Author: editor.udayarashmi@gmail.com

ವಿಜಯಪುರ: ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಾರ್ಯಾಲಯ ಕಳೆಗಟ್ಟಿತ್ತು. ಇದಕ್ಕೆ ಕಾರಣ, ಮಂಗಳ ಮುಖಿಯರ ನಗು ಮೊಗದ ಕಲರವ.ಅವರೆಲ್ಲ ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರಿಗೆ ಸ್ವಯಂ ಪ್ರೇರಣೆಯಿಂದ ಬೆಂಬಲ ಸೂಚಿಸಿ, ಶುಭ ಹರಸಲು ಬಂದಿದ್ದರು.ವಿಜಯಪುರ ಕ್ಷೇತ್ರದಲ್ಲಿ ಮಂಗಳ ಮುಖಿಯರು ಮತದಾರರಾಗಿ ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಇದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸಂಘಟನೆಗಳ ಸಲಹೆಯಂತೆ ಮಂಗಳ ಮುಖಿಯರ ಕ್ಷೇಮಕ್ಕಾಗಿ ಇರುವ ಸಂಘಟನೆಗಳವರು ಆಲಗೂರರಿಗೆ ಬೆಂಬಲ ನೀಡಿದ್ದಾರೆ. ಅದಕ್ಕಾಗಿಯೇ ಇವರು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಇವರಿಗೆ ಧನ್ಯವಾದ ಸಲ್ಲಿಸಿ ಮಾತನಾಡಿದ ರಾಜು ಆಲಗೂರ ಅವರು, ಕಾಂಗ್ರೆಸ್‌ಗೆ ಎಲ್ಲ ಕಡೆಯಿಂದ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಇವತ್ತು ಮಂಗಳ ಮುಖಿಯರ ಶುಭ ಹರಕೆ, ಬೆಂಬಲದಿಂದ ಮತ್ತಷ್ಟು ಖುಷಿಯಾಗಿದೆ. ಇವರ ಕ್ಷೇಮಾಭಿವೃದ್ಧಿಗೆ ಬದ್ಧ ಎಂದರು.ಮಂಗಳ ಮುಖಿಯರ ಪ್ರತಿನಿಧಿಯಾಗಿ ಪ್ರಾರ್ಥನಾ ಅಂಬಿ ಮಾತನಾಡಿ, ಸಮಾಜದ, ಉಳಿದ ಪಕ್ಷಗಳು ಸೇರಿ ಎಲ್ಲರೂ ನಮ್ಮನ್ನು ಮೊದಲಿಂದ ಕಡೆಗಣಿಸಿದ್ದಾರೆ. ಈಗ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದೇವೆ. ನಮಗೆ ವಸತಿ ಸೇರಿ…

Read More

ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ಜೊತೆಗೆ ಅಂತರ ಕಾಯ್ದುಕೊಂಡ ಅಮಿತ್ ಶಾ | ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದು ಆರೋಪ ನವದೆಹಲಿ: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ಕ್ಲಿಪ್‌ಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.ಮಂಗಳವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ಈ ವಿಷಯದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ, ಪಕ್ಷವು ಮಾತೃಶಕ್ತಿ (ತಾಯಂದಿರು ಅಥವಾ ಮಹಿಳೆಯರು) ಜೊತೆಗಿದೆ ಎಂದು ಹೇಳಿದರು.“ನಾವು ದೇಶದ ಮಾತೃಶಕ್ತಿಯೊಂದಿಗೆ ನಿಲ್ಲುತ್ತೇವೆ ಎಂಬುದು ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್ ಅನ್ನು ಕೇಳಲು ಬಯಸುತ್ತೇನೆ, ಯಾರ ಸರ್ಕಾರವಿದೆ? ಸರ್ಕಾರವು ಕಾಂಗ್ರೆಸ್ ಪಕ್ಷದ್ದು, ಅವರು ಇಲ್ಲಿಯವರೆಗೆ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ? ಇದು ರಾಜ್ಯದ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗಿರುವುದರಿಂದ ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ತಮ್ಮ ಎನ್‌ಡಿಎ ಅಭ್ಯರ್ಥಿ…

Read More

ಮುದ್ದೇಬಿಹಾಳ: ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯಲು ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪರಶುರಾಮ ವನಹಳ್ಳಿ ಹೇಳಿದರು.ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಗ್ರಾ.ಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಕಾರ್ಯಮದಲ್ಲಿ ಅವರು ಮಾತನಾಡಿದರು.ದೇಶದ ಅಡಳಿತಕ್ಕೆ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗಿದೆ. ಈ ಹಕ್ಕನ್ನು ಯಾರೂ ಕಳೆದುಕೊಳ್ಳದೇ ಕಡ್ಡಾಯವಾಗಿ ಮಾತದಾನ ಮಾಡಿ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯಬೇಕು ಎಂದರು.ಗ್ರಾಮದ ಪ್ರತೀ ವಾರ್ಡಗೂ ಸಂಚರಿಸಿ ಮತದಾನದ ಜಾಗೃತಿ ಮೂಡಿಸಲಾಯಿತು. ಈ ವೇಳೆ ಕಾರ್ಯದರ್ಶಿ ಗಿರೀಶ ಬಿರಾದಾರ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಶಾಲಾ ಶಿಕ್ಷಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು.

Read More

ಸಿಂದಗಿ: ಕಾಂಗ್ರೆಸ್ ಪಕ್ಷದಲ್ಲಿ ಬಂಜಾರ ಸಮಾಜದ ನಾಯಕರಲ್ಲಿ ಒಬ್ಬರು ಎಂಎಲ್‌ಎ, ಎಂಎಲ್‌ಸಿ ಇದ್ದರೂ ಮಂತ್ರಿಸ್ಥಾನ ನೀಡದೇ ಕಾಂಗ್ರೆಸ್ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ಭೀಮಸಿಂಗ್ ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರ್ ಸಮಾಜದ ಅಭಿವೃದ್ಧಿ ನಿಗಮ ಮಂಡಳಿ ಮಾಡಿದ ಕೀರ್ತಿ ಬಿಜೆಪಿ ಪಕ್ಷಕ್ಕೆ ಸಲ್ಲುತ್ತದೆ. ವಂಚಿತ ತಾಂಡಾಗಳಿಗೆ ಕಂದಾಯ ಗ್ರಾಮ ಎಂದು ಕಾಂಗ್ರೆಸ್ ಸರಕಾರ ಮಾಡಲಿಲ್ಲ. ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ತಾಂಡಾಗಳನ್ನು ಕಂದಾಯ ಗ್ರಾಮ ಎಂದು ಘೋಷಣೆ ಮಾಡಿತು. ಕಾಂಗ್ರೆಸ್ ಪಕ್ಷ ೫ ಮೀಸಲು ಕ್ಷೇತ್ರಗಳಲ್ಲಿ ಒಂದು ಸಹ ಬಂಜಾರ್ ಸಮಾಜಕ್ಕೆ ಟಿಕೆಟ್ ನೀಡದಿರುವುದು ಶೋಚನೀಯ. ಸದಾಶಿವ ಆಯೋಗದಲ್ಲಿ ನಮ್ಮ ಸಮಾಜಕ್ಕೆ ನೀಡಬೇಕಾದ ಮೀಸಲಾತಿಯನ್ನು ನೀಡಿದೆ.ನಮ್ಮ ಬಂಜಾರ್ ಸಮಾಜದ ಮಣಿಕಂಠ ರಾಠೋಡ ಅವರಿಗೆ ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಮನೆತನದವರು ೧೦೦ಕ್ಕೂ ಅಧಿಕ ಕೇಸ್‌ಗಳನ್ನು ದಾಖಲಿಸುವ ಮೂಲಕ ಹಿಂಸೆ ಮಾಡಿರುವುದನ್ನು…

Read More

ವಿಜಯಪುರ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ವತಿಯಿಂದ ಹುಬ್ಬಳ್ಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಕೊಲೆಗೈದ ತಪ್ಪಿಸ್ಥರಿಗೆ ಗಲ್ಲು ಶಿಕ್ಷೆ ನೀಡುವ ಕುರಿತು ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಉತ್ತರ ಕರ್ನಾಟಕದ ಅಧ್ಯಕ್ಷ ಲಕ್ಷ್ಮಣ್ ಕಂಬಾಗಿ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ಶೋಷಣೆ ಕೊಲೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಇಲ್ಲದಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತಿವೆ. ಈಗಾಗಲೇ ನೇಹಾಳ ಕೊಲೆಗಾರನನ್ನು ಬಂಧಿಸಿದರೂ ಶೀಘ್ರ ತನಿಖೆ ನಡೆಸಿ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹಿಸಿದರುಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೇವ್ ಸೂರ್ಯವಂಶಿ, ಗಿರೀಶ ಕಲಘಟಗಿ, ಸಂಕೇತ್ ಪಟ್ಟಣದ, ಸಿದ್ದರಾಮ ಹಲ್ಲೂರ್, ಶೋಭಾ ಪಾಟೀಲ, ಚಂದ್ರಶೇಖರ್ ಕಡಕೋಳ, ಪ್ರಭು ಮಂಕಣಿ, ಮಲ್ಲಯ್ಯ ಹಿರೇಮಠ, ಶಿವಕುಮಾರ ಕುಂಬಾರ್, ಬಸಲಿಂಗಪ್ಪ ಕಪಾಲಿ, ವೆಂಕಟೇಶ್ ಮರತಿಮನಿ, ಖಾಜಾಬೀನ್ ನದಾಫ, ಸಾಹೇಬಗೌಡ ಬಿರಾದಾರ, ಶಫೀಕ್ ಗಂಗನಹಳ್ಳಿ, ಮಹಾಂತೇಶ್ ತಳವಾರ, ಮಂಜೂರ್ ನಾಗರಬಾಡಿ, ಸರ್ಫ್ರಾಜ್ ಗಂಗನಹಳ್ಳಿ ಮತ್ತು…

Read More

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಅಂಗವಾಗಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 33 ನೇ ವಾರ್ಡ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಭರ್ಜರಿ ಪ್ರಚಾರ ನಡೆಸಿದರು.ವಿಜಯಪುರ ನಗರದ ವಾರ್ಡ್ ನಂ. 33 ನೇ ವಾರ್ಡಿನ ಶಾಸ್ತ್ರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಳೆದ ಹತ್ತು ವರ್ಷಗಳ ಸಾಧನೆಗಳು, ಜನಪರ ಯೋಜನೆಗಳು, ದೇಶದಲ್ಲಾದ ಸಕಾರಾತ್ಮಕ ಬದಲಾವಣೆಗಳ ಜೊತೆಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಮತಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಟ್ಟು, ವಿಕಸಿತ ಭಾರತದ ಸಂಕಲ್ಪದೊಂದಿಗೆ ದೇಶವಾಸಿಗಳ ರಕ್ಷಣೆಗೆ ಪಣತೊಟ್ಟಿರುವ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಪಕ್ಷಕ್ಕೆ ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ್ತೊಮ್ಮೆ ಆಶಿರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಬಿಜೆಪಿ ಯುವ ಧುರೀಣರಾದ…

Read More

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಅಂಗವಾಗಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 31 ಮತ್ತು 33 ನೇ ವಾರ್ಡ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಭರ್ಜರಿ ಪ್ರಚಾರ ನಡೆಸಿದರು.ವಿಜಯಪುರ ನಗರದ ವಾರ್ಡ್ ನಂ. 31 ರಲ್ಲಿರುವ ರಾಘವೇಂದ್ರ ಚಾಳ, ಅಜರೇಕರ ಚಾಳ ಬಡಾವಣೆಗಳಲ್ಲಿ ಮತ್ತು 33 ನೇ ವಾರ್ಡಿನ ಶಾಸ್ತ್ರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಳೆದ ಹತ್ತು ವರ್ಷಗಳ ಸಾಧನೆಗಳು, ಜನಪರ ಯೋಜನೆಗಳು, ದೇಶದಲ್ಲಾದ ಸಕಾರಾತ್ಮಕ ಬದಲಾವಣೆಗಳ ಜೊತೆಗೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಮತಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಟ್ಟು, ವಿಕಸಿತ ಭಾರತದ ಸಂಕಲ್ಪದೊಂದಿಗೆ ದೇಶವಾಸಿಗಳ ರಕ್ಷಣೆಗೆ ಪಣತೊಟ್ಟಿರುವ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಪಕ್ಷಕ್ಕೆ ಬೆಂಬಲಿಸಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ…

Read More

ವಿಜಯಪುರ: ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿರುವ ವಿಕಸಿತ ಭಾರತ ನಿರ್ಮಾಣಕ್ಕಾಗಿ ಜಿಲ್ಲೆಯ ಮತದಾರರು ಈ ಸಲವೂ ಬಿಜೆಪಿಯ ಕೈ ಹಿಡಿಯಬೇಕು ಎಂದು ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮನವಿ ಮಾಡಿದರು.ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರವಾಗಿ ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 32 ರಲ್ಲಿ ಬರುವ ಗೋಂಧಳಿ ಗಲ್ಲಿ, ಉಪ್ಪಾರ ಗಲ್ಲಿ , ಅಡವಿಸ್ವಾಮಿ ಮಠ , ಶಾಪೇಟಿ ಗಲ್ಲಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯಿತು.ಈ ವೇಳೆ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ನರೇಂದ್ರ ಮೋದಿ ಅವರ ಸಾಧನೆಗಳು ಮೂರನೇ ಅವಧಿಗೆ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ಮೂರನೇ ಅವಧಿಯಲ್ಲಿ ದೇಶದ ಆರ್ಥಿಕತ ಶಕ್ತಿ ಹೆಚ್ಚಾಗಲಿದೆ. ಭ್ರಷ್ಟಾಚಾರ ರಹಿತ ಆಡಳಿತ, ನಿಸ್ವಾರ್ಥ ಸೇವೆ ನರೇಂದ್ರ ಮೋದಿಯವರ ಉದ್ದೇಶವಾಗಿದೆ. ಕಳೆದ 10 ವರ್ಷಗಳ ಆಡಳಿತದಲ್ಲಿ ಒಂದೇ ಒಂದು…

Read More

ಮೋರಟಗಿಯಲ್ಲಿ ಬಹಿರಂಗ ಪ್ರಚಾರ | ಮಾಜಿ ಶಾಸಕ ಭೂಸನೂರ ಕಿಡಿ ಮೋರಟಗಿ: ಒಂದು ಕುಟುಂಬಕ್ಕೆ ಜಯಕಾರ ಹಾಕುವ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಬುದ್ಧಿ ಕಲಿಸಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ಲೋಕಸಭೆ ಚುನಾವಣೆಯ ವಿಜಯಪುರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ ಮಂಗಳವಾರ ಮತ ಯಾಚಿಸಿ ಅವರು ಮಾತನಾಡಿದರು.ನಮ್ಮ ಪಕ್ಷ ಯಾವತ್ತೂ ಭಾರತ ಮಾತಾ ಕೀ ಜೈ ಎನ್ನುವ ಮೂಲಕ ದೇಶ ಪ್ರೇಮ ಮೆರೆಯುತ್ತದೆ. ಜನರಲ್ಲಿ ಸೌಹಾರ್ದ ಮೂಡಿಸುತ್ತದೆ. ಆದರೆ ಕಾಂಗ್ರೆಸ್ ನವರು ಕೇವಲ ಸೋನಿಯಾ ಗಾಂಧಿ ಕೀ ಜೈ, ರಾಹುಲ್ ಗಾಂಧಿ ಕೀ ಜೈ ಎನ್ನುವ ಮೂಲಕ ಒಂದು ಕುಟುಂಬವನ್ನು ಓಲೈಸುವ ಕಾರ್ಯ ಮಾಡುತ್ತಾರೆ. ಇಂಥವರಿಂದ ದೇಶದ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದರು.ಬಡವರಿಗೆ ಪ್ರಧಾನಿ ನರೇಂದ್ರ ಮೋದಿ ಏನು ಮಾಡಿದ್ದಾರೆ ಎಂದು ಕೆಲವರು ಕೇಳುತ್ತಾರೆ. ಸಂಕಷ್ಟ ಸಮಯದಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡುವ ಮೂಲಕ ಪ್ರಾಣ ಉಳಿಸಿದ ಪುಣ್ಯಾತ್ಮ ಮೋದಿ…

Read More