Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ – ಜಯಶ್ರೀ. ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಚೆಂದದ ಚೆಂದುಳ್ಳಿ ,ನನ್ನ ನಿನ್ನ ಪ್ರೀತಿಗೆ ನೀನು ಅಸ್ತು ಅಂತ ಮುದ್ರೆ ಒತ್ತಿದಾಗಿನಿಂದ ಮನಸ್ಸು ಹಬ್ಬದ ಸಂಭ್ರಮದಲ್ಲಿ ಓಡಾಡ್ತಿದೆ. ದಿನ ಓಡಾಡಿದ ಓಣಿಯೇ ಆದರೂ ಏಕೋ ಗೊತ್ತಿಲ್ಲ. ಎಲ್ಲೆಲ್ಲೂ ಹೊಸತು ಸಡಗರ. ಹೃದಯದ ಬಾಗಿಲಿಗೆ ಹಸಿರು ತಳಿರು ತೋರಣ ಕಟ್ಟಿ ನುಲಿಯುತಿದೆ ಈ ಜೀವ. ಸುಳಿದು ಬೀಸುವ ಅನುರಾಗದ ಗಾಳಿಗೆ ತೋರಣ ಸರಭರ ಸದ್ದು ಮಾಡುವುದನು ಕಂಡು ಬೆರಗಾದೆ. ಸದ್ದಿಲ್ಲದೇ ಮನದ ಮನೆಯಲಿ ನೀನು ಕಾಲಿಟ್ಟದ್ದು ಯಾವಾಗ ಅಂತ ನೆನಪಿನ ಪುಟ ತೆರೆದರೆ ಮೈಯಲ್ಲಿ ನವೀನ ರೋಮಾಂಚನ. ದಿನವೂ ನನ್ನ ಕಣ್ಣಿಗೆ ನೀ ಬೀಳದಿದ್ದರೆ ಮಿಡಿವ ಹೃದಯ ಒಂದು ಕ್ಷಣ ನಿಂತಂತಾಗುವುದು. ಚೆಂದ ಚೆಂದದ ಸಾವಿರಾರು ಕನಸುಗಳನು ಎದೆಯಲ್ಲಿ ಬಿತ್ತಿ ಕಣ್ಮರೆಯಾದರೆ ಈ ಜೀವ ತಡೆದುಕೊಳ್ಳುವುದಾದರೂ ಹೇಗೆ? ಅಪರೂಪದ ನಿನ್ನ ರೂಪ ಪ್ರತಿ ರಾತ್ರಿಯೂ ಬಿಡದೇ ಕನಸಿನಲ್ಲಿ ಬಂದು ಹಾಜರಿ ಹಾಕಿ ಕಾಡುತಿದೆ. ಮೊದಲ ಸಲ ಅದರಕೆ ಅದರ ಸೇರಿಸಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಧೂಳಖೇಡ ಗ್ರಾಮದ ಓವರ್ ಬ್ರೀಡ್ಜ್ ಸಮೀಪದಲ್ಲಿ ಶುಕ್ರವಾರ ಸಂಜೆ ಸುಮಾರು 4.30 ರ ಸುಮಾರಿಗೆ ಘಟನೆ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ್ ಗಂಭೀರ ಗಾಯಗೊಂಡಿದ್ದು ಅಂಬುಲನ್ಸ್ ಮುಖಾಂತರ ಬೈಕ್ ಸವಾರನನ್ನು ಜಿಲ್ಲಾಸ್ಪತ್ರೆಗೆ ಖಳಿಸಲಾಯಿತು ಎಂದು ತಿಳಿದುಬಂದಿದೆ.ಸೋಲಾಪುರ ದಿಂದ ಅಗರಖೇಡ ಗ್ರಾಮದ ಕೆಡೆಗೆ ಹೋಗುತ್ತಿದ್ದ ಕಾರ್ ನಂ.ಎಮ್.ಎಚ್.12 ವಾಯ್.ಬಿ.4260 ಮತ್ತು ಧೂಳಖೇಡ್ ಗ್ರಾಮದಿಂದ ಸೋಲಾಪೂರ ಕಡೆ ಹೋಗುತ್ತಿದ್ದ ಬೈಕ್ ಕೆ.ಎ.28 ಎಚ್.ಎಫ್ 5011 ಮುಖಾಮುಖಿ ಡಿಕ್ಕಿಆಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ.ಡಿಕ್ಕಿಯ ರಭಸಕ್ಕೆ ಕಾರ್ ಪಕ್ಕದಲ್ಲಿರುವ ನೀರು ತುಂಬಿದ ತೆಗ್ಗಿಗೆ ತಲೆ ಕೆಳಗಾಗಿ ಬಿದ್ದಿದೆ ಆದರು ಕಾರನಲ್ಲಿ ಇದ್ದವರಿಗೆ ಯಾವುದೇ ಅನಾಹುತವಾಗಿಲ್ಲ.ಕಾರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಅಪಘಾತ ನಡೆದ ಸ್ಥಳದ ಪಕ್ಕದಲ್ಲೆ ಮಳೆ ನೀರು ಹೋಗಲು ಅಂಡರ್ಪಾಸ್ ತಡೆಗೋಡೆ ಇದ್ದುದರಿಂದ ಆ ತಡೆಗೋಡೆಗೆ ಕಾರ್ ಗುದ್ದಿದ್ದರೆ ಕಾರ್ನಲ್ಲಿ ಇದ್ದ ಸವಾರರು ಮತ್ತು ಡ್ರೈವರ್ ಉಳಿಯುವ ಸಾಧ್ಯತೆ ಕಡಿಮೆ ಇತ್ತು ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು.ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶೇಷ ಅತಿಥಿ ಉಪನ್ಯಾಸ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗಿನ ತಂತ್ರಜ್ಞಾನ ಯುಗದಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿದ್ದು ಅದರಂತೆ ಸೈಬರ್ ಭದ್ರತೆ ಹಾಗೂ ಸೈಬರ್ ಕಾನೂನುಗಳ ಬಗ್ಗೆ ಅರಿವು ಅಗತ್ಯ ಎಂದು ಹುಬ್ಬಳ್ಳಿಯ ಕಾನೂನು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಡಾ.ಸುನೀಲ್ ಎಂ.ಬಗಡೆ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐ ಕ್ಯೂಎಸಿ ಹಾಗೂ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ವಿಭಾಗದ ಸಂಯುಕ್ತಾಶ್ರಯದಲ್ಲಿ ದಿನಾಂಕ ೦೬-೧೧-೨೦೨೫ ಗುರುವಾರ ದಂದು ಜರುಗಿದ “ಸೈಬರ್ ಜಾಗೃತಿ ಭಾರತ್” ಎಂಬ ವಿಷಯದ ಮೇಲೆ “ಸೈಬರ್ ಕಾನೂನಿನ ಪ್ರಮುಖ ಲಕ್ಷಣಗಳು” ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಅವರು ತಂತ್ರಜ್ಞಾನದ ವ್ಯಾಪಕ ಬಳಕೆಯಿಂದಾಗಿ ಸೈಬರ್ ಅಪರಾಧಗಳ ಹೆಚ್ಚುತ್ತಿವೆ. ಇಂದು ಪರಸ್ಪರ ಸಂಪರ್ಕಿತ ಜಗತ್ತಿನಲ್ಲಿ ಪ್ರತಿಯೊಬ್ಬರ ಬಳಿ ಮೊಬೈಲ್ ಇದೆ. ನಮ್ಮ ಡಿಜಿಟಲ್…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜ್ಞಾನದ ಜೊತೆ ಕೌಶಲ್ಯವು ಮುಖ್ಯ, ಮೀನುಗಾರಿಕೆ ಮತ್ತು ಜಲಕೃಷಿಯ ಪದ್ಧತಿ ಬಗ್ಗೆ ತಿಳಿದುಕೊಳ್ಳಲು ಮೀನುಗಾರಿಕೆ ಮತ್ತು ಮೀನುಕೃಷಿ ಕ್ಷೇತ್ರಗಳು ಜೀವನೋಪಾಯವನ್ನು ವೃದ್ಧಿಸುವುದರಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು, ಸಹ ಪ್ರಾಧ್ಯಾಪಕರಾದ ಡಾ. ವಿಜಯಕುಮಾರ್ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಪ್ರಾಣಿಶಾಸ್ತ್ರ ವಿಭಾಗದ ಹಾಗೂ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರ ಭೂತನಾಳ ಇವರ ಸಹಯೋಗದಲ್ಲಿ ಮೀನುಗಾರಿಕೆ ಮತ್ತು ಜಲಚರ ಸಾಕಣೆ ಪದ್ಧತಿಗಳು (ಎಫ್ ಆರ್ ಐ ಸಿ) ವಿಷಯದ ಕುರಿತು ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಇವೆರಡೂ ವಿಭಿನ್ನ ಪದ್ಧತಿಗಳು.ಭಾರತವು ಜಾಗತಿಕ ಮೀನುಗಾರಿಕೆ ಉತ್ಪಾದನೆಯಲ್ಲಿ ಶೇ ೮ ರಷ್ಟು ಮುಂದಿದ್ದು…
ಹಳಕಟ್ಟಿ ಪ್ರೌಢಶಾಲೆಗೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭೇಟಿ – ಎಸ್ಸೆಸ್ಸೆಲ್ಸಿ ಮಕ್ಕಳ ಜೊತೆಗೆ ಸಂವಾದ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಹತ್ತನೇ ತರಗತಿ ಶೈಕ್ಷಣಿಕ ಜೀವನದ ಬೆಸ್ ಅಗಿದೆ. ಏಳನೇಯ ತರಗತಯಿಂದ ಹತ್ತನೆಯ ತರಗತಿ ವರೆಗಿನ ಕಲಿಕೆಯು ಮಕ್ಕಳ ಜೀವನದಲ್ಲಿ ಶ್ರೇಯೋಭಿವೃದ್ಧಿಯ ಮಹತ್ತರ ಪಾತ್ರವಹಿಸುತ್ತದೆ. ಈ ಕಲಿಕಾವಧಿಯ ಶಿಕ್ಷಣವು ವಿದ್ಯಾರ್ಥಿಗಳಿಗೆ ಮಹತ್ವದ ಪಿಕ್ ಟೈಮ್ ಎಂದು ವಿಜಯಪುರ ಜಿಲ್ಲಾ ಅಗ್ನಿಶಾಮಕ ಠಾಣಾಧಿಕಾರಿ ಶಶೀಧರ ನೀಲಗರ ಅಭಿಪ್ರಾಯಿಸಿದರು.ಇಲ್ಲಿನ ಆರ್.ಬಿ.ಪಿ.ಜಿ. ಹಳಕಟ್ಟಿ ಪ್ರೌಢಶಾಲೆಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಅವರು ಬೆರೆತು ಪ್ರೌಢಶಿಕ್ಷಣದ ಮಹತ್ವ ಮತ್ತು ಪರೀಕ್ಷಾ ಸಿದ್ದತೆ ಕುರಿತು ಅನುಭವ ಹಂಚಿಕೊಂಡರು.ನಮ್ಮೆಲ್ಲರನ್ನು ಸಶಕ್ತರನ್ನಾಗಿಸುವ ಶಕ್ತಿ ಶಿಕ್ಷಣಕ್ಕಿದೆ.ಶಿಕ್ಷಣದಿಂದಲೇ ಜೀವನ ಬಲಕ್ಕೆ ಮೆರುಗು ಬರುತ್ತದೆ. ನಮ್ಮ ಜೀವನದ ಗುರಿ ಮುಟ್ಟುವ ಸಾಧನವಾಗಿರುವ ಪ್ರೌಢಶಿಕ್ಷಣವನ್ನು ಯಾವುದೇ ಕಾರಣಕ್ಕೂ ಮಕ್ಕಳು ನಿರ್ಲಕ್ಷ್ಯ ತೋರಬಾರದು.ಈ ಹಂತದ ಶಿಕ್ಷಣವೇ ನಿಮ್ಮ ಮುಂದಿನ ಶೈಕ್ಷಣಿಕ ಸವಾ೯ಂಗೀಣ ಪ್ರಗತಿಗೆ ನಾಂದಿಯಾಗಿದೆ. ಆ ಹಿನ್ನೆಲೆಯಲ್ಲಿ ಪ್ರೌಢ ಶಿಕ್ಷಣದ ಓದಾಭ್ಯಾಸದ ಚಟುವಟಿಕೆಗಳಲ್ಲಿ ವಿಭಿನ್ನ ಸಾಮಥ್ರ್ಯ ಹೊಂದಿ ಶಿಕ್ಷಣದ ಅಗತ್ಯ…
ವಿಶ್ವಹಿಂದೂ ಪರಿಷತ್, ಭಜರಂಗದಳದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ಲೋಕೋಪಯೋಗಿ ಇಲಾಖೆಯ ಸರ್ವೇ ನಂಬರ್ 103 ಕ್ಷೇತ್ರದ 38 ಗುಂಟೆ ಸರಕಾರಿ ಜಮೀನನ್ನು ಮುಸ್ಲಿಂ ಖಬರಸ್ಥಾನಕ್ಕೆ ನೀಡುವ ಪ್ರಸ್ತಾವನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳದ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳದ ಅಧ್ಯಕ್ಷ ಮಹೇಶ ತುಂಬರಮಟ್ಟಿ ಮಾತನಾಡಿ ಲೋಕೋಪಯೋಗಿ ಇಲಾಖೆಯ ಜಮೀನು ಮುಸ್ಲಿಂ ಖಬರಸ್ಥಾನಕ್ಕೆ ನೀಡುವುದಕ್ಕೆ ವಿಶ್ವಹಿಂದೂ ಪರಿಷತ್, ಭಜರಂಗದಳ ಖಡಾಖಂಡಿತವಾಗಿ ವಿರೋಧಿಸುತ್ತದೆ. ಸರ್ಕಾರದ ಇಂತಹ ಇಬ್ಬಗೆಯ ನೀತಿ ಖಂಡನೀಯವಾದದ್ದು. ಖಬರಸ್ಥಾನಕ್ಕೆ ಈಗಾಗಲೇ ರೈತರು ಮತ್ತು ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದರಿ ಸರ್ಕಾರಿ ಜಾಗದಲ್ಲಿ ಎಲ್ಲ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಸರ್ಕಾರಿ ಕಛೇರಿಗಳನ್ನು ಮಾಡಲು ಈ ಮೂಲಕ ವಿಶ್ವ ಹಿಂದೂ ಪರಿಷತ-ಭಜರಂಗದಳ ಘಟಕ ಕೊಲ್ದಾರ ತಾಲೂಕು ಪ್ರಖಂಡ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಎಂದರು.ಈ ವೇಳೆ ಶಂಕರ್ ಗಣಚಾರಿ, ಮಹೇಶ್ ತುಂಬರಮಟ್ಟಿ, ಬಸವರಾಜ ಚೌದ್ರಿ, ಅಭಿಷೇಕ್ ಹೆಬ್ಬಾಳ, ಯಮನಜಿ ಕರಣಿ, ಮಲ್ಲಿಕಾರ್ಜುನ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆಯನ್ನು ಹೊಂದಿರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ಹಾಕುವ ಇಂತಹ ಕಾರ್ಯಕ್ರಮಗಳು ಮೇಲಿಂದ ಮೇಲೆ ಶಾಲೆಗಳಲ್ಲಿ ಜರುಗಬೇಕು ಎಂದು ಬೆನ್ನಕೊಟಗಿ ಕಿರಿಯ ಪ್ರಾಥಮಿಕ ಶಾಲೆ ಸಹಾಯಕ ಮುಖ್ಯೋಪಾಧ್ಯಾಯ ಎಸ್.ವಿ.ಉಪ್ಪಿನ ಹೇಳಿದರು.ಸಿಂದಗಿ ಪಟ್ಟಣದ ಹೊರವಲಯದ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆಯಲ್ಲಿ ಹಮ್ಮಿಕೊಂಡ ಯುವಜನೋತ್ಸವ ಕಾರ್ಯಕ್ರಮದ ನಿರ್ಣಾಯಕರಾಗಿ ಆಗಮಿಸಿ ಮಾತನಾಡಿದ ಅವರು, ಅವರ ಆಸಕ್ತಿಗೆ ಅನುಗುಣವಾಗಿ ಮಕ್ಕಳಿಗೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳ ಮಾನಸಿಕ, ಬೌದ್ಧಿಕ ಮತ್ತು ದೈಹಿಕ ಸಧೃಡತೆಗೆ ಸಹಕಾರಿಯಾಗಲಿದೆ ಎಂದರು.ಇದೇ ಸಂದರ್ಭದಲ್ಲಿ ಶಾಲೆಯ ನಿರ್ದೇಶಕ ಡಾ.ಎಂ.ಎಂ.ಪಡಶೆಟ್ಟಿ, ಶಿಕ್ಷಣ ಮಗುವಿನ ಸರ್ವತೋಮುಖ ಬೆಳೆವಣಿಗೆಗೆ ಕಾರಣವಾಗಿದೆ. ಮಕ್ಕಳ ಆಂತರ್ಯದಲ್ಲಿ ಹುದುಗಿರುವ ಪ್ರತಿಭೆ ಮತ್ತು ಸಂಸ್ಕಾರ ಹೊರಹಾಕುವುದು ಶಿಕ್ಷಣದಿಂದ ಮಾತ್ರ ಸಾಧ್ಯ. ಪ್ರತಿ ವರ್ಷದಂತೆ ಶಾಲೆಯಲ್ಲಿ ಎರಡು ದಿನಗಳ ಕಾಲ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗುವುದು. ಇದರಿಂದ ಮಗುವಿನ ದೈಹಿಕ, ಮಾನಸಿಕ, ಭೌದ್ಧಿಕ ಬೆಳೆವಣಿಗೆ ಜೊತೆಗೆ ಮಾನಸಿಕವಾಗಿ ಸದೃಢಗೊಳಿಸುವ ಮೂಲಕ ಕಲಿಕೆಗೆ ಅನುವು ಮಾಡಿಕೊಡುವುದು ಎಂದರು.ಈ ವೇಳೆ ಶಾಲೆಯ ಪ್ರಾಂಶುಪಾಲೆ…
ಸಿಂದಗಿಯಲ್ಲಿ ಕಬ್ಬಿನ ದರ ನಿಗದಿಗಾಗಿ ರೈತ ಸಂಘಟನೆಗಳ ನೇತೃತ್ವದಲ್ಲಿ ಬೆಳೆಗಾರರ ಹೋರಾಟ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಬ್ಬಿನ ದರ ನಿಗದಿಗಾಗಿ ಆಗ್ರಹಿಸಿ ಗುರ್ಲಾಪುರ ಕ್ರಾಸ್ದಿಂದ ಪ್ರಾರಂಭವಾದ ರೈತರ ಪ್ರತಿಭಟನೆಯ ಕಿಡಿ ಇದೀಗ ರಾಜ್ಯದಾದ್ಯಂತ್ಯ ವ್ಯಾಪಿಸಿದೆ. ನ್ಯಾಯಯುತ ಬೆಲೆ ಪಡೆದೇ ತೀರುವ ದಿಸೆಯಲ್ಲಿ ಕಬ್ಬು ಬೆಳೆಗಾರರು ರೈತ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಗೌರವಾಧ್ಯಕ್ಷ ದಾನಪ್ಪಗೌಡ ಚನಗೊಂಡ ಹೇಳಿದರು.ಸಿಂದಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹಾಗೂ ಕಬ್ಬು ಬೆಳೆಗಾರರ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಅವರ ಮೂಲಕ ಸಿಎಂ ಮತ್ತು ಸಚಿವರಿಗೆ ಮನವಿ ಸಲ್ಲಿಸುವ ಪೂರ್ವದಲ್ಲಿ ಮಾತನಾಡಿದ ಅವರು, ಕಬ್ಬಿನ ದರ ನಿಗದಿಗಾಗಿ ರೈತರು ಮಾಡುತ್ತಿರುವ ಹೋರಾಟಕ್ಕೆ ಸರಕಾರ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ನ್ಯಾಯ ದೊರೆಯುವವರೆಗೂ ರೈತರ ಹೋರಾಟ ಮುಂದುವರೆಯಲಿದೆ. ರಾಜ್ಯದಲ್ಲಿ ಇಷ್ಟೆಲ್ಲ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದರು ಸಕರಾರ ಕ್ಯಾರೆ ಎನ್ನುತ್ತಿಲ್ಲ ಎಂದರೆ ಇದು…
ಕೊಲ್ಹಾರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ | ಜಿಲ್ಲಾಧಿಕಾರಿ & ಮುಖ್ಯಮಂತ್ರಿಗೆ ರೈತ ಸಂಘ ಮುಖಂಡರಿಂದ ಮನವಿ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ಯುಕೆಪಿಯ ಕೊರೆಮ್ಮ ದೇವಿ ದೇವಸ್ಥಾನದ ಹತ್ತಿರ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52 (218) ರಲ್ಲಿ ಒಂದು ಟನ್ ಕಬ್ಬಿಗೆ 3400 ದರ ನಿಗದಿಪಡಿಸಬೇಕು ಎಂದು ಸುಮಾರು ಒಂದು ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಸಂತೋಷ ಮ್ಯಾಗೇರಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ರೈತ ಸಂಘದ ಮುಖಂಡರು ಮನವಿ ಸಲ್ಲಿಸಿದರು.ಈ ವೇಳೆ ತಾಲೂಕಾಧ್ಯಕ್ಷ ಸೋಮು ಬಿರಾದಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯುವಂತಹ ಶುಕ್ರವಾರದ ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಗಳಿಗೆ ಪ್ರತಿ ಟನ್ ಕಬ್ಬಿಗೆ ಯಾವ ಬೆಂಬಲ ಬೆಲೆ ನಿಗದಿ ಘೋಷಣೆ ಮಾಡುತ್ತಿರೋ, ವಿಜಯಪುರ ಜಿಲ್ಲೆಯ ರೈತರಿಗೂ ಕೂಡಾ ಅದೇ ದರವನ್ನು ನೀಡಬೇಕು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಗೂ…
ಕಳೆದ ಒಂದು ವಾರದಿಂದ ನಡೆಸುತ್ತಿದ್ದ ಪ್ರತಿಭಟನೆ | ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ | ರೈತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ.ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ಗೆ 3,300 ರೂಪಾಯಿಗಳನ್ನು ನಿಗದಿಪಡಿಸಿದ್ದಾರೆ.ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ಗೆ 3,200 ರೂಪಾಯಿಗಳಿಗಿಂತ ಹೆಚ್ಚು ನೀಡಲು…
