Author: editor.udayarashmi@gmail.com

ನಿಡಗುಂದಿ: ಅಹಿಂಸೆ ಮತ್ತು ಶಾಂತಿ ಎಂಬ ಅಸ್ತ್ರದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಗಾಂಧಿಯವರ 76 ನೇ ಪುಣ್ಯ ತಿಥಿ ಆಚರಿಸಲಾಗುತ್ತಿದೆ ಎಂದು ಗ್ರಾಮದ ಹಿರಿಯರಾದ ಶಿವನಗೌಡ ಪಾಟೀಲ ಹೇಳಿದರು.ಅವರು ಪಟ್ಟಣದ ಹೊರವಲಯದ ಮಣಗೂರ ಸರ್ಕಾರಿ ಪ್ರೌಡಶಾಲೆಯಲ್ಲಿ ಮಂಗಳವಾರ ನಡೆದ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.1948 ಜನವರಿ 30 ರಂದು ಪ್ರಾರ್ಥನೆಗೆಂದು ಬಿರ್ಲಾ ಹೌಸ್ ಗೆ ತೆರಳಿದ್ದ ಅವರ ಮೇಲೆ ಗೋಡ್ಸೆ ಗುಂಡಿಕ್ಕಿದ ಪರಿಣಾಮ ಅವರು ಇಹಲೋಕ ತ್ಯಜಿಸಿದ್ದರು. ಜನವರಿ 30 ರಂದು ಗಾಂಧಿ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ, ಮಡಿದ ಅಸಂಖ್ಯ ಹುತಾತ್ಮರಿಗೆ ನಮಿಸುವ ದಿನ ಎಂದರು.ಪ್ರಭಾರ ಮುಖ್ಯ ಶಿಕ್ಷಕ ಶಿವಪ್ಪ ಪೂಜೇರ, ಶಿಕ್ಷಕಿ ಪದ್ಮಾವತಿ ದಾಸರ ಮಾತನಾಡಿ, ದೇಶಕ್ಕಾಗಿ ಪ್ರಾಣತೆತ್ತ ಇನ್ನೀತರ ಮಹಾತ್ಮರ ಬಲಿದಾನವನ್ನು ಸ್ಮರಿಸಿದರು.ಎಸ್.ಬಿ. ಪಾಟೀಲ, ಟಿ.ನಿಂಗಪ್ಪ, ಯು.ಎಂ. ಪ್ರಧಾನಿ, ಸಿ.ಐ. ಪಾಟೀಲ, ಎನ್.ಬಿ. ಬಾಗವಾನ, ಆರ್.ಎನ್. ಮಂಡಿ ಇದ್ದರು.

Read More

ಮಹಾತ್ಮರ ಹುತಾತ್ಮ ದಿನದ ಸ್ಮರಣೆ – ವೀಣಾ ಹೇಮಂತಗೌಡ ಪಾಟೀಲ. ಮುಂಡರಗಿ ಒಬ್ಬ ವ್ಯಕ್ತಿ ಒಂದಿಡೀ ಸಮುದಾಯದ ಶಕ್ತಿಯಾದ. ಇಡೀ ದೇಶದ ಒಕ್ಕೊರಲಿನ ದನಿಗೆ ಕಹಳೆಯಾದ. ಆತನ ಅತಿ ಸಾಧಾರಣ ವಸ್ತ್ರವೊಂದರಲ್ಲೇ ಆತ ಅಸಾಧಾರಣ ಶಕ್ತಿಯಾದ. .ನಿರಾಯುಧನಾಗಿದ್ದ ಈತನಿಗೆ ಸರ್ವಾಯುಧಧಾರಿಗಳು ಶರಣಾದರು. ತೆಳುಕಾಯದ ಈತನ ದನಿಗೆ ಇಡೀ ಬ್ರಿಟಿಷ್ ಸಾಮ್ರಾಜ್ಯ ನಡುಗುತ್ತಿತ್ತು .ಯಾವುದೀ ಶಕ್ತಿ? ಯಾರು ಈ ವ್ಯಕ್ತಿ? ಖಡ್ಗದ ಝೇಂಕಾರವಿಲ್ಲದ, ಗುಂಡಿನ ಮೊರೆತವಿಲ್ಲದೆ, ಕೇವಲ ಅಹಿಂಸೆಯ ಬಲದಿಂದಲೇ ಸ್ವಾತಂತ್ರ್ಯ ಪಡೆದ ಭಾರತ ದೇಶದ ಹೆಮ್ಮೆಯ ಕುವರ ದಣಿವರಿಯದ ಸಂತ ….ಅವರೇ ನಮ್ಮ ನಿಮ್ಮೆಲ್ಲರ ಪ್ರೀತಿಯ ಬಾಪು, ಮಹಾತ್ಮ ಗಾಂಧಿ .ಕೇವಲ ನಾಮಮಾತ್ರದಿಂದಲೇ ಇಡೀ ದೇಶದಲ್ಲಿ, ದೇಶದ ಜನತೆಯಲ್ಲಿ ರೋಮಾಂಚನ ಹುಟ್ಟಿಸುತ್ತಿದ್ದ ವ್ಯಕ್ತಿ ಗಾಂಧಿ. ಆತನಲ್ಲಿದ್ದ ಶಕ್ತಿ ಯಾವುದು?…ಅಹುದು , ಅದುವೇ ಆತನಲ್ಲಿದ್ದ ಅಂತಸ್ಸತ್ವ, ಸತ್ಯಸಂಧತೆ, ಅಹಿಂಸಾವಾದ ಮತ್ತು ಅಂತಿಮವಾಗಿ ಮಾನಸಿಕ ದೃಢತೆ.ತುಂಡು ಬಟ್ಟೆಯುಟ್ಟು ಒಂದಿಡೀ ಸಾಮ್ರಾಜ್ಯಶಾಹಿ ವ್ಯವಸ್ಥೆಯನ್ನು ನಡುಗಿಸಿದ ಗಾಂಧೀಜಿಯವರಿಗಿದ್ದ ಅಂತಶಕ್ತಿಯ ಮೂಲಸೆಲೆ ಯಾವುದು ?ಅಹಿಂಸೆಯ ಮೂಲಕವೇ ದೇಶದ ಜನರನ್ನೆಲ್ಲ…

Read More

ದಿ.ಎಂ.ಸಿ ಮನಗೂಳಿ ೩ನೆಯ ಪುಣ್ಯ ಸ್ಮರಣೆ | ಆರೋಗ್ಯ ಉಚಿತ ಶಿಬಿರ | ಶಾಸಕ ಅಶೋಕ ಮನಗೂಳಿ ಅಭಿಮತ ಸಿಂದಗಿ: ದಿ. ಎಂ.ಸಿ.ಮನಗೂಳಿ ಕೇವಲ ನಮ್ಮ ಮನೆತನಕ್ಕೆ ಮಾತ್ರ ಸೀಮಿತವಾಗಿರದೆ ಇಡೀ ಮತಕ್ಷೇತ್ರಕ್ಕೆ ಆದರ್ಶವಾಗಿದ್ದರು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಭಾನುವಾರದಂದು ಪಟ್ಟಣದ ಎಚ್.ಜಿ. ಹೈಸ್ಕೂಲ್ ಆವರಣದಲ್ಲಿ ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಇವರ ಮೂರನೇ ಪುಣ್ಯ ಸ್ಮರಣಾರ್ಥವಾಗಿ ಸಿಂದಗಿ ಮನಗೂಳಿ ಪ್ರತಿಷ್ಠಾನ ಹಾಗೂ ವಿಜಯಪುರದ ಬಿ.ಎಂ.ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನಮ್ಮ ತಂದೆಯವರು ರಾಜಕೀಯವಾಗಿ, ಶೈಕ್ಷಣಿಕವಾಗಿ ಹಾಗೂ ವೈದ್ಯಕೀಯವಾಗಿ ಸಾಕಷ್ಟು ಕಾರ್ಯಗಳನ್ನು ಮಾಡಿದ್ದಾರೆ. ಸಿಂದಗಿ ಮತಕ್ಷೇತ್ರದಲ್ಲಿ ಅವರು ಮಾಡಿದ ಕಾರ್ಯ ಜನತೆ ಅವರ ಮೇಲಿಟ್ಟ ಪ್ರೀತಿಯಿಂದ ಇಂದು ನಾನು ಶಾಸಕನಾಗಲು ಕಾರಣವಾಗಿದೆ ಎಂದರು.ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಜಗತ್ತು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ…

Read More

ಬರಪರಿಹಾರದಲ್ಲಿ ಅನ್ಯಾಯ | ತೆರಿಗೆ ಪಾಲಿನಲ್ಲಿ ವಂಚನೆ | ಬಿಜೆಪಿ ಲೋಕಸಭಾ ಸದಸ್ಯರ ಬಾಯಿಗೆ ಬೀಗ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಬೆಂಗಳೂರು: ಬರಪರಿಹಾರದಲ್ಲಿ ಅನ್ಯಾಯ, ತೆರಿಗೆ ಪಾಲಿನಲ್ಲಿ ವಂಚನೆ, ಹಣಕಾಸು ಆಯೋಗದ ಅನುದಾನದಲ್ಲಿ ಮೋಸ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಒಂದೇ ಎರಡೇ? ಹೀಗಿದ್ದರೂ ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಸೋಮವಾರ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್‌ ಮಾಡಿರುವ ಸಿದ್ದರಾಮಯ್ಯ, ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ ”ಪರಿಹಾರ ಕೊಡಿ ಕುರ್ಚಿ ಬಿಡಿ” ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ…

Read More

ವಿಜಯಪುರ: ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಲಮೇಲದ ವೈದ್ಯಸಾಹಿತಿ ಡಾ.ಸಮೀರ ಹಾದಿಮನಿಯವರು ಆಯ್ಕೆಯಾಗಿದ್ದಾರೆ.ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರುಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಹಂಪಿ ಉತ್ಸವವನ್ನು ಆರಂಭಿಸಿದ್ದು, 2024ರ ಹಂಪಿ ಉತ್ಸವವು ಫೆಬ್ರವರಿ 2 ರಿಂದ 4ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದೆ. ಉತ್ಸವದ ಪ್ರಯುಕ್ತ ಕವಿಗೋಷ್ಠಿಯು ವಿರೂಪಾಕ್ಷೇಶ್ವರ ದೇವಸ್ಥಾನದ ವೇದಿಕೆಯಲ್ಲಿ ಜರುಗುವುದು.ಡಾ.ಸಮೀರ ಹಾದಿಮನಿಯವರು ಈಗಾಗಲೇ ನವರಸಪುರ ಅಂತರಾಷ್ಟ್ರೀಯ ಉತ್ಸವ, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತಿನ ಹಲವು ಸಮ್ಮೇಳನಗಳಲ್ಲಿ ಕವನವಾಚನ ಮಾಡಿದ್ದಾರೆ. ಉಪ್ಪು ನೀರಿನ ಸೆಲೆ, ಶ್ಲಾಘನೆ-ಖಂಡನೆ ಸೇರಿದಂತೆ ಐದು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

Read More

ಕಾನಿಪ ಸಂಘದ ಪತ್ರಕರ್ತರಿಗೆ ಹೆಲ್ತ್ ಕಾರ್ಡ್ ವಿತರಿಸಿದ ಸಚಿವ ಎಂ.ಬಿ.ಪಾಟೀಲ ಭರವಸೆ ವಿಜಯಪುರ: ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಪತ್ರಕರ್ತರು ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ ಮಾಡಲ್ಲ. ಅಂಥ ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿಇ ಆಸ್ಪತ್ರೆ ಬದ್ಧವಾಗಿದೆ ಎಂದು ಬಿಎಲ್ ಡಿ ಸಂಸ್ಥೆಯ ಅಧ್ಯಕ್ಷರೂ‌ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.‌ನಗರದ ಬಿಎಲ್ ಡಿಇ ಆಸ್ಪತ್ರೆಯ ಟ್ರಾಮಾ ಸೆಂಟರ್ ಸಭಾಂಗಣದಲ್ಲಿ ಸೋಮವಾರ ಬಿಎಲ್ ಡಿಇ ಆಸ್ಪತ್ರೆಯ ಆರೋಗ್ಯ ಭಾಗ್ಯ ಯೋಜನೆಯಡಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಫ್ಯಾಮಿಲಿ ಹೆಲ್ತ್ ಕಾರ್ಡ್ ವಿತರಿಸಿ ಅವರು ಮಾತನಾಡಿದರು.ಅದೆಷ್ಟೋ ಪತ್ರಕರ್ತರು ವಿಶ್ರಾಂತಿ ತೆಗೆದುಕೊಳ್ಳದೇ, ಸಮಾಜಕ್ಕಾಗಿ ಹಗಲಿರುಳು ಶ್ರಮಿಸುತ್ತಾರೆ. ಅಂಥ ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರ ಆರೋಗ್ಯ ರಕ್ಷಣೆಗೆ ಸೇವಾ ಸೌಲಭ್ಯಗಳನ್ನು ಒದಗಿಸಲು ಬಿಎಲ್ ಡಿಇ ಆಸ್ಪತ್ರೆ ಮುಂದಾಗಿದೆ ಎಂದರು.ಪತ್ರಕರ್ತರ ಕಷ್ಟದ ಜೀವನ ಕಂಡಿದ್ದೇವೆ.…

Read More

ಬಂಜಾರಾ ಕಸೂತಿ ತರಬೇತಿ ಶಿಬಿರ ಉದ್ಘಾಟಿಸಿದ ಬಂಜಾರಾ ಕಸೂತಿ ಸಂಸ್ಥೆ ಸಂಸ್ಥಾಪಕಿ ಆಶಾ ಎಂ.ಪಾಟೀಲ ಅಭಿಮತ ವಿಜಯಪುರ: ಬಂಜಾರಾ ಕಸೂತಿ ಕಲೆಯನ್ನು ಪ್ರೋತ್ಸಾಹಿಸಲು ಬಂಜಾರಾ ಕಸೂತಿ ಸಂಸ್ಥೆ ಸ್ಥಾಪಿಸಿ ತರಬೇತಿ ಶಿಬಿರಗಳ ಆಯೋಜನೆ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ.ಪಾಟೀಲ ಹೇಳಿದರು.ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮಹಿಳಾ ಸಬಲೀಕರಣ ಘಟಕ ಮತ್ತು ಬಂಜಾರಾ ಕಸೂತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಬಂಜಾರಾ ಕಸೂತಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ವಿಜಯಪುರದ ಸಾಂಸ್ಕøತಿಕ ವೈಶಿಷ್ಟ್ಯತೆಯ ಸಂಕೇತವಾಗಿರುವ ಬಂಜಾರಾ ಕಸೂತಿ ಗ್ರಾಮೀಣ ಕರಕುಶಲ ಕಲೆಗಳಲ್ಲಿ ಒಂದಾಗಿದೆ. ಈ ಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನುರಿತ ಕುಶಲಕರ್ಮಿಗಳಿಂದ ಉಚಿತ ತರಬೇತಿ ನೀಡಲಾಗುತ್ತಿದೆ. ಗ್ರಾಮೀಣ ಮಹಿಳೆಯರು ಇದರ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಯಾಗಬಹುದಾಗಿದೆ ಎಂದು ಹೇಳಿದರು.ಡಾ. ಮುರಗೇಶ ಪಟ್ಟಣಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ಬಿ. ಎಸ್. ಬೆಳಗಲಿ ಅಧ್ಯಕ್ಷತೆ ವಹಿಸಿದ್ದರು. ಬಂಜಾರಾ ಕಸೂತಿ ಸಂಸ್ಥೆ ಸಹ-ಸಂಸ್ಥಾಪಕಿ…

Read More

ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಗೆ ಹೊನ್ನುಟಗಿಯಲ್ಲಿ ಸಚಿವ ಡಾ.ಎಂ.ಬಿ.ಪಾಟೀಲ ಚಾಲನೆ ವಿಜಯಪುರ: ಬರಗಾಲ ನಿವಾರಣೆಗೆ ಮಣ್ಣು ಮತ್ತು ನೀರಿನ ಸಂರಕ್ಷಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೃಷಿಯ ಸುಸ್ಥಿರತೆಗಾಗಿ ನವೀನ ಅಭಿವೃದ್ದಿಯ ಮೂಲಕ ಒಟ್ಟು ೬೧೬೬.೦೮ ಹೆಕ್ಟೇರ್ ಜಲಾನಯನ ಪ್ರದೇಶವನ್ನು ವಿಶ್ವ ಬ್ಯಾಂಕ್ ನೆರವಿನಿಂದ ಪುನಶ್ಚೇತನಗೊಳಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲೆಯ ಹೊನ್ನುಟಗಿಯಲ್ಲಿ ಕೃಷಿ ಇಲಾಖೆ, ಜಲಾನಯನ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವಿಜಯಪುರ ಇವರ ಸಹಯೋಗದಲ್ಲಿ ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೊನ್ನುಟಗಿ ಉಪಜಲಾನಯನ ಪ್ರದೇಶದಲ್ಲಿ ವಿಶ್ವ ಬ್ಯಾಂಕ್‌ನ ಆರ್ಥಿಕ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುತ್ತಿರುವ ಪುನಶ್ಚೇತನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಹೊನ್ನುಟಗಿ, ಹಡಗಲಿ, ಕುಮಟಗಿ, ಮದಭಾವಿ ಹಾಗೂ ಆಹೇರಿ ಗ್ರಾಮ ಪಂಚಾಯತಿಗಳು ಒಳಪಡಲಿದ್ದು, ಜಿಲ್ಲೆಯ ರೈತರ ಕಾಪಾಡುವಲ್ಲಿ ಜಿಲ್ಲೆಯ ರೈತರಿಗೆ ನೀರು ಒದಗಿಸುವದೇ ಆದ್ಯತೆಯಾಗಿದು, ಇಂತಹ ಕಾರ್ಯಕ್ರಮಗಳು…

Read More

ಹೊನವಾಡ: ಮಕ್ಕಳ ಸಾಧನೆಗೆ ಅಂಕಗಳಿಕೆಯೊಂದೆ ಅಂತಿಮವಲ್ಲ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಆಗಬೇಕಾದರೆ ಪಠ್ಯ ವಿಷಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕೆಂದು ಶಿಕ್ಷಕ ಐ ಎ ತೇಲಿ ಅಭಿಪ್ರಾಯ ವ್ಯಕ್ತಪಡಿಸಿದರು.ತಿಕೋಟಾ ತಾಲೂಕಿನ ಬಾಬಾನಗರದ ಮಹಾತ್ಮ ಗಾಂಧೀಜಿ ಹಿರಿಯ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವತಿಯಿಂದ ಹಮ್ಮಿಕೊಂಡ ಮಕ್ಕಳ ಸಂತೆ ಮತ್ತು ಆಹಾರ ಮೇಳ ಕಾರ್ಯಕ್ರಮದ ತಮ್ಮ ಅತಿಥಿ ಭಾಷಣದಲ್ಲಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುತ್ತವೆ ಎಂದು ಹೇಳಿದರು.ಮಕ್ಕಳ ಸಂತೆ ಹಾಗೂ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದ ಬಾಬಾನಗರದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಂಸಾಬ್ ಎಳ್ಳಾಪುರ, ಮಕ್ಕಳನ್ನು ಕೇವಲ ಉದ್ಯೋಗಿಗಳನ್ನಾಗಿ ಮಾಡದೆ ಇಂಥ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಏರ್ಪಡಿಸುವುದರ ಮೂಲಕ ದೊಡ್ಡ ದೊಡ್ಡ ಉದ್ಯಮಿಗಳಾಗಿ ರೂಪಿಸುವಂತೆ ಶಿಕ್ಷಕರಿಗೆ ಕರೆ ಕೊಟ್ಟರು.ವಿದ್ಯೆಯೇ ದೊಡ್ಡಪ್ಪ ಆರೋಗ್ಯವೇ ಅದರಪ್ಪ ಎನ್ನುವಂತೆ ಇಂತಹ ಸಂತೆ ಮತ್ತು ಆಹಾರ ಮೇಳಗಳಲ್ಲಿ ಜಂಕ್ ಆಹಾರಗಳಿಂದ ದೂರವಿದ್ದು ಆರೋಗ್ಯಕ್ಕೆ ಪೂರಕವಾಗುವಂತಹ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದರಿಂದ ಮತ್ತು…

Read More

ಇಂಡಿ: ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪಟ್ಟಣದ ದೇಸಾಯಿ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಪರೇಡ್ ಮಾಡುವದರಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ.ಕಾರ್ಯಕ್ರಮದ ಅಧ್ಯಕ್ಷರಾಗಿ ಆಗಮಿಸಿದ ಶಾಸಕ ಯಶವಂತ್ರಾಯಗೌಡ ಪಾಟೀಲ ಮಕ್ಕಳಿಗೆ ಪ್ರಶಸ್ತಿ ಪ್ರಮಾಣ ಪತ್ರ ಹಾಗೂ ಟ್ರೋಫಿಯನ್ನು ವಿತರಿಸಿದರು.ಈ ಸಂದರ್ಭದಲ್ಲಿ ಮಕ್ಕಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕ ನಾಗರಾಜ ವಡ್ನಳ್ಳಿ ಹಾಗೂ ಮಕ್ಕಳಿಗೆ ನೃತ್ಯ ತರಬೇತಿ ನೀಡಿದ ಶಿಕ್ಷಕ ಮಲ್ಲಿಕಾರ್ಜುನ ಪಂಟೋಜಿ, ಮಹಿಬೂಬ ಮೋಮಿನ, ಸಂಸ್ಥೆಯ ಅದ್ಯಕ್ಷ ಎಸ್.ಎಸ್.ದೇಸಾಯಿ ಹಾಗೂ ಪ್ರಾಂಶುಪಾಲ ವಿದ್ಯುಲತಾ ಸುತಾರ, ಎಲ್ಲ ಸಿಬ್ಬಂದಿಗಳು ಅಭಿನಂದಿಸಿದರು.

Read More