Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯಪುರದ ಭೈರವ ನಗರದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ರ್ಯಾಂಕ್ ಪಡೆದಿರುವುದಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ವಸತಿ ನಿಲಯದ ವಿದ್ಯಾರ್ಥಿಯಾದ ಕುಮಾರ ಅಬೂಬಕರ್ ಕೊಲ್ಹಾರ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ನ್ಯೂಟ್ರಿಶಿಯನ್ನಲ್ಲಿ ೩ನೇ ರ್ಯಾಂಕ್, ಮನಶಾಸ್ತ್ರ ವಿಷಯದಲ್ಲಿ ೮ನೇ ರ್ಯಾಂಕ್ ಪಡೆದಿದ್ದಾರೆ. ಕುಮಾರ ನಬೀಸಾ ಬಾವಾಸಾ ವಾಲಿಕಾರ ನರ್ಸಿಂಗ್ ಫೌಂಡೇಶನ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ೮ನೇ ರ್ಯಾಂಕ್ ಹಾಗೂ ಕುಮಾರ ವಸೀಮ ಶೇಖ ಇವರು ನರ್ಸಿಂಗ್ ಫೌಂಡೇಶನ್ನಲ್ಲಿ ವಿಶ್ವವಿದ್ಯಾಲಯಕ್ಕೆ ೧೦ನೇ ರ್ಯಾಂಕ್ ಪಡೆದು, ಸಾಧನೆ ಮಾಡಿದ್ದು, ಇವರ ಸಾಧನೆಗೆ ತಾಲೂಕಾ ವಿಸ್ತರಣಾಧಿಕಾರಿ ಎಸ್.ಎ.ಜಮಾದಾರ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಯೋಜನೆಯಡಿ ಜಿಲ್ಲಾ ಮಿಷನ್ ಸಂಯೋಜಕರು ಹಾಗೂ ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರಸಿ & ಅಕೌಂಟೆಂಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ : ೨೬-೦೨-೨೦೨೪ರೊಳಗಾಗಿ ಸಲ್ಲಿಸಬೇಕು. ಹುದ್ದೆಗಳಿಗೆ ಸಲ್ಲಿಸಬೇಕಾದ ಅರ್ಹತೆ ನಿಗದಿತ ವಿದ್ಯಾರ್ಹತೆ ಹಾಗೂ ಅನುಭವ , ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಚೇರಿ ದೂ:೦೮೩೫೨-೨೯೫೩೫೩ ಸಂಖ್ಯೆಗೆ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್, ಸರ್ಕಾರಿ ಗ್ರಂಥಾಲಯ, ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಿದ್ಧಾಪುರ(ಕೆ) ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತಿಗೆ ಭೇಟಿ ನೀಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆ, ಸ್ವಚ್ಛ ಭಾರತ ಮಿಷನ್(ಗ್ರಾ), ೧೫ನೇ ಹಣಕಾಸು, ತೆರಿಗೆ ವಸೂಲಾತಿ ಸೇರಿ ವಿವಿಧ ಅನುದಾನಗಳು, ಹಾಗೂ ಕುಡಿಯುವ ನೀರಿನ ಕುರಿತು, ಬೀದಿ ದೀಪಗಳ ನಿರ್ವಹಣೆ ಸೇರಿ ವಿವಿಧ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಮಹಾತ್ಮ ಗಾಂಧಿ ನರೇಗಾ ಯೋಜನೆಯ ದಾಖಲಾತಿಗಳನ್ನು ಹಾಗೂ ಕಾಮಗಾರಿ ಕಡತಗಳು ಸೇರಿದಂತೆ ವಿವಿಧ ಕಡತಗಳನ್ನು ಪರಿಶೀಲನೆ ಮಾಡಿದರು.ಗ್ರಾಮದಲ್ಲಿರುವ ಸರ್ಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿನ ಡಿಜಿಟಲ್ ವ್ಯವಸ್ಥೆಯನ್ನು ವೀಕ್ಷಿಸಿದರು. ನಂತರ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಶಾಲಾ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಆಟದ ಮೈದಾನ ಹಾಗೂ ಭೋಜನಾಲಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಮೆಚ್ಚುಗೆ…
ಬ್ರಹ್ಮದೇವನಮಡು: ಖಾಸಗಿ ಶಾಲೆಗಳ ಹಾವಳಿ ಹೆಚ್ಚಾಗಿನಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗಿ ರಾಜ್ಯದಲ್ಲಿ ಸುಮಾರು ೨೮೦೦ ಸರಕಾರಿ ಶಾಲೆಗಳು ಸಂಪೂರ್ಣವಾಗಿ ಮುಚ್ಚುವ ಹಂತ ತಲುಪಿದೆ, ಜಿಲ್ಲಾ ಶಿಕ್ಷಣ ಅಧಿಕಾರಿಗಳು ಅನಧಿಕೃತ ಕೋಚಿಂಗ್ ಶಾಲೆಗಳನ್ನು ಮುಚ್ಚಿಸಲು ಮುಂದಾಗದೆ ಇದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ದಲಿತ ಯುವ ಮುಖಂಡ ಪಿಂಟು ಹೊಸಮನಿ ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾಸಾಬಾಳ ಎಚ್.ಎಸ್ .ಪಿ ಶಾಲೆಯಲ್ಲಿ ಸುಮಾರು ಎರಡು ನೂರು ವಿದ್ಯಾರ್ಥಿಗಳ ಹಾಜರಾತಿ ಇದ್ದು, ಅದರಲ್ಲಿ ಬಹುತೇಕ ವಿದ್ಯಾರ್ಥಿಗಳು ಗ್ರಾಮದ ಅನಧಿಕೃತ ಕೋಚಿಂಗ್ ಸೆಂಟರೊಂದರಲ್ಲಿ ಓದುತ್ತಿದ್ದಾರೆ ವಿದ್ಯಾರ್ಥಿಗಳು ಸರಕಾರದ ಮೂಲ ಸೌಕರ್ಯದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಕೋಚಿಂಗ್ ಸೆಂಟರ್ ಬಂದ ಮಾಡಿಸಿ ಸರಕಾರಿ ಶಾಲೆಗಳು ಬೆಳೆಯಲು ಕೈ ಜೋಡಿಸಿ ಎಂದು ತಾಲೂಕ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನೆಯಾಗಿಲ್ಲ. ಕೂಡಲೆ ಡಿ ಡಿ ಪಿ ಐ ಅವರು ಮುತುವರ್ಜಿ ವಹಿಸಿ ಅನಧಿಕೃತ ಕೋಚಿಂಗ್ ಸೆಂಟರಗಳನ್ನು ಬಂದ ಮಾಡಿಸಬೇಕು ಎಂದು…
ಸಿಂದಗಿ: ನಮ್ಮ ಜೀವನದ ಗುರಿ ಸಾಧನೆಗೆ ಯೋಗ್ಯ ಗುರುಗಳ ಅವಶ್ಯವಿದೆ ಎಂದು ವಿಜಯಪುರ ಧಾಮದ ಹೃದಯ ರೋಗ ತಜ್ಞ ಡಾ.ಗೌತಮ ವಗ್ಗರ್ ಹೇಳಿದರು.ಪಟ್ಟಣದ ಬಂದಾಳ ರಸ್ತೆಯಲ್ಲಿರುವ ವಿವೇಕ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡ ವಿವೇಕ ಸಿರಿ ಸಂಭ್ರಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗುರುಗಳ ಸೂಕ್ತ ಮಾರ್ಗದರ್ಶನದಲ್ಲಿ ನಾವು ಗುರಿ ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳು ಗುರಿಯ ಕಡೆಗೆ ಗಮನ ಕೊಟ್ಟು ಗುರುವಿನ ಮಾರ್ಗದರ್ಶನದಲ್ಲಿ ಸಾಧನೆ ಮಾಡಿ ಸಾಧಕರಾಗಬೇಕು ಎಂದು ಸಲಹೆ ನೀಡಿದರು.ಈ ವೇಳೆ ಕಿಡ್ನಿ ತಜ್ಞೆ ಡಾ.ಮೋನಿಕಾ ಮಾತನಾಡಿ ಸ್ವಾಮಿ ವಿವೇಕಾನಂದರ ಹೆಸರನ್ನಿಟ್ಟುಕೊಂಡ ವಿವೇಕ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಅವರ ತತ್ವಾದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು ಎಂದರು.ಇದೇ ಸಂದರ್ಭದಲ್ಲಿ ಮೇಕರ್ ಸುಧೀರ್ ಕೃಷ ಪೂಜಾರಿ, ಪ್ರಾಂಶುಪಾಲೆ ಶಾಹಿಮೋಲ್ ರಾಬಿನ್ ಅವರು ವಾರ್ಷಿಕ ವರದಿ ವಾಚನ ಮಾಡಿದರು.ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಹೆಗ್ಗನದೊಡ್ಡಿ, ಆಡಳಿತಾಧಿಕಾರಿ ಟೆನಿ ರಾಬಿನ್, ಸಂಸ್ಥಾಪಕ ಎ.ಆರ್.ಹೆಗ್ಗನದೊಡ್ಡಿ ವೇದಿಕೆಯ ಮೇಲಿದ್ದರು.ಈ ವೇಳೆ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ…
ಸಿಂದಗಿ: ಸಮಾನತೆ, ಮಾನವತಾವಾದ, ಸಮಾಜವಾದ ಹಾಗೂ ಧರ್ಮ ನಿರಪೇಕ್ಷದಂತಹ ಮೌಲ್ಯಗಳನ್ನು ಸಂವಿಧಾನ ಜನರಿಗೆ ಕೊಡುಗೆಯಾಗಿ ನೀಡಿದೆ ಎಂದು ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ಶಶಿಧರ ಅವಟಿ ಹೇಳಿದರು.ಗುರುವಾರದಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಿಂದಗಿ ಪುರಸಭೆ ಕಾರ್ಯಾಲಯ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಭಾರತ ಸಂವಿಧಾನವು ಐದು ಪ್ರಮುಖ ಮೌಲ್ಯಗಳಾದ ಸ್ವಾತಂತ್ರ್ಯ, ಏಕತೆ, ಭ್ರಾತೃತ್ವ, ಸಮಾನತೆ ಮತ್ತು ಸಹೋದರತ್ವ ನೀಡುವ ಮೂಲಕ ಪ್ರಪಂಚದಲ್ಲಿ ವಿಶೇಷ ಸ್ಥಾನಮಾನ ಹೊಂದಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳನ್ನು ಕುರಿತು ಜಾಗೃತಿ ಮೂಡಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಿಯುವ ಉದೇಶದಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ಪ್ರತಿಯೊಬ್ಬ ವ್ಯಕಿಯು ಸಂವಿಧಾನ ಪೀಠಿಕೆಯನ್ನು ಅರಿಯಬೇಕು ಎಂದು ಹೇಳಿದರು.ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಸಂವಿಧಾನ ಪಿಠೀಕೆಯನ್ನು ಬೋಧಿಸಿದರು. ಎಸ್.ಕೆ.ಬಿರಾದಾರ ಸರಕಾರದ ಐದು ಗ್ಯಾರಂಟಿಗಳ ಬಗ್ಗೆ ಮಾತನಾಡಿದರು. ಸಂವಿಧಾನ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ವಿವಿಧ ಸ್ಪರ್ಧೆಯಲ್ಲಿ…
ವಿಜಯಪುರ: ವಸತಿ ನಿಲಯಗಳ ಅವ್ಯವಸ್ಥೆ ಹಾಗೂ ವಸತಿ ನಿಲಯಗಳ ನಿರ್ವಹಣೆಯ ಅನುದಾನ ದುರುಪಯೋಗ ಪಡಿಸಿಕೊಂಡವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ರಕ್ಷಣಾ ವೇದಿಕೆ (ರಿ) ಶೋಷಿತ ಜನಾಂಗಗಳ ಒಕ್ಕೂಟ ಜಿಲ್ಲಾ ಸಮತಿ ವತಿಯಿಂದ ವಿಜಯಪುರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಮಾನವರ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದಲಿತ ರಕ್ಷಣಾ ವೇದಿಕೆ ಶೋಷಿತ ಜನಾಂಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧರ್ಮರಾಜ ಎಸ್. ಸಾಲೋಟಗಿ ಮಾತನಾಡಿ, ಇಂಡಿ ಹಾಗೂ ಚಡಚಣ ತಾಲೂಕಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಮೇಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಇಲ್ಲದೆ, ಅವ್ಯವಸ್ಥೆಯ ಕುರಿತು ಹಾಗೂ ವಸತಿ ನಿಲಯಗಳ ನಿರ್ವಹಣೆಗಾಗಿ, ಯಂತ್ರೋಪಕರಣ, ಪೀಠೋಪಕರಗಳ ಖರೀದಿಗಾಗಿ ಬಂದಿರುವ ಅನುದಾನ ದುರುಪಯೋಗವಾಗಿರುವ ಬಗ್ಗೆ ಹಾಗೂ ವಸತಿ ನಿಲಯಗಳಿಗೆ ಜನತಾ ಬಜಾರದಿಂದ ಆಹಾರ ಧಾನ್ಯಪಡೆದುಕೊಳ್ಳದೆ ಅಂಗಡಿಯಿಂದ ಖರೀದಿಸುತ್ತಿರುವ ಬಗ್ಗೆ ತನಿಖೆ ನಡಿಸಿ ಕ್ರಮ ಕೈಗೊಳ್ಳುವ ಕುರಿತು ಈಗಾಗಲೇ ಇಂಡಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು…
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಶ್ರೀ ಬಸವೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿಧ್ಯಾಲಯದಲ್ಲಿ ಸಂತ ಸೇವಾಲಾಲ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಪ್ರಾಚಾರ್ಯ ಸಿ ಎಸ್ ಹಿರೇಮಠ, ಮುಖ್ಯಗುರು ಜಗದೀಶ ಗುಮಶೆಟ್ಟಿ, ಎಸ್ ಪಿ ರಾಣಗಟ್ಟಿ, ಕಂಠಿರವ ದೇಸಾಯಿ, ನಿಂಗನಗೌಡ ಗುಂಡಕನಾಳ, ಬಿ ಜಿ ಚನಗೊಂಡ, ವಿಶ್ವನಾಥ ಸಿಂದಗಿ, ಎಸ್ ಎಸ್ ಕೊರವಾರಮಠ ಸೇರಿದಂತೆ ಇತರರು ಇದ್ದರು.
ವಿಜಯಪುರ: ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿ ಅಧಿಕ ಇಳುವರಿ ಪಡೆಯಬಹುದು ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕರಾದ ಡಾ. ಬಾಲರಾಜ ರಂಗರಾವ ಹೇಳಿದರು.ಅವರು ಜಿಲ್ಲಾ ಕೃಷಿ ತರಬೇತಿ ಕೇಂದ್ರ ವಿಜಯಪುರದಲ್ಲಿ ೨೦೨೩-೨೪ ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಸೂಕ್ಷ್ಮ ನೀರಾವರಿ)-ಕೇಂದ್ರ ಪುರಸ್ಕೃತ ಯೋಜನೆಯಡಿ ಸೂಕ್ಷö್ಮ ನೀರಾವರಿ ಘಟಕಗಗಳ ಉಪಯೋಗಗಳು ಮತ್ತು ನಿರ್ವಹಣೆ ವಿಷಯದ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಹಾಯಕ ಕೃಷಿ ನಿರ್ದೇಶಕಕಿ ಶ್ರೀಮತಿ ವಿಜಯಲಕ್ಷ್ಮೀ ಎಸ್. ಚವ್ಹಾಣ, ಮಾತನಾಡಿದರು.ತರಬೇತಿಯಲ್ಲಿ ನೀರಿನ ಮಿತ ಬಳಕೆ, ವಿವಿಧ ಬೆಳೆಗಳಲ್ಲಿ ನೀರಿನ ಅವಶ್ಯಕತೆ, ವಿವಿಧ ಬೆಳೆಗಳಲ್ಲಿ ವಿವಿಧ ನೀರಾವರಿ ಪದ್ಧತಿಗಳು, ಸೂಕ್ಷ್ಮ ನೀರಾವರಿ ಘಟಕಗಗಳ ಭಾಗಗಳ ಕಾರ್ಯವೈಖರಿ ಮತ್ತು ನಿರ್ವಹಣೆ ಕುರಿತು ವಿವಧ ಅತಿಥಿ ಉಪನ್ಯಾಸಕ ತಜ್ಞರ ಮೂಲಕ ಮಾಹಿತಿ ನೀಡಲಾಯಿತು.ಎಮ್.ಆರ್. ಮೈದರಗಿ , ಲಿಂಗರಾಜ ತಾಳಿಕೋಟಿ ಮತ್ತು ಶ್ರೀಮತಿ ಗೀತಾ ಭಜಂತ್ರಿ ಉಪಸ್ಥಿತರಿದ್ದರು. ಫಾತಿಮಾಬಾನು ಸುತಾರ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಲಕ್ಷ್ಮೀ ಕಾಮಗೊಂಡ…
ವಿಜಯಪುರ: ಕೆಐಎಡಿಬಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಫೆ.೧೭ರಂದು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ೩೩/೧೧ ಕೆವ್ಹಿ ಹೊನ್ನುಟಗಿ ಮತ್ತು ೩೩/೧೧ ಕೆವ್ಹಿ ನಾಗಠಾಣ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಹಾಗೂ ೧೧೦/೧೧ ಕೆವ್ಹಿ ಕೆಐಎಡಿಬಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಅಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
