Author: editor.udayarashmi@gmail.com

ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿ ಬೆಂಬಲಿಸಿದ ವ್ಯಾಪಾರಸ್ಥರು ಉದಯರಶ್ಮಿ ದಿನಪತ್ರಿಕೆ ಇಂಡಿ: ಕಬ್ಬಿಗೆ ರೂ ೩೫೦೦ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧ್ಯಕ್ಷ ಎಸ್.ಬಿ.ಕಂಬೋಗಿ ಇವರ ನೇತೃತ್ವದಲ್ಲಿ ನಡೆದ ಅನಿರ್ದಿಷ್ಠ ಸತ್ಯಾಗ್ರಹ ಇಂದು ಇಂಡಿ ಬಂದ್ ಮಾಡುವ ಮೂಲಕ ಯಶಸ್ವಿಯಾಗಿದೆ.ಕೃಷಿ ಮಾರುಕಟ್ಟೆ, ವರ್ತಕರ ಸಂಘ, ಪಟ್ಟಣದ ವಿವಿಧ ವ್ಯಾಪಾರಸ್ಥರು ಬಂದದಲ್ಲಿ ಸ್ವಯಂ ಪ್ರೇರಿತ ಅಂಗಡಿಗಳನ್ನು ಬಂದು ಮಾಡಿ ಭಾಗಿಯಾದುದಲ್ಲದೆ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಅವಶ್ಯಕ ಸೇವೆ ಹೊರತು ಪಡಿಸಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟುಗಳು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಕಾಯಿಪಲ್ಲೆ ಮಾರುವವರು, ಚಹಾ ಅಂಗಡಿಗಳು ಹೋಟೆಲಗಳು ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟು ಬಂದದಲ್ಲಿ ಪಾಲ್ಗೊಂಡಿದ್ದವು.ಅವಶ್ಯಕ ಸೇವೆಗಳಾದ ಬ್ಯಾಂಕು ವ್ಯವಹಾರ, ಆಸ್ಪತ್ರೆ ಮತ್ತು ಔಷದ ಅಂಗಡಿ ಮತ್ತು ಪೋಟ್ರೋಲ ಪಂಪ ಮಾತ್ರ ರಿಯಾಯತಿ ನೀಡಿ ರೈತರು ಯಾವದೇ ರೀತಿಯ ತೊಂದರೆ ಮಾಡಲಿಲ್ಲ.ಬೇರೆ ಊರುಗಳಿಂದ ಬರುವ ಪ್ರಯಾಣಿಕರಿಗೆ ಅತೀವ ತೊಂದರೆಯಾಯಿತು. ಅದಲ್ಲದೆ ಬಂದ ನಿಮಿತ್ಯ ಪ್ರತಿಭಟನಾಕಾರರು ಬಿಟ್ಟರೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ವಿವಿಧ ರೈತಪರ ಸಂಘಟನೆಗಳಿಂದ ಪ್ರತಿ ಟನ್ ಕಬ್ಬಿಗೆ ಬೆಂಬಲ ಬೆಲೆ ೩೫೦೦ ರೂ.ಗಳನ್ನು ನೀಡಲು ಹಾಗೂ ಕೆಲವು ಕಾನೂನು ತೋಡಕುಗಳ ಕುರಿತು ಹಕ್ಕೋತ್ತಾಯ ಮಂಡನೆಗಾಗಿ ಆಗ್ರಹಿಸಿ, ಜೊತೆಗೆ ಬೆಳಗಾವಿ, ಬಾಗಲಕೋಟ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಕೈಗೊಂಡು, ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ಧರಣಿ ಕುಳಿತು ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಶುಕ್ರವಾರ ಸೇರಿದ ರೈತರು ಹಾಗೂ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿ ಟನ್ ಕಬ್ಬಿಗೆ ಬೆಂಬಲ ಬೆಲೆ ನೀಡದ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟು, ಬಸ್‌ನಿಲ್ದಾಣ ಮಾರ್ಗದ ಮೂಲಕ ಡಾ.ಅಂಬೇಡಕರ್ ವೃತ್ತದಲ್ಲಿ ಹೆದ್ದಾರಿ ಬಂದ್ ಮಾಡಿ ಧರಣಿ ಕುಳಿತರು.ಈ ಸಂದರ್ಭದಲ್ಲಿ ಅಜೀಜ್ ಯಲಗಾರ, ಸೋಮಶೇಖರ ಹಿರೇಮಠ, ಕಾಶೀಪತಿ ಕುದರಿ, ಮುನೀರ್ ಅಹ್ಮದ್ ಮಳಖೇಡ, ರಾಜಕುಮಾರ ಸಿಂದಗೇರಿ, ಶಿವಾನಂದ ಯಡಹಳ್ಳಿ, ಶಂಕರಗೌಡ ಹಿರೇಗೌಡರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ರೈತ ಸಮುದಾಯದ ಬೆಂಬಲಕ್ಕೆ ನಿಂತು…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ತಾಲ್ಲೂಕಿನ ಕಣಮುಚನಾಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಜನ್ಯ ಹಾಲಳ್ಳಿಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ -2025ಸಮಾಲೋಚನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿನ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಮುಖ್ಯೋಪಾಧ್ಯಾಯ ಆರ್. ಬಿ. ಪಾಟೀಲ್, ಸಿಬ್ಬಂದಿ ವರ್ಗ, ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಣಗೌಡ ಬಿರಾದಾರ ಮತ್ತು ಸದಸ್ಯರು, ಮಾರ್ಗದರ್ಶಕ ಶಿಕ್ಷಕಿ ಡಾ. ಎ.ಟಿ ಲಗಟಗೇರ ಹಾಗೂ ಊರಿನ ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಲಬುರ್ಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದ ಶ್ರೀ ವೀರಭದ್ರೇಶ್ವರರ ಜಾತ್ರಾ ಮಹೋತ್ಸವ ಅಸಂಖ್ಯಾತ ಜನಸ್ಥೋಮದ ಮಧ್ಯೆ ಶ್ರದ್ಧಾ ಭಕ್ತಿಯಿಂದ, ಅತ್ಯಂತ ಅದ್ಧೂರಿಯಾಗಿ ನೆರವೇರಲಿದೆ.ನ8 ರಂದು ರಾತ್ರಿ 1ಗಂಟೆಗೆ ಮೈಲಾರಲಿಂಗ ದೇವಸ್ಥಾನದಲ್ಲಿ ಕಳ್ಳ ಸರಪಳಿ, ರಾಜ್ಯದ ಮೂಲೆ ಮೂಲೆಯ ಸೇರಿದಂತೆ ಸುತ್ತಮುತ್ತಲಿನ ರಾಜ್ಯದ ಭಕ್ತಾದಿಗಳು ಬಂದು ಸೇವೆ ನೀಡುವ ಪ್ರವಿತ್ರ ಅಗ್ನಿ ಕುಂಡದ ಪ್ರವೇಶ ನ9 ರಂದು ರಾತ್ರಿ 11ಕ್ಕೆ ಜರುಗಲಿದೆ.ನ10 ರಂದು ಸಂಜೆ ಮದ್ದು ಸುಡುವ ಕಾರ್ಯಕ್ರಮ ಬಳಿಕ ಭವ್ಯ ರಥೋತ್ಸವ ಜರುಗಲಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ನವೆಂಬರ್ 10 ರಿಂದ 15ರ ವರೆಗೆ ಆರು ದಿನಗಳ ಕಾಲ ಚರ್ಮ ರೋಗ ಉಚಿತ ತಪಾಸಣೆ ಮತ್ತು‌ ರಿಯಾಯಿತಿ‌ ದರದಲ್ಲಿ‌ ಪಂಚಕರ್ಮ‌ ಚಿಕಿತ್ಸೆ ಶಿಬಿರ ನಡೆಯಲಿದೆ.ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಸೋರಿಯಾಸಿಸ್ ಅಥವಾ ದೇಹದಲ್ಲಿ ಕೆಂಪು ಬಣ್ಣದ ಕಲೆಗಳು, ತೀವ್ರ ತುರಿಕೆ , ಬಿಳಿ ಹೊಟ್ಟು ಉದುರುವಿಕೆಯಂಥಚರ್ಮರೋಗ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ತಪಾಸಣೆ ಮತ್ತು‌ ಚಿಕಿತ್ಸೆ ಪಡೆಯಬಹುದಾಗಿದೆ.ಸಾರ್ವಜನಿಕರು ಈ‌ ಶಿಬಿರದ ಸದುಪಯೋಗ ಪಡೆಯಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಯುರ್ವೇದ ಹೈಟೆಕ್ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೈದ್ಯ ಡಾ. ಸ್ಮಿತಾ ಚೌಧರಿ ಮೊ. ನಂ. 89046070881 ಮತ್ತು 9513397413 ಸಂಪರ್ಕಿಸಬಹುದಾಗಿದೆ.

Read More

೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭ್ರೂಣ ಲಿಂಗ ಪತ್ತೆ ಕಾನೂನಿನ ಪ್ರಕಾರ ಅಪರಾಧ. ಇಂತಹ ಪ್ರಕರಣಗಳ ಸುಳಿವು ಸಿಕ್ಕಲ್ಲಿ ಸಂಬಂಧಿಸಿದ ಅಧಿಕಾರಿಗಳು, ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ, ಯಾವ ಪ್ರಭಾವಕ್ಕೂ ಒಳಗಾಗದೇ ಕೂಡಲೇ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಕರೆ ನೀಡಿದರು.ಪಟ್ಟಣದ ಕೆಬಿಎಂಪಿಎಸ್ ಹೈಸ್ಕೂಲ್ ನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹ್ಮಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ವರದಿಗಳ ಪ್ರಕಾರ ಹಲವು ರಾಜ್ಯಗಳಲ್ಲಿ ಹೆಣ್ಣು ಜನನ ಅನುಪಾತ ತಗ್ಗುತ್ತಿರುವದು ಆತಂಕದ ವಿಷಯ. ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತವನ್ನು ಕಾನೂನುಬದ್ಧವಾಗಿ ನಿಷೇಧಿಸಲ್ಪಟ್ಟರೂ ಇನ್ನೂ ಕೆಲವು ಪ್ರದೇಶಗಳಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಯುತ್ತಿರುವದು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನಕದಾಸರ ೫೩೮ನೆಯ ಜಯಂತ್ಯುತ್ಸವ ನಿಮಿತ್ತ ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ನ.೦೮ರಂದು ಬೆಳಿಗ್ಗೆ ೯ಗಂಟೆಗೆ ಕುಂಭ ಮೇಳದೊಂದಿಗೆ ಕನಕದಾಸರ ಭವ್ಯ ಮೆರವಣಿಗೆ, ೧೦ಗಂಟೆಗೆ ಎತ್ತನ ಗಾಡಿ ಸ್ಪರ್ಧೆ, ೧೧ಗಂಟೆಗೆ ಕುದರಿ ಗಾಡಿ ಸ್ಪರ್ಧೆ, ೧೨ಗಂಟೆಗೆ ಗುಂಡು ಮತ್ತು ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಗಳು ಭಕ್ತ ಕನಕದಾಸ ವೃತ್ತದಲ್ಲಿ ಹಾಗೂ ಮದ್ಯಾಹ್ನ ೩ಗಂಟೆಗೆ ಅಂತರರಾಷ್ಟ್ರೀಯ ಜಂಗಿ ಕುಸ್ತಿ ಪಂದ್ಯಾವಳಿಯು ಪರಮಾನಂದ ಪ್ರೌಢಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿದ ನಾಗಪ್ಪ ಶಿವೂರ ಹೇಳಿದರು.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಟ್ಟದ ಕುಸ್ತಿಪಟು ಭಾರತ ಕೇಸರಿ ಸಿಕಂದರ ಶೇಖ ಮತ್ತು ಇರಾನ್ ದೇಶದ ಕೇಸರಿ ಮೀರ್ಜಾ ನಡುವೆ ಸೆಣಸಾಟ ನಡೆಯಲಿದೆ. ಇಲ್ಲಿ ೩೦ಜನ ಕುಸ್ತಿಪಟುಗಳ ಮಧ್ಯದಲ್ಲಿ ಜಂಗಿ ಕುಸ್ತಿ ನಡೆಯುವುದು. ಜಂಗಿ ಕುಸ್ತಿಯಲ್ಲಿ ವಿಜೇತರಾದವರಿಗೆ ರೂ.೫ಲಕ್ಷ ಬಹುಮಾನ ನೀಡಲಾಗುವುದು ಎಂದರು.ಈ ವೇಳೆ ಸಿದ್ದು ಬುಳ್ಳಾ, ತಾಲೂಕು ಕುರುಬ ಸಮಾಜದ ತಾಲೂಕಾಧ್ಯಕ್ಷ ನಿಂಗಣ್ಣ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಬ್ಬು ಬೆಳೆಗಾರರು ನ್ಯಾಯಯುತವಾಗಿ ತಮ್ಮ ಬೇಡಿಕೆಯನ್ನು ಕೇಳುತ್ತಿರುವುದರಲ್ಲಿ ತಪ್ಪೇನಿದೆ . ಈ ಹಿಂದೆ ರೈತರು ಪ್ರತಿ ಟನ್ ಕಬ್ಬಿಗೆ ರೂ.೪,೫೦೦ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದರು. ಆದರೆ ಇದೀಗ ಪ್ರತಿ ಟನ್‌ಗೆ ಕನಿಷ್ಠ ರೂ.೩೫೦೦ ಕೇಳುತ್ತಿದ್ದಾರೆ. ಸರ್ಕಾರ ಇದಕ್ಕೆ ಕೂಡಲೇ ಸ್ಪಂದಿಸಬೇಕು ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರೈತರು ಮತ್ತು ಕಬ್ಬು ಬೆಳೆಗಾರರು ಎದುರಿಸಿಕೊಂಡು ಬರುತ್ತಿರುವ ಸಮಸ್ಯೆ ಹಾಗೂ ಸಂಕಷ್ಟಗಳು ಸರಕಾರಕ್ಕೆ ತಿಳಿಯದ ವಿಷಯವೇನಲ್ಲ. ಎಲ್ಲವೂ ಗೊತ್ತಿರುವಂತಹ ವಿಚಾರಗಳೇ ಆಗಿವೆ. ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕಾದರೆ ರೈತರು ಪ್ರತಿ ವರ್ಷ ಬೆಂಬಲ ಬೆಲೆಗಾಗಿ ಹೋರಾಟ ಮಾಡಬೇಕಾದ ದುಸ್ಥಿತಿ ಎದುರಾಗಿದೆ. ಆದರೆ ಇದು ಹೋಗಬೇಕಾಗಿದೆ. ಪ್ರಸ್ತುತ ರೈತರು ಕೇಳುತ್ತಿರುವ ಬೆಲೆಯು ಸೂಕ್ತವಾಗಿದೆ. ನಮ್ಮ ರೈತರಿಗೆ ಹೆಚ್ಚಿನ ಬೆಲೆಯನ್ನೇ ನೀಡುವ ಪ್ರಯತ್ನ ರಾಜ್ಯ ಸರಕಾರ ಮಾಡಬೇಕು. ರಾಜ್ಯ ಸರಕಾರ ಕೂಡಲೇ ರೈತರಿಗೆ ಸ್ಪಂದಿನೆ ಮಾಡದೇ ಹೋದರೆ ಇನ್ನಷ್ಟು ರೈತರ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಬೆಳಗಾವಿ, ವಿಜಯಪುರ,ಜಿಲ್ಲೆಗಳ ರೈತರು ಪ್ರತಿ ಟನ್ ಕಬ್ಬಿಗೆ ರೂ ೩೫೦೦ ನಿಗದಿಗಾಗಿ ಕಳೆದ ಏಳೆಂಟು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ವಾಸು ದೇವ ಬಣದ ರಾಜ್ಯ ರೈತ ಸಂಘ( ಹಸಿರು ಸೇನೆ) ನಿಡಗುಂದಿ ತಾಲೂಕಾ ಘಟಕ ತನ್ನ ಬೆಂಬಲ ವ್ಯಕ್ತಪಡಿಸಿತು.ಆಲಮಟ್ಟಿಯಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಿಡಗುಂದಿ ತಾಲೂಕ ಘಟಕದ ಅಧ್ಯಕ್ಷ ತಿರುಪತಿ ಬಂಡಿವಡ್ಡರ ಮಾತನಾಡಿ, ರೈತರು ಬೆಳೆದ ಕಬ್ಬಿನಿಂದ ನೂರಾರು ಕೋಟಿ ಲಾಭ ಗಳಿಸುತ್ತಿರುವ ಸಕ್ಕರೆ ಕಾರ್ಖಾನೆ ಗಳ ಮಾಲೀಕರು ರೈತರು ಬೆಳೆದ ಕಬ್ಬಿಗೆ ನ್ಯಾಯೋಚಿತವಾದ ಬೆಲೆ ನೀಡುತ್ತಿಲ್ಲ, ಜೊತೆ ಕಬ್ಬು ಕಳುಹಿಸಿದ ರೈತರಿಗೆ ಸಕಾಲಕ್ಕೆಹಣ ಪಾವತಿ ಮಾಡುತ್ತಿಲ್ಲ , ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದರು.ಕಬ್ಬಿನ ಕಾರ್ಖಾನೆ ಗಳು ಹೆಚ್ಚಾಗಿ ರಾಜಕಾರಣಿಗಳ ಹಿಡಿತದಲ್ಲಿದ್ದು ರೈತರ ಜೀವದ ಜೊತೆ ಆಟವಾಡುತ್ತಿವೆ , ಆದ್ದರಿಂದ ಸರ್ಕಾರ ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳ ಬೇಕೆಂದು ಆಗ್ರಹಿಸಿದರುಈ ವಿಷಯದಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ೫೦ ನ್ನು ಬಂದ್…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಚಡಚಣ ವಲಯದ ಚಡಚಣ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಒಕ್ಕೂಟ ತರಬೇತಿ ಕಾರ್ಯಾಗಾರ ನಡೆಯಿತು.ತಾಲೂಕಿನ ಯೋಜನಾಧಿಕಾರಿ ನಟರಾಜ ಎಲ್.ಎಂ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಸೇವಾ ಪರಂಪರೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ದೇಶ ಮತ್ತು ಕಾರ್ಯಕ್ರಮಗಳು, ಒಕ್ಕೂಟಗಳ ರಚನೆ ಹಾಗೂ ಪದಾಧಿಕಾರಿಗಳ ಜವಾಬ್ದಾರಿ, ಮತ್ತು ಒಕ್ಕೂಟ ಸಭೆಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಮಾಹಿತಿ ನೀಡಿದರು.ತಾಲೂಕು ವಿಚಕ್ಷಣಾಧಿಕಾರಿ ಸಿದ್ದಪ್ಪ ಚುಳಕಿ ಅವರು ಬ್ಯಾಂಕ್ ಮೂಲಕ ಸಾಲದ ಪ್ರಗತಿ ನಿಧಿ ವಿತರಣೆ, ಸಾಲದ ಸದ್ವಿನಿಯೋಗ, ಸಂಘದ ಪರಿಕಲ್ಪನೆ, ಬ್ಯಾಂಕ್ ಡಿಪಿ ಮತ್ತು ಪ್ರಗತಿ ರಕ್ಷಾ ಕವಚ ಕಾರ್ಯಕ್ರಮಗಳ ಕುರಿತು ಭಾಗವಹಿಸಿದವರಿಗೆ ಮಾರ್ಗದರ್ಶನ ನೀಡಿದರು.ವಲಯ ಮೇಲ್ವಿಚಾರಕ ಶಿವಯ್ಯ ಹಿರೇಮಠ ಅವರು ಬ್ಯಾಂಕಿಂಗ್ ಸೇವಾ ವ್ಯವಸ್ಥೆ, ಸಿಸಿ ಖಾತೆ ನಿರ್ವಹಣೆ ಹಾಗೂ ಲಾಭಾಂಶ ವಿತರಣೆ ಕುರಿತು ವಿವರಿಸಿದರು.ಕಾರ್ಯಕ್ರಮವನ್ನು ತಾಲೂಕು ಕೃಷಿ ಅಧಿಕಾರಿ ಸುದೀಪ್ ಕಟಗೇರಿ ನಿರೂಪಿಸಿ, ಸ್ವಾಗತ…

Read More