Author: editor.udayarashmi@gmail.com

ಕೊಲೆ ಪ್ರಕರಣದಲ್ಲಿ ನ್ಯಾಯವಾದಿ ಹೆಸರು | ನ್ಯಾಯಾಲಯದಿಂದ ಪೊಲೀಸ್ ಅಧೀಕ್ಷಕರ ಮೇಲೆ ಪ್ರಕರಣ ದಾಖಲು! ವಿಜಯಪುರ: ವಿಜಯಪುರದಲ್ಲಿ ಹಿಂದೆ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದುರುದ್ದೇಶಪೂರ್ವಕವಾಗಿ ನ್ಯಾಯವಾದಿ ಸೈಯ್ಯದ ಆಸೀಫುಲ್ಲಾ ಖಾದ್ರಿ ಹೆಸರು ಸೇರ್ಪಡೆಗೊಳಿಸಿ ಬೇಕಾಯ್ದೆ ಬಂಧನ ಮಾಡಿ, ಮಾನವ ಹಕ್ಕುಗಳ ಉಲ್ಲಂಘನೆಯಾಗಿರುವ ಕುರಿತು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರಿಂದ ವಿಜಯಪುರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತನಿಖೆ ನಡೆಸುವಂತೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ನಿರ್ದೇಶನ ನೀಡಿದ್ದು, ಈ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಜಿಲ್ಲಾ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.ವಿಜಯಪುರ ನಗರದಲ್ಲಿ ಹಿಂದೆ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದುರುದ್ದೇಶಪೂರ್ವಕವಾಗಿ ನ್ಯಾಯವಾದಿ ಸೈಯ್ಯದ್ ಆಸೀಫುಲ್ಲಾ ಖಾದ್ರಿ ಅವರ ಹೆಸರು ಸೇರ್ಪಡೆ ಮಾಡಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿರುವ ಕುರಿತು ನ್ಯಾಯವಾದಿ ಖಾದ್ರಿ ಅವರು ನ್ಯಾಯಾಲಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರನ್ನು ಆಧರಿಸಿ ಪ್ರಕರಣದ ತನಿಖೆ ನಡೆಸುವಂತೆ ವಿಜಯಪುರ ಪ್ರಧಾನ ಜಿಲ್ಲಾ…

Read More

ಜನಪ್ರಿಯ ಬಜೆಟ್ :ಮುಶ್ರೀಪ್ ವಿಜಯಪುರ: “ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ೧೫ನೇ ಐತಿಹಾಸಿಕ ಬಜೆಟ್ನಲ್ಲಿ ಸರ್ವಜನಾಂಗದ ಶಾಂತಿಯ ಮಂತ್ರದ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಬರಪೀಡಿತ ವಿಜಯಪುರ ಜಿಲ್ಲೆಗೂ ಉತ್ತಮ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿಯಾಗಿ ೯೪ ಕೋಟಿ ರೂಪಾಯಿಗಳನ್ನು ನೀಡಿದ್ದಾರೆ. ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್ ಸ್ಥಾಪನೆ, ನಮ್ಮ ಬಾಗದ ಕನಸಿನ ಯೊಜನೆಯಾದ ತೋಟಗಾರಿಕೆ ಕಾಲೆಜು ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳನ್ನು ನೀಡಿದ್ದಾರೆ.” – ಅಬ್ದುಲ್ ಹಮೀದ್ ಮುಶ್ರೀಪ್ಕೆಪಿಸಿಸಿ ಸದಸ್ಯರು.

Read More

ವಿಜಯಪುರ: “ಬಡವರ, ಹಿಂದುಳಿದವರ ಆಶಾಕಿರಣ ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ಸರ್ವ ಜನಾಂಗದ ಏಳ್ಗೆಗೆ ಬದ್ಧವಾಗಿದೆ. ಸಾಮಾಜಿಕ ನ್ಯಾಯದಡಿ ಅಚಲ ನಂಬಿಕೆ ಇಟ್ಟು ಸಾಗುತ್ತಿರುವ ಅವರು ನೀರಾವರಿ, ನಗರಾಭಿವೃದ್ಧಿ, ಸೇರಿದಂತೆ ಎಲ್ಲ ಇಲಾಖೆಗಳಿಗೆ ಸೂಕ್ತ ಅನುದಾನ ನೀಡುವ ಮೂಲಕ ಜನಹಿತದೃಷ್ಟಿಯಿಂದ ಅನೇಕ ಜನಪರ ಯೋಜನೆಗೆ ಆದ್ಯತೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆ ಭಾಗ್ಯ ಕಲ್ಪಿಸಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಬದ್ಧತೆ ಪ್ರದರ್ಶಿಸಿದ್ದಾರೆ. ಹಾಸ್ಟೆಲ್ ಹೆಚ್ಚಳ, ಹೊಸ ಬಂದರು, ಸ್ಕಿಲ್ ಅಕಾಡೆಮಿ ಸ್ಥಾಪನೆ ಸೇರಿ ಅನೇಕ ಹೊಸ ಘೋಷಣೆ ಮಾಡಿದ್ದಾರೆ. ತಮ್ಮ ಆರ್ಥಿಕ ಜ್ಞಾನದ ಅಪಾರ ಅನುಭವದಿಂದ ದೂರದೃಷ್ಟಿಯ ಅಭಿವೃದ್ಧಿಪರ, ರಚನಾತ್ಮಕ ಬಜೆಟ್ ಮಂಡಿಸಿರುವುದು ಸ್ವಾಗತಾರ್ಹ.” – ದಿನೇಶ ಹಳ್ಳಿಉಪ ಪೌರರು, ವಿಜಯಪುರ ಮಹಾನಗರ ಪಾಲಿಕೆ.

Read More

ಆಲಮೇಲ: “ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ನೀರಾವರಿ ಅಲ್ಲದೆ ಆರೋಗ್ಯಕ್ಕೂ ಆದ್ಯತೆ ನೀಡುವ ಮೂಲಕ ಮುಖ್ಯಮಂತ್ರಿಗಳು ತಮ್ಮ ಆರ್ಥಿಕ ಜ್ಞಾನವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.100 ಹೊಸ ಅಬ್ದುಲ್ ಕಲಾಂ ಶಾಲೆಗಳು, ಹಜ್ ಭವನಕ್ಕೆ 100 ಕೋಟಿ ಅನುದಾನ, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ಅಲ್ಲದೆ ಬೀದರನ ಸಿಕ್ಕರ ಯಾತ್ರಾ ಸ್ಥಳ ಅಭಿವೃದ್ಧಿ, ಜೈನ ಸಮೂದಾಯದ ಅಭಿವೃದ್ಧಿಗೂ ಅನುದಾನ ಘೋಷಿಸಿ ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.ಅಲ್ಲದೆ ವಾರಣಾಸಿ, ಮಂತ್ರಾಲಯ, ಶ್ರೀಶೈಲ, ಗುಡ್ಡಾಪುರ ಮುಂತಾದ ಹೊರರಾಜ್ಯದ ಯಾತ್ರಾಸ್ಥಳಗಳಲ್ಲಿ ಕರ್ನಾಟಕದ ಭಕ್ತರಿಗೆ ಅನುಕೂಲವಾಗುವ ದೃಷ್ಟಿಯಿಂದ ಲಾಡ್ಜ್ ಗಳ ನಿರ್ಮಾಣವನ್ನೂ ಘೋಶಿಸಿದ್ದಾರೆ.ನಮ್ಮ ಆಲಮೇಲ ಭಾಗಕ್ಕೆ ಬಹು ನಿರೀಕ್ಷಿತ ತೋಟಗಾರಿಕೆ ಮಹಾವಿದ್ಯಾಲಯ ಘೋಷಣೆಯಾಗಿದ್ದು, ಇದರಿಂದ ಈ ಭಾಗದ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಉತ್ತೇಜನದೊಂದಿಗೆ ತಾಲೂಕಿನ ಅಭಿವೃದ್ಧಿಯಾಗುವುದು. ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರಾಗಿ ರಾಜಕೀಯ ಕಾರಣಗಳಿಂದಾಗಿ ಸ್ಥಳಾಂತರಗೊಂಡಿದ್ದ ಕಾಲೇಜನ್ಬು, ಮರಳಿ ತರುವಲ್ಲಿ ಶಾಸಕ ಅಶೋಕ ಮನಗೂಳಿ ಅವರು ಯಶಸ್ಸಿಯಾಗಿದ್ದಾರೆ.” – ಡಾ ಸಮೀರ ಹಾದಿಮನಿವೈದ್ಯರು, ಆಲಮೇಲ

Read More

ವಿಜಯಪುರ: ಮಕ್ಕಳ ಕುತೂಹಲ, ಆಸಕ್ತಿ, ಬುದ್ಧಿಮತ್ತೆ, ಸೃಜನಶೀಲತೆಗೆ ಈ ವಸ್ತು ಪ್ರದರ್ಶನ ಕನ್ನಡಿಯಾಗಿತ್ತು. ಮಕ್ಕಳ ಕಲಿಕೆಯಲ್ಲಿ ಉತ್ಸಾಹ-ಹುಮ್ಮಸ್ಸು, ಕುತೂಹಲ ಬೆಳೆಸುವಲ್ಲಿ ಇಂತಹ ವಸ್ತು ಪ್ರದರ್ಶನಗಳು ಪುಷ್ಟಿ ನೀಡುತ್ತವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ನಗರದ ಪದ್ಮಾoಜಲಿ ಸ್ಕೂಲ್ಸ್ ವತಿಯಿಂದ ಹಮ್ಮಿಕೊಂಡ ‘ಜ್ಞಾನ ಅನ್ವೇಷಣೆ ಪ್ರದರ್ಶನ’ ಶೀರ್ಷಿಕೆಯಡಿಯಲ್ಲಿ ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಚಿಂತನೆ-ಆಲೋಚನೆ ಕೌಶಲ್ಯ ಬೆಳೆಯುತ್ತದೆ.ಅವರ ಕಲ್ಪನೆಗಳಿಗೆ ಮೂರ್ತರೂಪ ಸಿಗುತ್ತದೆ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ಪಡೆಯುವಲ್ಲಿ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವಲ್ಲಿ ಈ ವಸ್ತು ಪ್ರದರ್ಶನ ಪರಿಪೂರ್ಣವಾಗಿದೆ ಎಂದು ಹೇಳಿದರು.ನಿರ್ಣಾಯಕಿ ಸುಜಾತಾ ಮಮದಾಪುರ ಮಾತನಾಡಿದರು.ಶಾಲಾ ಮುಖ್ಯ ಶಿಕ್ಷಕಿ ಆರ್ ಆರ್ ಕೋರೆ ಮಾತನಾಡಿದರು.ನಿರ್ಣಾಯಕರಾಗಿ ಜಯಶ್ರೀ ಪಾಟೀಲ, ವಿ ಆರ್ ಕಟ್ಟಿ ಕಾರ್ಯ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ಅನಿತಾ ಸೊನ್ನಗಿ,ಶಿಕ್ಷಕರಾದ ಅನಿಲಕುಮಾರ ನಾಯಿಕ, ಅಶ್ವಿನಿ ಬಿರಾದಾರ, ಪ್ರಮೋದಾ ಬಿರಾದಾರ, ಶ್ವೇತಾ ಆಕಳವಾಡಿ,ಶೋಭಾ ನಿಂಬರಗಿ,…

Read More

ವಿಜಯಪುರ: “ಸಿಎಂ ಸಿದ್ದರಾಮಯ್ಯ 15ನೇ ಬಾರಿ ರೂ.3,71,383 ಕೋಟಿ ಗಾತ್ರದ ಬಜೆಟ್‌ ಮಂಡಿಸಿದ್ದಾರೆ. ಮೀನುಗಾರರಿಗೆ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗಾಗಿ 3೦೦೦ ಕೋಟಿ ರೂಪಾಯಿಗಳಷ್ಟು ಬೃಹತ್‌ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಹೊನ್ನಾವರ ತಾಲೂಕಿನ ಮಂಕಿ ಕಾಸರ್ಕೋಡಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ , ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ, ಆಕ್ವಾ ಪಾರ್ಕ್‌ ಸ್ಥಾಪನೆ , ಮುರುಡೇಶ್ವರದಲ್ಲಿ ಸುಸಜ್ಜಿತ ಹೊರಬಂದರು ನಿರ್ಮಾಣ, ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿಯ ಮೀನುಗಾರಿಕೆಯ ಪರಿಹಾರ 1500 ರೂ ಗಳಿಂದ 3000 ರೂಪಾಯಿಗಳಿಗೆ ಏರಿಕೆ ಮಾಡಿದ್ದಾರೆ. ಅಪಘಾತ ಅಥವಾ ಅವಘಡಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆ್ಯಂಬುಲೆನ್ಸ್‌‌ ವ್ಯವಸ್ಥೆ ಮಾಡಿರುವುದು ನಿಜಕ್ಕೂ ಮೆಚ್ಚವಂತದ್ದು. ವಿವಿಧ ವಸತಿ ಯೋಜನೆಯಡಿಯಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಘೊಷಣೆಯಾಗಿರುವ ಈ ಯೋಜನೆಗಳು ಕೇವಲ…

Read More

ವಿಜಯಪುರ: ರಾಜ್ಯ ಬಜೆಟ್ ಸಂಪೂರ್ಣ ಸಪ್ಪೆಯಾಗಿದ್ದು, ಅಭಿವೃದ್ಧಿಯನ್ನು ಪ್ರತಿಬಿಂಬಿಸುವ ಯಾವ ಯೋಜನೆಯೂ ಇಲ್ಲ. ಕೇವಲ ಘೋಷಣೆ, ಘೋಷಣೆಗೆ ಸೀಮಿತವಾಗಿದೆ ಹೊರತು ಅನುಷ್ಠಾನದ ಯಾವ ಉಲ್ಲೇಖವೂ ಇಲ್ಲ, ಕೇವಲ ಹಿಂದಿನ ಯೋಜನೆಗಳ ಪುನರಾವರ್ತನೆ, ವಿನಾಕಾರಣ ಕೇಂದ್ರದ ಮೇಲೆ ಬೊಟ್ಟು ತೋರಿಸುವ ಮೂಲಕ ಒಂದು ರೀತಿ ರಾಜಕಾರಣದ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಬರದಿಂದ ನಲುಗುತ್ತಿರುವ ರೈತರಿಗೆ ಯಾವ ಅನುಕೂಲಕಾರಿ ಯೋಜನೆ ರೂಪಿಸಿಲ್ಲ, ವಿಜಯಪುರ ಜಿಲ್ಲೆಗಂತೂ ಈ ಬಜೆಟ್ ನಲ್ಲಿ ದೊಡ್ಡ ಅನ್ಯಾಯವಾಗಿದೆ, ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಯಾವ ಮಹತ್ವದ ನಿರ್ಧಾರವಿಲ್ಲ, ಪ್ರವಾಸೋದ್ಯಮ, ವಿಜಯಪುರ ಮಹಾನಗರ ಪಾಲಿಕೆಗೆ ವಿಶೇಷ ಅನುದಾನ ಹೀಗೆ ಯಾವುದಕ್ಕೂ ಬಜೆಟ್ ನಲ್ಲಿ ಘೋಷಣೆ ಮಾಡಿಲ್ಲ, ಜನರ ಆಶ್ವಾಸನೆ ಯಾವುದೂ ಈಡೇರಿಲ್ಲ, ಕೇವಲ ಘೋಷಣೆ ಅಧಿಕವಾಗಿವೆ. ಜಿಲ್ಲೆಯ ರೈತರಿಗೆ, ದ್ರಾಕ್ಷಿ ಬೆಳೆಗಾರರಿಗೆ, ಕಬ್ಬು ಬೆಳೆಗಾರರಿಗೆ ಉತ್ತೇಜಿಸುವ ನಿಟ್ಟಿನಲ್ಲಿ ಯಾವ ಕಾರ್ಯಕ್ರಮಗಳು ಇಲ್ಲ, ಎಲ್ಲರಿಗೂ, ಎಲ್ಲ ವಲಯಕ್ಕೂ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ. ಕೇವಲ ಒಂದು ಸಮುದಾಯಕ್ಕೆ ಓಲೈಕೆಯ ರೀತಿಯಲ್ಲಿ ಅನುದಾನ ಮೀಸಲಿರಿಸಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್ ಆಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಅದರಲ್ಲೂ ನಮ್ಮ ತವರು ಜಿಲ್ಲೆಯಾದ ವಿಜಯಪುರದ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು, ಇಟ್ಟಂಗಿಹಾಳದ ಬಳಿ ಆಹಾರ ಪಾರ್ಕ್ ಮತ್ತು ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಘೋಷಿಸಿರುವುದಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಮರ್ಪಿಸುತ್ತೇನೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಇದು ಸಿದ್ದರಾಮಯ್ಯನವರ ದಾಖಲೆಯ ಬಜೆಟ್ ಆಗಿದೆ. ಭಾರತದ ಶಾಸಕಾಂಗ ಇತಿಹಾಸದಲ್ಲಿ 15 ಬಾರಿ ಬಜೆಟ್ ಮಂಡಿಸಿರುವವರು ತೀರಾ ಕಡಿಮೆ ಇದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬಜೆಟ್ಟಿನಲ್ಲಿ ಶಕ್ತಿಶಾಲಿ ಕರ್ನಾಟಕ ನಿರ್ಮಾಣದ ತಮ್ಮ ದೂರದೃಷ್ಟಿಯನ್ನು ರಾಜ್ಯದ ಜನತೆಯ ಮುಂದಿಟ್ಟಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.ಕೃಷಿ, ರೈತರ ಸಬಲೀಕರಣ, ಕೈಗಾರಿಕೆ, ಮೂಲಸೌಕರ್ಯ, ಆಧುನಿಕ ಉದ್ಯಮಗಳಿಗೆ ಒತ್ತು, ಉದ್ಯೋಗಸೃಷ್ಟಿಯ ಕಡೆಗೆ ಗಮನ, ಶ್ರೀಶೈಲ, ಮಂತ್ರಾಲಯದಂತಹ ಪುಣ್ಯಕ್ಷೇತ್ರಗಳಲ್ಲಿ ಸೌಲಭ್ಯ…

Read More

ವಿಜಯಪುರ: “ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಹಣಕಾಸು ಸಚಿವರಾಗಿ ಅತಿ ಹೆಚ್ಚು ಬಾರಿ ಜನಪರ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರವಾದ ಬಜೆಟ್ ಮಂಡಿಸುವುದರ ಮೂಲಕ ಎಲ್ಲ ವರ್ಗದ ಜನರಿಗೂ ನ್ಯಾಯ ಕಲ್ಪಿಸುವ ಪ್ರಯತ್ನ ಮಾಡಿದ್ದಾರೆ. ರಾಜ್ಯದ ಜನರಿಗೆ ವಿವಿಧ ಭಾಗ್ಯಗಳನ್ನು ಕರುಣಿಸಿರುವ ಈ ಭಾಗ್ಯವಿಧಾತ ಅದು ಹೇಗೆ ಈ ರಾಜ್ಯವನ್ನು ಮುನ್ನಡೆಸಬಲ್ಲರು? ಎನ್ನುವ ಕುತೂಹಲಗಳೆಲ್ಲಕ್ಕೂ ತಮ್ಮ ಅಪಾರವಾದ ಆರ್ಥಿಕ ಕ್ಷೇತ್ರದ ಅನುಭವವನ್ನು ದಾರೆಯೆರೆದು ಜನಮುಖಿ ಬಜೆಟ್ ನ್ನು ಮಂಡಿಸಿದ್ದಾರೆ. ವಿಶೇಷವಾಗಿ ಬಸವ ನಾಡು ವಿಜಯಪುರ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲರ ವಿನಂತಿಯ ಮೇರೆಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳ ಈ ಜನಪರ ಬಜೆಟ್ ಗೆ ನಾನು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.” – ಸಂಗಮೇಶ ಬಬಲೇಶ್ವರಮುಖ್ಯ ವಕ್ತಾರರು, ಕೆಪಿಸಿಸಿ ಪ್ರಚಾರ ಸಮಿತಿ, ಬೆಂಗಳೂರು

Read More

’ವ್ಯಕ್ತಿ – ವ್ಯಕ್ತಿತ್ವ’ ಅಂಕಣ ಬರಹ ವಿಜಯ ಕರ್ನಾಟಕ” ಪತ್ರಿಕೆಯ “ಹೆಲ್ತ್ ಎಕ್ಸಲೆನ್ಸ್ 2024″ ಪ್ರಶಸ್ತಿ ಪುರಸ್ಕೃತ ಇವರು ವೃತ್ತಿಯಲ್ಲಿ ವೈದ್ಯರು, ಪ್ರವೃತ್ತಿಯಲ್ಲಿ ಸಮಾಜ ಸೇವಕರು. ಅದಕ್ಕಾಗಿ ಆರಿಸಿಕೊಂಡ ಮಾರ್ಗ ರಾಜಕಾರಣ. ರಾಜಕಾರಣಕ್ಕೆ ಬರುವವರು ಹಣ ಮಾಡಲು ಎಂಬ ಅಪವಾದಕ್ಕೆ ವಿರುದ್ಧವಾಗಿ ತಾವು ಕಷ್ಟಪಟ್ಟು ದುಡಿದ ಅಪಾರ ಹಣವನ್ನು ಸಮಾಜಸೇವೆಗೆ ಸುರಿದವರಿವರು. ಇಂತಹ ಅಪರೂಪದ ವ್ಯಕ್ತಿತ್ವ ಹೊಂದಿದವರು ಡಾ.ಗೌತಮ್ ಆರ್ ಚೌಧರಿ ಅವರು.”ವೈದ್ಯೋ ನಾರಾಯಣ ಹರಿ” ಉಕ್ತಿಗೆ ಬದಲು ಬಡ ರೋಗಿಗಳಲ್ಲೇ ದೇವರನ್ನು ಕಾಣುವ ಸಹೃದಯಿ ಇವರು. ವಿಜಯಪುರ ಜಿಲ್ಲೆಯ ಕಡುಬಡತನದ ಅನೇಕ ರೋಗಿಗಳನ್ನು ತಮ್ಮ ಸ್ವಂತ ವೆಚ್ಚದಲ್ಲಿ ಬೆಂಗಳೂರಿಗೆ ಕರೆದೊಯ್ದು ಅವರಿಗೆ ಅಗತ್ಯವಿದ್ದ ಲಕ್ಷಾಂತರ ರೂ. ವೆಚ್ಚದ ಶಸ್ತ್ರಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ನೆರವೇರಿಸಿ ಆ ಕುಟುಂಬಗಳ ಬಾಳಿಗೆ ಬೆಳಕಾದ ಇವರು ಪ್ರಚಾರದಿಂದ ಗಾವುದ ದೂರವಿರುವವರು. ವೈದ್ಯಕೀಯ ರಂಗದಲ್ಲಿ ಇವರ ಇಂತಹ ಸಮರ್ಪಣಾ ಭಾವದ ಸೇವೆಯನ್ನು ಗುರುತಿಸಿಯೇ ಇತ್ತೀಚೆಗೆ ನಾಡಿನ ಖ್ಯಾತ ದಿನಪತ್ರಿಕೆ “ವಿಜಯ ಕರ್ನಾಟಕ” ಪತ್ರಿಕೆ ಬಳಗವು ಇತ್ತೀಚೆಗೆ ಇವರಿಗೆ…

Read More