Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ, ನಿರಂತರ ಅಧ್ಯಯನ, ಶೃದ್ಧೆ, ಕಠಿಣ ಪರಿಶ್ರಮ ರೂಢಿಸಿಕೊಂಡಾಗ ತಮ್ಮ ಬದುಕಿನ ಗುರಿ ತಲುಪಲು ಸಾಧ್ಯ. ಪಾಲಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಸದಾ ಮುತುವರ್ಜಿ ವಹಿಸಬೇಕು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಸೋಮವಾರದಂದು ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡ ‘ಪಾಲಕರ ವಿಶೇಷ ಸಭೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರ ಸಭೆಯು ಪಾಲಕ-ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಯ ಶೈಕ್ಷಣಿಕ, ವೃತ್ತಿಯ, ಜ್ಞಾನಾತ್ಮಕ, ಕೌಶಲ್ಯಯುತ ಪ್ರಗತಿ ಮನಗಾಣಲು ಪೂರಕವಾಗಿದೆ. ವಿದ್ಯಾರ್ಥಿಗಳ ವರ್ತನೆ, ನಡತೆಯನ್ನು ಸರಿ ಮಾಡಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪಾಲಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಹೇಳಿದರು.ಅತಿಯಾದ ಮೊಬೈಲ್ ಬಳಕೆಯಲ್ಲಿ ಇಂದಿನ ವಿದ್ಯಾರ್ಥಿಗಳು ಬದುಕಿನ ಭವಿಷ್ಯದ ಗುರಿ ಮರೆಯಬಾರದು. ತಂದೆ-ತಾಯಿಗಳ ಪರಿಶ್ರಮದ ದುಡಿಮೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಶಿಕ್ಷಕರ ಸಕಾಲಿಕ ಮಾರ್ಗದರ್ಶನ ಪಡೆದು, ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯಬೇಕು ಎಂದು ಕಿವಿಮಾತು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಪರಶುರಾಮ ರಜನಿಕರ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶತಮಾನದ ಸಂತ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಪುಣ್ಯತಿಥಿ ನಿಮಿತ್ಯ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಗುರವಂದನೆ ಸಲ್ಲಿಸಲಾಯಿತು.ವಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಸಿದ್ಧೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ವಿಡಿಸಿಸಿ ಬ್ಯಾಂಕಿನಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ, ಸಾಮಾಜಿಕ ಆರೋಗ್ಯದ ಹಿತರಕ್ಷಣೆಗಾಗಿ ಹಾಗೂ ಸಭ್ಯ ಸಮಾಜ ನಿರ್ಮಾಣಕ್ಕೆ ಸಿದ್ಧೇಶ್ವರ ಶ್ರೀಗಳ ಕೊಡುಗೆ ಅನುಕರಣೀಯ ಹಾಗೂ ಸಾರ್ವಕಾಲಿಕ ಎಂದು ಬಣ್ಣಿಸಿದರು.ಬ್ಯಾಂಕಿನ ಡಿಜಿಎಂಗಳಾದ ಸತೀಶ ಪಾಟೀಲ, ಸುರೇಶ ಪಾಟೀಲ, ಜೆ.ಬಿ.ಪಾಟೀಲ, ಆರ್.ಎಂ.ಪಾಟೀಲ, ಪಿ.ವೈ.ಡೆಂಗಿ ಸೇರಿದಂತೆ ವಿವಿಧ ಅಧಿಕಾರಿಗಳಾದ ಆರ್.ಎಂ.ಬಣಗಾರ, ಐ.ಎಸ್.ಸಂಖ ಸೇರಿದಂತೆ ಬ್ಯಾಂಕಿನ ಇತರೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶಕ್ಕೆ ಪ್ರಸ್ತುತ ಸಂದರ್ಭದಲ್ಲಿ ಬಾಯಿ ಮಾತಿನ ಘೋಷಣೆಗೆ ಸೀಮಿತಕ್ಕಿಂತ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ನೊಂದ ರೈತರ ಕಣ್ಣೀರು ಒರೆಸುವ ಪ್ರಧಾನಿ ಬೇಕಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಶನಿವಾರ ರಾತ್ರಿ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದ ರೈತರು ಕೆಲವೇ ವರ್ಷಗಳ ಹಿಂದೆ 370 ದಿನಕ್ಕೂ ಹೆಚ್ಚು ದಿನ ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಆದರೆ ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಗುರ್ಲಾಪುರ ಕ್ರಾಸ್ ನಲ್ಲಿ ಕಬ್ಬು ಬೆಳೆಗಾರರು ಹೋರಾಟಕ್ಕಿಳಿದ ವಾರದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಡಲಾಯಿತು. ಇದರಿಂದ ದೇಶದ ಇತಿಹಾಸದಲ್ಲೇ ನಮ್ಮ ಸರ್ಕಾರ ರಾಜ್ಯದ ಕಬ್ಬು ಬೆಳೆಗಾರರಿಗೆ 200-350 ರೂ. ಹೆಚ್ಚಿನ ದರ ಕೊಡಿಸಿದೆ ಎಂದು ತಮ್ಮ ಸರ್ಕಾರದ ಸ್ಪಂದನೆಯನ್ನು ಬಣ್ಣಿಸಿದರು.ಕೇಂದ್ರ ಸರ್ಕಾರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ ಹೊರತು, ಖರೀದಿಗೆ ಮುಂದಾಗುವುದಿಲ್ಲ. ಮೆಕ್ಕೆಜೋಳಕ್ಕೆ 2400…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ‘ಆಸೆ’ ಎಂದರೆ ಬಯಕೆ, ಮೋಹ, ಹಂಬಲ, ಆಕಾಂಕ್ಷೆ, ಇಚ್ಛೆ, ಅಪೇಕ್ಷೆ , ಮನಸ್ಸಿನಲ್ಲಿ ಉಂಟಾಗುವ ತೀವ್ರವಾದ ಹಾತೊರೆಯುವಿಕೆ ಆಸೆ ಎಂದು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರದ ಮಲ್ಲಿಕಾರ್ಜುನ ಶಾಸ್ತ್ರೀ ಹೇಳಿದರು.ಪಟ್ಟಣದ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು, ಒಬ್ಬ ವ್ಯಕ್ತಿ, ವಸ್ತುವಿಗಾಗಿ, ಐಹಿಕ ಸುಖಕ್ಕಾಗಿ ಅಥವಾ ಗುರಿಗಾಗಿ ಮನಸ್ಸಿನಲ್ಲಿ ಉಂಟಾಗುವ ಚಂಚಲ ಭಾವನೆಯನ್ನು ಸೂಚಿಸುತ್ತದೆ. ಅತಿಯಾದ ಆಸೆ ಗತಿಗೇಡು ಎಂದವರು. ಮನದ ಮುಂದಿನ ಆಸೆಯೇ ಮಾಯೆ, ಆಸೆಗೆ ಕೊನೆಯಿಲ್ಲ, ಸದ್ಗುಣಕ್ಕೆ ಸಾವಿಲ್ಲ, ಅಂತಹ ಸದ್ಗುಣ, ಸದ್ಬುದ್ಧಿ, ಸದಾಚಾರ, ಧಾರಾಳವಾಗಿ ಧಾರೆ ಎರೆಯುವ, ಷ ಬ್ರ ಚನ್ನಬಸವ ಶಿವಾಚಾರ್ಯರು ಮುನ್ನೆಡೆಸುವ ಮಾಸಿಕ ಹುಣ್ಣಿಮೆಯ ಸತ್ಸಂಗ ಸುತ್ಯಾರ್ಹವಾದುದ. ಸದ್ಭಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಬಸವ ಶಿವಾಚಾರ್ಯರು ಕಾಯಕ ದಾಸೋಹ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಡು,…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ವಾಗ್ದೇವಿ ಕಾಲೋನಿ ನಿವಾಸಿ, ರಂಗಭೂಮಿಯ ಹಿರಿಯ ಕಲಾವಿದ ಮಲ್ಲಪ್ಪ(ಮಲ್ಲೇಶಿ) ಮುತ್ತಪ್ಪ ಜಮಖಂಡಿ(೭೧) ಶನಿವಾರ ನಿಧನರಾದರು.ಮೃತರಿಗೆ ಪತ್ನಿ, ಪುತ್ರ, ಪುತ್ರಿಸೇರಿದಂತೆ ಅಪಾರ ಬಂಧು ಬಳಗವಿದೆ.ಮೂಲತಃ ಜಮಖಂಡಿ ತಾಲೂಕಿನ ಮರನೂರ ಗ್ರಾಮದ ಮಲ್ಲಪ್ಪ ಚಿಕ್ಕವಯಸ್ಸಿನಲ್ಲಿಯೇ ನಾಟಕ ಕಲೆ ರೂಢಿಸಿಕೊಂಡು ಹವ್ಯಾಸಿ ನಾಟಕ ಸಂಘಗಳಲ್ಲಿ ನಾನಾಪಾತ್ರಗಳನ್ನು ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.ಜಮಖಂಡಿ ತಾಲೂಕಿನ ಹುನ್ನೂರಿನ ಚನ್ನಬಸವೇಶ್ವರ ನಾಟ್ಯ ಕಲಾ ಸಂಘ ಸತತ ೨೫ ವರ್ಷ ನಾಟಕಗಳನ್ನು ಪ್ರದರ್ಶಿಸಿ ರಜತ ಮಹೋತ್ಸವ ಆಚರಿಸಿಕೊಳ್ಳುವಲ್ಲಿ ಮಲ್ಲೇಶಿ ಅವರ ಕೊಡುಗೆ ಅಪಾರವಿದೆ.ಸಾಹಿತಿ ವಸಂತ ಅಗಸಿಮನಿ ಅವರ ಬಂಜೆ ತೊಟ್ಟಿಲು ನಾಟಕದಲ್ಲಿ ಶೆಟ್ಟಿ ಪಾತ್ರದಲ್ಲಿ ಅಭಿನಯಿಸಿ ಮಿಂಚಿದ್ದ ಮಲ್ಲಪ್ಪ ಅವರು, ಧನಪಿಶಾಚಿ, ಬದುಕು ಬಂಗಾರವಾಯ್ತು, ರೈತನ ಮಕ್ಕಳು, ಎಚ್ಚೆಂ ನಾಯಕ, ನನ್ನವರು ನನ್ನ ಹಡೆದವರು ಸೇರಿ ಹಲವಾರು ನಾಟಕಗಳಲ್ಲಿ ಹಲವಾರು ಪಾತ್ರಗಳನ್ನು ನಿರ್ವಹಿಸಿ ಅವುಗಳಿಗೆ ಜೀವ ತುಂಬಿದ್ದರು. ಕೆಲವು ನಾಟಕಗಳಿಗೆನಿರ್ದೇಶನ ನೀಡಿ ಪ್ರದರ್ಶನ ಯಶಸ್ವಿಗೊಳ್ಳುವಂತೆ ಮಾಡಿ ಕಲಾಪ್ರೇಮಿಗಳ ಮನಗೆದ್ದಿದ್ದರು.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳ ಕೆಲಸವನ್ನು ನಡೆಸುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಸಾವಳಗಿ ತುಬಚಿ ರಸ್ತೆ ಕಾಮಗಾರಿಯು ಜಿಲ್ಲಾ ಪಂಚಾಯತ ಅಡಿಯಲ್ಲಿ 10 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಹಾಗೂ ಸಾವಳಗಿ ಸಮೀಪದ ಕಾಜಿಬೀಳಗಿ ಗ್ರಾಮದಲ್ಲಿ ಕಾಜಿಬೀಳಗಿ-ಹಾಲಳ್ಳಿ ಜಿಲ್ಲಾ ಮುಖ್ಯ ರಸ್ತೆ 0.35 ರಿಂದ 1.80 ವರೆಗೆ 211.65 ಲಕ್ಷದ ಕಾಮಗಾರಿಗೆ ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಭೂಮಿ ಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು ಸಾವಳಗಿ ತುಬಚಿ ರಸ್ತೆ ಕಾಮಗಾರಿ 2 ಕಿ ಮೀ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ, ಗ್ರಾಮದ ಬಹುದಿನಗಳ ಬೇಡಿಕೆಗೆ ಇಂದು ಈ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದು, ಹಾಗೂ ಕಾಜಿಬೀಳಗಿ ಹಾಲಳ್ಳಿ ರಸ್ತೆಗೂ ಭೂಮಿ ಪೂಜೆ ನೆರವೇರಿಸಿದ್ದು ಆದಷ್ಟು ಬೇಗ ಈ ರಸ್ತೆ ಕಾಮಗಾರಿ ಪ್ರಾರಂಭವಾಗಲಿದೆ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ. ಇನಾಮದಾರ ಅವರು ದೇಶದ ಪ್ರತಿಷ್ಠಿತ 10 ವೈದ್ಯರಲ್ಲಿ ಒಬ್ಬರಾಗಿದ್ದು, ಅವರು ಕಳೆದ 30 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಕರಾಗಿ ಸಲ್ಲಿಸಿರುವ ಸೇವೆ, ವಿದ್ಯಾರ್ಥಿಗಳನ್ನು ಅದರಲ್ಲೂ ಚರ್ಮರೋಗ ವಿಭಾಗದ ವೈದ್ಯಕೀಯ ಭವಿಷ್ಯದ ವೈದ್ಯರನ್ನಾಗಿ ಮಾಡಲು ಪಟ್ಟಿರುವ ಶ್ರಮವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ಡಾ. ಅರುಣ ಚಂ. ಇನಾಮದಾರ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಜ್ಞಾನವಿಕಾಸ ಕೇಂದ್ರದಲ್ಲಿ ಸುಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿಯಲ್ಲಿ ತರಬೇತಿ ಪಡೆದವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮಾತನಾಡಿ, ಸುಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಘಟಕವು ಉಚಿತವಾಗಿ ಮಹಿಳೆಯರಿಗೆ ಮೂರು ತಿಂಗಳ ತರಬೇತಿ ಹಮ್ಮಿಕೊಂಡಿರುವುದು ಶ್ಲಾಘನೀಯ. ಇಲ್ಲಿ ತರಬೇತಿ ಪಡೆದುಕೊಂಡಿರುವ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪೂರಕವಾಗಿದೆ. ಇಂತಹ ತರಬೇತಿಗಳು ಆರ್ಥಿಕ ಸಬಲೀಕರಣ ಹೊಂದಲು ಅನುಕೂಲವಾಗುತ್ತವೆ ಎಂದರು.ಧರ್ಮಸ್ಥಳ ಸಂಸ್ಥೆಯ ಮನಗೂಳಿ ವಲಯದ ಮೇಲ್ವಿಚಾರಕಿ ಶೋಭಾ ಮಾತನಾಡಿ, ನಮ್ಮ ಸಂಸ್ಥೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸ್ವ-ಉದ್ಯೋಗ ಪ್ರೇರಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಹಿರಿದು. ಇಲ್ಲಿ ತರಬೇತಿ ಪಡೆದ ಮಹಿಳೆಯರು ತಮ್ಮ ಕಲಿಕಾ ಮಟ್ಟ ನಿತ್ಯ ನಿರಂತರವಾಗಿಸಿ ಹೊಲಿಗೆ ತರಬೇತಿಯನ್ನು ಉದ್ಯೋಗ ಮಾಡಿಕೊಳ್ಳಬೇಕು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗ ಜ್ಞಾನಸಂತ ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ವರ್ಷದ ಗುರು ಸ್ಮರಣೆಯಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಸಿದ್ದೇಶ್ವರರ ಭಾವಚಿತ್ರಕ್ಕೆ ಪುಷ್ಪಾಚರಣೆ ನೆರವೇರಿಸುವ ಮೂಲಕ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.ಅಯ್ಯಪ್ಪ ಸ್ವಾಮಿ ಸನ್ನಿದಿಯಿಂದ ಆರಂಭವಾದ ಸಿದ್ದೇಶ್ವರ ಭಾವಚಿತ್ರದ ಮೆರವಣಿಗೆಯುದ್ದಕ್ಕೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಭಜನೆ ಮಾಡುತ್ತಾ ಜನರಿಗೆ ಬಾಳೆಹಣ್ಣು,ಶಿರಾ ಪ್ರಸಾದ ವಿತರಿಸಿದ್ದು ವಿಶೇಷ.ದೇವಸ್ಥಾನದ ಆರಂಭಗೊಂಡ ಮೆರವಣಿಗೆ ಪಲ್ಲೆಕಟ್ಟೆ, ಪತ್ತಾರ ಗಲ್ಲಿ, ಅಗಸಿ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಕೆಲ ಹೊತ್ತು ಸಿದ್ದೇಶ್ವರ ಸ್ವಾಮೀಜಿ ಕುರಿತು ಮಾಲಾಧಾರಿಗಳು ಭಕ್ತಿ ಗೀತೆ ಹಾಡಿದರು. ನಂತರ ಅಗಸಿ ಮಾರ್ಗವಾಗಿ ಗ್ರಾಮದೇವತೆ ದೇವಸ್ಥಾನ ಮಾರ್ಗ, ಬಸವಜನ್ಮ ಸ್ಮಾರಕ ಮಾರ್ಗವಾಗಿ ವಿಜಯಪುರ ರಸ್ತೆ ಮೂಲಕ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮೆರವಣಿಗೆ ತಲುಪಿತು. ಮೆರವಣಿಗೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳಾದ ಶಿವು ಗುರುಸ್ವಾಮಿ,ಮಲ್ಲು ಗುರುಸ್ವಾಮಿ, ಸಿದ್ದು ಗುರುಸ್ವಾಮಿ, ಭೀಮು ಗುರುಸ್ವಾಮಿ, ಮಾಂತು ಗುರುಸ್ವಾಮಿ, ನಾಗು ಗುರುಸ್ವಾಮಿ, ಸಂಜು ಗುರುಸ್ವಾಮಿ, ಅರವಿಂದ ಗುರುಸ್ವಾಮಿ ಬಸವನಬಾಗೇವಾಡಿಯ ಎಲ್ಲ ಅಯ್ಯಪ್ಪ ಮಾಲಾಧಾರಿಗಳು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಹಿರೇಮಠ ಗಲ್ಲಿಯಲ್ಲಿ ಹಮ್ಮಿಕೊಂಡಿದ್ದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ವರ್ಷದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಅಲ್ಲಿನ ನಿವಾಸಿಗಳು ಸಿದ್ದೇಶ್ವರ ಭಾವಚಿತ್ರದ ಮುಂದೆ ಮೊಂಬತ್ತಿ ಬೆಳಗಿ ಶ್ರದ್ಧಾ-ಭಕ್ತಿಯಿಂದ ಗುರು ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ಜ್ಞಾನದ ಬಲದಿಂದ ರಾಷ್ಟ್ರ ಸಂತರಾಗಿದ್ದಾರೆ. ಇವರು ಸದುವಿನಯರಾಗಿದ್ದರು. ಎಲ್ಲರನ್ನು ಪ್ರೀತಿಯಿಂದ ಕಾಣುತ್ತಿದ್ದರು. ಇವರು ತಮ್ಮ ಆಧ್ಯಾತ್ಮಿಕ ಜ್ಞಾನದಿಂದ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಇವರು ತಮ್ಮ ಪ್ರವಚನದ ಮೂಲಕ ಜೀವನದ ಮೌಲ್ಯ, ನಿಸರ್ಗದ ಪ್ರೇಮ ಸೇರಿದಂತೆ ಸನ್ಮಾರ್ಗಕ್ಕೆ ಬೇಕಾದ ಮೌಲ್ಯಗಳನ್ನು ಜನರ ಮನಮುಟ್ಟುವಂತೆ ಹೇಳುತ್ತಿದ್ದರು.ಇವರ ಪ್ರವಚನ ಕೇಳಲು ಸಹಸ್ರ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಇಂತಹ ಸಂತರು ಜನಿಸಿದ ಸಂದರ್ಭದಲ್ಲಿ ನಾವು ಸಹ ಜನಿಸಿದ್ದು ನಮ್ಮ ಭಾಗ್ಯವಾಗಿದೆ. ಇವರು ಹೇಳಿದ ಆಧ್ಯಾತ್ಮಿಕ ಅಂಶಗಳನ್ನು, ಸನ್ಮಾರ್ಗದ ಅಂಶಗಳನ್ನು ಅರಿತು ಜೀವನ ಸಾಗಿಸಬೇಕು. ಅವರನ್ನು ನಾವು…
