Author: editor.udayarashmi@gmail.com

ವಿಜಯಪುರ ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ ವಿಜಯಪುರ:ಸಮಾಜದಲ್ಲಿನ ಕಂದಾಚಾರಗಳನ್ನು ಹೊಡೆದೊಡಿಸಲು ತಮ್ಮದೆಯಾದ ಚಿಂತನೆಗಳನ್ನು ನೀಡಿದ ಸಂತ ಸೇವಾಲಾಲರು ವಾಸ್ತವಿಕ ಜಗತ್ತಿನಲ್ಲಿ ಬದುಕಿದ ದಾರ್ಶನಿಕ ವ್ಯಕ್ತಿ ಎಂದು ಉಪನ್ಯಾಸಕಿ ಅನುಪಮಾ ಪಿ. ಹೇಳಿದರು.ಅವರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.ಸೇವಾಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ದರಾಗಿದ್ದರು ಎಂದರು.ಕಾರ್ಯಕ್ರಮದಲ್ಲಿ ತಹಶಿಲ್ದಾರ ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಪುಂಡಲಿಕ್ ಮಾನವರ, ಮಹನಾಗರ ಪಾಲಿಕೆಯ ಸುಮಿತ್ರ ರಾಜು ಜಾಧವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಯ್ಯುಬ್ ದ್ರಾಕ್ಷಿ, ಮಾಜಿ ಶಾಸಕರರಾದ ಮನೋಹರ್ ಐನಾಪೂರ, ರಾಜಪಾಲ ಚವ್ವಾಣ, ಕೇಶವ ಗಂಗಾರಾಮ ರಾಠೋಡ, ಧನಸಿಂಗ ಮಾಹಾರಾಜ,…

Read More

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸಿಕೊಂಡು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಾಹನ ಸವಾರರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಬೇಕು. ರಸ್ತೆಗಳ ಸುಧಾರಣೆ ಮಾಡಬೇಕು. ವೈಜ್ಞಾನಿಕವಾಗಿ ರಸ್ತೆಗಳನ್ನು ನಿರ್ಮಿಸಬೇಕು. ಅಪಘಾತ ತಡೆಗೆ ಸಂಬಂಧಿಸಿದ ಇಲಾಖೆಗಳು ಪೂರ್ವ ಸಿದ್ಧತಾ ಕ್ರಮ ತೆಗೆದುಕೊಂಡು ಅಪಘಾತ ತಡೆಗೆ ಕ್ರಮವಹಿಸಬೇಕು ಎಂದು ಹೇಳಿದರು.ಅಪಘಾತಗಳು ತಡೆ ನಿಟ್ಟಿನಲ್ಲಿ ಪೂರ್ವ ಯೋಜನೆ ರೂಪುರೇಷೆ ಸಿದ್ಧಪಡಿಸಿಕೊಂಡು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ದಿಶೆಯಲ್ಲಿ ಕಾರ್ಯ ನಿರ್ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ…

Read More

ದೇವರಹಿಪ್ಪರಗಿ: ಸಂತ ಸೇವಾಲಾಲರ ಆದರ್ಶಗಳು ಹಾಗೂ ಅವರು ಬೆಳೆದು ಬಂದ ಸರಳತೆಯ ಹಾದಿ ಇಂದಿಗೂ ಕೂಡ ನಮ್ಮೇಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದು ಮುಳಸಾವಳಗಿ ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ ಹೇಳಿದರು.ತಾಲ್ಲೂಕಿನ ಮುಳಸಾವಳಗಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜರುಗಿದ ಸಂತ ಸೇವಾಲಾಲರ ೨೮೫ನೇ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಸವಶರಣ ಸಂಗಮ ಸೇವಾ ಸಮೀತಿಯ ತಾಲ್ಲೂಕಾಧ್ಯಕ್ಷ ಸಂಗಣ್ಣ ತಡವಲ್, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿ, ಸಂತ ಸೇವಾಲಾಲರು ಉಪದೇಶಿಸಿದ ಜೀವನದ ವಿಶಿಷ್ಟ ತತ್ವಗಳು ಎಲ್ಲರಿಗೂ ದಾರಿದೀಪವಾಗಿವೆ ಇವುಗಳನ್ನು ನಾವೆಲ್ಲ ಪಾಲಿಸೋಣ ಎಂದರು.ಮುಖ್ಯಗುರು ಎ.ಕೆ.ಜಾಲವಾದ ಪ್ರಾಸ್ತಾವಿಕವಾಗಿ ಮಾತನಾಡಿದರು.ಎಸ್‌ಡಿಎಮ್‌ಸಿ ಅಧ್ಯಕ್ಷ ಹೀರು ಲಮಾಣಿ, ಸಮುದಾಯದ ಮುಖಂಡ ಸುರೇಶ ರಾಠೋಡ, ಗ್ರಾಮ ಪಂಚಾಯಿತಿ ಸದಸ್ಯ ದಯಾನಂದ ರಾಠೋಡ, ಪಿಕೆಪಿಎಸ್ ನಿರ್ದೇಶಕ ರಮೇಶ ರಾಠೋಡ, ಲಕ್ಷö್ಮಣ ಜಾಧವ, ಎಸ್.ಜಿ.ತಾವರಖೇಡ, ಗೊಲ್ಲಾಳ ಬಿರಾದಾರ, ಎಸ್.ಆರ್.ನಂದ್ಯಾಳ, ಬಸವರಾಜ ಶಿವಣಗಿ, ಬಿ.ಡಿ.ಪಾಟೀಲ ಸೇರಿದಂತೆ ತಾಂಡಾದ ಪ್ರಮುಖರು ಹಾಗೂ ಶಾಲಾ ಮಕ್ಕಳು ಇದ್ದರು.

Read More

ವಿಜಯಪುರ: ಭೂತನಾಳ ಕೆರೆಯಲ್ಲಿ ನೀರು ಖಾಲಿ ಆಗಿದ್ದರಿಂದ, ನಗರದ 5 ವಾರ್ಡ್ ಗಳಿಗೆ ನೀರು ಸರಬರಾಜು ಮಾಡಲು ಆಗುತ್ತಿದ್ದ ಸಮಸ್ಯೆ ನೀಗಿಸಲು, ಭೂತನಾಳ ತಾಂಡಾ ಬಳಿ ಹಾದು ಹೋಗಿರುವ ಅಕ್ವಾಡೆಕ್ ದಿಂದ ಭೂತನಾಳ ಕೆರೆಗೆ ತಾತ್ಕಾಲಿಕವಾಗಿ ನೀರು ಹರಿಸಲು ಟ್ಯಾಪಿಂಗ್ ವ್ಯವಸ್ಥೆ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಗುರುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗಮನಸೆಳೆಯಲಾಗಿತ್ತು. ಅಲ್ಲದೆ, 2023 ಡಿ.30 ರಂದು ಕೆ.ಬಿ.ಜೆ.ಎನ್.ಎಲ್ ವ್ಯವಸ್ಥಾಪಕ ನಿರ್ದೇಶಕರಿಗೂ ಪತ್ರ ಬರೆಯಲಾಗಿತ್ತು. ಇದೀಗ ಅಕ್ವಾಡೆಕ್ ದಿಂದ ಭೂತನಾಳ ಕೆರೆಗೆ ನೀರು ಹರಿಸಲು ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್. ನಂ.4, 5, 6, 10, 12 ಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಅನುಕೂಲವಾಗುತ್ತದೆ.2023 ಡಿಸೆಂಬರ್ 2 ರಿಂದ ಲಿಂಗದಳ್ಳಿ ಗ್ರಾಮದ ಬಳಿಯ ಜ್ಯಾಕ್ ವೆಲ್ ನಲ್ಲಿ ಕೃಷ್ಣಾ…

Read More

ದೇವರಹಿಪ್ಪರಗಿ: ತಾಲ್ಲೂಕು ನಿವೃತ್ತ ನೌಕರರ ಸಂಘದ ಕಾರ್ಯಚಟುವಟಿಕೆಗಳಿಗಾಗಿ ಸೂಕ್ತ ನಿವೇಶನ ನೀಡುವಂತೆ ಆಗ್ರಹಿಸಿ ಪದಾಧಿಕಾರಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಸದಯ್ಯನಮಠದಲ್ಲಿ ಬುಧವಾರ ಜರುಗಿದ ಮಾಸಿಕಸಭೆಯಲ್ಲಿ ಸೇರಿದ ಸಂಘದ ಸದಸ್ಯರು ತಮ್ಮ ಸಂಘದ ಕಾರ್ಯಚಟುವಟಿಕೆಗಳಿಗಾಗಿ ಕಾರ್ಯಾಲಯದ ಅಗತ್ಯತೆಯನ್ನು ಚರ್ಚಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿ.ಕೆ.ಕುದರಿ ಮಾತನಾಡಿ, ರಾಜ್ಯಮಟ್ಟದ ನಿವೃತ್ತ ನೌಕರರ ಸಂಘದ ಮಹಾಅಧಿವೇಶನ ಮಾರ್ಚ ೧೭ರಂದು ಬೆಂಗಳೂರಿನಲ್ಲಿ ಜರುಗಲಿದೆ. ಅಧಿವೇಶನದಲ್ಲಿ ಭಾಗವಹಿಸಲು ಪಟ್ಟಣದಿಂದ ೪೦ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸುತ್ತಾ, ಸಂಘದ ಕಾರ್ಯಾಲಯಕ್ಕೆ ಅಗತ್ಯವಾದ ನಿವೇಶನ ಒದಗಿಸಲು ಮುಖ್ಯಾಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ನಂತರ ಎಲ್ಲ ಸದಸ್ಯರೊಂದಿಗೆ ತೆರಳಿ ಮನವಿ ಸಲ್ಲಿಸಿದರು.ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿಶ್ರಾಂತ ಮುಖ್ಯಗುರು ಎಸ್.ಎನ್.ಬಸವರೆಡ್ಡಿ ಮಾತನಾಡಿದರು.ಪಿ.ಜಿ.ಹಿರೇಮಠ, ಪಿ.ಎಸ್.ಮಿಂಚನಾಳ, ಕೆ.ಸಿ.ಮಠ, ಎಸ್.ವ್ಹಿ.ಆಲಾಳಮಠ, ಬಿ.ಎಸ್.ನಾಗೂರ, ಎಮ್.ಎಚ್.ಪಟೇಲ, ಎಚ್.ಎಚ್.ವಡಗೇರಿ, ಎ.ಸಿ.ಕನ್ನೋಳ್ಳಿ, ಕೆ.ಎನ್.ಮಣೂರ, ಎಸ್.ಬಿ.ರೂಗಿ, ಎಸ್.ಟಿ.ಲಮಾಣಿ, ಎಸ್.ಎಮ್.ಇಂಡಿ, ಜಿ.ಎ.ಪಾಟೀಲ, ಎಸ್.ಎನ್.ಹರಳಯ್ಯ, ಎ.ಸಿ.ಲೋಗಾವಿ, ಎಸ್.ಜಿ.ತಾವರಖೇಡ, ಬಿ.ಎಸ್.ಉತ್ನಾಳ, ಕೆ.ಎ.ಮುಲ್ಲಾ ಇದ್ದರು.

Read More

ಮುದ್ದೇಬಿಹಾಳ: ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಮದು ಘೋಶಿಸಿದ ಪ್ರಯುಕ್ತ, ಫೆ.೧೭ ರಂದು ವಿಶ್ವಗುರು ಬಸವಣ್ಣನವರ ಭಾವ ಚಿತ್ರವನ್ನು ಅನಾವರಣಗೊಳಿಸಲು ಶಾಸಕರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲು ಫೆ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ತಹಶೀಲ್ದಾರ ಬಸವರಾಜ ನಾಗರಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಸಂತ ಸೇವಾಲಾಲ್ ರವರ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕರುಗಳಾ ಲೀಲಾ ಭಟ್ಟ ಹಾಗೂ ಶಾಂತಾ ಭಟ್ಟ ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಪ್ರಾಥಮಿಕ ಮುಖ್ಯಗುರು ಜಿ.ಜೆ.ಪಾದಗಟ್ಟಿ, ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಹೆಗಡೆ, ಶಿಕ್ಷಕರಾದ ಸರಸ್ವತಿ ಮಡಿವಾಳರ್, ಮಂಜುನಾಥ ಪಡದಾಳಿ, ಬಿ.ಟಿ.ಭಜಂತ್ರಿ, ರೂಪಾ ನಾಟಿಕರ್, ಬಿ.ಆರ್.ಬೆಳ್ಳಿಕಟ್ಟಿ, ಗುರುಬಾಯಿ ತಂಗಡಗಿ, ಮೀನಾಕ್ಷಿ ಗಣಾಚಾರಿ, ಶಾಹಿನ್ ನಾಲತವಾಡ, ಪವಿತ್ರ ಸಜ್ಜನ, ರಮೇಶ ಮಡಿವಾಳರ್, ಗುಂಡಣ್ಣ ಬಡಿಗೇರ, ಬಸವರಾಜ ಸೋನಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಇಂಡಿ: ಸಂತ ಸೇವಾಲಾಲರು ಸತ್ಯ, ಅಹಿಂಸೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಸಮಾಜದ ಏಳಿಗೆಗಾಗಿ ನಿರಂತರ ಶ್ರಮಿಸುತ್ತಾ, ಜಾತಿ, ಧರ್ಮದಿಂದ ಬೇಧ ಭಾವ ಮಾಡದೇ ಎಲ್ಲರೂ ಸಮಾನರು ಎಂಬ ವಿಶ್ವ ಮಾನವ ಸಂದೇಶ ಸಾರಿದ ಜಗತ್ತಿನ ಶ್ರೇಷ್ಠರಾಗಿದ್ದಾರೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಸಂತ ಸೇವಾಲಾಲರ ಜಯಂತಿ ಆಚರಣೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.ಶಿಕ್ಷಕಿ ಎನ್.ಬಿ. ಚೌಧರಿ, ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎ.ಎಂ. ಬೆದ್ರೇಕರ ಮಾತನಾಡಿದರು.ಶಿಕ್ಷಕರಾದ ಎಸ್.ಎಸ್. ಅರಬ, ಎಸ್.ಪಿ. ಪೂಜಾರಿ, ಡಿಎಡ್ ಪ್ರಶಿಕ್ಷಾಣಾರ್ಥಿ ತೈಸಿನ್ ನದಾಫ್ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Read More

ಇಂಡಿ: ಫೆ. ೧೧ ರಂದು ಮರಗೂರ ಗ್ರಾಮದ ಸಮೀಪವಿರುವ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಲಾಗಿದೆ ಎಂದು ಮಾಜಿ ಶಾಸಕ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಹುದ್ದೆಗೆ ಸ್ಪರ್ಧೆ ಮಾಡಿದ್ದ ಡಾ. ಸಾರ್ವಭೌಮ ಬಗಲಿ ಝಳಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಚುನಾವಣಾ ವೇಳೆ ಮೃತಪಟ್ಟಿರುವ ಗುರುಬಸಪ್ಪ ದೇಸಾಯಿ ಎಂಬುವರ ಹೆಸರಿನಲ್ಲಿ ನಕಲಿ ಒಟರ್ ಐಡಿ ಕಾರ್ಡ್ ತಯಾರಿಸಿ ಅನಾಮಿಕನೊಬ್ಬ ಮತದಾನ ಮಾಡಲು ಬಂದಿದ್ದಾನೆ. ಈತನನ್ನು ಹಿಡಿಯಲು ಹೋದಾಗ ಪರಾರಿಯಾಗಿದ್ದಾನೆ. ಈ ಬಗ್ಗೆ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಮ್ಯಾನೇಜಿಂಗ್ ಡೈರೆಕ್ಟರ್‌ಗೆ ಮಾಹಿತಿ ನೀಡಿದ್ರೂ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.ಇನ್ನು ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಅಪರಿಚಿತನ ವಿರುದ್ಧ ಕೇಸ್ ದಾಖಲಾಗಿದೆ. ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಎ೧೪/೨೦೨೪ ಅಡಿಯಲ್ಲಿ ಭಾರತೀಯ ದಂಡ ಸಂಹಿತೆ ೧೮೬೦ ಸೆಕ್ಷನ್ ೪೧೯,೪೨೦,೪೬೮,೪೭೧ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಿಡಿಓ ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಅಬೀದ್ ಗದ್ಯಾಳ ಮಾಹಿತಿ ಇಂಡಿ: ತಾಲೂಕಿನ ೨೨ ಗ್ರಾ.ಪಂ ನ ೨೫ ಗ್ರಾಮಗಳಿಗೆ ಪ್ರತಿದಿನ ೫೦ ಟ್ಯಾಂಕರ ಮೂಲಕ ಪ್ರತಿದಿನ ೧೦೬ ಟ್ರೀಪ್ ನೀರು ಪೂರೈಸಲಾಗುತ್ತಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.ಅವರು ಗುರುವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ ಸಬಾಭವನದಲ್ಲಿ ಟಾಸ್ಕ ಫೋರ್ಸ ಸಮಿತಿಯಿಂದ ಪಿಡಿಓ ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಮಳೆಗಾಲದಲ್ಲಿ ಸಮರ್ಪಕ ಕೊರತೆಯ ಕೊರತೆಯಿಂದ ಈಗ ಬರಗಾಲ ಬಿದ್ದಿದ್ದು ನೀರಿನ ದುಸ್ತರವಾಗುತ್ತಿದೆ. ನೀರಿನ ಬಗ್ಗೆ ತಾತ್ಸಾರ ಬೇಡ. ಹಿರೇಬೇವನೂರ, ಅಥರ್ಗಾ ಮತ್ತು ಹೋರ್ತಿ ಸೇರಿದಂತೆ ತಾಲೂಕಿನಲ್ಲಿರುವ ವಸತಿಗಳಿಗೆ ಬೇಡಿಕೆಯ ಅನುಗುಣವಾಗಿ ನೀರನ್ನು ಪೂರೈಸಲಾಗುತ್ತಿದೆ. ನೀರು ಪೂರೈಸುವ ಆಪ್ ಬಳಸಬೇಕು. ಕಿ.ಮಿ ತಿಳಿಸಬೇಕು. ಅಂದರೆ ಮಾತ್ರ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.ಟ್ಯಾಂಕರಗಳಿಗೆ ಜಿ.ಪಿ.ಎಸ್ ಅಳವಡಿಸಿ ಏಜನ್ಸಿ ಜಿ.ಪಿ.ಎಸ್ ನಲ್ಲಿ ಗುರುತಿಸಬೇಕು. ಮತ್ತು ಮುಂದಿನ ದಿನಗಳಲ್ಲಿ ಟ್ಯಾಂಕರ್ ಆಪ್ ಉಪಯೋಗಿಸುವ ಕುರಿತು ಮಾಹಿತಿ ನೀಡಿದರು.ಅಧಿಕ್ಷಕ ಅಭಿಯಂತರ ಕೆಬಿಜೆಎನ್ ಎಲ್…

Read More