Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸ್ಪಷ್ಠನೆ ವಿಜಯಪುರ: ಕಾರಜೋಳ ಬಳಿ ಬಾಕಿ ಉಳಿದಿರುವ 500 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಭಾರತ ಗ್ರಾಮಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಇದರಿಂದ ಗ್ರಾಮ ಸ್ವರಾಜ್ಯ ಸಾಧ್ಯ ಎಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೇಳಿದ್ದರು. ಆವರ ಆಶಯದಂತೆ ನಮ್ಮ ಸರಕಾರ ರೈತರು, ಬಡವರು ಸೇರಿದಂತೆ ಎಲ್ಲ ಜಾತಿವರ್ಗಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಸಮಾಜದ ಎಲ್ಲ ವರ್ಗದ ಜನರಿಗೆ ಶಕ್ತಿ ತುಂಬಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ವಿಜಯಪುರ ಜಿಲ್ಲೆ ಮುಂಚೂಣಿಯಲ್ಲಿದೆ. ಗೃಹಲಕ್ಷ್ಮಿ ಯುವನಿಧಿ, ಅನ್ನಭಾಗ್ಯ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ…
Udayarashmi kannada daily newspaper
ದೈಹಿಕ ಶಿಕ್ಷಣ ಹಾಗೂ ಚಿತ್ರಕಲಾ ಶಿಕ್ಷಣ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ಕೊಲ್ಹಾರ: ಚಿತ್ರಕಲೆ ಹಾಗೂ ದೈಹಿಕ ಶಿಕ್ಷಣ ಶೈಕ್ಷಣಿಕ ರಂಗದ ಆಧಾರಸ್ತಂಭವಾಗಿದ್ದು ಇವೆರಡು ವಿಷಯಗಳು ಮಕ್ಕಳು ಜ್ಞಾನಾರ್ಜನೆ ಪಡೆಯುವ ಸಮಯದಲ್ಲಿ ಮಹತ್ವದ ಸ್ಥಾನ ಹೊಂದಿವೆ ಎಂದು ಬಸವನ ಬಾಗೇವಾಡಿ ಕ್ಷೇತಶಿಕ್ಷಣಾಧಿಕಾರಿ ವಸಂತ ರಾಠೋಡ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಸಿಕ್ಯಾಬ್ ಸಂಯುಕ್ತ ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬ.ಬಾಗೇವಾಡಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬ.ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲೂಕಿನ ಪ್ರೌಢಶಾಲಾ ದೈಹಿಕ ಶಿಕ್ಷಣ ಹಾಗೂ ಚಿತ್ರಕಲಾ ಶಿಕ್ಷಣ ಶಿಕ್ಷಕರ ಪುನಶ್ಚೇತನದ ಒಂದು ದಿನದ ತಾಲೂಕು ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಆಟೋಟಗಳ ಜೊತೆ ಶಿಸ್ತು ಬದ್ಧ ನಿಯಮಗಳ ಜ್ಞಾನದೊಂದಿಗೆ ಸದೃಢ ಆರೋಗ್ಯ ಭಾಗ್ಯ ಕಲ್ಪಿಸುವ ದಿವ್ಯ ಶಕ್ತಿ ದೈಹಿಕ ಶಿಕ್ಷಣ ಹೊಂದಿದ್ದರೆ, ಚಿತ್ರಕಲೆ ಕಲಿಕಾ ಹಿತಭಾವವನ್ನು ಉತ್ಸಾಹದ ಚಿಲುಮೆಯೊಂದಿಗೆ ಅದಮ್ಯಗೊಳಿಸುತ್ತದೆ. ಪಠ್ಯಾಧಾರಿತ ವಿಷಯಗಳೊಂದಿಗೆ ಇವೆರಡು ವಿಷಯಗಳು ಅನನ್ಯ ನಂಟು ಇರಿಸಿಕೊಂಡಿದ್ದು ಶಿಕ್ಷಕರು ಮಕ್ಕಳಿಗೆ ಈ ವಿಶೇಷ…
ತಿಕೋಟಾ: ವಿಧ್ಯಾರ್ಥಿಗಳು ತಮ್ಮ ಅಂತರಾಳದಲ್ಲಿರುವ ವಿಶೇಷ ಪ್ರತಿಭೆಯು ತಾವೇ ತಯಾರಿಸಿದ ವಿಜ್ಞಾನದ ಮಾದರಿಗಳಲ್ಲಿ ವ್ಯಕ್ತವಾಗಿದೆ ಎಂದು ನಿಕಟಪೂರ್ವ ಸಂಪನ್ಮೂಲ ವ್ಯಕ್ತಿ ರಮೇಶ ರಜಪೂತ ಹೇಳಿದರು.ಪಟ್ಟಣದ ಶಿವಲಕ್ಷ್ಮೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ನಡೆದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಮಾಡಿರುವ ಚಂದ್ರಯಾನ-3 ಆದಿತ್ಯ-ಎಲ್1, ಗ್ಲೋಬಲ್ ವಾರ್ಮಿಂಗ್, ಜಲಚಕ್ರ, ಕಾಡು ಬೆಳೆಸಿ ನಾಡು ಉಳಿಸಿ, ವಾಟರ್ ಇರಿಗೇಶನ್ ಮುಂತಾದ ಮಾದರಿಗಳನ್ನು ಮಾಡಿರುವ ವಿದ್ಯಾರ್ಥಿಗಳು ಮುಂದಿನ ಭಾವಿ ಜೀವನದ ವಿಜ್ಞಾನಿಗಳಾಗಿ ಹೊರಹೊಮ್ಮುತ್ತಾರೆ. ರಾಮಮಂದಿರ, ಶಿವಲಕ್ಷ್ಮೀ ಶಾಲೆ, ಮನೆಯ ಮಾದರಿ, ಸರ್ಕಾರಿ ಆಸ್ಪತ್ರೆ, ಮಾಡಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ಇಂಜಿನಿಯರ್ ಗಳಾಗುತ್ತಾರೆ ಎಂದು ಶುಭ ಹಾರೈಸಿದರು.ಕ್ಲಸ್ಟರ ಸಿಆರ್ಪಿ ಸುಜಾತ ಬಾಗಲಕೋಟ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ಜಿ.ಎಸ್.ಹಂಜಗಿ, ಅತಿಥಿಗಳಾಗಿ ಆರಕ್ಷಕ ಠಾಣೆ ಸಿಬ್ಬಂದಿ ಜಗದೀಶ ಹುನಗುಂದ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಹಾಂತೇಶ್ ಗುಜುರಿ, ಸುರೇಶ್ ಪೂಜಾರಿ, ಮದಾರ್ ಮುಜಾವರ್, ಸಿ.ಎಂ. ಸಾಲಿಮಠ,…
ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ಮಹಾಂತೇಶ ರಾಮಚಂದ್ರಗೌಡ ಬಿರಾದಾರ ಇವರು ಸುಮಾರು ೨೨ ವರ್ಷಗಳ ಕಾಲ ಭಾರತಾಂಬೆಯ ಸುದೀರ್ಘ ಸೇವೆ ಸಲ್ಲಿಸಿ ಸೇವಾನಿವೃತ್ತಿಯಾಗಿ ಲಚ್ಯಾಣ ಗ್ರಾಮಕ್ಕೆ ಮರಳಿದ ಅವರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ ದೊರೆಯಿತು.ಭಾರತಿಯ ಸೈನ್ಯದಲ್ಲಿ ೨೦೦೨ ರಲ್ಲಿ ಕೋರ್ ಇ ಎಮ್ ಇ ಸೇವೆಯನ್ನು ಪ್ರಾರಂಭಿಸಿ ದೇಶದ ಗಡಿಬಾಗಗಳಾದ ಜಮ್ಮು ಕಾಶ್ಮೀರದ ಪೂಂಚ್, ಓಡಿಸಾ,ಮಥುರಾ, ಅಂಡಮಾನ್ ನಿಕೋಬಾರ್, ಆಸಾಂ, ಹೀಗೆ ನಾನಾ ಭಾಗಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿಯಾದ ಅವರನ್ನು ಗ್ರಾಮದ ಶ್ರೀ ಸಿದ್ದಲಿಂಗ ಮಹಾರಾಜರ ಗೆಳೆಯರ ಬಳಗ ಆತ್ಮೀಯವಾಗಿ ಬರಮಾಡಿಕೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮಾಡಿದರು.ನಂತರ ಶ್ರೀ ಸಿದ್ದಲಿಂಗ ಮಹಾರಾಜರ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದ ಸಾನಿಧ್ಯವನ್ನು ಅಭಿನವ ಮುರುಘರಾಜೇಂದ್ರ ಸ್ವಾಮೀಜಿ ಹೀರೆಮಠ ಶಾರಶ್ಯಾಡ ಮತ್ತು ಇಂಡಿ ಓಂಕಾರ ಮಠದ ಡಾ. ಸ್ವರೂಪಾನಂದ ಸ್ವಾಮೀಜಿ ವಹಿಸಿದ್ದರು.ಬಿಟ ಆಫೀಸರ್ ಡಿ ಎ ಮುಜಗೌಂಡ ಹೊರ್ತಿ ಮಾತನಾಡಿ, ರಾಜ್ಯದಲ್ಲಿಯೇ ಲಚ್ಯಾಣ ಗ್ರಾಮ ಜಿಲ್ಲೆಯಲ್ಲಿ ಅತಿ ಹೆಚ್ಚು ಸೈನಿಕರನ್ನು…
ವಿಜಯಪುರ: ಸಹಜವಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಆದರೆ ಕೆಲವೊಂದು ವಿಕ್ಷಿಪ್ತ ಮನಸ್ಸುಗಳು ತಮ್ಮ ಸ್ವಾರ್ಥ ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡಲು ಹೊರಟಿರುವುದು ನನ್ನ ಮನಸ್ಸಿಗೆ ನೋವಾಗಿದೆ. ನನ್ನ ಆರೋಗ್ಯದ ವಿಷಯವನ್ನು ಸಹ ರಾಜಕಾರಣಕ್ಕೆ ಬೆಸೆಯುವುದು ಎಷ್ಟು ಸರಿ? ಈ ಸಂದರ್ಭದಲ್ಲಿ ಸೌಜನ್ಯ ತೋರುವ ಬದಲು ಈ ರೀತಿಯಾಗಿ ಕೆಟ್ಟ ರೀತಿಯಲ್ಲಿ ವರ್ತಿಸುತ್ತಿರುವುದು ಸರಿಯಲ್ಲ, ನಾನು ಆರೋಗ್ಯವಾಗಿದ್ದೇನೆ, ಗುಣಮುಖನಾಗಿದ್ದೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ನಾನು ನವದೆಹಲಿಗೆ ಪ್ರಯಾಣಿಸುವಾಗ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಈಗ ಆಸ್ಪತ್ರೆಯಿಂದ ಗುಣಮುಖರಾಗಿ ವಾಪಾಸ್ಸಾಗುತ್ತಿರುವೆ. ನನ್ನ ಆರೋಗ್ಯ ವಿಷಯವನ್ನು ರಾಜಕಾರಣಕ್ಕೆ ಬೆರೆಸುವುದು ಸರಿಯಲ್ಲ, ಸಾಮಾನ್ಯವಾಗಿ ಕಾಣುವ ಸಮಸ್ಯೆ ನನಗೂ ಕಾಣಿಸಿದೆ, ಈ ಬಾರಿ ವಿಶ್ರಾಂತಿ ತೆಗೆದುಕೊಳ್ಳದ ಪರಿಣಾಮ ಸ್ವಲ್ಪ ಆರೋಗ್ಯದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡು ಬಂದಿತ್ತು. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ, ಯಾವ ಆರೋಗ್ಯ ಸಮಸ್ಯೆಯೂ ಇಲ್ಲ…
ವಿಜಯಪುರ: ಬೆಂದರೆ ಮಾತ್ರ ಬೇಂದ್ರೆ ಎಂದು ಹೇಳಿದ ಮಾತು ನೂರಕ್ಕೆ ನೂರು ಸತ್ಯವಾಗಿದ್ದು, ಕವಿಯಾಗುವ ಮುನ್ನ ಕೇಳುವ ಕಿವಿಯಾಗಬೇಕು. ಇನ್ನೊಬ್ಬರ ನೋವಿಗೆ ಧ್ವನಿಯಾಗಬೇಕು. ಬೇರೊಬ್ಬರ ಭಾವನೆಗಳನ್ನು ನಾವು ಅರಿತುಕೊಂಡಾಗ ಮಾತ್ರ ಸುಂದರವಾದ ಕವಿತೆಯನ್ನು ಕಟ್ಟುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕವಿ ಪ.ಗು.ಸಿದ್ಧಾಪುರ ಹೇಳಿದರು.ನಗರದ ಬೆಂಗಳೂರು ಹೋಟೆಲ್ ಸಭಾಂಗಣದಲ್ಲಿ ಬೇಂದ್ರೆಯವರ ಜನ್ಮ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಪಿಡಿಜೆ ಕಾಲೇಜಿನ ಕನ್ನಡ ಉಪನ್ಯಾಸಕ ಸಂತೋಷ ವಿ.ಕುಲಕರ್ಣಿ ವಿರಚಿತ ಮೂರು ಕೃತಿಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕನ್ನಡ ಭಾಷಾ ಶ್ರೀಮಂತಿಕೆಯನ್ನು ಹೆಚ್ಚು ಮಾಡಿದ ಸಾಹಿತ್ಯ ಇಂದು ಸೊರಗುತ್ತಿರುವುದು ಕಂಡು ಬರುತ್ತಿದೆ. ಆದರೂ ಅದರ ಮಧ್ಯದಲ್ಲಿ ಸಂತೋಷ ಕುಲಕರ್ಣಿಯಂತಹ ಕವಿಗಳು ಬರೆಯುವವರು ಇರುವ ವರೆಗೂ ಕೆಲವು ಜನವಾದರೂ ಆಸಕ್ತ ಓದುಗರು ಇದ್ದೇ ಇರುತ್ತಾರೆ. ಅವರ ಮನವನ್ನು ಮುಟ್ಟುವುದಕ್ಕಾಗಿಯಾದರೂ ನಾನು ಬರೆಯಬೇಕು ಎಂದು ಗಟ್ಟಿ ಧೈರ್ಯ ಮಾಡಿ ಮೂರು ಕೃತಿಗಳನ್ನು ಲೋಕಾರ್ಪಣೆ ಮಾಡಿದ್ದು ಸಾಹಿತ್ಯ ಉಪಾಸಕರ ಮನವನ್ನು ಗೆಲ್ಲುತ್ತವೆ ಎಂದು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ…
ದೇವರಹಿಪ್ಪರಗಿ: ಶ್ರೀಬಾಲಹನುಮಾನ ೧೦ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಸಂಗ್ರಾಣಿ ಕಲ್ಲು ಹಾಗೂ ಭಾರ ಎತ್ತುವ ಸ್ಪರ್ಧೆಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.ಪಟ್ಟಣದ ಗಂಗಾನಗರದ ಶ್ರೀಬಾಲ ಹನುಮಾನನ ೧೦ನೇ ವರ್ಷದ ಜಾತ್ರೆಗೆ ಗುರುವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಜಾತ್ರೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ದಿ.೦೭ ಬುಧವಾರ ದವರೆಗೆ ಪುರಾಣ, ವಿವಿಧ ಸ್ಫರ್ಧೆ ಹಾಗೂ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಅಂತೆಯೇ ಶುಕ್ರವಾರ ದೇವಸ್ಥಾನದ ಆವರಣದಲ್ಲಿ ಸಂಗ್ರಾಣಿ, ಗುಂಡು ಕಲ್ಲು ಸೇರಿದಂತೆ ಭಾರವಾದ ಚೀಲಗಳನ್ನು ಎತ್ತುವ ಸ್ಪರ್ಧೆಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.೫ ಕಿಲೋದಿಂದ ಆರಂಭಿಸಿ ೭೦ ಕಿಲೋದವರೆಗೆ ಸಂಗ್ರಾಣಿ ಕಲ್ಲು ಹಾಗೂ ೧೭೦ ಕಿಲೋದವರೆಗೆ ಗುಂಡು ಕಲ್ಲುಗಳನ್ನು ಎತ್ತುವ ಸ್ಪರ್ಧೆಯಲ್ಲಿ ಪಟ್ಟಣ, ಮುಳಸಾವಳಗಿ ಸೇರಿದಂತೆ ವಿವಿಧ ಗ್ರಾಮಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು.ಜಾತ್ರಾ ಸಮೀತಿಯ ಅಧ್ಯಕ್ಷ ನಿಂಗು ಯಂಭತ್ನಾಳ, ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ (ಜಲಕತ್ತಿ), ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ದೇಸಾಯಿ, ಬಂಡೆಪ್ಪ ಬಿರಾದಾರ (ದಿಂಡವಾರ), ಭೀಮು ಒಂಟೆತ್ತೀನ, ಸೋಮು ದೇವೂರ,…
ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಬಡಾವಣೆಯ ಸರಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿ ಎ.ಎಂ.ಸಗರನಾಳ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಬುಧವಾರ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ರಾಜನಾಳ ಮಾತನಾಡಿ, ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಇಂತಹ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ತಮ್ಮ ಸೇವೆಯನ್ನು ನಿಷ್ಠೆಯಿಂದ ಸೇವೆ ಸಲ್ಲಿಸಿ ಮಕ್ಕಳ ಬದುಕಿಗೆ ಎ.ಎಂ ಸಗರನಾಳ ಅವರು ಬೆಳಕು ಚೆಲ್ಲಿದ್ದಾರೆ. ಅವರ ಸೇವೆ ಮಾದರಿಯಾಗಿದೆ ಎಂದು ಹೇಳಿದರು.ಎಚ್. ಬಿ.ಬಾರಿಕಾಯಿ ಮಾತನಾಡಿ, ಸೇವಾ ನಿವೃತ್ತಿ ಹೊಂದಿದ ಗುರುಮಾತೆ ಅಮರಾವತಿ ಸಗರನಾಳ ಅವರು 35 ವರ್ಷ ಈ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳಲು ಪ್ರೋತ್ಸಾಹಿಸಿ ಉತ್ತಮ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸನ್ಮಾನ ಸ್ವೀಕರಿಸಿದ ಸೇವಾ ನಿವೃತ್ತಿ ಹೊಂದಿದ ಎ.ಎಂ.ಸಗರನಾಳ ಮಾತನಾಡಿದರು.ಶಿಕ್ಷಣ ಇಲಾಖೆಯ ತನಿಖಾಧಿಕಾರಿ ಈರಣ್ಣ ಜುಳು ಜುಳೆ,…
ವಿಜಯಪುರ: ಹಾಲುಮತ ಧರ್ಮವು ಅತ್ಯಂತ ಶ್ರೇಷ್ಠವಾಗಿದ್ದು, ಈ ಧರ್ಮದ ಸಾರವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಜಯಪುರದ ಹಾಲುಮತ ವಿದ್ವಾಂಸ ಚಂದ್ರಕಾಂತ ಬಿಜ್ಜರಗಿ ಗುರೂಜಿ ಹೇಳಿದರು.ತಾಳಿಕೋಟಿ ತಾಲೂಕಿನ ಬೂದಿಹಾಳ ಪಿಟಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಹಾಲುಮತದ ಪ್ರತಿಯೊಂದು ಮನೆಗೆ ಭೇಟಿ ನೀಡಿದ ಅವರು, ತಾವು ಬರೆದ ಹಾಲುಮತದ ಗ್ರಂಥ ಪ್ರತಿಯೊಬ್ಬರಿಗೂ ತಲುಪಿಸಿ, ಮಧ್ಯ, ಮಾಂಸ, ಸೇವನೆ ಮಾಡಬಾರದು. ಒಳ್ಳೆಯ ಮನುಷ್ಯರಾಗಿ ಧರ್ಮದ ಮೂಲಸಾರದಂತೆ ಬದುಕಬೇಕು ಎಂದು ಹೇಳಿದರು.ಹಾಲುಮತದ ಜನಾಂಗದವರು ತಮ್ಮ ಮಕ್ಕಳಿಗೆ ಶಿಕ್ಷಣವಂತರಾಗಿ ಮಾಡಲು ಶ್ರಮಿಸಬೇಕು. ಶಿಕ್ಷಣದಿಂದಲೇ ಧರ್ಮದ ಏಳಿಗೆ ಸಾಧ್ಯ ಎಂದು ಹೇಳಿದರುಈ ಸಂದರ್ಭದಲ್ಲಿ ಹಾಲುಮತದ ಮುಖಂಡರಾದ ಮಲ್ಲಿಕಾರ್ಜುನ್ ನಾಯ್ಕಲ್, ಗ್ರಾಮ ಪಂಚಾಯತಿ ಸದಸ್ಯರಾದ ಕುಮಾರ್ ಗೌಡ ಬಿರಾದಾರ್, ಮಲ್ಲಿಕಾರ್ಜುನ ಕುಳಗೇರಿ, ಹನುಮಂತರಾಯ ಮಡಿಕೆಶ್ವರ್, ದೇವಕಾಂತ್ ಬಿಜ್ಜರಗಿ, ಸತೀಶ್ ಅಡವಿ ಮುಂತಾದವರು ಉಪಸ್ಥಿತರಿದ್ದರು.
