Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಆಲಮಟ್ಟಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ರೈತರು ಶನಿವಾರ ಮನವಿ ಅರ್ಪಿಸಿದರು.ಅಧಿಕಾರಿಗಳ ಸಭೆಯ ನಂತರ ರೈತರಿದ್ದ ಸ್ಥಳಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರೈತರ ಮನವಿ ಸ್ವೀಕರಿಸಿದರು.ರಾಜ್ಯ ಬಜೆಟ್ ನಲ್ಲಿ ಕೆಬಿಜೆಎನ್ ಎಲ್ ಗೆ ಹೆಚ್ಚಿನ ಅನುದಾನ ಒದಗಿಸಬೇಕು, ಯುಕೆಪಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಪ್ರವಾಸಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಿ ಆಲಮಟ್ಟಿಯನ್ನು ಪ್ರವಾಸಿ ತಾಣಕ್ಕೆ ಹೆಚ್ಚಿನ ಅನುದಾನ ನೀಡಬೇಕು, ಈ ಭಾಗದಲ್ಲಿ ಕೃಷ್ಣಾ ನದಿಯಿದೆ, ನೀರು ಸಾಕಷ್ಟಿದೆ, ಕೂಡಗಿ ಉಷ್ಣ ವಿದ್ಯುತ್ ಸ್ಥಾವರವೂ ಇದೆ, ವಿದ್ಯುತ್ ಸೌಕರ್ಯವಿದೆ, ಹೀಗಾಗಿ ಇಲ್ಲಿ ವಿವಿಧ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು, ಆಲಮಟ್ಟಿ ಯೋಜನೆಯ ಸಂತ್ರಸ್ತರ ಮಕ್ಕಳಿಗೆ ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸಬೇಕು ಎಂದರು. ಅಧಿಕಾರಿಗಳು ರೈತರ ಯಾವುದೇ ಮಾತಿಗೂ ಸರಿಯಾಗಿ ಸ್ಪಂದಿಸುವುದಿಲ್ಲ ಏರು ಧ್ವನಿಯಲ್ಲಿ ಮಾತನಾಡುತ್ತಾರೆ ಎಂದು ರೈತರು ಆರೋಪಿಸಿದರು.ಈ ಭಾಗದ ನೀರಾವರಿ ಸಮಸ್ಯೆಗಳ ಬಗ್ಗೆ ಇದೇ ತಿಂಗಳು 12 ಇಲ್ಲವೇ…
ಇಂಡಿ: ಮರಗೂರದ ಗ್ರಾಮದ ಭೀಮಾಶಂಕರ ಕಾರ್ಖಾನೆ ಚುನಾವಣೆಗೆ ಒಟ್ಟು ೪೬ ಜನ ನಾಮಪತ್ರ ಸಲ್ಲಿಸಿರುವುದಾಗಿ ಚುನಾವಣೆ ಅಧಿಕಾರಿ ಮತ್ತು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.ನಾಮ ಪತ್ರ ಸಲ್ಲಿಸಲು ಫೆ.೩ ಕೊನೆಯ ದಿನವಾಗಿತ್ತು. ಇಂದು ಕಬ್ಬು ಬೆಳೆಗಾರ ಸದಸ್ಯರ ಮತಕ್ಷೇತ್ರಕ್ಕೆ ೯ ಅಭ್ಯರ್ಥಿಗಳು, ಸಹಕಾರ ಸಂಘಗಳ ಮತಕ್ಷೇತ್ರಕ್ಕೆ ಮೂವರು ಮತ್ತು ಕಬ್ಬು ಬೆಳೆಗಾರರಲ್ಲದ ಮತ ಕ್ಷೇತ್ರಕ್ಕೆ ಒಬ್ಬರು ನಾಮ ಪತ್ರ ಸಲ್ಲಿಸಿದ್ದಾರೆ.ಚುನಾವಣೆ ಕಣದಲ್ಲಿ ಇಂಡಿ ಮತಕ್ಷೇತ್ರದ ಶಾಸಕರು ಮತ್ತು ಭೀಮಾ ಶಂಕರ ಸಕ್ಕರೆ ಅಧ್ಯಕ್ಷರಾದ ಯಶವಂತಗೌಡ ಪಾಟೀಲ, ಮಾಜಿ ಶಾಸಕ ರವಿಕಾಂತ ಪಾಟೀಲ, ಮಾಜಿ ಶಾಸಕ ಡಾ|| ಸಾರ್ವಭೌಮ ಬಗಲಿ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರು.
ಬಸವನಬಾಗೇವಾಡಿ: ಹನ್ನೆರಡನೆಯ ಶತಮಾನದಲ್ಲಿ ವಚನದ ಮೂಲಕ ಸಮಾನತೆಯ ಕ್ರಾಂತಿಯನ್ನು ಮಾಡಿದ ವಿಶ್ವ ಗುರು ಬಸವಣ್ಣನವರ ಜನ್ಮ ಸ್ಥಳವನ್ನು ಅಭಿವೃದ್ಧಿ ಪಡಿಸಬೇಕೆಂದು ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಅವರು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.ಪಟ್ಟಣದ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಅವರು ಮಾತನಾಡಿ, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕರನ್ನಾಗಿ ಮಾಡಲು ಸಚಿವ ಸಂಪುಟದಲ್ಲಿ ಸಭೆಯು ಘೋಷಣೆ ಮಾಡಿದಕ್ಕೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವರನ್ನು ಅಭಿನಂದಿಸಲು ಸಮಸ್ತ ಬಸವಾಭಿಮಾನಿಗಳು ಸಿದ್ದರಾಗಿದ್ದೇವೆ. ಬೃಹತ್ ಅಭಿನಂದನಾ ಸಮಾವೇಶವನ್ನು ಏರ್ಪಡಿಸಲು ತಾವುಗಳು ಒಂದು ದಿನಾಂಕವನ್ನು ನಿಗದಿಪಡಿಸಿ ಸಮಯವನ್ನು ಕೊಟ್ಟರೆ ನಾವು ಒಂದು ಲಕ್ಷದವರೆಗೆ ಬಸವಭಕ್ತರನ್ನೂ ಸೇರಿಸಿ ಬೃಹತ್ ಸಮಾವೇಶ ಮಾಡುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ ,ಶಾಸಕ ಅಶೋಕ ಮನಗೂಳಿ, ಬಸವೇಶ್ವರ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ, ಹರೀಶ ಅಗರವಾಲ, ಅನಿಲ ಅಗರವಾಲ, ಬ್ಲಾಕ್ ಅಧ್ಯಕ್ಷ ಸುರೇಶ ಹರಿವಾಳ, ಬಸವರಾಜ…
ಬಸವನಬಾಗೇವಾಡಿ: ಪಟ್ಟಣಕ್ಕೆ ಮೊದಲ ಬಾರಿಗೆ ಆಗಮಿಸಿದ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಶನಿವಾರ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಜಯಘೋಷದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿಕೊಂಡರು.ಕಲಬುರಗಿಯಿಂದ ರಸ್ತೆ ಮಾರ್ಗವಾಗಿ ತಾಲೂಕಿನ ದಿಂಡವಾರ ಗ್ರಾಮದ ಮೂಲಕ ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಪ್ರವೇಶಿಸಿದ ಡಿ.ಕೆ ಶಿವಕುಮಾರ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಬೀರಲಿಂಗೇಶ್ವರ ದೇವಸ್ಥಾನ ಹಾಗೂ ವಚನ ಶಿಲಾ ಮಂಟಪಕ್ಕೆ ಭೇಟಿ ದರ್ಶನ ಪಡೆದುಕೊಂಡ ನಂತರ ಸನ್ಮಾನ ಸ್ವೀಕರಿಸಿದರು.ಬಸವನನಬಾಗೇವಾಡಿ ಪಟ್ಟಣದ ಆರಾಧ್ಯ ದೈವ ಮೂಲ ನಂದೀಶ್ವರನ ದರ್ಶನ ಪಡೆದರು.ಇದೇ ಸಂದರ್ಭದಲ್ಲಿ ನಂದೀಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಮೂಲನಂದೀಶ್ವರನಿಗೆ ಹಣೆ ಹಚ್ಚಿ ನಮಸ್ಕರಿಸಿರುವುದು ವಿಶೇಷ ಗಮನ ಸೆಳೆಯಿತು.ಮೂಲ ನಂದೀಶ್ವರನ ದರ್ಶನ ಪಡೆದ ಅವರು ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗಿರುವ ಮೆಗಾಮಾರುಕಟ್ಟೆಯ ಕಾಮಗಾರಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಮನಗೂಳಿ ಹಿರೇಮಠದ ಕಾರ್ಯಕ್ರಮಕ್ಕೆ ತೆರಳಿದರು.ಈ ಸಂದರ್ಭದಲ್ಲಿ ಸಿದ್ದಲಿಂಗ ಸ್ವಾಮೀಜಿ, ಸಚಿವ ಶಿವಾನಂದ ಪಾಟೀಲ, ವಿಧಾನಪರಿಷತ್ತಿನ ಸದಸ್ಯ…
ಲಿಂ.ಶಿವಕುಮಾರ ಸ್ವಾಮೀಜಿಗೂ ’ಭಾರತ ರತ್ನ’ ಗೌರವ ಸಿಗಲಿ ವಿಜಯಪುರ: “ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮಿಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು ಎಂಬುದು ನಮ್ಮ ಆಗ್ರಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.ಶನಿವಾರ ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು ಹೀಗೆ;“ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಹೆಸರಾಗಿದ್ದವರು ಶಿವಕುಮಾರ ಸ್ವಾಮೀಜಿಗಳು. ಅವರಿಗೆ ಈ ಗೌರವ ಸಲ್ಲಬೇಕು ಎಂಬುದು ನಮ್ಮ ಒತ್ತಾಯ. ಈ ಬಗ್ಗೆ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ವಿಚಾರದಲ್ಲಿ ತೀರ್ಮಾನ ಅವರಿಗೆ ಬಿಟ್ಟಿದೆ” ಎಂದು ಪ್ರತಿಕ್ರಿಯಿಸಿದರು.
ಸಂಗನಬಸವ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ & ಧರ್ಮ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಸಮುದಾಯದ ಸರ್ವಾಂಗೀಣ ಏಳಿಗೆಗಾಗಿ ಪಂಚಪೀಠಗಳು ಮತ್ತು ವಿರಕ್ತಮಠಗಳು ಸೇರಿಕೊಂಡು ಲಿಂಗಾಯತ ಎಲ್ಲ ಒಳಪಂಗಡಗಳನ್ನು ಒಗ್ಗೂಡಿಸಿ ಕೇಂದ್ರ ಮತ್ತು ರಾಜ್ಯದಲ್ಲಿ ಮೀಸಲಾತಿ ಪಡೆಯುವಂತಾಗಬೇಕು. ಇದಕ್ಕೆ ರಂಭಾಪುರಿ ಜಗದ್ಗುರುಗಳು ನೇತೃತ್ವ ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಇಂದು ಶನಿವಾರ ಸಂಸ್ಥಾನ ಹಿರೇಮಠ ಆಯೋಜಿಸಿದ್ದ ಶತಾಯುಷಿ ಶ್ರೀ ಸಂಗನಬಸವ ಕಲ್ಯಾಣ ಮಂಟಪ ಲೋಕಾರ್ಪಣೆ ಹಾಗೂ ಉಭಯ ಶ್ರೀಗಳ ಧ್ವನಿ ಸುರುಳಿ ಬಿಡುಗಡೆ ಮತ್ತು ಸಂಗನಬಸವ ಶ್ರೀ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಧರ್ಮ ಸಭೆಯಲ್ಲಿ ಪಾಲ್ಗೊಂಡ ಸಚಿವರು, ಭಕ್ತರ ದೈವ ಅಭಿನವ ಧ್ವನಿಸುರುಳಿ ಬಿಡುಗಡೆ ಮಾಡಿ ಮಾತನಾಡಿದರು.ಪಂಚಪೀಠಗಳು ಮತ್ತು ವಿರಕ್ತಮಠಗಳು ಲೋಪದೋಷಗಳನ್ನು ಸರಿಪಡಿಸಲು ಲಿಂಗಾಯಿತ ಸಮುದಾಯದ ಉಪಪಂಗಡಗಳನ್ನು ಒಗ್ಗೂಡಿಸಬೇಕು. ಎಲ್ಲ ಉಪಪಂಗಡಗಳಿಗೆ ರಾಜ್ಯದಲ್ಲಿ 2ಎ ಮತ್ತು ಕೇಂದ್ರದಲ್ಲಿ…
ವಿಜಯಪುರ: ರಾಮ ಮಂದಿರ ನಿರ್ಮಾಣ ಕಾರ್ಯದ ಹೋರಾಟದ ಕರ್ಣಧಾರತ್ವ ವಹಿಸಿದ ಹಾಗೂ ಜನಸೇವೆಯನ್ನೇ ತಮ್ಮ ಜೀವನ ಎಂದು ಭಾವಿಸಿದ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆಯಾಗಿರುವುದು ಸಂತಸವನ್ನು ಇಮ್ಮಡಿಗೊಳಿಸಿದೆ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದ್ದಾರೆ.ರಾಜಕೀಯ ರಂಗದಲ್ಲಿ ಭೀಷ್ಮ ಪಿತಾಮಹನಂತೆ ಗೋಚರಿಸುವ ಅಪರೂಪದ ವ್ಯಕ್ತಿತ್ವ ಎಲ್.ಕೆ. ಅಡ್ವಾಣಿ ಅವರದ್ದು. ಜನರ ಧ್ವನಿಯಾಗಿ ಸಂಸತ್ ನಲ್ಲಿ ಗುಡುಗುತ್ತಿದ್ದ ಅವರು ಸಿದ್ದಾಂತಗಳೊಂದಿಗೆ ರಾಜಿ ಮಾಡಿಕೊಂಡವರಲ್ಲ. ದಿ.ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿ ಜಿ ಅವರ ಜೋಡಿ ದೇಶದಲ್ಲಿ ಅನುಪಮ ಪ್ರಗತಿಯ ಕ್ರಾಂತಿಯನ್ನೇ ಉಂಟು ಮಾಡಿತು.ಹಿಂದುತ್ವದ ಮೇಲೆ ಅಚಲ ಶ್ರದ್ದೆ, ಜನರ ಮೇಲೆ ಅಪಾರ ಕಳಕಳಿ, ಎಷ್ಟೇ ಕಷ್ಟ ಬಂದರೂ ಛಲದಿಂದ ಹೋರಾಡುವ ಜನನಾಯಕರಾಗಿರುವ ಎಲ್.ಕೆ. ಅಡ್ವಾಣಿ ಒಬ್ಬ ಆದರ್ಶಮಯಿ, ಕರುಣಾಮಯಿ. ರಾಷ್ಟ್ರಕ್ಕೆ ಕೊಡುಗೆ ನೀಡಿದ ಅಡ್ವಾಣಿಜಿ ಅವರು ಒಬ್ಬ ಶ್ರೇಷ್ಠ ರತ್ನ, ಈಗ ಅವರು ಭಾರತ ರತ್ನಕ್ಕೆ ಭಾಜನರಾಗಿರುವುದು ಸಕಲರೂ ಸಂತಸ ಪಡುವ…
ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಗ್ಯಾರಂಟಿ ಎನ್ನದಿರಿ | ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ | ಪತ್ರಕರ್ತರಿಗೆ ರಾಜಕೀಯ ಬೇಡ | ಸುದ್ದಿ ವಸ್ತುನಿಷ್ಠವಾಗಿರಲಿ ಪತ್ರಕರ್ತರ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಸಿಎಂ ಸಿದ್ಧರಾಮಯ್ಯ ಕರೆ ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ೩೮ನೇ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಿಮ್ಮೊಂದಿಗೆ ನಾವಿರುತ್ತೇವೆ. ನಾವು ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದನ್ನು ಬರೆಯಿರಿ, ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದು ಬರೆಯಿರಿ. ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಸಲಹೆ ನೀಡಿದರು.ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ…
ಬಸವನಬಾಗೇವಾಡಿ: ಸಂವಿಧಾನ ದಿನಾಚರಣೆ ಅಂಗವಾಗಿ ಫೆಬ್ರುವರಿ ೧೦ ರಿಂದ ೧೪ ರವರೆಗೆ ನಡೆಯುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದಚಿತ್ರ ಮೆರವಣಿಗೆಯನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಆಚರಿಸುವಲ್ಲಿ ಅಧಿಕಾರಿಗಳು ಸನ್ನದರಾಗಬೇಕು ಎಂದು ತಹಶೀಲ್ದಾರ ಯಮನಪ್ಪ ಸೋಮನಕಟ್ಟಿ ಹೇಳಿದರು.ಪಟ್ಟಣದ ನೂತನ ಪುರಸಭೆಯ ಸಭಾಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಫೆ, ೧೦ ರಂದು ಮುತ್ತಗಿ ಗ್ರಾಮಕ್ಕೆ ಆಗಮಿಸುವ ಜಾಗೃತಿ ಜಾಥಾವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಅದ್ದೂರಿಯಾಗಿ ಬರಮಾಡಿಕೊಳ್ಳಲಾಗುವದು ನಂತರ ಯರನಾಳ ಮಾರ್ಗವಾಗಿ ಜಾಗೃತಿ ನಾಲ್ಕು ದಿನಗಳ ಕಾಲ ಜಾಗೃತಿ ಜಾತಾ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಂಚರಿಸಲಿದೆ, ಸಂವಿಧಾನ ದಿನಾಚರಣೆ ಪ್ರಯುಕ್ತ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ವಿಶೇಷವಾಗಿ ಪ್ರಬಂದ ಸೇರಿದಂತೆ ವಿವಿಧ ಚಟುವಟಿಕೆಗಳನ್ನ ಏರ್ಪಡಿಸುವ ಮೂಲಕ ಮಕ್ಕಳಿಗೆ ಸಂವಿಧಾನದ ಮಹತ್ವವನ್ನು ತಿಳಿಸಲಾಗುತ್ತದೆ. ಫೆ, ೧೧ ರಂದು ನಡೆಯುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವದು. ಕಾರ್ಯಕ್ರಮದ ಯಶಸ್ವಿಗೆ ತಾಲೂಕಿನಲ್ಲಿ…
’ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ’ – ವಿವೇಕಾನಂದ ಎಚ್.ಕೆ. ಬೆಂಗಳೂರು ಆರ್ಥಿಕ ಮೌಲ್ಯಗಳ ಬೆಳವಣಿಗೆ,ಧಾರ್ಮಿಕ ಮೌಲ್ಯಗಳ ವೃದ್ಧಿ,ರಕ್ಷಣಾ ಮೌಲ್ಯಗಳ ಹೆಚ್ಚಳ,ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ,ವಿದೇಶಗಳಲ್ಲಿ ಭಾರತದ ಬ್ರಾಂಡ್ ಮೌಲ್ಯ ಏರಿಕೆ,. ಸಾಮಾಜಿಕ ಸಾಮರಸ್ಯ ಕುಸಿತ,ಪ್ರಜಾಪ್ರಭುತ್ವದ ಮೌಲ್ಯಗಳ ನಾಶ,ಪ್ರಾಕೃತಿಕ ಸಂಪನ್ಮೂಲಗಳ ದುರುಪಯೋಗ,ರಾಜಕೀಯ ಮತ್ತು ಆಡಳಿತದಲ್ಲಿ ಸೇಡಿನ ಮನೋಭಾವ,ಮಾನವೀಯ ಮೌಲ್ಯಗಳ ಸಂಪೂರ್ಣ ಅಧೋಗತಿ.. ನರೇಂದ್ರ ಮೋದಿಯವರನ್ನು ಮೆಚ್ಚುವವರು ಮೇಲಿನ ಅಂಶಗಳಿಗೆ ಮತ್ತಷ್ಟು ಸೇರಿಸಿ ಅವರನ್ನು ಅಭಿವೃದ್ಧಿಯ ಹರಿಕಾರ ಎನ್ನುತ್ತಾರೆ,ಹಾಗೆಯೇ ಅವರನ್ನು ವಿರೋಧಿಸುವವರು ಕೆಳಗಿನ ಅಂಶಗಳಿಗೆ ಮತ್ತಷ್ಟು ಸೇರಿಸಿ ವಿನಾಶದ ಮುನ್ಸೂಚನೆ ಎಂದು ಟೀಕಿಸುತ್ತಾರೆ.. ವಾದ – ಪ್ರತಿವಾದ, ಅಂಕಿಅಂಶಗಳನ್ನು ಬಳಸಿಕೊಂಡು ವಿರೋಧಿಸಲು ಅಥವಾ ಸಮರ್ಥಿಸಲು ಸಾಕಷ್ಟು ವಿಷಯಗಳು ಸಿಗುತ್ತದೆ. ಆದರೆ ಅಂತಃಕರಣ ಪೂರ್ವಕವಾಗಿ, ಯಾವುದೇ ಪೂರ್ವಾಗ್ರಹ ಇಲ್ಲದೇ, ಪ್ರಕೃತಿಯ ಮೂಲದಿಂದ, ಭಾರತೀಯ ಮೌಲ್ಯಗಳ ಆಧಾರದ ಮೇಲೆ, ಸಂವಿಧಾನದ ಚೌಕಟ್ಟಿನಲ್ಲಿ, ದೇಶ ಮತ್ತು ಜನರ ಹಿತಾಸಕ್ತಿಗಳನ್ನೇ ಮುಖ್ಯವಾಗಿಸಿ ಚರ್ಚಿಸಿದಾಗ ಸ್ವಲ್ಪಮಟ್ಟಿಗೆ ಸತ್ಯ ಮತ್ತು ವಾಸ್ತವದ ಹತ್ತಿರ ಹೋಗಲು ಸಾಧ್ಯ. ಈಗಿನ ಪರಿಸ್ಥಿತಿಯಲ್ಲಿ ಅದು ಅಷ್ಟು ಸುಲಭವಲ್ಲ.…
