Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.ಈ ಪ್ರಕರಣದಿಂದ ಮೈತ್ರಿ ಪಕ್ಷ ಬಿಜೆಪಿಗೂ ಮುಜುಗರ ಆಗಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲ. ತಪ್ಪು ಮಾಡಿದ ಯಾರಿಗೇ ಆಗಲಿ ಶಿಕ್ಷೆಯಾಗಲೇಬೇಕು. ಸರ್ಕಾರ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದೆ. ತನಿಖೆಯಿಂದ ಸತ್ಯ ಹೊರ ಬರಲಿದೆ ಎಂದರು.ರಾಜ್ಯ ಸರ್ಕಾರದ ಆಡಳಿತ ವಿರೋಧಿ ಅಲೆಯ ಕಾರಣದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಲಿದೆ. ರಾಜ್ಯದಲ್ಲಿ ಲೋಕಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ 11 ಬಿಜೆಪಿ ಹಾಗೂ ಮೈತ್ರಿ ಪಕ್ಷವಾದ ಜೆಡಿಎಸ್ 3 ಸ್ಥಾನಗಳಲ್ಲಿ ಮುಂಚೂಣಿಯಲ್ಲಿದೆ. ಎರಡನೇ ಹಂತದ ಕ್ಷೇತ್ರಗಳಲ್ಲೂ ಬಿಜೆಪಿ ಮುಂದಿದೆ. ಇದನ್ನು ಸಹಿಸಲಾಗದ ಕಾಂಗ್ರೆಸ್ ಅಭಿವೃದ್ಧಿ ಆಧಾರಿತ ಚುನಾವಣೆ ಪ್ರಚಾರ ಮಾಡದೆ ಅಶ್ಲೀಲ ವಿಡಿಯೋ ಪ್ರಕರಣವನ್ನು ರಾಜಕೀಕರಣಗೊಳಿಸುತ್ತಿದೆ ಎಂದು ದೂರಿದರು.ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿ ದೂರದ ಕೊಲ್ಕತ್ತಾ ನಗರದಲ್ಲಿ ಪತ್ತೆಯಾಗಿದ್ದಾನೆ. ಈ…
ಇಂಚಗೇರಿಯಲ್ಲಿ ಸಮಾವೇಶ | ೧೦ ಸಾವಿರಕ್ಕೂ ಅಧಿಕ ಪಂಚಮಸಾಲಿಗರ ಪಾಲ್ಗೊಳ್ಳುವಿಕೆ | ಮುಖಂಡ ಸಂಗಮೇಶ ಬಬಲೇಶ್ವರ ಮಾಹಿತಿ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿಯಲ್ಲಿ ಮೇ.4 ರಂದು ಸಂಜೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಲು ಪಂಚಮಸಾಲಿ ಸಮುದಾಯದ ಸಮಾವೇಶ ಹಮ್ಮಿಕೊಂಡಿರುವುದಾಗಿ ಸಮುದಾಯದ ಮುಖಂಡ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಶುಭಶ್ರಿ ಫಂಕ್ಷನ್ ಹಾಲ್ ನಲ್ಲಿ ಗುರುವಾರದ ನಡೆದ ಪಂಚಮಸಾಲಿ ಸಮಾಜದ ಮುಖಂಡರ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈ ಸಮಾವೇಶದ ಮುಖ್ಯ ಉದ್ದೇಶ ನಾವು ಕಾಂಗ್ರೆಸ್ ಪಕ್ಷಕ್ಕೆ ಏಕೆ ಮತ ಹಾಕಬೇಕು ಎಂಬುದಾಗಿದ್ದು, ಅಂದು ಈ ಕುರಿತು ಚಿಂತನ-ಮಂಥನ ನಡೆಯಲಿದೆ. ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ಧಾರವಾಡ ಶಾಸಕ ವಿನಯ ಕುಲಕರ್ಣಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಸಿಂದಗಿ ಶಾಸಕ ಅಶೋಕ ಮನಗೂಳಿ, ಆಳಂದ ಶಾಸಕ ಬಿ.ಆರ್.ಪಾಟೀಲ, ಕೊಪ್ಪಳ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ನಾಡಿನ ಮತ್ತು ಜಿಲ್ಲೆಯ ಹಲವು ಮುಖಂಡರು ಸಮಾವೇಶದಲ್ಲಿ…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭವಿಷ್ಯ ವಿಜಯಪುರ: ಈ ಸಲ ವಿಜಯಪುರದಲ್ಲಿ ಬದಲಾವಣೆ ನಿಶ್ಚಿತ, ಕಾಂಗ್ರೆಸ್ ದಿಗ್ವಿಜಯ ಸಾಧಿಸುವುದು ಖಚಿತ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.ಬುಧವಾರ ಮುಸ್ಸಂಜೆ ಮಮದಾಪುರ ಮತ್ತು ಜೈನಾಪುರ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.ಹಾಲಿ ಸಂಸದ ರಮೇಶ ಜಿಗಜಿಣಗಿ ಮೂರು ಬಾರಿ ಸಂಸದರಾದರೂ ಸಿಕ್ಕ ಅವಕಾಶವನ್ನು ಅಭಿವೃದ್ಧಿಗೆ ಬಳಸದೇ ಕಾಲಹರಣ ಮಾಡಿದ್ದಾರೆ. ಇದನ್ನು ಅರಿತಿರುವ ಮತದಾರರು ಈ ಬಾರಿ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ. ವಿಜಯಪುರದಲ್ಲಿ ಬದಲಾವಣೆ ನಿಶ್ಚಿತ. ಕಾಂಗ್ರೆಸ್ ದಿಗ್ವಿಜಯ ಖಚಿತ. ಎಲ್ಲರೂ ಕೈ ಹಿಡಿಯಿರಿ. ಅಭಿವೃದ್ಧಿಯತ್ತ ಮುನ್ನಡೆಯಿರಿ. ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಗೆಲ್ಲಿಸಿ ನಮ್ಮೆಲ್ಲರ ಕೈ ಬಲಪಡಿಸಿ ಎಂದು ಅವರು ಕರೆ ನೀಡಿದರು.ಮಮದಾಪುರದಲ್ಲಿ ಮಾತನಾಡಿದ ಅವರು, ಈಗಾಗಲೇ ಮಮದಾಪುರ ಬಳಿ ಅರಣ್ಯ ಅಭಿವೃದ್ಧಿ ಪಡಿಸಲಾಗುತ್ತಿದೆ. ಪೂಜ್ಯ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಹಸಿರೀಕರಣಕ್ಕೆ ಒತ್ತು…
ವಿಜಯಪುರದಲ್ಲಿ ಕಾಂಗ್ರೆಸ್ಗೆ ಬೆಂಬಲ ಸೂಚಿಸಿ ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ ವಿಜಯಪುರ: ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ಗುರುವಾರ ನಗರದಲ್ಲಿ ನಡೆದ ಬಂಜಾರಾ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿ, ನೀವು ಶ್ರಮ ಜೀವಿಗಳು, ಗಟ್ಟಿಗರು. ಬಸವಣ್ಣನವರ ಕಾಯಕ ಪರಂಪರೆಯಂತೆ ಇದ್ದೀರಿ. ನಿಮ್ಮ ಸಂಸ್ಕೃತಿ ಬಿಟ್ಟಿಲ್ಲ ಎಂದರು.ನಿಮಗೆ ಮೀಸಲಾತಿ ಕೊಡಿಸುವಲ್ಲಿ ಇಂದಿರಾಗಾಂಧಿ, ದೇವರಾಜ ಅರಸು ಅವರ ಶ್ರಮ ಕಾರಣ. ಇತ್ತೀಚೆಗೆ ತಾಂಡಾ ಅಭಿವೃದ್ಧಿ ಯೋಜನೆಗಳಿಂದ ನಿಮ್ಮ ಏಳಿಗೆಗೆ ಯತ್ನಿಸಿದ್ದೇವೆ. ಸಿದ್ದರಾಮಯ್ಯರು ಇಲ್ಲಿನ ನಿಡೋಣಿಗೆ ಬಂದಾಗ ಅಲ್ಲೇ ಸೇವಾಲಾಲರ ಜಯಂತಿ ಘೋಷಣೆ ಮಾಡಲಾಗಿತ್ತು. ಹಾಗೆಯೇ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಬದಲಾಯಿಸಿದ್ದು ನಮ್ಮ ಸರಕಾರ ಎಂದರು.ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಮುಂದಿನ ಸಂಪುಟ ವಿಸ್ತರಣೆಯಲ್ಲಿ ಪ್ರಾಮಾಣಿಕವಾಗಿ ಒತ್ತಾಯ ಮಾಡುವುದಾಗಿ ಹೇಳಿದ ಸಚಿವ ಪಾಟೀಲರು, ಉಳಿದ ಸ್ಥಾನಮಾನಗಳಿಗೂ ಆದ್ಯತೆ ನೀಡಲಾಗುವುದು. ಇಡೀ ರಾಜ್ಯದಲ್ಲಿ ನಿಮ್ಮ ಸೌಖ್ಯವನ್ನು…
Udayarashmi kannada daily newspaper Udayarashmi kannada daily newspaper
ಯಾದಗಿರಿ: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ಗೂ ಯಾವುದೇ ಸಂಬಂಧ ಇಲ್ಲ ಎಂದರು.ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಪ್ರಶ್ನಿಸಿದರು.ಪೆನ್ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ…
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ | ಪ್ರಧಾನಿಗೆ ಸಿಎಂ ಪತ್ರ | ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದುಗೊಳಿಸಲು ಆಗ್ರಹ ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.ಬುಧವಾರ (ಮೇ 1, 2024) ಪ್ರಧಾನಿಗೆ ಪತ್ರ ಬರೆದಿರುವ ಸಿಎಂ, “ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ, ಪೊಲೀಸ್ ವ್ಯವಸ್ಥೆಗಳ ನೆರವಿನಿಂದ ಹಾಗೂ ವಿದೇಶಾಂಗ ವ್ಯವಹಾರ, ಗೃಹ ವ್ಯವಹಾರಗಳ ಸಚಿವಾಲಯಗಳ ಮೂಲಕ ಕೂಡಲೇ ಅವರನ್ನು ವಿದೇಶದಿಂದ ವಾಪಸ್ ಕರೆತರುವಂತೆ ಹಾಗೂ ಕಾನೂನು ಪ್ರಕಾರ ವಿಚಾರಣೆ ಎದುರಿಸಲು ಕರ್ನಾಟಕದ ಎಸ್ಐಟಿ ತಂಡಕ್ಕೆ ನೆರವಾಗುವಂತೆ ಪತ್ರದಲ್ಲಿ ಕೋರಿದ್ದಾರೆ. ಇದಕ್ಕೆ ಬೇಕಾದ ಸಂಪೂರ್ಣ ವಿವರಗಳನ್ನು ಕರ್ನಾಟಕದ ಎಸ್ಐಟಿಯ ಅಧಿಕಾರಿಗಳು ಒದಗಿಸಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.“ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, 2024ರ…
ಸಂತೋಷ್ ರಾವ್ ಪೆರ್ಮುಡ,ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಒಂದು ದಟ್ಟವಾದ ಕಾಡಿನಲ್ಲಿ ಸಿಂಹಗಳ ಸುಂದರವಾದ ಕುಟುಂಬವೊಂದು ವಾಸಿಸುತ್ತಿತ್ತು. ಪ್ರತೀ ದಿನವೂ ತನ್ನ ಕುಟುಂಬದ ಸದಸ್ಯರಿಗೆ ಅಗತ್ಯವಿರುವ ಆಹಾರವನ್ನು ಗಂಡು ಸಿಂಹವೇ ಬೇಟೆಯಾಡಿ ತಂದು ಎಲ್ಲಾ ಸದಸ್ಯರಿಗೂ ನೀಡುತ್ತಿತ್ತು. ಗಂಡು ಸಿಂಹವು ಪ್ರತೀ ದಿನ ಬೇಟೆಯಾಡಿ ಮಾಂಸವನ್ನು ತಂದರೆ ಹೆಣ್ಣು ಸಿಂಹವು ಬೇಟೆಯನ್ನು ಹಂಚಿ ಎಲ್ಲಾ ಸದಸ್ಯರಿಗೂ ನೀಡುತ್ತಿತ್ತು. ಒಂದು ದಿನ ಸುಂದರವಾದ ಸಂಸಾರದಲ್ಲಿ ಅಪಸ್ವರ ಎದುರಾಯಿತು. ಗಂಡು ಸಿಂಹ ಮತ್ತು ಹೆಣ್ಣು ಸಿಂಹ ಇಬ್ಬರ ನಡುವೆ ಯಾರು ಮೇಲು ಎಂಬ ಚರ್ಚೆಯು ಪ್ರಾರಂಭವಾಯಿತು. ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಮರದ ಮೇಲೆ ಕುಳಿತು ಸಿಂಹಗಳ ಜಗಳವನ್ನು ಗಮನಿಸಿದ ರಣಹದ್ದೊಂದು ಎರಡು ಸಿಂಹಗಳ ಪೈಕಿ ಯಾರು ಮೇಲೆಂದು ನಿರ್ಧರಿಸಲು ಒಂದು ಉಪಾಯವನ್ನು ಹೇಳಿಕೊಟ್ಟಿತು. ಅದೇನೆಂದರೆ ಪ್ರತಿ ದಿನವೂ ಬೇಟೆಯನ್ನು ಹಿಡಿಯಲು ಗಂಡು ಸಿಂಹವು ಹೋದರೆ, ಈ ಬಾರಿ ಹೆಣ್ಣು…
ಆಲಮಟ್ಟಿ: ಇಲ್ಲಿಯ ನರ್ಸರಿಯಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ನಾಗಶೆಟ್ಟಿ ಮಾತನಾಡಿ,ಕಾರ್ಮಿಕ ಸಂಘಟನೆಗಳು ಪ್ರಮುಖವಾಗಿ ಆಚರಿಸುವ ಸಾರ್ವಜನಿಕ ಉತ್ಸವದ ದಿನವೇ ಕಾರ್ಮಿಕ ದಿನವಾಗಿದೆ. ಈ ದಿನದಂದು ಪ್ರಪಂಚದ ನೂರಾರು ರಾಷ್ಟ್ರಗಳಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ. 20ನೇ ಶತಮಾನದಲ್ಲಿ ಕಾರ್ಮಿಕ ಸಂಘಟನೆಗಳ ಪ್ರಭಾವದಿಂದಾಗಿ ಭಾರತದಲ್ಲಿಯೂ ಈ ದಿನಾಚರಣೆ ಆಚರಿಸಲಾಗುತ್ತದೆ ಎಂದು ಕಾರ್ಮಿಕ ದಿನದ ಇತಿಹಾಸ, ಬೆಳವಣಿಗೆ, ಅದರ ಹಿನ್ನಲೆ ಕುರಿತು ವಿವರಿಸಿದರು.ಆರ್.ಎಂ.ಜಿ.ಎಫ್.ಅಧ್ಯಕ್ಷ ನೇತಾಜಿ ಗಾಂಧಿ ಮಾತನಾಡಿ, ಶ್ರಮಜೀವಿಗಳಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಪೂರ್ವದ 1923ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಈ ದಿನವನ್ನು ಆಚರಿಸಲು ಆರಂಭಿಸಲಾಯಿತು.ದಿನಕ್ಕೆ 8 ತಾಸು ಕೆಲಸದ ಅವಧಿಯನ್ನು ನಿಗದಿ ಮಾಡಬೇಕು ಎನ್ನುವ ಆಗ್ರಹದೊಂದಿಗೆ ಶುರುವಾದ ಚಳವಳಿಗೆ ಯಶಸ್ಸು ಸಿಕ್ಕಿತು. ಕಾರ್ಮಿಕರ ಕೊಡುಗೆ ಮತ್ತು ಅವರ ತ್ಯಾಗವನ್ನು ಈ ದಿನ ಸ್ಮರಿಸಲಾಗುತ್ತದೆ. ಕಾರ್ಮಿಕರ ತ್ಯಾಗವನ್ನು ಮನಗಂಡ ಮಹಾತ್ಮ ಗಾಂಧೀಜಿಯವರು 1918ರಲ್ಲಿ ಅಹಮದಾಬಾದ್ ಹತ್ತಿ ಗಿರಣಿ ಮಾಲೀಕರ ವಿರುದ್ಧ ಸತ್ಯಾಗ್ರಹ…
ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇನ್ನಷ್ಟು ಪರಿಣಾಮಕಾರಿಯಾಗಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಜಾಗೃತಿ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಮತದಾರ ಜಾಗೃತಿ ಕಾರ್ಯವನ್ನು ಚಾಲೇಂಜ್ ಆಗಿ ಸ್ವೀಕರಿಸಿ, ಮತ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಕಾರ್ಯಗಳ ಫಲಿತಾಂಶ ಮತದಾನ ದಿನದಂದು ತಿಳಿಯಲಿದೆ. ನೀವು ಮಾಡಿದ ಪ್ರಯತ್ನಕ್ಕೆ ಮತದಾನ…
