Author: editor.udayarashmi@gmail.com

ಆರುಬಾ ದ್ವೀಪ ರಾಷ್ಟ್ರದ ಅರಿಯಸ್ ವೈದ್ಯಕೀಯ ವಿಶ್ವವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನವರಾದ ಡಾ ಶಶಿಕಾಂತ ಪಟ್ಟಣ ಮತ್ತು ಡಾ ಜಯಶ್ರೀ ಪಟ್ಟಣ ದಂಪತಿಗಳುಆರುಬಾ ದ್ವೀಪ ರಾಷ್ಟ್ರದ ಅರಿಯಸ್ ವೈದ್ಯಕೀಯ ವಿಶ್ವ ವಿದ್ಯಾಲಯದ ಸಂಪರ್ಕಾಧಿಕಾರಿಯಾಗಿ ಡಾ ಪಟ್ಟಣ ದಂಪತಿಗಳ ನೇಮಕಗೊಂಡಿದ್ದಾರೆ.ಸ್ವಾತಂತ್ರ್ಯ ಹೋರಾಟಗಾರರ ಮನೆತನದ ಡಾ ಶಶಿಕಾಂತ ಪಟ್ಟಣ ಮತ್ತು ಡಾ ಜಯಶ್ರೀ ಪಟ್ಟಣ ಇವರು ತಮ್ಮ ಔಷಧೀಯ ವಿಜ್ಞಾನ ಮತ್ತು ಮಿಣಿ ಜೀವಶಾಸ್ತ್ರದ ಸಂಶೋಧನೆ ಮತ್ತು ಅಧ್ಯಯನ ಶೀಲತೆ ಕಂಡು ಆರುಬಾ ದ್ವೀಪ ರಾಷ್ಟ್ರದ ಅರಿಯಸ್ ವೈದ್ಯಕೀಯ ವಿಶ್ವ ವಿದ್ಯಾಲಯದ ಮುಖ್ಯ ಕಾರ್ಯ ನಿರ್ವಾಹಕ ಮತ್ತು ಡೀನ್ ಡಾ ಅಜಿತ್ ಮಹದೇವಪ್ಪ ರಾಮಪುರೆ ಕೆನಡಾ ಅರುಬಾ ಇವರ ಆದೇಶವನ್ನುಡಾ ರೀಟಾ ಅವರು ಡಾ ಶಶಿಕಾಂತ ಪಟ್ಟಣ ಮತ್ತು ಡಾ ಜಯಶ್ರೀ ಪಟ್ಟಣ ಇವರಿಬ್ಬರಿಗೂ ಕಳುಹಿಸಿ ಕೊಟ್ಟಿದ್ದಾರೆ.ಅರುಬಾ ವಿಶ್ವ ವಿದ್ಯಾಲಯದ ಆವರಣದಲ್ಲಿ ನಡೆಯುವ ವೈದ್ಯಕೀಯ ಶಿಕ್ಷಣ ಫಾರ್ಮಸಿ ಶಿಕ್ಷಣ ನರ್ಸಿಂಗ್ ಶಿಕ್ಷಣಗಳ ಪದವಿ ಕೋರ್ಸ್ ಗಳಿಗಾಗಿ ಭಾರತದಲ್ಲಿ ಯಾವುದೇ ಶಿಕ್ಷಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಮ್ಮ ಹರಿತ ಸಾಹಿತ್ಯದ ಮೂಲಕ ಸಮಾಜಮುಖಿ ಚಿಂತನೆಗಳನ್ನು ಬಿತ್ತರಿಸಿ ಇತಿಹಾಸದಲ್ಲಿ ಅಜರಾಮರರಾಗಿರುವ ಭಕ್ತ ಕನಕದಾಸರು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ರವೀಂದ್ರನಾಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಉಮಾ ಭೋಸಲೆ ಹೇಳಿದರು.ಶನಿವಾರ ನಗರದ ಗುರುದೇವ ಇಂಟರನ್ಯಾಶನಲ್ ಪಬ್ಲಿಕ್ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡ ಭಕ್ತ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಡೀ ಜಗತ್ತಿಗೆ ದಾಸ ಸಾಹಿತ್ಯ ಪ್ರಚುರಪಡಿಸಿ ಮನುಜಕುಲ ಒಂದೆ ಎಂದು ಸಾರಿ ಹೇಳಿದ ಕನಕದಾಸರು ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗಿಸುವಲ್ಲಿ ಶ್ರಮಿಸಿದ್ದಾರೆ. ಹಲವಾರು ಕೃತಿಗಳನ್ನು ರಚಿಸುವ ಮೂಲಕ ಕನಕದಾಸರು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದರು.ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಶಿಕ್ಷಕ ಕಬೂಲ್ ಕೊಕಟನೂರ, ದಾರ್ಶನಿಕರಲ್ಲಿ ಅಗ್ರಜರಾಗಿರುವ ಕನಕದಾಸರು ಭಕ್ತಿಯಲ್ಲೆ ದೇವರನ್ನು ಕಂಡವರಾಗಿದ್ದಾರೆ. ಸರ್ವಸ್ವ ಇದ್ದರೂ, ಲೌಕಿಕ ಜಗತ್ತಿಗೆ ತಿಲಾಂಜಲಿ ನೀಡಿ ದಾಸರಾದರು. ಕನಕದಾಸರ ಕಾವ್ಯದಲ್ಲಿ ತತ್ವ, ತಾರ್ಕಿಕತೆ ಮತ್ತು ಮನಸ್ಸಿನ ನಿಜವಾದ ಚಿಂತನೆಗಳಿವೆ ಇವರ ಕೃತಿಗಳಲ್ಲಿ ಕೇವಲ ಧಾರ್ಮಿಕ ವಿಚಾರಗಳಲ್ಲದೆ ಮಾಣವ ಜೀವನದ ದಾರಿದೀಪಗಳಾಗಿವೆ. ಇವುಗಳನ್ನು ನಮ್ಮ ನಿತ್ಯ ಜೀವನದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ:15-16ನೇ ಶತಮಾನದಲ್ಲೇ ಜಾತಿ ತಾರತಮ್ಯವನ್ನು ಧಿಕ್ಕರಿಸಿದ ಭಕ್ತ ಕನಕದಾಸರ ಜೀವನಾದರ್ಶ ಇಂದಿನ ಕಾಲಘಟ್ಟದಲ್ಲೂ ಪಾಲನೆಗೆ ಅರ್ಹವಾಗಿದೆ ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ನಂ. 2), ಮರಡಿ ಶಾಲೆಯಲ್ಲಿ ಶನಿವಾರ ಭಕ್ತ ಕನಕದಾಸರ ಜಯಂತಿ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಮಾನತೆಯ ತಳಹದಿಯಲ್ಲಿನ ಕನಕದಾಸರ ಮಾರ್ಗದರ್ಶನ ಅತ್ಯಂತ ಪ್ರಸ್ತುತವಾಗಿದೆ. ಅವರು ಕೇವಲ ಸಾಹಿತ್ಯ ರಚನೆಕಾರರಷ್ಟೇ ಅಲ್ಲ, ವಿಶ್ವಕ್ಕೆ ಆದರ್ಶ ನೀಡಿದ ಮಹಾನ್ ಮಾನವತಾವಾದಿ” ಎಂದರು.ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ, “ಅಸಮಾನತೆ ವಿರುದ್ಧ ಹೋರಾಡಿದ ಕನಕದಾಸರು ದೇಶ ಕಂಡ ಪ್ರಮುಖ ಹರಿಭಕ್ತರಲ್ಲಿ ಒಬ್ಬರು. ಇಂದಿನ ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ವೈಷಮ್ಯತೆಗೆ ಅವರ ಕೀರ್ತನೆಗಳೇ ಶಸ್ತ್ರವಾಗಬಹುದು” ಎಂದು ಹೇಳಿದರು.ಶಿಕ್ಷಕ ಎಚ್.ಜೆ. ಲೋಣಿ ಜಯಂತಿಯ ಮಹತ್ವ ಕುರಿತು ಮಾತನಾಡಿದರು.ಶಾಲೆಯ ವಿದ್ಯಾರ್ಥಿಗಳಾದ ಅಭಿಜಿತ್ ಇರಸೂರ, ಪ್ರಾಚಿ ರಾವುತ್, ಸಾನ್ವಿ ಝಂಡೆ, ರಾಣಿ ವಾಘಮೋರೆ, ಶ್ರಾವಣಿ ಕೋಳಿ, ಶ್ರದ್ಧಾ ಬುರುಡ, ಅಂಕುಶ ಕ್ಷತ್ರಿ, ಜಕರಾಯ ಕೋಳಿ, ವಿದ್ಯಾ ಕ್ಷತ್ರಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು‌ ಶನಿವಾರ ನಾಡಿನ ಶ್ರೇಷ್ಠ ಸಂತ ಶ್ರೀ ಭಕ್ತ ಕನಕದಾಸ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ಡೀನ ಅಲೈಡ ಹೆಲ್ತ್ ಸೈನ್ಸ, ಡಾ. ಎಸ್. ವಿ. ಪಾಟೀಲ, ಆರ್ ಆ್ಯಂಡ್ ಡಿ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ವೈದ್ಯಕೀಯ ಉಪಅಧೀಕ್ಷಕ, ಡಾ. ರವಿಕುಮಾರ ಬಿರಾದಾರ, ಉಸಿರಾಟ ಚಿಕಿತ್ಸೆ ವಿಬಾಗದ ಮುಖ್ಯಸ್ಥ, ಡಾ. ಕೀರ್ತಿವರ್ಧನ್ ಕುಲಕರ್ಣಿ, ಡಾ. ಸಂಜಯ ವಾವರೆ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ, ಡಾ. ರಘುವೀರ, ಜಿ. ಕುಲಕರ್ಣಿ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ., ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭಕ್ತ ಕನಕದಾಸರ ಜಯಂತೋತ್ಸವವನ್ನು ಆಚರಿಸಲಾಯಿತು.ಬಿಜೆಪಿ ಕಾರ್ಯಾಲಯದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಪೂಜೆ ಸಲ್ಲಿಸಲಾಯಿತು. ನಂತರ ಕನಕದಾಸರ ವೃತ್ತಕ್ಕೆ ತೆರಳಿದ ಕಾರ್ಯಕರ್ತರು ಕನಕದಾಸರ ವೃತ್ತಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕನಕದಾಸರು ಶ್ರೇಷ್ಠ ದೈವಭಕ್ತರು, ಅವರಲ್ಲಿರುವ ಅದಮ್ಯ ದೈವ ಭಕ್ತಿ ಪ್ರತಿಯೊಬ್ಬರಿಗೂ ಸ್ಪೂರ್ತಿ, ಕನಕದಾಸರ ಶ್ರೇಷ್ಠ ಭಕ್ತಿಗೆ ಕೇಶವ ಮೆಚ್ಚಿಕೊಂಡಿದ್ದ, ಅವರು ರಚಿಸಿದ ಕೀರ್ತನೆಗಳು ಉದಾತ್ತ ಜೀವನ ನಡೆಸಲು ದಾರಿದೀಪವಾಗಿವೆ ಎಂದರು.ಕೀರ್ತನೆ ಅಂದ್ರೆ ಪರಮಾತ್ಮನ ಕೀರ್ತಿಯನ್ನ ಆರಾಧಿಸುವಂತಹ ಭಜನೆಗಳು. ಈ ಕೀರ್ತನೆಗಳ ಮೂಲಕ ಕನಕದಾಸರು ಉದಾತ್ತ ಸಮಾಜ ನಿರ್ಮಾಣಕ್ಕಾಗಿ ಮಾರ್ಗದರ್ಶಿಯಾಗಿದ್ದಾರೆ, ಕನಕದಾಸರ ಚಿಂತನೆಯನ್ನು ನಾವು ಅಳವಡಿಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮೇಯರ್ ಎಂ.ಎಸ್. ಕರಡಿ, ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿ, ಉಮೇಶ ಕಾರಜೋಳ, ಭೀಮಾಶಂಕರ ಮುಳುಗೌಡ…

Read More

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ಸಮಾಜದಲ್ಲಿದ್ದ ಅಸಮಾನತೆ, ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ದಾಸಶ್ರೇಷ್ಠರು ಕನಕದಾಸರು. ಅವರ ಚಿಂತನೆಗಳು, ವಿಚಾರಗಳು ಮತ್ತು ಸಮಾಜ ಸುಧಾರಣೆಯ ದೃಷ್ಟಿಕೋನಗಳು ಇಂದಿಗೂ ಪ್ರಸ್ತುತ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.ಅವರು ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಸಮಾರಂಭದಲ್ಲಿ ಮಾತನಾಡಿದ ಕುಲಸಚಿವ ಶಂಕರಗೌಡ ಸೋಮನಾಳ, “ಕನಕದಾಸರು ೧೫-೧೬ ನೇ ಶತಮಾನದಲ್ಲಿ ಸಮಾಜಿಕ ಸಮಾನತೆಗಾಗಿ ಹೋರಾಡಿದವರು. ಸಮಾಜದ ಢಾಂಬಿಕತೆ, ವರ್ಗ ಸಂಘರ್ಷದ ವಿರುದ್ಧ ಧ್ವನಿ ಎತ್ತಿದವರು. ಅವರು ಸಾಹಿತ್ಯ ಮೂಲಕ ಮಹಿಳಾ ಸಬಲೀಕರಣ ಹಾಗೂ ಸ್ತ್ರೀ ಸ್ವಾತಂತ್ರ್ಯದ ಅಗತ್ಯತೆಯ ಕುರಿತಾಗಿಯೂ ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ ದಾಸ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸಮಾಜದಲ್ಲಿ ಧನಾತ್ಮಕ ಬದಲಾವಣೆಗಳನ್ನು ತಂದಿದ್ದಾರೆ” ಎಂದರು.ಕಾರ್ಯಕ್ರಮದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಳೆದ ನೂರು ವರ್ಷಗಳಿಂದ ರಾಷ್ಟ್ರ ಪುನರ್ ನಿರ್ಮಾಣದ ಈ ಮಹಾನ್ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇಡೀ ಸಮಾಜವನ್ನು ಸಂಘಟಿಸುವ ಕಾರ್ಯ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಾಡುತ್ತಿದೆ ಎಂದು ಅಶೋಕ ಅಲ್ಲಾಪುರ ಹೇಳಿದರು.ಸಿಂದಗಿ ಪಟ್ಟಣದ ಜ್ಯೋತಿ ನಗರದ ಲಕ್ಷ್ಮಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘಟನೆ ಮತ್ತು ಸೇವೆಗಳ ೧೦೦ ವರ್ಷಗಳ ಯಾತ್ರೆಯ ಗೃಹ ಸಂಪರ್ಕ ಅಭಿಯಾನದ ಕರಪತ್ರಗಳನ್ನು ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದ ಅವರು, ೧೯೨೫ರ ವಿಜಯದಶಮಿಯಂದು ಪ್ರಾರಂಭವಾದ ಆರ್‌ಎಸ್‌ಎಸ್ ಸಂಘಕ್ಕೆ ಇದೀಗ ನೂರರ ಸಂಭ್ರಮ. ಸಂಘ ಇಂದು ಪ್ರಪಂಚಕ್ಕೆ ಅತಿದೊಡ್ಡ ಸಾಮಾಜಿಕ ಸಂಘಟನೆಯಾಗಿ ಬೆಳೆದಿದೆ. ಲಕ್ಷಾಂತರ ಜನರನ್ನು ಸೇವಾಕಾರ್ಯ ಮತ್ತು ಸಮಾಜದ ಚಟುವಟಿಗಳಲ್ಲಿ ತೊಡಗಿಸಿದೆ. ಹಾಗಾಗಿ ಸಂಘದ ಕುರಿತಾಗಿ ಇನ್ನಷ್ಟು ಜನರಲ್ಲಿ ತಿಳುವಳಿಕೆ ಮತ್ತು ಸಂಘ ನಡೆದುಕೊಂಡು ಬಂದ ದಾರಿಯ ಬಗ್ಗೆ ಗೃಹ ಸಂಪರ್ಕ ಅಭಿಯಾನದ ಮೂಲಕ ಜಾಗೃತಿ ಮೂಡಿಸುವ ದಿಸೆಯಲ್ಲಿ ಈ ಆಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ನಗರದ ಮನೆ-ಮನೆಗಳಿಗೆ ತೆರಳಿ ಸಂಘದ ಸೇವೆಗಳ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಲುಷಿತಗೊಂಡ ಮನಸ್ಸುಗಳ ಕೊಳೆ ತೊಳೆಯುವ ಸಾಧನಗಳಾಗಿ ಕನಕದಾಸರ ವಿಚಾರಧಾರೆಗಳು ಇಂದು ಪ್ರಸ್ತುತವಾಗಿವೆ ಎಂದು ಎಚ್.ಜಿ. ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಭಕ್ತ ಕನಕದಾಸರ ೫೩೮ನೆಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಬಸವಾದಿ ಪ್ರಮಥರು ಸಮಾಜದ ಕೊಳೆಯನ್ನು ವಚನಗಳ ಮೂಲಕ ತೊಳೆದಂತೆ ೧೬ನೆಯ ಶತಮಾನದಲ್ಲಿ ಪುರಂದರದಾಸರು ಮತ್ತು ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜ ಶುದ್ಧಿಕರಣ ಮಾಡಲು ಅವಿರತ ಶ್ರಮಿಸಿದವರಾಗಿದ್ದಾರೆ ಎಂದರು. ವೇದಿಕೆಯ ಮೇಲೆ ಗ್ಯಾರಂಟಿ ಯೋಜನೆ ತಾಲೂಕಾಧ್ಯಕ್ಷ ಶ್ರೀಶೈಲ ಕೌಲಗಿ, ಅಶೋಕ ತೆಲ್ಲೂರ, ಎಸ್.ಆರ್.ಅಗಸಬಾಳ, ಅರವಿಂದ ಡೋಣೂರ, ಮಲ್ಲಣ್ಣ ಸಾಲಿ, ನಿಂಗಣ್ಣ ಬಿರಾದಾರ, ಭೀಮರಾಯ ಅಮರಗೋಳ ಇದ್ದರು.ಕಾರ್ಯಕ್ರಮದಲ್ಲಿ ಸುನಂದಾ ಯಂಪುರೆ, ಸುದರ್ಶನ ಜಂಗಣ್ಣಿ, ಚಂದ್ರಶೇಖರ ದೇವರೆಡ್ಡಿ, ಶ್ಯಾಮಲಾ ಮಂದೇವಾಲ, ಎ.ಆಯ್.ಮಕಾಂದಾರ, ಗಂಗಾಧರ ಸೋಮನಾಯಕ, ನಿಖಿಲ್ ಖಾನಾಪೂರ, ಡಾ.ಅಂಬರೀಷ ಬಿರಾದಾರ, ಎಸ್.ಎಸ್.ಸಾತಿಹಾಳ, ರಾಜು ಸಿಂದಗಿ, ಸಿ.ಬಿ.ಬಾಬಾನಗರ, ಮಲ್ಲಿಕಾರ್ಜುನ ಸಾವಳಸಂಗ, ಆರ್.ಕೆ.ಪಾಟೀಲ ಸೇರಿದಂತೆ ಕುರುಬ…

Read More

ವಿಜಯಪುರ ಜಿಲ್ಲಾಡಳಿತದಿಂದ ಸಂತ ಕನಕದಾಸ ಜಯಂತಿ ಆಚರಣೆ | ಸಚಿವ ಡಾ.ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ ೩೧೬ ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಕನಕದಾಸರ ಚಿಂತನೆಗಳು ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದೆ. ಕ್ಲಿಷ್ಟಕರ ಹಾಗೂ ಸಮಾಜದಲ್ಲಿ ಮೌಢ್ಯತೆ ತುಂಬಿದ ಸಂದರ್ಭದಲ್ಲಿ ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ…

Read More

ಧಾತ್ರಿ ಸಮಗ್ರ ಹಾಲುಣಿಸುವಿಕೆ ನಿರ್ವಹಣಾ ಕೇಂದ್ರ-ಮದರ್ ಮಿಲ್ಕ ಬ್ಯಾಂಕ್‌ಗೆ ಸಚಿವ ಡಾ.ಎಂ.ಬಿ.ಪಾಟೀಲ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲಾಗಿದ್ದು, ಅವಧಿ ಪೂರ್ವ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಹಾಗೂ ಮಕ್ಕಳ ಆರೋಗ್ಯ ವೃದ್ದಿಗೆ ಈ ಕೇಂದ್ರ ಅತ್ಯಂತ ಸಹಕಾರಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಜಿಲ್ಲಾಸ್ಪತ್ರೆಯ ಎಂಸಿಎಚ್ ವಿಭಾಗದಲ್ಲಿ ಶನಿವಾರ ಆಶ್ರಯ ಹಸ್ತ ಫೌಂಡೇಶನನ್ ೨.೬೦ ಕೋಟಿ ರೂ. ಸಿಎಸ್‌ಆರ್ ಅನುದಾನದಲ್ಲಿ ಸ್ಥಾಪಿಸಲಾದ ಧಾತ್ರಿ ಸಮಗ್ರ ಹಾಲುಣಿಸುವಿಕೆಯ ನಿರ್ವಹಣಾ ಕೇಂದ್ರ ಹಾಗೂ ಮದರ್ ಮಿಲ್ಕ್ ಬ್ಯಾಂಕ್ ಉದ್ಘಾಟಿಸಿ ಅವರು ಮಾತನಾಡಿ, ಪ್ರತಿ ಮಗುವಿಗೆ ತಾಯಿ ಹಾಲು ದೊರೆಯಬೇಕೆಂಬ ಸದುದ್ದೇಶದೊಂದಿಗೆ ಸ್ಥಾಪಿಸಲಾದ ಈ ಹಾಲುಣಿಸುವಿಕೆ ನಿರ್ವಹಣಾ ಕೇಂದ್ರವನ್ನು ಹೈದ್ರಾಬಾದ್‌ನ ಸುಶೇನಾ ಹೆಲ್ಥ್ ಫೌಂಡೇಶನ್ ನಿರ್ವಹಣೆ…

Read More