆ ಅವರೋಧ ಆಯ್ಕೆಗೆ ಸಾಕಷ್ಟು ಶ್ರಮ ವಹಿಸಿದರೂ ಕೊನೆಗೆ ೨೪ ಪದಾಧಿಕಾರಿಗಳು ಅವಿರೋಧ ಆಯ್ಕೆಯಾದರು. ಆದರೆ ಅಧ್ಯಕ್ಷ ಸ್ಥಾನಕ್ಕೆ ಕೊನೆ ಘಳಿಗೆವರೆಗೆ ಪ್ರಯತ್ನಿಸಿದರೂ ಚುನಾವಣೆ ನಡೆಸುವ ಅನಿವಾರ್ಯ ಸ್ಥಿತಿ ನಿರ್ಮಾಣವಾಯಿತು ಎಂದರು.ಚುನಾವಣೆಗೆ ಹೋಗುವ ಮುನ್ನ ನಾವು ಅವರೊಂದು ನಾವೊಂದು ಪೆನಲ್ ರೀತಿ ಚುನಾವಣೆ ಎದುರಿಸಿಲ್ಲ. ಪತ್ರಕರ್ತರು ಎಲ್ಲರೂ ನಾವು ಒಂದೇ ಕುಟುಂಬದ ಸದಸ್ಯರಂತೆ ಇದ್ದೇವೆ ಎಂದು ಪ್ರತಿಪಾದಿಸಿದರು.ಜಿಲ್ಲೆಯ ಪತ್ರಕರ್ತರು ಸಮಾಜದ ವಿವಿಧ ಕ್ಷೇತ್ರಗಳ ಮುಖಂಡರನ್ನು ಒಳಗೊಂಡು ಎಲ್ಲರನ್ನು…
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಉದಯರಶ್ಮಿ ದಿನಪತ್ರಿಕೆ ಧಾರವಾಡ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಅವಕಾಶ ವಂಚಿತ ಹಾಗೂ ನಾಡಿನ ಮಕ್ಕಳ ಪಾಲಿನ ಕಾಮಧೇನುವಾಗಿ ಮಕ್ಕಳಿಗಾಗಿ ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮಗಳು ನಿಜಕ್ಕೂ ಅರ್ಥಪೂರ್ಣವಾಗಿದ್ದು ಮಕ್ಕಳ ಬದುಕಿಗೆ ಹೊಸ ತಿರುವು ನೀಡಲು ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ತುಂಬಾ ಅರ್ಥಪೂರ್ಣವಾಗಿವೆ. ಜೊತೆಗೆ ಈ ದಿನದಿಂದ 15 ದಿನಗಳವರೆಗೆ ರಾಜ್ಯದ 31 ಜಿಲ್ಲೆಗಳ ಬಾಲ ಮಂದಿರ ಮಕ್ಕಳಿಗಾಗಿ ಏರ್ಪಡಿಸಿರುವ ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರವು ನಿಜಕ್ಕೂ ಮಾದರಿಯಾದ ಕಾರ್ಯಕ್ರಮ. ನೀವು ಇಲ್ಲಿ ವಿಶೇಷವಾದ ಸ್ಪೂರ್ತಿಯನ್ನು ಪಡೆದು ನಿಮ್ಮ ಬದುಕನ್ನ ಬದಲಾಯಿಸಿಕೊಳ್ಳಿ ಮತ್ತು ರೂಪಿಸಿಕೊಳ್ಳಿ ಇಂಥ ಪರಿಸರ ಸ್ನೇಹಿ ರೆಸಾರ್ಟ್ ನಲ್ಲಿ ಮಕ್ಕಳಿಗಾಗಿ ನಿಸರ್ಗದ ಮಡಿಲಲ್ಲಿ ಏರ್ಪಡಿಸಿರುವ ಈ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣವಾದದ್ದು ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ ಹೇಳಿದರು.ಅವರು ಕರ್ನಾಟಕ ಬಾಲ ವಿಕಾಸ ಅಕಾಡೆಮಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾಳೆ ಬುಧವಾರದಿಂದ ವಿಜಯಪುರ ನಗರದಿಂದ- ತೆಲಸಂಗ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಗ್ರಾಮೀಣ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಿದೆ.ವಿದ್ಯಾರ್ಥಿಗಳು, ಸಾರ್ವಜನಿಕರು, ರೈತರು ಹಾಗೂ ಕಾರ್ಮಿಕರ ಸಂಚಾರಕ್ಕೆ ಅನುಕೂಲವಾಗಲುಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಕ್ರಮ ಕೈಗೊಂಡಿದ್ದು, ಈ ಹೊಸ ಬಸ್ ಸೇವೆ ಪ್ರಾರಂಭಿಸುತ್ತಿದ್ದಾರೆ.ಒಂದು ಬಸ್ಸು ಪ್ರತಿದಿನ ವಿಜಯಪುರದ ಸೆಟಲೈಟ್ ಬಸ್ ನಿಲ್ದಾಣದಿಂದ ತಿಕೋಟಾ, ರಾಮಪುರ, ಹೊನವಾಡ ಮಾರ್ಗವಾಗಿ ತೆಲಸಂಗ(ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮ)ಕ್ಕೆ ಎಂಟು ಟ್ರಿಪ್ (ಎಂಟು ಸಲ) ಸಂಚರಿಸಲಿದೆ.ಮತ್ತೊಂದು ಬಸ್ಸು ತೆಲಸಂಗದಿಂದ ಹೊನವಾಡ, ರಾಮಪುರ, ತಿಕೋಟಾ ಮಾರ್ಗವಾಗಿ ವಿಜಯಪುರ ನಗರ ಸೆಟಲೈಟ್ ಬಸ್ ಬಸ್ ನಿಲ್ದಾಣಕ್ಕೆ ಪ್ರತಿ ದಿನ ಎಂಟು ಟ್ರಿಪ್(ಎಂಟು ಸಲ) ಸಂಚರಿಸಲಿದೆ.ಬುಧವಾರ ಬೆಳಿಗ್ಗೆ…
