Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶರ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿಯುತ್ತವೆ. ಹಾಗಾಗಿ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಹೇಳಿದರು.ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಕಕ್ಷಿದಾರರು ತಮ್ಮ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಹಳ ವರ್ಷ ನ್ಯಾಯಾಲಯಕ್ಕೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿ ನಡೆದಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತಲ್ಲಿದ್ದ ಹಲವಾರು ಪ್ರಕರಣಗಳ ಪೈಕಿ ೧೩೬೨೪ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದರು. ಈ ಪೈಕಿ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು…
ವಿಜಯಪುರ ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಆವರು ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದರು.ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ಪರಿಶೀಲಿಸಿದರು.ಬಳಿಕ ಮಾತನಾಡಿದ ಅವರು, ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಅವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪೂರ್ಣಗೊಳಿಸಬೇಕು. ಹಿಟ್ಟಿನಹಳ್ಳಿ ಗ್ರಾಮದ ಸೇತುವೆ ಕಾಮಗಾರಿ ಸಮೀಕ್ಷೆಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಂಜಯ ಕೋಟೆನ್ನವರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೇಂದ್ರ ಚುನಾವಣಾ ಆಯೋಗವು ಬಾಗಲಕೋಟೆ ವಿಧಾನ ಸಭಾ ಸಾಮಾನ್ಯ ಕ್ಷೇತ್ರದ ಉಪ ಚುನಾವಣೆಯನ್ನು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿರುವುದರಿಂದ ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದೇವೆ ಎಂದು ನಗರಸಭೆ ಪೌರಾಯುಕ್ತ ಜ್ಯೋತಿಗಿರೀಶ ಹೇಳಿದರು.ನಗರ ವ್ಯಾಪ್ತಿಯಲ್ಲಿ ರಾಜಕೀಯ ಮುಖಂಡರು ಹಾಗೂ ಇತರ ಗಣ್ಯರ ಹೆಸರಿನಲ್ಲಿ ಅಳವಡಿಸಲಾದ ಬ್ಯಾನರ್, ಪ್ಲೆಕ್ಸ್ ಮತ್ತು ಬಂಟಿಂಗ್ಸ್ ಇದ್ದರೆ ಸಂಬಂಧಿಸಿದ ಪಕ್ಷದವರು ತಕ್ಷಣವೇ ತೆರವುಗೊಳಿಸಿಕೊಳ್ಳಬೇಕು ಎಂದು ಸೂಚಿಸಿದರು. ಈಗಾಗಲೇ ನಮ್ಮ ಸಿಬ್ಬಂದಿ ನಗರದಲ್ಲಿರುವ ಬ್ಯಾನರ್ ಹಾಗೂ ಪ್ಲೆಕ್ಸ್ಗಳನ್ನು ತೆರವುಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಉಪಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಯಾವುದೇ ರಾಜಕೀಯ ವ್ಯಕ್ತಿಗಳು ಅಥವಾ ಗಣ್ಯರ ಹೆಸರಿನಲ್ಲಿ ಪ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.ಶಾಲಾ ಕಾರ್ಯಕ್ರಮಗಳು ಅಥವಾ ಇತರ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಗಣ್ಯರ ಫೋಟೋಗಳನ್ನು ಹೊರತುಪಡಿಸಿ, ನಗರ ಸಭೆಯ ಅನುಮತಿ ಪಡೆದು ಮಾತ್ರ ಬ್ಯಾನರ್ ಅಳವಡಿಸಬೇಕು. ಯಾವುದೇ ಕಾರ್ಯಕ್ರಮ ನಡೆಸುವ ಮೊದಲು ನಗರ ಸಭೆಯಿಂದ…
ಗ್ರಾಹಕರ ಪರದಾಟ, ಟ್ರಾಯ್ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದಲ್ಲಿ ಕಳೆದ ಎರಡು ತಿಂಗಳಿನಿಂದ ಜಿಯೋ ಮೊಬೈಲ್ ನೆಟ್ವರ್ಕ್ ಸರಿಯಾಗಿ ಲಭ್ಯವಾಗದೆ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕರೆ ಸಂಪರ್ಕವಾಗದೇ ಇರುವದು, ಸಂಪೂರ್ಣವಾಗಿ ನೆಟ್ವರ್ಕ್ ಕಾಣಿಸದಿರುವುದರಿಂದ ಹಾಗೂ ಕೆಲವೊಮ್ಮೆ ಇಂಟರ್ನೆಟ್ ಸೇವೆ ಬಹಳ ನಿಧಾನವಾಗಿರುವುದು ಜಿಯೋ ಗ್ರಾಹಕರು ದಿನನಿತ್ಯ ಪರದಾಡುವಂತಾಗಿದೆ.ಪಟ್ಟಣದ ಹಲವು ಪ್ರದೇಶಗಳಲ್ಲಿ ಮೊಬೈಲ್ ಸಿಗ್ನಲ್ ಬಹುತೇಕ ಸಮಯದಲ್ಲಿ ಇಲ್ಲದಿರುವುದರಿಂದ ಆನ್ಲೈನ್ ವ್ಯವಹಾರ, ಬ್ಯಾಂಕಿಂಗ್ ಸೇವೆಗಳು, ವಿದ್ಯಾರ್ಥಿಗಳ ಆನ್ಲೈನ್ ಅಧ್ಯಯನ, ವ್ಯಾಪಾರ ವಹಿವಾಟು ಹಾಗೂ ದೈನಂದಿನ ಸಂಪರ್ಕ ವ್ಯವಸ್ಥೆಗಳಿಗೆ ದೊಡ್ಡ ಮಟ್ಟದಲ್ಲಿ ಅಡಚಣೆ ಉಂಟಾಗಿದೆ ಎಂದು ಗ್ರಾಹಕರು ದೂರಿದ್ದಾರೆ. ವಿಶೇಷವಾಗಿ ವ್ಯಾಪಾರಸ್ಥರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಈ ಸಮಸ್ಯೆಯ ಬಗ್ಗೆ ಜಿಯೋ ಕಂಪನಿ ಅಧಿಕಾರಿಗಳಿಗೆ ಹಲವಾರು ಬಾರಿ ಮಾಹಿತಿ ನೀಡಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕರೆ ಮಾಡಿದಾಗಲೂ ಅಥವಾ ದೂರು ನೀಡಿದಾಗಲೂ ಸ್ಪಷ್ಟ ಉತ್ತರ ಸಿಗುತ್ತಿಲ್ಲ. ಸಾವಿರಾರು ರೂಪಾಯಿ…
ಇರಾನ್ ಮೇಲಿನ ಯುದ್ಧದ ಪರಿಣಾಮ | ತಾಳೆ, ಸೂರ್ಯಕಾಂತಿ ಎಣ್ಣೆ 15 ದಿನಕ್ಕಾಗುವಷ್ಟು ದಾಸ್ತಾನು ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿ ಜಮಖಂಡಿ: ಯುದ್ಧದ ಪರಿಣಾಮ, ಅಡುಗೆ ಎಣ್ಣೆ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ ಯುದ್ದದಿಂದಾಗಿ ಲಭ್ಯತೆ ಇಲ್ಲ ಎನ್ನಲಾಗ್ತಿದೆ. ಈಗ ಕೇವಲ 15 ದಿನದ ದಾಸ್ತಾನು ಇದೆ ಎನ್ನುತ್ತಿರುವ ವ್ಯಾಪಾರಿಗಳು, ಇನ್ನೊಂದೆಡೆ ಭಾರಿ ಬೆಲೆ ಏರಿಕೆ ಮಾಡಿದ್ದಾರೆ.ವಿದೇಶಗಳಿಂದ ಕಚ್ಚಾ ತೈಲವಾಗಿ ಆಮದು ಮಾಡಿಕೊಂಡು, ಇಲ್ಲಿ ಶುದ್ಧೀಕರಿಸಿ ಹಾಗೂ ಪ್ಯಾಕಿಂಗ್ ಮಾಡಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ. ಸನ್ಫ್ಲವರ್ ಎಣ್ಣೆಯ ಕಚ್ಚಾ ತೈಲವನ್ನು ಉಕ್ರೇನ್ ಹಾಗೂ ಕೆಲವು ಯೂರೋಪಿನ ರಾಷ್ಟ್ರಗಳಿಂದ ತರಲಾಗುತ್ತದೆಸನ್ಫ್ಲವರ್ ಎಣ್ಣೆ ಲೀಟರ್ಗೆ 165 ರೂ. ಇದ್ದದ್ದು ಈಗ 178 ರೂ.ಗೆ ಏರಿಕೆಯಾಗಿದೆ.ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದಿಂದಾಗಿ ದೇಸಿ ಮಾರುಕಟ್ಟೆ ಮೇಲೂ ಪರಿಣಾಮ ಬೀಳಲು ಆರಂಭವಾಗಿದೆ. ಅದರಲ್ಲೂ ಅಡುಗೆ ಎಣ್ಣೆ ಬೆಲೆ ದಿನೇ ದಿನೆ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೊರತೆ ಉಂಟಾಗಿ ಕೃತಕ ಅಭಾವ ಸೃಷ್ಟಿಯಾಗುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಣ್ಣನವರ ಜನ್ಮಭೂಮಿ, ಸೂಫಿ ಸಂತರು ನಡೆದಾಡಿದ ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ನಗರದಲ್ಲಿ ಕೆ. ಸಿ. ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಪವಿತ್ರ ರಂಜಾನ್ ಅಂಗವಾಗಿ ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಜಿಲ್ಲೆಯಲ್ಲಿ ಬಸವಾದಿ ಶರಣರು ಸಮಸಮಾಜಕ್ಕಾಗಿ ಶ್ರಮಿಸಿದ್ದಾರೆ. ಆದಿಲ್ ಶಾಹಿ ಬಾದಷರು ಅಭಿವೃದ್ಧಿ ಮಾಡಿದ್ದಾರೆ. ಸೌಹಾರ್ಧತೆ ಮತ್ತು ಭಾವೈಕ್ಯತೆಗೆ ಜಿಲ್ಲೆ ಹೆಸರಾಗಿದೆ. ಈ ಬಾರಿ ಯುಗಾದಿ ಮತ್ತು ರಂಜಾನ್ ಜೊತೆಗೆ ಬಂದಿವೆ. ಎಲ್ಲರಿಗೂ ದೇವರು ಒಳಿತನ್ನು ಮಾಡಲಿ ಎಂದು ಸಚಿವರು ಹೇಳಿದರು.ಧರ್ಮಗುರು ತನ್ವೀರ್ ಪೀರಾ ಹಾಶ್ಮಿ ಮಾತನಾಡಿ, ಕರ್ನಾಟಕ ಮತ್ತು ವಿಜಯಪುರ ಜಿಲ್ಲೆ ಶರಣರು, ಸೂಫಿ ಸಂತರ ನಾಡಾಗಿವೆ. ಯುಗಾದಿ ಮತ್ತು ರಂಜಾನ್ ಒಟ್ಟಿಗೆ ಬಂದಿರುವುದರಿಂದ ಎಲ್ಲರೂ ಸೇರಿ ಆಚರಿಸೋಣ ಎಂದು ಹೇಳಿದರು.ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಮಾತನಾಡಿ, ಪ್ರತಿವರ್ಷ ಕೆ. ಸಿ. ಮಾರುಕಟ್ಟೆಯಲ್ಲಿ ಇಫ್ತಿಯಾರ ಕೂಟ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಎ.20 ರಂದು ನಡೆಯುವ ಬಸವ ಜಯಂತಿಯ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.ಈ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಮತ್ತು ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವವರು ದಿನಾಂಕ 31/0 3/2026 ರಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅಹ್ವಾನಿಸಲಾಗಿದೆ. ಸ್ಪರ್ಧಿಸಲು ಇಚ್ಛಿಸುವವರ ವಿಷಯಗಳು ಈ ರೀತಿ ಇರುತ್ತದೆ .(A) ಮಕ್ಕಳಿಗಾಗಿ ನೆಡೆಯವ ಕಾರ್ಯಕ್ರಮ ಗಳು (1) ಪ್ರಬಂಧ ಸ್ಪರ್ಧೆ( 2 ) ವಚನ ಕಂಠಪಾಠ (3) ಚಿತ್ರಕಲಾ ಸ್ಪರ್ಧೆ (4)ಮಕ್ಕಳಿಗಾಗಿ ಕವಿ ಗೋಷ್ಠಿಯ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಈ ಕೆಳಗಿನವರನ್ನು ಸಂಪರ್ಕ ಮಾಡಲು ಕೋರಿಕೆ .(1)ಪ್ರೊ: ನೀಲಕಂಠ ಎಸ್ ಹಳ್ಳಿ:-9060838424(2) ಪ್ರೊ: ಪೊನ್ನಪ್ಪ ಕಡೆಮನಿ -9972783456(3) ಶ್ರೀ ರಮೇಶ್ ಚೌಹಾನ್ -9611563508(4)ಶ್ರೀ ಎಸ್ ಎಸ್. ಸೊನ್ನದ -9980257774 (5)ಶ್ರೀ ಸುಭಾಷ್ ಕಣ್ಣೂರ್ -8050465396 ಇವರಲ್ಲಿ ನೊಂದ ಯಿಸಿಕೊಳ್ಳಬೇಕು (B) ಕವಿಗೋಷ್ಠಿಯಲ್ಲಿ ಭಾಗವಹಿಸುಲು ಇಚ್ಛಿಸುವವರು ವಿಷಯ :- 12ನೇ ಶತಮಾನದಲ್ಲಿ ಬಸವಾದಿ ಶರಣ ಶರಣೀಯರ ಸಾಮಾಜಕ ಚಳವಳಿ ಹಾಗೂ ಸಮಾನತೆಗಾಗಿ (ಮೌಡ್ಯ…
ರಾಜ್ಯ ಬಿಜೆಪಿ ಉಪಾಧ್ಯಕ್ಷ ಡಾ. ಮುರುಗೇಶ್ ನಿರಾಣಿ ಯಿಂದ ಸರ್ಕಾರದ ಮುಂದೆ ಪ್ರಸ್ತಾವನೆ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಜಾಗತಿಕ ಯುದ್ಧದ ಪರಿಣಾಮವಾಗಿ ಎಲ್ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ಅಭಾವವನ್ನು ಸಮರ್ಥವಾಗಿ ಎದುರಿಸಲು, ಸ್ವದೇಶಿ ತಂತ್ರಜ್ಞಾನದ ‘ಎಥೆನಾಲ್ ಸ್ಟೌವ್’ ಬಳಕೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು ಎಂದು ಎಂ.ಆರ್.ಎನ್ ಉದ್ಯಮ ಸಮೂಹದ ಸಂಸ್ಥಾಪಕರು ಹಾಗೂ ಮಾಜಿ ಸಚಿವರು ಮತ್ತು ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾದ ಡಾ. ಮುರುಗೇಶ್ ಆರ್ ನಿರಾಣಿ ಅವರು ಮಹತ್ವದ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ.ಎಥೆನಾಲ್ ಸ್ಟೌವ್ಗಳು ಹೊಸ ಆವಿಷ್ಕಾರವಲ್ಲ, ಇವುಗಳನ್ನು 2004ರಲ್ಲೇ ಅಭಿವೃದ್ಧಿಪಡಿಸಲಾಗಿದ್ದು, ಸೀಮೆಎಣ್ಣೆ ಒಲೆಗಳ ಮಾದರಿಯಲ್ಲೇ ಅತ್ಯಂತ ಸರಳ ಹಾಗೂ ಜನಸ್ನೇಹಿ ವಿನ್ಯಾಸವನ್ನು ಹೊಂದಿವೆ. ಈಗಾಗಲೇ ದೇಶದ ವಿವಿಧೆಡೆ ಸುಮಾರು 24 ಲಕ್ಷಕ್ಕೂ ಅಧಿಕ ಕುಟುಂಬಗಳು ಈ ತಂತ್ರಜ್ಞಾನವನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿರುವುದು ಇದರ ವಿಶ್ವಾಸಾರ್ಹತೆಗೆ ಸಾಕ್ಷಿಯಾಗಿದೆ. ವೆಚ್ಚದ ದೃಷ್ಟಿಯಿಂದ ಎಲ್ಪಿಜಿಗೆ ಹೋಲಿಸಿದರೆ ಎಥೆನಾಲ್ ತುಸು ದುಬಾರಿ ಎನಿಸಿದರೂ, ಇದು ಸಂಪೂರ್ಣವಾಗಿ ಪರಿಸರ ಸ್ನೇಹಿ ಇಂಧನವಾಗಿದೆ. ಯಾವುದೇ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಮಾ.18ರಿಂದ ಆರಂಭಗೊಳ್ಳುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವುದೇ ಲೋಪ ದೋಷ ವಾಗದಂತೆ ಪಾರದರ್ಶಕ, ವ್ಯವಸ್ಥಿತವಾಗಿ ಆಯೋಜಿಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು ಎಂದು ತಹಶಿಲ್ದಾರ ಸಂಜಯ ಇಂಗಳೆ ಹೇಳಿದರು.ಪಟ್ಟಣದ ಎಂ.ಎ.ಎಸ್ ಪಬ್ಲಿಕ್ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ತಾಲ್ಲೂಕು ಮಟ್ಟದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.ಪ್ರಾಸ್ತಾವಿಕವಾಗಿ ಬಿಇಒ ಚಿದಾನಂದ ಕಟ್ಟಿಮನಿ ಮಾತನಾಡಿ,ಚಡಚಣ ತಾಲ್ಲೂಕಿನಲ್ಲಿ 49 ಪ್ರೌಢಶಾಲೆಗಳಿದ್ದು,11 ಪರೀಕ್ಷಾ ಕೇಂದ್ರಗಳಲ್ಲಿ 3980 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು ಎರಡು ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಗಳು ಸುಸುತ್ರವಾಗಿ ನಡೆಯಲು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ ಟಿವಿ ಕಡ್ಡಯಗೋಳಿಸಲಾಗಿದೆ.ನಿರಂತರ ವಿದ್ಯುತ್ ಪೂರೈಕೆ, ಗರಿಷ್ಟ ಭದ್ರತಾ ವ್ಯವಸ್ಥೆಗೆ ಕ್ರಮ ಕೈಗೊಂಡು, ಸ್ಥಾನಿಕ ಹಾಗೂ ಸಂಚಾರಿ ಸ್ಕ್ವಾಡಗಳ ತಂಡ ರಚಿಸಲಾಗಿದೆ ಎಂದರು.ಹೆಸ್ಕಾಂನ ಕಾರ್ಯ ನಿರ್ವಾಹಕ ಇಂಜನೀಯರ್ ವಿಜಯಕುಮಾರ ಹವಾಲ್ದಾರ ಮಾತನಾಡಿ, ಪರೀಕ್ಷಾ ದಿನಗಳಂದು ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವದು ಎಂದರು.ಪಿಎಸ್ಐ ಸೋಮೇಶ ಗೆಜ್ಜಿ ಮಾತನಾಡಿ, ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5, ಝಳಕಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಮಾ.೧೮ ಬುಧುವಾರ ದಿವಸ ಸಾಯಂಕಾಲ 6:30 ಗಂಟೆಗೆ ಬಳ್ಳೂಳ್ಳಿಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಅಧ್ಯಕ್ಷರು ಜ್ಞಾನ ಯೋಗಾಶ್ರಮ ವಿಜಯಪುರ ಬಸವಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬಳ್ಳೊಳ್ಳಿ ಗ್ರಾಮ ದೇವರು ಶ್ರೀ. ವೀರಭದ್ರದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ 21ದಿನಗಳ ಪರ್ಯಂತ ಹಮ್ಮಿಕೊಂಡ ಬಬಲಾದಿ ಸದಾಶಿವಯೋಗಿಗಳ ಪುರಾಣ ಮುಕ್ತಾಯ ಸಮಾರಂಭ ಹಮ್ಮಿಕೊಂಡಿದ್ದು, ಎಲ್ಲಾ ಭಕ್ತಾದಿಗಳು, ಗ್ರಾಮಸ್ಥರು ಪುರಾಣ ಮುಕ್ತಾಯ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಸೇವಾ ಸಮಿತಿ ಅಧ್ಯಕ್ಷರು, ಮಾಜಿ ಸಚಿವರು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪ್ರಕಟಣೆಗೆ ತಿಳಿಸಿದ್ದಾರೆ.
