Author: editor.udayarashmi@gmail.com

ಮುದ್ದೇಬಿಹಾಳ: ದುಡ್ಡಿಗೆ ಮಹತ್ವ ಕೊಡುವ ಬದಲು ಮಕ್ಕಳಿಗೆ ಯೋಗ್ಯವಾದ ಶಿಕ್ಷಣ, ಸಂಸ್ಕೃತಿ ನೀಡಿ ಬೆಳೆಸಿದಲ್ಲಿ ಅದುವೇ ನಮಗೆ ಸಂಪತ್ತು ಎಂದು ಬಲ್‌ಕೆರೂರಿನ ಬಿಲ್ವಾಶ್ರಮ ಹಿರೇಮಠದ ಪ.ಪೂಜ್ಯ ಸಿದ್ಧಲಿಂಗ ಶಿವಾಚಾರ್ಯ ನುಡಿದರು.ಪಟ್ಟಣದ ಮಾರುತಿ ನಗರದಲ್ಲಿರುವ ವಿದ್ಯಾಜ್ಯೋತಿ ಪಬ್ಲಿಕ್ ಶಾಲೆಯ ಎರಡನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ದಿವ್ಯ ಸಾನಿಧ್ಯವಹಿಸಿ ಅವರು ಮಾತನಾಡಿದರು.ದುಡ್ಡಿಗೆ ಪ್ರಾಮುಖ್ಯತೆ ನೀಡಿದವರ ಅದೆಷ್ಟೋ ಜನರ ಮಕ್ಕಳು ಇಂದು ದುಷ್ಚಟಗಳಿಗೆ ದಾಸರಾಗಿ ಹಾಳಾಗಿರುವದನ್ನು ನಾವು ಕಂಡಿದ್ದೇವೆ. ನಮ್ಮ ದೇಶದ ಸಂಸ್ಕೃತಿಯನ್ನು ಕಲಿಸುವ ಮೂಲಕ ಯೋಗ್ಯವಾದ ವಿದ್ಯೆಯನ್ನು ನೀಡಿದಲ್ಲಿ ಆ ಮಗು ಜಗತ್ತನ್ನೇ ಬೆಳಗುವ ಆದರ್ಶ ವ್ಯಕ್ತಿಯಾಗುತ್ತಾನೆ ಎಂದರು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಮಾತನಾಡಿದರು.ಕಾಂಗ್ರೇಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಚಿಂತಕ ಅರವಿಂದ ಕೊಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಂ.ಎಚ್.ಹಾಲ್ಯಾಳ ಮಾತನಾಡಿದರು. ಈ ವೇಳೆ ಯಾದಗಿರಿಯ ಮುರಾರ್ಜಿ ದೇಸಾಯಿ ಶಾಲೆಗೆ ಆಯ್ಕೆಯಾದ ಆಕಾಶ ಚಲವಾದಿ, ಬಿದರಕುಂದಿಯ ಆರ್‌ಎಂಎಸ್‌ಎ ಗೆ ಆಯ್ಕೆಯಾದ ಸಮೀಕ್ಷಾ ಕುಲಕರ್ಣಿ ಮತ್ತು ಯಾದಗಿರಿಯ ನವೋದಯ ಶಾಲೆಗೆ…

Read More

ಆಲಮಟ್ಟಿ: ಎಐಯುಸಿಟಿಯು ಸಂಯೋಜನೆಯ ಸಂಯುಕ್ತ ಆಲಮಟ್ಟಿ ಕೆಬಿಜೆಎನ್ ಎಲ್ ಗಾರ್ಡ್ನ್ ಡಿ ಗ್ರುಪ್ ನೌಕರರ ಸಂಘ ಸೋಮವಾರದಿಂದ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಆರಂಭಿಸಿರುವ ಅನಿರ್ದಿಷ್ಟ ಅಹೋರಾತ್ರಿ ಧರಣಿ ಬುಧವಾರ ಮೂರು ದಿನ ಪೂರ್ಣಗೊಳಿಸಿತು.ಬುಧವಾರದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ ಭೇಟಿ ನೀಡಿ ಉದ್ಯಾನವನ ಕೂಲಿ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು. ಈ ಬಗ್ಗೆ ತಮ್ಮ ತಂದೆಯವರ ಜತೆ ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸುವ ಭರವಸೆ ನೀಡಿದರು. ಮಂಜುನಾಥ ಹಿರೇಮಠ, ಮಲ್ಲೇಶಿ ರಾಠೋಡ, ಲಕ್ಷ್ಮಣ ಬ್ಯಾಲ್ಯಾಳ, ದ್ಯಾಮಣ್ಣ ಬಿರಾದಾರ, ಪ್ರಭು ಹಿರೇಮಠ, ಬಸು ಚಲವಾದಿ, ಮಲ್ಲನಗೌಡ ಬಿರಾದಾರ, ಯಲ್ಲವ್ವ ಮೇಟಿ, ರಮೇಶ ಅಕ್ಕಿ, ಮುತ್ತು ಬಡಿಗೇರ, ಅನಿತಾ ಜಾಧವ, ಗುರಲಿಂಗವ್ವ ಗೌಡರ, ಮತ್ತೀತರರು ಇದ್ದರು.

Read More

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಇಂಡಿ ತಾಲೂಕಿನ ಬಬಲಾದ, ಚವಡಿಹಾಳ ಮತ್ತು ಝಳಕಿ ಮತ್ತು ಚಡಚಣ ತಾಲೂಕಿನ ನಂದರಗಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳಗುಣಕಿ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ಶಾಲೆಯ ಕಂಪೌಂಡ್, ಆಟದ ಮೈದಾನ, ಅಡುಗೆ ಕೋಣೆ ವೀಕ್ಷಣೆ ಮಾಡಿ, ವಸತಿ ನಿಲಯಕ್ಕೆ ಮುಂದಿನ ಒಂದು ವಾರದಲ್ಲಿ ಸ್ನಾನಗೃಹ ಹಾಗೂ ಇನ್ನೂ ಹೆಚ್ಚುವರಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಪ್ರಗತಿ ಹಂತದಲ್ಲಿರುವ ಆಟದ ಮೈದಾನದ ಕಾಮಗಾರಿಗೆ ವೇಗ ನೀಡಿ, ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಬೇಕು ಎಂದು ಸೂಚನೆ ನೀಡಿದರು.ಶಾಲಾ ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹಾಜರಾತಿ ಮತ್ತು ಮಕ್ಕಳ ಕಲಿಕಾ ವಿವರ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಬೇಕು ಎಂದು ಮಕ್ಕಳಿಗೆ ಕಿವಿಮಾತುಗಳನ್ನು ಹೇಳಿದರು. ಮಕ್ಕಳಿಗೆ ದಿನ…

Read More

ಸಿಂದಗಿ: ಜ.೧೮ ರಿಂದ ಇಲ್ಲಿಯವರೆಗೆ ಆಯ್ದ ಪ್ರಾ.ಆ.ಕೇಂದ್ರಗಳಾದ ಚಾಂದಕವಟೆ,ಬಳಗಾನೂರ, ಆಲಮೇಲ, ಮಲಘಾಣ, ಮೋರಟಗಿ ಹಾಗೂ ಸಿಂದಗಿ ನಗರದ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಮಾತ್ರೆ ನುಂಗಿಸಲಾಗಿದೆ ಎಂದು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.ಪಟ್ಟಣದ ಬಸ್ ಡಿಪೋ ಆವರಣದಲ್ಲಿ ಹಮ್ಮಿಕೊಂಡ ಆನೆಕಾಲು ರೋಗ ಮುಕ್ತ ಸಮಾಜ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಫೆ.೧೦ ರಿಂದ ೨೮ರವರೆಗೆ ಮನೆ ಮನೆ ಭೇಟಿ ಮಾಡಿ ಮನೆಯಲ್ಲಿರುವ ಅರ್ಹ ಕುಟುಂಬದ ಸದಸ್ಯರಿಗೆ ಮಾತ್ರೆ ನುಂಗಿಸಲಾಗುತ್ತಿದ್ದು, ದಯವಿಟ್ಟು ಮಾತ್ರೆ ಸೇವಿಸಿ ಆನೆಕಾಲು ರೋಗ ನಿಯಂತ್ರಿಸುವಲ್ಲಿ ಸಮುದಾಯ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿ ನುಂಗಿಸುವರು. ಗರ್ಭಿಣಿ ಮಹಿಳೆಯರು, ದೀರ್ಘಕಾಲದ ರೋಗದಿಂದ ಬಳುಲುತ್ತಿರುವುರು ಸೇವಿಸಬಾರದು. ಮತ್ತು ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವನೆ ಮಾಡಬಾರದು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಮಲೇರಿಯಾ ಮೇಲ್ವಿಚಾರಕ ಪ್ರಭು ಜಂಗಿನಮಠ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡೆ, ಮಹಾಲಿಂಗ ಪಕೀರಪೂರ ಸೇರಿದಂತೆ ಸಾರಿಗೆ…

Read More

ಸಿಂದಗಿ: ಜ.೧೮ ರಿಂದ ಇಲ್ಲಿಯವರೆಗೆ ಆಯ್ದ ಪ್ರಾ.ಆ.ಕೇಂದ್ರಗಳಾದ ಚಾಂದಕವಟೆ,ಬಳಗಾನೂರ, ಆಲಮೇಲ, ಮಲಘಾಣ, ಮೋರಟಗಿ ಹಾಗೂ ಸಿಂದಗಿ ನಗರದ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಮಾತ್ರೆ ನುಂಗಿಸಲಾಗಿದೆ ಎಂದು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.ಪಟ್ಟಣದ ಬಸ್ ಡಿಪೋ ಆವರಣದಲ್ಲಿ ಹಮ್ಮಿಕೊಂಡ ಆನೆಕಾಲು ರೋಗ ಮುಕ್ತ ಸಮಾಜ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಫೆ.೧೦ ರಿಂದ ೨೮ರವರೆಗೆ ಮನೆ ಮನೆ ಭೇಟಿ ಮಾಡಿ ಮನೆಯಲ್ಲಿರುವ ಅರ್ಹ ಕುಟುಂಬದ ಸದಸ್ಯರಿಗೆ ಮಾತ್ರೆ ನುಂಗಿಸಲಾಗುತ್ತಿದ್ದು, ದಯವಿಟ್ಟು ಮಾತ್ರೆ ಸೇವಿಸಿ ಆನೆಕಾಲು ರೋಗ ನಿಯಂತ್ರಿಸುವಲ್ಲಿ ಸಮುದಾಯ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿ ನುಂಗಿಸುವರು. ಗರ್ಭಿಣಿ ಮಹಿಳೆಯರು, ದೀರ್ಘಕಾಲದ ರೋಗದಿಂದ ಬಳುಲುತ್ತಿರುವುರು ಸೇವಿಸಬಾರದು. ಮತ್ತು ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವನೆ ಮಾಡಬಾರದು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಮಲೇರಿಯಾ ಮೇಲ್ವಿಚಾರಕ ಪ್ರಭು ಜಂಗಿನಮಠ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡೆ, ಮಹಾಲಿಂಗ ಪಕೀರಪೂರ ಸೇರಿದಂತೆ ಸಾರಿಗೆ…

Read More

ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ೨೦೨೩-೨೪ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಸಾಲ,ಸಹಾಯಧನ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಸಮುದಾಯದವರಿಂದ (ಮುಸ್ಲಿಂ, ಕ್ರೈಸ್ತರು, ಬೌದ್ಧ, ಸಿಖ್ಖ, ಜೈನ್ ಮತ್ತು ಪಾರ್ಸಿ) ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು ಫೆಬ್ರವರಿ ೨೯ರೊಳಗೆ https://kmdconline.karnataka.gov.in/ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ಅಲ್ಪಸಂಖ್ಯಾತ ಸಮುದಾಯದವರಾಗಿರಬೇಕು. ಕರ್ನಾಟಕದ ಖಾಯಂ ರಹವಾಸಿಯಾಗಿರಬೇಕು. ಕುಟುಂಬ ವಾರ್ಷಿಕ ವರಮಾನ ನಗರ ಪ್ರದೇಶದಲ್ಲಿ ೧ ಲಕ್ಷ ಹಾಗೂ ಗ್ರಾಮೀಣ ಮಟ್ಟಲ್ಲಿ ೮೦ ಸಾವಿರ ಇರಬೇಕು. ಆಧಾರ್ ಕಾರ್ಡ, ಚುನಾವಣೆ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್‌ಬುಕ್ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನ ಆಜಾದ ಭವನ ರಸ್ತೆ, ಕನಕದಾಸ ಬಡಾವಣೆ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: ೦೮೩೫೨-೨೭೮೩೪೪ ಯನ್ನು ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಕರ್ನಾಟಕ ಅಲ್ಪಸಂಖ್ಯಾತರರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಸಂವಿಧಾನದ ಮಹತ್ವ ಎಲ್ಲರೂ ಅರಿಯಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕು ಹಾಗೂ ಕರ್ತವ್ಯ ನೀಡಿದೆ. ಇದರಡಿಯಲ್ಲಿ ಎಲ್ಲರೂ ಸಮನ್ವಯದಿಂದ ಜೀವನ ಮಾಡುವಂತಾಗಿದೆ ಎಂದು ಬಸವನ ಬಾಗೇವಾಡಿಯ ತಹಶೀಲ್ದಾರ್ ಯಮನಪ್ಪ ಸೋಮನಕಟ್ಟೆ ಹೇಳಿದರು.ಬಸವನಬಾಗೇವಾಡಿ ತಾಲೂಕಿನ ಮಣೂರ ಗ್ರಾಮ ಪಂಚಾಯತ್ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸ್ವಾಗತಿಸಿ, ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಣೂರು ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರು, ಸಾರ್ವಜನಿಕರು ಹಾಗೂ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ನಂತರ ಕಣಕಾಲ ಗ್ರಾಮ ಪಂಚಾಯತಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರಕ್ಕೆ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಾರ್ವಜನಿಕರು ಹಾಗೂ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ವಾಧ್ಯ ಮೇಳದೊಂದಿಗೆ, ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆ ವಾಚನ, ಗೊಂಬೆ ಕುಣಿತ, ವೇಷಭೂಷಣ, ಮಹಿಳೆಯರಿಂದ ಕುಂಭಮೇಳದೊಂದಿಗೆ ಅತೀ ವಿಜೃಂಭಣೆಯಿಂದ ಸ್ವಾಗತ ಮಾಡಿಕೊಂಡರು.ಈ ಸಂದರ್ಭದಲ್ಲಿ ಮಣೂರ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲು ರಾಠೋಡ, ನೋಡಲ್ ಅಧಿಕಾರಿಗಳಾದ ಸಿ.ಬಿ ಪಾಟೀಲ, ಬ.ಬಾಗೇವಾಡಿ…

Read More

ಇಂಡಿ: ಇಂಡಿ ತಾಲೂಕಿನಿಂದ ಗಡಿ ಮಹಾರಾಷ್ಟ್ರ ಭಾಗಕ್ಕೆ ಮೇವು ಸಾಗಾಣಿಕೆ ಮತ್ತು ಮಾರಾಟ ಮಾಡದಂತೆ ತಹಸೀಲ್ದಾರ ಮಂಜುಳಾ ನಾಯಕ ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಆದೇಶದಂತೆ ಅಗರಖೇಡ ಗ್ರಾಮದ ಹತ್ತಿರ ಚೆಕ್ ಪೋಸ್ಟ ನಿಯೋಜಿಸಲಾಗಿದೆ. ಪ್ರತಿದಿನ ಪಂಚಾಯತ ರಾಜ, ಕಂದಾಯ, ಪಶು ಸಂಗೋಪನೆ ಮತ್ತು ಪೋಲಿಸ ಇಲಾಖೆ ಸಿಬ್ಬಂದಿ ತಂಡವನ್ನು ರಚಿಸಿ ೨೪*೭ ರಂತೆ ಸದರಿ ತಂಡವನ್ನು ರಚಿಸಿದ್ದು ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಮೇಲು ಉಸ್ತುವಾರಿಯಾಗಿ ಡಾ. ಪ್ರಕಾಶ ಮಿರ್ಜಿ ಪಶು ವೈದ್ಯಾಧಿಕಾರಿಗಳು ಅಗರಖೇಡ ಮತ್ತು ಕಂದಾಯ ನೀರಿಕ್ಷಕ ಎಚ್.ಎಚ್. ಗುನ್ನಾಪುರ ಇವರು ನೋಡಿಕೊಳ್ಳುರೆಂದು ತಹಸೀಲ್ದಾರ ತಿಳಿಸಿದ್ದಾರೆ.ಪ್ರತಿ ತಂಡವು ಬೆಳಗ್ಗೆ ೬ ಗಂಟೆಯಿಂದ ಸಾಯಂಕಾಲ ೬ ಗಂಟೆಯ ವರೆಗೆ ಮತ್ತು ಸಾಯಂಕಾಲ ೬ ಗಂಟೆಯಿಂದ ಬೆಳಗ್ಗೆ ೬ ಗಂಟೆಯ ವರೆಗೆ ಪ್ರತಿದಿನ ಕಾರ‍್ಯ ನಿರ್ವಹಿಸುವರು. ತಮ್ಮ ಆಧೀನದಲ್ಲಿ ಬರುವ ಸಿಬ್ಬಂದಿಗಳಿಗೆ ಆದೇಶವನ್ನು ಜಾರಿಯು ಸದರಿಯ ಪ್ರಕಾರ ಕಾರ‍್ಯ ನಿರ್ವಹಿಸಲು ತಹಸೀಲ್ದಾರ ಸೂಚಿಸಿದ್ದಾರೆ.

Read More

ಇಂಡಿ: ಬುಲೆರೋ ಪಿಕ್ ಅಪ್ ಗೂಡ್ಸ್ ವಾಹನಗಳಲ್ಲಿ ಸಾಗಾಟ ಮಾಡುತ್ತಿದ್ದ ೧೧೦ ಕ್ಕೂ ಹೆಚ್ಚು ಆಕಳು ಹಾಗೂ ಕರುಗಳನ್ನು ಮದ್ಯರಾತ್ರಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ತಡೆದ ಹಿರೆಬೇವನೂರು ಗ್ರಾಮಸ್ಥರು ಅವುಗಳನ್ನು ರಕ್ಷಣೆ ಮಾಡಿದ್ದಾರೆ.ತಾಲೂಕಿನ ಹಿರೆಬೇವನೂರು ಗ್ರಾಮದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ನೆರೆಯ ಮಹಾರಾಷ್ಟ್ರದ ಅಕ್ಕಲಕೋಟದಿಂದ ಅಗರಖೇಡ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.ಜನರು ವಾಹನಗಳನ್ನು ತಡೆಯುತ್ತಿದ್ದಂತೆ ಎರಡು ವಾಹನಗಳ ಚಾಲಕರು ಪರಾರಿ ಜನರ ಕೈಗೆ ಸಿಕ್ಕಿ ಬಿದ್ದ ಓರ್ವ ಚಾಲಕ ಮೂರು ವಾಹನಗಳಲ್ಲಿದ್ದ ಆಕಳು ಹಾಗೂ ಕರುಗಳನ್ನು ವಾಹನಗಳಲ್ಲಿ ಕಟ್ಟಲಾಗಿತ್ತು. ಮೂರು ವಾಹನಗಳಲ್ಲಿ ಆಕಳು ಹಾಗೂ ಕರುಗಳನ್ನು ಹಾಕಿದ್ದರುಈ ವಿಷಯವನ್ನು ಇಂಡಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ಗ್ರಾಮಸ್ಥರು ನೀಡಿದರು. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಆಧಿಕಾರಿಗಳು ಹಾಗೂ ಸಿಬ್ಬಂದಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆಕಳು ಹಾಗೂ ಕರುಗಳನ್ನು ವಿಜಯಪುರದ ಗೋಶಾಲೆಗೆ ಪೊಲೀಸರು ಕಳುಹಿಸಿದ್ದಾರೆ.ಈ ವೇಳೆ ವಾಹನದಲ್ಲೇ…

Read More

‘ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ) – ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ, ೯೪೪೯೨೩೪೧೪೨ ನಿನ್ನೆ ಮೊನ್ನೆಯವರೆಗೂ ನಮ್ಮೊಂದಿಗೆ ಹಾಳು ಹರಟೆ ಹೊಡೆಯುತ್ತಿದ್ದವನು ನೋಡು ನೋಡುವುದರಲ್ಲಿ ಯಶಸ್ಸಿನ ಶಿಖರಕ್ಕೆ ತಲುಪಿದ್ದಾನೆ/ಳೆ ಅಂದರೆ ನಂಬಲು ಆಗುತ್ತಿಲ್ಲ. ಕೊನೆ ಬೆಂಚಿನಲ್ಲಿ ಕುಳಿತುಕೊಳ್ಳುತ್ತಿದ್ದವಳು ದೊಡ್ಡ ಅಧಿಕಾರಿ ಆಗಿದ್ದಾಳೆ. ಅದ್ಹೇಗೆ ಸಾಧ್ಯವಾಯಿತು? ನಾವೆಲ್ಲ ಅವಳಿಗಿಂತ ಓದಿನಲ್ಲಿ ಬಹಳ ಮುಂದೆ ಇದ್ದೆವು. ಕಂಪ್ಯೂಟರ್ ಪರದೆ ತೆರೆಯಲು ಬರದವನು ಈಗ ಹೈಟೆಕ್ ಜೀವನ ಸಾಗಿಸುತ್ತಿದ್ದಾನೆ. ಇಂಥ ವಿಚಿತ್ರಗಳನ್ನು ಪಟ್ಟಿ ಮಾಡುತ್ತ ಹೋದರೆ ಹನುಮನ ಬಾಲದಂತೆ ಬೆಳೆಯುತ್ತಲೇ ಹೋಗುತ್ತದೆ. ಹಾಗಾದರೆ ಮೊದಲು ಏನೂ ಇಲ್ಲದ ಪರಿಸ್ಥಿತಿಯಲ್ಲಿದ್ದವರು ನಂತರ ಏನೆಲ್ಲ ಪಡೆಯುವ ಸ್ಥಿತಿಗೆ ಹೇಗೆ ತಲುಪಿದರು ಎಂದು ಯೋಚಿಸಿದರೆ ನಮಗೆ ಉತ್ತರವಾಗಿ ಸಿಕ್ಕುವುದು ನಮ್ಮ ಆಯ್ಕೆಗಳು. ಹುಟ್ಟಿದಾಗ ನಾವೆಲ್ಲ ರಕ್ತ ಮಾಂಸದ ಮುದ್ದೆಗಳು ಬಿಟ್ಟರೆ ಮತ್ತೇನಿಲ್ಲ. ಕಣ್ಣು ಬಿಟ್ಟು ನೋಡುತ್ತ, ಕಿವಿಯಿಂದ ಆಲಿಸುತ್ತ, ಬಾಯಿಯಿಂದ ಆಸ್ವಾದಿಸುತ್ತ, ಮೂಗಿನಿಂದ ಆಘ್ರಾಣಿಸುತ್ತ, ಕೈಗಳಿಂದ ಸ್ಪರ್ಷಿಸುತ್ತ ತೇಟು ಪ್ರಾಣಿಯಂತೆ ಇರುತ್ತೇವೆ. ಹುಟ್ಟುವಾಗ ಎಲ್ಲರೂ ಒಂದೇ ಇದ್ದೆವು ಆದರೆ ನಮ್ಮೆಲ್ಲರ…

Read More