Author: editor.udayarashmi@gmail.com

ಸಿಂದಗಿ: ಅಲೆಮಾರಿ ಜನಾಂಗದವರು ಬದುಕು ಕಟ್ಟಿಕೊಳ್ಳಬೇಕು ಎನ್ನುವ ಹಿನ್ನಲೆಯಲ್ಲಿ ಅಲ್ಲಿಯ ಭಾಷೆ, ಭಾವನೆ, ಬದುಕು, ಬವಣೆಯನ್ನು ಚಿಮಣಿ ಬೆಳಕಿನ ಬದುಕು ಕೃತಿಯಲ್ಲಿ ಕಟ್ಟಿ ಕೊಡಲಾಗಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ.ಎಂ.ಎಂ ಪಡಶೆಟ್ಟಿ ಹೇಳಿದರು.ಪಟ್ಟಣದಲ್ಲಿ ‘ಚಿಮಣಿ ಬೆಳಕಿನ ಬದುಕು ಅನ್ನೋ ನಾಟಕ ಕೃತಿಯ ಮುಖಪುಟವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಈಗಾಗಲೆ ಕಥೆ, ಕವಿತೆ ಬರೆಯುತ್ತಿರುವ ನಾಗೇಶ ತಳವಾರ, ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಚಿಮಣಿ ಬೆಳಕಿನ ಬದುಕು ಕೃತಿಯ ಮೂಲಕ ನಾಟಕಕಾರರಾಗಿ ಹೊರಹೊಮ್ಮಿದ್ದಾರೆ ಎಂದು ಹಿರಿಯ ಕಥೆಗಾರ ಡಾ.ಚನ್ನಪ್ಪ ಕಟ್ಟಿ ಹೇಳಿದರು.ಮೈಸೂರು ಜಿಲ್ಲಾ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಸಿಂದಗಿಯ ಮಾಧ್ಯಮರಂಗ ಫೌಂಡೇಶನ್, ಮೈಸೂರಿನ ಸ್ವಜನ್ಯ ಕಲಾ ವೇದಿಕೆ ಜಂಟಿಯಾಗಿ, ಫೆ.೧೦ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಿವೆ. ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್ ಗಂಗಾಧರ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ವಿಜಯಲಕ್ಷ್ಮಿ ಕರಿಕಲ್ ‘ಚಿಮಣಿ ಬೆಳಕಿನ ಬದುಕು’ ಕೃತಿ ಕುರಿತು ಮಾತನಾಡಲಿದ್ದಾರೆ. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್…

Read More

ಆಲಮಟ್ಟಿ: ಮಾನವ ಜೀವನ ಅತ್ಯಮೂಲ್ಯ. ಬಹು ಜನ್ಮಗಳ ಪುಣ್ಯದ ಫಲವಾಗಿ ಮಾನವ ಜೀವನ ಪ್ರಾಪ್ತವಾಗಿದೆ, ಕಾಯ ಕಣ್ಮರೆಯಾದರೂ ನೆನಹು ಶಾಶ್ವತವಾಗಿ ಉಳಿಯುವ ಹಾಗೆ ಬದುಕುವುದೇ ನಿಜವಾದ ಬದುಕು ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ತಾಲ್ಲೂಕಿನ ಚಿಮ್ಮಲಗಿ ಭಾಗ-2 ಗ್ರಾಮದಲ್ಲಿ ಶುಕ್ರವಾರ ಸಂಜೆ ಜರುಗಿದ ಅರಳೆಲೆ ಕಟ್ಟಿಮನಿ ಹಿರೇಮಠದ ಲಿಂ.ಶ್ರೀ ನೀಲಕಂಠ ಸ್ವಾಮೀಜಿಗಳ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ಮಾನವ ಜೀವನ ಶಾಶ್ವತವಲ್ಲ, ಹುಟ್ಟಿದ ಮನುಷ್ಯ ಒಂದಿಲ್ಲ ಒಂದು ದಿನ ಅಗಲುವುದು ಅನಿವಾರ್ಯ, ಹುಟ್ಟುವಾಗ ಹೆಸರು ಇರುವುದಿಲ್ಲ, ಉಸಿರು ಇರುತ್ತದೆ, ಉಸಿರು ನಿಂತರೂ ಹೆಸರು ಉಳಿಯುವ ಹಾಗೆ ಬದುಕಿದವರು ಲಿಂ. ನೀಲಕಂಠ ಶ್ರೀಗಳು ಎಂದರು.ಭಕ್ತ ಸಂಕುಲಕ್ಕೆ ಅವರು ಕೊಟ್ಟ ಸಂಸ್ಕಾರ ಮತ್ತು ಶೋಭಾಮೃತ ಜೀವನ ಶ್ರೇಯಸ್ಸಿಗೆ ಸ್ಪೂರ್ತಿ ತಂದಿದೆ, ಲಿಂ. ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಸೇವೆಯನ್ನು ಮಾಡಿ, ಅವರ ಅಂತಃಕರಣ ಆಶೀರ್ವಾದಕ್ಕೆ ಪಾತ್ರರಾಗಿದ್ದರು. ಅವರು ನಮ್ಮೆಲ್ಲರನ್ನು ಅಗಲಿ ವರ್ಷ ಕಳೆದರೂ ಅವರ ನೆನಪು ಸದಾ ಹಸಿರಾಗಿದೆ…

Read More

ಯಡ್ರಾಮಿ: ಜೇವರ್ಗಿ ಭಾಜಪ ತಾಲೂಕು ಘಟಕಕ್ಕೆ ಬಿಜೆಪಿ ಕಾರ್ಯಕರ್ತ ಜಗದೀಶ ತಳವಾರ ಮಳ್ಳಿ ಅವರನ್ನು ನೇಮಿಸುವಂತೆ ಪಕ್ಷದ ಕಾರ್ಯಕರ್ತರು ಪಕ್ಷದ ಮುಖಂಡರಲ್ಲಿ ಒತ್ತಾಯಿಸಿದ್ದಾರೆ.ಜಗದೀಶ ತಳವಾರ ಈ ಹಿಂದೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುವ ಮೂಲಕ ಸಕ್ರೀಯ ಮತ್ತು ಕ್ರಿಯಾಶೀಲ ಕಾರ್ಯಕರ್ತರಾಗಿ ಮೂರು ದಶಕಗಳಿಂದಲೂ ಪಕ್ಷಕ್ಕಾಗಿ ದುಡಿದಿದ್ದಾರೆ. ತಳವಾರ ಅವರ ಪಕ್ಷ ನಿಷ್ಠೆ, ಸಂಘಟನಾ ಶಕ್ತಿಯನ್ನು ಪರಿಗಣಿಸಿ ಅವರನ್ನು ಜೇವರ್ಗಿ ಭಾಜಪ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ, ಯಡ್ರಾಮಿ ಶಕ್ತಿ ಕೇಂದ್ರದ ಅಧ್ಯಕ್ಷ ರುದ್ರಗೌಡ ಬಿರಾದಾರ ನಾಗರಹಳ್ಳಿ, ರಾಚಣ್ಣ ತಳವಾರ ಯಡ್ರಾಮಿ, ಶಂಕರಗೌಡ ಸುಂಬದ, ಮಂಜುನಾಥ ಹೂಗಾರ್, ಶ್ರೀಶೈಲ ಮಡಿವಾಳರ , ಸಂತೋಷ ಕೊರವಾರ, ರಾಘವೇಂದ್ರ ಕುಳಗೇರಿ, ಹಣಮಂತ ಕಾಚಾಪುರ, ಬರಗೂಡಿ ಬೀರಾಳ, ಬಸನಗೌಡ. ಎಸ್. ಪಾಟೀಲ್ ಮಳ್ಳಿ, ಮಲ್ಲಣ್ಣ ಕೊಗಟನೂರ, ಮಂಜುನಾಥ ಅಗಸರ, ವೀರೇಶ ಬ್ಯಾಕೋಡ, ಈರಣ್ಣ ಹೆಳವರ, ಈರಣ್ಣ ಸುಂಕದ ಯಡ್ರಾಮಿ ಇತರರು ಒತ್ತಾಯಿಸಿದ್ದಾರೆ.

Read More

ಮುದ್ದೇಬಿಹಾಳದಲ್ಲಿ ಸಿಎಂ ಸಿದ್ಧರಾಮಯ್ಯರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮುದ್ದೇಬಿಹಾಳ: ಇಲ್ಲಿಯವರೆಗೆ ಯಾವ ಸರ್ಕಾರವೂ ನೀಡದ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಬಂದಾಗ ಆಶ್ವಾಸನೆ ನೀಡಿದಂತೆ ೫ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.ಶುಕ್ರವಾರ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.ಬಿಜೆಪಿಯವರು ನಮ್ಮ ಯೋಜನೆಗಳನ್ನು ಅನಿಷ್ಠಾನಗೊಳಿಸಲು ಸರ್ಕಾರದಲ್ಲಿ ಹಣ ಇಲ್ಲ ಅಂತಾರೆ, ಚುನಾವಣೆ ಪ್ರಚಾರದಲ್ಲಿ ಈ ೫ ಯೋಜನೆಗಳು ಜಾರಿಗೊಂಡರೆ ಸರ್ಕಾರ ದಿವಾಳಿ ಆಗುತ್ತೆ ಅಂದಿದ್ರು, ಜೂನ್ ನಿಂದಲೇ ಯೋಜನೆಗಳು ಜಾರಿಯಾಗಿವೆ. ದಿವಾಳಿ ಆಗಿದೆಯಾ ಎಂದು ಪ್ರಶ್ನಿಸಿದರು. ಜನತೆಯನ್ನು ತಪ್ಪುದಾರಿಗೆಳೆಯಲು ೫ ಗ್ಯಾರಂಟಿಗಳನ್ನು ಕೊಟ್ಟಿರುವ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಹಣ ಇಲ್ಲ ಅಂತಾ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರ್ಕಾರದಲ್ಲಿ ದುಡ್ಡು ಇರದೇ ಇದ್ದರೆ ಈ ಅಭಿವೃದ್ಧಿ ಕಾಮಗಾರಿಗಳಿಗೆ ದುಡ್ಡು ಎಲ್ಲಿಂದ ಬರ್ತಿತ್ತು? ಸಮಾಜಕಲ್ಯಾಣ, ಲೊಕೋಪಯೋಗಿ,…

Read More

ಮುದ್ದೇಬಿಹಾಳ: ಪಟ್ಟಣದಲ್ಲಿ ತರಾತುರಿಯಲ್ಲಿ ಒಳ ಮೀಸಲಾತಿ ಜಾರಿಗೆ ತರಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಂಜಾರ ಸಮುದಾಯದ ಮುಖಂಡರು ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದ ಬೃಹತ್ ಟೆಂಟ್ ಬಳಿ ದಿಢೀರನೆ ಪ್ರತಿಭಟನೆಗೆ ಇಳಿದರು.ಈ ವೇಳೆ ಮಾತನಾಡಿದ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಾಬುರಾಜೇಂದ್ರ ನಾಯಕ, ಸಿದ್ದರಾಮಯ್ಯ ಸರ್ಕಾರ ಕೇವಲ ವೋಟ್ ಬ್ಯಾಂಕ್ ಅಸ್ತ್ರ ಬಳಸುತ್ತಿದೆ. ಮುಖ್ಯಮಂತ್ರಿಗಳ ಸಾಮಾಜಿಕ ನ್ಯಾಯ ಕೇವಲ ಭಾಷಣಕಷ್ಟೇ ಮಾತ್ರ ಸೀಮಿತವಾಗಿದೆ. ತಾವೂ ಒಬ್ಬ ಹಿಂದುಳಿದ ಸಮುದಾಯದಿಂದ ಬಂದವರಾಗಿ ಅತ್ಯಂತ ಹಿಂದುಳಿದ ಸಮಾಜವಾದ ಬಂಜಾರ ಸಮಾಜಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ತರಾತುರಿಯಾಗಿ ಒಳ ಮೀಸಲಾತಿ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಪ್ರಯತ್ನಿಸುತ್ತಿರುವ ಈ ಸರ್ಕಾರದ ನಡೆ ಅವೈಜ್ಞಾನಿಕವಾಗಿದೆ. ಇದನ್ನು ರಾಜ್ಯದಾದ್ಯಂತ ಬಂಜಾರ ಸಮುದಾಯ ತೀವ್ರವಾಗಿ ಖಂಡಿಸುತ್ತದೆ ಎಂದರು.ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದಾಗ ಪೊಲೀಸರು ಬಂಜಾರ ಸಮುದಾಯದ ಮುಖಂಡರನ್ನು ಬಂಧಿಸಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಬಂಜಾರ…

Read More

ಸಿಂದಗಿ: ಗ್ರಾಮದಲ್ಲಿರುವ ಪ್ರತಿ ಕುಟುಂಬ ನರೇಗಾ ಯೋಜನೆಯ ಸಹಾಯಧನ ಪಡೆಯಲು ಅರ್ಹತೆ ಹೊಂದಿದ್ದು ಕೃಷಿ ಹೊಂಡ, ಬದು ನಿರ್ಮಾಣ, ಕುರಿ ಶೆಡ್, ದನದ ಶೆಡ್, ಕೋಳಿ ಶೆಡ್, ಇಂಗು ಗುಂಡಿ ಹೀಗೆ ಹಲವು ವ್ಯಯಕ್ತಿಕ ಯೋಜನೆಯ ಕಾಮಗಾರಿಗಳ ಸದುಪಯೋಗ ಪಡೆಯಬೇಕು ಎಂದು ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ ಹೇಳಿದರು.ತಾಲೂಕಿನ ಬಂದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಓತಿಹಾಳ ಗ್ರಾಮದ ಅಮೃತ ಸರೋವರ ದಡದಲ್ಲಿ ಹಮ್ಮಿಕೊಂಡ ನರೇಗಾ ದಿವಸ ಆಚರಣೆ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬೇರೆ ಕಡೆ ಕೆಲಸಕ್ಕೆ ಹೋಗಬಯಸುವವರು ಕೂಡಾ ಈ ಯೋಜನೆಯಲ್ಲಿ ಕೆಲಸ ಮಾಡಿ ದಿನಕ್ಕೆ ೩೧೬ ರೂ. ಗಳಂತೆ ವರ್ಷಕ್ಕೆ ಒಂದು ಕುಟುಂಬ ೧೦೦ ದಿನ ಕೆಲಸ ಮಾಡಲು ಅರ್ಹರರು ಆದ್ದರಿಂದ ಇದರ ಪ್ರಯೋಜನ ಎಲ್ಲರೂ ಪಡೆಯಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಾಜ್ ಶಹಾಪುರ, ಕಾರ್ಯದರ್ಶಿ ರಾಜಾಸಾಬ್ ಮುಜಾವರ್, ಗ್ರಾಮ ಪಂಚಾಯತ್ ಸದಸ್ಯರು ಶ್ರೀ ಕೇಶುರಾಯ ಮಕಣಪುರ, ಮಲ್ಲು ನಾಕೇತ್ತಿನ,…

Read More

ವಿಜಯಪುರದಲ್ಲಿ ನಿಕಾನ್ ಛಾಯಾಗ್ರಹಣ ಕಾರ್ಯಗಾರ ಉದ್ಘಾಟನೆ ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಕರ್ನಾಟಕ ಛಾಯಾಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಶುಭಶ್ರೀ ಹೋಟೆಲ್ ಸಭಾಂಗಣದಲ್ಲಿ ನಿಕಾನ್ ಛಾಯಾಗ್ರಹಣ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತುಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ಹರ್ಷಗೌಡ ಪಾಟೀಲ್, ಜಗತ್ತಿನ ಎಲ್ಲಾ ನೋವು-ನಲಿವುಗಳ ಜೊತೆಯಲ್ಲಿ ಐತಿಹಾಸಿಕ ದಾಖಲೀಕರಣ ಮಾಡುವವರು ಛಾಯಾಗ್ರಾಹಕರು. ಛಾಯಾಗ್ರಾಹಕರಿಗೆ ನಿಜವಾದ ದಾಖಲುದಾರರು ಎಂದರೆ ತಪ್ಪಾಗಲಾರದು. ಇವರ ವೃತ್ತಿ ಗೌರವಕ್ಕೆ ಎಲ್ಲರು ಸಹಕರಿಸೋಣ. ಛಾಯಾಗ್ರಾಹಕರು ತಮ್ಮಲ್ಲಿ ನೋವಿದ್ದರೂ ಎದುರು ಇರುವವರಿಗೆ ಸ್ಮಾಯಿಲ್ ಪ್ಲೀಸ್ ಎಂದು ಅವರ ನಗುವನ್ನು ಸೆರೆಹಿಡಿಯುತ್ತಾರೆ. ಇಂತಹ ಛಾಯಾಗ್ರಾಹಕ ಕಲಾವಿದರಿಗೆ ನಾವು ಗೌರವಿಸಬೇಕು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ರಾಜ್ಯ ಕೆಪಿಎ ನಿರ್ದೇಶಕ ನಾಗರಾಜ್ ಟಿ. ಸಿ. ಮಾತನಾಡಿ, ರಾಜ್ಯದಲ್ಲಿ ಛಾಯಾಗ್ರಾಹಕರ ಸಂಘಟನೆ ಮಾಡುತ್ತಿದ್ದು, ವಿಜಯಪುರ ಜಿಲ್ಲೆಯ ಛಾಯಾಗ್ರಾಹಕರು ಒಗ್ಗಟ್ಟಾಗಲು ವಿಜಯಪುರ ಜಿಲ್ಲಾ ನೂತನ ಛಾಯಾಗ್ರಹಕರ ಸಂಘಕ್ಕೆ ಆಜೀವ ಸದಸ್ಯರಾಗಿ ರಾಜ್ಯ ಕೆಪಿಎದಿಂದ ಸಿಗುವ ಎಲ್ಲ ಸೌಲಭ್ಯಗಳಿಗೆ ಪಾಲುದಾರರಾಗಬೇಕೆಂದು ವಿನಂತಿಸಿಕೊಂಡರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ…

Read More

ಶಹಾಪುರದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪ ಶಹಾಪುರ: ನಗರದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಾಹನ ಚಾಲನಾ ಕೌಶಲ್ಯ ತರಬೇತಿ ಶಿಬಿರ ಕಾರ್ಯಕ್ರಮ ನಡೆಸಲಾಯಿತು.ಸುರಕ್ಷತಾ ಮಾಸಚರಣೆಯಲ್ಲಿ ಕಲಬುರ್ಗಿ ಜಂಟಿ ಸಾರಿಗೆ ಆಯುಕ್ತರು ಸಿದ್ದಪ್ಪ ಕಲ್ಲೇರಿ ಹಾಗೂ ಬಸವರಾಜ್ ಕಡ್ಲಿ ಇವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಸಂಚಾರಿ ನಿಯಮ ಕಿರು ಪುಸ್ತಕವನ್ನು ರಾಜ್ಯಾಧ್ಯಕ್ಷ ಆನಂದ ವಿ. ಪಾಟೀಲ್ ಬಿಡುಗಡೆ ಮಾಡಿದರು.ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ಚಿಹ್ನೆಗಳ ಪಾಲನೆ ಮಾಡಬೇಕು. ರಸ್ತೆ ಸುರಕ್ಷತೆಯಲ್ಲಿ ಚಾಲಕನ ಕರ್ತವ್ಯ ಬಹಳ ಮುಖ್ಯವಾಗಿದೆ. ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸಬಾರದು. ಸಂಚಾರಿ ಚಿಹ್ನೆಗಳು, ಸಂಕೇತಗಳು, ನಿಯಮ ತಿಳಿದು ಇವುಗಳನ್ನು ತಪ್ಪದೇ ಪಾಲಿಸಬೇಕೆಂದು RTO ಮಿಲಿಂದಕುಮಾರ ಯಾದಗಿರಿ ಇವರು ಸೂಚಿಸಿದರು.ರಾಜ್ಯ ಉಪಾಧ್ಯಕ್ಷರಾದ ಯಲ್ಲಪ್ಪ ಬಿ. ದೊಡಮನಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಮರಳು ಸಿದ್ದಯ್ಯ ಹಿರೇಮಠ್, ಚಂದ್ರಶೇಖರ್ ಅರಬೋಳ, ಎಸ್. ಎಮ್. ಪಾಟೀಲ್, ಮಂಗಿಲಾಲ್ ಮಗನಲಾಲ್ ಜೈನ,…

Read More

ಬೆಣ್ಣೆದೋಸೆ ನಗರಿ ದಾವಣಗೆರೆಯಲ್ಲಿ ಇಂದಿನಿಂದ ಪತ್ರಕರ್ತರ ಕಲರವ ದಾವಣಗೆರೆ: ಜಿಲ್ಲೆಯಾಗಿ ಮೊದಲ ಬಾರಿಗೆ ರಾಜ್ಯ ಮಟ್ಟದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಫೆ.3ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ.ಮೆರವಣಿಗೆ ಪೂರ್ವದಲ್ಲಿ ಹರ್ಡೇಕರ್ ಮಂಜಪ್ಪ, ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ನಂತರ ಅಂಬೇಡ್ಕರ್ ವೃತ್ದದಿಂದ ಮಾಧ್ಯಮದ ಮಿತ್ರರ ಬೃಹತ್ ಮೆರವಣಿಗೆ ನಡೆಯಲಿದ್ದು, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಆಯುಕ್ತರಾದ ರೇಣುಕಾ ಚಾಲನೆ ನೀಡಲಿದ್ದಾರೆ.ಸಾರೋಟನಲ್ಲಿ ಇರಿಸಲಾಗುವ ವೃಕ್ಷದ ಆಕೃತಿಯಲ್ಲಿ ಬರುವ ರಂಬೆ-ಕೊಂಬೆಗಳಲ್ಲಿ ಎಲ್ಲಾ ಪತ್ರಿಕೆಗಳ ಶಿರೋನಾಮೆಗಳನ್ನು ಬಿಂಬಿಸಲಾಗುವುದು. ಮೆರವಣಿಗೆಯಲ್ಲಿ ಕಲಾ ತಂಡಗಳು, ಆನೆ ಗಮನ ಸೆಳೆಯಲಿವೆ. ಪತ್ರಕರ್ತರು, ಸಾಹಿತಿಗಳು, ಕನ್ನಡಪರ ಹೋರಾಟಗಾರರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.ಉದ್ಘಾಟನೆ: ಮೆರವಣಿಗೆ ನಂತರ ಬೆಳಿಗ್ಗೆ 10.30 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಘನ ಉಪಸ್ಥಿತಿ ಮತ್ತು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ…

Read More

ಕೆಂಭಾವಿ: ರೈತ ಸಂಘದ ಹೋರಾಟಗಾರ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತದೇವಿಂದ್ರಪ್ಪ ಗೌಡ.ವಿ.ಪೊಲೀಸ ಪಾಟೀಲ ಮಾಲಗತ್ತಿ ಇವರನ್ನುಯಾದಗಿರಿ ಜಿಲ್ಲಾಧ್ಯಕ್ಷರಾಗಿ ಹಾಗೂ ಜಿಲ್ಲಾ ಗೌರವ ಅಧ್ಯಕ್ಷರಾಗಿ ಬಸವರಾಜಪ್ಪ ಗೌಡ. ಜಿ. ಮಾಲಿ ಪಾಟೀಲ ಹೆಮ್ಮಡಗಿ ಇವರನ್ನು ಆಯ್ಕೆ ಮಾಡಿ ವೇದಿಕೆ ರಾಜ್ಯಾಧ್ಯಕ್ಷವಿ. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.ವೇದಿಕೆಯ ನೀತಿ ನಿಯಮಗಳ ಅಡಿಯಲ್ಲಿ ಅಸಹಾಯಕರು, ಅಶಕ್ತರು, ರೈತರ ಸಾರ್ವಜನಿಕರ ಕೆಲಸ ಮಾಡುವುದು ಹಾಗೂ ವೇದಿಕೆ ಮೂಲ ಉದ್ದೇಶಗಳಹಿತ ಕಾಪಾಡುವುದು, ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಯಾದ್ಯಂತ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡು ಸಂಘಟನೆಗೆ ಒತ್ತು ನೀಡಲು ಆದೇಶ ನೀಡಲಾಗಿದೆ ಎಂದು ರಾಜ್ಯಾಧ್ಯಕ್ಷವಿ. ಹನುಮಂತರಾಯಪ್ಪತಿಳಿಸಿದ್ದಾರೆ.

Read More